Tag: ಪಾಟ್ನಾ

  • Bihar Election | `ಜೀವಿಕಾ ಸಿಎಂ ದೀದಿ’ಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್

    Bihar Election | `ಜೀವಿಕಾ ಸಿಎಂ ದೀದಿ’ಗಳಿಗೆ 30,000 ಮಾಸಿಕ ವೇತನದ ಭರವಸೆ – ತೇಜಸ್ವಿ ಯಾದವ್

    – ಎಲ್ಲ ಗುತ್ತಿಗೆ ನೌಕರರನ್ನ ಖಾಯಂಗೊಳಿಸುವ ಭರವಸೆ

    ಪಾಟ್ನಾ: ಬಿಹಾರದಲ್ಲಿ ಆರ್‌ಜೆಡಿ (RJD) ನೇತೃತ್ವದ ಮಹಾಘಟಬಂಧನ್ ಅಧಿಕಾರಕ್ಕೆ ಬಂದರೆ ರಾಜ್ಯದ ಎಲ್ಲಾ `ಜೀವಿಕಾ ಸಿಎಂ ದೀದಿ’ಗಳಿಗೆ 30,000 ರೂ. ಮಾಸಿಕ ವೇತನದೊಂದಿಗೆ ಶಾಶ್ವತ ಸರ್ಕಾರಿ ಉದ್ಯೋಗವನ್ನು ನೀಡಲಾಗುವುದು ಎಂದು ಮಾಜಿ ಡಿಸಿಎಂ, ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ (Tjashwi Yadav) ಘೋಷಿಸಿದ್ದಾರೆ.

    ಪಾಟ್ನಾದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಹಾರ ವಿಧಾನಸಭಾ ಚುನಾವಣೆ ಹಿನ್ನೆಲೆ ಎರಡನೇ ಚುನಾವಣಾ ಭರವಸೆಯನ್ನು ಘೋಷಿಸಿದರು. ಜೀವಿಕಾ ಸಿಎಂ (ಸಮುದಾಯ ಸಂಚಾರಿ ಕಾರ್ಯಕರ್ತರು) ದೀದಿಗಳನ್ನು ಖಾಯಂ ಮಾಡಲಾಗುವುದು ಮತ್ತು ಅವರ ಸಂಬಳವನ್ನು ಹೆಚ್ಚಿಸುವುದರ ಜೊತೆಗೆ ಸರ್ಕಾರಿ ನೌಕರರ ಸ್ಥಾನಮಾನವನ್ನು ನೀಡಲಾಗುವುದು. ಇದಲ್ಲದೆ, ರಾಜ್ಯದ ಎಲ್ಲಾ ಗುತ್ತಿಗೆ ನೌಕರರನ್ನು ಶಾಶ್ವತ ಸರ್ಕಾರಿ ಉದ್ಯೋಗಿಗಳಾಗಿ ಪರಿಗಣಿಸಲಾಗುವುದು ಎಂದು ತಿಳಿಸಿದರು.ಇದನ್ನೂ ಓದಿ: ದೀಪಾವಳಿಗೆ ಮುದ್ದು ಮಗಳ ಫೇಸ್‌ ರಿವೀಲ್‌ ಮಾಡಿದ ದೀಪಿಕಾ ಪಡುಕೋಣೆ

    ನಿಮಗೆಲ್ಲರಿಗೂ ತಿಳಿದಿರುವ ಹಾಗೇ ಈ ಸರ್ಕಾರದ ಅಡಿಯಲ್ಲಿ ಜೀವಿಕಾ ದೀದಿಗೆ ಅನ್ಯಾಯವಾಗಿದೆ. ನಾವು ಅವರ ಸಂಬಳವನ್ನು ತಿಂಗಳಿಗೆ 30,000 ರೂ.ಗಳಿಗೆ ಹೆಚ್ಚಿಸುವುದಾಗಿ ನಿರ್ಧರಿಸಿದ್ದೇವೆ. ಇದು ಸಾಮಾನ್ಯ ಘೋಷಣೆಯಲ್ಲ, ಇದು ಜೀವಿಕಾ ದೀದಿಯರ ಬೇಡಿಕೆಯಾಗಿದೆ ಎಂದು ಹೇಳಿದರು.

    ಇದಲ್ಲದೇ ಜೀವಿಕಾ ದೀದಿ ಗುಂಪುಗಳಿಗೆ ಮಹಿಳೆಯರು ಪಡೆದ ಸಾಲಗಳ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುತ್ತದೆ. ಜೊತೆಗೆ ಎರಡು ವರ್ಷಗಳವರೆಗೆ ಬಡ್ಡಿರಹಿತ ಸಾಲ ನೀಡಲಾಗುವುದು. ಜೀವಿಕಾ ಗುಂಪಿನ ಮಹಿಳೆಯರು ಸರ್ಕಾರಕ್ಕೆ ಸಂಬAಧಿಸಿದ ಇತರ ಕೆಲಸಗಳನ್ನು ನಿರ್ವಹಿಸಲು ಮಾಸಿಕ 2,000 ರೂ. ಭತ್ಯೆ ನೀಡಲಾಗುವುದು. ಅದರೊಂದಿಗೆ ಸರ್ಕಾರವು 5,00,000 ರೂ.ಗಳವರೆಗಿನ ವಿಮಾ ರಕ್ಷಣೆಯನ್ನು ಒದಗಿಸುತ್ತದೆ ಎಂದು ತಿಳಿಸಿದರು.

    ಮಗಳು ಮತ್ತು ತಾಯಿ ಯೋಜನೆಗಳ ಅಡಿಯಲ್ಲಿ, ಬಿಯಿಂದ ಇವರೆಗೆ ಪ್ರಯೋಜನಗಳನ್ನು ಒದಗಿಸಲಾಗುತ್ತದೆ. ಬಿ ಎಂದರೆ ಪ್ರಯೋಜನ, ಇ ಎಂದರೆ ಶಿಕ್ಷಣ, ಟಿ ಎಂದರೆ ತರಬೇತಿ ಮತ್ತು ಐ ಎಂದರೆ ಆದಾಯ. ಬಿಹಾರದ ಎಲ್ಲಾ ಗುತ್ತಿಗೆ ನೌಕರರನ್ನು ಖಾಯಂ ಸರ್ಕಾರಿ ನೌಕರರನ್ನಾಗಿ ಮಾಡಲಾಗುವುದು ಎಂದು ವಿವರಿಸಿದರು.

    ಈ ಹಿಂದೆ ಅಧಿಕಾರಕ್ಕೆ ಬಂದ 20 ತಿಂಗಳೊಳಗೆ ರಾಜ್ಯದ ಪ್ರತಿ ಮನೆಗೆ ಒಂದು ಸರ್ಕಾರಿ ಉದ್ಯೋಗ ನೀಡುವುದಾಗಿ ತೇಜಸ್ವಿ ಭರವಸೆ ನೀಡಿದ್ದರು. ಸರ್ಕಾರ ರಚಿಸಿದ 20 ದಿನಗಳಲ್ಲಿ ಉದ್ಯೋಗ ಖಾತರಿಪಡಿಸುವ ಹೊಸ ಕಾನೂನನ್ನು ಪರಿಚಯಿಸಲಾಗುವುದು. ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೆ ತರಲಾಗುವುದು ಎಂದು ಭರವಸೆ ನೀಡಿದ್ದಾರೆ.ಇದನ್ನೂ ಓದಿ: ಪ್ರಿಯಾಂಕ್‌ಗೆ ಅನಂತ್‌ ಕುಮಾರ್‌ ಪುತ್ರಿ ಐಶ್ವರ್ಯ ಟಕ್ಕರ್‌

  • ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು

    ಪಾಟ್ನಾದಲ್ಲಿ ಭೀಕರ ರಸ್ತೆ ಅಪಘಾತ – ಐವರು ಉದ್ಯಮಿಗಳು ಸ್ಥಳದಲ್ಲೇ ಸಾವು

    ಪಾಟ್ನಾ: ಇಲ್ಲಿನ ಪರ್ಸಾ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತಕ್ಕೆ (Patna Road Accident) ಐವರು ಉದ್ಯಮಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

    ಪಾಟ್ನಾ-ಗಯಾ-ದೋಭಿ ಚತುಷ್ಪಥ ರಸ್ತೆಯಲ್ಲಿ ಘಟನೆ ನಡೆದಿದೆ. ಮೃತ ಉದ್ಯಮಿಗಳನ್ನು (Businessmen) ರಾಜೇಶ್ ಕುಮಾರ್ (50), ಸಂಜಯ್ ಸಿಂಗ್ (55), ಕಮಲ್ ಕಿಶೋರ್ (38), ಪ್ರಕಾಶ್ ಚೌರಾಸಿಯಾ (35) ಮತ್ತು ಸುನಿಲ್ ಕುಮಾರ್ (38) ಎಂದು ಗುರುತಿಸಲಾಗಿದೆ. ಮೃತರೆಲ್ಲರೂ ಪಾಟ್ನಾದ ಪ್ರತಿಷ್ಠಿತ ಉದ್ಯಮಿಗಳಾಗಿದ್ದು, ಫತುಹಾದಿಂದ ತಡರಾತ್ರಿ ಕೆಲವು ಕೆಲಸ ಮುಗಿಸಿ ಪಾಟ್ನಾಕ್ಕೆ ಹಿಂತಿರುಗುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕೊಲೆ, ಸುಲಿಗೆ ಸೇರಿ 18 ಪ್ರಕರಣದಲ್ಲಿ ಬೇಕಾಗಿದ್ದ ಬಿಹಾರದ ಶಂಕಿತ ನಕ್ಸಲ್‌ ರಾಯಚೂರಲ್ಲಿ ಅರೆಸ್ಟ್‌

    ಫತುಹಾದಿಂದ ಪಾಟ್ನಾಗೆ ಹಿಂತಿರುಗುತ್ತಿದ್ದ ವೇಳೆ ಕಾರು ರಸ್ತೆಯಲ್ಲಿ ನಿಂತಿದ್ದ ಟ್ರಕ್‌ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ದುರಂತ ಸಂಭವಿಸಿದೆ. ಡಿಕ್ಕಿ ಹೊಡೆದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿತ್ತು, ಅರ್ಧ ಕಾರು ಟ್ರಕ್‌ ಕೆಳಗೆ ನುಗ್ಗಿದೆ. ಇದರಿಂದಾಗಿ ಕಾರಿನಲ್ಲಿದ್ದ ಎಲ್ಲಾ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: Bengaluru| ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ – ಒಂದೂವರೆ ವರ್ಷದ ಮಗು ದುರ್ಮರಣ

    ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಪರ್ಸಾ ಬಜಾರ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸಾಕಷ್ಟು ಹರಸಾಹಸದ ಬಳಿಕ ಪೊಲೀಸರು ಕಾರನ್ನು ತುಂಡು ಮಾಡಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಹತ್ತಿರದ ಆಸ್ಪತ್ರೆಗೆ ಕಳುಹಿಸಲಾಗಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ.


    ಇನ್ನು ಪ್ರಾಥಮಿಕ ಮೂಲಗಳ ಪ್ರಕಾರ ಅತಿವೇಗದ ಚಾಲನೆಯೇ ಕಾರಣ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಅಶ್ಲೀಲ ಕಾಮೆಂಟ್ ಕೇಸ್‌ – ಪೊಲೀಸರ ತನಿಖೆಗೆ ವಿಜಯಲಕ್ಷ್ಮಿ ನಿರಾಸಕ್ತಿ 

  • ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

    ಪಾಟ್ನಾದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯರ್ತರ ಬಡಿದಾಟ, ಕಲ್ಲು ತೂರಾಟ

    ಪಾಟ್ನಾ: ಬಿಹಾರ ಚುನಾವಣಾ ಕಣ ರಣಾಂಗಣವಾಗಿ ಮಾರ್ಪಟ್ಟಿದೆ. ರಾಹುಲ್ ಗಾಂಧಿಯ ಮತದಾರರ ಅಧಿಕಾರ ಯಾತ್ರೆಯಲ್ಲಿ (Voter Adhikar Yatra) ಪ್ರಧಾನಿ ಮೋದಿಯವ್ರನ್ನು (PM Modi) ನಿಂದಿಸಲಾಗಿದೆ ಎಂದು ಆರೋಪಿಸಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಪಾಟ್ನಾದಲ್ಲಿ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಘರ್ಷಣೆ ಏರ್ಪಟ್ಟಿದೆ.

    ರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಬಿಜೆಪಿಯ ಪ್ರತಿಭಟನಾ (BJP Protest Rally) ಮೆರವಣಿಗೆ ಬಿಹಾರ ಕಾಂಗ್ರೆಸ್ ಕಚೇರಿ ಸದಾಕತ್ ಆಶ್ರಮ ಬಳಿ ಸಾಗುವಾಗ ನಡುವೆ ಘರ್ಷಣೆ ಸಂಭವಿಸಿದೆ. ಇದನ್ನೂ ಓದಿ: ಅಮಿತ್ ಶಾ ತಲೆ ಕತ್ತರಿಸಿ ಪ್ರದರ್ಶನಕ್ಕಿಡಬೇಕು – TMC ಸಂಸದೆ ಮಹುವಾ ಮೊಯಿತ್ರಾ ಶಾಕಿಂಗ್ ಹೇಳಿಕೆ

    ಮೊದಲು ವಾಗ್ವಾದ ಏರ್ಪಟ್ಟಿದ್ದು, ಬಳಿಕ ಅದು ವಿಕೋಪಕ್ಕೆ ತಿರುಗಿ ಪರಸ್ಪರ ಕೋಲಿನಿಂದ ಹೊಡೆದುಕೊಂಡಿದ್ದಾರೆ. ನಂತರ ಕಲ್ಲು ತೂರಾಟ ಕೂಡ ನಡೆದಿದೆ. ಹೊಡೆದಾಟದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷದ ‘ಮತಗಳ್ಳತನ’ ಬಯಲು ಮಾಡಿದ ಸಿದ್ದರಾಮಯ್ಯ; ರಾಜಣ್ಣನಂತೆ ವಜಾ ಮಾಡ್ತೀರಾ – ರಾಗಾಗೆ ಅಶೋಕ್ ಸವಾಲ್

    ಕಾಂಗ್ರೆಸ್ ಕಚೇರಿಯ ಮುಂದೆ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದೆವು ಎಂದು ಬಿಜೆಪಿ ಕಾರ್ಯಕರ್ತರು ಹೇಳಿಕೊಂಡಿದ್ದಾರೆ. ಮತ್ತೊಂದೆಡೆ, ಬಿಜೆಪಿ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ. ಇದನ್ನೂ ಓದಿ: SITಯಿಂದ ತಿಮರೋಡಿ, ಚಿನ್ನಯ್ಯ ವಿಚಾರಣೆ – ಸಮೀರ್ ಆದಾಯ ಮೂಲ ಕೆದಕಿದ ಖಾಕಿ, ಇನ್ನಷ್ಟು ರಹಸ್ಯ ಬಯಲು!

  • ಪಾಟ್ನಾ | ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಇಬ್ಬರು ಆರೋಪಿಗಳ ಮೇಲೆ ಫೈರಿಂಗ್

    ಪಾಟ್ನಾ | ಐಸಿಯುಗೆ ನುಗ್ಗಿ ಗ್ಯಾಂಗ್‌ಸ್ಟರ್ ಹತ್ಯೆ – ಇಬ್ಬರು ಆರೋಪಿಗಳ ಮೇಲೆ ಫೈರಿಂಗ್

    ಪಾಟ್ನಾ: ಇಲ್ಲಿನ ಆಸ್ಪತ್ರೆಯ ಐಸಿಯುಗೆ ನುಗ್ಗಿ ಪೆರೋಲ್ ಮೇಲೆ ಬಂದಿದ್ದ ಖೈದಿಯನ್ನ ಕೊಲೆ ಮಾಡಿದ ಆರೋಪಿಗಳ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

    ಬಿಹಿಯಾ ಪೊಲೀಸ್ (Bihia police) ಠಾಣೆ ವ್ಯಾಪ್ತಿಯ ಕಟಿಯಾ ರಸ್ತೆಯಲ್ಲಿ ಮುಂಜಾನೆ 5 ಗಂಟೆ ಸುಮಾರಿಗೆ ಈ ಎನ್‌ಕೌಂಟರ್ ನಡೆದಿದೆ. ವಿಶೇಷ ಕಾರ್ಯಪಡೆ (STF) ಮತ್ತು ಸ್ಥಳೀಯ ಪೊಲೀಸರ ಜಂಟಿ ತಂಡ ಮೂವರು ಮೂವರು ಆರೋಪಿಗಳನ್ನು ಬಂಧಿಸಲು ತೆರಳಿದ್ದರು. ಈ ವೇಳೆ, ಆರೋಪಿಗಳು ಪೋಲೀಸರ ಮೇಲೆಯೇ ಗುಂಡು ಹಾರಿಸಲು ಯತ್ನಿಸಿದ್ದರು. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆ ವಿಮಾನ ದುರಂತ – ಸಾವಿನ ಸಂಖ್ಯೆ 27ಕ್ಕೆ ಏರಿಕೆ

    ಶರಣಾಗುವಂತೆ ಸೂಚಿಸಿದರು, ಆರೋಪಿಗಳು ದಾಳಿ ನಡೆಸಿದರು. ಈ ವೇಳೆ, ಪೊಲೀಸರು ಆತ್ಮರಕ್ಷಣೆಗಾಗಿ ಇಬ್ಬರು ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಮತ್ತೋರ್ವನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ರಾಯಚೂರು | ಫುಡ್ ಪಾಯಿಸನ್‌ನಿಂದ ತಂದೆ, ಇಬ್ಬರು ಮಕ್ಕಳು ಸಾವು

    ಇಬ್ಬರು ಆರೋಪಿಗಳಾದ ಬಲ್ವಂತ್ ಕುಮಾರ್ ಸಿಂಗ್ ಮತ್ತು ರವಿರಂಜನ್ ಕುಮಾರ್ ಸಿಂಗ್‌ಗೆ ಕಾಲಿಗೆ ಗುಂಡು ತಗುಲಿದ್ದು, ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೋರ್ವ ಆರೋಪಿ ಅಭಿಷೇಕ್ ಕುಮಾರ್‌ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

    ಏನಿದು ಪ್ರಕರಣ?
    ಪೆರೋಲ್ ಮೇಲೆ ಹೊರಗಿದ್ದ ದರೋಡೆಕೋರ ಚಂದನ್ ಮಿಶ್ರಾನನ್ನ (Chandan Mishtra) ಪಾಟ್ನಾದ (Patna) ಆಸ್ಪತ್ರೆಯ ಐಸಿಯುನಲ್ಲೇ ಗುಂಡು ಹಾರಿಸಿ ಐವರು ದುಷ್ಕರ್ಮಿಗಳು ಕೊಂದಿದ್ದರು. ಕ್ರಿಮಿನಲ್ ಹಿನ್ನೆಲೆ ಹೊಂದಿದ್ದ ಗ್ಯಾಂಗ್‌ಸ್ಟಾರ್ ಚಂದನ್ ಮಿಶ್ರಾನನ್ನು ವೈದ್ಯಕೀಯ ಚಿಕಿತ್ಸೆಗಾಗಿ ಪೆರೋಲ್ ಮೇಲೆ ಪಾಟ್ನಾದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ದರ್ಶನ್‌ ಕೇಸ್‌ – ಸುಪ್ರೀಂ ಕೋರ್ಟ್‌ಗೆ ಹಿರಿಯ ವಕೀಲ ಕಪಿಲ್ ಸಿಬಲ್ ಗೈರು

    ಇದನ್ನರಿತ ಎದುರಾಳಿ ಗ್ಯಾಂಗ್‌ನವರು ಗನ್ ಸಮೇತ ಆಸ್ಪತ್ರೆಗೆ ನುಗ್ಗಿ ಮನಸೋ ಇಚ್ಛೆ ಗುಂಡಿನ ಸುರಿಮಳೆಗೈದಿದ್ದರು. ಚಂದನ್ ಮಿಶ್ರಾ ದೇಹಕ್ಕೆ 12 ಬುಲೆಟ್ ಹೊಕ್ಕಿದ್ದು, ಆಸ್ಪತ್ರೆಯಲ್ಲೆ ಹತನಾಗಿದ್ದ. ಫೈರಿಂಗ್ ಬಳಿಕ ದಾಳಿಕೋರರು ಎಸ್ಕೇಪ್ ಆಗಿದ್ದರು. ಪಾಟ್ನಾದಿಂದ ಪರಾರಿಯಾಗಿ ಕೋಲ್ಕತ್ತಾದ ನ್ಯೂ ಟೌನ್ ವಸತಿ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ಇತ್ತ ಪ್ರಕರಣ ದಾಖಲಿಸಿಕೊಂಡಿದ್ದ ಬಿಹಾರ ಪೊಲೀಸರು ಆಸ್ಪತ್ರೆಯ ಸಿಸಿಟಿವಿ ದೃಶ್ಯಾವಳಿಗಳನ್ನಾಧರಿಸಿ ತನಿಖೆ ಆರಂಭಿಸಿದ್ದರು.

    ಈ ಮಧ್ಯೆ ಎಲ್ಲಾ ಆರೋಪಿಗಳು ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದ ವಸತಿ ಸಂಕೀರ್ಣದ ಫ್ಲಾಟ್‌ನಲ್ಲಿ ಅಡಗಿರುವುದಾಗಿ ಪೊಲೀಸರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಬಳಿಕ ಬಂಗಾಳ ಪೊಲೀಸರ ಸಹಾಯ ಪಡೆದು ದಾಳಿ ನಡೆಸಿದ ಪೊಲೀಸರು ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.

  • ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ ಆಸ್ಪತ್ರೆಯಲ್ಲಿ ಐವರ ಗ್ಯಾಂಗ್‌ನಿಂದ ಫೈರಿಂಗ್ – ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿ ಸಾವು

    ಪಾಟ್ನಾ: ಐವರ ಗ್ಯಾಂಗೊಂದು ಗನ್ ಹಿಡಿದು ಆಸ್ಪತ್ರೆಯೊಳಗೆ ನುಗ್ಗಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯನ್ನು ಗುಂಡಿಕ್ಕಿ ಕೊಲೆಗೈದಿರುವ ಘಟನೆ ಪಾಟ್ನಾದ (Patna) ಪರಾಸ್ ಆಸ್ಪತ್ರೆಯಲ್ಲಿ ನಡೆದಿದೆ.

    ಪೆರೋಲ್ ಮೇಲೆ ಹೊರಗಿದ್ದ ಬಕ್ಸಾರ್ ಜಿಲ್ಲೆಯ ನಿವಾಸಿ ಚಂದನ್ ಮಿಶ್ರಾ ಮೃತ ಆರೋಪಿ. ದಾಳಿಕೋರರನ್ನು ರಿಯಲ್ ಎಸ್ಟೇಟ್‌ಗೆ ಸಂಬಂಧಿಸಿದ ಬಿಲ್ಡರ್‌ಗಳಾಗಿ ಕೆಲಸ ಮಾಡುತ್ತಿದ್ದರು ಎಂದು ಗುರುತಿಸಲಾಗಿದೆ. ಗುರುವಾರ ಬೆಳಗ್ಗೆ ಐವರು ದುಷ್ಕರ್ಮಿಗಳು ಕೃತ್ಯ ಎಸಗಿದ್ದು, ಘಟನೆಯ ದೃಶ್ಯಗಳು ಆಸ್ಪತ್ರೆಯಲ್ಲಿದ್ದ ಸಿಸಿಟವಿ ಕ್ಯಾಮರಾದಲ್ಲಿ ಸೆರೆಯಾಗಿದೆ.ಇದನ್ನೂ ಓದಿ: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂಗೆ ಬರಬೇಡ ಅಂದಿದ್ದೇ ಬಿಎಸ್‍ವೈ: ಯತ್ನಾಳ್ ಬಾಂಬ್

    ವಿಡಿಯೋದಲ್ಲಿ ಐವರ ಗ್ಯಾಂಗ್ ಗನ್ ಹಿಡಿದು ಆಸ್ಪತ್ರೆಯ ಒಳನುಗ್ಗಿದ್ದಾರೆ. ವಾರ್ಡ್ವೊಂದಕ್ಕೆ ತೆರಳಿ, ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಲೆ ಆರೋಪಿಯ ಮೇಲೆ ಗುಂಡು ಹಾರಿಸಿ, ತಕ್ಷಣ ಅಲ್ಲಿಂದ ಪರಾರಿಯಾಗಿದ್ದಾರೆ. ಈ ವೇಳೆ ಗಾಯಗೊಂಡಿದ್ದ ಚಂದನ್ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಆಸ್ಪತ್ರೆಯಲ್ಲಿದ್ದ ಇತರರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.

    ಮೃತ ಚಂದನ್ ಕೊಲೆ ಆರೋಪದಲ್ಲಿ ಜೈಲುಪಾಲಾಗಿದ್ದ. ಆದರೆ ಆರೋಗ್ಯ ಸಮಸ್ಯೆಯಿರುವ ಕಾರಣ ಚಿಕಿತ್ಸೆ ಪಡೆಯಲು ಪೆರೋಲ್ ಮೇಲೆ ಹೊರಬಂದಿದ್ದ. ಇದೇ ವೇಳೆ ಅವನ ವಿರೋಧಿ ಗ್ಯಾಂಗ್‌ವೊಂದು ಸೇಡು ತೀರಿಸಿಕೊಳ್ಳಲು ದಾಳಿ ನಡೆಸಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    ಇನ್ನೂ ದಾಳಿಕೋರರು ಈ ಮುಂಚೆ ಹಲವು ಅಪರಾಧಗಳಲ್ಲಿ ಭಾಗಿಯಾಗಿದ್ದರು, ಸದ್ಯ ಅವರ ಫೋಟೋ ನಮ್ಮ ಬಳಿಯಿದ್ದು, ಪತ್ತೆಗಾಗಿ ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಕೊಡಗು ಜಿಲ್ಲೆಯಲ್ಲಿ ಮಿತಿಮೀರಿದ ಕಾಡಾನೆಗಳ ಉಪಟಳ – ಎಚ್ಚರಿಕೆ ನೀಡಲು AI ಸೈರನ್ ಅಳವಡಿಕೆ

    ಇದನ್ನೂ ಓದಿ: ಮಂಗಳೂರು| ಕಿರಿಯ ವಯಸ್ಸಿನಲ್ಲೇ ರೋಲ್ಸ್‌ ರಾಯ್ಸ್‌ನಲ್ಲಿ ಉದ್ಯೋಗ; ವರ್ಷಕ್ಕೆ 72 ಲಕ್ಷ ಸಂಬಳ- ಯುವತಿಗೆ ಸನ್ಮಾನ

  • ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

    ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

    ಪಾಟ್ನಾ: ದೆಹಲಿಯಿಂದ (Delhi) ಪಾಟ್ನಾಗೆ (Patna) ಹೊರಟಿದ್ದ ಇಂಡಿಗೋ ವಿಮಾನವೊಂದು ಲ್ಯಾಂಡಿಂಗ್ ವೇಳೆ ಸಮಸ್ಯೆಯಾದ ಪರಿಣಾಮ ಪೈಲಟ್‌ನ ಚಾಣಾಕ್ಷತನದಿಂದ ಮತ್ತೆ ಟೇಕಾಫ್ ಆಗಿ ಬಳಿಕ ಸೇಫ್ ಲ್ಯಾಂಡಿಂಗ್ ಆಗಿದೆ.

    ಮಂಗಳವಾರ (ಜು.14) ರಾತ್ರಿ ದೆಹಲಿಯಿಂದ ಪಾಟ್ನಾಗೆ ಪ್ರಯಾಣಿಸುತ್ತಿದ್ದ 6ಇ2482 ಇಂಡಿಗೋ ವಿಮಾನ ಪಾಟ್ನಾದ ಜಯ ಪ್ರಕಾಶ್ ನಾರಾಯಣ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Jay Prakash Narayan International Airport) ಲ್ಯಾಂಡಿಂಗ್ ಆಗುವಾಗ ಕೂದಲೆಳೆ ಅಂತರದಲ್ಲಿ ಪಾರಾಗಿದೆ.ಇದನ್ನೂ ಓದಿ: ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ – ಬಟ್ಟೆ ಸುತ್ತಿ ಕಿಟಿಕಿಯಿಂದ ಆಚೆ ಎಸೆದ ಪಾಪಿ ತಾಯಿ

    ವಿಮಾನವು ಲ್ಯಾಂಡ್ ಆಗುವಾಗ ಗೊತ್ತುಪಡಿಸಿದ ಟಚ್‌ಡೌನ್ ಪಾಯಿಂಟ್‌ಗಿಂತ ಮುಂದೆ ಇಳಿದಿದೆ. ಇದನ್ನರಿತ ಪೈಲಟ್ ಉಳಿದ ರನ್‌ವೇ ಉದ್ದವು ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡ್ ಮಾಡಲು ಸಾಧ್ಯವಿಲ್ಲ ಎನ್ನುವುದನ್ನು ಅರಿತು ಮತ್ತೆ ಚಾಣಾಕ್ಷತನದಿಂದ ಟೇಕಾಫ್ ಮಾಡಿದ್ದಾರೆ. ಬಳಿಕ ಮೂರು ಸುತ್ತು ಹೊಡೆದು ರಾತ್ರಿ 9 ಗಂಟೆಗೆ ಸುರಕ್ಷಿತವಾಗಿ ಲ್ಯಾಂಡಿಂಗ್ ಆಗಿದೆ.

    ವಿಮಾನದಲಿದ್ದ 173 ಪ್ರಯಾಣಿಕರು ಸುರಕ್ಷಿತವಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಟ್ನಾ ವಿಮಾನ ನಿಲ್ದಾಣದ ರನ್‌ವೇ ಚಿಕ್ಕದಾಗಿದ್ದು, ಲ್ಯಾಂಡಿಂಗ್ ಸಮಯದಲ್ಲಿ ಆಗಾಗ ಸವಾಲುಗಳು ಎದುರಾಗುತ್ತಿರುತ್ತವೆ.ಇದನ್ನೂ ಓದಿ: ಎರಡು ಬಸ್ಸುಗಳು ಮುಖಾಮುಖಿ ಡಿಕ್ಕಿ – ಹಲವು ಪ್ರಯಾಣಿಕರಿಗೆ ಗಾಯ

  • ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

    ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

    ಪಾಟ್ನಾ: ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ ಮಾಡಿರುವ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ನಡೆದಿದೆ.

    ಸಾರ್ವಜನಿಕರ ಎದುರೇ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ವಿಧಾನಸಭಾ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜ್ಯದಲ್ಲಿ ಒಂದು ವಾರದಲ್ಲಿ ನಡೆದ ಮೂರನೇ ಕೊಲೆ ಇದಾಗಿದೆ. ಪಾಟ್ನಾದಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಕಳವಳ ವ್ಯಕ್ತವಾಗಿದೆ.

    ವಕೀಲ ಜಿತೇಂದ್ರ ಕುಮಾರ್ ಅವರನ್ನು ಗುಂಡು ಹಾರಿಸಿ ಕೊಲ್ಲಲಾಯಿತು. ಕನಿಷ್ಠ ಮೂರು ಗುಂಡುಗಳನ್ನು ಹಾರಿಸಿ ದಾಳಿಕೋರರು ಪರಾರಿಯಾದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದಾಳಿಕೋರರನ್ನು ಗುರುತಿಸಲು ಪೊಲೀಸರು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ.

    ಗಂಭೀರ ಗಾಯಗೊಂಡಿದ್ದ ವಕೀಲನನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ದಾಳಿ ನಡೆದಾಗ ಜಿತೇಂದ್ರ ಕುಮಾರ್ ರಸ್ತೆ ಬದಿಯ ಅಂಗಡಿಯಲ್ಲಿ ಚಹಾ ಕುಡಿಯಲು ಹೋಗಿದ್ದಾಗ ಘಟನೆ ನಡೆದಿದೆ. ಅಪರಾಧ ನಡೆದ ಸ್ಥಳದಿಂದ ವಿಧಿವಿಜ್ಞಾನ ತಂಡವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

    ಈ ವಾರದ ಆರಂಭದಲ್ಲಿ ಬಿಹಾರದ ಪ್ರಮುಖ ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆಯಾಗಿತ್ತು. ಇವರ ಬೆನ್ನಲ್ಲೇ ಪಶುವೈದ್ಯ ಮತ್ತು ರೈತರಾಗಿದ್ದ ಬಿಜೆಪಿ ನಾಯಕ ಸುರೇಂದ್ರ ಕೆವಾತ್ ಅವರನ್ನು ಸಹ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

  • ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

    ಬಿಹಾರದಲ್ಲಿ ಗುಂಡಿಕ್ಕಿ ಮತ್ತೋರ್ವ ಬಿಜೆಪಿ ನಾಯಕನ ಹತ್ಯೆ

    ಪಾಟ್ನಾ: ಬಿಹಾರದಲ್ಲಿ (Bihar) ಉದ್ಯಮಿ ಗೋಪಾಲ್ ಖೇಮ್ಕಾ ಹತ್ಯೆ ಬೆನ್ನಲ್ಲೇ ಮತ್ತೋರ್ವ ಬಿಜೆಪಿ ನಾಯಕನನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

    ಸುರೇಂದ್ರ ಕೆವತ್ (52) ಹತ್ಯೆಯಾದ ಬಿಜೆಪಿ ನಾಯಕ. ಸುರೇಂದ್ರ ಅವರು ಶೇಕ್‌ಪುರದಲ್ಲಿರುವ ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿದ್ದರು. ಇದನ್ನೂ ಓದಿ: Davanagere | ವಾಕಿಂಗ್ ಹೋಗುತ್ತಿರುವಾಗಲೇ ಕುಸಿದು ಬಿದ್ದು ಉದ್ಯಮಿ ಸಾವು

    ಸುರೇಂದ್ರ ಅವರಿಗೆ 4 ಗುಂಡುಗಳು ತಗುಲಿದ್ದು, ತಕ್ಷಣ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮೈಸೂರು | ಹಿರಿಯ ಪತ್ರಕರ್ತ ಕೆ.ಬಿ.ಗಣಪತಿ ನಿಧನ

    ಬಿಹಾರದಲ್ಲಿ 2 ವಾರದ ಅಂತರದಲ್ಲಿ ಇಬ್ಬರು ಬಿಜೆಪಿ ನಾಯಕರ ಹತ್ಯೆ ಮಾಡಲಾಗಿದ್ದು, ಉದ್ಯಮಿ ಹಾಗೂ ಬಿಜೆಪಿ ನಾಯಕ ಗೋಪಾಲ್ ಖೇಮ್ಕಾ (Gopal Khemka) ಅವರನ್ನು ಮನೆಯ ಹೊರಗೆ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಈ ಪ್ರಕರಣ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕುಡಿದ ಅಮಲಿನಲ್ಲಿ ಫುಟ್‌ಪಾತ್‌ನಲ್ಲಿ ಮಲಗಿದ್ದವರ ಮೇಲೆ ಹರಿದ ಆಡಿ ಕಾರು – ಐವರಿಗೆ ಗಾಯ

    ಇದೀಗ ಸಿಎಂ ನಿತೀಶ್ ಕುಮಾರ್ ಆಡಳಿತದ ಬಗ್ಗೆ ವಿಪಕ್ಷಗಳು ಕಿಡಿಕಾರುತ್ತಿದ್ದು, ಮುಖ್ಯಮಂತ್ರಿಯವರ ಆರೋಗ್ಯದ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೆ ಇಬ್ಬರು ನಿಷ್ಪ್ರಯೋಜಕ ಬಿಜೆಪಿ ಉಪಮುಖ್ಯಮಂತ್ರಿಗಳು ಏನು ಮಾಡುತ್ತಿದ್ದಾರೆ ಎಂದು ಆಕ್ರೋಶ ಹೊರಹಾಕುತ್ತಿದ್ದಾರೆ.

  • ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

    ಪಾಟ್ನಾ: ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ವೇಗವಾಗಿ ಬಂದ ಸ್ಕಾರ್ಪಿಯೋ ಕಾರು ಪೊಲೀಸರಿಗೆ ಡಿಕ್ಕಿಯೊಡೆದ ಪರಿಣಾಮ ಓರ್ವ ಮಹಿಳಾ ಕಾನ್ಸ್‌ಟೆಬಲ್‌ (Woman Constable) ಸಾವನ್ನಪ್ಪಿದ್ದು, ಇಬ್ಬರು ಅಧಿಕಾರಿಗಳು ಗಾಯಗೊಂಡಿರುವ ಘಟನೆ ಪಾಟ್ನಾದ ಅಟಲ್ ಪಥ್‌ನಲ್ಲಿ (Atal Path) ನಡೆದಿದೆ.

    ಬುಧವಾರ ತಡರಾತ್ರಿ ಪಾಟ್ನಾದ (Patna) ಶ್ರೀಕೃಷ್ಣ ಪುರಿ ಪ್ರದೇಶದ ಅಟಲ್ ಪಥ್‌ನಲ್ಲಿ ಗಸ್ತಿನಲ್ಲಿದ್ದ ಪೊಲೀಸರ ತಂಡ ವಾಹನ ತಪಾಸಣೆ ನಡೆಸುತ್ತಿತ್ತು. ಶ್ರೀಕೃಷ್ಣ ಪುರಿ ಪೊಲೀಸ್ ಠಾಣೆಯ ಸಬ್-ಇನ್ಸ್‌ಪೆಕ್ಟರ್, ಸಹಾಯಕ ಸಬ್-ಇನ್ಸ್‌ಪೆಕ್ಟರ್ ಮತ್ತು ಮಹಿಳಾ ಕಾನ್‌ಸ್ಟೆಬಲ್ ಸ್ಥಳದಲ್ಲಿದ್ದರು. ಕಾರು ತಪಾಸಣೆ ನಡೆಸುವ ವೇಳೆ ವೇಗವಾಗಿ ಬಂದ ಮತ್ತೊಂದು ಕಾರು (Scorpio SUV) ತಪಾಸಣೆ ನಡೆಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಡಿದೆ. ಪರಿಣಾಮ ಕಾನ್ಸ್‌ಟೆಬಲ್‌ ಇಬ್ಬರು ಅಧಿಕಾರಿಗಳು ಗಾಯಗೊಂಡಿದ್ದಾರೆ. ಇದನ್ನೂ ಓದಿ:  `ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ

    ಗಾಯಗೊಂಡ ಪೊಲೀಸರನ್ನ ತಕ್ಷಣ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಆದ್ರೆ ಚಿಕಿತ್ಸಾ ಸಮಯದಲ್ಲಿ ಮಹಿಳಾ ಕಾನ್‌ಸ್ಟೆಬಲ್ ಸಾವನ್ನಪ್ಪಿದ್ದಾರೆ. ಉಳಿದ ಇಬ್ಬರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅವ್ಕಾಶ್ ಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

    ಅಪಘಾತದ ಬಳಿಕ ಸ್ಕಾರ್ಪಿಯೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಆದ್ರೆ ವಾಹನವನ್ನ ವಶಪಡಿಸಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಚಾಲಕನಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಪಾಕ್‌ ಮಹಾನ್‌ ಪಾಲುದಾರ; ಪಾಕ್‌ ಹೊಗಳಿದ ಅಮೆರಿಕ

  • Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    Bihar | ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವು

    ಪಾಟ್ನಾ: ಕಳ್ಳಭಟ್ಟಿ ಸೇವಿಸಿ 20 ಮಂದಿ ಸಾವಿಗೀಡಾಗಿರುವ ಘಟನೆ ಬಿಹಾರ (Bihar) ರಾಜ್ಯದ ಸಿವಾನ್ ಮತ್ತು ಸರನ್ ಜಿಲ್ಲೆಯಲ್ಲಿ ನಡೆದಿದೆ.

    ಅಧಿಕಾರಿಗಳ ಮಾಹಿತಿ ಪ್ರಕಾರ ಕಳ್ಳಭಟ್ಟಿ (Liquior) ಸೇವನೆಯಿಂದ 6 ಜನ ಸಾವನ್ನಪ್ಪಿದ್ದರು. 12 ಮಂದಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಧಿಕಾರಿಗಳು ಮೃತರ ಹಾಗೂ ಚಿಕಿತ್ಸೆಗೆ ಒಳಪಟ್ಟವರ ಯಾವುದೇ ಗುರುತನ್ನು ಬಹಿರಂಗಪಡಿಸಿಲ್ಲ.ಇದನ್ನೂ ಓದಿ: ಮದುವೆಯಾದ 12 ವರ್ಷಗಳ ಬಳಿಕ ಚೊಚ್ಚಲ ಮಗುವಿನ ನಿರೀಕ್ಷೆಯಲ್ಲಿ ರಾಧಿಕಾ ಆಪ್ಟೆ

    ಸಿವಾನ್ ಜಿಲ್ಲೆಯ ಮ್ಯಾಜಿಸ್ಟ್ರೇಟ್ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮಘಾರ್ ಮತ್ತು ಔರಿಯಾ ಪಂಚಾಯತ್ ವ್ಯಾಪ್ತಿಯಲ್ಲಿ ಮೂವರು ಸಾವನ್ನಪ್ಪಿದ್ದು, ಬೆಳಗ್ಗೆ 7:30 ಸುಮಾರಿಗೆ ಮಾಹಿತಿ ಲಭಿಸಿದೆ. ತಕ್ಷಣವೇ ಸ್ಥಳಕ್ಕೆ ಅಧಿಕಾರಗಳ ತಂಡವನ್ನು ಕಳುಹಿಸಲಾಗಿದ್ದು, 12 ಜನರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು. ಈ ವೇಳೆ ಮಾರ್ಗಮಧ್ಯೆ ಇನ್ನೋರ್ವ ಸಾವನ್ನಪ್ಪಿದ್ದಾನೆ ಎಂದು ತಿಳಿಸಿದ್ದಾರೆ.

    ಸದ್ಯ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಲಾಗಿದ್ದು, ವರದಿಯ ಬಳಿಕ ಸಾವಿಗೆ ನಿಖರ ಕಾರಣ ಏನು ಎಂಬುವುದನ್ನು ತಿಳಿಸಲಾಗುವುದು ಎಂದರು. ಸದ್ಯ ಎರಡು ಜಿಲ್ಲೆಯಲ್ಲಿ ಆಡಳಿತ ಮಂಡಳಿಯು ತನಿಖೆ ನಡೆಸುತ್ತಿದೆ. ಜೊತೆಗೆ ಮಘಾರ್ ಮತ್ತು ಔರಿಯಾ ಪಂಚಾಯಿತಿ ವ್ಯಾಪ್ತಿಯ ಇಬ್ಬರು ಚೌಕಿದಾರ್‌ರನ್ನು ಇಲಾಖೆಯು ಅಮಾನತುಗೊಳಿಸಿದೆ.

    ಮತ್ತೊಂದು ಪ್ರಕರಣದಲ್ಲಿ, ಅ.16ರಂದು ಕಳ್ಳಭಟ್ಟಿ ಸೇವಿಸಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬಿಹಾರ ರಾಜ್ಯದ ಇಬ್ರಾಹಿಂಪುರ ಪ್ರದೇಶದಲ್ಲಿ ನಡೆದಿದೆ.

    ಸರನ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಮನ್ ಸಮೀರ್ ಮಾತನಾಡಿ, ಮೂವರು ಚಿಕಿತ್ಸೆ ಪಡೆಯುತ್ತಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿಯ ನಂತರ ಸಾವಿನ ನಿಖರವಾದ ಕಾರಣ ತಿಳಿಸಲಾಗುವುದು ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೂಚ್ ಸೇವಿಸಿರುವ ಮಾಹಿತಿ ಲಭಿಸಿದ್ದು, ತನಿಖೆ ನಡೆಸುತ್ತಿದ್ದೇವೆ ಎಂದು ತಿಳಿಸಿದರು.

    2016ರ ಏಪ್ರಿಲ್‌ನಲ್ಲಿ ಬಿಹಾರ ಸರ್ಕಾರವು ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿದೆ. ನಿಷೇಧಿಸಿದ ನಂತರ ಅಕ್ರಮ ಮದ್ಯ ಸೇವನೆಯಿಂದ 150ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಬಿಹಾರ ಸರ್ಕಾರ ತಿಳಿಸಿದೆ.ಇದನ್ನೂ ಓದಿ: ಮಲ್ಲೇಶ್ವರಂ ಸ್ಫೋಟದಲ್ಲಿ ಭಾಗಿಯಾಗಿದ್ದ ಉಗ್ರನಿಂದ ಸೆಂಟ್ರಲ್ ಜೈಲಿನಿಂದಲೇ ಹನಿಟ್ರ್ಯಾಪ್?