Tag: ಪಹಲ್ಗಾಮ್ ದಾಳಿ

  • ಸೌದಿಯಿಂದ ಬರೋವಾಗ ಪಾಕ್ ವಾಯುಸೀಮೆ ಬಳಸದೇ ದೆಹಲಿಗೆ ಬಂದ ಮೋದಿ

    ಸೌದಿಯಿಂದ ಬರೋವಾಗ ಪಾಕ್ ವಾಯುಸೀಮೆ ಬಳಸದೇ ದೆಹಲಿಗೆ ಬಂದ ಮೋದಿ

    ನವದೆಹಲಿ: ಸೌದಿಯಿಂದ ಬರುವಾಗ ಪ್ರಧಾನಿ ನರೇಂದ್ರ ಮೋದಿ ಅವರ ಏರ್‌ ಇಂಡಿಯಾ ಒನ್‌ ವಿಮಾನ ಪಾಕ್ ವಾಯುಸೀಮೆ ಬಳಸದೇ ಭಾರತದ ವಾಯುಸೀಮೆ ಬಳಸಿ ದೆಹಲಿಯಲ್ಲಿ ಲ್ಯಾಂಡ್‌ ಆಗಿದೆ.

    ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಹಿಂದೂಗಳ ನರಮೇಧ ಕೃತ್ಯದ ಬಳಿಕ ಸೌದಿ ಅರೇಬಿಯಾ ಪ್ರವಾಸವನ್ನು ಮೊಟಕುಗೊಳಿಸಿದ ಪ್ರಧಾನಿ ಮೋದಿ ಇಂದು ಮುಂಜಾನೆ ದೆಹಲಿಗೆ ಆಗಮಿಸಿ ವಿಮಾನ ನಿಲ್ದಾಣದಲ್ಲೇ ಸಭೆ ನಡೆಸಿದ್ದರು. ಇದನ್ನೂ ಓದಿ: ಬಾಲಾಕೋಟ್‌ ಏರ್‌ಸ್ಟ್ರೈಕ್‌ನಂತೆ ದಾಳಿ ಭೀತಿ – ಗಡಿಗೆ ವಿಮಾನಗಳನ್ನು ಸಾಗಿಸುತ್ತಿದೆ ಪಾಕ್‌ 

    ಸೌದಿ ಅರೇಬಿಯಾಕ್ಕೆ ಹೊರಡುವಾಗ ಪಾಕಿಸ್ತಾನ ವಾಯು ಸೀಮೆ ಬಳಸಿದ್ದ ಮೋದಿ ಪಹಲ್ಗಾಮ್‌ ದಾಳಿಯ ನಂತರ ಭಾರತಕ್ಕೆ ಮರಳುವಾಗ ಮಾರ್ಗ ಬದಲಾಯಿಸಿರುವುದು ಟ್ರಾವೆಲ್‌ ಹಿಸ್ಟರಿಯಿಂದ ಕಂಡುಬಂದಿದೆ. ಇದನ್ನೂ ಓದಿ: ಗುಡ್ಡಕುಸಿತವಾಗಿದ್ದಕ್ಕೆ ಬಚಾವ್ – ಪಹಲ್ಗಾಮ್‌ಗೆ ಹೋಗಬೇಕಿದ್ದ 13 ಕನ್ನಡಿಗರು ಅದೃಷ್ಟವಶಾತ್ ಪಾರು

    ಸೌದಿಗೆ ಪ್ರವಾಸ ಹೊರಡುವಾಗ ಪ್ರಧಾನಿ ಮೋದಿ ಅವರ IAF ಬೋಯಿಂಗ್ 777-300 (K7067) ವಿಮಾನವು ಪಾಕಿಸ್ತಾನ ವಾಯುಪ್ರದೇಶದಿಂದ ಒಮನ್‌ ತಲುಪಿದ್ದು, ಅಲ್ಲಿಂದ ಜೆಡ್ಡಾಗೆ ತಲುಪಿತ್ತು. ಆದ್ರೆ ಭಯೋತ್ಪಾದಕ ದಾಳಿಯ ಬಳಿಕ ತುರ್ತಾಗಿ ದೆಹಲಿಗೆ ಹಿಂತಿರುಗುವಾಗ ಪಾಕಿಸ್ತಾನ ವಾಯುಪ್ರದೇಶ ಬಳಸದೇ ಭಾರತಕ್ಕೆ ಮರಳಿತು. ಇದಕ್ಕೆ ಸಂಬಂಧಿಸಿದ ಮ್ಯಾಪ್‌ ಚಿತ್ರಗಳು ಲಭ್ಯವಾಗಿದೆ.

    ದೆಹಲಿಗೆ ಮರಳಿದ ಬಳಿಕ ವಿಮಾನ ನಿಲ್ದಾಣದಲ್ಲೇ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ವಿದೇಶಾಂಗ ಸಚಿವ ಎಸ್. ಜೈಶಂಕರ್ ಮತ್ತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಅವರೊಂದಿಗೆ ತುರ್ತು ಸಭೆ ನಡೆಸಿದ್ದಾರೆ. ಅಲ್ಲದೇ ಇಂದು ಸಂಜೆ 6 ಗಂಟೆಗೆ ಭದ್ರತೆ ಕುರಿತಂತೆ ಸಂಪುಟ ಸಭೆ ನಡೆಯಲಿದೆ.  ಇದನ್ನೂ ಓದಿ: Pahalgam Terror Attack | ಮೂವರು ಶಂಕಿತ ಉಗ್ರರ ರೇಖಾಚಿತ್ರ ಬಿಡುಗಡೆ

    ಶಾಗೆ ಸೂಚನೆ ನೀಡಿದ್ದ ಮೋದಿ:
    ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಯ ವಿಷಯ ತಿಳಿಯುತ್ತಿದ್ದಂತೆ ಸೌದಿ ಅರೇಬಿಯಾದಿಂದಲೇ ಕೇಂದ್ರ ಗೃಹಸಚಿವ ಅಮಿತ್‌ ಶಾ ಅವರಿಗೆ ಕರೆ ಮಾಡಿದ್ದ ಮೋದಿ ಸ್ಥಳಕ್ಕೆ ಭೇಟಿ ನೀಡುವಂತೆ ಸೂಚನೆ ನೀಡಿದ್ದರು. ಅದರಂತೆ ಮಂಗಳವಾರ ರಾತ್ರಿಯೇ ಶ್ರೀನಗರಕ್ಕೆ ಭೇಟಿ ನೀಡಿ ಉನ್ನತ ಅಧಿಕಾರಿಗಳೊಂದಿಗೆ ಅಮಿತ್‌ ಶಾ ಸಭೆ ನಡೆಸಿದ್ದರು. ಅಲ್ಲದೇ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಮೋದಿ, ಈ ಹತ್ಯಾಕಾಂಡದ ಹಿಂದೆ ಯಾರೇ ಇದ್ದರೂ ಬಿಡೋದಿಲ್ಲ ಎಂದು ಶಪಥ ಮಾಡಿದ್ದರು. ಇದನ್ನೂ ಓದಿ: Pahalgam Terror Attack | ಹಿಂದೂಗಳೇ ಭಯೋತ್ಪಾದಕರ ಟಾರ್ಗೆಟ್!

  • ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ

    ಪುತ್ರನಿಗೆ ದ್ವಿತೀಯ ಪಿಯುಸಿಯಲ್ಲಿ 97% ಅಂಕ – ಸಂಭ್ರಮಾಚರಣೆಗೆ ಕಾಶ್ಮೀರಕ್ಕೆ ತೆರಳಿದ್ದ ಮಂಜುನಾಥ್ ಕುಟುಂಬ

    ಶಿವಮೊಗ್ಗ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ (Pahalgam Terror Attack) ಶಿವಮೊಗ್ಗದ (Shivamogga) ಮಂಜುನಾಥ್ ಮೃತಪಟ್ಟಿದ್ದು, ಮನೆಯಲ್ಲಿ ನೀರವ ಮೌನ ಆವರಿಸಿದೆ. ಮಂಜುನಾಥ್ ಪುತ್ರ ದ್ವಿತೀಯ ಪಿಯುಸಿಯಲ್ಲಿ 97% ಅಂಕ ಪಡೆದಿದ್ದ ಹಿನ್ನೆಲೆ ಸಂಭ್ರಮಾಚರಣೆಗೆಂದು ಮಂಜುನಾಥ್ ತಮ್ಮ ಪತ್ನಿ, ಮಗನ ಜೊತೆ ಕಾಶ್ಮೀರಕ್ಕೆ ತೆರಳಿದ್ದ ವೇಳೆ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ.

    ಮೃತ ಮಂಜುನಾಥ್ ತಾಯಿ, ಪತ್ನಿ, ಪುತ್ರನೊಂದಿಗೆ ನಗರದ ವಿಜಯನಗರ ಬಡಾವಣೆಯಲ್ಲಿ ವಾಸವಾಗಿದ್ದರು. ಕಳೆದ ಐದು ದಿನಗಳ ಹಿಂದೆ ಮಂಜುನಾಥ್ ತನ್ನ ಕುಟುಂಬದೊಂದಿಗೆ ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದರು. ಮೊದಲು ರಾಜಸ್ಥಾನ ಪ್ರವಾಸಕ್ಕೆ ಯೋಜಿಸಿದ್ದ ಮಂಜುನಾಥ್ ಬಳಿಕ ಪ್ಲ್ಯಾನ್ ಬದಲಾಯಿಸಿ ಕಾಶ್ಮೀರಕ್ಕೆ ತೆರಳಿದ್ದರು. ಇದನ್ನೂ ಓದಿ: ಕನ್ನಡಿಗರ ರಕ್ಷಣೆಗಾಗಿ ಜಮ್ಮುವಿನತ್ತ ಹೊರಟ ಸಚಿವ ಸಂತೋಷ ಲಾಡ್

    ದೆಹಲಿಯ ಇಂಡಿಯನ್ ಟೂರಿಸ್ಟ್ ಸಂಸ್ಥೆಯಿಂದ ಟೂರ್ ಆಯೋಜನೆಗೊಂಡಿತ್ತು. ಮಂಜುನಾಥ್ ಆನ್‌ಲೈನ್‌ನಲ್ಲಿ ಟೂರ್ ಆಯೋಜಿಸಿಕೊಂಡಿದ್ದರು. ದುರಾದೃಷ್ಟವಶಾತ್ ಮಂಜುನಾಥ್ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರಿಂದ ಹತ್ಯೆಯಾಗಿದ್ದಾರೆ. ಉಗ್ರರು ಮಂಜುನಾಥ್ ಅವರ ಧರ್ಮ ಕೇಳಿ ಹತ್ಯೆ ಮಾಡಿದ್ದಾರೆ. ಜೊತೆಗಿದ್ದ ಪತ್ನಿ ಪಲ್ಲವಿ ಹಾಗೂ ಪುತ್ರನನ್ನು ಮೂವರು ಭಯೋತ್ಪಾದಕರು ಬಿಟ್ಟು ಕಳುಹಿಸಿದ್ದು, ‘ಜಾವೋ ಮೋದಿ ಕೋ ಬೋಲೋ’ ಎಂದು  ಹೇಳಿ ಸ್ಥಳದಿಂದ ತೆರಳಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಸೌದಿ ಅರೇಬಿಯಾ ಪ್ರವಾಸ ಮೊಟಕುಗೊಳಿಸಿದ ಮೋದಿ

    ಸದ್ಯ ಮೃತ ಮಂಜುನಾಥ್ ತಾಯಿ ಸುಮತಿಗೆ ಇನ್ನೂ ಕೂಡ ಮಗನ ಹತ್ಯೆಯಾಗಿರುವ ವಿಚಾರ ತಿಳಿದಿಲ್ಲ. ಮಂಜುನಾಥ್ ಉಗ್ರರಿಂದ ಹತ್ಯೆಯಾಗಿದ್ದಾನೆಂದು ಕುಟುಂಬಸ್ಥರು ತಿಳಿಸಿಲ್ಲ. ಗಾಯವಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದಷ್ಟೇ ಕುಟುಂಬಸ್ಥರು ತಾಯಿಗೆ ತಿಳಿಸಿದ್ದಾರೆ. ಇದನ್ನೂ ಓದಿ: Pahalgam Attack | ಉಗ್ರರ ಗುಂಡಿಗೆ ವಾರದ ಹಿಂದೆಯಷ್ಟೇ ಮದ್ವೆಯಾಗಿದ್ದ ನೌಕಾಪಡೆ ಅಧಿಕಾರಿ ಬಲಿ