Tag: ಪಾಕ್ ಸೇನೆ

  • 25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

    25 ವರ್ಷಗಳ ಬಳಿಕ ಮೊದಲ ಬಾರಿಗೆ ಕಾರ್ಗಿಲ್ ಯುದ್ಧದಲ್ಲಿ ತನ್ನ ಪಾತ್ರದ ಬಗ್ಗೆ ಪಾಕ್‌ ತಪ್ಪೊಪ್ಪಿಗೆ!

    – ಪಾಕ್‌ ಸೇನಾ ಮುಖ್ಯಸ್ಥ ಹೇಳಿದ್ದೇನು?
    – ಕಾಂಗ್ರೆಸ್‌ ವಿರುದ್ಧ ಬಿಜೆಪಿ ಟೀಕೆ

    ಇಸ್ಲಾಮಾಬಾದ್‌: ಕಾರ್ಗಿಲ್ ಯುದ್ಧ (1999 Kargil War) ನಡೆದ 25 ವರ್ಷದ ನಂತರ ಭಾರತದೊಂದಿಗೆ ಮಾರಣಾಂತಿಕ ಸಂಘರ್ಷದಲ್ಲಿ ಪಾಕಿಸ್ತಾನ (Pakistan) ತನ್ನ ಪಾತ್ರದ ಬಗ್ಗೆ ಒಪ್ಪಿಕೊಂಡಿದೆ. ಈ ಕುರಿತು ಖುದ್ದು ಅಲ್ಲಿನ ಸೇನಾಧಿಕಾರಿಯೇ ಬಹಿರಂಗ ಹೇಳಿಕೆ ನೀಡಿದ್ದಾರೆ.

    ರಾವಲ್ಪಿಂಡಿಯಲ್ಲಿರುವ ಪಾಕಿಸ್ತಾನದ ಸೇನೆಯ (Pakistan Army) ಪ್ರಧಾನ ಕಚೇರಿಯಲ್ಲಿ ನಡೆದ ʻರಕ್ಷಣಾ ದಿನʼ ಕಾರ್ಯಕ್ರಮದ ಭಾಷಣದಲ್ಲಿ ಸೇನಾ ಮುಖ್ಯಸ್ಥ ಜನರಲ್ ಆಸೀಮ್ ಮುನೀರ್, ಕಾರ್ಗಿಲ್‌ ಯುದ್ಧದಲ್ಲಿ ಪಾಕ್‌ ಪಾತ್ರದ ಬಗ್ಗೆ ಮಾತನಾಡಿದ್ದಾರೆ. ಭಾರತ-ಪಾಕ್ ಮಧ್ಯೆ ನಡೆದ 1948, 1965, 1971ರ ಯುದ್ಧ, ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಯೋಧರು ಪ್ರಾಣತ್ಯಾಗ ಮಾಡಬೇಕಾಗಿ ಬಂತು ಎಂದು ಹೇಳಿದ್ದಾರೆ.

    ಈ ಮೂಲಕ ಕಾರ್ಗಿಲ್ ಯುದ್ಧದಲ್ಲಿ ಪಾಕ್ ಸೈನ್ಯ ತಮ್ಮ ಪಾತ್ರವನ್ನು ಒಪ್ಪಿಕೊಂಡಂತೆ ಆಗಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ಸಹ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ: ರಷ್ಯಾ ವಿರುದ್ಧ ಉಕ್ರೇನ್‌ ಪ್ರತೀಕಾರದ ದಾಳಿ – ಬೆಂಕಿ ಉಂಡೆ ಉಗುಳುವ ʻಡ್ರ್ಯಾಗನ್‌ ಡ್ರೋನ್‌ʼ ಅಸ್ತ್ರ ಪ್ರಯೋಗ

    ಪಾಕ್‌ ಆರ್ಮಿ ಚೀಫ್‌ ಹೇಳಿದ್ದೇನು?
    1948, 1965, 1971ರ ಯುದ್ಧಗಳು ಹಾಗೂ ಭಾರತ ಮತ್ತು ಪಾಕಿಸ್ತಾನದ ನಡುವಿನ ಕಾರ್ಗಿಲ್ ಯುದ್ಧ, ಸಿಯಾಚಿನ್ ಘರ್ಷಣೆಯಲ್ಲಿ ಸಾವಿರಾರು ಜನರು ಪ್ರಾಣತ್ಯಾಗ ಮಾಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದಾಳಿ ರಾಜಕೀಯ ಪ್ರೇರಿತ: ಭಾರತದ ವಿರುದ್ಧವೇ ಪ್ರಶ್ನೆ ಎತ್ತಿದ ಯೂನಸ್

    ಮೇ ಮತ್ತು ಜುಲೈ 1999ರ ನಡುವೆ ನಡೆದ ಕಾರ್ಗಿಲ್ ಯುದ್ಧದಲ್ಲಿ, ಜಮ್ಮು ಮತ್ತು ಕಾಶ್ಮೀರದ ಕಾರ್ಗಿಲ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಪಾಕಿಸ್ತಾನಿ ಪಡೆಗಳು ನುಸುಳಿದವು. ಆಗ ಭಾರತೀಯ ಸೇನೆ ʻಆಪರೇಷನ್ ವಿಜಯ್ʼ ಅಡಿಯಲ್ಲಿ ಅವರನ್ನು ಹಿಮ್ಮೆಟ್ಟಿಸಿತ್ತು. ಹಿಂದೆ, ಇಸ್ಲಾಮಾಬಾದ್ ನುಸುಳುಕೋರರನ್ನು ʻಕಾಶ್ಮೀರಿ ಸ್ವಾತಂತ್ರ್ಯ ಹೋರಾಟಗಾರರುʼ ಅಥವಾ ʻಮುಜಾಹಿದೀನ್‌ಗಳುʼ ಉಲ್ಲೇಖಿಸುತ್ತಾ ನೇರವಾಗಿ ಸೇನಾ ಪಾಲ್ಗೊಳ್ಳುವಿಕೆಯನ್ನು ನಿರಾಕರಿಸಿದರು.

    ಸೇನಾ ಮುಖ್ಯಸ್ಥ ಮುನೀರ್‌ ಅವರ ಈ ಹೇಳಿಕೆಯು ಸೋಷಿಯಲ್‌ ಮೀಡಿಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ಭಾರತ್‌ ಸ್ಪೆಕ್ಟ್ರಮ್‌ ಎಂಬ ಎಕ್ಸ್‌ ಖಾತೆಯಲ್ಲಿ ಅಂದು ಖಾರ್ಗಿಲ್‌ ಯುದ್ಧದಲ್ಲಿ ಮಡಿದ ಅಧಿಕಾರಿಗಳ ಮೃತದೇಹಗಳನ್ನು ಸ್ವೀಕರಿಸಲು ಪಾಕಿಸ್ತಾನದ ಸೇನೆಯು ನಿರಾಕರಿಸಿದ ವರದಿಗಳನ್ನು ಹಂಚಿಕೊಳ್ಳಲಾಗಿದೆ. ಇದನ್ನೂ ಓದಿ: ಕೀನ್ಯಾ ಶಾಲೆಯಲ್ಲಿ ಅಗ್ನಿ ಅವಘಡ – 17 ಮಕ್ಕಳು ದಾರುಣ ಸಾವು

    ಕಾಂಗ್ರೆಸ್‌ಗೆ ಬಿಜೆಪಿ ಟಾಂಗ್‌!
    ಆಸೀಮ್ ಮುನೀರ್ ಕಾರ್ಗಿಲ್‌ ಯುದ್ಧದ ಬಗ್ಗೆ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಪ್ರತಿಕ್ರಿಯೆ ನೀಡಿದ್ದಾರೆ. ಭಯೋತ್ಪಾದನೆ ಮತ್ತು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ಪಾತ್ರವು ಬಹಿರಂಗವಾಗಿದೆ. ಈಗ ಪಾಕಿಸ್ತಾನವೇ ಅದನ್ನು ಒಪ್ಪಿಕೊಂಡಿದೆ. ಆದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳಾದ ನ್ಯಾಷನಲ್ ಕಾನ್ಫರೆನ್ಸ್ ಇನ್ನೂ ಪಾಕಿಸ್ತಾನದೊಂದಿಗೆ ಮಾತುಕತೆಗೆ ಪ್ರತಿಪಾದಿಸುತ್ತಿವೆ. ಅವರು ಅಫ್ಜಲ್ ಗುರುವನ್ನು ಗಲ್ಲಿಗೇರಿಸಿರುವುದನ್ನು ಪ್ರಶ್ನಿಸುತ್ತಾರೆ, ಮೋದಿಯನ್ನು ವಿರೋಧಿಸುವ ನೆಪದಲ್ಲಿ, ನಿಜವಾಗಿಯು ಭಾರತವನ್ನು ಭಾರತ್ ವಿರೋಧ ಮಾಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

  • ಟೆರರಿಸ್ಟ್‌ಗಳು ಎಸ್ಕೇಪ್‌ ಆಗಲು ಪಾಕ್‌ ಸೇನೆ ನೆರವು – ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ

    ಟೆರರಿಸ್ಟ್‌ಗಳು ಎಸ್ಕೇಪ್‌ ಆಗಲು ಪಾಕ್‌ ಸೇನೆ ನೆರವು – ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ಬಾರಾಮುಲ್ಲಾ ಜಿಲ್ಲೆಯಲ್ಲಿ ಗಡಿ ನಿಯಂತ್ರಣ ರೇಖೆ (LOC) ದಾಟಲು ಯತ್ನಿಸಿದ ಮೂವರು ಭಯೋತ್ಪಾದಕರನ್ನು ಶನಿವಾರ ಭದ್ರತಾ ಪಡೆಗಳು ಹೊಡೆದುರುಳಿಸಿವೆ. ಭಯೋತ್ಪಾದಕರು ತಪ್ಪಿಸಿಕೊಳ್ಳಲು ಪಾಕಿಸ್ತಾನಿ ಸೈನಿಕರು (Pakistan Soldiers) ನೆರವಿಗೆ ಯತ್ನಿಸಿದ್ದರು ಎಂದು ಭಾರತೀಯ ಸೇನೆ (Indian Army) ಹೇಳಿದೆ.

    ಉಗ್ರರ (Terrorists) ಒಳನುಸುಳುವಿಕೆ ಯತ್ನವನ್ನು ವಿಫಲಗೊಳಿಸಲು ಇಂಟೆಲ್ ಆಧಾರದ ಮೇಲೆ ಭಾರತೀಯ ಸೇನೆ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೀರ್ ಪಂಜಾಲ್ ಬ್ರಿಗೇಡ್‌ನ ಕಮಾಂಡರ್ ಬ್ರಿಗೇಡಿಯರ್ ಪಿಎಂಎಸ್ ಧಿಲ್ಲೋನ್ ತಿಳಿಸಿದ್ದಾರೆ. ಇದನ್ನೂ ಓದಿ: ಕಾಶ್ಮೀರದಲ್ಲಿ 3ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಹುಟ್ಟಡಗಿಸಲು ವಿಳಂಬವಾಗ್ತಿರುವುದ್ಯಾಕೆ?

    ಮೂವರು ಭಯೋತ್ಪಾದಕರು ಒಳನುಸುಳಲು ಪ್ರಯತ್ನಿಸಿದರು. ಮೊದಲು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಯಿತು. ನಂತರ ಮೂರನೇ ಭಯೋತ್ಪಾದಕನನ್ನು ಹತ್ಯೆ ಮಾಡಲಾಯಿತು. ಆರಂಭದಲ್ಲಿ ಭಯೋತ್ಪಾದಕರು ತಪ್ಪಿಸಿಕೊಳ್ಳುವುದಕ್ಕೆ ನೆರವಾಗಲು ಪಾಕ್‌ ಸೈನಿಕರು ಮುಂದಾದರು. ಆದರೆ ಅವರ ಪ್ರಯತ್ನಿ ವಿಫಲವಾಯಿತು. ಅಷ್ಟರೊಳಗೆ ಭಯೋತ್ಪಾದಕರನ್ನು ಭಾರತೀಯ ಸೇನೆ ಹೊಡೆದುರುಳಿಸಿತು. ಭಯೋತ್ಪಾದಕರ ಮೃತದೇಹವನ್ನು ಪಡೆಯಲು ಎಲ್ಒಸಿ ಸಮೀಪದಲ್ಲಿ ಪಾಕ್‌ ಸೈನಿಕರು ಗುಂಡಿನ ದಾಳಿ ನಡೆಸಿದ್ದರು ಎಂದು ಸೇನೆ ತಿಳಿಸಿದೆ.

    ಭಯೋತ್ಪಾದಕರ ಬಳಿಯಿದ್ದ ಎರಡು ಎಕೆ ರೈಫಲ್‌, ಒಂದು ಪಿಸ್ತೂಲ್, ಏಳು ಹ್ಯಾಂಡ್ ಗ್ರೆನೇಡ್‌, ಒಂದು ಸುಧಾರಿತ ಸ್ಫೋಟಕ ಸಾಧನ (ಐಇಡಿ), ಪಾಕಿಸ್ತಾನದ ಕರೆನ್ಸಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸೇನೆ ತಿಳಿಸಿದೆ. ಇದನ್ನೂ ಓದಿ: ಸೇಡು ತೀರಿಸಿಕೊಳ್ಳಲು ಮೊಮ್ಮಗಳನ್ನು ಸೇನೆಗೆ ಸೇರಿಸ್ತೀನಿ- ಆಶೀಶ್ ಢೋನ್‍ಚಕ್ ತಾಯಿ

    2021ರ ಫೆಬ್ರವರಿಯಲ್ಲಿ, ಗಡಿಗಳಲ್ಲಿ ಪರಸ್ಪರ ಶಾಂತಿ ಸಾಧಿಸುವ ಹಿತಾಸಕ್ತಿಯಿಂದ ಭಾರತ ಮತ್ತು ಪಾಕಿಸ್ತಾನದ ಸೇನೆಗಳು ಗಡಿ ನಿಯಂತ್ರಣ ರೇಖೆಯ (LoC) ಉದ್ದಕ್ಕೂ ಗುಂಡಿನ ದಾಳಿಯನ್ನು ನಿಲ್ಲಿಸಲು ಒಪ್ಪಿಕೊಂಡಿದ್ದವು. ಆದರೆ ಈಗ ಮತ್ತೆ ಅಶಾಂತಿ ವಾತಾವರಣ ಸೃಷ್ಟಿಯಾಗಿದೆ. ಅನಂತನಾಗ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್‌ಕೌಂಟರ್ ಶನಿವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಎನ್‌ಕೌಂಟರ್‌ನಲ್ಲಿ ನಾಲ್ವರು ಭದ್ರತಾ ಪಡೆ ಸಿಬ್ಬಂದಿ ಹುತಾತ್ಮರಾಗಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಮ್ರಾನ್ ಖಾನ್ ಆರೋಪವನ್ನು ತಳ್ಳಿ ಹಾಕಿದ ಪಾಕ್ ಸೇನೆ

    ಇಮ್ರಾನ್ ಖಾನ್ ಆರೋಪವನ್ನು ತಳ್ಳಿ ಹಾಕಿದ ಪಾಕ್ ಸೇನೆ

    ಇಸ್ಲಾಮಾಬಾದ್: ನನ್ನನ್ನು ಅಧಿಕಾರದಿಂದ ಕೆಳಗಿಳಿಸಲು ವಿದೇಶಿ ಸಂಚು ರೂಪಿಸಲಾಗಿದೆ ಎಂದು ಮಾಜಿ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಆರೋಪಿಸಿದ್ದರು. ಆದರೆ ಈ ಆರೋಪವನ್ನು ಪಾಕ್ ಸೇನೆ ತಳ್ಳಿಹಾಕಿದೆ.

    ಇಮ್ರಾನ್ ಖಾನ್ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯಕ್ಕೂ ಮೊದಲು ತಮ್ಮ ಸರ್ಕಾರವನ್ನು ಉರುಳಿಸಲು ಅಮೆರಿಕ ಪಿತೂರಿ ನಡೆಸಿದೆ ಎಂದು ಆರೋಪ ಹೊರಿಸಿದ್ದರು. ಆದರೆ ಈ ಆರೋಪವನ್ನು ಸೇನೆ ತಿರಸ್ಕರಿಸಿದೆ. ಇದನ್ನೂ ಓದಿ: ಮಹಿಳಾ ರೋಗಿಗಳಿಗೆ ಕಿಸ್‌, ಹಗ್‌ ಮಾಡಿ ಲೈಂಗಿಕ ಅಪರಾಧ- ಭಾರತ ಮೂಲದ ವೃದ್ಧ ವೈದ್ಯನಿಗೆ ಶಿಕ್ಷೆ

    ಕಳೆದ ತಿಂಗಳು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯ ಬಳಿಕ ನೀಡಿದ ಹೇಳಿಕೆಯಲ್ಲಿ ಪಿತೂರಿ ಎಂಬ ಪದವನ್ನು ಬಳಸಲಾಗಿಲ್ಲ. ಪತ್ರದಲ್ಲೂ ಪಿತೂರಿಯಂತಹ ಯಾವುದೇ ಅಂಶಗಳಿಲ್ಲ ಎಂದು ಪಾಕಿಸ್ತಾನಿ ಮಾಧ್ಯಮ ವಿಭಾಗದ ಇಂಟರ್ ಸರ್ವಿಸಸ್ ಪಬ್ಲಿಕ್ ರಿಲೇಷನ್ಸ್‌ನ ಮಹಾನಿರ್ದೇಶಕ ಮೇಜರ್ ಜನರಲ್ ಬಾಬರ್ ಇಫ್ತಿಕರ್ ಗುರುವಾರ ತಿಳಿಸಿದ್ದಾರೆ.

    ಇಮ್ರಾನ್ ಖಾನ್ ಮಾರ್ಚ್ 27ರಂದು ಇಸ್ಲಾಮಾಬಾದ್‌ನಲ್ಲಿ ನಡೆದ ಬೃಹತ್ ರ‍್ಯಾಲಿಯಲ್ಲಿ ತಮ್ಮ ಪ್ರತಿಪಕ್ಷಗಳ ಅವಿಶ್ವಾಸ ನಿರ್ಣಯವನ್ನು ವಿರೋಧಿಸಿ ಮಾತನಾಡಿದ್ದರು. ತಾನು ರಷ್ಯಾಗೆ ಅಮೆರಿಕದ ಅನುಮತಿ ಇಲ್ಲದೇ ಭೇಟಿ ನೀಡಿದ್ದರಿಂದ, ತಮ್ಮನ್ನು ಪ್ರಧಾನಿ ಸ್ಥಾನದಿಂದ ತೆಗೆದು ಹಾಕಲು ಪಿತೂರಿ ನಡೆಸಲಾಗಿದೆ ಎಂದು ನೇರವಾಗಿ ಅಮೆರಿಕವನ್ನು ದೂಷಿಸಿದ್ದರು. ಆದರೆ ಈ ಆರೋಪವನ್ನು ಅಮೆರಿಕ ನಿರಾಕರಿಸಿತ್ತು. ಇದನ್ನೂ ಓದಿ: ನಾನು ಅಧಿಕಾರದಲ್ಲಿದ್ದಾಗ ಅಪಾಯಕಾರಿಯಾಗಿರಲಿಲ್ಲ, ಆದ್ರೆ ಈಗ ಆಗಿದ್ದೇನೆ: ಇಮ್ರಾನ್ ಖಾನ್

    ಇದೀಗ ಇಮ್ರಾನ್ ಖಾನ್ ಅಮೆರಿಕದ ಮೇಲೆ ಹೊರಿಸಿದ್ದ ಆರೋಪವನ್ನು ಸೇನಾ ವಕ್ತಾರ ಜನರಲ್ ಬಾಬರ್ ಇಫ್ತಿಕರ್ ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಇಮ್ರಾನ್ ಖಾನ್ ಆರೋಪದ ಬಳಿಕ ಸೇನಾ ಮುಖ್ಯಸ್ಥ ಜನರಲ್ ಕಮರ್ ಜಾವೇದ್ ಬಾಜ್ವಾ ಕೂಡಾ ಅಮೆರಿಕದೊಂದಿಗೆ ಉತ್ತಮ ಸಂಬಂಧಗಳನ್ನು ಬೆಳೆಸುವ ಬಗ್ಗೆ ಮಾತನಾಡಿ ಸಮಸ್ಯೆಗಳನ್ನು ನಿಭಾಯಿಸಲು ಪ್ರಯತ್ನಿಸಿದ್ದರು.

    2018ರಲ್ಲಿ ಇಮ್ರಾನ್ ಖಾನ್ ಪಾಕ್ ಪ್ರಧಾನಿಯಾಗುವಲ್ಲಿ ಸೇನೆ ಬಹು ದೊಡ್ಡ ಕೊಡುಗೆ ನೀಡಿತ್ತು. ಆದರೂ ಇದೀಗ ಇಬ್ಬರೂ ಪರಸ್ಪರ ವಿರೋಧಿಗಳಾಗಿದ್ದಾರೆ.

  • ಜೈಶ್ ಉಗ್ರರ ಬಳಿ ಪತ್ತೆಯಾಯ್ತು ಪಾಕ್ ಸೇನೆಯ ರೈಫಲ್

    ಜೈಶ್ ಉಗ್ರರ ಬಳಿ ಪತ್ತೆಯಾಯ್ತು ಪಾಕ್ ಸೇನೆಯ ರೈಫಲ್

    -ಭಯೋತ್ಪಾದನೆಗೆ ಪಾಕ್ ಸಹಕಾರ

    ಶ್ರೀನಗರ: ಭಾರತ ಗಡಿಯಲ್ಲಿ ಉಗ್ರರು ನಡೆಸುತ್ತಿರುವ ದಾಳಿಗೆ ಪಾಕ್ ಸೇನೆ ನೆರವನ್ನು ನೀಡುತ್ತಿದೆ ಎಂಬುವುದಕ್ಕೆ ಪುರಾವೆ ದೊರೆತಿದೆ. ಉಗ್ರರು ಸದೆಬಡಿರುವ ಸೇನೆ ಅವರ ಬಳಿಕ ಪಾಕ್ ಸೇನೆಯ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದೆ.

    ಶುಕ್ರವಾರ ಬದ್ಗಾಮ್‍ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಭಾರತೀಯ ಭದ್ರತಾಪಡೆ ಜೈಶ್-ಎ- ಮೊಹಮ್ಮದ್ ಸಂಘಟನೆಯ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದು, ಒರ್ವನನ್ನು ಬಂಧಿಸಿದೆ. ಈ ವೇಳೆ ವಶಪಡಿಸಿಕೊಳ್ಳಲಾದ ಶಸ್ತ್ರಾಸ್ತ್ರಗಳಲ್ಲಿ ಪಾಕಿಸ್ತಾನ ಸೇನೆಯ ಅಮೆರಿಕ ನಿರ್ಮಿತ ಎಂ4 ಕಾರ್ಬೈನ್ ರೈಫಲ್ ಕೂಡಾ ಪತ್ತೆಯಾಗಿದೆ. ಇದರಿಂದ ಪಾಕ್ ಸೈನ್ಯವೇ ನೇರವಾಗಿ ಈ ರೈಫಲ್‍ಗಳನ್ನು ಉಗ್ರರಿಗೆ ನೀಡಿರುವುದಕ್ಕೆ ಇದು ಸಾಕ್ಷಿಯಾಗಿದೆ.

    ಪಾಕ್ ಯೋಧರು ಬಳಸುವ ರೈಫಲ್ ಉಗ್ರರ ಬಳಿ ಪತ್ತೆಯಾಗುತ್ತಿರುವುದು ಇದು 3ನೇ ಬಾರಿಯಾಗಿದ್ದು, ಈ ಹಿಂದೆ 2017ರ ಅಕ್ಟೋಬರ್‍ನಲ್ಲಿ ಮಸೂದ್ ಅಜರ್‍ನ ಅಳಿಯ ತಲ್ಹಾ ರಶೀದ್‍ನ ಎನ್‍ಕೌಂಟರ್ ನಡೆದಾಗ ಇದೇ ಶಸ್ತ್ರ ದೊರಕಿತ್ತು. ಅಲ್ಲದೆ 2018ರ ಅಕ್ಟೋಬರ್ 31ರಂದು ಪುಲ್ವಾಮಾ ಜಿಲ್ಲೆಯ ಟ್ರಾನ್‍ನಲ್ಲಿ ಜೈಷ್‍ಟ ಉಗ್ರರ ಮೇಲೆ ದಾಳಿ ನಡೆಸಿದಾಗಲೂ ಸ್ಥಳದಲ್ಲೂ ಎಂ4 ರೈಫಲ್ ಪತ್ತೆಯಾಗಿತ್ತು.

    ಏನಿದು ಎಂ4 ರೈಫಲ್?
    ಎಂ4 ಕಾರ್ಬೈನ್ ರೈಫಲ್‍ಗಳು ಅರೆಸ್ವಯಂಚಾಲಿತ ಶಸ್ತ್ರವಾಗಿದ್ದು, ಇದರಿಂದ ಮೂರು ಸುತ್ತು ಗುಂಡು ಹಾರಿಸಬಹುದಾಗಿದೆ. ಅಮೆರಿಕ ಯೋಧರು ಇದನ್ನು ಪ್ರಧಾನವಾಗಿ ಬಳಸುತ್ತಾರೆ. ಹಲವಾರು ಯುದ್ಧಗಳಲ್ಲಿ ಅಮೆರಿಕಾ ಎಂ4 ರೈಫಲ್‍ಗಳನ್ನು ಬಳಸಿದೆ. ಹಾಗೆಯೇ ಈ ಶಸ್ತ್ರಗಳನ್ನು ಪಾಕಿಸ್ತಾನಕ್ಕೂ ಮಾರಾಟ ಮಾಡಿದೆ.

    ಪುಲ್ವಾಮಾ ದಾಳಿ ಬಳಿಕ ಗಡಿಭಾಗದಲ್ಲಿ ಗುಂಡಿನ ಸದ್ದು ಜೋರಾಗಿಯೇ ಕೇಳಿಬರುತ್ತಿದೆ. ಅಲ್ಲದೆ ಈ ದಾಳಿ ಬಳಿಕ ಭಾರತೀಯ ಭದ್ರತಾ ಪಡೆ ಕಣಿವೆಯಲ್ಲಿ ಉಗ್ರರ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿದ್ದು, ಈವರೆಗೆ ಸುಮಾರು ಜೈಶ್ ಸಂಘಟನೆಗೆ ಸೇರಿರುವ 30 ಉಗ್ರರನ್ನು ಸದೆಬಡಿಯಲಾಗಿದೆ. ಹಾಗೆಯೇ ಕಳೆದ 24 ಗಂಟೆಗಳಲ್ಲಿ ಸುಮಾರು 6 ಮಂದಿ ಉಗ್ರರನ್ನು ಭದ್ರತಾಪಡೆ ಹತ್ಯೆಗೈದಿದೆ. ಗುರುವಾರ ಶೋಪಿಯಾನ್ ಬಳಿ ನಡೆಸಿದ ಎನ್‍ಕೌಂಟರ್‍ನಲ್ಲಿ ನಾಲ್ವರು ಉಗ್ರರು ಹಾಗೂ ಶುಕ್ರವಾರದಂದು ಬದ್ಗಾಮ್‍ನಲ್ಲಿ ಇಬ್ಬರು ಜೈಷ್ ಉಗ್ರರು ಹತರಾಗಿದ್ದಾರೆ.

  • ಬಂಕರ್‌ಗಳನ್ನು ನಿರ್ಮಿಸಿ – ಎಲ್‍ಒಸಿ ನಿವಾಸಿಗಳಿಗೆ ಪಾಕ್ ಸೂಚನೆ

    ಬಂಕರ್‌ಗಳನ್ನು ನಿರ್ಮಿಸಿ – ಎಲ್‍ಒಸಿ ನಿವಾಸಿಗಳಿಗೆ ಪಾಕ್ ಸೂಚನೆ

    – ಖಾಸಗಿ ಆಸ್ಪತ್ರೆಗಳು ಶೇ.25ರಷ್ಟು ಹಾಸಿಗೆ ಸೈನಿಕರಿಗೆ ಮೀಸಲಿಡಿ
    – ಗುಂಪಾಗಿ ಚರ್ಚೆ ನಡೆಸಬೇಡಿ, ರಾತ್ರಿ ಲೈಟ್ ಹಾಕಬೇಡಿ
    – ಗ್ರಾಮಸ್ಥರಿಗೆ ಪಾಕ್ ಅಧಿಕಾರಿಗಳಿಗಳಿಂದ ಎಚ್ಚರಿಕೆ

    ಶ್ರೀನಗರ: ಯಾವುದೇ ಕ್ಷಣದಲ್ಲಿ ಭಾರತ ನಮ್ಮ ಮೇಲೆ ದಾಳಿ ಮಾಡಬಹುದು ಎನ್ನುವ ಭೀತಿಗೆ ಒಳಗಾಗಿರುವ ಪಾಕಿಸ್ತಾನ ಈಗ ಪಾಕ್ ಆಕ್ರಮಿತ ಕಾಶ್ಮೀರದ ಜನತೆಗೆ ಬಂಕರ್ ನಿರ್ಮಿಸುವಂತೆ ಸೂಚನೆ ನೀಡಿದೆ.

    ಗಡಿ ನಿಯಂತ್ರಣ ರೇಖೆಯ ಬಳಿ ಇರುವ ಗ್ರಾಮಸ್ಥರಿಗೆ ಪಾಕಿಸ್ತಾನದ ಅಧಿಕಾರಿಗಳು ಸುರಕ್ಷಿತ ಜಾಗಗಳಲ್ಲಿ ಸಂಚರಿಸಿ ಎಂದು ಸಲಹೆ ನೀಡಿದ್ದಾರೆ. ಅಷ್ಟೇ ಅಲ್ಲದೇ ಸೂಕ್ಷ್ಮ ಪ್ರದೇಶಗಳಲ್ಲಿ ಗುಂಪಾಗಿ ಚರ್ಚೆ ನಡೆಸಬೇಡಿ ಎಂದು ಸೂಚಿಸಿದ್ದಾರೆ ಎಂದು ಮೂಲಗಳನ್ನು ಆಧಾರಿಸಿ ಮಾಧ್ಯಮವೊಂದು ವರದಿ ಮಾಡಿದೆ.

    ರಾತ್ರಿಯ ವೇಳೆ ಅನಾವಶ್ಯಕವಾಗಿ ಲೈಟ್ ಹಾಕಬೇಡಿ. ಗಡಿ ನಿಯಂತ್ರಣ ರೇಖೆಯ ಬಳಿ ಪ್ರಾಣಿಗಳನ್ನು ತೆಗೆದುಕೊಂಡು ಹೋಗಬೇಡಿ. ಇದರ ಜೊತೆಗೆ ಯಾರ ಮನೆಯಲ್ಲಿ ಬಂಕರ್ ಗಳು ನಿರ್ಮಾಣವಾಗಿಲ್ಲವೋ ಅವರೆಲ್ಲ ಅದಷ್ಟು ಶೀಘ್ರವೇ ಬಂಕರ್ ಗಳನ್ನು ನಿರ್ಮಿಸಿ ಎನ್ನುವ ಸೂಚನೆಯನ್ನು ಸ್ಥಳೀಯ ಅಧಿಕಾರಿಗಳು ಗ್ರಾಮಸ್ಥರಿಗೆ ನೀಡಿದ್ದಾರೆ.

    ಒಂದು ವೇಳೆ ಯುದ್ಧ ನಡೆದರೆ ಅದಕ್ಕೂ ಸಿದ್ಧವಾಗಿರುವಂತೆ ಪಾಕಿಸ್ತಾನ ಸೇನೆ ಆಸ್ಪತ್ರೆಗಳಿಗೆ ಸೂಚಿಸಿದೆ. ಯುದ್ಧ ಆರಂಭವಾದರೆ ವೈದ್ಯಕೀಯ ಸಹಕಾರಕ್ಕೆ ಹೇಗೆ ಸಿದ್ಧವಾಗಿದ್ದೀರಿ. ನಿಮ್ಮಲ್ಲಿ ಎಷ್ಟು ಹಾಸಿಗೆಗಳಿವೆ ಎನ್ನುವುದನ್ನು ತಿಳಿಸಿ ಹೆಡ್‍ಕ್ವಾರ್ಟರ್ಸ್ ಕ್ವೆಟ್ಟಾ ಲಾಜಿಸ್ಟಿಕ್ಸ್ ಏರಿಯಾ( ಎಚ್‍ಕ್ಯೂಎಲ್‍ಎ) ಕಾಂಟೋನ್ಮೆಂಟ್ ಜಿಲಾನಿ ಆಸ್ಪತ್ರೆಗೆ ಫೆ.20 ರಂದು ಪತ್ರ ಬರೆದಿದೆ.  ಇದನ್ನೂ ಓದಿ: ಭಾರತ ಕೊಟ್ಟ ಶಾಕ್‍ಗೆ ತಲೆಬಾಗಿ ಉಗ್ರ ಸಂಘಟನೆ ನಿಷೇಧಿಸಿದ ಪಾಕ್

    ಒಂದು ವೇಳೆ ಪೂರ್ವ ಭಾಗದಲ್ಲಿ ಯುದ್ಧ ಆರಂಭವಾದರೆ ಕ್ವೆಟ್ಟಾ ಲಾಜಿಸ್ಟಿಕ್ಸ್ ಏರಿಯಾ ಸಿಂಧ್ ಮತ್ತು ಪಂಜಾಬ್ ಪ್ರದೇಶದಲ್ಲಿ ಗಾಯಗೊಂಡ ಸೈನಿಕರನ್ನು ರಕ್ಷಿಸಬೇಕಾಗುತ್ತದೆ. ಸೈನಿಕರಿಗೆ ಮಿಲಿಟರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬಲೂಚಿಸ್ತಾನಕ್ಕೆ ಶಿಫ್ಟ್ ಮಾಡಲು ಪಾಕ್ ಸೇನೆ ನಿರ್ಧರಿಸಿದೆ. ಅಷ್ಟೇ ಅಲ್ಲದೇ ಖಾಸಗಿ ಆಸ್ಪತ್ರೆಗಳು ಶೇ.25 ರಷ್ಟು ಹಾಸಿಗೆಗಳನ್ನು ಗಾಯಗೊಂಡ ಸೈನಿಕರಿಗೆ ಮೀಸಲಿಡಬೇಕು ಎಂದು ಪಾಕ್ ಸೇನೆ ಪತ್ರದ ಮೂಲಕ ಈಗಲೇ ಸೂಚನೆ ನೀಡಿದೆ.

    ಉರಿ ಸೇನಾ ನೆಲೆಯ ಮೇಲೆ ಉಗ್ರರ ದಾಳಿ ಬಳಿಕ ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮೀರಕ್ಕೆ ನುಗ್ಗಿ ಸರ್ಜಿಕಲ್ ಸ್ಟ್ರೈಕ್ ನಡೆಸಿ ಉಗ್ರರ ನೆಲೆಗಳನ್ನೇ ಧ್ವಂಸ ಮಾಡಿತ್ತು. ಈಗ ಪುಲ್ವಾಮಾ ದಾಳಿ ಬಳಿಕ ಮತ್ತೊಮ್ಮೆ ಸರ್ಜಿಕಲ್ ಸ್ಟ್ರೈಕ್ ನಡೆಸಬಹುದು ಎನ್ನುವ ಭೀತಿಯಿಂದ ಪಾಕ್ ಗ್ರಾಮಸ್ಥರಿಗೆ ಈಗಲೇ ಎಚ್ಚರಿಕೆ ನೀಡಿ ಎಲ್ಲ ದಾಳಿಗಳನ್ನು ಎದುರಿಸಲು ಸಿದ್ಧವಾಗಿರಿ ಎಂದು ಸೂಚಿಸಿದೆ.

    https://twitter.com/KashmirPivot/status/1098482610127466498

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv