Tag: ಪಾಂಡಿಚೇರಿ

  • ನಾಡಬಾಂಬ್ ಎಸೆದು BJP ಮುಖಂಡನ ಕೊಲೆ

    ನಾಡಬಾಂಬ್ ಎಸೆದು BJP ಮುಖಂಡನ ಕೊಲೆ

    ಪುದುಚೇರಿ: ಬಿಜೆಪಿ (BJP) ಮುಖಂಡನ ಮೇಲೆ ದುಷ್ಕರ್ಮಿಗಳ ಗುಂಪೊಂದು ನಾಡಬಾಂಬ್ ಎಸೆದು ಬರ್ಬರವಾಗಿ ಹತ್ಯೆಗೈದ ಘಟನೆ ಪುದುಚೇರಿಯಲ್ಲಿ (Puducherry) ನಡೆದಿದೆ.

     ಬಿಜೆಪಿ ಮುಖಂಡ ಸೆಂಥಿಲ್ ಕುಮಾರ್ (Senthil Kumar) ಮೃತ ವ್ಯಕ್ತಿ. ಭಾನುವಾರ ರಾತ್ರಿ ವಿಲಿಯನೂರು ಹಾಗೂ ಪುದುಚೇರಿ ರಸ್ತೆಯ ಬದಿಯ ಅಂಗಡಿಯೊಂದರಲ್ಲಿ ಚಹಾ ಸೇವಿಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಸೆಂಥಿಲ್ ಕುಮಾರ್ ಮೇಲೆ ನಾಡಬಾಂಬ್ ಎಸೆದಿದ್ದಾರೆ. ನಂತರ ಸೆಂಥಿಲ್ ಕುಮಾರ್ ಬಳಿ ಹೋಗಿ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆಗೈದಿದ್ದಾರೆ.

    ಸೆಂಥಿಲ್ ಕುಮಾರ್ ಪುದುಚೇರಿ ಗೃಹ ಸಚಿವ ನಮಚಿವಾಯಂ ಅವರ ದೂರದ ಸಂಬಂಧಿಯಾಗಿದ್ದು, ಈ ಹಿಂದೆ ಕಾಂಗ್ರೆಸ್‍ನಲ್ಲಿದ್ದ ಅವರು, ನಮಚಿವಾಯಂ ಜೊತೆಗೆ ಬಿಜೆಪಿಗೆ ತೆರಳಿದ್ದರು. ಘಟನೆಗೆ ಸಂಬಂಧಿಸಿ ಸಿಸಿ ಟಿವಿಯಲ್ಲಿ ದೃಶ್ಯ ಸೆರೆಯಾಗಿದೆ.

    ವೀಡಿಯೋದಲ್ಲಿ ಏನಿದೆ?: ಬೈಕ್‍ನಲ್ಲಿ (Bike) ಬಂದ ದುಷ್ಕರ್ಮಿಗಳು ಬಿಜೆಪಿ ಮುಖಂಡನ ಮೇಲೆ ಬಾಂಬ್ ದಾಳಿ ನಡೆಸಿದ್ದಾರೆ. ನೋಡುಗರು ನೋಡ ನೋಡುತ್ತಿದ್ದಂತೆ ದಾಳಿ ಕೋರರು ಸೆಂಥಿಲ್ ಕುಮಾರ್ ಇದ್ದ ಬಳಿ ಹೋಗಿ ಕೋಲಿನಿಂದ ಥಳಿಸಿ ಚಾಕುವಿನಿಂದ ಇರಿದ್ದಾರೆ. ದುಷ್ಕರ್ಮಿಗಳ ಹಲ್ಲೆ ಪರಿಣಾಮ ಸೆಂಥಿಲ್ ಕುಮಾರ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ರಾಜ್ಯಕ್ಕೆ ನಾಲ್ಕು ಮುಖ್ಯಮಂತ್ರಿಗಳನ್ನು ಕೊಟ್ಟ ರಾಮನಗರ ರಾಜಕೀಯ ಘಟಾನುಘಟಿಗಳ ತವರು

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದುಷ್ಕರ್ಮಿಗಳನ್ನು ಬಂಧಿಸಲು ಪೊಲೀಸರು 4 ವಿಶೇಷ ತಂಡಗಳನ್ನು ರಚಿಸಿದ್ದಾರೆ. ಪೊಲೀಸರು ಟೀ ಸ್ಟಾಲ್‍ನಿಂದ ಹತ್ತಿರದ ದೃಶ್ಯಗಳನ್ನು ಪರಿಶೀಲನೆ ಮಾಡಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಮಹಿಳಾ ಮತದಾರರಿಗೆ ಹಂಚಲು ತೆಗೆದುಕೊಂಡು ಹೋಗುತ್ತಿದ್ದ ಸಾವಿರಾರು ಸೀರೆಗಳು ಜಪ್ತಿ

  • ನಾಲೆಗೆ ಬಿದ್ದು ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಸಾವು

    ನಾಲೆಗೆ ಬಿದ್ದು ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್‌ ಕ್ರೀಡಾಪಟು ಸಾವು

    ಮಂಡ್ಯ: ರಾಷ್ಟ್ರೀಯ ಮಟ್ಟದ ಸೈಕ್ಲಿಂಗ್ ಕ್ರೀಡಾಪಟು (Cyclist) ನಾಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ಕೆ.ಆರ್‌.ಪೇಟೆ (K.R.Pet) ತಾಲೂಕಿನ ಅಕ್ಕಿಹೆಬ್ಬಾಳು ಬಳಿ ನಡೆದಿದೆ.

    ಪಾಂಡಿಚೇರಿ ಮೂಲದ ಆಲ್ಹರ್ಶ್ (17) ಮೃತ ಕ್ರೀಡಾಪಟು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ರಾಷ್ಟ್ರಮಟ್ಟದ ಸೈಕಲ್ ಪೋಲೋ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕ್ರೀಡಾಕೂಟಕ್ಕೆ ರಾಜ್ಯ, ಹೊರ ರಾಜ್ಯದಿಂದ ಸೈಕ್ಲಿಂಗ್ ಕ್ರೀಡಾಪಟುಗಳು ಆಗಮಿಸಿದ್ದರು. ಇದನ್ನೂ ಓದಿ: ಟೀಂ ಇಂಡಿಯಾ ಹೀನಾಯ ಸೋಲಿಗೆ ಇದೇ ಕಾರಣ – ಪಾಕ್ ತಜ್ಞರ ವಿಶ್ಲೇಷಣೆ

    ಕ್ರೀಡಾಕೂಟದ ಸ್ಥಳದಿಂದ ಅನತಿ ದೂರದ ನಾಲೆ ಬಳಿ ಈಜಲು ಪಾಂಡಿಚೇರಿಯ ಕ್ರೀಡಾಪಟು ಆಲ್ಹರ್ಶ್ ಹೋಗಿದ್ದ. ಈ ವೇಳೆ ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ಅಗ್ನಿಶಾಮಕದಳ ಸಿಬ್ಬಂದಿ ಶೋಧ ಕಾರ್ಯ ನಡೆಸಿ ನಾಲೆಯಿಂದ ಮೃತದೇಹವನ್ನು ಹೊರತೆಗೆದಿದ್ದಾರೆ.

    ಸರಿಯಾಗಿ ಶೌಚಾಲಯ ವ್ಯವಸ್ಥೆ ಕಲ್ಪಿಸದ್ದಕ್ಕೆ ನಾಲೆಗೆ ಕ್ರೀಡಾಪಟು ಹೋಗಿದ್ದ. ಈ ವೇಳೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಕೆ.ಆರ್.ಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚುನಾವಣಾ ಪ್ರಚಾರಕ್ಕಾಗಿ ಸಿದ್ದರಾಮಯ್ಯಗೆ ಸಿದ್ಧವಾಯ್ತು ಹೈಫೈ ಪ್ರಚಾರದ ಬಸ್

    Live Tv
    [brid partner=56869869 player=32851 video=960834 autoplay=true]

  • ರೌಡಿ ಬೇಬಿ ಹಾಡಿಗೆ ಸೊಂಟ ಬಳುಕಿಸಿದ ಅಜ್ಜಿ – ವಿಡಿಯೋ ವೈರಲ್

    ರೌಡಿ ಬೇಬಿ ಹಾಡಿಗೆ ಸೊಂಟ ಬಳುಕಿಸಿದ ಅಜ್ಜಿ – ವಿಡಿಯೋ ವೈರಲ್

    – ಅಜ್ಜಿ ಹೆಜ್ಜೆಗೆ ಕಿರಣ್ ಬೇಡಿ ಫಿದಾ

    ಪಾಂಡಿಚೇರಿ: ನಗರದಲ್ಲಿ ಪೊಂಗಲ್ ಸಂಭ್ರಮಾಚರಣೆ ವೇಳೆ ಅಜ್ಜಿಯೊಬ್ಬರು ರೌಡಿ ಬೇಬಿ ಹಾಡಿಗೆ ಸಖತ್ ಆಗಿ ಸೊಂಟ ಬಳುಕಿಸಿದ್ದು, ಈ ವಿಡಿಯೋ ಎಲ್ಲೆಡೆ ಸಿಕ್ಕಾಪಟ್ಟೆ ವೈರಲ್ ಆಗಿದೆ.

    ವಿಡಿಯೋವನ್ನು ಪಾಂಡಿಚೇರಿ ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರು ತಮ್ಮ ಟ್ವಿಟ್ಟರ್ ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಈ ವಿಡಿಯೋ ನೋಡಿದವರು ಅಜ್ಜಿ ಡ್ಯಾನ್ಸ್ ಗೆ ಫಿದಾ ಆಗಿದ್ದು, ಇಳಿ ವಯಸ್ಸಿನಲ್ಲೂ ಖುಷಿಯಿಂದ ಡ್ಯಾನ್ಸ್ ಮಾಡಿದ ಅಜ್ಜಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ.

    ಪಾಂಡಿಚೇರಿಯಲ್ಲಿ ಕಿರಣ್ ಬೇಡಿ ಅವರು ನಗರದ ಪೌರ ಕಾರ್ಮಿಕರು ಹಾಗೂ ಸಚ್ಛತಾ ಕಾರ್ಪೊರೇಷನ್‍ನ ಮಹಿಳೆಯರೊಂದಿಗೆ ಪೊಂಗಲ್ ಆಚರಣೆ ಮಾಡಿದ್ದಾರೆ. ಈ ಸಂಭ್ರಮಾಚರಣೆ ವೇಳೆ ಕೆಲವು ಮಹಿಳೆಯರು ಖುಷಿಯಾಗಿ ಕುಣಿದಿದ್ದಾರೆ. ಅದರಲ್ಲೂ ವೃದ್ಧೆಯೊಬ್ಬರು ತಮಿಳಿನ ‘ಮಾರಿ-2’ ಚಿತ್ರದ ‘ರೌಡಿ ಬೇಬಿ’ ಹಾಡಿಗೆ ಸಖತ್ ಹೆಜ್ಜೆ ಹಾಕಿ ಎಲ್ಲರ ಮನಗೆದ್ದಿದ್ದಾರೆ. ವೃದ್ಧೆಯ ಡ್ಯಾನ್ಸ್ ಗೆ ಸ್ವತಃ ಕಿರಣ್ ಬೇಡಿ ಅವರೇ ಫಿದಾ ಆಗಿದ್ದಾರೆ.

    ಈ ವಿಡಿಯೋ ಸುಮಾರು 28 ಸಾವಿರಕ್ಕೂ ಅಧಿಕ ಬಾರಿ ವಿಕ್ಷಣೆಯಾಗಿದ್ದು, 3 ಸಾವಿರಕ್ಕೂ ಅಧಿಕ ಮಂದಿ ಲೈಕ್ ಮಾಡಿದ್ದಾರೆ. ಸಾವಿರಾರು ಮಂದಿ ಶೇರ್ ಕೂಡ ಮಾಡಿಕೊಂಡಿದ್ದಾರೆ.

    ಇನ್ನೊಂದು ಟ್ವೀಟ್‍ನಲ್ಲಿ ಪೊಂಗಲ್ ಸಂಭ್ರಮಾಚರಣೆಯ ಬಳಿಕ ಕಿರಣ್ ಬೇಡಿಯವರು ದಾನಿಗಳ ಜೊತೆ ಸೇರಿ ಪುರುಷ ಕಾರ್ಮಿಕರಿಗೆ ಟವಲ್ ಹಾಗೂ ಮಹಿಳೆಯರಿಗೆ ಸೀರೆ ಉಡುಗೊರೆಯಾಗಿ ನೀಡಿರುವ ಫೋಟೋಗಳನ್ನು ಕೂಡ ಶೇರ್ ಮಾಡಿಕೊಂಡಿದ್ದಾರೆ.

  • ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕ ಸಾವು

    ಅಲೆಗಳ ಹೊಡೆತಕ್ಕೆ ಸಿಲುಕಿ ಯುವಕ ಸಾವು

    ಚಾಮರಾಜನಗರ: ಸ್ನೇಹಿತರ ಜೊತೆ ಪ್ರವಾಸಕ್ಕೆ ತೆರಳಿದ್ದ ಯುವಕನೋರ್ವ ಮೃತಪಟ್ಟಿರುವ ಘಟನೆ ನಡೆದಿದೆ.

    ಮೃತ ದುರ್ದೈವಿ ಯುವಕನನ್ನು ದೀಪು(26) ಎಂದು ಗುರುತಿಸಲಾಗಿದೆ. ಚಾಮರಾಜನಗರ ಜಿಲ್ಲೆಯ ಹರವೆ ಗ್ರಾಮದ ಯುವಕ ದೀಪು ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದರು. ಈತ ತನ್ನ ಸ್ನೇಹಿತರ ಶನಿವಾರ ಪಾಂಡಿಚೇರಿಗೆ ಪ್ರವಾಸಕ್ಕೆ ತೆರಳಿದಾಗ ಈ ಘಟನೆ ನಡೆದಿದೆ.

    ಚಾಮರಾಜನರದ ದೀಪು ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದು, ಶನಿವಾರ ವೀಕೆಂಡ್ ಇದ್ದ ಕಾರಣ ಸ್ನೇಹಿತ ಜೊತೆ ಕಾರಿನಲ್ಲಿ ಪ್ರವಾಸ ಹೋಗಿದ್ದಾರೆ. ಈ ವೇಳೆ ಪಾಂಡೀಚೇರಿಯ ಬೀಚ್‍ನಲ್ಲಿ ಸ್ನೇಹಿತರ ಜೊತೆ ಆಟವಾಡುವ ವೇಳೆ ಅಲೆಗಳ ಹೊಡೆತಕ್ಕೆ ಸಿಲುಕಿ ದೀಪು ಸಾವನ್ನಪ್ಪಿದ್ದಾನೆ.

  • 9 ರನ್‍ಗಳಿಗೆ ಆಲೌಟ್ – 9 ಜನರು ಶೂನ್ಯಕ್ಕೆ ಪೆವಿಲಿಯನ್‍ನತ್ತ ಹೆಜ್ಜೆ

    9 ರನ್‍ಗಳಿಗೆ ಆಲೌಟ್ – 9 ಜನರು ಶೂನ್ಯಕ್ಕೆ ಪೆವಿಲಿಯನ್‍ನತ್ತ ಹೆಜ್ಜೆ

    ಪುದುಚೇರಿ: ಕ್ರಿಕೆಟ್‍ನಲ್ಲಿ ಟಿ20 ಅತ್ಯಂತ ರೋಚಕ ಪಂದ್ಯ ಎಂದೇ ಹೇಳಲಾಗುತ್ತದೆ. ಮೂರು ಮಾದರಿಯ ಕ್ರಿಕೆಟ್ ನಲ್ಲಿ ಟಿ20 ಪಂದ್ಯಗಳನ್ನು ನೋಡಲು ಬಹುತೇಕರು ಇಷ್ಟಪಡುತ್ತಾರೆ. ಈ ಪಂದ್ಯಗಳಲ್ಲಿ ಆಟಗಾರರು ಹಲವು ದಾಖಲೆಗಳನ್ನು ಬರೆಯುತ್ತಾರೆ. ಹಾಗೆಯೇ ಕೆಲವೊಂದು ಬಾರಿ ಹೀನಾಯ ಸೋಲು ಕಾಣುವ ಮೂಲಕ ಕಳಪೆ ದಾಖಲೆಗಳನ್ನು ಟಿ20 ಚುಟುಕು ಪಂದ್ಯಗಳು ಕಂಡಿವೆ. ಪುದುಚೇರಿ ಮಹಿಳೆಯರ ಟಿ20 ಪಂದ್ಯದಲ್ಲಿ ತಂಡವೊಂದು ಕೇವಲ 9 ರನ್ ಗಳಿಗೆ ತನ್ನ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡು 9 ಆಟಗಾರ್ತಿಯರು ಶೂನ್ಯ ಸುತ್ತಿದ್ದಾರೆ.

    ಪುದುಚೇರಿ ಪ್ಲಮೀರಾ ಕ್ರಿಕೆಟ್ ಗ್ರೌಂಡ್ ನಲ್ಲಿ ಮಹಿಳೆಯರ ಸೀನಿಯರ್ ಟಿ20 ಪಂದ್ಯ ನಡೆದಿತ್ತು. ಮಿಜೋರಾಂ ಮತ್ತು ಮಧ್ಯ ಪ್ರದೇಶ ತಂಡಗಳ ನಡುವಿನ ಪಂದ್ಯದಲ್ಲಿ ಮೀಜೋರಾಂ ವನಿತೆಯರು 9 ರನ್ ಗಳಿಗೆ ಎಲ್ಲ ವಿಕೆಟ್ ಗಳನ್ನು ಕಳೆದುಕೊಳ್ಳುವ ಮೂಲಕ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದಾರೆ. ಒಂಬತ್ತು ಆಟಗಾರ್ತಿಯರು ಖಾತೆಯನ್ನ ತೆರೆಯದೇ ಪೆವಿಲಿಯನ್ ನತ್ತ ಹೆಜ್ಜೆ ಹಾಕಿದ್ದಾರೆ.

    14.5 ಓವರ್ ಎದುರಿಸಿದ ಮೀಜೋರಾಂ ಮಹಿಳಾ ಪಡೆ ಕೇವಲ 9 ರನ್ ಕಲೆ ಹಾಕುವಲ್ಲಿ ಯಶಸ್ವಿಯಾಯಿತು. 25 ಬಾಲ್ ಎದುರಿಸಿದ ಅಪೂರ್ವ ಭಾರಧ್ವಾಜ್, ಒಂದು ಬೌಂಡರಿ ಸೇರಿದಂತೆ 6 ರನ್ ಹೊಡೆದರೆ ಇತರೇ ರೂಪದಲ್ಲಿ 3 ರನ್ ಸೇರಿ ತಂಡದ ಒಟ್ಟಾರೆ ಮೊತ್ತ 9 ಆಗಿತ್ತು. ಮಧ್ಯಪ್ರದೇಶದ ತಂಡದಲ್ಲಿ 7 ಮಂದಿ ಬೌಲಿಂಗ್ ಮಾಡಿದ್ದು, ಆರು ಬೌಲರ್ ಗಳು ತಲಾ ಒಂದೊಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಬೌಲರ್ ತರಂಗ ಜಾ 25 ಎಸೆತ ಹಾಕಿ 1 ರನ್ ಬಿಟ್ಟುಕೊಟ್ಟು 4 ವಿಕೆಟ್ ಪಡೆದರು.

    ನಂತರ ಬ್ಯಾಟಿಂಗ್ ಆರಂಭಿಸಿದ ಮಧ್ಯ ಪ್ರದೇಶದ ವನಿತೆಯರು ಕೇವಲ ಒಂದು ಓವರ್ ನಲ್ಲಿಯೇ ಪಂದ್ಯವನ್ನು ತಮ್ಮದಾಗಿಸಿಕೊಂಡರು. ಫೆಬ್ರವರಿ 20ರಂದು ನಡೆದಿದ್ದ ಟಿ20 ಮ್ಯಾಚ್ ನಲ್ಲಿ ಮೀಜೋರಾಂ ವನಿತೆಯರನ್ನು ಕೇರಳದ ಆಟಗಾರ್ತಿಯರು 24 ರನ್ ಗಳಿಗೆ ಅಲೌಟ್ ಮಾಡುವ ಮೂಲಕ 10 ವಿಕೆಟ್ ಗಳ ಜಯವನ್ನು ದಾಖಲಿಸಿದ್ದರು.

    ಅಂತರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಚೀನಾ ತಂಡ ಯುಎಇ ಎದುರು 14 ರನ್‍ಗಳಿಗೆ ತನ್ನ ಎಲ್ಲ ವಿಕೆಟ್ ಗಳನ್ನು ಕಳೆದುಕೊಂಡಿತ್ತು. ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಇದೂವರೆಗಿನ ಕನಿಷ್ಟ ಸ್ಕೋರ್ ಇದಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

    ಶ್ರೀಗಳ ಅಂತಿಮ ದರ್ಶನಕ್ಕೆ ಆಗಮಿಸಿದ ಪಾಂಡಿಚೇರಿ ಸಿಎಂ

    ಚಿಕ್ಕಬಳ್ಳಾಪುರ: ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳು ಸೋಮವಾರ ಲಿಂಗೈಕ್ಯರಾಗಿದ್ದು, ಇಂದು ಶ್ರೀಗಳ ಅಂತಿಮ ದರ್ಶನ ಪಡೆಯಲು ಪಾಂಡಿಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಆಗಮಿಸಿದ್ದಾರೆ.

    ವಿಶೇಷ ವಿಮಾನದಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ನಂತರ ನೇರವಾಗಿ ರಸ್ತೆ ಮಾರ್ಗವಾಗಿ ತುಮಕೂರಿನತ್ತ ಪ್ರಯಾಣ ಬೆಳೆಸಿದ್ದಾರೆ. ಈಗಾಗಲೇ ನಟ ದರ್ಶನ್, ಪ್ರಕಾಶ್ ರೈ ಸೇರಿದಂತೆ ಲಕ್ಷಾಂತರ ಭಕ್ತರು ಮಠಕ್ಕೆ ಆಗಮಿಸಿ ಶ್ರೀಗಳ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

    ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಿವಕುಮಾರ ಸ್ವಾಮೀಜಿ(111)ಯವರು ಸೋಮವಾರ ಬೆಳಗ್ಗೆ 11.44ಕ್ಕೆ ಲಿಂಗೈಕ್ಯರಾಗಿದ್ದಾರೆ. ನಡೆದಾಡುವ ದೇವರು ಎಂದೇ ಕರೆಸಿಕೊಳ್ಳುತ್ತಿದ್ದ ಶ್ರೀಗಳು ಅಪಾರ ಭಕ್ತರನ್ನು ಅಗಲಿದ್ದಾರೆ. ಸ್ವಾಮೀಜಿ ನಿಧನರಾಗಿರುವ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ಲಕ್ಷಾಂತರ ಮಂದಿ ಭಕ್ತರು ಶ್ರೀಗ ದರ್ಶನ ಪಡೆಯಲು ಸಾಗರೋಪಾದಿಯಲ್ಲಿ ಹರಿದುಬರುತ್ತಿದ್ದಾರೆ. ಇಂದು ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಬಳಿಕ ಕ್ರಿಯಾ ಸಮಾಧಿಯ ವಿಧಿವಿಧಾನಗಳು ನಡೆಯಲಿದೆ. ಇದನ್ನೂ ಓದಿ: 70ರ ದಶಕದಲ್ಲೇ ಗದ್ದುಗೆ ನಿರ್ಮಾಣಕ್ಕೆ ಜಾಗ ಸೂಚಿಸಿದ್ದ ಶ್ರೀ: ಭವನದ ವಿಶೇಷತೆ ಏನು?

    https://www.youtube.com/watch?v=g5NjZlf4B-8

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv