Tag: ಪಾನಿಪುರಿ

  • ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ಉಪವಾಸ ಅಂತ್ಯಗೊಳಿಸಿ ಪಾನಿಪುರಿ ತಿಂದ 19 ಮಕ್ಕಳು ಅಸ್ವಸ್ಥ – ನಾಲ್ವರ ಸ್ಥಿತಿ ಚಿಂತಾಜನಕ

    ದಾವಣಗೆರೆ: ಪಾನಿಪುರಿ (Panipuri) ತಿಂದು 19 ಮಕ್ಕಳು ಅಸ್ವಸ್ಥರಾಗಿ ಆಸ್ಪತ್ರೆ ಸೇರಿರುವ ಘಟನೆ ದಾವಣಗೆರೆ (Davanagere) ಜಿಲ್ಲೆಯ ಹರಿಹರ (Harihara) ತಾಲೂಕಿನ ಮಲೆಬೆನ್ನೂರು ಗ್ರಾಮದಲ್ಲಿ ನಡೆದಿದೆ.

    ಮಲೆಬೆನ್ನೂರಿನ ಜಾಮಿಯಾ ಮಸೀದಿ ಬಳಿ ಘಟನೆ ನಡೆದಿದ್ದು, ಉಪವಾಸ (Fasting) ಅಂತ್ಯ ಮಾಡಿದ ನಂತರ ಮಸೀದಿ (Mosque) ಮುಂಭಾಗ ಮಾರಾಟ ಮಾಡುತ್ತಿದ್ದ ಪಾನಿಪುರಿ ತಿಂದು 19 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಪಾನಿಪುರಿ ತಿಂದು ಕೆಲವೇ ಹೊತ್ತಿನಲ್ಲಿ ವಾಂತಿಯಾಗಿ ಮಕ್ಕಳು ಅಸ್ವಸ್ಥರಾಗಿದ್ದಾರೆ. ಕೂಡಲೇ ಪೋಷಕರು ಮಕ್ಕಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: ದೆಹಲಿ ಮದ್ಯ ನೀತಿ ಹಗರಣ – ತೆಲಂಗಾಣ ಮಾಜಿ ಸಿಎಂ ಕೆಸಿಆರ್‌ ಪುತ್ರಿ ಕವಿತಾ ಅರೆಸ್ಟ್‌

    19 ಮಕ್ಕಳ ಪೈಕಿ 4 ಮಕ್ಕಳ ಆರೋಗ್ಯ ಚಿಂತಾಜನಕವಾಗಿದೆ. ಇವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ರವಾನಿಸಲಾಗಿದೆ. ಸ್ಥಳಕ್ಕೆ ಹರಿಹರ ತಹಶೀಲ್ದಾರ್ ಗುರುಬಸವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಭಾನುವಾರವೂ ತೆರೆಯಲಿದೆ ಉಪನೋಂದಣಿ ಕಚೇರಿ

  • ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಬೀದಿ ಬದಿ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಜನ ಅಸ್ವಸ್ಥ

    ಕೋಲ್ಕತ್ತಾ: ಬೀದಿ ಬದಿ ಮಾರುವ ಪಾನಿಪುರಿ ತಿಂದು 100ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ಸುಗಂಧ ಗ್ರಾಮ ಪಂಚಾಯತ್‌ನ ಡೋಗಾಚಿಯಾ ಪ್ರದೇಶದಲ್ಲಿ ನಡೆದಿದೆ. ಅತಿಸಾರದಿಂದ ಅಸ್ವಸ್ಥಗೊಂಡಿರುವುದಾಗಿ ಶಂಕಿಸಲಾಗಿದೆ.

    ಅತಿಸಾರ ಲಕ್ಷಣಗಳು ಕಂಡುಬಂದಿದ್ದು, ವಾಂತಿ ಹಾಗೂ ಹೊಟ್ಟೆ ನೋವು ಕಾಣಿಸಿಕೊಂಡಿರುವುದಾಗಿ ಸ್ಥಳೀಯರು ದೂರು ನೀಡಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರ ರಚಿಸಿದ್ದ ಎಸಿಬಿ ರದ್ದು – ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಮರುಜೀವ

    ಮಾಹಿತಿ ಪಡೆದ ಆರೋಗ್ಯ ಇಲಾಖೆಯ ವಿಶೇಷ ತಂಡ ಸ್ಥಳಕ್ಕೆ ಆಗಮಿಸಿ ರೋಗಿಗಳಿಗೆ ಔಷಧ ವಿತರಣೆ ಮಾಡಿದ್ದಾರೆ. ಗಂಭೀರ ಅನಾರೋಗ್ಯ ಪರಿಣಾಮ ಕಂಡುಬಂದಿದ್ದರಿಂದ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ತಂಡವು ಸೂಚಿಸಿದೆ.

    ಅನಾರೋಗ್ಯಕ್ಕೆ ಒಳಗಾದವರಲ್ಲಿ ಡೊಗಾಚಿಯಾ, ಬಹಿರ್ ರಣಗಾಚಾ ಹಾಗೂ ಮಕಲ್ತಲಾ ನಿವಾಸಿಗಳು ಸೇರಿದ್ದಾರೆ ಎಂದು ವರದಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಸಾರ್ವಜನಿಕರಿಗೆ ಪಾನಿಪುರಿ ಬಡಿಸಿದ ಮಮತಾ

    ಸಾರ್ವಜನಿಕರಿಗೆ ಪಾನಿಪುರಿ ಬಡಿಸಿದ ಮಮತಾ

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ವಿರೋಧ ಪಕ್ಷಗಳ ನಾಯಕರುಗಳನ್ನು ತರಾಟೆಗೆ ತೆಗೆದುಕೊಳ್ಳುವುದರಿಂದ ಹಿಡಿದು, ಸ್ಫೋಟಕ ಹೇಳಿಕೆ ನೀಡುವವರೆಗೆ ಯಾವಾಗಲೂ ಸುದ್ದಿಯಲ್ಲಿರುತ್ತಾರೆ. ಆದರೆ ಮಮತಾ ಇಂದು ವಿಶೇಷ ಕಾರಣಕ್ಕೆ ಸುದ್ದಿಯಾಗಿದ್ದಾರೆ.

    ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ನಲ್ಲಿ 3 ದಿನಗಳ ಭೇಟಿಯಲ್ಲಿರುವ ಮಮತಾ ಬ್ಯಾನರ್ಜಿ, ರುಚಿಕರವಾದ ಫುಚ್ಕಾ(ಪಾನಿಪುರಿ)ಯನ್ನು ಜನರಿಗೆ ಉಣಬಡಿಸಿದ್ದಾರೆ. ಮಕ್ಕಳಿಂದ ಹಿಡಿದು ಹಿರಿಯ ನಾಗರಿಕರವರೆಗೂ ಸ್ವತಃ ಬ್ಯಾನರ್ಜಿ ಪಾನಿಪುರಿಯನ್ನು ಬಡಿಸಿದ್ದಾರೆ. ಮಮತಾ ಕೈಯಾರೇ ಬಡಿಸಿದ ಪಾನಿಪುರಿಯನ್ನು ಸವಿಯಲು ಜನರು ಸ್ಥಳದಲ್ಲಿ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: 24 ದಿನಗಳಲ್ಲಿ 9ನೇ ಕೇಸ್ – ಮಂಗಳೂರಿನಿಂದ ದುಬೈಗೆ ತೆರಳಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ

    ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತದ(ಜಿಟಿಎ) ಹೊಸದಾಗಿ ಚುನಾಯಿತರಾದ 45 ಸದಸ್ಯರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮಮತಾ ಬ್ಯಾನರ್ಜಿ 3 ದಿನಗಳ ಡಾರ್ಜಿಲಿಂಗ್ ಭೇಟಿಯಲ್ಲಿದ್ದಾರೆ. ಅವರ ಪ್ರವಾಸ ಸೋಮವಾರ ಪ್ರಾರಂಭವಾಗಿದ್ದು, ಗುರುವಾರ ಕೋಲ್ಕತ್ತಾಗೆ ಮರಳಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಟೋಲ್‌ ಸಿಬ್ಬಂದಿ ಜೊತೆ WWE ಖ್ಯಾತಿಯ ಗ್ರೇಟ್‌ ಖಲಿ ಗಲಾಟೆ – ವೀಡಿಯೋ ವೈರಲ್‌

    ಮಮತಾ ಇಂದು ಡಾರ್ಜಿಲಿಂಗ್ ಚೌರಸ್ತಾದಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ನೇಪಾಳದಲ್ಲಿ ಪಾನಿಪುರಿ ಮಾರಾಟ ನಿಷೇಧ

    ನೇಪಾಳದಲ್ಲಿ ಪಾನಿಪುರಿ ಮಾರಾಟ ನಿಷೇಧ

    ಕಠ್ಮಂಡು: ಲಲಿತ್‍ಪುರ ಮೆಟ್ರೋಪಾಲಿಟನ್ ಸಿಟಿಯಲ್ಲಿ ಕಾಲರಾ ಪ್ರಕರಣಗಳು ಹೆಚ್ಚುತ್ತಿರುವುದರಿಂದ ನೇಪಾಳದ ಕಠ್ಮಂಡುವಿನಲ್ಲಿ ಪಾನಿಪುರಿ ಮಾರಾಟವನ್ನು ನಿಷೇಧಿಸಲಾಗಿದೆ.

    ಈ ಕುರಿತು ಅಲ್ಲಿನ ಎಲ್‍ಎಂಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಪಾನಿಪುರಿಯಲ್ಲಿ ಬಳಸುವ ನೀರಿನಲ್ಲಿ ಕಾಲರಾ ಬ್ಯಾಕ್ಟೀರಿಯಾ ಕಂಡುಬಂದಿದೆ. ಇದರಿಂದಾಗಿ ಪಾನಿಪುರಿ ಮಾರಾಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

    ನೇಪಾಳದ ಆರೋಗ್ಯ ಮತ್ತು ಜನಸಂಖ್ಯೆ ಸಚಿವಾಲಯದ ಪ್ರಕಾರ, ದೇಶದಲ್ಲಿ ಒಟ್ಟು 17 ಕಾಲರಾ ರೋಗಿಗಳಿದ್ದಾರೆ. ಇದೀಗ ಕಠ್ಮಂಡುವಿನಲ್ಲಿ ಇನ್ನೂ 7 ಜನರಿಗೆ ಕಾಲರಾ ದೃಢವಾಗಿದೆ. ಈ 7 ಪ್ರಕರಣಗಳಲ್ಲಿ 5 ಪ್ರಕರಣಗಳು ಕಠ್ಮಂಡು ಮಹಾನಗರದಲ್ಲಿ ಮತ್ತು ಚಂದ್ರಗಿರಿ ಪುರಸಭೆ ಮತ್ತು ಬುಧಾನಿಲಕಂಠ ಪುರಸಭೆಯಲ್ಲಿ ತಲಾ ಒಂದು ಪ್ರಕರಣಗಳು ವರದಿ ಆಗಿದೆ. ಇದನ್ನೂ ಓದಿ:  ಕಾಶ್ಮೀರದಲ್ಲಿ ಸರಣಿ ಸ್ಫೋಟ- ಇಬ್ಬರು ಲಷ್ಕರ್ ಉಗ್ರರು ಅರೆಸ್ಟ್

    ಈ ಹಿನ್ನೆಲೆಯಲ್ಲಿ ಕಾಲರಾ ಹರಡುವುದನ್ನು ನಿಯಂತ್ರಿಸಲು ಪಾನಿಪುರಿ ಮಾರಾಟವನ್ನು ನಿಲ್ಲಿಸಲು ಮಹಾನಗರ ಪಾಲಿಕೆ ಸಿದ್ಧತೆಯನ್ನು ನಡೆಸಿದೆ. ಸೋಂಕಿತ ಜನರು ಪ್ರಸ್ತುತ ಟೇಕುನಲ್ಲಿರುವ ಸುಕ್ರರಾಜ್‍ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಪೈಥಾನ್ ಬಳಸಿ ಗುಂಡಿ ಮುಚ್ಚದ ಬಿಬಿಎಂಪಿಗೆ ಹೈಕೋರ್ಟ್ ಫುಲ್ ಕ್ಲಾಸ್

    Live Tv

  • ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥ

    ಪಾನಿಪುರಿ ತಿಂದು 97 ಮಕ್ಕಳು ಅಸ್ವಸ್ಥ

    ಭೂಪಾಲ್: ಜಾತ್ರೆಯೊಂದರಲ್ಲಿ ಪಾನಿಪುರಿ ತಿಂದ 97 ಮಕ್ಕಳು ಅಸ್ವಸ್ಥಗೊಂಡಿರುವ ಘಟನೆ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ನಡೆದಿದೆ.

    ಜಿಲ್ಲಾ ಕೇಂದ್ರದಿಂದ 38 ಕಿ.ಮೀ ದೂರದಲ್ಲಿರುವ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಸಿಂಗರಾಪುರ ಪ್ರದೇಶದಲ್ಲಿ ಆಯೋಜಿಸಿದ್ದ ಜಾತ್ರೆಯಲ್ಲಿ ಈ ಘಟನೆ ನಡೆದಿದೆ. ಅಸ್ವಸ್ಥಗೊಂಡವರೆಲ್ಲರೂ ಒಂದೇ ಅಂಗಡಿಯಲ್ಲಿ ಪಾನಿಪುರಿಯನ್ನು ತಿಂದಿದ್ದಾರೆ. ಅವರೆಲ್ಲರೂ ಸಮೀಪದ ವಿವಿಧ ಗ್ರಾಮಗಳಿಂದ ಖರೀದಿಗೆಂದು ಆಗಮಿಸಿದ್ದರು.

    POLICE JEEP

    ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಕೆ.ಆರ್.ಶಾಕ್ಯಾ ಮಾತನಾಡಿ, ಪಾನಿಪುರಿ ತಿಂದ ಮಕ್ಕಳಿಗೆಲ್ಲರಿಗೂ ವಾಂತಿ, ಹೊಟ್ಟೆನೋವು ಕಾಣಿಸಿಕೊಂಡಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಸ್- ಟ್ರಕ್ ಮುಖಾಮುಖಿ ಡಿಕ್ಕಿ- ಕರ್ನಾಟಕದಿಂದ ಅಯೋಧ್ಯೆಗೆ ತೆರಳುತ್ತಿದ್ದ 7 ಜನರ ದುರ್ಮರಣ

    ಅಸ್ವಸ್ತಗೊಂಡ 97 ಮಕ್ಕಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಘಟನೆಗೆ ಸಂಬಂಧಿಸಿ ಪಾನಿಪುರಿ ಮಾರಾಟಗಾರನನ್ನು ಬಂಧಿಸಲಾಗಿದೆ ಮತ್ತು ತಿಂಡಿಯ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಇದನ್ನೂ ಓದಿ: ಪ್ರತಿದಿನ ಸಾಯೋದಕ್ಕಿಂತ ಒಂದೇ ದಿನ ಸಾಯೋದು ಒಳಿತು – ಮೂವರು ಸಹೋದರಿಯರು ಮಕ್ಕಳೊಂದಿಗೆ ಆತ್ಮಹತ್ಯೆ

  • ಕೇಳದೇ ಪಾನಿಪುರಿ ತಂದ ಗಂಡ- ಪ್ರಾಣ ಬಿಟ್ಟ ಪತ್ನಿ

    ಕೇಳದೇ ಪಾನಿಪುರಿ ತಂದ ಗಂಡ- ಪ್ರಾಣ ಬಿಟ್ಟ ಪತ್ನಿ

    ಮುಂಬೈ: ಪತಿ ತನ್ನನ್ನು ಕೇಳದೆ ಪಾನಿಪುರಿ ತಂದ ಎಂದು ಕೋಪಗೊಂಡ ಪತ್ನಿ ಆತನೊಂದಿಗೆ ಸಿಕ್ಕಾಪಟೆ ಜಗಳ ಆಡಿ, ನಂತರ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

    ಪ್ರತೀಕ್ಷಾ ಸರ್ವದೆ ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದಾಳೆ. ಆಕೆಯ ಪತಿ ಗಹಿನಿನಾಥ್ ಸರ್ವದೆ ಪೊಲೀಸ್ ಕಸ್ಟಡಿಯಲ್ಲಿದ್ದಾರೆ. ಗಹಿನಿನಾಥ್ ಅವರ ಹುಟ್ಟೂರು ಸೋಲಾಪುರ. 2019ರಲ್ಲಿ ಇವರಿಬ್ಬರೂ ಮದುವೆಯಾಗಿದ್ದು, ಒಬ್ಬ ಮಗ ಕೂಡ ಇದ್ದಾನೆ. ಪಾನಿಪುರಿಗಾಗಿ ಜಗಳ ಮಾಡಿಕೊಂಡು ಪ್ರತೀಕ್ಷಾ ಪ್ರಾಣ ಬಿಟ್ಟಿದ್ದಾಳೆ. ಇದನ್ನೂ ಓದಿ: ವಧು ಬೇಕಾಗಿದ್ದಾಳೆ, ಅಂಗಡಿ ಮುಂದೆ ಬೋರ್ಡ್-ಆಸ್ಟ್ರೇಲಿಯ, ಇಂಗ್ಲೆಂಡ್‍ನಿಂದ ಬಂತು ಆಫರ್

    ಗಹಿನಿನಾಥ್ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದನು. ಗಹಿನಿನಾಥ್ ಮತ್ತು ಪ್ರತೀಕ್ಷಾ ಇಬ್ಬರೂ ಮದುವೆಯಾದ ನಂತರ ಪದೇಪದೆ ಜಗಳವಾಡುತ್ತಿದ್ದರು. ಇತ್ತೀಚೆಗಷ್ಟೇ ಇವರಿಬ್ಬರೂ ಅಂಬೇಗಾಂವ್ ಏರಿಯಾದಲ್ಲಿ ವಾಸಿಸಲು ಶುರು ಮಾಡಿದ್ದರು. ಇದನ್ನೂ ಓದಿ: ವಿದ್ಯಾರ್ಥಿಗಳ ಜತೆ ಸಿಎಂ ಬಸವರಾಜ ಬೊಮ್ಮಾಯಿ ಮಾತುಕತೆ

    ಗಹಿನಿನಾಥ್ ಆಫೀಸಿನಿಂದ ಮನೆಗೆ ಬರುವಾಗ ಪಾನಿಪುರಿ ಪಾರ್ಸೆಲ್ ತಂದಿದ್ದರು. ಅದನ್ನು ನೋಡಿ ಖುಷಿಯಿಂದ ತಿನ್ನುವುದನ್ನು ಬಿಟ್ಟು ಪ್ರತೀಕ್ಷಾ, ನನ್ನನ್ನು ಕೇಳದೆ ಪಾನಿಪುರಿ ಯಾಕೆ ತಂದಿರಿ ಎಂದು ಪ್ರಶ್ನಿಸಿದ್ದಳು. ಜಗಳವನ್ನೂ ಪ್ರಾರಂಭಿಸಿದ್ದಲ್ಲದೆ, ಆ ಪಾನಿಪುರಿಯನ್ನು ತಿನ್ನಲೂ ಇಲ್ಲ. ಮರುದಿನ ಬೆಳಗ್ಗೆ ಗಹಿನಿನಾಥ್ ಕೆಲಸಕ್ಕೆ ಹೋಗುವಾಗ ತಿಂಡಿಯನ್ನೂ ಮಾಡಿಕೊಡಲಿಲ್ಲ. ಆಕೆ ಅದಾಗಲೇ ವಿಷಯುಕ್ತ ಮಾತ್ರೆ ಸೇವಿಸಿದ್ದಳು. ಅತ್ಯಂತ ಗಂಭೀರ ಪರಿಸ್ಥಿತಿಯಲ್ಲಿದ್ದ ಆಕೆಯನ್ನು ಆಸ್ಪತ್ರೆಗೆ ಸೇರಿಸಿಲಾಯಿತು. ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ. ಇಷ್ಟಾದ ಮೇಲೆ ಪ್ರತೀಕ್ಷಾಳ ತಂದೆ ಪ್ರಕಾಶ್ ಪಿಸೆ ಗಹಿನಿನಾಥ್ ವಿರುದ್ಧ ದೂರು ನೀಡಿದ್ದಾರೆ. ಇದನ್ನೂ ಓದಿ: ಪ್ರತಿ ಬುಧವಾರ 10 ಲಕ್ಷ ಲಸಿಕೆ ಗುರಿ: ಸುಧಾಕರ್

    ಪಾನಿಪುರಿ ಕಾರಣಕ್ಕೆ ಜಗಳ ಶುರು ಮಾಡಿದ್ದರು. ಇಬ್ಬರ ನಡುವಿನ ವಾಗ್ವಾದ ತೀವ್ರರೂಪಕ್ಕೆ ಏರಿ, ಕೊನೆಗೆ ಪತ್ನಿಯ ಸಾವಿನಲ್ಲಿ ಅಂತ್ಯವಾಗಿದೆ. ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ಪ್ರಕರಣ ದಾಖಲಾಗಿದೆ.

  • ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ಪಾನಿಪುರಿ ಪ್ರಿಯರಿಗೆ ಶಾಕಿಂಗ್ ನ್ಯೂಸ್- ನೀರಿಗೆ ಮೂತ್ರ ಬೆರೆಸಿದ ವೀಡಿಯೋ ವೈರಲ್

    ದಿಸ್ಪುರ್: ಪಾನಿಪುರಿ, ಗೋಲ್‍ಗಪ್ಪಾ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ. ರಸ್ತೆ ಬದಿಯಲ್ಲಿ ಸಿಗುವ ಪಾನಿಪುರಿಯನ್ನಂತೂ ಯುವಕ- ಯುವತಿಯರು ಬಾಯಿ ಚಪ್ಪರಿಸಿಕೊಂಡು ತಿನ್ನುತ್ತಾರೆ. ಇದೀಗ ಇಂತಹ ಪಾನಿಪುರಿ, ಗೋಲ್‍ಗಪ್ಪಾ ಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದು ವರದಿಯಾಗಿದೆ.

    ಹೌದು. ರಸ್ತೆ ಬದಿ ಪಾನಿಪುರಿ ಮಾರಾಟ ಮಾಡುತ್ತಿರುವ ವ್ಯಕ್ತಿಯೊಬ್ಬ ಪಾನಿಗೆ ತನ್ನ ಮೂತ್ರ ಬೆರೆಸುತ್ತಿರುವ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಅಸ್ಸಾಂನ ಗುವಾಹಟಿಯಲ್ಲಿ ನಡೆದಿದೆ. ಇದನ್ನೂ ಓದಿ: ಕಾಬೂಲ್‍ನಿಂದ ಭಾರತಕ್ಕೆ ಮರಳ್ತಿದ್ದಂತೆ ತಮ್ಮನಿಗೆ ಕಿಸ್ ಕೊಟ್ಟ ಅಕ್ಕ- ಭಾವನಾತ್ಮಕ ವೀಡಿಯೋ ವೈರಲ್

    ವೀಡಿಯೋದಲ್ಲಿ ವ್ಯಕ್ತಿಯೊಬ್ಬ ಕೈ ಗಾಡಿಯಲ್ಲಿ ಪಾನಿಪುರಿ ಮಾರಾಟ ಮಾಡುತ್ತಿದ್ದಾನೆ. ಈ ವ್ಯಕ್ತಿ ಮಗ್ ಗೆ ಮೂತ್ರ ಮಾಡಿ ಅದನ್ನು ಪಾನಿಗೆ ಮಿಕ್ಸ್ ಮಾಡುತ್ತಿರುವುದನ್ನು ವೀಡಿಯೋದಲ್ಲಿ ಕಾಣಬಹುದಾಗಿದೆ. ಸದ್ಯ 20 ಸೆಕೆಂಡ್ ವೀಡಿಯೋ ನೋಡಿದ ನೆಟ್ಟಿಗರು ವ್ಯಾಪಾರಿ ವಿರುದ್ಧ ಕಿಡಿಕಾರುತ್ತಿದ್ದಾರೆ. ಅಲ್ಲದೆ ಕೂಡಲೇ ಆತನನ್ನು ಬಂಧಿಸುವಂತೆ ಒತ್ತಾಯಿಸಿದ್ದಾರೆ.  ಇದನ್ನೂ ಓದಿ: ನಮ್ಮ ಪಕ್ಷದಲ್ಲಿ ಕಾರ್ಯಕರ್ತರು ಸರಿಯಿಲ್ಲ: ಹೆಚ್.ಡಿ. ಕುಮಾರಸ್ವಾಮಿ

    ಒಟ್ಟಿನಲ್ಲಿ ಗೋಲ್‍ಗಪ್ಪಾ ನೀರಿಗೆ ವ್ಯಕ್ತಿ ಮೂತ್ರ ಬೆರೆಸುವುದು ಕ್ಲೀಯರ್ ಆಗಿ ಕಾಣುತ್ತಿದೆ. ಹೀಗಾಗಿ ನೆಟ್ಟಿಗರು ವ್ಯಾಪಾರಿಯ ನಡತೆಯನ್ನು ಖಂಡಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗುತ್ತಿದ್ದಂತೆಯೇ ಪೊಲೀಸರು ವ್ಯಾಪಾರಿ ವಿರುದ್ಧ ಕ್ರಮ ಕೈಗೊಂಡಿದ್ದಾರೆ. ಅಲ್ಲದೆ ಆತನನ್ನು ಬಂಧಿಸಿರುವುದಾಗಿ ವರದಿಯಾಗಿದೆ.  ಇದನ್ನೂ ಓದಿ: ತಾನು ಸೆಲೆಕ್ಟ್ ಮಾಡಿದ ಹಾಡು ಹಾಕೋವರೆಗೂ ಮದುವೆ ಹಾಲ್‍ಗೆ ತೆರಳಲು ನಿರಾಕರಿಸಿದ ವಧು!

  • ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಪಾಕ್ ವಿರುದ್ಧ ಶತಕ ಸಿಡಿಸಿದ ಪಾನಿಪುರಿ ಮಾರುತ್ತಿದ್ದ 18ರ ಪೋರ ಜೈಸ್ವಾಲ್

    ಪೊಷೆಫ್‍ಸ್ಟ್ರೂಮ್: ಅಂಟರ್ 19 ವಿಶ್ವಕಪ್‍ನ ಸೆಮಿಫೈನಲ್‍ನಲ್ಲಿ ಭಾರತದ ಯುವ ಪಡೆ ಪಾಕಿಸ್ತಾನದ ವಿರುದ್ಧ 88 ಎಸೆತಗಳು ಬಾಕಿ ಇರುವಂತೆ 10 ವಿಕೆಟ್‍ಗಳಿಂದ ಭರ್ಜರಿ ಗೆಲುವು ದಾಖಲಿಸಿದೆ. ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಹಾಗೂ ಬೌಲಿಂಗ್‍ನಲ್ಲಿ ಮಿಂಚಿ ತಂಡದ ಗೆಲುವಿಗೆ ಪ್ರಮುಖ ಪಾತ್ರವಹಿಸಿದರು.

    ಭಾರತದ ಆರಂಭಿಕ ಬ್ಯಾಟ್ಸ್‌ಮನ್‌ 18 ವರ್ಷದ ಯಶಸ್ವಿ ಜೈಸ್ವಾಲ್ 105 ರನ್ (113 ಎಸೆತ, 8 ಬೌಂಡರಿ, 4 ಸಿಕ್ಸರ್) ಹಾಗೂ ದಿವ್ಯಾಂಶ್ ಸಕ್ಸೇನಾ 59 ರನ್ (99 ಎಸೆತ, 6 ಬೌಂಡರಿ) ಗಳಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಈ ಮೂಲಕ 7ನೇ ಬಾರಿ ಭಾರತ ಫೈನಲ್ ಪ್ರವೇಶಿಸಿದೆ. 3 ಓವರ್ ಬೌಲಿಂಗ್ ಮಾಡಿದ ಯಶಸ್ವಿ ಜೈಸ್ವಾಲ್ ಕೇವಲ 11 ರನ್ ನೀಡಿ, ಒಂದು ವಿಕೆಟ್ ಕಿತ್ತು ತಂಡಕ್ಕೆ ಆಸರೆಯಾದರು.

    ಪಾನಿಪುರಿ ಮಾರುತ್ತಿದ್ದ ಜೈಸ್ವಾಲ್:
    ಕೆಲವು ವರ್ಷಗಳ ಹಿಂದೆ ಮುಂಬೈನ ಜನನಿಬಿಡ ಪ್ರದೇಶದಲ್ಲಿ ವಾಸಿಸುತ್ತಿದ್ದ ಯಶಸ್ವಿ ಜೈಸ್ವಾಲ್ ಇಂದು ಭಾರತೀಯ ಕ್ರಿಕೆಟ್‍ನಲ್ಲಿ ವೇಗವಾಗಿ ಬೆಳೆಯುತ್ತಿದ್ದಾರೆ. ಕೇವಲ 18ನೇ ವಯಸ್ಸಿನಲ್ಲಿ, ಯಶಸ್ವಿ ದೇಶೀಯ ಕ್ರಿಕೆಟ್‍ನಲ್ಲಿ ದ್ವಿಶತಕ ಬಾರಿಸಿ ಹಾಗೂ ಅಂತರಾಷ್ಟ್ರೀಯ ಕ್ರಿಕೆಟ್‍ನಲ್ಲಿ ಶತಕ ಸಾಧನೆ ಮಾಡಿದ್ದಾರೆ.

    ಆದರೆ ಸೆಲೆಬ್ರಿಟಿಗಳಿಗೆ ಎಲ್ಲವೂ ಅಷ್ಟು ಸುಲಭವಲ್ಲ. ಮುಂಬೈನ ಭಾರತೀಯ ಕ್ರಿಕೆಟ್ ದೈತ್ಯರ ಮುಂದೆ ತನ್ನ ಛಾಪು ಮೂಡಿಸಲು ಯಶಸ್ವಿ 10ನೇ ವಯಸ್ಸಿನಲ್ಲಿ ಉತ್ತರ ಪ್ರದೇಶದ ಭಾದೋಹಿ ತೊರೆದಿದ್ದರು. ಆ ಬಳಿಕ ಕಠಿಣ ಸವಾಲುಗಳನ್ನು ಎದುರಿಸಬೇಕಾಯಿತು. ಕ್ರಿಕೆಟಿಗನಾಗುವ ಮೂಲಕ ದೇಶಕ್ಕಾಗಿ ಆಡುವ ಕನಸು ಹೊತ್ತಿದ್ದ ಯಶಸ್ವಿ ಮುಂದೆ ಅನೇಕ ಸವಾಲುಗಳು ಎದುರಾದವು. ಆದರೆ ಎಲ್ಲವನ್ನೂ ಸ್ಥಿರವಾಗಿ ಎದುರಿಸಿದ ಯಶಸ್ವಿ ಜೈಸ್ವಾಲ್ ಮುಂಬೈನ ಬೀದಿಯ ಅಂಗಡಿಯೊಂದರಲ್ಲಿ ಪಾನಿಪುರಿ ಮಾರುತ್ತಿದ್ದರು.

    ಯಶಸ್ವಿ ಜೈಸ್ವಾಲ್ 12ನೇ ವಯಸ್ಸಿನಲ್ಲಿ ರಾಜ ಶಿವಾಜಿ ವಿದ್ಯಾಮಂದಿರ್ (ದಾದರ್) ವಿರುದ್ಧದ ಪಂದ್ಯದಲ್ಲಿ 319 ರನ್ ಗಳಿಸಿದ್ದರು. ಜೈಸ್ವಾಲ್ 2014ರ ಜನವರಿಯಲ್ಲಿ ಅಂಜುಮಾನ್ ಇಸ್ಲಾಂ ಪ್ರೌಢಶಾಲೆ (ಕೋಟೆ) ಪರ ಆಡುತ್ತಿದ್ದರು. ಗೈಲ್ಸ್ ಶೀಲ್ಡ್ ಸ್ಕೂಲ್ ಪಂದ್ಯದಲ್ಲಿ ಅವರು ತ್ರಿಶತಕ ಸಿಡಿಸಿದ್ದರು. ಜೊತೆಗೆ 99ರನ್ ನೀಡಿ 13 ವಿಕೆಟ್ ಪಡೆದಿದ್ದರು. ಕಳೆದ ವರ್ಷ ದೇಶಿ ಕ್ರಿಕೆಟ್‍ನಲ್ಲಿ ಜಾರ್ಖಂಡ್ ವಿರುದ್ಧ ದ್ವಿಶತಕ ಸಿಡಿಸಿದ್ದರು. ಈ ಮೂಲಕ ಲಿಸ್ಟ್-ಎ ಟೀಂನಲ್ಲಿ ದ್ವಿಶತಕ ಬಾರಿಸಿದ ಏಳನೇ ಭಾರತೀಯ ಕ್ರಿಕೆಟರ್ ಎಂಬ ಹೆಗ್ಗಳಿಕೆಗೆ ಯಶಸ್ವಿ ಜೈಸ್ವಾಲ್ ಪಾತ್ರರಾಗಿದ್ದರು.

    ಈ ಹಿಂದೆ ಮಾಜಿ ಕ್ರಿಕೆಟರ್ ಸಚಿನ್ ತೆಂಡೂಲ್ಕರ್, ವೀರೇಂದ್ರ ಸೆಹ್ವಾಗ್, ಟೀಂ ಇಂಡಿಯಾ ಬ್ಯಾಟ್ಸ್‍ಮನ್ ರೋಹಿತ್ ಶರ್ಮಾ, ಶಿಖರ್ ಧವನ್, ಕರ್ಣ ಕೌಶಲ್ ಮತ್ತು ಸ್ಯಾಮ್ಸನ್ ದ್ವಿಶತಕ ಸಾಧನೆ ಮಾಡಿದ್ದಾರೆ. ಅದರಲ್ಲೂ ಹಿಟ್‍ಮ್ಯಾನ್ ರೋಹಿತ್ ಶರ್ಮ ಅತಿ ಹೆಚ್ಚು ದ್ವಿಶತಕ ಗಳಿಸಿದ್ದಾರೆ.

  • ಪಾನಿಪುರಿ C/o ಯಮಪುರಿ-ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್

    ಪಾನಿಪುರಿ C/o ಯಮಪುರಿ-ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್

    ಗದಗ: ಗೋಬಿಮಂಚೂರಿ ಹಾಗೂ ಪಾನಿಪುರಿ ಐಟಮ್ಸ್, ಈ ಹೆಸರು ಕೇಳಿದರೆ ಎಲ್ಲರಿಗೂ ತಿನ್ನಬೇಕು ಅನ್ನಿಸುತ್ತದೆ. ಆದರೆ ಜಂಕ್ ಫುಡ್ ಹೇಗೆ, ಎಲ್ಲಿ ತಯಾರಾಗುತ್ತೆ ಅನ್ನೋ ಹಿಂದಿನ ಅಸಲಿ ಸತ್ಯ ಬಯಲಾಗಿದೆ.

    ಇತ್ತೀಚೆಗೆ ಎಲ್ಲೆಂದರಲ್ಲಿ ಚೈನಿಸ್ ಫುಡ್‍ಗಳದ್ದೇ ಹಾವಳಿವಾಗಿದ್ದು, ಅದರಲ್ಲೂ ಗೋಬಿಮಂಚುರಿ, ಪಾನಿಪುರಿ ಐಟಮ್ಸ್ ಅಂದರೆ ಸಾಕು ಜನ ಮುಗಿಬೀಳುತ್ತಾರೆ. ಆದರೆ ಮುದ್ರಣಾ ಕಾಶಿ ಗದಗನಲ್ಲಿ ಲಾಭದಾಸೆಗಾಗಿ ಜಂಕ್‍ಫುಡ್ ಮಾಡುವ ವ್ಯಾಪರಿಗಳು ಅವುಗಳನ್ನ ಅನೇಕ ಕೊಳೆತ ವಸ್ತುಗಳಿಂದ ತಯಾರಿಸುತ್ತಾರೆ. ಬೆಟಗೇರಿಯ ಬಸ್ ನಿಲ್ದಾಣದ ಹಿಂಭಾಗ, ತೆಂಗಿನಕಾಯಿ ಬಜಾರ, ತೋಂಟದಾರ್ಯ ಮಠದ ಮುಂದಿನ ರಸ್ತೆ, ಹಾತಲಗೇರಿ ನಾಕಾ, ಮುಳಗುಂದ ನಾಕಾ ಸೇರಿದಂತೆ ಅನೇಕ ಕಡೆಗಳಲ್ಲಿ ಜಂಕ್ ಫುಡ್ ಹೇಗೆಲ್ಲಾ ತಯಾರುತ್ತವೆ ಎಂಬುದನ್ನು ಪಬ್ಲಿಕ್ ಟಿವಿತಂಡ ರಹಸ್ಯ ಕಾರ್ಯಾಚರಣೆ ಮೂಲಕ ಬಯಲು ಮಾಡಿದೆ.

    ಜಂಕ್‍ಫುಡ್‍ಗೆ ಕೆಟ್ಟಿರುವ ಹೂ ಕೋಸು, ಕ್ಯಾಬೇಜ್, ಸ್ಟಾಕ್ ಮೈದಾಹಿಟ್ಟು, ಟೆಸ್ಟಿಂಗ್ ಪೌಡರ್, ಐಸ್ ಹೀಗೆ ಅನೇಕ ವಸ್ತುಗಳನ್ನ ಬಳಸಿ ತಯಾರಿಸಲಾಗುತ್ತದೆ. ಇದನ್ನು ಸೇವಿಸುವುದರಿಂದ ಮನುಷ್ಯ ಮಾರಕ ಕಾಯಿಲೆ ಒಳಗಾಗುತ್ತಾನೆ. ಕೊಬ್ಬಿನಾಂಶ, ಹೆಪಟೈಟಿಸ್-ಬಿ, ಕಾಮಾಲೆ, ಕ್ಯಾನ್ಸರ್, ಟೈಫಾಯಿಡ್ ಸೇರಿದಂತೆ ಗ್ಯಾಸ್ಟ್ರಿಕ್ ನಂತಹ ಮಾರಕ ರೋಗಗಳು ನಿಮಗೆ ಗೊತ್ತಿಲ್ಲದೇ ನಿಮ್ಮನ್ನ ಆವರಿಸಿಕೊಳ್ಳುತ್ತವೆ ಎಂಬುದು ವೈದ್ಯರ ಸಲಹೆಯಾಗಿದೆ.

    ಗಬ್ಬೆದ್ದು ನಾರುವ ಜಾಗದಲ್ಲಿ, ಶೌಚಾಲಯ ಪಕ್ಕದಲ್ಲಿ ಇದನ್ನೆಲ್ಲಾ ತಯಾರಿಸುತ್ತಾರೆ. ಜೊತೆಗೆ ಪೇಂಟಿಂಗ್ ಪ್ಲಾಸ್ಟಿಕ್ ಡಬ್ಬಗಳಲ್ಲಿ ಸಾಸ್ ತಯಾರಿಸುತ್ತಾರೆ. ಕೆಟ್ಟು, ಹುಳುಹತ್ತಿದ ಕ್ಯಾಬೇಜ್ ಹಾಗೂ ಹೂ ಕೋಸು ಬಳಸಿ ಗೋಬಿ ತಯಾರಿಸುತ್ತಾರೆ. ಹೋಟೆಲ್‍ಗಳಲ್ಲಿ ಪುರಿ, ಮಿರ್ಚಿ-ಬಜ್ಜಿ, ಕಾಂದಾ ಬಜ್ಜಿ, ಸೇವ್ ತಯಾರಿಸಿ ಉಳಿದ ವೆಸ್ಟ್ ಆಗಿರುವ ಎಣ್ಣೆ ತಂದು ಪಾನಿಪುರಿ ತೆಗೆಯುತ್ತಾರೆ. ಅಷ್ಟೇ ಅಲ್ಲದೇ ಬೇರೆ ಬೇರೆ ಎಣ್ಣೆ, ಬಹಳ ದಿನದ ಸ್ಟಾಕ್ ಮೈದಾಹಿಟ್ಟು, ಟೆಸ್ಟಿಂಗ್ ಪೌಡರ್, ಹೀಗೆ ಅನುಪಯುಕ್ತ ವಸ್ತುಗಳು, ಕಲುಷಿತ ನೀರಲ್ಲಿ ಕೆಟ್ಟುಹೋದ ಐಸ್ ಹಾಕುತ್ತಾರೆ ಎಂದು ತಿಳಿದು ಬಂದಿದೆ.

    ಇವತ್ತು ನಾಯಿ ಕೊಡೆಗಳ ರೀತಿ ಪಾನಿಪೂರಿ ಸ್ಟಾಲ್‍ಗಳು, ಗೋಬಿ ಮಂಚೂರಿ ಸ್ಟಾಲ್‍ಗಳು ತಲೆ ಎತ್ತಿವೆ. ದಾರಿಲೀ ಹೋಗುತ್ತಿದ್ದರೆ ಘಮ ಘಮ ಅನ್ನೋ ವಾಸನೆ ಮೂಗಿಗೆ ರಪ್ ಅಂತಾ ಹೊಡೆಯುತ್ತದೆ. ಇವುಗಳ ನಡುವೆ ಗೋಲ್‍ಗಪ್ಪಾ ಮಾರೋರ ಹಾವಳಿ ಬೇರೆ ಹೆಚ್ಚಾಗಿದೆ ಎಂದು ಪಾನಿಪುರಿ ಪ್ರಿಯರಾದ ಕವಿತಾ ಹೇಳಿದ್ದಾರೆ.

    ಇಷ್ಟೆಲ್ಲಾ ಅಕ್ರಮ ನಡೆಯುತ್ತಿದ್ದರೂ ಆಹಾರ ಮತ್ತು ನಾಗರಿಕ ಅಧಿಕಾರಿಗಳು, ಆರೋಗ್ಯ ಅಧಿಕಾರಿಗಳು ಸುಮ್ಮನ್ನಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಅಧಿಕಾರಿಗಳು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳದೇ ಹೋದರೆ ಆರೋಗ್ಯ ಇಲಾಖೆ ಹಾಗೂ ಆಹಾರ ಇಲಾಖೆ ಇದ್ದೂ ಇಲ್ಲದಂತಾಗುತ್ತವೆ. ಹೀಗಾಗಿ ಈ ಬಗ್ಗೆ ಗದಗನ ಜಿಲ್ಲಾ ಮಟ್ಟದ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕಿದೆ. ಕಳಪೆಮಟ್ಟದ ಪದಾರ್ಥಗಳನ್ನ ಬಳಸಿ ಸಿದ್ಧಗೊಳ್ಳುವ ಆಹಾರಕ್ಕೆ ಕಡಿವಾಣ ಹಾಕಬೇಕಿದೆ. ಈ ಮೂಲಕ ಅಮಾಯಕ ಜನರ ಆರೋಗ್ಯವನ್ನ ಉಳಿಸಬೇಕು ಎಂಬುದು ಜನರ ಉತ್ತಾಯವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ವಡೋದರಾದಲ್ಲಿ ಪಾನಿಪುರಿ ಬ್ಯಾನ್!

    ವಡೋದರಾದಲ್ಲಿ ಪಾನಿಪುರಿ ಬ್ಯಾನ್!

    ಗಾಂಧಿನಗರ: ಪಾನಿಪುರಿ ಮಾರಾಟ ಮಾಡದಂತೆ ಗುಜರಾತಿನ ವಡೋದರಾದ ಮುನ್ಸಿಪಲ್ ಕಾರ್ಪೋರೇಷನ್ ಆದೇಶ ಹೊರಡಿಸಿದೆ.

    ಸ್ಥಳೀಯರ ಆರೋಗ್ಯ ದೃಷ್ಟಿಯಿಂದ ಇಂತಹದೊಂದು ನಿರ್ಧಾರವನ್ನು ವಡೋದರಾ ಮುನ್ಸಿಪಲ್ ಕಾರ್ಪೋರೇಷನ್ ಕೈಗೊಂಡಿದೆ. ಆದೇಶವನ್ನು ಮೀರಿ ಅಕ್ರಮವಾಗಿ ಪಾನಿ ತಯಾರಿಸುತ್ತಿದ್ದ ಮಳಿಗೆಗಳ ಮೇಲೆ ದಾಳಿ ಮಾಡಿ ಅವರಿಂದ ತ್ಯಾಜ್ಯ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

    ಮುಂಗಾರು ಸಮಯದಲ್ಲಿ ಪಾನಿಪುರಿ ಪ್ರಿಯರ ದಂಡು ರಸ್ತೆ ಬದಿಯ ಮಳಿಗೆಗಳಲ್ಲಿ ಬೇಲ್‍ಪುರಿ, ಪಾನಿಪುರಿ ತಿನ್ನಲು ಸರದಿಯಲ್ಲಿ ನಿಂತಿರುತ್ತಾರೆ. ಹೀಗಾಗಿ ಪಾನಿಪುರಿ ಸೇವನೆ ಸಾರ್ವಜನಿಕರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬಿರುತ್ತಿದೆ. ವಡೋದರಾ ಸ್ಥಳೀಯ ನಿವಾಸಿಗಳು ಕಳೆದ ಕೆಲವು ದಿನಗಳಿಂದ ಟೈಫಾಯಿಡ್, ಜಾಂಡಿಸ್ ಹಾಗೂ ಫುಡ್ ಪಾಯಿಸನ್‍ಗೆ ತುತ್ತಾಗಿದ್ದರು. ಇದಕ್ಕೆ ಪಾನಿಪುರಿ ಸೇವನೆಯೇ ಕಾರಣ ಎಂದು ಅರಿತ ಮುನ್ಸಿಪಲ್ ಕಾರ್ಪೋರೇಷನ್ ಅಧಿಕಾರಿಗಳು ಹಾಗೂ ಸದಸ್ಯರು ಪಾನಿಪುರಿ ಮಾರಾಟಕ್ಕೆ ತಡೆ ಹಾಕಿದ್ದಾರೆ.

    ನಗರದಲ್ಲಿ ಪಾನಿಪುರಿ ತಯಾರಿಸುತ್ತಿದ್ದ ಮಳಿಗೆಗಳ ಮೇಲೆ ದಿಢೀರ್ ದಾಳಿ ನಡೆಸಿದ ವೇಳೆ ಶಾಕಿಂಗ್ ದೃಶ್ಯಗಳು ಕಣ್ಣಿಗೆ ಬಿದ್ದಿವೆ. ಹಾಳಾದ ಹಿಟ್ಟು, ಕಂದುಬಣ್ಣದ ಅಡುಗೆ ಎಣ್ಣೆ, ಕೊಳೆತ ಆಲೂಗಡ್ಡೆ ಕೊಳಚೆ ನೀರು ಸೇರಿದಂತೆ ಸಾವಿರಾರು ಕೆಜಿ ಸಾಮಗ್ರಿಗಳನ್ನು ವಶಕ್ಕೆ ಪಡೆದು ನಗರದ ಹೊರವಲಯದಲ್ಲಿ ಪಾಲಿಕೆ ಬೀಸಾಡಿದೆ.

    ಮುನ್ಸಿಪಲ್ ಕಾರ್ಪೋರೇಷನ್ ಸಿಬ್ಬಂದಿ ಹಾಗೂ ಆರೋಗ್ಯ ಇಲಾಖೆ ವಡೋದಾರದಲ್ಲಿ ಪಾನಿಪುರಿ ತಯಾರಿಸುತ್ತಿದ್ದ 50 ತಯಾರಿಕಾ ಮಳಿಗೆಗಳ ಮೇಲೆ ದಾಳಿ ಮಾಡಿದ್ದವು. ಇದರಿಂದಾಗಿ 4 ಸಾವಿರ ಕೆಜಿ ಪುರಿ, 3.5 ಸಾವಿರ ಕೆಜಿ ಆಲೂಗಡ್ಡೆ ಹಾಗೂ 1.2 ಸಾವಿರ ಲೀಟರ್ ಆಮ್ಲೀಯ ನೀರು (ಆಸಿಡಿಕ್ ವಾಟರ್) ವಶಪಡಿಸಿಕೊಳ್ಳಲಾಗಿದೆ.