Tag: ಪಾದಪೂಜೆ

  • ನಟಿ ಪ್ರಣೀತಾ ಗಂಡನ ಪಾದಪೂಜೆ : ಸಮರ್ಥಿಸಿಕೊಂಡ ನಟಿ

    ನಟಿ ಪ್ರಣೀತಾ ಗಂಡನ ಪಾದಪೂಜೆ : ಸಮರ್ಥಿಸಿಕೊಂಡ ನಟಿ

    ಳೆದ ಬಾರಿಯಂತೆ ಈ ಸಲವೂ ಭೀಮನ ಅಮವಾಸ್ಯೆ ದಿನ ಗಂಡನ ಪಾದಪೂಜೆ (Padapooje) ಮಾಡಿ ಫೋಟೋ ಶೇರ್ ಮಾಡಿದ್ದರು ನಟಿ ಪ್ರಣೀತಾ ಸುಭಾಷ್ (Pranitha Subhash). ಈ ಅಮವಾಸ್ಯೆಯ ಹಿನ್ನೆಲೆ, ಗಂಡನ ಪಾದಪೂಜೆ ಏಕೆ ಮಾಡಬೇಕು ಎಂಬಿತ್ಯಾದಿ ವಿವರಗಳನ್ನು ತಿಳಿಸಿದ್ದರು. ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನು ಮರೆಯಬಾರದು ಎಂದು ಬೋಧನೆ ಕೂಡ ಮಾಡಿದ್ದರು.

    ಕಳೆದ ಸಲವೂ ಕೆಲವರು ಈ ಪಾದಪೂಜೆಯ ಬಗ್ಗೆ ತಕರಾರು ತೆಗೆದಿದ್ದರು. ಈ ಬಾರಿಯೂ ಹಲವರು ಮತ್ತೆ ಪ್ರತಿರೋಧ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಪ್ರಣೀತಾ, ತಕ್ಕದಾದ ಉತ್ತರವನ್ನೇ ನೀಡಿದ್ದಾರೆ. ‘ನಾನು ನನ್ನ ಗಂಡನ ಪಾದಪೂಜೆ ಮಾಡಿದ್ದೇನೆ. ನಿಮಗೇನು ಸಮಸ್ಯೆ? ನೀವು ಏನೇ ಕಾಮೆಂಟ್ ಮಾಡಿದರೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನಾನು ನನ್ನ ಸಂಸ್ಕೃತಿಯಲ್ಲಿ ಬದುಕುತ್ತಿರುವೆ’ ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಸಿನಿಮಾದಲ್ಲಿ ಐಕಾನ್ ಸ್ಟಾರ್ ಪುತ್ರಿ?

    ಜೊತೆಗೆ ಸನಾತನ ಧರ್ಮದಲ್ಲಿ ಒಂದೊಂದು ಆಚರಣೆಗೂ ಒಂದೊಂದು ಮಹತ್ವವಿದೆ ಎಂದಿರುವ ಪ್ರಣೀತಾ, ಎಲ್ಲ ಆಚರಣೆಗಳಿಗೂ ಅದರ ಹಿಂದೆ ಒಳಿತನ್ನು ಬಯಸುವುದೇ ಆಗಿದೆ ಎಂದಿದ್ದಾರೆ. ಎಲ್ಲದಕ್ಕೂ ಪಿತೃಪ್ರಧಾನ ವ್ಯವಸ್ಥೆಯನ್ನು ಎಳೆದು ತರಬೇಡಿ ಎಂದು ಕಿವಿ ಮಾತೂ ಹೇಳಿದ್ದಾರೆ. ಎಷ್ಟೋ ಬಾರಿ ಸ್ತ್ರಿ ದೇವತೆಗಳನ್ನೂ ನಾವು ಪೂಜಿಸುತ್ತವೆ. ಅದನ್ನು ನೆನಪಿಡಬೇಕು ಎನ್ನುವುದು ಪ್ರಣೀತಾ ವಾದ.

    ಕನ್ನಡ ಸಿನಿಮಾ ಮೂಲಕ ಸಿನಿ ರಂಗಕ್ಕ ಎಂಟ್ರಿ ಕೊಟ್ಟ ಪ್ರಣಿತಾ, ಹಿಂದಿ,ತೆಲುಗು, ತಮಿಳು ಸೇರಿದಂತೆ ಸ್ಟಾರ್ ನಟರ ಜೊತೆ ಪ್ರಣಿತಾ ನಟಿಸಿದ್ದಾರೆ. ಡಿಮ್ಯಾಂಡ್ ಇರುವಾಗಲೇ ಉದ್ಯಮಿ ನಿತಿನ್ ಜೊತೆ ಲಾಕ್‌ಡೌನ್‌ನಲ್ಲಿ ಮದುವೆಯಾದರು. ಹಲವು ವರ್ಷಗಳ ಪ್ರೀತಿಗೆ ಗುರುಹಿರಿಯರ ಸಮ್ಮತಿ ಪಡೆದು ದಾಂಪತ್ಯ (Wedding) ಜೀವನಕ್ಕೆ ನಟಿ ಕಾಲಿಟ್ಟರು. ಇವರ ಪ್ರೀತಿಗೆ ಸಾಕ್ಷಿಯಾಗಿ ಈಗ ಮುದ್ದಾದ ಮಗಳಿದ್ದಾಳೆ.

     

    ನಿನ್ನೆ ಬೆಳಿಗ್ಗೆ ಭೀಮನ ಅಮಾವ್ಯಾಸೆಯಂದು(Bheemana Amavasye) ಪತಿ ನಿತಿನ್‌ಗೆ(Nithin) ಪಾದ ಪೂಜೆ ಮಾಡಿರುವ ಫೋಟೋವನ್ನ ನಟಿ ಶೇರ್ ಮಾಡಿದ್ದರು. ಸನಾತನ ಧರ್ಮದಲ್ಲಿ ಭೀಮನ ಅಮಾವ್ಯಾಸೆಗೆ ಹೆಚ್ಚಿನ ಮಹತ್ವವಿದೆ ಎಂದು ಎಂದಿದ್ದರು. ದೇವಿಯರನ್ನು ಸಮಾನವಾಗಿ ಪೂಜಿಸುವ ಕೆಲವು ನಂಬಿಕೆಗಳಲ್ಲಿ ಇದು ಒಂದಾಗಿದೆ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಈ ಪೋಸ್ಟಕ್ ಹಲವರು ನೆಗೆಟಿವ್ ಕಾಮೆಂಟ್ ಮಾಡಿದ್ದರು. ಇಂತಹ ಗುಲಾಮಗಿರಿ ಬೇಡ ಎಂದು ಕಿವಿಮಾತು ಹೇಳಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಜನ್ಮದಾತರ ಪಾದಪೂಜೆ ಮಾಡಿ ವಿದ್ಯಾರ್ಥಿಗಳಿಂದ ವಿಶೇಷವಾಗಿ ಹೊಸ ವರ್ಷಾಚರಣೆ

    ಜನ್ಮದಾತರ ಪಾದಪೂಜೆ ಮಾಡಿ ವಿದ್ಯಾರ್ಥಿಗಳಿಂದ ವಿಶೇಷವಾಗಿ ಹೊಸ ವರ್ಷಾಚರಣೆ

    ಶಿವಮೊಗ್ಗ: ಕುಡಿದು, ಕುಣಿದು ಕುಪ್ಪಳಿಸಿ ಹೊಸ ವರ್ಷವನ್ನು ಆಚರಿಸುವುದು ಸಾಮಾನ್ಯ. ಆದರೆ ಶಿವಮೊಗ್ಗದ ಶಾಲೆಯೊಂದರಲ್ಲಿ ಹೊಸವರ್ಷದ ದಿನದಂದು ಪೋಷಕರ ಪಾದಪೂಜೆ ಮಾಡುವ ಮೂಲಕ ಮಕ್ಕಳು ಹೊಸ ವರ್ಷಾಚರಣೆ ಮಾಡಿದ್ದಾರೆ.

    ಶಿವಮೊಗ್ಗ ತಾಲೂಕು ಅನುಪಿನಕಟ್ಟೆಯಲ್ಲಿನ ರಾಮಕೃಷ್ಣ ಗುರುಕುಲ ವಸತಿ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಹೊಸವರ್ಷದ ದಿನದಂದು ರೀತಿ ಕೇಕ್ ಕಟ್ ಮಾಡಿ, ಡ್ಯಾನ್ಸ್ ಮಾಡಿ ಆಚರಣೆ ಮಾಡುವುದಿಲ್ಲ. ಬದಲಿಗೆ ವಿದ್ಯಾರ್ಥಿಗಳು ಸತ್ಯನಾರಾಯಣ ಪೂಜೆ ಹಾಗೂ ತಮ್ಮ ಜನ್ಮದಾತರ ಪಾದಪೂಜೆ ಮಾಡುವ ಮೂಲಕ ಹೊಸ ವರ್ಷಾಚರಣೆ ಮಾಡುತ್ತಾರೆ.

    ಹೊಸ ವರ್ಷದ ದಿನದಂದು ಪೋಷಕರು ಎಲ್ಲರೂ ಸಾಂಪ್ರದಾಯಿಕ ಉಡುಪು ಧರಿಸಿ ಶಾಲೆಗೆ ಬರುತ್ತಾರೆ. ಪುರುಷರು ಪಂಚೆ, ಅಂಗಿ ಧರಿಸಿದರೆ, ಮಹಿಳೆಯರು ಸೀರೆಯಲ್ಲಿ ಬರುತ್ತಾರೆ. ಈ ವೇಳೆ ವಿದ್ಯಾರ್ಥಿಗಳು ತಮ್ಮ ತಂದೆ, ತಾಯಿಯರ ಪಾದ ತೊಳೆದು, ಸಂಪ್ರದಾಯ ಬದ್ಧ, ಶಾಸ್ತ್ರೋತ್ರವಾಗಿ ಪಾದ ಪೂಜೆ ಮಾಡುತ್ತಾರೆ. ಪೋಷಕರ ಪಾದ ತೊಳೆದು, ಒರೆಯಿಸಿ, ವಿಭೂತಿ, ಅರಿಶಿನ, ಕುಂಕುಮ ಹಚ್ಚಿ, ಹೂವು ಇಟ್ಟು ಗಂಧದ ಕಡ್ಡಿ ಬೆಳಗಿ ಮಂಗಳಾರತಿ ಮಾಡಿ ಪಾದಪೂಜೆ ಮಾಡುತ್ತಾರೆ.

    ವಿದ್ಯಾರ್ಥಿಗಳಿಗೆ ಶಾಲೆಯ ಹಿರಿಯರೊಬ್ಬರು ಪೂಜೆಯನ್ನು ಹೇಗೆ ಮಾಡುವುದು ಎಂದು ಮಾರ್ಗದರ್ಶನ ನೀಡುತ್ತಾರೆ. ಅದರಂತೆ ವಿದ್ಯಾರ್ಥಿಗಳು ಪೂಜೆ ಮಾಡುತ್ತಾರೆ. ವಿದ್ಯಾರ್ಥಿಗಳು ಈ ರೀತಿ ಪಾದಪೂಜೆ ಮಾಡುವುದರಿಂದ ಪೋಷಕರ ಬಗ್ಗೆ ಪ್ರೀತಿ, ಗೌರವ ಹೆಚ್ಚಾಗುತ್ತದೆ. ಇಬ್ಬರ ನಡುವೆ ಆತ್ಮೀಯತೆ ಬೆಳೆಯುತ್ತದೆ. ಇದು ವಸತಿ ಶಾಲೆಯಾದ ಕಾರಣ ವಿದ್ಯಾರ್ಥಿಗಳು ತಮ್ಮ ಪೋಷಕರನ್ನು ಬಿಟ್ಟು ದೂರ ಇರುತ್ತಾರೆ. ಈ ರೀತಿಯ ಕಾರ್ಯಕ್ರಮದಿಂದ ಅವರು ಹತ್ತಿರವಾಗುತ್ತಾರೆ. ಅಲ್ಲದೆ ವಿದ್ಯಾರ್ಥಿ ಹಾಗೂ ತಂದೆ- ತಾಯಿಗಳಿಬ್ಬರ ನಡುವೆ ಆತ್ಮೀಯತೆ ಬೆಳೆಯುತ್ತದೆ ಎಂಬ ಉದ್ದೇಶದಿಂದ ಈ ಪೂಜೆ ಮಾಡಿಸಲಾಗುತ್ತದೆ.

    ರಾಮಕೃಷ್ಣ ಶಾಲೆಯಲ್ಲಿ ಕಳೆದ 15 ವರ್ಷಗಳಿಂದ ಪಾದಪೂಜೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಪ್ರತಿ ವರ್ಷದ ಕಾರ್ಯಕ್ರಮಕ್ಕೆ ಪೋಷಕರು ತಮ್ಮ ಮಕ್ಕಳು ಶಾಲೆಯಲ್ಲಿ ಇರುವಷ್ಟು ವರ್ಷ ತಪ್ಪದೆ ಬರುತ್ತಾರೆ.

    ಈ ಬಾರಿಯ ಕಾರ್ಯಕ್ರಮದ ಸಾನಿಧ್ಯವನ್ನು ಕೊಡಲಿ ಮಠದ ವಿದ್ಯಾರಣ್ಯ ಭಾರತಿ ಸ್ವಾಮೀಜಿ ವಹಿಸಿದ್ದರು. ಮಕ್ಕಳು ತಮ್ಮ ತಂದೆ-ತಾಯಿಗಳಿಂದ ದೂರವಿದ್ದು ಅವರಿಬ್ಬರ ನಡುವೆ ಆತ್ಮೀಯತೆ ಕಡಿಮೆಯಾಗಿ, ಮುಂದೆ ವಯಸ್ಸಾದ ತಂದೆ ತಾಯಿಯರನ್ನು ನೋಡಿ ಕೊಳ್ಳದೆ ವೃದ್ಧಾಶ್ರಮಕ್ಕೆ ಸೇರಿಸುತ್ತಾರೆ. ಹೀಗಾಗಿ ಮಕ್ಕಳು ಹಾಗೂ ಪೋಷಕರ ನಡುವೆ ಕೊಂಡಿಯಾಗಿ ಶಾಲೆಯು ಪಾದಪೂಜೆ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದೆ ಎಂದು ಶಾಲೆಯ ಮ್ಯಾನೇಜಿಂಗ್ ಟ್ರಸ್ಟಿ ಶೋಭಾ ವೆಂಟಕರಮಣ ತಿಳಿಸಿದ್ದಾರೆ.

    ವಿದ್ಯಾರ್ಥಿಗಳು ಸಹ ಪಾದಪೂಜೆಯಿಂದ ನಮ್ಮಲ್ಲಿ ಸಾಕಷ್ಟು ಬದಲಾವಣೆಯಾಗಿದೆ ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ.

  • ಜನಾರ್ದನ ರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರು – ದಂಪತಿಯಿಂದ ಪಾದಪೂಜೆ

    ಜನಾರ್ದನ ರೆಡ್ಡಿ ನಿವಾಸಕ್ಕೆ ಶ್ರೀಶೈಲ ಜಗದ್ಗುರು – ದಂಪತಿಯಿಂದ ಪಾದಪೂಜೆ

    ಬಳ್ಳಾರಿ: ಮಾಜಿ ಸಚಿವ ಗಣಿಧಣಿ ಗಾಲಿ ಜನಾರ್ದನ ರೆಡ್ಡಿ ಇಂದು ಜಿಲ್ಲೆಗೆ ಆಗಮಿಸಿದ್ದ ಪಂಚಪೀಠಾಧೀಶ್ವರರ ಪಾದಪೂಜೆ ನೆರವೇರಿಸಿದ್ದಾರೆ.

    ಬಳ್ಳಾರಿಯ ಅಹಂಬಾವಿ ಪ್ರದೇಶದಲ್ಲಿರುವ ರೆಡ್ಡಿ ನಿವಾಸಕ್ಕೆ ಭೇಟಿ ನೀಡಿದ ಶ್ರೀಶೈಲ ಜಗದ್ಗುರು ಹಾಗೂ ಕಾಶಿ ಪೀಠದ ಶ್ರೀಗಳಿಂದ ವಿಶೇಷ ಪೂಜೆ ನೆರವೇರಿಸಿದರು. ಪೂಜೆಯಲ್ಲಿ ಜನಾರ್ದನ ರೆಡ್ಡಿ, ಪತ್ನಿ ಅರುಣಾ ಹಾಗೂ ಪುತ್ರ ಕಿರಿಟಿ ರೆಡ್ಡಿ ಸೇರಿದಂತೆ ರೆಡ್ಡಿ ಬಂಧು ಮಿತ್ರರು ಪಾಲ್ಗೊಂಡಿದ್ದರು. ಸುಮಾರು 20 ನಿಮಿಷ ಶ್ರೀಗಳ ಪಾದ ಪೂಜೆ ಮಾಡಿದರು. ಕಳೆದ ಹಲವು ವರ್ಷಗಳಿಂದ ಲಿಂಗಧಾರಣೆ ಕೈಗೊಂಡಿರುವ ರೆಡ್ಡಿ ಇಂದು ಕುಟುಂಬ ಸಮೇತರಾಗಿ ಶ್ರೀಗಳ ಪಾದಪೂಜೆ ಮಾಡಿದ್ದರು.

    ಈ ವೇಳೆ ಮಾತನಾಡಿದ ಶ್ರೀಶೈಲ ಪೀಠದ ಶ್ರೀಗಳು, ಕಾಶಿ ಪೀಠದಲ್ಲಿ ರೆಡ್ಡಿ ಅವರು ಲಿಂಗಧಾರಣೆ ಮಾಡಿಕೊಂಡಿದ್ದಾರೆ. ಬೆಳಗ್ಗೆ ಲಿಂಗಪೂಜೆ, ಪಾದ ಪೂಜೆ ಆಗಿದೆ. ಮನೆಯಲ್ಲಿ ಸಂಸ್ಕೃತಿಯ ವಾತಾವರಣ ಸೃಷ್ಟಿಯಾಗಿದೆ. ರೆಡ್ಡಿಯವರು ಕಳೆದ ಹಲವು ವರ್ಷಗಳಿಂದ ಹಲವು ಸಮಸ್ಯೆಗಳಲ್ಲಿ ಸಿಲುಕಿದ್ದಾರೆ. ಆ ಸಮಸ್ಯೆಗಳಿಂದ ಮುಕ್ತಿ ಹೊಂದಲಿದ್ದಾರೆ. ಅವರ ಗತವೈಭವ ಮರುಕಳಿಸಲಿ ಎಂದು ಹಾರೈಸುತ್ತೇವೆ ಎಂದು ಹೇಳಿದ್ದಾರೆ.

    ಕಾಶಿ ಪೀಠದ ಸ್ವಾಮೀಜಿಗಳು, ಬಳ್ಳಾರಿಯಲ್ಲಿ ಸಾಮೂಹಿಕ ವಿವಾಹ ಕಾರ್ಯಕ್ರಮ ನಿಮಿತ್ತ ಬಳ್ಳಾರಿಗೆ ಬಂದಿದ್ದೆವು. ಈ ಹಿನ್ನೆಲೆಯಲ್ಲಿ ಇಂದು ರೆಡ್ಡಿ ನಿವಾಸಕ್ಕೆ ಬಂದು ಪಾದ ಪೂಜೆ ಸ್ವೀಕರಿಸಿದೆವು. ರೆಡ್ಡಿಯವರು ಕಾಶಿ ಪೀಠದಲ್ಲಿ ಲಿಂಗಧಾರಣೆ ಮಾಡಿಕೊಂಡಿದ್ದರು. ಅಂದಿನಿಂದ ನಿಷ್ಠೆ ಭಕ್ತಿಯಿಂದ ಲಿಂಗ ಪೂಜೆ ಮಾಡುತ್ತಿದ್ದಾರೆ. ಅವರಿಗೆ ಅವರ ಕುಟುಂಬಕ್ಕೆ ಸನ್ಮಂಗಳವಾಗಲಿ ಎಂದು ಇಂದು ಪಾದ ಪೂಜೆ ಸ್ವೀಕರಿಸಿದ್ದೇವೆ ಎಂದಿದ್ದಾರೆ.

    ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಜನಾರ್ದನ ರೆಡ್ಡಿ, ಇಂದು ನಮ್ಮ ಬಳ್ಳಾರಿಗೆ ಕಾರ್ಯಕ್ರಮದ ನಿಮಿತ್ತ ಉಜ್ಜಿಯಿನಿ ಜಗದ್ಗುರು, ರಂಭಾಪುರಿ ಪೀಠದ ಜಗದ್ಗುರು ಮತ್ತು ಕಾಶಿ ಪೀಠದ ಜಗದ್ಗುರುಗಳು ಆಗಮಿಸಿದ್ದರು. ಜಗದ್ಗುರುಗಳ ಸಮ್ಮುಖದಲ್ಲಿ ಲಿಂಗ ಪೂಜೆ ಮಾಡಿದ್ದು ವಿಶೇಷವಾಗಿತ್ತು. ಕಳೆದ ಕೆಲ ವರ್ಷಗಳ ಹಿಂದೆ ನಾನು ಲಿಂಗಧಾರಣೆ ಮಾಡಿದ್ದು, ಅಂದಿನಿಂದ ಪ್ರತಿನಿತ್ಯ ಲಿಂಗ ಪೂಜೆ ಮಾಡುತ್ತಿದ್ದೇನೆ ಎಂದರು.

    ನಾನು ನ್ಯಾಯಾಲಯದ ಮೇಲೆ ನಂಬಿಕೆ ಇಟ್ಟಿರುವೆ. ನನ್ನ ಮನಸ್ಸಾಕ್ಷಿಯಾಗಿ ನಾವು ಯಾವ ತಪ್ಪೂ ಮಾಡಿಲ್ಲ. ನಾವು ಪ್ರಾಮಾಣಿಕವಾಗಿ ಇದ್ದರೆ ದೇವರ ಆಶೀರ್ವಾದವಿರುತ್ತದೆ. ಅದರಂತೆಯೇ ಶ್ರೀಗಳ ಆಶೀರ್ವಾದದಂತೆ ಆದಷ್ಟು ಬೇಗ ಎಲ್ಲ ಸಮಸ್ಯೆ ಹಾಗೂ ಆರೋಪಗಳಿಂದ ಮುಕ್ತನಾಗುವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮಂಜು ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ: ಸಿಎಂ ತಿರುಗೇಟು

    ಮಂಜು ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ: ಸಿಎಂ ತಿರುಗೇಟು

    – ಇಂಥ ಗಿಮಿಕ್‍ಗಳು ಹಾಸನದಲ್ಲಿ ಎಲ್ಲಿ ನಡೆಯುತ್ತೆ ಹೇಳಿ

    ಮೈಸೂರು: ಪೌರಕಾರ್ಮಿಕರಿಗೆ ಹಾಸನದಲ್ಲಿ ಮಾಜಿ ಸಚಿವ ಎ.ಮಂಜು ಪಾದ ಪೂಜೆ ಮಾಡಿದ ವಿಚಾರದ ಬಗ್ಗೆ ಮೈಸೂರಿನಲ್ಲಿ ಸಿಎಂ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

    ಪಾದ ಪೂಜೆ ಮಾಡಿದ ತಕ್ಷಣ ಅವರ ಪಾಪ ಎಲ್ಲಾ ತೊಳೆದು ಹೋಗುತ್ತಾ?. ಎ. ಮಂಜು ಅವರ ಜನ್ಮದಲ್ಲಿ ಪೌರಕಾರ್ಮಿಕರ ಸಮಸ್ಯೆ ಕೇಳಿದ್ದಾರೋ ಇಲ್ವೋ ಗೊತ್ತಿಲ್ಲ. ಇಂತಹ ಗಿಮಿಕ್‍ಗಳು ಹಾಸನದಲ್ಲಿ ಎಲ್ಲಿ ನಡೆಯುತ್ತೆ ಹೇಳಿ ಎಂದು ಸಿಎಂ ಪ್ರಶ್ನಿಸಿದ್ದಾರೆ.

    ಮೋದಿ ಯಾರಿಗೋ ಪೌರಕಾರ್ಮಿಕರ ಡ್ರೆಸ್ ಹಾಕಿ ಪಾದ ಪೂಜೆ ಮಾಡಿದ್ದರು. ಮಂಜು ಇನ್ಯಾರಿಗೆ ಪೌರಕಾರ್ಮಿಕರ ಡ್ರೆಸ್ ಹಾಕಿ ಪಾದ ಪೂಜೆ ಮಾಡಿದ್ದಾರೋ ಗೊತ್ತಿಲ್ಲ ಎಂದು ಕಿಡಿಕಾರಿದ್ದಾರೆ.

    ಎ. ಮಂಜು ಅವರು ಇಂದು ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವ ಮುನ್ನ, ಪೌರಕಾರ್ಮಿಕ ದಂಪತಿಯ ಪಾದ ತೊಳೆದು ಪೂಜೆ ಮಾಡಿ ಮೋದಿ ಅವರನ್ನು ಫಾಲೋ ಮಾಡಿದ್ದರು.

    ಹಾಸನದ ನಿರ್ಮಾಲ ನಗರದಲ್ಲಿ ಚಂದ್ರು ಹಾಗೂ ಅಶ್ವಿನಿ ದಂಪತಿಯ ಕಾಲು ತೊಳೆದು ಎ.ಮಂಜು ಪೂಜೆ ಮಾಡಿದ್ದಾರೆ. ಪಾದ ತೊಳೆದ ನಂತರ, ನಾವು ಪೌರಕಾರ್ಮಿಕರ ಪಾದ ತೊಳೆದಿದ್ದ ಮೋದಿಯನ್ನು ಟಿವಿಯಲ್ಲಿ ಮಾತ್ರ ನೊಡಿದ್ದೇವು. ಅದರೇ ಇಂದು ಎ.ಮಂಜು ನಮ್ಮ ಮನೆಗೆ ಬಂದು ನಮ್ಮ ಪಾದ ತೊಳೆದಿದ್ದಾರೆ. ಮೊದಲು ಸ್ವಲ್ಪ ಮುಜುಗರವಾದರೂ ನಂತರ ಸಂತೋಷವಾಯಿತು ಎಂದ ಚಂದ್ರು ದಂಪತಿ ಪ್ರತಿಕ್ರಿಯಿಸಿದ್ದಾರೆ.

  • 204 ವಿದ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ

    204 ವಿದ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ

    ಕೊಪ್ಪಳ: ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಕಲಿಸುವುದು ಸಾಮಾನ್ಯವಾಗಿದೆ. ಆದರೆ ಕೊಪ್ಪಳದ ಶಾಲೆಯಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಗಳಿಗೆ ಪಾದಪೂಜೆ ಮಾಡುವ ಕಾರ್ಯಕ್ರಮ ಮಾಡಲಾಗುತ್ತದೆ.

    ಗಂಗಾವತಿ ತಾಲೂಕಿನ ಶ್ರಿರಾಮನಗರದ ವಿದ್ಯಾನಿಕೇತನ ಸಂಸ್ಥೆಯಲ್ಲಿ ಇಂತಹದೊಂದು ಕಾರ್ಯಕ್ರಮ ಜರುಗಿದೆ. ಈ ಕಾರ್ಯಕ್ರಮದಲ್ಲಿ ಎಸ್‍ಎಸ್‍ಎಲ್‍ಸಿಯ ಒಟ್ಟು 204 ವಿದ್ಯಾರ್ಥಿಗಳು ತಮ್ಮ ತಮ್ಮ ತಂದೆ-ತಾಯಿಗಳಿಗೆ ಪಾದಪೂಜೆ ಮಾಡುವ ಮೂಲಕ ಆಶೀರ್ವಾದ ಪಡೆದುಕೊಂಡಿದ್ದಾರೆ. ಮೊದಲಿಗೆ ಪೋಷಕರ ಪಾದವನ್ನು ತೊಳೆದು ಅರಿಶಿಣ-ಕುಂಕುಮ, ಹೂ ಇಟ್ಟು, ಪೂಜೆ ಮಾಡಿದ್ದಾರೆ.

    ಇನ್ನೂ ತಂದೆ-ತಾಯಿಯಂದಿರು ಸಹ ತಮ್ಮ ಮಕ್ಕಳು ಮುಂದೆ ಉನ್ನತ ಮಟ್ಟದಲ್ಲಿ ಸಾಧನೆಗೈದು ದೇಶಕ್ಕೆ ಕೀರ್ತಿ ತರಲಿ ಎಂದು ಆಶೀರ್ವಾದಿಸಿದ್ದಾರೆ. ಸಂಸ್ಕೃತಿ ಹೆಸರು ಬಳಸಿಕೊಂಡು ಪಾಶ್ಚಿಮಾತ್ಯ ಸಂಸ್ಕೃತಿಯ ಅನೇಕ ಕಾರ್ಯಕ್ರಮಗಳಿಗೆ ಒತ್ತುಕೊಡುವ ಶಾಲೆಗಳ ನಡುವೆ ಈ ಶಾಲೆ ವಿಭಿನ್ನವಾಗಿ ಮಕ್ಕಳಲ್ಲಿ ತಂದೆ ತಾಯಿಯ ಬಗ್ಗೆ ಗೌರವ ಮೂಡಿಸುವಂತ ಕಾರ್ಯಮಾಡಿದ್ದು, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv