Tag: ಪಹಲ್ಗಾಮ್ ದಾಳಿ

  • ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ಏರ್‌ ಇಂಡಿಯಾ 4,000 ಕೋಟಿ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ – ಸಿಇಒ ಸ್ಪೋಟಕ ಮಾಹಿತಿ

    ನವದೆಹಲಿ: ಏರ್‌ ಇಂಡಿಯಾ (Air India) ಸಂಸ್ಥೆ 4,000 ಕೋಟಿಗೂ ಅಧಿಕ ನಷ್ಟ ಅನುಭವಿಸಲು ಪಾಕಿಸ್ತಾನ ಕಾರಣ ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ (Campbell Wilson) ಕಾರ್ಯಕ್ರಮವೊಂದರಲ್ಲಿ ಹೇಳಿದ್ದಾರೆ.

    ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Attack) ಬಳಿಕ ಎರಡೂ ರಾಷ್ಟ್ರಗಳ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಿಂದ ಭಾರತ ಮತ್ತು ಪಾಕಿಸ್ತಾನ ಪರಸ್ಪರ ತಮ್ಮ ವಾಯುಪ್ರದೇಶವನ್ನು ಮುಚ್ಚಿದವು. ಇದು ಭಾರತೀಯ ವಿಮಾನಯಾನ ಸಂಸ್ಥೆಗಳ ಮೇಲೆ ಗಮನಾರ್ಹ ಪರಿಣಾಮ ಬೀರಿತು. ಏರ್‌ ಇಂಡಿಯಾ ಒಂದೇ ಸಂಸ್ಥೆ ಸುಮಾರು 4,000 ಕೋಟಿ ರೂ.ಗೂ ಹೆಚ್ಚು ನಷ್ಟ ಅನುಭವಿಸಿತು ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಮೋದಿ ಮತಕ್ಕಾಗಿ ಡ್ಯಾನ್ಸ್ & ಡ್ರಾಮಾ, ಬೇಕಿದ್ರೆ ಭರತನಾಟ್ಯನೂ ಮಾಡ್ತಾರೆ – ರಾಹುಲ್‌ ಗಾಂಧಿ ಲೇವಡಿ

    ಸಂಘರ್ಷದ ಬಳಿಕ ಪಾಕಿಸ್ತಾನ ತನ್ನ ವಾಯುಸೀಮೆಯನ್ನು (Pakistans Airspace) ನಿರಂತರವಾಗಿ ಮುಚ್ಚಿತು. ಇದರಿಂದ ಏರ್‌ ಇಂಡಿಯಾ ಸಂಸ್ಥೆ ನಿರಂತರ ನಷ್ಟ ಅನುಭವಿಸಿತು. ಏಕೆಂದ್ರೆ ಪಹಲ್ಗಾಮ್‌ ದಾಳಿ ಬಳಿಕ ಏರ್‌ ಇಂಡಿಯಾ ಹಲವಾರು ಅಂತಾರಾಷ್ಟ್ರೀಯ ವಿಮಾನಗಳ ಮಾರ್ಗಗಳನ್ನ ಬದಲಾಯಿಸಬೇಕಾಯಿತು. ಇದರಿಂದ ಕಾರ್ಯಾಚರಣೆಯ ವೆಚ್ಚ ಹೆಚ್ಚಾಯಿತು. ಇದೆಲ್ಲ ಕಾರಣಗಳಿಂದ ವಿಮಾನಯಾನ ಸಂಸ್ಥೆ ನಷ್ಟ ಅನುಭವಿಸಬೇಕಾಯ್ತು ಎಂದ ತಿಳಿಸಿದ್ರು. ಇದನ್ನೂ ಓದಿ: 10 ಮುಸ್ಲಿಂ ಯುವತಿಯರನ್ನು ಕರೆತಂದು ಹಿಂದೂ ಯುವಕರು ಮದುವೆಯಾಗಿ: ಬಿಜೆಪಿ ಮಾಜಿ ಶಾಸಕ ವಿವಾದಾತ್ಮಕ ಹೇಳಿಕೆ

    ಈ ಅವಧಿಯಲ್ಲಿ ಯುರೋಪ್‌ ಮತ್ತು ಯುನೈಟೆಡ್‌ ಸ್ಟೇಸ್ಟ್‌ಗೆ ಹೋಗುವ ಮಾರ್ಗಗಳು ಹೆಚ್ಚು ಪರಿಣಾಮ ಬೀರಿತು. ಈ ಮಾರ್ಗಗಳಲ್ಲಿ ಬದಲಾವಣೆ ಮಾಡಿದ್ದರಿಂದ 60 ರಿಂದ 90 ನಿಮಿಷಗಳ ಪ್ರಯಾಣ ಸಮಯ ಹೆಚ್ಚಾಯಿತು. ಜೊತೆಗೆ ಸಿಬ್ಬಂದಿ ಖರ್ಚು ಹೆಚ್ಚಾಯ್ತು ಎಂದು ವಿವರಿಸಿದ್ರು. ಇದನ್ನೂ ಓದಿ:  ಅಯೋಧ್ಯೆ ರಾಮಮಂದಿರಕ್ಕೆ 3 ಸಾವಿರ ಕೋಟಿ ದೇಣಿಗೆ; 1500 ಕೋಟಿ ರೂ. ಖರ್ಚು

    ಪಹಲ್ಗಾಮ್‌ನಲ್ಲಿ ಹರಿಯಿತು ನೆತ್ತರು
    ಏಪ್ರಿಲ್ 22ರಂದು ಶ್ರೀನಗರದ ಪಹಲ್ಗಾಮ್‌ನಲ್ಲಿರುವ ಬೈಸರನ್ ಕಣಿವೆಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಹಾಜರಿದ್ದರು. ಹಠಾತ್ ಭಯೋತ್ಪಾದಕ ದಾಳಿಯ ಸಮಯದಲ್ಲಿ, 26 ಜನರು ಸಾವನ್ನಪ್ಪಿದರು ಮತ್ತು ಗುಂಡಿನ ದಾಳಿಯಲ್ಲಿ 17 ಜನರು ಗಾಯಗೊಂಡರು. 370ನೇ ವಿಧಿ ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿತ್ತು. ಟಿಆರ್‌ಎಫ್‌ ಸಂಘಟನೆ ಇದರ ಹೊಣೆ ಹೊತ್ತುಕೊಂಡಿತ್ತು.

  • ಪಹಲ್ಗಾಮ್‌ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ: ಭಾಗವತ್‌

    ಪಹಲ್ಗಾಮ್‌ ದಾಳಿ ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ: ಭಾಗವತ್‌

    ಮುಂಬೈ: ಪಹಲ್ಗಾಮ್‌ ದಾಳಿ (Pahalgam Attack) ನಂತರ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾಗಿದೆ ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌ (Mohan Bhagwat) ಹೇಳಿದ್ದಾರೆ.

    ಆರ್‌ಎಸ್‌ಎಸ್‌ (RSS) ವಾರ್ಷಿಕ ವಿಜಯದಶಮಿ ರ‍್ಯಾಲಿಯಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಭದ್ರತ್ರೆ ಬಂದಾಗ ಭಾರತವು ಹೆಚ್ಚು ಜಾಗರೂಕವಾಗಿರಬೇಕು ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ನಾವು ಸ್ವದೇಶಿ & ಸ್ವಾವಲಂಬನೆಯತ್ತ ಸಾಗಬೇಕು: ಅಮೆರಿಕ ಟ್ಯಾರಿಫ್ ಬಗ್ಗೆ ಮೋಹನ್ ಭಾಗವತ್ ಮಾತು

    ನಾವು ಇತರ ದೇಶಗಳೊಂದಿಗೆ ಸ್ನೇಹಪರ ಸಂಬಂಧವನ್ನು ಕಾಪಾಡಿಕೊಂಡಿದ್ದರೂ, ನಾವು ಅದನ್ನು ಮುಂದುವರಿಸುತ್ತೇವೆ, ನಮ್ಮ ಭದ್ರತೆಗೆ ಬಂದಾಗ, ನಾವು ಹೆಚ್ಚು ಜಾಗರೂಕರಾಗಿರಬೇಕು. ಪಹಲ್ಗಮ್ ದಾಳಿಯ ನಂತರ, ವಿವಿಧ ದೇಶಗಳು ತೆಗೆದುಕೊಂಡ ನಿರ್ಣಯಗಳಿಂದ ಭಾರತದ ನಿಜವಾದ ಸ್ನೇಹಿತ ಯಾರೆಂಬುದು ಗೊತ್ತಾ ಗಿದೆ ಎಂದು ತಿಳಿಸಿದ್ದಾರೆ.

    ಭಯೋತ್ಪಾದಕರು ಗಡಿ ದಾಟಿ ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಭಾರತೀಯರನ್ನು ಹತ್ಯೆ ಮಾಡಿದರು. ಇದು ದೇಶದಲ್ಲಿ ಅಪಾರ ನೋವು ಮತ್ತು ಉಗ್ರರ ವಿರುದ್ಧ ಕೋಪಕ್ಕೆ ಕಾರಣವಾಯಿತು. ದಾಳಿಗೆ ತಕ್ಕ ಪ್ರತೀಕಾರವೂ ಆಯಿತು. ನಮ್ಮ ಸಶಸ್ತ್ರ ಪಡೆಗಳ ಶೌರ್ಯ ಮತ್ತು ಸಮಾಜದ ಏಕತೆ ಇದರಿಂದ ಸ್ಪಷ್ಟವಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ದುಷ್ಟ, ಕೆಡುಕಿನ ಮೇಲೆ ಒಳ್ಳೆಯದರ ವಿಜಯ: ಭಾರತೀಯರಿಗೆ ವಿಜಯದಶಮಿ ಶುಭಾಶಯ ತಿಳಿಸಿದ ಮೋದಿ

    ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳ ದೇಶಗಳಲ್ಲಿ ಸಾರ್ವಜನಿಕರು ದಂಗೆಯೆದ್ದು ಹಿಂಸಾತ್ಮಕ ಘಟನೆಗಳು ನಡೆದಿವೆ. ಭಾರತದಲ್ಲೂ ಇಂತಹ ಪರಿಸ್ಥಿತಿ ಸೃಷ್ಟಿಸಲು ಬಯಸುವವರು ದೇಶದ ಒಳಗೂ ಮತ್ತು ಹೊರಗೂ ಸಕ್ರಿಯರಾಗಿದ್ದಾರೆ. ಹಿಂಸಾತ್ಮಕ ದಂಗೆ ಅರಾಜಕತೆಗೆ ಮಾತ್ರ ಕಾರಣವಾಗುತ್ತವೆ. ವಿದೇಶಗಳ ಮಧ್ಯಪ್ರವೇಶಕ್ಕೆ ಅವಕಾಶ ನೀಡುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಯುಎಸ್ ಜಾರಿಗೆ ತಂದ ಸುಂಕ ನೀತಿಯನ್ನು ಸ್ವಂತ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮಾಡಲಾಗಿದೆ. ನಾವು ಸ್ವದೇಶಿ ಮತ್ತು ಸ್ವಾವಲಂಬನೆಯತ್ತ ಗಮನ ಹರಿಸಬೇಕು ಎಂದು ಕರೆ ನೀಡಿದ್ದಾರೆ.

  • ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಪಹಲ್ಗಾಮ್‌ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಅರೆಸ್ಟ್‌ – ಶಿಕ್ಷಕನಾಗಿ ಕೆಲಸ, ಲಷ್ಕರ್‌ ಗುಂಪಿನೊಂದಿಗೆ ಸಂಪರ್ಕ

    ಶ್ರೀನಗರ: ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Attack) ಉಗ್ರರಿಗೆ ಸಹಾಯ ಮಾಡಿದ್ದ ಜಮ್ಮು ಮತ್ತು ಕಾಶ್ಮೀರದ‌ ವ್ಯಕ್ತಿಯನ್ನ ಪೊಲೀಸರು ಬಂಧಿಸಿದ್ದಾರೆ.

    ಬಂಧಿತನನ್ನ 26 ವರ್ಷದ ಮೊಹಮ್ಮದ್ ಯೂಸುಫ್ ಕಟಾರಿ (Mohammad Yousuf Katari) ಎಂದು ಗುರುತಿಸಲಾಗಿದೆ. ಗುಪ್ತಚರ ಮಾಹಿತಿ ಮೇರೆಗೆ ದಕ್ಷಿಣ ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಕಟಾರಿಯನ್ನ ಬಂಧಿಸಲಾಗಿದ್ದು, ವಿಚಾರಣೆ ವೇಳೆ ಜಮ್ಮು-ಕಾಶ್ಮೀರ ಪೊಲೀಸರು ಕಟಾರಿ ಬಗ್ಗೆ ಹಲವು ರಹಸ್ಯಗಳನ್ನು ಬಯಲಿಗೆಳೆದಿದ್ದಾರೆ.

    ಯೂಸೂಫ್‌ ಕಟಾರಿ ಯಾರು?
    ಕುಲ್ಗಾಮ್‌ ಜಿಲ್ಲೆಯಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಕಟಾರಿ, ಶಿಕ್ಷಕನಾಗಿಯೂ ಕೆಲಸ ಮಾಡ್ತಿದ್ದ. ಈತ ಪಾಕಿಸ್ತಾನದ ಲಷ್ಕರ್‌ ಎ ತೈಬಾ (LTE) ಭಯೋತ್ಪಾದಕ ಗುಂಪಿನೊಂದಿಗೆ ಸಂಪರ್ಕದಲ್ಲಿದ್ದ. ಏಪ್ರಿಲ್‌ 22ರಂದು ನಡೆದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರರಿಗೆ ಎಲ್ಲಾ ರೀತಿಯ ಸಹಾಯ ಮಾಡಿದ್ದ ಅನ್ನೋದು ಗೊತ್ತಾಗಿದೆ.

    ಪಹಲ್ಗಾಮ್‌ ಉಗ್ರರನ್ನ ಕೆಲ ದಿನಗಳ ಹಿಂದೆ ನಡೆದ ಆಪರೇಷನ್‌ ಮಹಾದೇವ್‌ (Operation Mahadev) ಕಾರ್ಯಾಚರಣೆಯಲ್ಲಿ ಚಿನಾರ್‌ ಕಾರ್ಪ್ಸ್‌ ಬೆಟಾಲಿಯನ್‌ ಹತ್ಯೆಗೈದಿತ್ತು. ಆ ಬಳಿಕ ಉಗ್ರರಿಗೆ ಸೇರಿದ್ದ ಉಪಕರಣಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಇದೆಲ್ಲದರ ವಿಶ್ಲೇಷಣೆಯ ಬಳಿಕ ಕಟಾರಿಯನ್ನ ಬಂಧಿಸಲಾಗಿದೆ.

    ಆಪರೇಷನ್‌ ಮಹಾದೇವ್‌ನಲ್ಲಿ ಮಾಸ್ಟರ್‌ ಮೈಂಡ್‌ ಹತ್ಯೆ
    ಮೇ 22ರಿಂದ 2-3 ವಾರಗಳ ಕಾಲ ಸತತವಾಗಿ ಆಪರೇಷನ್‌ ಮಹಾದೇವ್‌ ಕಾರ್ಯಾಚರಣೆ ನಡೆಸಲಾಯಿತು. ಈ ವೇಳೆ ಶ್ರೀನಗರ ಬಳಿಯ ದಚಿಗಮ್‌ ಅರಣ್ಯ ಪ್ರದೇಶದಲ್ಲಿ ಉಗ್ರರನ್ನ ಹತ್ಯೆಗೈಯಲಾಗಿತ್ತು. ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೇರಿ ಮೂವರು ಭಯೋತ್ಪಾದಕರು ಕಾರ್ಯಾಚರಣೆಯಲ್ಲಿ ಹತ್ಯೆಯಾಗಿದ್ದರು. ಹತ್ಯೆಗೀಡಾದ ಉಗ್ರರ ಬಳಿಯಿದ್ದ ಎಕೆ-47 ರೈಫಲ್‌ ಹಾಗೂ M-9 ಅಸಾಲ್ಟ್‌ ರೈಫಲ್‌ಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಬಳಿಕ ಆ ರೈಫಲ್‌ಗಳನ್ನ ಪಹಲ್ಗಾಮ್‌ ದಾಳಿಯಲ್ಲಿ ಬಖಲೆ ಮಾಡಲಾಗಿದೆ ಅನ್ನೋದು ಚಂಡೀಗಢದ ಪ್ರಯೋಗಾಲಯದಲ್ಲಿ ಪರೀಕ್ಷೆ ನಡೆಸಿದ ಬಳಿಕ ಗೊತ್ತಾಯಿತು.

  • ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಪಹಲ್ಗಾಮ್‌ ದಾಳಿಯಲ್ಲಿ ಉಗ್ರರಿಗೆ ಸಹಾಯ ಮಾಡಿದ್ದ ವ್ಯಕ್ತಿ ಬಂಧನ

    ಶ್ರೀನಗರ: ಏಪ್ರಿಲ್ 22 ರ ಪಹಲ್ಗಾಮ್ ದಾಳಿ (Pahalgam Attack) ಭಯೋತ್ಪಾದಕರಿಗೆ ಸಹಾಯ ಮಾಡಿದ್ದ ವ್ಯಕ್ತಿಯನ್ನು ಜಮ್ಮು ಮತ್ತು ಕಾಶ್ಮೀರ (Jammu & Kashmir) ಪೊಲೀಸರು ಬಂಧಿಸಿದ್ದಾರೆ.

    ಪಹಲ್ಗಾಮ್ ಬಳಿಯ ಜನಪ್ರಿಯ ಪ್ರವಾಸಿ ತಾಣವಾದ ಬೈಸರನ್ ಕಣಿವೆಯಲ್ಲಿ 26 ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ನಡೆಸಿ ಹತ್ಯೆ ಮಾಡಿದ್ದರು. ಭದ್ರತಾ ಪಡೆಗಳು ಆಪರೇಷನ್ ಮಹಾದೇವ್ ಸಮಯದಲ್ಲಿ ಪಹಲ್ಗಾಮ್‌ ದಾಳಿಯ ಇಬ್ಬರು ಉಗ್ರರನ್ನು ಹೊಡೆದುರುಳಿಸಿ, ಶಸ್ತ್ರಾಸ್ತ್ರಗಳು ಮತ್ತು ಸಲಕರಣೆಗಳನ್ನು ವಶಪಡಿಸಿಕೊಂಡಿದ್ದರು. ಅವುಗಳನ್ನು ವಿಧಿವಿಜ್ಞಾನ ವಿಶ್ಲೇಷಣೆಯ ನಂತರ ಮೊಹಮ್ಮದ್ ಕಟಾರಿಯಾ ಎಂಬಾತನನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳ ಪತ್ತೆಗೆ ನೆರವಾಯ್ತು ಬುಲೆಟ್‌ ಶೆಲ್‌ ಟೆಸ್ಟಿಂಗ್‌ – ಬ್ಯಾಲಿಸ್ಟಿಕ್ಸ್‌ ಮ್ಯಾಚಿಂಗ್‌ ಹೇಗೆ ನಡೆಯುತ್ತೆ?

    ಕಟಾರಿಯಾನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಪಹಲ್ಗಾಮ್ ದಾಳಿಗೆ ಕಾರಣರಾದ ಎಲ್ಲರನ್ನು ಪತ್ತೆಹಚ್ಚುವಲ್ಲಿ ಸರ್ಕಾರ ನಿರಂತರ ಗಮನಹರಿಸುತ್ತಿದೆ ಎಂಬುದನ್ನು ಇದು ಒತ್ತಿ ಹೇಳುತ್ತದೆ.

    ಪಾಕಿಸ್ತಾನ ಮೂಲದ ಲಷ್ಕರ್-ಎ-ತೊಯ್ಬಾದ ಒಂದು ಬಣವು ಪಹಲ್ಗಾಮ್‌ ದಾಳಿಯ ಹೊಣೆಯನ್ನು ಹೊತ್ತುಕೊಂಡಿದೆ. ಶ್ರೀನಗರ ಬಳಿಯ ಡಚಿಗಮ್‌ನಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಮೇ 22 ರಂದು ಭದ್ರತಾ ಪಡೆಗಳಿಗೆ ಗುಪ್ತಚರ ಮಾಹಿತಿ ಸಿಕ್ಕಿತ್ತು. ಅದರ ಬೆನ್ನಲ್ಲೇ ಆಪರೇಷನ್ ಮಹಾದೇವ್ ನಡೆಸಲಾಯಿತು. ಇದನ್ನೂ ಓದಿ: ಕಾಶ್ಮೀರದಲ್ಲಿ ಭದ್ರತಾ ಪಡೆಗಳೊಂದಿಗೆ ಗುಂಡಿನ ಚಕಮಕಿ – ಪಹಲ್ಗಾಮ್‌ ಪಾತಕಿ ಬೆನ್ನಲ್ಲೇ ಮತ್ತಿಬ್ಬರು ಉಗ್ರರು ಎನ್‌ಕೌಂಟರ್‌

  • ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಪಹಲ್ಗಾಮ್‌ನಲ್ಲಿ ದಾಳಿ ಮಾಡಿದ್ದು ಪಾಕಿಸ್ತಾನ ಉಗ್ರರು: ಭದ್ರತಾ ಸಂಸ್ಥೆ ಸ್ಪಷ್ಟನೆ

    ಶ್ರೀನಗರ: ಜುಲೈ 28ರಂದು ಜಮ್ಮು ಕಾಶ್ಮೀರದಲ್ಲಿ ನಡೆದ ಆಪರೇಷನ್ ಮಹಾದೇವದಲ್ಲಿ (Operation Mahadev) ಮೃತಪಟ್ಟ ಮೂವರು ಉಗ್ರರು ಪಾಕಿಸ್ತಾನದವರು ಎಂಬುದು ತನಿಖೆಯಲ್ಲಿ ದೃಢಪಟ್ಟಿದೆ ಎಂದು ಭದ್ರತಾ ಸಂಸ್ಥೆ ತಿಳಿಸಿದೆ.

    ಭಾರತೀಯ ಭದ್ರತಾ ಏಜೆನ್ಸಿಗಳು ಕಲೆಹಾಕಿದ ಮಾಹಿತಿಗಳು ಸೇರಿದಂತೆ ಪಾಕಿಸ್ತಾನ ಸರ್ಕಾರ ನೀಡಿದ ದಾಖಲೆ ಮತ್ತು ಬಯೋಮೆಟ್ರಿಕ್ ದಾಖಲೆಗಳನ್ನು ತನಿಖೆ ನಡೆಸಿದ ವೇಳೆ ಪಹಲ್ಗಾಮ್‌ನಲ್ಲಿ ದಾಳಿ (Pahalgam Terrorists) ನಡೆಸಿದ್ದ ಈ ಮೂವರು ಪಾಕಿಸ್ತಾನದವರು ಎಂಬುದು ತಿಳಿದುಬಂದಿದೆ. ಉಗ್ರರನ್ನು ಎಲ್‌ಇಟಿ ಹಿರಿಯ ಕಾರ್ಯಕರ್ತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ನಿಲ್ಲಿಸಲು KSRTC, BMTC ಕೊನೆಯ ಕಸರತ್ತು

    ಏಪ್ರಿಲ್ 22 ರಂದು ಪಹಲ್ಗಾಮ್‌ನ ಬೈಸರನ್ ಹುಲ್ಲುಗಾವಲಿನಲ್ಲಿ ನಡೆದ ಭಯೋತ್ಪಾದಕ ದಾಳಿ ನಂತರ ಈ ಉಗ್ರರು ಡಚಿಗಮ್-ಹರ್ವಾನ್ ಅರಣ್ಯ ಪ್ರದೇಶದಲ್ಲಿ (Dachigam-Harwan Forest) ಅಡಗಿಕೊಂಡಿದ್ದರು. ಇದನ್ನೂ ಓದಿ: ಸಾರಿಗೆ ಮುಷ್ಕರ – ಸಿಎಂ ಸಭೆಯಲ್ಲಿ ಏನಾಯ್ತು? ಸಾರಿಗೆ ಮುಖಂಡರು ಸಂಧಾನ ತಿರಸ್ಕರಿಸಿದ್ದು ಯಾಕೆ?

    ಪಾಕಿಸ್ತಾನದ ರಾಷ್ಟ್ರೀಯ ಮಾಹಿತಿ ಮತ್ತು ನೋಂದಣಿ ಪ್ರಾಧಿಕಾರದ ಬಯೋಮೆಟ್ರಿಕ್ ದಾಖಲು, ಮತದಾರರ ಗುರುತಿನ ಚೀಟಿಗಳು ಮತ್ತು ಡಿಜಿಟಲ್ ಸ್ಯಾಟಲೈಟ್ ಫೋನ್ ಮಾಹಿತಿ, ಲಾಗ್‌ಗಳು ಮತ್ತು ಜಿಪಿಎಸ್ ವೇ ಪಾಯಿಂಟ್‌ಗಳು ಸೇರಿದಂತೆ ಭದ್ರತಾ ಸಂಸ್ಥೆಗಳು ಸಂಗ್ರಹಿಸಿದ ಪ್ರಮುಖ ಪುರಾವೆಗಳಲ್ಲಿ ಮೂವರು ಭಯೋತ್ಪಾದಕರು ಪಾಕಿಸ್ತಾನದವರು ಎಂಬುದು ದೃಢಪಟ್ಟಿದೆ. ಅಲ್ಲದೇ ಇದೇ ಮೊದಲ ಬಾರಿಗೆ ಪಾಕಿಸ್ತಾನ ಸರ್ಕಾರವೇ ನೀಡಿರುವ ದಾಖಲೆಗಳು ದೊರೆತಿದ್ದು, ಯಾವುದೇ ಸಂಶಯವಿಲ್ಲದೇ ಉಗ್ರರು ಪಾಕಿಸ್ತಾನಿಗಳು ಎಂಬುದು ಸ್ಪಷ್ಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬಾಂಕೆ ಬಿಹಾರಿ ದೇವಾಲಯ ಕೇಸ್ – ಯುಪಿ ಸರ್ಕಾರಕ್ಕೆ ಸುಪ್ರೀಂ ತೀವ್ರ ತರಾಟೆ

    ಸುಲೇಮಾನ್ ಶಾ ಅಲಿಯಾಸ್ ‘ಫೈಜಲ್ ಜತ್’ ಎ ಗ್ರೇಡ್ ಉಗ್ರನಾಗಿದ್ದು, ದಾಳಿಯ ಮಾಸ್ಟರ್‌ಮೈಂಡ್ ಆಗಿದ್ದಾನೆ. ಈತನ ಆಪ್ತ ಅಬು ಹಮಾಜಿ ಅಲಿಯಾಸ್ ಅಫ್ಘಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದ. ಮತ್ತೋರ್ವ ಯಾಸಿರ್ ಅಲಿಯಾಸ್ ಜಿಬ್ರಾನ್ ಕೂಡ ಎ ಗ್ರೇಡ್ ಕಮಾಂಡರ್ ಆಗಿದ್ದು, ಮೂವರನ್ನು ಕೂಡ ಆಪರೇಷನ್ ಮಹಾದೇವ ಕಾರ್ಯಾಚರಣೆ ವೇಳೆ ಹೊಡೆದುರುಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: Dharmasthala | 13 ವರ್ಷದ ಹಿಂದಿನ ಕೇಸ್ ಬಗ್ಗೆ ಮತ್ತೊಂದು ದೂರು – ದೂರುದಾರ ಹೇಳಿದ್ದೇನು?

  • ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

    ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

    ನವದೆಹಲಿ: ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ (Pakistan) ಸಹಾಯ ಮಾಡಲು ಭಾರತ (India) ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ತಿಳಿಸಿದ್ದಾರೆ.

    ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ (Operation Sindoor) ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್‌ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ

    ಏತನ್ಮಧ್ಯೆ, ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸುವಲ್ಲಿ ಭದ್ರತಾ ಸಂಸ್ಥೆಗಳು ವಿಫಲವಾದ ಬಗ್ಗೆ ಕಾಂಗ್ರೆಸ್ ಸಂಸದರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭಯೋತ್ಪಾದಕ ದಾಳಿಯ ಸ್ಥಳದಲ್ಲಿ ಒಬ್ಬ ಭದ್ರತಾ ಸಿಬ್ಬಂದಿಯೂ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.

    ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಕುರಿತ ವಿಶೇಷ ಚರ್ಚೆ ಎರಡನೇ ದಿನವೂ ಮುಂದುವರಿದಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ಸಂಸದರು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು. ಆಪರೇಷನ್ ಮಹಾದೇವ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರು ಪಹಲ್ಗಾಮ್‌ ದಾಳಿಯಲ್ಲಿ ಪಾಲ್ಗೊಂಡಿದ್ದವರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೃಢಪಡಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ನಡೆಸಿತು. ಪಹಲ್ಗಾಮ್‌ ದಾಳಿಯಲ್ಲಿ ಉಗ್ರರು 26 ಮಂದಿಯನ್ನು ಹತ್ಯೆ ಮಾಡಿದ್ದರು.

  • Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್‌ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ

    Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್‌ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ

    – ಪಹಲ್ಗಾಮ್‌ ದಾಳಿ ನಡೆದಿದ್ದೇಕೆ? ಈಗಲೂ ನನ್ನನ್ನು ಕಾಡುತ್ತಿದೆ; ಸಂಸದೆ ಕಳವಳ

    ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಸೇನೆಯು ದೇಶಕ್ಕಾಗಿ ಹೋರಾಡಿತು. ಆದ್ರೆ ಅದರ ಕ್ರೆಡಿಟ್‌ ಅನ್ನು ಪ್ರಧಾನಿ ಮೋದಿ ಬಯಸುತ್ತಿದ್ದಾರೆ. ನಿಮಗೆ ದೊಡ್ಡ ನಮಸ್ಕಾರ ಅಂತ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ವಾದ್ರಾ ತಿವಿದರು.

    ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Terror Attack) ಮತ್ತು ಆಪರೇಷನ್‌ ಸಿಂಧೂರ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀವು 11 ವರ್ಷದಿಂದ ಅಧಿಕಾರದಲ್ಲಿದ್ದೀರಿ. ನಿನ್ನೆ ಗೌರವ್‌ ಗೊಗೊಯ್‌ ಅವರು ಜವಾಬ್ದಾರಿ ಬಗ್ಗೆ ಮಾತನಾಡುತ್ತಿದ್ದಾಗ ರಾಜನಾಥ್‌ ಸಿಂಗ್‌ ತಲೆಯಾಡಿಸುತ್ತಿದ್ದರು, ಗೃಹ ಸಚಿವರು ನಗುತ್ತಿದ್ದರು. ಮುಂಬೈ ದಾಳಿ ನಡೆದಾಗ ಮನಮೋಹನ್‌ ಸಿಂಗ್‌ ಸರ್ಕಾರ ಏನೂ ಮಾಡಲಿಲ್ಲ ಅಂತ ಹೇಳಿದ್ರು. ಆದ್ರೆ ಅವರಿಗೆ ನೆನಪಿಲ್ಲ ಅನ್ನಿಸುತ್ತೆ, ದಾಳಿ ನಡೆಯುತ್ತಿದ್ದಾಗಲೇ ಮೂವರು ಉಗ್ರರು ಹತರಾದರು, ಬದುಕುಳಿದ ಒಬ್ಬನನ್ನು ಹಿಡಿದು ಗಲ್ಲಿಗೇರಿಸಲಾಯಿತು. ಆ ಸಂದರ್ಭದಲ್ಲಿ ಮಹಾರಾಷ್ಟ್ರದ ಸಿಎಂ, ದೇಶದ ಗೃಹ ಸಚಿವರಾಗಿದ್ದವರು ರಾಜೀನಾಮೆ ಕೊಟ್ಟರು. ಆದ್ರೆ ಉರಿ-ಪುಲ್ವಾಮಾ ದಾಳಿ ರಾಜನಾಥ್‌ ಸಿಂಗ್‌ ಗೃಹ ಸಚಿವರಾಗಿದ್ದರು, ಈಗ ರಕ್ಷಣಾ ಸಚಿವರಾಗಿದ್ದಾರೆ. ಅಮಿತ್‌ ಶಾ ಅವರ ಅಧಿಕಾರವಧಿಯಲ್ಲಿ ಮಣಿಪುರ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಗಲಭೆಗಳು ನಡೆಯುತ್ತಿವೆ. ಅದೇ ಹಾದಿಯಾಗಿ ಪಹಲ್ಗಾಮ್‌ ದಾಳಿಯೂ ನಡೆಯಿತು. ರಾಜೀನಾಮೆ ಕೊಡದೇ ಈಗಲೂ ಗೃಹಸಚಿವರಾಗಿಯೇ ಇದ್ದಾರೆ ಎಂದು ಕುಟುಕಿದರು.

    ಪಹಲ್ಗಾಮ್‌ ದಾಳಿಯನ್ನ ಖಂಡಿಸಲು ಇಡೀ ದೇಶವೇ ಒಗ್ಗಟ್ಟಾಗಿ ನಿಂತಿತು. ದೇಶದ ಮೇಲೆ ದಾಳಿ ನಡೆದರೆ ನಾವೆಲ್ಲರೂ ಸರ್ಕಾರದ ಜೊತೆ ಒಟ್ಟಾಗಿ ನಿಲ್ಲುತ್ತೇವೆ ಅನ್ನೋದನ್ನ ತೋರಿಸಿಕೊಟ್ಟಿತು. ಅದರಂತೆ ಆಪರೇಷನ್‌ ಸಿಂಧೂರಲ್ಲಿ ಸೇನೆಯು ಧೈರ್ಯದಿಂದ ಹೋರಾಡಿತು. ಆದ್ರೆ ಅದರ ಕ್ರೆಡಿಟ್‌ ಮೋದಿ ಬಯಸುತ್ತಿದ್ದಾರೆ ಎಂದು ಅಮಾಧಾನ ಹೊರಹಾಕಿದರು.

    ಈಗಲೂ ನನ್ನನ್ನು ಕಾಡುತ್ತಿದೆ:
    ಸಚಿವರು ಎಲ್ಲಾ ಅಂಶಗಳನ್ನು ನೀಡಿದ್ರು, ಆದ್ರೆ ಪಹಲ್ಗಾಮ್‌ ದಾಳಿ ಹೇಗೆ ಮತ್ತು ಏಕೆ ಆಯಿತು? ಈ ಪ್ರಶ್ನೆ ನನ್ನನ್ನ ಇನ್ನೂ ಕಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.

    ಜನ ಸರ್ಕಾರವನ್ನ ನಂಬಿ ಪಹಲ್ಗಾಮ್‌ಗೆ ಹೋಗಿದ್ದರು. ಆದ್ರೆ ಸರ್ಕಾರ ಏನು ಮಾಡಿತು? ದಾಳಿಗೆ ಯಾರು ಹೊಣೆ? ನಾಗರಿಕರ ಸುರಕ್ಷತೆ ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಗೃಹ ಸಚಿವರ ಜವಾಬ್ದಾರಿಯಲ್ಲವೇ? ಎಂದು ಪ್ರಶ್ನೆಗಳ ಮಳೆ ಸುರಿಸಿದರಲ್ಲೇ ಟಿಆರ್‌ಎಫ್ ಭಯಾನಕ ದಾಳಿಯನ್ನ ಹೇಗೆ ಯೋಜಿಸುತ್ತಿದೆ ಅನ್ನೋದರ ಪರಿಕಲ್ಪನೆ ಸರ್ಕಾರದ ಯಾವುದೇ ಸಂಸ್ಥೆಗೆ ಇಲ್ಲದಂತಾಗಿದೆ. ಇದು ಏಜೆನ್ಸಿಗಳ ವೈಫಲ್ಯ ಅಲ್ಲವೇ? ಖಂಡಿತಾ ಇದು ಭದ್ರತಾ ಸಂಸ್ಥೆಗಳ ಬಹುದೊಡ್ಡ ವೈಫಲ್ಯ ಎಂದು ಆಕ್ರೋಶ ಹೊರಹಾಕಿದರು.

  • ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

    ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

    – ಉಗ್ರರ ಬಳಿ ಸಿಕ್ಕ ರೈಫಲ್‌ ಪಾಕಿಸ್ತಾನದಲ್ಲಿ ತಯಾರಾಗಿದ್ದು

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿ (Pahalgam Terror Attack) ಮಾಡಿದವರು ಪಾಕಿಗಳೇ ಎಂಬುದಕ್ಕೆ ಸರ್ಕಾರದ ಬಳಿ ದೃಢವಾದ ಸಾಕ್ಷ್ಯಗಳಿವೆ ಎಂದಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah), ಪಾಕ್‌ಗೆ ಕ್ಲೀನ್‌ ಚಿಟ್‌ ಕೊಟ್ಟ ಮಾಜಿ ಸಚಿವ ಚಿದರಂಬರಂ ವಿರುದ್ಧ ಹರಿಹಾಯ್ದರು.

    ಆಪರೇಷನ್‌ ಸಿಂಧೂರ (Operation Sindoor) ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಗೃಹ ಸಚಿವರು, ವಿಪಕ್ಷಗಳನ್ನ ತರಾಟೆಗೆ ತೆಗೆದುಕೊಂಡರು. ದಾಳಿಕೋರರು ಪಾಕಿಸ್ತಾನಿಯರೇ ಎಂಬುದಕ್ಕೆ ಸರ್ಕಾದ ಬಳಿ ಸ್ಪಷ್ಟ ಸಾಕ್ಷ್ಯಗಳಿವೆ. ಹತ್ಯೆಯಾದ ಉಗ್ರರ ಬಳಿ ಪಾಕಿಸ್ತಾನದ ವೋಟರ್‌ ಐಡಿ ಪತ್ತೆಯಾಗಿದೆ. ಜೊತೆಗೆ ಉಗ್ರರು ಬಳಸಿದ್ದ ರೈಫಲ್‌, ಕಾಟ್ರಿಡ್ಜ್‌ ಪಾಕಿಸ್ತಾನದಲ್ಲಿ ತಯಾರಾದ ಅಸ್ತ್ರಗಳು. ಸ್ಥಳದಲ್ಲಿ ಸಿಕ್ಕ ಚಾಕ್ಲೆಟ್‌ ಕೂಡ ಪಾಕಿಸ್ತಾನದ್ದೇ, ಇದಕ್ಕಿಂತ ಇನ್ನೇನು ಸಾಕ್ಷ್ಯ ಬೇಕು ಅಂತ ಪ್ರಶ್ನಿಸಿದರು.

    ಭಯೋತ್ಪಾದಕರು ಪಾಕಿಸ್ತಾನದಿಂದಲೇ ಬಂದರು ಅನ್ನೋದಕ್ಕೆ ಸಾಕ್ಷ್ಯ ಏನಿದೆ? ಪಾಕಿಸ್ತಾನವನ್ನು ಉಳಿಸುವುದರಿಂದ ಅವರಿಗೆ ಏನು ಸಿಗುತ್ತೆ? ಅಂತ ಚಿದಂಬರಂ ಕೇಳ್ತಾರೆ. ಇದರರ್ಥ ಪಾಕಿಸ್ತಾನಕ್ಕೆ ಅವರು ಕ್ಲೀನ್‌ ಚಿಟ್‌ ಕೊಡ್ತಿದ್ದಾರೆ ಅಂತ ಟೀಕಿಸಿದರು. ಇದನ್ನೂ ಓದಿ: ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

    ವಿಮಾನದಲ್ಲಿ ಉಗ್ರರ ರೈಫಲ್ ಚಂಡೀಗಢಕ್ಕೆ ಕಳಿಸಿ FSL ಟೆಸ್ಟ್
    ಸಿಂಧೂರ ಚರ್ಚೆ ವೇಳೆ ಅಬ್ಬರಿಸಿ ಬೊಬ್ಬರಿಸಿದ ಅಮಿತ್‌ ಶಾ, ಉಗ್ರರು ಪಾಕಿಸ್ತಾನಕ್ಕೆ ವಾಪಸ್ ಆಗಲು ನಾವು ಅವಕಾಶ ಕೊಡಲಿಲ್ಲ. ಪಾತಕಿಗಳನ್ನ ಇಲ್ಲಿಯೇ ಕೊಲ್ಲಲಾಗಿದೆ. ಅಲ್ಲದೇ ಪಹಲ್ಗಾಮ್‌ನಲ್ಲಿ ಬಳಸಿದ್ದ ರೈಫಲ್‌ಗಳು, ಹತ್ಯೆಯಾದ ಉಗ್ರನ ಬಳಿ ಸಿಕ್ಕಿದ್ದ ರೈಫಲ್‌ ಒಂದೇ ಅಂತ ಖಚಿತಪಡಿಸಿದ್ದೇವೆ. ನಿನ್ನೆಯೇ ಚಂಡೀಗಢಕ್ಕೆ ವಿಮಾನದಲ್ಲಿ ರೈಫಲ್ ಕಳಿಸಿ ದೃಢಪಡಿಸಿದ್ದೇವೆ. ಪಹಲ್ಗಾಮ್‌ ದಾಳಿಯಲ್ಲಿ ಸಿಕ್ಕಿದ ಗುಂಡು ಮತ್ತು ನಿನ್ನೆ ಚಂಡೀಗಢ ಎಫ್‌ಎಸ್‌ಎಲ್‌ನಲ್ಲಿ ರೈಫಲ್ ಬಳಸಿ ಅದರಿಂದಲೂ ಗುಂಡು ಹಾರಿಸಿ ಖಚಿತಪಡಿಸಿದ್ದೇವೆ. ಈ ಮೂರೂ ರೈಫಲ್‌ಗಳನ್ನ ಬಳಸಿಯೇ ಪಹಲ್ಗಾಮ್‌ನಲ್ಲಿ ದಾಳಿ ಮಾಡಿರೋದು ಖಚಿತವಾಗಿದೆ. ಸತ್ತ ಇಬ್ಬರು ಉಗ್ರರ ಬಳಿ ಪಾಕಿಸ್ತಾನದ ವೋಟರ್ ಐಡಿ ಇತ್ತು. ಅಲ್ಲದೇ ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದೇ ಎಂದು ಇಂಚಿಂಚೂ ಮಾಹಿತಿಯನ್ನ ವಿವರಿಸಿದ್ರು. ಇದನ್ನೂ ಓದಿ: ರಕ್ತ ಹರಿಯುವ ಕಡೆ ಮಾತುಕತೆ ಪ್ರಸ್ತಾಪವೇ ಬರಲ್ಲ – ಆಪರೇಷನ್ ಸಿಂಧೂರ ಚರ್ಚೆಯಲ್ಲಿ ರಾಜನಾಥ್‌ ಸಿಂಗ್‌ ಘರ್ಜನೆ

    ಮೂವರು ಉಗ್ರರ ಹತ್ಯೆ:
    ಇದಕ್ಕೂ ಮುನ್ನ ಮಾತನಾಡಿದ ಸಚಿವರು, ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದ ಉಗ್ರ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಲೋಕಸಭೆಗೆ ತಿಳಿಸಿದರು. ʻಆಪರೇಷನ್‌ ಮಹಾದೇವ್‌ʼ ಕಾರ್ಯಾಚರಣೆ ವೇಳೆ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಉಗ್ರ ಹಾಶಿಮ್‌ ಮೂಸಾ (Hashim Musa) ಮತ್ತು ಇತರ ಇಬ್ಬರು ಉಗ್ರರನ್ನ ಕೊಲ್ಲಲಾಗಿದೆ. ಉಳಿದಿಬ್ಬರು ಕಳೆದ ವರ್ಷ ಸೋನಾಮಾರ್ಗ್ ಸುರಂಗ ದಾಳಿಯಲ್ಲಿ ಭಾಗಿಯಾಗಿದ್ದ ಜಿಬ್ರಾನ್ ಮತ್ತು ಹಮ್ಜಾ ಅಫ್ಘಾನಿ ಎಂದು ಗುರುತಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್

    ಸೋಮವಾರ ನಡೆದ ʻಆಪರೇಷನ್‌ ಮಹಾದೇವ್‌ʼ (Operation Mahadev) ಬಗ್ಗೆ ವಿವರ ನೀಡಿದ ಶಾ, ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಸುಲೇಮಾನ್‌ ಮೂಸಾ, ಜಿಬ್ರಾನ್‌, ಹಮ್ಜಾ ಅಫ್ಘಾನಿ ಉಗ್ರರನ್ನ ಹತ್ಯೆಗೈಯಲಾಗಿದೆ. ಸುಲೇಮಾನ್ ಲಷ್ಕರ್-ಎ-ತೈಬಾ (LeT) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನಾಗಿದ್ದ. ಅಲ್ಲದೇ ಈ ಮೂವರನ್ನೂ ʻAʼ ಗ್ರೇಡ್‌ನ ಉಗ್ರರು ಎಂದು ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ರಕ್ತ ಹರಿಯುವ ಕಡೆ ಮಾತುಕತೆ ಪ್ರಸ್ತಾಪವೇ ಬರಲ್ಲ – ಆಪರೇಷನ್ ಸಿಂಧೂರ ಚರ್ಚೆಯಲ್ಲಿ ರಾಜನಾಥ್‌ ಸಿಂಗ್‌ ಘರ್ಜನೆ

  • ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

    ಪಹಲ್ಗಾಮ್‌ ಪಾತಕಿಗಳನ್ನ ಕೊಂದಿದ್ದೇವೆ – ʻಸಿಂಧೂರʼ ಚರ್ಚೆ ವೇಳೆ ಅಬ್ಬರಿಸಿದ ಅಮಿತ್‌ ಶಾ

    – ಪಹಲ್ಗಾಮ್‌ ದಾಳಿಯಲ್ಲಿ ಬಳಸಿದ್ದು, ಉಗ್ರನ ಬಳಿ ಸಿಕ್ಕ ರೈಫಲ್‌ ಒಂದೇ
    – ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್‌ ಕೂಡ ಪಾಕಿಸ್ತಾನದ್ದು; ಗೃಹ ಸಚಿವ ಇಂಚಿಂಚೂ ಮಾಹಿತಿ

    ನವದೆಹಲಿ: ಪಹಲ್ಗಾಮ್‌ ಭಯೋತ್ಪಾದಕ ದಾಳಿಯಲ್ಲಿ (Pahalgam Terror Attack) ಭಾಗಿಯಾಗಿದ್ದ ಉಗ್ರ ಹಾಶಿಮ್‌ ಮೂಸಾ ಸೇರಿ ಮೂವರು ಉಗ್ರರನ್ನ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ಲೋಕಸಭೆಗೆ ತಿಳಿಸಿದರು.

    ಇಂದು 2 ಆಪರೇಷನ್‌ ಸಿಂಧೂರ (Operation Sindoor) ಚರ್ಚೆ ಮುಂದುವರಿಸಿದ ಅಮಿತ್‌ ಶಾ ಅವರು, ವಿಪಕ್ಷಗಳ ವಿರುದ್ಧ ಅಬ್ಬರಿಸಿ ಬೊಬ್ಬರಿದರು. ʻಆಪರೇಷನ್‌ ಮಹದೇವ್‌ʼ ಕಾರ್ಯಾಚರಣೆ ವೇಳೆ ಶ್ರೀನಗರದ ಡಚಿಗಮ್ ಎನ್‌ಕೌಂಟರ್‌ನಲ್ಲಿ ಉಗ್ರ ಹಾಶಿಮ್‌ ಮೂಸಾ (Hashim Musa) ಮತ್ತು ಇತರ ಇಬ್ಬರು ಉಗ್ರರನ್ನ ಕೊಲ್ಲಲಾಗಿದೆ. ಉಳಿದಿಬ್ಬರು ಕಳೆದ ವರ್ಷ ಸೋನಾಮಾರ್ಗ್ ಸುರಂಗ ದಾಳಿಯಲ್ಲಿ ಭಾಗಿಯಾಗಿದ್ದ ಜಿಬ್ರಾನ್ ಮತ್ತು ಹಮ್ಜಾ ಅಫ್ಘಾನಿ ಎಂದು ಗುರುತಿಸಲಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್

    .

    ಸೋಮವಾರ ನಡೆದ ʻಆಪರೇಷನ್‌ ಮಹಾದೇವ್‌ʼ ಬಗ್ಗೆ ವಿವರ ನೀಡಿದ ಶಾ, ಭಾರತೀಯ ಸೇನೆ, ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ಮತ್ತು ಜಮ್ಮು ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯಲಾಗಿದೆ. ಸುಲೇಮಾನ್‌ ಮೂಸಾ, ಜಿಬ್ರಾನ್‌, ಹಮ್ಜಾ ಅಫ್ಘಾನಿ ಉಗ್ರರನ್ನ ಹತ್ಯೆಗೈಯಲಾಗಿದೆ. ಸುಲೇಮಾನ್ ಲಷ್ಕರ್-ಎ-ತೈಬಾ (LeT) ಸಂಘಟನೆಯೊಂದಿಗೆ ಸಂಪರ್ಕ ಹೊಂದಿದ್ದ ಉಗ್ರನಾಗಿದ್ದ. ಅಲ್ಲದೇ ಈ ಮೂವರನ್ನೂ ʻAʼ ಗ್ರೇಡ್‌ನ ಉಗ್ರರು ಎಂದು ಪಟ್ಟಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ನಾವೆಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ – ಸಂಸತ್‌ನಲ್ಲಿ ರಾಜನಾಥ್‌ ಸಿಂಗ್‌ ಬೇಸರ

    ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದು:
    ಸಿಂಧೂರ ಚರ್ಚೆ ವೇಳೆ ಅಬ್ಬರಿಸಿ ಬೊಬ್ಬರಿಸಿದ ಅಮಿತ್‌ ಶಾ, ಉಗ್ರರು ಪಾಕಿಸ್ತಾನಕ್ಕೆ ವಾಪಸ್ ಆಗಲು ನಾವು ಅವಕಾಶ ಕೊಡಲಿಲ್ಲ. ಪಾತಕಿಗಳನ್ನ ಇಲ್ಲಿಯೇ ಕೊಲ್ಲಲಾಗಿದೆ. ಅಲ್ಲದೇ ಪಹಲ್ಗಾಮ್‌ನಲ್ಲಿ ಬಳಸಿದ್ದ ರೈಫಲ್‌ಗಳು, ಹತ್ಯೆಯಾದ ಉಗ್ರನ ಬಳಿ ಸಿಕ್ಕಿದ್ದ ರೈಫಲ್‌ ಒಂದೇ ಅಂತ ಖಚಿತಪಡಿಸಿದ್ದೇವೆ. ನಿನ್ನೆಯೇ ಚಂಡೀಗಢಕ್ಕೆ ವಿಮಾನದಲ್ಲಿ ರೈಫಲ್ ಕಳಿಸಿ ದೃಢಪಡಿಸಿದ್ದೇವೆ. ಪಹಲ್ಗಾಮ್‌ ದಾಳಿಯಲ್ಲಿ ಸಿಕ್ಕಿದ ಗುಂಡು ಮತ್ತು ನಿನ್ನೆ ಚಂಡೀಗಢ ಎಫ್‌ಎಸ್‌ಎಲ್‌ನಲ್ಲಿ ರೈಫಲ್ ಬಳಸಿ ಅದರಿಂದಲೂ ಗುಂಡು ಹಾರಿಸಿ ಖಚಿತಪಡಿಸಿದ್ದೇವೆ. ಈ ಮೂರೂ ರೈಫಲ್‌ಗಳನ್ನ ಬಳಸಿಯೇ ಪಹಲ್ಗಾಮ್‌ನಲ್ಲಿ ದಾಳಿ ಮಾಡಿರೋದು ಖಚಿತವಾಗಿದೆ. ಸತ್ತ ಇಬ್ಬರು ಉಗ್ರರ ಬಳಿ ಪಾಕಿಸ್ತಾನದ ವೋಟರ್ ಐಡಿ ಇತ್ತು. ಅಲ್ಲದೇ ಸ್ಥಳದಲ್ಲಿ ಸಿಕ್ಕಿದ ಚಾಕ್ಲೆಟ್ ಪಾಕಿಸ್ತಾನದ್ದೇ ಎಂದು ಇಂಚಿಂಚೂ ಮಾಹಿತಿಯನ್ನ ವಿವರಿಸಿದ್ರು. ಇದನ್ನೂ ಓದಿ: ರಕ್ತ ಹರಿಯುವ ಕಡೆ ಮಾತುಕತೆ ಪ್ರಸ್ತಾಪವೇ ಬರಲ್ಲ – ಆಪರೇಷನ್ ಸಿಂಧೂರ ಚರ್ಚೆಯಲ್ಲಿ ರಾಜನಾಥ್‌ ಸಿಂಗ್‌ ಘರ್ಜನೆ

  • ನಾವೆಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ – ಸಂಸತ್‌ನಲ್ಲಿ ರಾಜನಾಥ್‌ ಸಿಂಗ್‌ ಬೇಸರ

    ನಾವೆಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ – ಸಂಸತ್‌ನಲ್ಲಿ ರಾಜನಾಥ್‌ ಸಿಂಗ್‌ ಬೇಸರ

    ನವದೆಹಲಿ: ವಿಪಕ್ಷಗಳು ನಮ್ಮ ದೇಶದ ಎಷ್ಟು ವಿಮಾನಗಳು ಬಿದ್ದಿವೆ ಅಂತಲೇ ಕೇಳುತ್ತಿವೆ. ಆದ್ರೆ ನಾವು ಎಷ್ಟು ಪಾಕಿಸ್ತಾನಿ ವಿಮಾನಗಳನ್ನ ಹೊಡೆದುರುಳಿಸಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ. ವಿಪಕ್ಷಗಳ ಪ್ರಶ್ನೆಗಳು ಜನರ ಪ್ರಶ್ನೆ ಎಂದು ಅನ್ನಿಸುತ್ತಿಲ್ಲ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಆಪರೇಷನ್‌ ಸಿಂಧೂರ Operation Sindoor) ಚರ್ಚೆ ವೇಳೆ ಬೇರ ಹೊರಹಾಕಿದರು.

    ಲೋಕಸಭೆಯಲ್ಲಿ (Lok Sabha) ಈ ಚರ್ಚೆಗೆ ನಾಂದಿ ಹಾಡಿದ ಸಚಿವರು ವಿಪಕ್ಷಗಳ ವಿರುದ್ಧ ಹರಿಹಾಯ್ದರು. ಸಂಸತ್‌ನಲ್ಲಿ ಸಾರ್ವಜನಿಕರ ಸಮಸ್ಯೆಗಳಿಗೆ ಸಂಬಂಧಿಸಿದ ಮುಖ್ಯ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳುವುದು ವಿರೋಧ ಪಕ್ಷಗಳ ಕೆಲಸ. ವಿಪಕ್ಷಗಳು ನಮ್ಮ ದೇಶದ ಎಷ್ಟು ವಿಮಾನಗಳು ಬಿದ್ದಿವೆ ಅಂತಲೇ ಕೇಳುತ್ತಿವೆ. ನಾವು ಎಷ್ಟು ಪಾಕಿಸ್ತಾನಿ ವಿಮಾನಗಳನ್ನ (Pakistani Planes) ಹೊಡೆದುರುಳಿಸಿದ್ದೇವೆ ಅಂತ ಯಾರೊಬ್ಬರೂ ಕೇಳಲಿಲ್ಲ. ವಿಪಕ್ಷಗಳ ಪ್ರಶ್ನೆಗಳು ಜನರ ಪ್ರಶ್ನೆ ಎಂದು ಅನ್ನಿಸುತ್ತಿಲ್ಲ ಎಂದು ಹರಿಹಾಯ್ದರು.

    ವಿಪಕ್ಷಗಳು ನಮ್ಮ ಸೈನಿಕರಲ್ಲಿ ಯಾರಿಗಾದರೂ ಹಾನಿಯಾಗಿದೆಯೇ ಅಂತ ಕೇಳಿ ಅದಕ್ಕೆ ಉತ್ತರ ಇಲ್ಲ. ಆಪರೇಷನ್ ಸಿಂಧೂರ್ ಕಾರ್ಯಚರಣೆ ಯಶಸ್ವಿಯಾಗಿದೆ ಎಂದು ಕೇಳಿ.. ಅದಕ್ಕೆ ಉತ್ತರ ಹೌದು. ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳ ಸಿಂಧೂರ ಅಳಿಸಿದ ಉಗ್ರರನ್ನು ನಮ್ಮ ಸಶಸ್ತ್ರ ಪಡೆಗಳು ನಿರ್ಮೂಲನೆ ಮಾಡಿದೆಯೇ? ಉತ್ತರ: ಹೌದು ಎದೇ ಆಗಿದೆ. ನೀವು ಪ್ರಶ್ನೆ ಕೇಳಲು ಬಯಸಿದ್ರೆ ಇದನ್ನ ಕೇಳಿ ಎಂದು ಕುಟುಕಿದರು.

    ನಮ್ಮದು ಪ್ರತೀಕಾರದ ಪ್ರವಾಹ
    ಲೋಕಸಭೆಯಲ್ಲಿ ಆಪರೇಷನ್‌ ಸಿಂಧೂರ ಕುರಿತು ಭಾಷಣ ಮಾಡಿದ ರಾಜನಾಥ್‌ ಸಿಂಗ್‌, ಈ ಸೇನಾ ಕಾರ್ಯಾಚರಣೆ ಭಾರತದ ಸೇನಾ ಸಾಮರ್ಥ್ಯಕ್ಕೆ ಉದಾಹರಣೆ ಮಾತ್ರವಲ್ಲದೇ, ಭಯೋತ್ಪಾದನೆ ವಿರುದ್ಧ ಭಾರತದ ಶೂನ್ಯ ಸಹಿಷ್ಣುತೆಯ ಪ್ರತೀಕ ಎಂದು ಬಣ್ಣಿಸಿದರು. ಪಾಕಿಸ್ತಾನದ ದಾಳಿ ವೇಳೆ ಭಾರತದ್ದು ಆತ್ಮರಕ್ಷಣೆಯ ಪ್ರತಿದಾಳಿಯಾಗಿತ್ತು. ಭಾರತ ಯಾರನ್ನೂ ಉದ್ದೇಶ ಪೂರ್ವಕವಾಗಿ ಟಾರ್ಗೆಟ್‌ ಮಾಡಿಲ್ಲ. ಆದ್ರೆ ಪಾಕಿಸ್ತಾನ ನಮ್ಮ ವಿಮಾನ ನಿಲ್ದಾಣ, ಸೇನಾ ನೆಲೆಗಳನ್ನು ಗುರಿಯಾಗಿಸಿ ದಾಳಿ ನಡೆಸಿತ್ತು. ಈ ಎಲ್ಲ ದಾಳಿಗಳನ್ನು ನಮ್ಮ ಸೇನೆ ವಿಫಲಗೊಳಿಸಿದೆ. ಒಂದೇ ಒಂದು ನಿಗದಿತ ಸ್ಥಳದಲ್ಲಿ ಪಾಕಿಸ್ತಾನಕ್ಕೆ ದಾಳಿ ಮಾಡಲು ಸಾಧ್ಯವಾಗಿಲ್ಲ ಎಂದು ಸಂಸತ್‌ಗೆ ತಿಳಿಸಿದರು.

    ಪಾಕ್‌ ಏರ್‌ಬೇಸ್‌ಗಳೇ ಧ್ವಂಸ
    ಪಾಕಿಸ್ತಾನದ ದಾಳಿಗೆ ʻಆಪರೇಷನ್ ಸಿಂಧೂರʼ ಹೆಸರಿನಲ್ಲಿ ಭಾರತ ಪ್ರತಿ ದಾಳಿ ನಡೆಸಿತು. ಪಾಕಿಸ್ತಾನದ ವಿಮಾನ ನಿಲ್ದಾಣ, ಸೇನಾ ನೆಲೆ, ಏರ್‌ ಡಿಫೆನ್ಸ್ ಸಿಸ್ಟಮ್ (ರಕ್ಷಣಾ ವ್ಯವಸ್ಥೆ) ಗಳನ್ನ ಟಾರ್ಗೆಟ್‌ ಮಾಡಿ ಧ್ವಂಸಗೊಳಿಸಿತು. ಮೂರು ಸೇನಾಪಡೆಗಳನ್ನ ಬಳಸಿಕೊಂಡು ಪಾಕಿಸ್ತಾನದ ಪ್ರತಿಯೊಂದು ದಾಳಿಗೂ ತಕ್ಕ ಉತ್ತರ ನೀಡಲಾಯಿತು ಎಂದು ವಿವರಿಸುತ್ತಿದ್ದರು. ಈ ವೇಳೆ ವಿಕ್ಷಗಳಿಂದ ಗದ್ದಲ ಶುರುವಾಯಿತು, ಭಾಷಣಕ್ಕೆ ಅಡ್ಡಿಪಡಿಸುವ ಪ್ರಯತ್ನವೂ ನಡೆಯಿತು. ಆದಾಗ್ಯೂ ರಾಜನಾಥ್‌ ಸಿಂಗ್‌ ಮಾತು ಮುಂದುವರಿಸಿದ್ರು.

    ಮತ್ತೆ ಕೆಣಕಿದ್ರೆ ಸುಮ್ಮನಿರಲ್ಲ
    ಗಡಿ ದಾಟುವುದು, ಅಲ್ಲಿನ ಪ್ರದೇಶವನ್ನ ವಶಕ್ಕೆ ಪಡೆಯುವುದು ನಮ್ಮ ಉದ್ದೇಶವಾಗಿರಲಿಲ್ಲ. ಪಹಲ್ಗಾಮ್‌ ದಾಳಿಗೆ ಪ್ರತಿಕಾರ, ಭಯೋತ್ಪಾದಕ ನೆಲೆಗಳನ್ನ ಧ್ವಂಸ ಮಾಡುವುದು, ಫ್ರಾಕ್ಸಿ ವಾರ್ ಮಾಡುತ್ತಿರುವ ಪಾಕಿಸ್ತಾನಕ್ಕೆ ಬುದ್ಧಿ ಕಲಿಸುವುದು ನಮ್ಮ ಉದ್ದೇಶವಾಗಿತ್ತು. ಇದರಲ್ಲಿ ಪಾಕಿಸ್ತಾನ ಸೋಲು ಒಪ್ಪಿಕೊಂಡಿತು. ದಾಳಿಯನ್ನ ನಿಲ್ಲಿಸುವಂತೆ ಮನವಿ ಮಾಡಿಕೊಂಡಿತು. ಪಾಕಿಸ್ತಾನದ ಡಿಜಿಎಂಓ ಮನವಿ ಬಳಿಕವೇ ಕದನ ವಿರಾಮ ಮಾಡಿಕೊಳ್ಳಲಾಯಿತು. ಆದ್ರೆ ಆಪರೇಷನ್‌ ಸಿಂಧೂರ ಇನ್ನೂ ಮುಗಿದಿಲ್ಲ. ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ. ಪಾಕ್‌ ಪ್ರಚೋದನೆ ನೀಡಿದ್ರೆ ಮತ್ತೆ ಆಪರೇಷನ್‌ ಶುರುವಾಗಲಿದೆ. ಆಪರೇಷನ್‌ ಸಿಂಧೂರದಿಂದ ನಮ್ಮ ಸೈನಿಕರ ಮನೋಬಲ ಹೆಚ್ಚಾಗಿದೆ ಎಂದು ಇಂಚಿಂಚೂ ಮಾಹಿತಿ ನೀಡಿದರು.

    ಪಹಲ್ಗಾಮ್‌ ದಾಳಿಯ ಇಂಚಿಂಚು ವಿವರ
    ಇದರೊಂದಿಗೆ ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕ ಗುಂಪೊಂದು ಅಮಾಯಕ ಪ್ರವಾಸಿಗರ ಮೇಲೆ ಭೀಕರ ದಾಳಿ ನಡೆಸಿತು. ಈ ದಾಳಿಯಲ್ಲಿ ಓರ್ವ ವಿದೇಶಿ ಪ್ರಜೆಯೂ ಸೇರಿದಂತೆ ಒಟ್ಟು 26 ಭಾರತೀಯ ನಾಗರಿಕರು ಸಾವನ್ನಪ್ಪಿದ್ದರು. ಭಯೋತ್ಪಾದಕರು ಪ್ರವಾಸಿಗರ ಧರ್ಮ ಕೇಳಿ ಅವರ ಮೇಲೆ ಗುಂಡು ಹಾರಿಸಿದ್ದರು. ಈ ಘಟನೆ ದೇಶಾದ್ಯಂತ ಆಕ್ರೋಶದ ಅಲೆಯನ್ನೇ ಸೃಷ್ಟಿಸಿತ್ತು. ಈ ದಾಳಿಯನ್ನು ಲಷ್ಕರ್-ಎ-ತೋಯ್ಬಾ ಸಂಘಟನೆಯ ಅಂಗಸಂಸ್ಥೆ ದಿ ರೆಸಿಸ್ಟನ್ಸ್‌ ಫ್ರಂಟ್‌ (ಟಿಆರ್‌ಎಫ್‌) ನಡೆಸಿತ್ತು ಎಂದು ರಾಜನಾಥ್‌ ಸಿಂಗ್‌, ಆಪರೇಷನ್‌ ಸಿಂಧೂರ ಸೇನಾ ಕಾರ್ಯಾಚರಣೆ ಆರಂಭಿಸಲು ಕಾರಣವಾದ ಘಟನೆಗಳನ್ನು ವಿವರಿಸಿದರು.