Tag: ಪಾಣಕ್ಕಾಡ್ ತಂಗಳ್

  • ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಸ್ಥ ಪಾಣಕ್ಕಾಡ್ ತಂಙಳ್ ನಿಧನ

    ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ ಮುಖ್ಯಸ್ಥ ಪಾಣಕ್ಕಾಡ್ ತಂಙಳ್ ನಿಧನ

    ತಿರುವನಂತಪುರಂ: ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ರಾಜ್ಯಾಧ್ಯಕ್ಷ ಪಾಣಕ್ಕಾಡ್ ಸೈಯದ್ ಹೈದರಾಲಿ ಶಿಹಾಬ್ ತಂಙಳ್(74) ಅವರು ನಿಧರಾಗಿದ್ದಾರೆ.

    ಮಲಪ್ಪುರಂನ ಪಾಣಕ್ಕಾಡ್‍ನ ಪುಕ್ಕೋಯ ಕುಟುಂಬದ ಸದಸ್ಯರು ಪಾಣಕ್ಕಾಡ್ ಸೈಯದ್ ಹೈದರಾಲಿ ಶಿಹಾಬ್ ತಂಙಳ್ ಅವರು 2009 ರಲ್ಲಿ ಐಯುಎಂಎಲ್‍ನಲ್ಲಿ ರಾಜ್ಯಾಧ್ಯಕ್ಷರಾದರು. ಅದಕ್ಕೂ ಮುನ್ನ ಮುಸ್ಲಿಂ ಲೀಗ್‍ನ ಮಲಪ್ಪುರಂ ಜಿಲ್ಲಾಧ್ಯಕ್ಷರಾಗಿ 18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ಜೊತೆಗೆ ಹೈದರ್ ಅಲಿ ಶಿಹಾಬ್ ತಂಙಳ್ ಅವರು ಕೇರಳದ ಸುನ್ನಿ ಮುಸ್ಲಿಂ ಸಂಘಟನೆಗಳಲ್ಲಿ ಒಂದಾದ ಸಮಸ್ತ ಕೇರಳ ಜಮಿಯ್ಯತುಲ್ ಉಲಮಾದ ಬಣದ ಉಪಾಧ್ಯಕ್ಷರೂ ಆಗಿದ್ದರು. ಜೊತೆಗೆ ಕೇರಳದ ಸುನ್ನಿ ಮುಸ್ಲಿಂ ಸಂಘಟನೆಗಳಲ್ಲಿ ಒಂದಾದ ಸಮಸ್ತ ಕೇರಳ ಜಮಿಯ್ಯತುಲ್ ಉಲಮಾದ ಬಣದ ಉಪಾಧ್ಯಕ್ಷರಾಗಿದ್ದರು. ಇದನ್ನೂ ಓದಿ:  ಬಾಹುಬಲಿ ಕಟ್ಟಪ್ಪನ ಬಗ್ಗೆ ಪ್ರಭಾಸ್ ಹೇಳಿದ್ದೇನು ಗೊತ್ತಾ?

    ಪಾಣಕ್ಕಾಡ್ ಸಯ್ಯಿದ್ ಹೈದರ್ ಅಲಿ ಶಿಹಾಬ್ ತಂಙಳ್ ಅವರ ನಿಧನ ಕುರಿತಂತೆ ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದು, ಕೇರಳ ರಾಜಕೀಯದ ಪುಟ್ಟ ದೈತ್ಯ ಎಂದು ಬಣ್ಣಿಸಿದ್ದಾರೆ. ಮತ್ತೊಂದೆಡೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಅವರು, ತಂಙಳ್ ಅವರು ಅತ್ಯಂತ ವಿನಮ್ರ ವ್ಯಕ್ತಿಯಾಗಿದ್ದರು. ಕಳೆದ ಕೆಲವು ವರ್ಷಗಳಿಂದ ನಾನು ಅವರೊಂದಿಗೆ ನಿಕಟ ಸಂವಾದ ನಡೆಸಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.

    ಪಾಣಕ್ಕಾಡ್ ಸಯ್ಯಿದ್ ಹೈದರಾಲಿ ಶಿಹಾಬ್ ತಂಙಳ್ ಅವರ ಅಂತ್ಯಕ್ರಿಯೆ ಸೋಮವಾರ ಪಾಣಕ್ಕಾಡಿನಲ್ಲಿ ನಡೆಯಲಿದೆ. ಇದನ್ನೂ ಓದಿ:  ಕಾರ್ ಅಪಘಾತದ ಬಗ್ಗೆ ಹೊಸ ಹಾಡು ರಚಿಸಿದ ಕಚ್ಚಾ ಬಾದಮ್ ಗಾಯಕ ಭುಬನ್