ಚಿಕ್ಕಮಗಳೂರು: ಮುಳ್ಳಯ್ಯನಗಿರಿ (Mullayanagiri) ತಪ್ಪಲಿನಲ್ಲಿ ಕಾಣಿಸಿಕೊಳ್ಳುತ್ತಿರುವ ಕಾಡ್ಗಿಚ್ಚಿನಿಂದ ಚಂದ್ರದ್ರೋಣ (Chandra Drona) ಪರ್ವತಗಳ ಸಾಲಿನ ರಕ್ಷಣೆ ಮಾಡಲು ಅರಣ್ಯ ಇಲಾಖೆ ಪಣ ತೊಟ್ಟಿದ್ದು, ಡ್ರೋನ್ಗಳ ಮೊರೆ ಹೋಗಿದ್ದಾರೆ.
ನಿತ್ಯ ಸಾವಿರಾರು ಜನ ಪ್ರವಾಸಿಗರು ಬಂದು ಹೋಗುವ ಪಶ್ಚಿಮ ಘಟ್ಟಗಳ ತಪ್ಪಲುಗಳಲ್ಲಿ ಡ್ರೋನ್ ಕಣ್ಗಾವಲಿನಿಂದ ಬೆಂಕಿ ಹಾಕುವವರು ಸ್ಥಳಿಯರೋ, ಪ್ರವಾಸಿಗರೋ ಅಥವಾ ನಿಜಕ್ಕೂ ಕಾಡ್ಗಿಚ್ಚೋ ಎಂಬುದನ್ನು ಗುರುತಿಸಲು ಸಹಕಾರಿಯಾಗುತ್ತದೆ. ಇದರಿಂದ ನಿತ್ಯ ಸುಟ್ಟು ಕರಕಲಾಗ್ತಿರೋ ಕಾಡಿನ ರಕ್ಷಣೆಗೆ ಅರಣ್ಯ ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಮಡಿಕೇರಿಯ ಇಗ್ಗುತಪ್ಪ, ನಾಲಾಡಿ ಬೆಟ್ಟದಲ್ಲಿ ಕಾಡ್ಗಿಚ್ಚು – 20 ಎಕ್ರೆಗೆ ಬೆಂಕಿ
ಗುಡ್ಡದ ತುದಿಯಲ್ಲಿ ಬೆಂಕಿ ಬಿದ್ದರೆ ನಂದಿಸುವುದು ಕಷ್ಟವಾಗಿರುವುದರಿಂದ ಅಗ್ನಿಶಾಮಕ ವಾಹನ ಹೋಗದ ಕಡೆ ಅಧಿಕಾರಿಗಳೇ ಸೊಪ್ಪಿನಿಂದ ಕಾಡನ್ನ ರಕ್ಷಿಸಬೇಕು. ಇದೀಗ ಸ್ಥಳಿಯರು ಹಾಗೂ ಪ್ರವಾಸಿಗರ ಮೇಲೆ ಹದ್ದಿನ ಕಣ್ಣಿಡಲು ಅರಣ್ಯಾಧಿಕಾರಿಗಳು ಡ್ರೋನ್ ಮೊರೆ ಹೋಗಿದ್ದಾರೆ.
ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಪಶ್ಚಿಮ ಘಟ್ಟ (Western Ghat) ಭಾಗದಲ್ಲಿ ಇದ್ದಕ್ಕಿದ್ದಂತೆ ಭೂಮಿ ನಡುಗಿದ ಅನುಭವ ಕುರಿತು ಸಾರ್ವಜನಿಕರು ಮಾಹಿತಿ ನೀಡಿದ್ದರು. ಈ ಸುದ್ದಿ ʻಪಬ್ಲಿಕ್ ಟಿವಿʼಯಲ್ಲಿ ಪ್ರಕಟವಾಗುತ್ತಿದ್ದಂತೆ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ ಅವರು ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ನೈಸರ್ಗಿಕ ಪ್ರಕೃತಿ ವಿಕೋಪ ಕೇಂದ್ರದಲ್ಲಿ ವಿಚಾರಿಸಿದ್ದೇವೆ. ಯಾವುದೇ ರೀತಿಯ (Earthquakes) ಭೂಕಂಪನವಾಗಿಲ್ಲ. ರಿಕ್ಟರ್ ಮಾಪನದಲ್ಲೂ ದಾಖಲಾಗಿಲ್ಲ. ಹೀಗಾಗಿ ಜನ ಭಯಪಡುವ ಅವಶ್ಯಕತೆ ಇಲ್ಲ. ಈ ಭಾಗದಲ್ಲಿ ಹೆದ್ದಾರಿ ಕಾಮಗಾರಿಗಾಗಿ ಯಾವುದೇ ಸ್ಫೋಟ ನಡೆಸಿಲ್ಲ. ಜನ ಕಳುಹಿಸಿದ ಆಡಿಯೋ ಪರಿಶೀಲನೆ ಮಾಡಿದ್ದೇವೆ. ಭೂ ಕಂಪನವಾದಾಗ ರಿಕ್ಟರ್ ಮಾಪನದಲ್ಲಿ ರೆಕಾರ್ಡ್ ಆಗಬೇಕು, ಯಾವುದೂ ರೆಕಾರ್ಡ್ ಆಗಿಲ್ಲ. ಈ ಬಗ್ಗೆ ಜನರಿಂದ ಮಾಹಿತಿ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ.
ಶಿರಸಿ ತಾಲೂಕಿನ ಮತ್ತಿಘಟ್ಟಾ, ಸಂಪಖಂಡ, ಹೆಗಡೆಕಟ್ಟಾ, ಯಲ್ಲಾಪುರ ತಾಲೂಕಿನ ಚೌವತ್ತಿ, ಸಿದ್ದಾಪುರ ತಾಲೂಕಿನ ಕಾನಸೂರು, ತಟ್ಟಿಕೈ, ಮಾವಿನಗುಂಡಿ, ಹಲಗೇರಿ, ಕುಮಟಾ ಹಾಗೂ ಶಿರಸಿ ತಾಲೂಕಿನ ಗಡಿ ಭಾಗವಾದ ದೇವಿಮನೆ ಘಟ್ಟ ಭಾಗಗಳಲ್ಲಿ ಭೂಕಂಪನದ ಅನುಭವವಾಗಿತ್ತು ಎಂದು ಜನ ಮಾಹಿತಿ ನೀಡಿದ್ದರು. ಹಲವು ಪ್ರತ್ಯಕ್ಷದರ್ಶಿಗಳು ನಾಲ್ಕೈದು ಬಾರಿ ಭೂಮಿ ಕಂಪಿಸಿದೆ ಎಂದರೆ, ಹಲವರು ಗುಡುಗು ಬಂದಂತೆ ಅನುಭವವಾಗಿ ಭೂಮಿ ಕಂಪಿಸಿದೆ ಎಂದು ಹೇಳಿಕೊಂಡಿದ್ದಾರೆ.
ರಿಕ್ಟರ್ ಮಾಪನದಲ್ಲೂ ದಾಖಲಾಗದೇ ಹೀಗೆ ಕಂಪಿಸಿದ ಅನುಭವ ಆಗಿರುವುದು ಸಾಕಷ್ಟು ಪ್ರಶ್ನೆ ಏಳುವಂತೆ ಮಾಡಿದೆ. ಪಶ್ಚಿಮ ಘಟ್ಟ ಭಾಗದಲ್ಲಿ ನಡೆಯುತ್ತಿರುವ ಕಾಮಗಾರಿ ಪ್ರಭಾವದಿಂದ ಭೂಮಿಯ ಆಳದಲ್ಲಿ ಯಾವುದಾದರೂ ದೊಡ್ಡ ಬಂಡೆಕಲ್ಲು ಜಾರುವಂತೆ ಮಾಡಿದೆಯೇ? ಎಂಬ ಬಗ್ಗೆಯೂ ಪ್ರಶ್ನೆ ಎದ್ದಿದೆ. ಈ ಹಿಂದೆ ಘಟ್ಟ ಭಾಗದಲ್ಲಿ ನಿರಂತರವಾಗಿ ಭೂಕುಸಿತ ಸಹ ಆಗಿದೆ. ಹೀಗಾಗಿ ಮತ್ತೆ ಭೂಮಿ ಕುಸಿಯುವ ಮುನ್ಸೂಚನೆಯಾ ಎಂಬ ಪ್ರಶ್ನೆ ಏಳುವಂತೆ ಮಾಡಿದೆ.
ಬೆಂಗಳೂರು: ರಾಜ್ಯದ ಜನರಿಗೆ ಸರ್ಕಾರ (Karnataka Govt) ಮತ್ತೊಂದು ಸೆಸ್ ಶಾಕ್ ಕೊಟ್ಟಿದೆ. ಪಶ್ಚಿಮ ಘಟ್ಟದ ನದಿ ನೀರು ಪೂರೈಕೆಯಾಗೋ ನಗರಗಳ ಜನರಿಗೆ ಸೆಸ್ ಶಾಕ್ ಕೊಡಲು ಸರ್ಕಾರ ಮುಂದಾಗಿದೆ.
ಪಶ್ಚಿಮಘಟ್ಟ (Western ghats) ಸಂರಕ್ಷಣೆಗೆ ʻಕಾಪುನಿಧಿʼ ಸಂಗ್ರಹ ಗುರಿ ಹೊಂದಿದ್ದು, ನೀರಿನ ಬಿಲ್ನಲ್ಲೇ ʻಹಸಿರು ಸೆಸ್ʼ (Green Cess) ಸಂಗ್ರಹಕ್ಕೆ ಸರ್ಕಾರ ಮುಂದಾಗಿದೆ. ಈ ಸಂಬಂಧ ಪ್ರಸ್ತಾವನೆ ಸಲ್ಲಿಸುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚನೆ ಪ್ರಕಟಣೆಯಲ್ಲಿ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಪ್ರಕಟಣೆಯಲ್ಲಿ ಏನಿದೆ?
ಪಶ್ಚಿಮಘಟ್ಟಗಳು ತುಂಗಾ, ಭದ್ರಾ, ಕಾವೇರಿ, ಕಬಿನಿ, ಹೇಮಾವತಿ, ಕೃಷ್ಣಾ, ಮಲಪ್ರಭಾ, ಘಟಪ್ರಭಾ ಸೇರಿದಂತೆ ಹಲವು ನದಿಗಳ ಮೂಲವೂ ಆಗಿದೆ. ರಾಜ್ಯದ ಹಲವು ನಗರ, ಪಟ್ಟಣ ಪ್ರದೇಶಗಳಿಗೆ ಈ ನದಿಗಳ ನೀರನ್ನೇ ಪೂರೈಕೆ ಮಾಡಲಾಗುತ್ತಿದೆ. ಮುಂದೆಯೂ ರಾಜ್ಯದ ನೀರಿನ ಅಗತ್ಯವನ್ನು ಈ ನದಿಗಳೇ ಪೂರೈಸಬೇಕಾಗುತ್ತದೆ. ಹೀಗಾಗಿ ಈ ಎಲ್ಲ ನದಿಗಳ ಮೂಲವಾಗಿರುವ ಪಶ್ಚಿಮಘಟ್ಟವನ್ನು ಸಂರಕ್ಷಿಸಿದರೆ ಮಾತ್ರ ಮುಂದಿನ ದಿನಗಳಲ್ಲಿ ನದಿಗಳು ತುಂಬಿ ಹರಿಯಲು ಸಾಧ್ಯ.
ಮಂಗಾರು ಮಳೆಯ ಮಾರುತಗಳನ್ನು ತಡೆದು ದೇಶದಾದ್ಯಂತ ವ್ಯಾಪಕ ಮಳೆ ಆಗುವಂತೆ ಮಾಡುವಲ್ಲಿ ಪಶ್ಚಿಮಘಟ್ಟಗಳು ಮಹತ್ವದ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಪಶ್ಚಿಮಘಟ್ಟದ ನದಿಗಳಿಂದ ನಗರ, ಪಟ್ಟಣಗಳಿಗೆ ಪೂರೈಕೆ ಆಗುವ ನೀರಿನ ಬಳಕೆಯ ಬಿಲ್ ನಲ್ಲಿ ಕೆಲವೇ ಕೆಲವು ರೂಪಾಯಿ ಹಸಿರು ಸೆಸ್ ವಿಧಿಸಿ, ಕಾಪು ನಿಧಿ ಸ್ಥಾಪನೆ ಸರ್ಕಾರ ಚಿಂತನೆ ನಡೆಸಿದೆ. ಇದನ್ನೂ ಓದಿ: ಸ್ವತಃ ಇಂದಿರಾ ಗಾಂಧಿ ಸ್ವರ್ಗದಿಂದ ಹಿಂತಿರುಗಿಬಂದರೂ 370ನೇ ವಿಧಿ ಮರುಸ್ಥಾಪನೆ ಸಾಧ್ಯವಿಲ್ಲ: ಅಮಿತ್ ಶಾ
ಈ ಹಣವನ್ನು ಪಶ್ಚಿಮಘಟ್ಟ ಅರಣ್ಯ ಅಭಿವೃದ್ಧಿಗಾಗಿ, ವೃಕ್ಷ ಸಂವರ್ಧನೆಗಾಗಿ, ಅರಣ್ಯದಂಚಿನ ರೈತರು ಸ್ವಯಂ ಪ್ರೇರಿತವಾಗಿ ಅರಣ್ಯ ಇಲಾಖೆಗೆ ಮಾರಾಟ ಮಾಡಲು ಇಚ್ಛಿಸುವ ಕೃಷಿ ಭೂಮಿ ಖರೀದಿಸಲು ಬಳಸಬಹುದು. ಜೊತೆಗೆ ಅರಣ್ಯ ಸಂರಕ್ಷಿಸಲು ಮತ್ತು ವನ್ಯಜೀವಿ- ಮಾನವ ಸಂಘರ್ಷ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೂ ಈ ಹಣ ಬಳಸಬಹುದು. ಈ ನಿಟ್ಟಿನಲ್ಲಿ ಪ್ರಸ್ತಾವನೆ ಸಲ್ಲಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ನೀರಿನ ಬಿಲ್ ಜೊತೆಯಲ್ಲಿ ಬಳಕೆದಾರರು 2 ಅಥವಾ 3 ರೂ. ಪಾವತಿಸಬೇಕು. ಈ ಹೆಚ್ಚುವರಿ ಹಣವನ್ನು ಪರಿಸರ ಸಂರಕ್ಷಣೆ ಮತ್ತು ಪಶ್ಚಿಮ ಘಟ್ಟದ ಮಹತ್ವದ ಅರಿವು ಮೂಡಿಸಲು ಬಳಕೆ ಮಾಡಲಾಗುತ್ತದೆ. ಹೀಗೆ ಸಂಗ್ರಹವಾಗುವ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಲಾಗುವುದಿಲ್ಲ ಎಂದು ಸಚಿವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು: ಹಲವು ನದಿಗಳ ಮೂಲ ಮತ್ತು ಜೀವ ವೈವಿಧ್ಯತೆಯ ತಾಣವಾದ ಪಶ್ಚಿಮ ಘಟ್ಟ (Western Ghats) ಸಂರಕ್ಷಿಸುವ ನಿಟ್ಟಿನಲ್ಲಿ, ಈ ವ್ಯಾಪ್ತಿಯ ಭೂ ಉಪಯೋಗ ಕುರಿತು ಹೊಸ ನಿಯಮಾವಳಿ ರೂಪಿಸುವವರೆಗೆ ಎಲ್ಲ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆ ಹಿಡಿಯುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ (Eshwar Khandre) ಸೂಚನೆ ನೀಡಿದ್ದಾರೆ.
ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಕಳುಹಿಸಿರುವ ಟಿಪ್ಪಣಿಯಲ್ಲಿ ಅವರು, ಇತ್ತೀಚೆಗೆ ಕೇಂದ್ರ ಸರ್ಕಾರ ಮತ್ತೊಮ್ಮೆ ಅಧಿಸೂಚನೆ ಮಾಡಿರುವ ಕಸ್ತೂರಿ ರಂಗನ್ ವರದಿಯ (Kasturi Rangan Report) ಕುರಿತಂತೆ ಸಚಿವ ಸಂಪುಟದ ಸಭೆಯಲ್ಲಿ ಚರ್ಚಿಸಲು ಉದ್ದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ, ಕೇರಳ ಸೇರಿದಂತೆ ಪಶ್ಚಿಮಘಟ್ಟದ ಹಲವೆಡೆ, ಭೂಕುಸಿತ, ಗುಡ್ಡ ಕುಸಿತ ಸಂಭವಿಸುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದ ಸಚಿವರು ಕೊಡಗಿನ ಭೂಕುಸಿತ (Kodagu LandSlide) ಪ್ರಕರಣಗಳ ಅಧ್ಯಯನದಲ್ಲಿ ಅರಣ್ಯ ಒತ್ತುವರಿ ಮತ್ತು ಮಾನವ ಅಭಿವೃದ್ಧಿ ಚಟುವಟಿಕೆಗಳೇ ಪ್ರಾಥಮಿಕ ಕಾರಣ ಎನ್ನಲಾಗಿದ್ದು, ಪಶ್ಚಿಮಘಟ್ಟದಲ್ಲಿ ಸಂಭಾವ್ಯ ಅವಗಢ ತಡೆಯಲು ಮುಂಜಾಗರೂಕತಾ ಕ್ರಮವಾಗಿ ಈ ಪ್ರದೇಶದ ಒತ್ತುವರಿ ತೆರವಿಗೆ ಕ್ರಮವಹಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಯಶ್, ರಿಷಬ್ ಶೆಟ್ಟಿ ಒಟ್ಟಿಗೆ ನಟಿಸುತ್ತಾರಾ? ನಿರ್ಮಾಪಕ ಹೇಳಿದ್ದೇನು?
ಹಿಮಾಲಯದ ಕಣಿವೆ ರಾಜ್ಯ ಹಿಮಾಚಲ ಪ್ರದೇಶದ ಘಟ್ಟ ಪ್ರದೇಶಗಳಲ್ಲಿ ಭೂಪರಿವರ್ತನೆ ಮತ್ತು ಕಟ್ಟಡ ನಿರ್ಮಾಣಕ್ಕೆ ನಿರ್ದಿಷ್ಟವಾದ ಹಾಗೂ ಪ್ರತ್ಯೇಕವಾದ ನಿಯಮಗಳನ್ನು ರೂಪಿಸಿರುವುದು ತಮ್ಮ ಗಮನಕ್ಕೆ ಬಂದಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯ ನಗರ ಮತ್ತು ಗ್ರಾಮಾಂತರ ಪ್ರದೇಶಗಳ ವ್ಯಾಪ್ತಿಯಲ್ಲಿ ಭೂ-ಉಪಯೋಗದ ರೀತಿ ಮತ್ತು ಭೂ ಪರಿವರ್ತನೆಯೂ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ಕಂದಾಯ ಇಲಾಖೆ, ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ಇಲಾಖೆ, ನಗರ ಮತ್ತು ಗ್ರಾಮಾಂತರ ಯೋಜನೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಮನ್ವಯದಲ್ಲಿ ಭೂ ಉಪಯೋಗ ಸ್ವರೂಪ ಕುರಿತಂತೆ ಹೊಸ ಪ್ರಾದೇಶಿಕ ನಿಯಂತ್ರಣ ಮತ್ತು ಮಾಸ್ಟರ್ ಯೋಜನೆ ರೂಪಿಸುವವರೆಗೆ ಪಶ್ಚಿಮ ಘಟ್ಟ ವ್ಯಾಪ್ತಿಗೆ ಒಳಪಡುವ ಎಲ್ಲಾ ಭೂ ಪರಿವರ್ತನೆ ಪ್ರಸ್ತಾವನೆಗಳನ್ನು ತಾತ್ಕಾಲಿಕವಾಗಿ ತಡೆಹಿಡಿಯುವುದು ಸೂಕ್ತವಾಗಿದ್ದು, ಕೂಡಲೇ ಕ್ರಮವಹಿಸುವಂತೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದ್ದಾರೆ.
ಅತೀ ಜರೂರಾದ, ಸಾರ್ವಜನಿಕ ಮಹತ್ವದ ಪ್ರಕರಣಗಳಲ್ಲಿ ಮಾತ್ರ ಯೋಜನೆಗೆ ಪರಿಸರ ಸಮ್ಮತಿ ಪತ್ರವನ್ನು ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಸಂಬಂಧಿತ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಸಮಿತಿಯ ಉನ್ನತಾಧಿಕಾರ ಸಮಿತಿ ಸಭೆಯ ಅನುಮೋದನೆ ನಂತರವಷ್ಟೇ ನೀಡುವುದು ಸೂಕ್ತ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ ಇರುವ ಮುಸ್ಲಿಮರೂ ಹಿಂದೂಗಳೇ: ವಚನಾನಂದ ಸ್ವಾಮೀಜಿ
ಈ ನಿಟ್ಟಿನಲ್ಲಿ ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಭೂ ಉಪಯೋಗ ಕುರಿತಂತೆ ಹೊಸ ನಿಯಮಾವಳಿ ರೂಪಿಸಲು ಪ್ರಸ್ತಾವನೆಯನ್ನು ಕಡತದಲ್ಲಿ ಮಂಡಿಸುವಂತೆಯೂ ಅವರು ಅಪರ ಮುಖ್ಯ ಕಾರ್ಯದರ್ಶಿಯವರಿಗೆ ತಿಳಿಸಿದ್ದಾರೆ.
ಬೆಂಗಳೂರು: ಏಟ್ರಿಯಾ ವಿಶ್ವವಿದ್ಯಾಲಯದ ಆಶ್ರಯದಲ್ಲಿ ಬೆಂಗಳೂರಿನಲ್ಲಿ ಜು.28ರಂದು ನಡೆದ ಅಂತರ ಜೀವಿ (ಪ್ರಭೇದ) ಸಮಾವೇಶದಲ್ಲಿ ಪಾಲ್ಗೊಂಡಿದ್ದಾಗ ನಾನು “ಪಶ್ಚಿಮ ಘಟ್ಟದಲ್ಲಿ (Western Ghats) ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ’’ ಎಂದು ಹೇಳಿದ್ದೆನೇಯೇ ಹೊರತು “ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ” ಎಂದು ಹೇಳಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸ್ಪಷ್ಟಪಡಿಸಿದ್ದಾರೆ.
ಆ ಕಾರ್ಯಕ್ರಮದಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ (Kasturirangan Report) ಕುರಿತಂತೆ ಪ್ರಶ್ನಿಸಿದಾಗ, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು, ಈ ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ಆ ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ (Stake holders) ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾಗಿ ಹೇಳಿದ್ದಾರೆ.
ಕಸ್ತೂರಿ ರಂಗನ್ ವರದಿ 10 ವರ್ಷಗಳಷ್ಟು ಹಳೆಯದಾಗಿದೆ. ಇಂದಿಗೆ ಅದು ಪ್ರಸ್ತುತವೇ ಎಂಬ ವಾದವೂ ಇದೆ. ಪಶ್ಚಿಮಘಟ್ಟವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸಿದರೆ ಜೀವನ, ಜೀವನೋಪಾಯಕ್ಕೆ ತೊಂದರೆ ಆಗುತ್ತದೆ ಎಂಬ ಭೀತಿಯೂ ಆ ಭಾಗದ ಜನರಲ್ಲಿದೆ. ಹೀಗಾಗಿ ಇದು ಅತ್ಯಂತ ಸೂಕ್ಷ್ಮ ವಿಚಾರವಾಗಿದ್ದು, ಸರ್ಕಾರ ಯಾವುದೇ ಆತುರದ ಕ್ರಮ ಕೈಗೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಮೂರನೇ ಬಾರಿಗೆ ಮೋದಿ ಪ್ರಧಾನಿಯಾಗಲಿ – ಉಡುಪಿಯ ಪಾದಬೆಟ್ಟುವಿನಲ್ಲಿ ವಿಶೇಷ ಹೋಮ
ಪಶ್ಚಿಮ ಘಟ್ಟದಲ್ಲಿ ಕೆಂಪು ಪ್ರವರ್ಗದ (Red category) ಕೈಗಾರಿಕೆಗಳು ನಡೆಯಬಾರದು, ಅದರ ತ್ಯಾಜ್ಯ ಪಶ್ಚಿಮ ಘಟ್ಟದ ಜಲ ಮೂಲಗಳಿಗೆ ಅಪಾಯ ತಂದೊಡ್ಡುತ್ತದೆ ಎಂಬ ಆತಂಕ ಇದೆ. ಅದು ಸರಿ ಎನಿಸುತ್ತದೆ. ಆದರೆ, ಅಂಗನವಾಡಿ, ಆಸ್ಪತ್ರೆ, ಶಾಲೆ, ಜನವಸತಿ, ಮೂಲಸೌಕರ್ಯ ವಿಚಾರದಲ್ಲಿ ಹಾಗೆ ನಿರ್ಧಾರ ಕೈಗೊಳ್ಳಲು ಆಗುವುದಿಲ್ಲ. ಇದರಿಂದ ಹಲವು ದಶಕದಿಂದ ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ಸ್ಥಳೀಯ ಜನರಿಗೆ ತೊಂದರೆ ಆಗುತ್ತದೆ. ಪರಿಸರವೂ ಉಳಿಯಬೇಕು, ಜನರ ಜೀವನೋಪಾಯಕ್ಕೂ ಧಕ್ಕೆ ಆಗಬಾರದು, ಸುಸ್ಥಿರ ಅಭಿವೃದ್ಧಿ ಸರ್ಕಾರದ ನಿಲುವು ಎಂದು ತಿಳಿಸಿದ್ದಾರೆ.
ಕಸ್ತೂರಿ ರಂಗನ್ ವರದಿಯಲ್ಲಿ ಹಲವು ಸಡಿಲಿಕೆಗೂ ಸಂಜಯ್ ಕುಮಾರ್ ಸಮಿತಿ ಸಮ್ಮತಿಸುತ್ತಿದೆ. ವಿಶ್ವದ ಜೀವವೈವಿಧ್ಯತೆಯ 8 ಅದ್ಭುತ ತಾಣಗಳಲ್ಲಿ ಒಂದಾಗಿರುವ ಪಶ್ಚಿಮ ಘಟ್ಟ ಉಳಿಸುವ ಜವಬ್ದಾರಿಯೂ ನಮ್ಮ ಮೇಲಿದೆ. ಆದರೆ “ಕಸ್ತೂರಿ ರಂಗನ್ ವರದಿ ಜಾರಿಗೆ ಸರ್ಕಾರ ಬದ್ಧ’’ ಎಂಬ ಶೀರ್ಷಿಕೆಯಲ್ಲಿ ವರದಿ ಪ್ರಕಟವಾಗಿರುವ ರೀತಿ ತಾವು ಯಾವುದೇ ಹೇಳಿಕೆ ನೀಡಿಲ್ಲ. ಅಂತಹ ಯಾವುದೇ ನಿರ್ಧಾರವನ್ನು ಸರ್ಕಾರ ಮಾಡಿಲ್ಲ ಎಂದು ಪುನರುಚ್ಚರಿಸಿದ್ದಾರೆ. ಇದನ್ನೂ ಓದಿ: ಇದು ದರದ ಪ್ರಶ್ನೆ ಅಲ್ಲ, ಬೇರೆಯವರಿಗೆ ನಾವು ಮಾರುಕಟ್ಟೆ ಬಿಟ್ಟು ಕೊಟ್ಟಂತೆ: ಸೋಮಶೇಖರ ರೆಡ್ಡಿ
ಪಶ್ಚಿಮಘಟ್ಟ ಮತ್ತು ಅಲ್ಲಿನ ಸಸ್ಯ ಸಂಕುಲ ಮತ್ತು ಪ್ರಾಣಿ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಹೇಳಿದ್ದ, ತಮ್ಮ ಹೇಳಿಕೆಯನ್ನು ತಪ್ಪಾಗಿ ಗ್ರಹಿಸಿ ಕೆಲವು ಮಾಧ್ಯಮಗಳಲ್ಲಿ ಮಾತ್ರ ಈ ರೀತಿ ವರದಿ ಪ್ರಕಟಿಸಲಾಗಿದೆ. ಈ ಬಗ್ಗೆ ಬೀದರ್ ನಲ್ಲಿ ನಿನ್ನೆ ನಡೆದ ಪತ್ರಿಕಾ ದಿನಾಚರಣೆಯಲ್ಲೂ ತಾವು ಸ್ಪಷ್ಟೀಕರಣ ನೀಡಿದ್ದಾಗಿ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಮಂಗಳೂರು: ಪಶ್ಚಿಮ ಘಟ್ಟದಲ್ಲಿ ಭಾರೀ ಮಳೆಯಾದ ಪರಿಣಾಮ ಮನೆಯೊಂದರ ಮೇಲೆ ಗುಡ್ಡ ಕುಸಿದು ಇಬ್ಬರು ಮಕ್ಕಳು ಸೇರಿ ಐವರು ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸುಬ್ರಹ್ಮಣ್ಯದ ಪರ್ವತಮುಖಿ ಎಂಬಲ್ಲಿ ನಡೆದಿದೆ.
ಪಶ್ಚಿಮ ಘಟ್ಟ ಪ್ರದೇಶದಲ್ಲಿ ಭಾರೀ ಮಳೆಯಾದ ಹಿನ್ನೆಲೆ ಕುಮಾರಧಾರ ನದಿ ಸೇರಿದಂತೆ ಹಳ್ಳಗಳಲ್ಲಿ ಭಾರಿ ಪ್ರಮಾಣದ ನೀರು ಹರಿದುಬರುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ನಡುವೆ ಇಂದು ರಾತ್ರಿ ಸುಬ್ರಹ್ಮಣ್ಯದ ಪರ್ವತಮುಖಿಯ ಕುಶಾಲಪ್ಪ ಎಂಬವರ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದೆ. ಮನೆಯಲ್ಲಿ ಐವರು ಇದ್ದರು ಎಂದು ಶಂಕೆ ವ್ಯಕ್ತವಾಗಿದ್ದು, ಮಣ್ಣಿನಡಿಯಲ್ಲಿ ಇಬ್ಬರು ಮಕ್ಕಳಾದ ಶ್ರುತಿ (11), ಗಾನ (6) ಸೇರಿದಂತೆ ಐವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಗುಡ್ಡ ಕುಸಿದು ಮನೆ ಸಂಪೂರ್ಣ ನೆಲ ಸಮವಾಗಿದ್ದು, ಸ್ಥಳಕ್ಕೆ ಸ್ಥಳೀಯ ಆಡಳಿತ ಸಿಬ್ಬಂದಿ ಮತ್ತು ಪೊಲೀಸರು ಆಗಮಿಸಿ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ. ಜೆಸಿಬಿ ಮೂಲಕ ಮಣ್ಣು ತೆರವುಗೊಳಿಸುವ ಕಾರ್ಯ ಬರದಿಂದ ಸಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ- ಅಧಿಕೃತ ಆದೇಶಕ್ಕೆ ಮೊದ್ಲೇ NIA ತನಿಖೆ
ಭಾರೀ ಮಳೆಯಿಂದಾಗಿ ಪ್ರಸಿದ್ಧ ನಾಗಕ್ಷೇತ್ರ ಆದಿ ಸುಬ್ರಹ್ಮಣ್ಯ ದೇವಸ್ಥಾನದ ವಠಾರ ಮುಳುಗಡೆಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಎರಡು ದಿನ ಭಕ್ತರ ಪ್ರವೇಶ ನಿಷೇಧ ಹೇರಲಾಗಿದ್ದು, ಎರಡು ದಿನ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬರದಂತೆ ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಮನವಿ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಸುರತ್ಕಲ್ನಲ್ಲಿ ಬೀಚ್ನಲ್ಲಿ ಭಿನ್ನ ಕೋಮಿನ ಯುವಕನ ಜೊತೆ ಬಂದ ಯುವತಿ ಮೇಲೆ ರೇಪ್
Live Tv
[brid partner=56869869 player=32851 video=960834 autoplay=true]
ಮಂಗಳೂರು: ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಸಂಚರಿಸುವ ವಿಸ್ಟಾಡೋಮ್ ಬೋಗಿಗಳ ರೈಲಿಗೆ ಇಂದು ಮಂಗಳೂರಿನಲ್ಲಿ ಚಾಲನೆ ನೀಡಲಾಯಿತು. ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಲ್ಲಿ ದಕ್ಷಿಣ ಕನ್ನಡದ ಸಂಸದ ನಳಿನ್ ಕುಮಾರ್ ಕಟೀಲ್ರವರು ರೈಲಿಗೆ ಹಸಿರು ನಿಶಾನೆ ತೋರಿದರು.
ಮಂಗಳೂರು ಹಾಗೂ ಬೆಂಗಳೂರಿನ ನಡುವೆ ಸಂಚರಿಸಲಿರುವ ಈ ವಿಸ್ಟಾಡೋಮ್ ಕೋಚ್ ಹೊಂದಿರುವ ರೈಲು ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯಾಗಿದೆ. ಹಗಲಿನಲ್ಲಿ ಸಂಚರಿಸುತ್ತಾ ಪ್ರಕೃತಿಯ ರಮಣೀಯ ದೃಶ್ಯಗಳನ್ನು ವೀಕ್ಷಿಸಲು ಈ ವಿಸ್ಟಾಡೋಮ್ ಕೋಚ್ ಉಳ್ಳ ರೈಲು ಸಿದ್ಧವಾಗಿದೆ. ಪಶ್ಚಿಮ ಘಟ್ಟಗಳ ಮೂಲಕ ರೈಲು ಸಂಚರಿಸಲಿದ್ದು, ಪ್ರಯಾಣದ ಸಂದರ್ಭದ ರಮಣೀಯ ಪ್ರಾಕೃತಿಕ ಸೊಬಗನ್ನು ಸವಿಯಲು ರಚಿಸಲಾಗಿರುವ ವಿಸ್ಟಾಡೋಮ್ ವಿಂಡೋಸ್ ಎಲ್ಲರ ಗಮನಸೆಳೆಯುತ್ತಿದೆ. ಇದನ್ನೂ ಓದಿ: ರಾಜಕೀಯ ಕ್ಷೇತ್ರದಲ್ಲಿರುವ ನಾವು ಯಾರ ಬಗ್ಗೆಯೂ ವೈಯಕ್ತಿಕವಾಗಿ ಮಾತನಾಡಲ್ಲ: ಕಟೀಲ್
ರೈಲಿನಲ್ಲಿ ಎರಡು ವಿಸ್ಟಾಡೋಮ್ ಬೋಗಿಗಳಿದ್ದು, ಪ್ರತಿ ಬೋಗಿಯಲ್ಲಿ 44 ಆಸನ ಸಾಮರ್ಥ್ಯ ಇದೆ. ಜೊತೆಗೆ ಕೋಚ್ನಲ್ಲಿ ಸಿಸಿಟಿವಿ ಕಣ್ಗಾವಲು, ಅಗ್ನಿಶಾಮಕ ಸುರಕ್ಷತಾ ವ್ಯವಸ್ಥೆ ಇದೆ. ಸಕಲೇಶಪುರದಿಂದ ಸುಬ್ರಹ್ಮಣ್ಯದವರೆಗೆ ಹಾದುಹೋಗುವ 55 ಕಿ.ಮೀ. ರೈಲು ಮಾರ್ಗದ ಸೌಂದರ್ಯ ಸವಿಯಲು ಈ ರೈಲು ಪ್ರಯಾಣಿಕರನ್ನು ಕೈಬೀಸಿ ಕರೆಯುತ್ತಿದೆ.
ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ. ರಾಜೇಂದ್ರ, ಮೇಯರ್ ಪ್ರೇಮಾನಂದ ಶೆಟ್ಟಿ, ಡಿ.ಆರ್ ಎಂ ಕೊಠಾರಿ, ಕಾರ್ಪೋರೇಟರ್, ಶೋಭಾ, ರೈಲ್ವೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕಾರವಾರ: ಭಾರತದ ಪೂರ್ವ ಘಟ್ಟದಲ್ಲಿ ಮಾತ್ರ ಕಾಣಸಿಗುತ್ತದೆಂದು ನಂಬಲಾಗಿದ್ದ ಕಳಿಂಗ ಕಪ್ಪೆ ಪಶ್ಚಿಮ ಘಟ್ಟ ಪ್ರದೇಶದಲ್ಲೂ ಪತ್ತೆಯಾಗಿದೆ. ಸಾರ್ವಜನಿಕರು ಆಶ್ಚರ್ಯಗೊಂಡಿದ್ದಾರೆ.
ಜೀವ ವೈವಿಧ್ಯ ಸಂಶೋಧಕ ಶಿರಸಿ ತಾಲೂಕಿನ ವರ್ಗಾಸರದ ಅಮಿತ ಹೆಗಡೆ ಹಾಗೂ ತಂಡ ಈ ಪತ್ತೆ ಕಾರ್ಯ ನಡೆಸಿದೆ. ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡದ ‘ಸಂತಾನೋತ್ಪತ್ತಿ ನಡವಳಿಕೆ ಮತ್ತು ಜೀವ ಸಂವಹನ ಪ್ರಯೋಗಾಲಯದ ಪ್ರಾಣಿಶಾಸ್ತ್ರ ವಿಭಾಗ’ದಲ್ಲಿ ಪಿ.ಎಚ್ಡಿ ಅಧ್ಯಯನ ನಡೆಸುತ್ತಿರುವ ಇವರು, ಪ್ರೊ.ಗಿರೀಶ ಕಾಡದೇವರು ಅವರ ಮಾರ್ಗದರ್ಶನದಲ್ಲಿ ಹಾಗೂ ಪುಣೆಯ ಝೂವಾಲಾಜಿಕಲ್ ಸರ್ವೆ ಆಫ್ ಇಂಡಿಯಾದ (ZSI) ವಿಜ್ಞಾನಿ ಕೆ.ಪಿ.ದಿನೇಶ್ ಅವರ ಸಹಯೋಗದಲ್ಲಿ ಈ ಕಪ್ಪೆ ಪತ್ತೆ ಹಚ್ಚಿದ್ದಾರೆ.
ಶಿರಸಿಯ ಭಾಗದಲ್ಲಿ ಈ ವಿಶಿಷ್ಟ ತಳಿಯ ಕಪ್ಪೆ ಪತ್ತೆಯಾಗಿದ್ದು, ‘ಜೀವವೈವಿಧ್ಯ-ಸಮೃದ್ಧ ಪಶ್ಚಿಮ ಘಟ್ಟಗಳಲ್ಲಿ ಕಂಡುಬರುತ್ತದೆ, ಈ ಸಂಶೋಧನೆಯು ಕೇವಲ ಒಂದು ಶ್ರೇಣಿಯ ವಿಸ್ತರಣೆಯಲ್ಲ. ರೂಪವಿಜ್ಞಾನದಲ್ಲಿ ಸಂಪೂರ್ಣವಾಗಿ ಭಿನ್ನವಾಗಿ ಕಾಣುವಂತಹ ಶೋಧ ಕಾರ್ಯವಾಗಿದೆ. ಈ ಕಪ್ಪೆಯನ್ನು ಪೃಥ್ವಿ ನೇತೃತ್ವದ ಸಂಶೋಧಕರ ತಂಡದಿಂದ 2018ರಲ್ಲಿ ಪೂರ್ವ ಘಟ್ಟದ ಉತ್ತರ ಭಾಗವಾದ ಓರಿಸ್ಸಾ ಹಾಗೂ ಆಂಧ್ರ ಪ್ರದೇಶದಲ್ಲಿ ಪತ್ತೆ ಮಾಡಲಾಗಿತ್ತು. ಇದು ಪೂರ್ವ ಘಟ್ಟದಲ್ಲಿ ಮಾತ್ರ ಕಂಡುಬರವ ಪ್ರಭೇದ ಎಂಬ ನಂಬಿಕೆ ಈ ವರೆಗೆ ಇತ್ತು. ಅಚ್ಚರಿ ಎಂಬಂತೆ ಈ ಕಳಿಂಗ ಜಾತಿಯ ಕಪ್ಪೆ ಇದೇ ಮೊದಲ ಬಾರಿಗೆ ಪಶ್ಚಿಮ ಘಟ್ಟದಲ್ಲಿ ಕಂಡುಬಂದಿರುವುದು ವಿಸ್ಮಯ ಮೂಡಿಸಿದೆ ಎಂದು ಸಂಶೋಧನೆ ನಡೆಸಿದ ಅಮಿತ ಹೆಗಡೆ ತಿಳಿಸಿದ್ದಾರೆ.
ಪಶ್ಚಿಮ ಘಟ್ಟದಲ್ಲಿ ಕಂಡುಬಂದ ಕಳಿಂಗ ಕಪ್ಪೆ ಕೇವಲ ಶ್ರೇಣಿ ವಿಸ್ತರಣೆಯ ಸಂಶೋಧನೆಯಲ್ಲ, ಬದಲಾಗಿ ತನ್ನ ದೇಹ ವಿನ್ಯಾಸದಲ್ಲಿ ಸಂಪೂರ್ಣ ಭಿನ್ನವಾಗಿ ಕಂಡುಬರುವ ವ್ಯವಂಶಿಕವಾಗಿ ಪೂರ್ವ ಘಟ್ಟದ ಕಳಿಂಗ ಜಾತಿಯ ಕಪ್ಪೆಯಾಗಿದೆ. ಈ ದೊಡ್ಡ ಗಾತ್ರದ ಕ್ರಿಕೆಟ್ ಕಪ್ಪೆ ಹೆಚ್ಚಿನ ಫಿನೋಟೈಪಿಕ್ ಪ್ಲಾಸ್ಟಿಟಿಯನ್ನು (Morphological Phenotypic Plasticity) ತೋರಿಸುತ್ತದೆ. ಅಂದರೆ ವ್ಯವಂಶಿಕವಾಗಿ ಒಂದೇ ಜಾತಿಯ ಕಪ್ಪೆಗಳು ನೋಡಲು ಬೇರೆ ಪ್ರಕಾರವಾಗಿ ಕಂಡುಬರುತ್ತವೆ.
ಈ ಸಂಶೋಧನೆಯಲ್ಲಿ ಪೂರ್ವ ಹಾಗೂ ಪಶ್ಚಿಮ ಘಟ್ಟಗಳಲ್ಲಿ ಕಂಡು ಬರುವ ಕಳಿಂಗ ಕಪ್ಪೆಗಳು ಅನುವಂಶಿಕವಾಗಿ ಒಂದೇ ಆಗಿದ್ದು, ನೋಡಲು ರೂಪ ವಿಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳ್ಳನ್ನು ತೋರಿಸುತ್ತಿವೆ. Morphological Phenotypic Plasticity (MPP) ಎಂದರೆ ನೈಸರ್ಗಿಕ ಪರಿಸರದ ವ್ಯತ್ಯಾಸಗಳು ಅಥವಾ ಪ್ರಚೋದಕಗಳಿಗೆ ಪ್ರತಿಕ್ರಿಯೆಯಾಗಿ ತೀವ್ರವಾದ ರೂಪವಿಜ್ಞಾನದ ದೇಹ ವ್ಯತ್ಯಾಸಗಳನ್ನು ತೋರಿಸುವ ಜೀವಿ ಸಾಮರ್ಥ್ಯವಾಗಿದೆ.
ಪಶ್ಚಿಮ ಘಟ್ಟದಲ್ಲಿ ನಾನು ಹಲವು ಬಾರಿ ಈ ಕಪ್ಪೆಯನ್ನು ಕಂಡಿದ್ದೇನೆ. ಇದು ಪಶ್ಚಿಮ ಘಟ್ಟದಿಂದ ತಿಳಿದಿರುವ ಫೆಜೆವರಾಯ, ಮಿನರ್ವರಿಯಾ ಪ್ರಭೇದಗಳಿಗಿಂತ ಸಂಪೂರ್ಣವಾಗಿ ಭಿನ್ನವಾಗಿದೆ. 21 ನೇ ಶತಮಾನದ ಉಂಟಾಗುತ್ತಿರುವ ಹವಾಮಾನ ವೈಪರಿತ್ಯದಲ್ಲಿ ಅನೇಕ ಜೀವವೈವಿಧ್ಯಗಳನ್ನು ನಾವು ಕಳೆದುಕೊಳ್ಳುತ್ತಿದ್ದೇವೆ. ಆದಾಗ್ಯೂ ಪ್ರಸ್ತುತ ನಮ್ಮ ದೇಶದಲ್ಲಿ ಹೊಸ ಪ್ರಭೇದಗಳು ಇತ್ತೀಚೆಗಷ್ಟೇ ಬೆಳಕಿಗೆ ಬರುತ್ತಿವೆ. ಈ ಹೊಸ ಅನ್ವೇಷಣೆ ಸಕಾರಾತ್ಮಕವಾಗಿದೆ. ಆದರೆ ಹೊಸ ಜಾತಿಗಳು, ಪ್ರಭೇದಗಳು ಹೇಗೆ ವರ್ತಿಸುತ್ತವೆ, ಅವುಗಳ ಸ್ವಭಾವಗಳೇನು ಅಥವಾ ವಿಭಿನ್ನ ಜೈವಿಕ ಭೌಗೋಳಿಕ ಶ್ರೇಣಿಗಳಿಗೆ ಹೇಗೆ ಹೊಂದಿಕೊಳ್ಳುತ್ತವೆ ಎಂಬುದರ ಬಗ್ಗೆ ಇನ್ನೂ ಹೆಚ್ಚು ತಿಳಿದಿಲ್ಲ. ಇವುಗಳ ಬಗ್ಗೆ ಕಡಿಮೆ ತಿಳಿದಷ್ಟೂ ಅವುಗಳನ್ನು ಸಂರಕ್ಷಿಸುವುದು ಕಷ್ಟ ಎಂದು ಅಮಿತ್ ತಿಳಿಸಿದ್ದಾರೆ.
ಕ್ರಿಕೆಟ್ ಕಪ್ಪೆ ಕುಲದೊಳಗಿನ ಜೀವಿವರ್ಗೀಕರಣದ ಅಸ್ಪಷ್ಟತೆಯ ಬಗ್ಗೆ ಹಾಗೂ ಸಂಕೀರ್ಣತೆಯ ಬಗ್ಗೆ ನಾವು ಪ್ರಕಟಿಸಿದ ಸಂಶೋಧನಾ ಪ್ರಬಂಧ ಹೆಚ್ಚಿನ ಸಂಖ್ಯೆಯ ಪ್ರಶ್ನೆಗಳನ್ನು ಹುಟ್ಟುಹಾಕುತ್ತಿದೆ. ಇಲ್ಲಿಯವರೆಗೆ ಹೆಚ್ಚಿನ ಪ್ರಭೇದಗಳು ಅವುಗಳನ್ನು ಪತ್ತೆ ಮಾಡಿದ ಪ್ರದೇಶದಿಂದ ಮಾತ್ರ ತಿಳಿದು ಬಂದಿದೆ ಮತ್ತು ಹಳೆಯ ಪ್ರಕಾರದ ಹೆಚ್ಚಿನ ಮಾದರಿಗಳು ಕಳೆದುಹೋಗಿವೆ. ಈ ಸಮಸ್ಯೆಯನ್ನು ಅಥವಾ ಅನಿಶ್ಚಿತತೆಯನ್ನು ಪರಿಹರಿಸಲು ಇವುಗಳ ಬಗ್ಗೆ ಹೆಚ್ಚು ಗಮನಹರಿಸುವ ತುರ್ತು ಅವಶ್ಯಕತೆಯಿದೆ. ಈಶಾನ್ಯ ಭಾರತ ಮತ್ತು ಪಶ್ಚಿಮ ಘಟ್ಟಗಳು ಜೀವವೈವಿಧ್ಯತೆಯಿಂದ ಸಮೃದ್ಧವಾಗಿವೆ. ಈ ಪ್ರದೇಶಗಳನ್ನು ಜೀವವೈವಿಧ್ಯತೆಯ ತಾಣಗಳೆಂದು ಪರಿಗಣಿಸಲಾಗುತ್ತದೆ. ಈ ಸಂಶೋಧನೆಯು ಅಂತರರಾಷ್ಟ್ರೀಯ ಖ್ಯಾತಿಯ ಪ್ರತಿಷ್ಠಿತ ‘ಝೂಟ್ಯಾಕ್ಸಾ` ಎಂಬ ಜರ್ನಲ್ನಲ್ಲಿ ಪುರಾವೆಯೊಂದಿಗೆ ಪ್ರಕಟಗೊಂಡಿದೆ ಎಂದು ಸಂಶೋಧಕ ಅಮಿತ ಹೆಗಡೆ ವಿವರಿಸಿದ್ದಾರೆ.
ಮಂಗಳೂರು: ಕರಾವಳಿ ಭಾಗದಲ್ಲಿ ಮಳೆ ಕಡಿಮೆಯಾದರೂ, ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆರಾಯ ಪ್ರತಾಪ ತೋರುತ್ತಿದ್ದು, ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸಿದೆ. ಇದರಿಂದ ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ.
ಪಶ್ಚಿಮ ಘಟ್ಟಗಳ ಭಾಗದಲ್ಲಿ ಮಳೆರಾಯ ಪ್ರತಾಪ ತೋರುತ್ತಲೇ ಇದ್ದಾನೆ. ಇದೀಗ ಹಠಾತ್ತನೆ ಮೇಘ ಸ್ಫೋಟದ ರೀತಿಯಲ್ಲಿ ಮಳೆಯಾಗಿ ಘಟ್ಟಗಳ ಮಧ್ಯೆ ಜಲಸ್ಫೋಟ ಸಂಭವಿಸುತ್ತಿದೆ. ದಟ್ಟಾರಣ್ಯದಲ್ಲಿ ಬೆಟ್ಟಗಳ ನಡುವೆ ಸ್ಫೋಟ ಉಂಟಾಗುತ್ತಿದ್ದು, ಕಲ್ಲು, ಮಣ್ಣು, ಭಾರೀ ಪ್ರಮಾಣದ ಮರಗಳು ಛಿದ್ರಗೊಂಡು ನೀರಿನೊಂದಿಗೆ ಕೊಚ್ಚಿ ಬರುತ್ತಿದೆ. ಘಟ್ಟದಲ್ಲಿನ ಜಲ ಸ್ಫೋಟದಿಂದ ನಿನ್ನೆ ಚಾರ್ಮಾಡಿ ಬಳಿಯ ಮೃತ್ಯುಂಜಯ ಹೊಳೆ ಇದ್ದಕ್ಕಿದ್ದಂತೆ ಉಕ್ಕಿಹರಿದಿದ್ದು, ನದಿ ಪಾತ್ರದ ನಿವಾಸಿಗಳು ಭಯಭೀತರಾಗಿ ಸುರಕ್ಷಿತ ಸ್ಥಳಕ್ಕೆ ತೆರಳಿ ರಾತ್ರಿ ಕಳೆದಿದ್ದಾರೆ.
ಭಾರೀ ಮಳೆಯಾದಾಗ ನೇತ್ರಾವತಿಯ ಉಪನದಿಗಳು ಹೀಗೆ ವಿಚಿತ್ರವಾಗಿ ಅಬ್ಬರಿಸುತ್ತಿರುವುದು ಘಟ್ಟದ ತಪ್ಪಲಿನ ಗ್ರಾಮಸ್ಥರಲ್ಲಿ ಭೀತಿ ಸೃಷ್ಟಿಸಿದೆ. ಇತಿಹಾಸದಲ್ಲಿ ಎಂದೂ ಕಂಡರಿಯದ ಆತಂಕಕಾರಿ ಘಟನೆಗಳು ಘಟ್ಟಗಳಲ್ಲಿ ಸಂಭವಿಸುತ್ತಿರುವುದು ಆತಂಕ ಸೃಷ್ಟಿಸಿದೆ. ಈ ವೈಪರೀತ್ಯದ ಪರಿಣಾಮ ಚಾರ್ಮಾಡಿಯಲ್ಲಿ ಒಂದಾಗಿ ಹರಿಯುತಿದ್ದ ಅಣಿಯೂರು ಹೊಳೆ ಹೊಸ್ಮಠ ಎಂಬಲ್ಲಿ ಎರಡು ಕವಲುಗಳಾಗಿ ಬೇರ್ಪಟ್ಟಿದೆ. ಭಾರೀ ಪ್ರಮಾಣದ ನೀರಿನೊಂದಿಗೆ ಕಲ್ಲುಗಳು ಹಾಗೂ ಮರದ ಅವಶೇಷಗಳು ಕೊಚ್ಚಿ ಬಂದು ನದಿ ಮಧ್ಯೆ ನಡುಗಡ್ಡೆ ಸೃಷ್ಟಿಯಾಗಿದೆ.
ಕೃಷಿ ತೋಟಗಳಿದ್ದ ಜಾಗದಲ್ಲಿ ಹೊಸ ಹೊಳೆಯೇ ಸೃಷ್ಟಿಯಾಗಿದೆ. ಅಲ್ಲಿಂದ ನೋಡಿದರೆ, ಘಟ್ಟದ ಮೇಲ್ಭಾಗದಲ್ಲಿ ಬೆಟ್ಟಗಳ ಮಧ್ಯೆ ಬೃಹತ್ತಾಗಿ ಬಿರುಕು ಬಿಟ್ಟು ಅರಣ್ಯ ನಾಶವಾಗಿರುವುದೂ ಕಂಡುಬರುತ್ತಿದೆ. ಇದರಿಂದ ಸ್ಥಳೀಯರು ಭಯಗೊಂಡಿದ್ದು ಸ್ಥಳಾಂತರಗೊಳ್ಳುತ್ತಿದ್ದಾರೆ.
ಭೀಕರ ಮಳೆಯಿಂದಾಗಿ ಚಾರ್ಮಾಡಿ ಘಾಟ್ನಲ್ಲಿ ಭೂ ಕುಸಿತ ಸಂಭವಿಸಿತ್ತು. ಅಲ್ಲದೆ, ಮರಗಳು ಸಹ ರಸ್ತೆಗೆ ಬಿದ್ದಿದ್ದವು, ರಸ್ತೆಯನ್ನು ಸ್ವಚ್ಛಗೊಳಿಸಿ, ಲಘು ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ಅವಕಾಶ ಕಲ್ಪಿಸಿತ್ತು. ಆದರೆ, ಆಗಸ್ಟ್ 30 ರಂದು ಮತ್ತೆ ಆದೇಶ ಹೊರಡಿಸಿ, ಚಾರ್ಮಾಡಿ ಘಾಟ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತ ಮತ್ತೆ ಬ್ರೇಕ್ ಹಾಕಿತ್ತು.
ಪೊಲೀಸರು ನೀಡಿರುವ ವರದಿಯಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ಇದೆ. ಚಾರ್ಮಾಡಿ ಘಾಟ್ ಸಹಜ ಸ್ಥಿತಿಗೆ ಬರಲು ಇನ್ನಷ್ಟು ದಿನಗಳು ಬೇಕಾಗುತ್ತದೆ ಎಂದು ತಿಳಿಸಲಾಗಿತ್ತು. ಪೊಲೀಸರ ವರದಿ ಪಡೆದ ಚಿಕ್ಕಮಗಳೂರು ಜಿಲ್ಲಾಧಿಕಾರಿ ಬಗಾದಿ ಗೌತಮ್, ಎಲ್ಲ ರೀತಿಯ ವಾಹನ ಸಂಚಾರ ನಿಷೇಧಗೊಳಿಸಿ ಆದೇಶ ಹೊರಡಿಸಿದ್ದರು. ಹೀಗಾಗಿ ಅನಿರ್ಧಿಷ್ಟಾವಧಿಗೆ ಮತ್ತೆ ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದೆ.
ಶಿವಮೊಗ್ಗ: ಪಶ್ಚಿಮಘಟ್ಟದ ಸೂಕ್ಷ್ಮ ಪ್ರದೇಶದಲ್ಲಿರುವ ಮಾಣಿ ಡ್ಯಾಂನ ಕಣ್ಣಳತೆ ದೂರದಲ್ಲಿ ಮತ್ತೆ ಡೈನಮೈಟ್ಗಳ ಸ್ಫೋಟ ಕೇಳಿ ಬರುತ್ತಿದೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಮತ್ತೊಮ್ಮೆ ತಲೆ ಎತ್ತಿ ನಿಂತಿದೆ.
ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ರಾಜ್ಯ ಹೆದ್ದಾರಿ 52ಕ್ಕೆ ಹೊಂದಿಕೊಂಡಿರುವ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿ ವರಾಹಿ ನದಿ ದಂಡೆಯಲ್ಲೇ ನಡೆಯುತ್ತಿರುವ ಈ ಕಲ್ಲು ಗಣಿಗಾರಿಕೆ ಬಗ್ಗೆ ಗಣಿಗಾರಿಕೆ ಇಲಾಖೆ, ಅರಣ್ಯ ಹಾಗೂ ಪೊಲೀಸ್ ಇಲಾಖೆಗಳು ಜಾಣ ಕುರುಡುತನ ತೋರುತ್ತಿವೆ. ಆರು ತಿಂಗಳ ಹಿಂದೆ ಪಬ್ಲಿಕ್ ಟಿವಿ ಈ ಕುರಿತು ಸಮಗ್ರ ವರದಿ ಮಾಡಿದಾಗ ಈ ಗಣಿಗಾರಿಕೆ ಸ್ಥಗಿತಗೊಂಡಿತ್ತು.
ಈ ಅಕ್ರಮ ಕ್ವಾರಿಯಲ್ಲಿ ಶಕ್ತಿಶಾಲಿ ಜಿಲೆಟಿನ್ ಸ್ಫೋಟ ನಡೆಸಲಾಗುತ್ತಿದ್ದು, ಅಣೆಕಟ್ಟೆಯ ಭದ್ರತೆಗೆ ಧಕ್ಕೆ ಆಗುವ ಸಾಧ್ಯತೆ ಇದೆ. ರಾಜ್ಯ ಹೆದ್ದಾರಿ 52ಕ್ಕೆ ಹೊಂದಿಕೊಂಡೇ ಕ್ರಷರ್ ಇದೆ. ಈ ಕ್ರಷರ್ನಿಂದ ಒಂದು ಕಿ.ಮೀ.ದೂರದಲ್ಲೇ ಕ್ವಾರಿ ಸಹ ಇದೆ. ಈ ಕ್ವಾರಿ ಮಾಲೀಕ ರವೀಂದ್ರ ಎಂಬಾತ ಕಾಂಗ್ರೆಸ್ ಕಾರ್ಯಕರ್ತರಾಗಿದ್ದು, ಒಮ್ಮೆ ತಾಲೂಕು ಪಂಚಾಯ್ತಿಗೆ ಅಧ್ಯಕ್ಷರೂ ಆಗಿದ್ದರು. ಕ್ಷೇತ್ರದ ಶಾಸಕ ಕಿಮ್ಮನೆ ಆವರ ಕೃಪಾಕಟಾಕ್ಷದಲ್ಲಿ ಈ ಕ್ವಾರಿ ಯಾವುದೇ ಅಡೆ ತಡೆ ಇಲ್ಲದೆ ಎಲ್ಲಾ ನೀತಿನಿಯಮಗಳನ್ನು ಮೀರಿ ನಡೆಯುತ್ತಿದೆ.
ನದಿ ಪಾತ್ರದಲ್ಲಿ ಅದೂ ಅಣೆಕಟ್ಟೆಯ ಸಮೀಪದಲ್ಲಿ ಕಲ್ಲುಕ್ವಾರಿಗೆ ಅವಕಾಶ ನೀಡಲು ಸಾಧ್ಯವಿಲ್ಲ. ಆದರೂ ಇಲ್ಲಿ ನಿರಾತಂಕವಾಗಿ ಕ್ವಾರಿ ನಡೆಯುತ್ತಿದೆ. ಈ ಅಕ್ರಮ ಕ್ವಾರಿಯಿಂದ ತೆಗೆದಿರುವ ಕಲ್ಲುಗಳನ್ನು ವಶಪಡಿಸಿಕೊಳ್ಳಬೇಕು. ಇದೂವರೆಗೂ ಇಲ್ಲಿ ಪರಿಸರ ನಾಶ ಮಾಡಿರುವ, ನದಿ ದಂಡೆಯಲ್ಲಿ ಕ್ವಾರಿ ನಡೆಸಿದ ಪ್ರಭಾವಿ ರಾಜಕಾರಣಿ ಮೇಲೆ ಕ್ರಮಕೈಗೊಳ್ಳಬೇಕು. ಜೊತೆಗೆ ಇಂಥ ಅಕ್ರಮಕ್ಕೆ ಅವಕಾಶ ನೀಡಿದ ಅರಣ್ಯ ಇಲಾಖೆ, ಕಂದಾಯ ಇಲಾಖೆ, ಕೆಪಿಸಿ, ಪೊಲೀಸ್ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂಬುದು ಸ್ಥಳೀಯರ ಒತ್ತಾಯವಾಗಿದೆ. ಆದರೆ ಕಾಂಗ್ರೆಸ್ ನಾಯಕರೇ ಇವರಿಗೆ ಬೆನ್ನೆಲುಬಾಗಿ ನಿಂತಿದ್ದಾರೆಂದು ಹೇಳಲಾಗಿದ್ದು ಇದು ಸಾಧ್ಯವೇ ಎಂಬುದು ಸದ್ಯದ ಪ್ರಶ್ನೆಯಾಗಿದೆ.
ನದಿ ದಂಡೆಯಲ್ಲಿ ಹಾಗೂ ಅಣೆಕಟ್ಟೆ ಸಮೀಪದಲ್ಲಿ ಸ್ಫೋಟಕ ಬಳಸಿ ಕಲ್ಲುಗಣಿಗಾರಿಕೆ ನಡೆಸುವುದು ಕರ್ನಾಟಕ ಗಣಿ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿರುವ ಮಾಣಿ ಅಣೆಕಟ್ಟೆ ಕಲ್ಲು ಕ್ವಾರಿ ಕಾರಣದಿಂದ ಆಪಾಯದಲ್ಲಿದೆ. ಈ ಕಲ್ಲು ಕ್ವಾರಿಯಲ್ಲಿ ಜಿಲೆಟಿನ್ ಬಳಸಲಾಗುತ್ತಿದೆ. ಈ ಕಲ್ಲುಕ್ವಾರಿ ಮೀಸಲು ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿದೆ. ರಾಜ್ಯದಲ್ಲೇ ಅತೀ ಹೆಚ್ಚು ಮಳೆ ಬೀಳುವ ಪ್ರದೇಶ ಕರ್ನಾಟಕದ ಚಿರಾಂಪುಂಜಿ ಹುಲಿಕಲ್ ಪ್ರದೇಶಕ್ಕೆ ತಾಗಿಕೊಂಡಿದೆ.