Tag: ಪಾಕಿಸ್ತಾನ. ಸಾರ್ಕ್‌

  • ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

    ಭಾರತ ಹೊರಗಿಟ್ಟು ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟ ರಚಿಸಲು ಚಿಂತನೆ

    – ಸಾರ್ಕ್‌ಗೆ ಪರ್ಯಾಯವಾಗಿ ಹೊಸ ಪ್ರಾದೇಶಿಕ ಒಕ್ಕೂಟದ ಚಿಂತನೆ

    ಕುನ್ಮಿಂಗ್: ಚೀನಾದ ಕುನ್ಮಿಂಗ್‌ನಲ್ಲಿ (Kunming) ಇತ್ತೀಚೆಗೆ ನಡೆದ ಚೀನಾ-ದಕ್ಷಿಣ ಏಷ್ಯಾ ಎಕ್ಸ್‌ಪೋ ಮತ್ತು ಚೀನಾ-ದಕ್ಷಿಣ ಏಷ್ಯಾ ಸಹಕಾರ ಸಮ್ಮೇಳನದ ಸಂದರ್ಭದಲ್ಲಿ ಚೀನಾ, ಪಾಕಿಸ್ತಾನ (Pakistan) ಮತ್ತು ಬಾಂಗ್ಲಾದೇಶದ ನಡುವೆ ತ್ರಿಪಕ್ಷೀಯ ಸಭೆ ನಡೆದಿದೆ. ಸಭೆಯಲ್ಲಿ ಸೌತ್ ಏಷಿಯನ್ ಅಸೋಸಿಯೇಷನ್ ಫಾರ್ ರೀಜನಲ್ ಕೋಆಪರೇಷನ್ (Saarc) ಬದಲಿಗೆ ಹೊಸ ಒಕ್ಕೂಟ ಸ್ಥಾಪಿಸುವ ಬಗ್ಗೆ ಚರ್ಚೆ ನಡೆದಿದೆ.

    ಸಾರ್ಕ್, ದಕ್ಷಿಣ ಏಷ್ಯಾದ ಎಂಟು ರಾಷ್ಟ್ರಗಳನ್ನು ಒಳಗೊಂಡಿರುವ ಪ್ರಾದೇಶಿಕ ಸಂಘಟನೆಯಾಗಿದೆ. ಭಾರತ (India), ಬಾಂಗ್ಲಾದೇಶ, ಭೂತಾನ್, ಮಾಲ್ಡೀವ್ಸ್, ನೇಪಾಳ, ಪಾಕಿಸ್ತಾನ, ಶ್ರೀಲಂಕಾ ಮತ್ತು ಆಫ್ಘಾನಿಸ್ತಾನವನ್ನು ಒಳಗೊಂಡಿದೆ. ಆದರೆ, ಭಾರತ ಮತ್ತು ಪಾಕಿಸ್ತಾನದ ನಡುವಿನ ಭೌಗೋಳಿಕ-ರಾಜಕೀಯ ಘರ್ಷಣೆಯಿಂದಾಗಿ, 2016ರಿಂದ ಸಾರ್ಕ್‌ನ ಶೃಂಗಸಭೆಗಳು ಸ್ಥಗಿತಗೊಂಡಿವೆ. ಇದನ್ನೂ ಓದಿ: ಇರಾನ್‌ನ ಪರಮಾಣು ಯೋಜನೆಗೆ 30 ಶತಕೋಟಿ ಡಾಲರ್‌ ನೆರವು ಪ್ರಸ್ತಾಪಿಸಿದ ಅಮೆರಿಕ

    ಪ್ರಾದೇಶಿಕ ಏಕೀಕರಣ ಮತ್ತು ಸಂಪರ್ಕಕ್ಕಾಗಿ ಹೊಸ ಸಂಘಟನೆಯ ಅಗತ್ಯವಿದೆ ಎಂದು ಪಾಕಿಸ್ತಾನ ಮತ್ತು ಚೀನಾ (China) ಎರಡೂ ಸಭೆಯಲ್ಲಿ ಮನವರಿಕೆ ಮಾಡಿವೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ವರದಿ ಹೇಳಿದೆ. ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಅಫ್ಘಾನಿಸ್ತಾನ ಸೇರಿದಂತೆ ಸಾರ್ಕ್ ಸದಸ್ಯರು ಹೊಸ ಗುಂಪಿನ ಭಾಗವಾಗುವ ನಿರೀಕ್ಷೆಯಿದೆ ಎಂದು ಅದು ಹೇಳಿದೆ. ಇದನ್ನೂ ಓದಿ: `ಆಪರೇಷನ್ ಸಿಂಧೂರ’ದಲ್ಲಿ ನಿರ್ನಾಮವಾದ ಉಗ್ರರ ಲಾಂಚ್ ಪ್ಯಾಡ್ ಮರುನಿರ್ಮಾಣ ಮಾಡುತ್ತಿದೆ ಪಾಕ್‌

    2016ರಲ್ಲಿ ಜಮ್ಮು ಮತ್ತು ಕಾಶ್ಮೀರದ (Jammu And Kashmir) ಉರಿಯಲ್ಲಿ ಭಯೋತ್ಪಾದಕ ದಾಳಿಯ ನಂತರ ಭಾರತವು ಇಸ್ಲಾಮಾಬಾದ್‌ನಲ್ಲಿ ನಡೆಯಬೇಕಿದ್ದ 19ನೇ ಸಾರ್ಕ್ ಶೃಂಗಸಭೆಯನ್ನು ಬಹಿಷ್ಕರಿಸಿತು. ಇದಕ್ಕೆ ಬಾಂಗ್ಲಾದೇಶ, ಭೂತಾನ್, ಆಫ್ಘಾನಿಸ್ತಾನ ಮತ್ತು ಶ್ರೀಲಂಕಾ ಸಹ ಸಾಥ್ ನೀಡಿದ್ದವು. ಇದರಿಂದಾಗಿ ಶೃಂಗಸಭೆಯನ್ನು ರದ್ದುಗೊಳಿಸಲಾಯಿತು. ಈ ಘಟನೆಯಿಂದಾಗಿ, ಸಾರ್ಕ್‌ನ ಕಾರ್ಯಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತಗೊಂಡಿವೆ.

    ಇದರ ಬೆನ್ನಲೆ ಕುನ್ಮಿಂಗ್‌ನಲ್ಲಿ ನಡೆದ ತ್ರಿಪಕ್ಷೀಯ ಸಭೆಯಲ್ಲಿ ಚೀನಾ ಮತ್ತು ಪಾಕಿಸ್ತಾನದ ನೇತೃತ್ವದಲ್ಲಿ ದಕ್ಷಿಣ ಏಷ್ಯಾದ ರಾಷ್ಟ್ರಗಳಾದ ಶ್ರೀಲಂಕಾ, ಮಾಲ್ಡೀವ್ಸ್ ಮತ್ತು ಆಫ್ಘಾನಿಸ್ತಾನವನ್ನು ಒಳಗೊಂಡಂತೆ ಹೊಸ ಪ್ರಾದೇಶಿಕ ಒಕ್ಕೂಟವನ್ನು ರಚಿಸುವ ಮೂರು ದೇಶಗಳು ಸಮಾಲೋಚನೆ ನಡೆಸಿವೆ. ಇದನ್ನೂ ಓದಿ: ರಷ್ಯಾದಿಂದ ಅತಿದೊಡ್ಡ ವೈಮಾನಿಕ ದಾಳಿ – ಬರೋಬ್ಬರಿ 477 ಡ್ರೋನ್‌, 60 ಮಿಸೈಲ್‌ಗಳಿಂದ ಉಕ್ರೇನ್‌ ಮೇಲೆ ಅಟ್ಯಾಕ್‌

    ಈ ಒಕ್ಕೂಟವು ವ್ಯಾಪಾರ ಮತ್ತು ಸಂಪರ್ಕವನ್ನು ಹೆಚ್ಚಿಸುವ ಮೂಲಕ ಪ್ರಾದೇಶಿಕ ಸಹಕಾರವನ್ನು ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ವರದಿಗಳ ಪ್ರಕಾರ, ಭಾರತವನ್ನು ಸಹ ಈ ಒಕ್ಕೂಟಕ್ಕೆ ಆಹ್ವಾನಿಸಲಾಗುವ ಸಾಧ್ಯತೆಯಿದೆ. ಆದರೆ ಭಾರತದ ಭಾಗವಹಿಸುವಿಕೆಯು ಅನಿಶ್ಚಿತವಾಗಿದೆ. ಭಾರತವು ಭಯೋತ್ಪಾದನೆಯ ವಿರುದ್ಧ ತನ್ನ ದೃಢನಿಲುವನ್ನು ಮುಂದುವರೆಸಿದೆ ʻರಾತ್ರಿಯಲ್ಲಿ ಭಯೋತ್ಪಾದನೆ, ಹಗಲಿನಲ್ಲಿ ವ್ಯಾಪಾರʼ ಎಂಬ ಸನ್ನಿವೇಶವನ್ನು ಸ್ವೀಕರಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸಾಮಾನ್ಯ ತಾಪಮಾನದ ನ್ಯೂಯಾರ್ಕ್‌, ಬೋಸ್ಟನ್‌ – ಇದೀಗ ದಾಖಲೆಯ ಮಟ್ಟ ಮೀರುತ್ತಿರುವುದ್ಯಾಕೆ?

    ಬಾಂಗ್ಲಾದೇಶದ ತಾತ್ಕಾಲಿಕ ಸರ್ಕಾರವು ಈ ಸಭೆಯು ರಾಜಕೀಯವಲ್ಲ ಎಂದು ವಿವರಿಸಿದೆ ಮತ್ತು ಯಾವುದೇ ಹೊಸ ಒಕ್ಕೂಟದ ರಚನೆಯ ಸಾಧ್ಯತೆಯನ್ನು ತಳ್ಳಿಹಾಕಿದೆ. ಆದರೆ, ಬಾಂಗ್ಲಾದೇಶದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಮತ್ತು ಪಾಕಿಸ್ತಾನದ ಪ್ರಧಾನಮಂತ್ರಿ ಶೆಹಬಾಜ್ ಷರೀಫ್ ಅವರು ಸಾರ್ಕ್‌ನ ಪುನರುತ್ಥಾನಕ್ಕೆ ಒತ್ತು ನೀಡಿದ್ದಾರೆ. ಇದಕ್ಕೆ ಕಾರಣ, ಈ ರಾಷ್ಟ್ರಗಳಿಗೆ ಸಾರ್ಕ್‌ನಂತಹ ಪ್ರಾದೇಶಿಕ ವೇದಿಕೆಯು ವ್ಯಾಪಾರ ಮತ್ತು ಆರ್ಥಿಕ ಸಹಕಾರಕ್ಕೆ ಅತ್ಯಗತ್ಯವಾಗಿದೆ. ಆದರೆ, ಭಾರತವು ತನ್ನ ದ್ವಿಪಕ್ಷೀಯ ಸಂಬಂಧಗಳ ಮೂಲಕ ಈ ರಾಷ್ಟ್ರಗಳೊಂದಿಗೆ ಸಂಪರ್ಕವನ್ನು ಕಾಯ್ದುಕೊಳ್ಳಬಹುದು ಎಂದು ಭಾವಿಸುತ್ತದೆ, ಆದ್ದರಿಂದ ಸಾರ್ಕ್‌ನಂತಹ ಬಹುಪಕ್ಷೀಯ ವೇದಿಕೆಯ ಅಗತ್ಯವಿಲ್ಲ ಎಂದು ವಾದಿಸುತ್ತದೆ.