Tag: ಪಾದಯಾತ್ರೆ

  • ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು

    ರಾಯರ ಆರಾಧನೆ- ಪಾದಯಾತ್ರೆ ಮೂಲಕ ಹರಿದು ಬಂತು ಭಕ್ತರ ದಂಡು

    – ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ

    ರಾಯಚೂರು: ರಾಯರ ಆರಾಧನೆಗೆ ಪಾದಯಾತ್ರೆ ಮೂಲಕ ಭಕ್ತರ ದಂಡು ಹರಿದು ಬರುತ್ತಿದೆ. ಮಂತ್ರಾಲಯದಲ್ಲಿ ನಡೆಯುತ್ತಿರುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಏಳುದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದು ಮುಖ್ಯವಾದ ದಿನ. ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ ಸಂದಿವೆ.

    ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಹಿನ್ನೆಲೆ ನಾನಾ ಕಡೆಗಳಿಂದ ಭಕ್ತರು ಬರಿಗಾಲಲ್ಲೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಪಾದಯಾತ್ರೆ ಬರುತ್ತಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ನಟ ಕಾರ್ತಿಕೇಯ ನಿಶ್ಚಿತಾರ್ಥ – ಫೋಟೋ ವೈರಲ್

    ಭಜನಾ ಮಂಡಳಿಗಳು, ಭಕ್ತರ ತಂಡಗಳು ಪ್ರತೀವರ್ಷ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ರಾಯರ ಮಠವನ್ನು ಪಾದಯಾತ್ರೆ ಮೂಲಕ ತಲುಪುತ್ತವೆ. ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಆರಾಧನಾ ಮಹೋತ್ಸವವನ್ನ ಮಠದ ಸಿಬ್ಬಂದಿ ಅಷ್ಟೆ ಸರಳವಾಗಿ ಆಚರಿಸಿದ್ದರು. ಈ ಬಾರಿ ಆಂಧ್ರಪ್ರದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಇರುವುದರಿಂದ ವಿಜೃಂಭಣೆಯಿಂದ ರಾಯರ 350 ನೇ ಆರಾಧನಾ ಮಹೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ವಿವಿಧೆಡೆಯಿಂದ ಭಕ್ತರು ಪಾದಯಾತ್ರೆ ಮೂಲಕ ಬರುತ್ತಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್

    ಪ್ರತೀವರ್ಷದಂತೆ ತಿರುಮಲ ತಿರುಪತಿ ದೇವಾಲಯದಿಂದ ಮಂತ್ರಾಲಯ ಮಠಕ್ಕೆ ವೆಂಕಟೇಶ್ವರ ಸ್ವಾಮಿ ಶೇಷವಸ್ತ್ರವನ್ನ ತರಲಾಗಿದೆ. ವಾದ್ಯಗೋಷ್ಠಿಯೊಂದಿಗೆ ತಿರುಮಲ ತಿರುಪತಿ ದೇವಾಲಯದ ಅಧಿಕಾರಿಗಳನ್ನ ಶ್ರೀ ಮಠದ ಶ್ರೀಗಳು ಹಾಗೂ ಆಡಳಿತ ಮಂಡಳಿ ಬರಮಾಡಿಕೊಂಡಿತು. ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರಿಗೆ ಶೇಷವಸ್ತ್ರ ಸಮರ್ಪಣೆ ಮಾಡಿದರು. ಇದನ್ನೂ ಓದಿ: ಯಾರ ಹಂಗಿನಲ್ಲೂ ಇರದ ಸರ್ಕಾರ ಕೊಡಿ: ಎಚ್.ಡಿ ಕುಮಾರಸ್ವಾಮಿ

    350 ನೇ ಆರಾಧನಾ ಮಹೋತ್ಸವ ಹಿನ್ನೆಲೆ ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ನಡೆಯಿತು. ಪಂಚಾಮೃತ ಅಭಿಷೇಕ, ಶೇಷವಸ್ತ್ರ ಸಮರ್ಪಣೆ ಬಳಿಕ ಚಿನ್ನದ ರಥೋತ್ಸವ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಲಿದ್ದಾರೆ.

  • ಚಾಮರಾಜನಗರ To ದೆಹಲಿ ಪಾದಯಾತ್ರೆ ಆರಂಭಿಸಿದ ರೈತ

    ಚಾಮರಾಜನಗರ To ದೆಹಲಿ ಪಾದಯಾತ್ರೆ ಆರಂಭಿಸಿದ ರೈತ

    ಧಾರವಾಡ: ರೈತರೊಬ್ಬರು ಕೇಂದ್ರ ಸರ್ಕಾರದ ಕೃಷಿ ಕಾಯ್ದೆ ವಿರೋಧಿಸಿ ದೆಹಲಿಗೆ ಪಾದಯಾತ್ರೆ ಆರಂಭಿಸಿದ್ದಾರೆ.

    ನಾಗರಾಜ್ ಎಂಬ ರೈತ ಪಾದಯಾತ್ರೆಯನ್ನು ಆರಂಭಿಸಿದ್ದಾರೆ. ಚಾಮರಾಜನಗರದಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟದ ಸ್ಥಳಕ್ಕೆ ಹೋರಟಿದ್ದಾರೆ. ಕಳೆದ ಫೆಬ್ರವರಿಯಲ್ಲೇ ತಮ್ಮ ಪಾದಯಾತ್ರೆ ಆರಂಭಿಸಿದ್ದರು. ಆದರೆ ಕೊರೊನಾದಿಂದ ಲಾಕ್‍ಡೌನ್ ಆದ ಹಿನ್ನೆಲೆ ಪಾದಯಾತ್ರೆ ಮೊಟಕು ಗೊಳಿಸಿದ್ದರು. ಈಗ ಜುಲೈ 2 ರಿಂದ ನಮ್ಮ ಪಾದಯಾತ್ರೆ ಮತ್ತೆ ಆರಂಭಿಸಿದ ರೈತ ನಾಗರಾಜ್ ಅವರು 7 ಸಾವಿರ ಕಿಲೋ ಮೀಟರ್‍ವರೆಗೆ ಪಾದಯಾತ್ರೆ ಮಾಡಲಿದ್ದಾರೆ.

    ಇವತ್ತು ಧಾರವಾಡದ ಅಂಬೇಡ್ಕರ್ ವೃತ್ತಕ್ಕೆ ಭೇಟಿ ನೀಡಿದ ನಾಗರಾಜ್, ಕೇಂದ್ರ ಸರ್ಕಾರದ ಮೇಲೆ ಕಿಡಿಕಾರಿದರು. ಉತ್ತರ ಪ್ರದೇಶದಲ್ಲಿ ರೈತರು ಪ್ರತಿಭಟನೆ ಮಾಡಿದರೆ ಚರ್ಮ ಸುಲಿಯುತ್ತೆನೆ ಎಂದು ಯುಪಿ ಸರ್ಕಾರ ಹೇಳುತಿದ್ದು, ಇದಕ್ಕೆ ನಾವು ಜಗ್ಗಲ್ಲ ಎಂದು ನಾಗರಾಜ್ ಹೇಳಿದರು. ಪ್ರಧಾನಿ ಮೋದಿ ಹಾಗೂ ಅಮೀತ್ ಷಾಗೆ ಎಚ್ಚರಿಕೆ ನೀಡಿದ ಈ ರೈತ, ರೈತರ ಮೇಲೆ ಹಲ್ಲೆ ಮಾಡಿದ್ದೇ ಆದರೆ ಯುಪಿಗೆ ಇಡಿ ರೈತರು ನುಗ್ಗಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.

  • 700 ಕಿ.ಮೀ ಪಾದಯಾತ್ರೆ ಮಾಡಿದ ಅಭಿಮಾನಿ – ಮೆಚ್ಚುಗೆ ಜೊತೆಗೆ ಸೋನು ಬುದ್ಧಿವಾದ

    700 ಕಿ.ಮೀ ಪಾದಯಾತ್ರೆ ಮಾಡಿದ ಅಭಿಮಾನಿ – ಮೆಚ್ಚುಗೆ ಜೊತೆಗೆ ಸೋನು ಬುದ್ಧಿವಾದ

    ಮುಂಬೈ: ರಿಯಲ್ ಹೀರೋ ಸೋನು ಅವರನ್ನು ನೋಡಲು ಅಭಿಮಾನಿಯೊಬ್ಬರು ಬರಿಗಾಲಿನಲ್ಲಿ ಹೈದರಾಬಾದ್‍ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್ ಪಾದಯಾತ್ರೆ ಮಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.

    ಸೋನು ಅವರ ಅಭಿಮಾನಿ ವೆಂಕಟೇಶ್ ಹೈದರಾಬಾದ್ ಮೂಲದವನು. ಈತನಿಗೆ ಸೋನು ಸೂದ್ ಕಂಡರೆ ಅಪಾರ ಗೌರವ. ಹೀಗಾಗಿ ಸೋನು ಅವರನ್ನು ಭೇಟಿ ಮಾಡಲು ಬರಿಗಾಲಿನಲ್ಲಿ ಹೈದರಾಬಾದ್‍ನಿಂದ ಮುಂಬೈವರೆಗೆ ಬರೋಬ್ಬರಿ 700 ಕಿಲೋಮೀಟರ್ ಪಾದಯಾತ್ರೆ ಮಾಡಿದ್ದಾನೆ. ಈತನ ಅಭಿಮಾನ ಕಂಡು ಸೋನು ಸೂದ್ ಖುಷಿ ಆಗಿದ್ದಾರೆ ಎಂಬುದೇನೋ ನಿಜ. ಆದರೆ ಬೇರೆ ಯಾರೂ ಹೀಗೆ ಮಾಡಬೇಡಿ ಎಂದು ತಮ್ಮ ಅಭಿಮಾನಿ ಬಳಗಕ್ಕೆ ಅವರು ಬುದ್ಧಿಮಾತು ಹೇಳಿದ್ದಾರೆ. ಇದನ್ನೂ ಓದಿ: ಈ ದಿನ ಮಾಡಿ ಮಾವಿನ ಹಣ್ಣಿನ ಕೇಸರಿ ಬಾತ್

    ನನ್ನನ್ನು ಭೇಟಿಯಾಗಲು ವೆಂಕಟೇಶ್ ಹೈದರಾಬಾದ್‍ನಿಂದ ಮುಂಬೈವರೆಗೆ ಬರಿಗಾಲಿನಲ್ಲಿ ನಡೆದುಕೊಂಡು ಬಂದಿದ್ದಾನೆ. ಅವನಿಗೆ ವಾಹನದ ವ್ಯವಸ್ಥೆ ಮಾಡಿದರೂ ಕೂಡ ಅವನು ಅದನ್ನು ಒಪ್ಪಲಿಲ್ಲ. ಅವನು ನನಗೆ ಸ್ಫೂರ್ತಿದಾಯಕವಾಗಿದ್ದಾನೆ. ಆದರೆ ಬೇರೆ ಯಾರೂ ಕೂಡ ಈ ರೀತಿ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವ ಕಷ್ಟವನ್ನು ತೆಗೆದುಕೊಳ್ಳಲು ನಾನು ಪ್ರೇರಣೆ ನೀಡುವುದಿಲ್ಲ ಎಂದು ಸೋನು ಸೂದ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಇದನ್ನೂ ಓದಿ: ಪೆಟ್ರೋಲ್ ಕಳ್ಳತನ ವೇಳೆ ಸಿಕ್ಕಿಬಿದ್ದ ಯುವಕರು – ಸ್ಥಳೀಯರಿಂದ ಧರ್ಮದೇಟು

    ನಟ ಸೋನು ಸೂದ್ ಅವರು ಲಕ್ಷಾಂತರ ಜನರ ಪಾಲಿಗೆ ರಿಯಲ್ ಹೀರೋ ಆಗಿದ್ದಾರೆ. ಕಳೆದ ವರ್ಷ ಲಾಕ್‍ಡೌನ್ ಆರಂಭ ಆದಾಗಿನಿಂದಲೂ ಅವರು ಹಲವು ಬಗೆಯಲ್ಲಿ ಜನರಿಗೆ ಸಹಾಯ ಮಾಡಿದ್ದಾರೆ. ಹೀಗಾಗಿ ಅವರಿಗೆ ಅಪಾರ ಅಭಿಮಾನಿಗಳು ಇದ್ದಾರೆ. ನೂರಾರು ಬಗೆಯಲ್ಲಿ ತಮ್ಮ ಅಭಿಮಾನವನ್ನು ವ್ಯಕ್ತಪಡಿಸುವವರಿದ್ದಾರೆ. ಸೂದ್ ಚಾರಿಟಿ ಫೌಂಡೇಶನ್ ಮೂಲಕ ಲಕ್ಷಾಂತರ ಜನರಿಗೆ ಅವರು ನೆರವಾಗಿದ್ದಾರೆ. ಆಸ್ಪತ್ರೆಯಲ್ಲಿ ಬೆಡ್ ವ್ಯವಸ್ಥೆ ಮಾಡಿಸುವುದು, ಆಕ್ಸಿಜನ್ ಸಿಲಿಂಡರ್‍ಗಳನ್ನು ಪೂರೈಸುವುದು, ಹಸಿದವರಿಗೆ ಉಚಿತವಾಗಿ ಊಟ ನೀಡುವ ಕೆಲಸವನ್ನು ಮಾಡುತ್ತಿದ್ದಾರೆ. ಸೋನು ಅವರ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗುತ್ತಿದೆ.

  • ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದ ವೃದ್ಧನ ಮೇಲೆ ಹರಿದ ಬಸ್

    ಟ್ರ್ಯಾಕ್ಟರ್‌ನಿಂದ ಆಯತಪ್ಪಿ ಬಿದ್ದ ವೃದ್ಧನ ಮೇಲೆ ಹರಿದ ಬಸ್

    – ಪಾದಯಾತ್ರೆಯಲ್ಲಿ ಭಾಗಿಯಾಗಿದ್ದ ವೃದ್ಧ ಸಾವು

    ಬಳ್ಳಾರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿಗೆ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಬರುತ್ತಿದ್ದ ವೃದ್ಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

    ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ಬಳಿ ಘಟನೆ ನಡೆದಿದೆ, ಮೃತ ವೃದ್ಧ ಈಶಪ್ಪ ಮೋರಗೇರಿ (65) ಆಗಿದ್ದಾರೆ. ಇವರು ಮೂಲತಃ ಹೂವಿನ ಹಡಗಲಿಯ ತುಪ್ಪದವರಾಗಿದ್ದಾರೆ. ಪಾದಯಾತ್ರೆಗೆ ಬರುವ ಸಮಯದಲ್ಲಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

    ಪಂಚಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಆಗ್ರಹಿಸಿ ನಡೆಯುತ್ತಿರುವ ಪಾದಯಾತ್ರೆಗೆ ಬರುತ್ತಿದ್ದರು. ಟ್ರ್ಯಾಕ್ಟರ್‌ನಲ್ಲಿ ಅವರು ಕುಳಿತುಕೊಂಡಿದ್ದಾಗ, ಆಯ ತಪ್ಪಿ ರಸ್ತೆಯಲ್ಲಿ ಬಿದ್ದಿದ್ದಾರೆ. ಬಳಿಕ ಅವರ ಮೇಲೆ ಬಸ್ ಹರಿದು ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಇನ್ನು ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ತುಪ್ಪದ ಈಶಪ್ಪ ಮೋರಗೇರಿ ಅವರ ನಿಧನ ಹಿನ್ನೆಲೆ ಮೌನಾಚರಣೆ ಮಾಡಲಾಯಿತು. ಈ ಸಂಬಂಧ ಹಗರಿ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಯಾರಿಗೆ ಗಟ್ಟಿ ಧ್ವನಿ ಇರುತ್ತೋ ಅವನು ಒಂಟಿಯಾಗ್ತಾನೆ: ಹೆಚ್.ವಿಶ್ವನಾಥ್

    ಯಾರಿಗೆ ಗಟ್ಟಿ ಧ್ವನಿ ಇರುತ್ತೋ ಅವನು ಒಂಟಿಯಾಗ್ತಾನೆ: ಹೆಚ್.ವಿಶ್ವನಾಥ್

    – ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿದ್ದಾರೆ.

    ಚಿತ್ರದುರ್ಗ: ಯಾರಿಗೆ ಗಟ್ಟಿ ಧ್ವನಿ ಇರುತ್ತೋ ಅವನು ಒಂಟಿ ಆಗುತ್ತಾನೆ. ನನ್ನ ಸ್ನೇಹಿತರು ನನ್ನನ್ನು ಒಂಟಿ ಮಾಡಿ ಹೋದರು. ಆದರೆ ನಾನು ಒಂಟಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿದರು.

    ಕಾಗಿನೆಲೆಯಿಂದ ಆರಂಭವಾಗಿರುವ ಕುರುಬ ಸಮುದಾಯದ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ. ಪಾದಯಾತ್ರೆಗೆ ತೆರಳುವ ಮುನ್ನ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಾನು ಒಂಟಿ ಅಲ್ಲ ರಾಜ್ಯದ ಜನರು ನನ್ನ ಜೊತೆಯಾಗಿದ್ದಾರೆ. ನನ್ನ 17 ಜನ ಸ್ನೇಹಿತರು ಬಿಡಿ, ಮಂತ್ರಿ ಆಗುತ್ತಾರೆ. ಅವರು ಅಷ್ಟಕ್ಕೆ ಸಿಮೀತ. ಆದರೆ ನಾನು ವಾಸ್ತವದ ನೆಲೆಗಟ್ಟಿನಲ್ಲಿ ಮಾತನಾಡುತ್ತಾ ಬಂದವನು ಎಂದರು.

    ಅವರಿಗೆ ತಪ್ಪಿದ ಮಂತ್ರಿಗಿರಿ ಬಗ್ಗೆ ಪ್ರತಿಕ್ರಿಯಿಸಿ, ಮಂತ್ರಿಗಿರಿ ಸಿಗುತ್ತೋ ಬಿಡುತ್ತೋ ರಾಜ್ಯದ ಸಾಕ್ಷಿಪ್ರಜ್ಞೆಯಿಂದ ನಾನು ಸಹ 17 ಜನರ ಟೀಮ್‍ನಲ್ಲಿ ಇದ್ದೇನೆ. ನಾನೇ ಟೀಮ್ ಮುನ್ನಡೆಸಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ತಮ್ಮನ್ನು ಬಿಟ್ಟು ಮಿತ್ರ ಮಂಡಳಿ ಚಿಕ್ಕಮಗಳೂರಿನಲ್ಲಿ ನಡೆಸಿರುವ ಗೌಪ್ಯ ಸಭೆ ವಿಚಾರವಾಗಿ ಮಾತನಾಡಿ ಬೇಸರ ವ್ಯಕ್ತಪಡಿಸಿದರು.

    ನನ್ನ ಜೊತೆ ಮಾತಾಡಿದರೆ ಸಿಎಂ ಬಿಎಸ್‍ವೈ ಏನಾದರು ತಿಳಿದುಕೊಂಡರೆ? ಅಂತ ಪ್ರಶ್ನಾರ್ಥಕವಾಗಿ ಮಾತನಾಡಿದ್ದೂ, ಗಟ್ಟಿ ಧ್ವನಿ ರಾಜ್ಯದಲ್ಲಿ ಪ್ರತಿಧ್ವನಿಸುತ್ತದೆ ನನ್ನದು ಹೇಡಿ ಧ್ವನಿ ಅಲ್ಲ ಎಂದು ಕಿಡಿ ಕಾರಿದ್ದಾರೆ.

  • ಪಂಚಮಸಾಲಿ, ಕುರುಬ ಬೆನ್ನಲ್ಲೆ ಕಾಡುಗೊಲ್ಲ ಸಮುದಾಯ ಪಾದಯಾತ್ರೆ – ಸರ್ಕಾರಕ್ಕೆ ಎಚ್ಚರಿಕೆ

    ಪಂಚಮಸಾಲಿ, ಕುರುಬ ಬೆನ್ನಲ್ಲೆ ಕಾಡುಗೊಲ್ಲ ಸಮುದಾಯ ಪಾದಯಾತ್ರೆ – ಸರ್ಕಾರಕ್ಕೆ ಎಚ್ಚರಿಕೆ

    ಚಿತ್ರದುರ್ಗ: ಪಂಚಮಸಾಲಿ ಹಾಗೂ ಕುರುಬ ಸಮುದಾಯಗಳ ಪಾದಯಾತ್ರೆ ಬೆನ್ನಲ್ಲೆ ಸರ್ಕಾರದ ವಿರುದ್ಧ ಮತ್ತೊಂದು ಸಮುದಾಯದ ಪಾದಾಯಾತ್ರೆಗೆ ಸಿದ್ಧತೆ ನಡೆದಿದೆ. ಶಿರಾ ಉಪ ಚುನಾವಣೆ ವೇಳೆ ಘೋಷಿಸಿದ ಕಾಡುಗೊಲ್ಲ ಅಭಿವೃದ್ಧಿ ನಿಗಮ ಕೇವಲ ಚುನಾವಣಾ ಗಿಮಿಕ್ ಎನಿಸಿದೆ ಎಂದು ಆಕ್ರೋಶಗೊಂಡಿರುವ ಆ ಸಮುದಾಯದ ನಾಯಕರು ಸರ್ಕಾರದ ವಿರುದ್ಧ ಹೋರಾಟಕ್ಕೆ ಸಜ್ಜಾಗಿದ್ದಾರೆ.

    ಶಿರಾ ಉಪ ಚುನಾವಣೆ ವೇಳೆ ಕಾಡುಗೊಲ್ಲ ಅಭಿವೃದ್ಧಿ ನಿಗಮ ಘೋಷಿಸಿ ನಾಲ್ಕು ತಿಂಗಳುಗಳೇ ಕಳೆದರೂ ಸಹ ಈ ನಿಗಮಕ್ಕೆ ಈವರೆಗೆ ಅಧ್ಯಕ್ಷರು ನೇಮಕವಾಗಿಲ್ಲ. ಇದಕ್ಕಿಂತ ತಡವಾಗಿ ಘೋಷಣೆಯಾದ ಎಲ್ಲಾ ನಿಗಮಗಳಿಗೆ ಅಧ್ಯಕ್ಷರ ಆಯ್ಕೆ ಸೇರಿದಂತೆ ಹಣವನ್ನು ಬಿಡುಗಡೆ ಮಾಡಿ, ನಿಗಮಗಳು ಸಮುದಾಯದ ಅಭಿವೃದ್ಧಿಗೆ ಚುರುಕಾಗಿ ಕೆಲಸ ಮಾಡುತ್ತಿವೆ. ಆದರೆ ಇತರೆ ನಿಗಮಗಳಿಗಿಂತ ಮುಂಚೆಯೇ ಘೋಷಣೆಯಾದ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಮಾತ್ರ ಈ ಬಿಜೆಪಿ ಸರ್ಕಾರ ನಯಾಪೈಸೆ ಹಣ ಬಿಡಗಡೆ ಮಾಡಿಲ್ಲ. ಬಿಜೆಪಿ ಸರ್ಕಾರ ಹಿಂದುಳಿದ ಸಮುದಾಯದ ವಿಚಾರದಲ್ಲಿ ನಿರ್ಲಕ್ಷ್ಯ ತೋರಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಕಾಡುಗೊಲ್ಲ ಕ್ಷೇಮಾಭಿವೃದ್ಧಿ ಸಂಘದ ಮುಖಂಡ ಶಿವುಯಾದವ್, ಸಮುದಾಯದ ಹೋರಾಟಗಾರರು ಹಾಗೂ ಮಠಾಧೀಶರೊಂದಿಗೆ ಸಭೆ ನಡೆಸಿ ಬಿಜೆಪಿ ಸರ್ಕಾರದ ವಿರುದ್ಧ ಕಾಡುಗೊಲ್ಲ ಸಮುದಾಯದಿಂದಲೂ ಪಾದಯಾತ್ರೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

    ಶಿರಾ ಚುನಾವಣೆ ವೇಳೆ ಭಾರೀ ಭರವಸೆ ನೀಡಿ ಘೋಷಿಸಲ್ಪಟ್ಟಿದ್ದ ಕಾಡುಗೊಲ್ಲ ಅಭಿವೃದ್ಧಿ ನಿಗಮದ ಕಾರ್ಯಾರಂಭ ವಿಳಂಬವಾಗಿರುವ ಬಗ್ಗೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಪ್ರತಿಕ್ರಿಯಿಸಿರುವ ಶಿರಾ ಕ್ಷೇತ್ರದ ರಾಜೇಶ್ ಗೌಡ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಕಾಡುಗೊಲ್ಲ ಸಮುದಾಯದಲ್ಲಿ ಅಧ್ಯಕ್ಷ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ. ಹೀಗಾಗಿ ನಿಗಮಕ್ಕೆ ಈವರೆಗೆ ಯಾವುದೇ ಅನುದಾನ ನೀಡಿಲ್ಲ ಎನ್ನುವ ಮೂಲಕ ಕಾಡುಗೊಲ್ಲ ಸಮುದಾಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಜೊತೆಗೆ ಶೀಘ್ರದಲ್ಲೇ ಸಿಎಂ ಯಡಿಯೂರಪ್ಪ ಈ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರನ್ನು ಆಯ್ಕೆ ಮಾಡಿ, ಹಣ ನೀಡಲಿದ್ದಾರೆನ್ನುವ ಮೂಲಕ ಅಲ್ಲಿಂದ ಜಾರಿಕೊಳ್ಳಲು ಯತ್ನಿಸಿದ್ದಾರೆ.

  • ಭಕ್ತೆಯನ್ನು 6 ಕಿ.ಮೀ ಹೆಗಲಲ್ಲಿ ಹೊತ್ತು ಸಾಗಿದ ಪೊಲೀಸ್ ಪೇದೆ

    ಭಕ್ತೆಯನ್ನು 6 ಕಿ.ಮೀ ಹೆಗಲಲ್ಲಿ ಹೊತ್ತು ಸಾಗಿದ ಪೊಲೀಸ್ ಪೇದೆ

    ಹೈದರಾಬಾದ್: ತಿರುಮಲ ದೇವಸ್ಥಾನಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರಲ್ಲಿ ಒಬ್ಬರು ಮೂರ್ಛೆ ಹೋಗಿದ್ದರ. ಇವರನ್ನು ಪೊಲೀಸ್ ಪೇದೆಯೊಬ್ಬರು ಸುಮಾರು 6 ಕಿಲೋಮೀಟರ್ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ.

    ಪೊಲೀಸ್ ಕಾನ್‍ಸ್ಟೇಬಲ್ ಅವರನ್ನು ಶೇಖ್ ಅರ್ಷದ್ ಎಂದು ಗುರುತಿಸಲಾಗಿದೆ. ಅರ್ಷದ್ ಅವರು ಪಾದಯಾತ್ರೆ ಹೊರಟಿರುವ ವೇಳೆ ದಣಿದು ಮೂರ್ಛೆ ಹೋಗಿದ್ದ ಮಹಿಳೆಯನ್ನು 6 ಕಿಲೋಮೀಟರ್‍ಗಳಷ್ಟು ದೂರ ಹೆಗಲ ಮೇಲೆ ಹೊತ್ತು ಸಾಗಿದ್ದಾರೆ.

    ತಿರುಮಲ ತಿಮ್ಮಪ್ಪನ ಬಾಲಾಜಿ ದೇವಸ್ಥಾನಕ್ಕೆ ಅತ್ಯಂತ ಕಡಿಮೆ ಸಂಖ್ಯೆಯಲ್ಲಿ ಭಕ್ತರು ಬರಿಗಾಲಿನಲ್ಲಿ ನಡೆದುಕೊಂಡು ದೇವರ ದರ್ಶನಕ್ಕೆ ಹೋಗುತ್ತಾರೆ. ಹೀಗಿರುವಾಗ ಬುಧವಾರದಂದು ಕೆಲವು ಭಕ್ತರು ಬರಿಗಾಲಿನಿಂದ ಬೆಟ್ಟವನ್ನು ಹತ್ತುತ್ತಿದ್ದರು. ಈ ವೇಳೆ ಇಬ್ಬರು ಭಕ್ತರು ಬರಿಗಾಲಿನಲ್ಲಿ ಬೆಟ್ಟ ಹತ್ತುವಾಗ ತುಂಬಾ ದಣಿದಿದ್ದರು. ಗುರುಪುರ ಪದಂ ಎಂಬ ಸ್ಥಳದಲ್ಲಿ ಬಂದು ನಾಗವೇರಮ್ಮ ಎಂಬವರು ಬಿಪಿಯಿಂದಾಗಿ ಮೂರ್ಛೆ ಹೋದಾಗ ಕರ್ತವ್ಯದಲ್ಲಿದ್ದ ಕಾನ್ ಸ್ಟೇಬಲ್ ಅರ್ಷದ್ ಮಹಿಳೆಯನ್ನ ರಕ್ಷಿಸಿದ್ದಾರೆ.

    ಪಕ್ಕಾ ರಸ್ತೆ ಇಲ್ಲದ ಕಾರಣ ಅರಣ್ಯ ಮಾರ್ಗದಲ್ಲೇ ಸುಮಾರು 6 ಕಿಲೋಮೀಟರ್ ದೂರ ಅರ್ಷದ್ ಮಹಿಳೆಯನ್ನು ಹೆಗಲ ಮೇಲೆ ಎತ್ತಿಕೊಂಡು ನಡೆದುಕೊಂಡು ಹೋಗಿದ್ದಾರೆ. ನಂತರ ಮಹಿಳೆಯನ್ನು ಹತ್ತಿರದ ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

    ಈ ಮೊದಲು ಅರ್ಷದ್ ಅವರು ನಾಗೇಶ್ವರ ರಾವ್ ಎಂಬ ಮತ್ತೊಬ್ಬರು ಹಿರಿಯರನ್ನು ಇದೇ ಅರಣ್ಯ ರಸ್ತೆಯ ಮೂಲಕ ಕರೆದುಕೊಂಡು ಹೋಗಿದ್ದರು. ಇಬ್ಬರೂ ಭಕ್ತರಿಗೂ ಅರ್ಷದ್ ಸಲ್ಲಿಸಿದ ಸೇವೆಗೆ ತಿಮ್ಮಪ್ಪನ ಭಕ್ತರು ಮೆಚ್ಚುಗೆಯನ್ನು ವ್ಯಕ್ತ ಪಡಿಸಿದ್ದಾರೆ.

  • ಹಾನಗಲ್‍ನಿಂದ ಪಾದಯಾತ್ರೆಯಲ್ಲಿ ಬಂದ 76 ವರ್ಷದ ಭಕ್ತ

    ಹಾನಗಲ್‍ನಿಂದ ಪಾದಯಾತ್ರೆಯಲ್ಲಿ ಬಂದ 76 ವರ್ಷದ ಭಕ್ತ

    ಉಜಿರೆ: ಹಾವೇರಿ ಜಿಲ್ಲೆಯ ಹಾನಗಲ್ ನಿವಾಸಿ 76 ವರ್ಷದ ಮಾಲತೇಶಗೊರಪಜ್ಜ ಪಾದಯಾತ್ರೆ ಮೂಲಕ ಶನಿವಾರ ಧರ್ಮಸ್ಥಳ ತಲುಪಿದ್ದಾರೆ. ಕಳೆದ 40 ವರ್ಷಗಳಿಂದ ಪ್ರತಿವರ್ಷ ಲಕ್ಷ ದೀಪೋತ್ಸವಕ್ಕೆ ಧರ್ಮಸ್ಥಳಕ್ಕೆ ಅವರು ಪಾದಯಾತ್ರೆಯಲ್ಲಿ ಬರುತ್ತಿದ್ದಾರೆ.

    ನವೆಂಬರ್ 17 ರಂದು ಅವರು ಹಾನಗಲ್‍ನಿಂದ ಪಾದಯಾತ್ರೆ ಪ್ರಾರಂಭಿಸಿದ್ದರು. ಪಾದಯಾತ್ರೆಯಲ್ಲಿ ತನಗೆ ಎಲ್ಲರೂ ಸಹಕಾರ ನೀಡುತ್ತಾರೆ. ಪಾದಯಾತ್ರೆಯಿಂದ ತನ್ನ ಆರೋಗ್ಯ ಮತ್ತು ಆಯುಷ್ಯ ವೃದ್ಧಿಯಾಗಿದೆ. ಮಾನಸಿಕ ನೆಮ್ಮದಿ, ಶಾಂತಿ, ಸಂತೋಷ ಸಿಕ್ಕಿದೆ ಎಂದು ಅಭಿಮಾನದಿಂದ ಹೇಳುತ್ತಾರೆ ಮಾಲತೇಶಗೊರಪಜ್ಜ.

     

  • ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆಯ ಮಾಡಲು ರೈತರ ನಿರ್ಧಾರ

    ಸಿಎಂ ಭೇಟಿಗಾಗಿ 80 ಕಿ.ಮೀ. ಪಾದಯಾತ್ರೆಯ ಮಾಡಲು ರೈತರ ನಿರ್ಧಾರ

    ಚಾಮರಾಜನಗರ: ಜಿಲ್ಲೆಯ ನೂರಾರು ರೈತರು ನವೆಂಬರ್ 24ರಂದು ಮಲೆಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಜಿಲ್ಲೆಯ ಏಕೈಕ ಸಕ್ಕರೆ ಕಾರ್ಖಾನೆಯಾದ ಕೊಳ್ಳೇಗಾಲ ತಾಲೂಕು ಕುಂತೂರಿನಲ್ಲಿರುವ ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆಯುವುದು ಇದರ ಉದ್ದೇಶವಾಗಿದೆ.

    ನವೆಂಬರ್ 25 ಹಾಗೂ 26ರಂದು ಮುಖ್ಯಮಂತ್ರಿ ಯಡಿಯೂರಪ್ಪ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪಾದಯಾತ್ರೆ ಮೂಲಕ ತೆರಳಿ ಮುಖ್ಯಮಂತ್ರಿಗಳಿಗೆ ಕಬ್ಬುಬೆಳೆಗಾರರ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯ ಮಾಡಲು ರೈತರು ತೀರ್ಮಾನಿಸಿದ್ದಾರೆ.

    ನವೆಂಬರ್ 24ರಂದು ಬೆಳಿಗ್ಗೆ 10 ಗಂಟೆಗೆ ಕೊಳ್ಳೇಗಾಲದಿಂದ ಹೊರಟು 80 ಕಿಲೋ ಮೀಟರ್ ದೂರದಲ್ಲಿರುವ ಮಲೆಮಹದೇಶ್ವರ ಬೆಟ್ಟವನ್ನು ನವೆಂಬರ್ 25ರಂದು ಸಂಜೆ ವೇಳೆಗೆ ತಲುಪಿ, ಅಂದು ಅಥವಾ ಮಾರನೇ ದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಲು ನಿರ್ಧರಿಸಲಾಗಿದೆ ಎಂದು ರೈತ ಮುಖಂಡ ಕುಂತೂರು ನಂಜುಂಡಸ್ವಾಮಿ ತಿಳಿಸಿದ್ದಾರೆ.

    ಕುಂತೂರು ಬಣ್ಣಾರಿ ಸಕ್ಕರೆ ಕಾರ್ಖಾನೆ ಒಪ್ಪಿಗೆಯಾಗಿರುವ ಕಬ್ಬನ್ನು 16-17 ತಿಂಗಳಾದರೂ ಕಟಾವು ಮಾಡುತ್ತಿಲ್ಲ. ಇದರಿಂದ ಕಬ್ಬು ಒಣಗಿ ರೈತರು ನಷ್ಟ ಅನುಭವಿಸುವಂತಾಗಿದೆ. ಕಬ್ಬನ್ನು 12 ತಿಂಗಳ ಒಳಗೆ ಕಟಾವು ಮಾಡಬೇಕು. ಕಳೆದ ವರ್ಷದ ಇಳುವರಿ ಆಧಾರದ ಮೇಲಿನ ದರದಂತೆ ರೈತರಿಗೆ 12 ಕೋಟಿ 95 ಲಕ್ಷ ರೂಪಾಯಿ ಬಾಕಿಯನ್ನು ಇನ್ನೂ ಪಾವತಿಸಿಲ್ಲ ಎಂಬುದು ರೈತರ ಆರೋಪಿಸಿದ್ದಾರೆ.

    ರಂಗರಾಜನ್ ವರದಿ ಪ್ರಕಾರ ಸಕ್ಕರೆ ಕಾರ್ಖಾನೆಯ ಉಪಉತ್ಪನ್ನಗಳ ಲಾಭಾಂಶದಲ್ಲಿ ರೈತರಿಗೆ ಶೇಕಡಾ 70ರಷ್ಟು ಹಾಗೂ ಸಕ್ಕರೆ ಕಾರ್ಖಾನೆಗೆ ಶೇಕಡಾ 30ರಷ್ಟು ಲಾಭಾಂಶ ಹಂಚಿಕೆಯಾಗಬೇಕು. ಮೊಲಾಸೆಸ್, ಫ್ರೆಷ್ ಮಡ್, ಕೋ ಜನರೇಷನ್ ಮೂಲಕ ಉತ್ಪಾದಿಸುವ ವಿದ್ಯುತ್ ನಿಂದ ಬರುವ ಲಾಭಾಂಶವನ್ನು ರೈತರಿಗೆ ನೀಡದೆ ವಂಚಿಸಲಾಗುತ್ತಿದೆ ಎಂದು ರೈತ ಮುಖಂಡ ನಂಜುಂಡಸ್ವಾಮಿ ಆರೋಪಿಸಿದ್ದಾರೆ.

  • ಕ್ಷೇತ್ರದ ಒಳಿತಿಗಾಗಿ ಕೈ ಶಾಸಕಿ ನಿಂಬಾಳ್ಕರ್ ತಿರುಪತಿ ಪಾದಯಾತ್ರೆ

    ಕ್ಷೇತ್ರದ ಒಳಿತಿಗಾಗಿ ಕೈ ಶಾಸಕಿ ನಿಂಬಾಳ್ಕರ್ ತಿರುಪತಿ ಪಾದಯಾತ್ರೆ

    ಕೋಲಾರ: ನೆರೆಯಿಂದ ತತ್ತರಿಸಿರುವ ಕ್ಷೇತ್ರದ ಜನರನ್ನ ಕಾಪಾಡು ತಿಮ್ಮಪ್ಪ ಎಂದು ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಬೆಂಗಳೂರಿನಿಂದ ತಿರುಪತಿಗೆ ಮಾಡುತ್ತಿರುವ ಪಾದಯಾತ್ರೆ ಎರಡನೇ ದಿನಕ್ಕೆ ಕಾಲಿಟ್ಟಿದೆ.

    ಶನಿವಾರ ಕೋಲಾರ ತಾಲೂಕಿನ ಮೂಲಕ ಹಾದುಹೋಗಿ ಇಂದು ಮುಳಬಾಗಿಲು ತಾಲೂಕಿನಲ್ಲಿ ಪಾದಯಾತ್ರೆ ಮಾಡುತ್ತಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಿಂದ ತಿರುಪತಿಗೆ ಪಾದಯಾತ್ರೆ ಮಾಡುತ್ತಿರುವ ಶಾಸಕಿ, ಇಂದು ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75 ರಲ್ಲಿ ಪ್ರಾರ್ಥನಾ ಯಾತ್ರೆ ಮಾಡಿದರು.

    ನೆರೆಯಿಂದ ತತ್ತರಿಸಿರುವ ಬೆಳಗಾವಿ ಹಾಗೂ ಖಾನಾಪುರ ಕ್ಷೇತ್ರದ ಸಂತ್ರಸ್ತರಿಗೆ ತಿರುಪತಿ ತಿಮ್ಮಪ್ಪ ದಯೆ ತೋರಬೇಕು. ಕ್ಷೇತ್ರದ ಅಭಿವೃದ್ಧಿಯೊಂದಿಗೆ ಸಂತ್ರಸ್ತರ ಬದುಕನ್ನು ಹಸನುಗೊಳಿಸಬೇಕೆಂದು ತಿಮ್ಮಪ್ಪನ ದರ್ಶಕ್ಕೆ ಪ್ರಾರ್ಥನಾ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

    ತಮ್ಮ ಪತಿ ಹಿರಿಯ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರೊಂದಿಗೆ ದರ್ಶನಕ್ಕೆ ತೆರಳಿರುವ ಶಾಸಕಿ, ಪ್ರತಿದಿನ 30 ಕಿಲೋಮೀಟರ್‍ಗಳಷ್ಟು ಪಾದಯಾತ್ರೆ ಮಾಡುತ್ತಿದ್ದಾರೆ.