Tag: ಪಾರುಲ್ ಯಾದವ್

  • ಹಾಟ್ ಅವತಾರದಲ್ಲಿ ಪಾರುಲ್ ಯಾದವ್

    ಹಾಟ್ ಅವತಾರದಲ್ಲಿ ಪಾರುಲ್ ಯಾದವ್

    ಣ್ಣದ ಲೋಕದಲ್ಲಿ ಸಾಕಷ್ಟು ಸಿನಿಮಾಗಳ ಮೂಲಕ ಮೋಡಿ ಮಾಡಿರುವ ಬಹುಭಾಷಾ ನಟಿ ಪಾರುಲ್ ಹಾಟ್ ಫೋಟೋಶೂಟ್‌ನಲ್ಲಿ ಮಿಂಚಿದ್ದಾರೆ. ನಟಿಯ ಬೋಲ್ಡ್ ಲುಕ್ಕಿಗೆ ಫ್ಯಾನ್ಸ್ ಕೂಡ ಬೋಲ್ಡ್ ಆಗಿದ್ದಾರೆ. ಸದ್ಯ ಈ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

    ಕನ್ನಡದ ಬಚ್ಚನ್, ಆಟಗಾರ, ಜೆಸ್ಸಿ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ಪಾರುಲ್ ಯಾದವ್, ಬೆಳ್ಳಿಪರದೆಯಲ್ಲಿ ಸಾಕಷ್ಟು ಸ್ಟಾರ್ ನಟರ ಜತೆ ತೆರೆಹಂಚಿಕೊಂಡಿದ್ದಾರೆ. ಬಹುಭಾಷಾ ನಟಿಯಾಗಿ ಗುರುತಿಸಿಕೊಂಡಿರುವ ಪಾರುಲ್ ಅಪಾರ ಅಭಿಮಾನಿಗಳ ಬಳಗವಿದೆ. ಸಿನಿಮಾಗಳ ಮಧ್ಯೆ ಟ್ರಾವೆಲಿಂಗ್ ಬಗ್ಗೆ ಹೆಚ್ಚು ಆಸಕ್ತಿ ಇರುವ ನಟಿ ಈಗ ಇದೀಗ ಹಾಟ್ ಫೋಟೋಶೂಟ್‌ನಲ್ಲಿ ಪಾರುಲ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಸರಕಾರಕ್ಕೆ ಟೀಸರ್ ಮೂಲಕ ಟಾಂಗ್ ಕೊಟ್ಟ ಟಾಲಿವುಡ್ ಬಾಲಕೃಷ್ಣ

     

    View this post on Instagram

     

    A post shared by Parul Yadav (@theparulyadav)

    ಗ್ರೀನ್ ಕಲರ್ ಚೆಂದದ ಡ್ರೆಸ್‌ನಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಹೊಸ ಲುಕ್ ಮೂಲಕ ಪಾರುಲ್ ಪಡ್ಡೆಹುಡುಗರ ನಿದ್ದೆಗೆಡಿಸಿದ್ದಾರೆ. ಪಾರುಲ್ ನಯಾ ಲುಕ್ ನೋಡಿರೋ ಹುಡುಗರ ಹಾರ್ಟ್ ಬೀಟ್ ಜೋರಾಗಿದೆ. ಇತ್ತೀಚೆಗಷ್ಟೇ (ಜೂ.5)ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಈಗ ಹೊಸ ಲುಕ್ ಶೇರ್ ಮಾಡುವ ಮೂಲಕ ಬರ್ತಡೇ ಶುಭಾಶಯ ತಿಳಿಸಿದ ಅಭಿಮಾನಿಗಳಿಗೆ ಪಾರುಲ್ ಧನ್ಯವಾದ ತಿಳಿಸಿದ್ದಾರೆ. ಇನ್ನು ನೆಚ್ಚಿನ ನಟಿಯ ಮುಂಬರುವ ಸಿನಿಮಾಗಾಗಿ ಕಾಯ್ತಿದ್ದಾರೆ.

  • ನನಗೆ ಅಮ್ಮನಾಗಲು ಇಷ್ಟವಿಲ್ಲ: ಪಾರುಲ್ ಯಾದವ್

    ನನಗೆ ಅಮ್ಮನಾಗಲು ಇಷ್ಟವಿಲ್ಲ: ಪಾರುಲ್ ಯಾದವ್

    ಬೆಂಗಳೂರು: ಪ್ರತಿಯೊಬ್ಬ ಹೆಣ್ಣು ಕೂಡ ತಾನೂ ತಾಯಿ ಆಗಬೇಕೆಂದು ಬಯಸುತ್ತಾಳೆ. ಆದರೆ ಸ್ಯಾಂಡಲ್‍ವುಡ್ ನಟಿ ಪಾರುಲ್ ಯಾದವ್ ‘ನಾನು ತಾಯಿಯಾಗಲು ಬಯಸುವುದಿಲ್ಲ’ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹತ್ರಾಸ್ ಯುವತಿ ಮೇಲೆ ಅತ್ಯಾಚಾರವಾಗಿಲ್ಲ – ಶಾಕಿಂಗ್ ಹೇಳಿಕೆ ನೀಡಿದ ಐಜಿ

    ಹೌದು, ಇತ್ತೀಚೆಗೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ ಉತ್ತರಪ್ರದೇಶ ಹತ್ರಾಸ್ ಗ್ರಾಮದ ಯುವತಿಯ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ. ಅಲ್ಲದೇ ಪೋಷಕರಿಗೂ ಮಗಳ ಮುಖವನ್ನು ತೋರಿಸಿದ ರಾತ್ರೋರಾತ್ರಿ ಪೊಲೀಸರೇ ಅಂತ್ಯಕ್ರಿಯೆ ನೆರವೇರಿಸಿದ್ದಾರೆ. ಈ ಬಗ್ಗೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಈ ಘಟನೆಯ ಕುರಿತು ನಟ-ನಟಿಯರು ಸೇರಿದಂತೆ ಅನೇಕರು ಸೋಶಿಯಲ್ ಮೀಡಿಯಾದ ಮೂಲಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದನ್ನೂ ಓದಿ: ಕೊನೆ ಬಾರಿ ಮಗಳ ಮುಖ ತೋರಿಸಲಿಲ್ಲ: ಹತ್ರಾಸ್ ಸಂತ್ರಸ್ತೆ ತಾಯಿ

    ಇದೀಗ ಗ್ಯಾಂಗ್‍ರೇಪ್ ಸಂತ್ರಸ್ತೆಯ ಸಾವಿನಿಂದ ನೊಂದ ನಟಿ ಪಾರುಲ್ ಯಾದವ್ ತಾಯಿಯಾಗಲು ಬಯಸುವುದಿಲ್ಲ ಎಂದು ಹೇಳಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ನಟಿ, “ತಾಯಿಯಾಗುವುದು ಹೆಣ್ತನದ ಸಾರಾಂಶ. ಆದರೆ ಇಂದು ನಾನು ಅಮ್ಮನಾಗಲು ಬಯಸುವುದಿಲ್ಲ. ಒಬ್ಬ ಹೆಣ್ಣಾಗಿ ಈ ರೀತಿ ಹೇಳುವುದು ತುಂಬಾ ಕಷ್ಟವಾಗಿದೆ. ಆದರೆ ನನ್ನ ಮಾತೃತ್ವವನ್ನು ತ್ಯಜಿಸುತ್ತಿದ್ದೇನೆ ಎಂದು ನಾನು ಪ್ರತಿಜ್ಞೆ ಮಾಡುತ್ತೇನೆ” ಎಂದಿದ್ದಾರೆ.

    ಅಲ್ಲದೇ, “ಒಂದು ವೇಳೆ ನನ್ನ ಮಗು ಹೆಣ್ಣಾದರೆ ಏನು ಮಾಡುವುದು? ಈ ದೇಶ ಎಲ್ಲ ಕಡೆಯಲ್ಲೂ ಹೆಣ್ಣಿಗೆ ಕೆಟ್ಟದಾಗಿಯೇ ಇದೆ” ಎಂದು ಟ್ವಿಟ್ಟರಿನಲ್ಲಿ ಬರೆದುಕೊಂಡಿದ್ದಾರೆ.

    “ಹತ್ರಾಸ್‍ನಲ್ಲಿ ನಡೆದ ಭಯಾನಕ ಘಟನೆಯೇ ಇದಕ್ಕೆ ಇತ್ತೀಚಿನ ಉದಾಹರಣೆಯಾಗಿದೆ. ಕಾರಣಗಳು ಬೇರೆಯಾಗಿರಬಹುದು. ಆದರೆ ಯಾವಾಗಲೂ ಮಹಿಳೆಯರಿಗೆ ತೊಂದರೆ ಆಗುತ್ತದೆ. ಅದರಿಂದ ಆಕೆ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಮಹಿಳೆಯರ ಮೇಲಿನ ದೌರ್ಜನ್ಯದ ಬಗ್ಗೆ ನಟಿ ಪಾರುಲ್ ಯಾದವ್ ಹೇಳಿದ್ದಾರೆ.

    ಹತ್ರಾಸ್ ಪ್ರಕರಣ?
    ಇದೇ ತಿಂಗಳ 14ರಂದು ತನ್ನ ತಾಯಿಯೊಂದಿಗೆ ಹುಲ್ಲು ತರಲೆಂದು ಯುವತಿ ಜಮೀನಿಗೆ ತೆರಳಿದ್ದಳು. ಈ ವೇಳೆ ನಾಲ್ವರು ಕಾಮ ಪಿಶಾಚಿಗಳು ಆಕೆಯನ್ನು ಎಳೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾರೆ. ಅಲ್ಲದೇ ಆಕೆಯ ನಾಲಿಗೆಯನ್ನು ಕತ್ತರಿಸಿ, ಬೆನ್ನು ಮೂಳೆ, ಕತ್ತಿಗೆ ಗಂಭೀರವಾಗಿ ಹಾನಿ ಮಾಡಿದ್ದಾರೆ. ಕಾಮುಕರ ಅಟ್ಟಹಾಸಕ್ಕೆ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಪಡೆಯುತ್ತಿದ್ದಂತೆಯೇ ಘಟನೆ ನಡೆದು ಎರಡು ವಾರಗಳ ನಂತರ ಮೃತಪಟ್ಟಿದ್ದಳು.

    ಯುವತಿ ಸಾವನ್ನಪ್ಪಿದ ವಿಚಾರ ಸುದ್ದಿಯಾಗುತ್ತಿದ್ದಂತೆಯೇ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಆರೋಪಿಗಳನ್ನು ನೇಣಿಗೇರಿಸುವಂತೆ ದೇಶದ ಮೂಲೆಮೂಲೆಯಿಂದಲೂ ಕೂಗು ಕೇಳಿ ಬಂದಿದೆ. ಈ ಮಧ್ಯೆ ಉತ್ತರಪ್ರದೇಶದ ಪೊಲೀಸರು ಯುವತಿಯ ಕುಟುಂಬಕ್ಕೆ ತಿಳಿಯದಂತೆ ಮೃತದೇಹವನ್ನು ಆಸ್ಪತ್ರೆಯಿಂದ ಶಿಫ್ಟ್ ಮಾಡಿದ್ದಾರೆ ಎಂದು ಸಹೋದರ ಗಂಭೀರವಾಗಿ ಆರೋಪ ಮಾಡಿದ್ದಾರೆ. ಯುವತಿಯ ತಂದೆ ಹಾಗೂ ಸಹೋದರ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ನಮಗೆ ಗೊತ್ತಾಗಂದೆ ಪೊಲೀಸರು ಕಪ್ಪು ಬಣ್ಣದ ಸ್ಕಾರ್ಪಿಯೋ ಕಾರಿನಲ್ಲಿ ಮೃತದೇಹವನ್ನು ಸಾಗಿಸಿದ್ದಾರೆ ಎಂದು ಕೂಡ ಸಹೋದರ ದೂರಿದ್ದರು.

  • ಪಾಕಿಸ್ತಾನಕ್ಕೆ ಟಾಂಗ್ ಕೊಟ್ಟ ಪಾರುಲ್ ಯಾದವ್!

    ಪಾಕಿಸ್ತಾನಕ್ಕೆ ಟಾಂಗ್ ಕೊಟ್ಟ ಪಾರುಲ್ ಯಾದವ್!

    ಭಾರತ ಪದೇ ಪದೇ ಕೆಣಕಿಸಿಕೊಂಡೂ ಶಾಂತಿ ಪಥದಲ್ಲಿ ಮುಂದುವರೆಯುತ್ತಿದ್ದರೂ ಈ ಪಾಕಿಸ್ತಾನ ಪದೇ ಪದೇ ಕೆಣಕ್ಕುತ್ತಲೇ ಇರುತ್ತದೆ. ಅದಕ್ಕೆ ಸೌಹಾರ್ದದ ಸಂಕೇತವಾಗಬಲ್ಲ ಕ್ರಿಕೆಟ್ ಆಟವನ್ನೂ ಕೂಡಾ ಅಲ್ಲಿನ ಕೆಲ ವಿಕೃತ ಮನಸುಗಳು ಬಳಸಿಕೊಳ್ಳುತ್ತಿವೆ. ಕೆಲ ದಿನಗಳ ಹಿಂದೆ ಅಭಿನಂದನ್ ವರ್ತಮಾನ್ ಅವರನ್ನೇ ಹೋಲುವ ವ್ಯಕ್ತಿಯನ್ನಿಟ್ಟುಕೊಂಡು ಪಾಕಿ ಮಾಧ್ಯಮವೊಂದು ಭಾರತವನ್ನು ಕೆಣಕಿತ್ತು. ಇದಕ್ಕೆ ಭಾರತದ ಕಡೆಯಿಂದ ವ್ಯಾಪಕ ಆಕ್ರೋಶವೂ ವ್ಯಕ್ತವಾಗಿತ್ತು. ಇದೀಗ ಭಾರತ ತಂಡ ಪಾಕಿಸ್ತಾನಿ ಕ್ರಿಕೆಟ್ ತಂಡವನ್ನು ಮಣಿಸುತ್ತಲೇ ನಟಿ ಪಾರುಲ್ ಯಾದವ್ ಕೂಡಾ ಪಾಕಿಸ್ತಾನಕ್ಕೆ ಸರಿಯಾಗೊಂದು ಟಾಂಗ್ ಕೊಟ್ಟಿದ್ದಾರೆ.

    ವೀರ ಯೋಧ ಅಭಿನಂದನ್ ವರ್ತಮಾನ್‍ಗೆ ಅವಮಾನಿಸಿದ ಪಾಕ್ ವಿರುದ್ಧ ಪಾರುಲ್ ಯಾದವ್ ಅವರದ್ದೇ ಸ್ಟೈಲಿನಲ್ಲಿ ಟಾಂಗ್ ಕೊಟ್ಟಿದ್ದಾರೆ. ಪಾಕ್ ಮಾಧ್ಯಮವೊಂದು ಭಾರತವನ್ನು ಅಣಕಿಸುವಂಥಾ ಜಾಹೀರಾತು ಮಾಡಿತ್ತಲ್ಲಾ? ಅಂಥಾದ್ದನ್ನೇ ತಾವೂ ಮಾಡಿರೋ ಪಾರುಲ್ ಅಭಿನಂದನ್ ಶೈಲಿಯ ಮೀಸೆ ಬಿಡಿಸಿಕೊಂಡು ಪಾಕ್‍ಗೆ ತಕ್ಕ ಉತ್ತರ ನೀಡಿದ್ದಾರೆ!

    ಅಭಿನಂದನ್ ಗೆಟಪ್ಪಿನಲ್ಲಿ ಪಾರುಲ್ ‘ಕಾಫಿ ಕಪ್ ನೀವೇ ಇಟ್ಟುಕೊಳ್ಳಿ ನಾವು ವಿಶ್ವಕಪ್ ಗೆಲ್ಲುತ್ತೇವೆ’ ಅಂತ ಖಡಕ್ ಉತ್ತರ ರವಾನಿಸಿದ್ದಾರೆ. ಪಾರುಲ್ ಯಾದವ್ ಇಂಡೋ ಪಾಕ್ ಟ್ರಿಕೆಟ್ ಟೂರ್ನಿಯನ್ನು ಸ್ನೇಹಿತರೊಂದಿಗೆ ನೋಡಿ ಎಂಜಾಯ್ ಮಾಡಿದ್ದರು. ಭಾರತ ಕ್ರಿಕೆಟ್ ತಂಡ ಪಾಕ್ ತಂಡವನ್ನು ಮಣಿಸಿದ್ದನ್ನೂ ಕೂಡಾ ಕಣ್ತುಂಬಿಕೊಂಡು ಖುಷಿ ಪಟ್ಟಿದ್ದರು. ಅದೇ ಖುಷಿಯಲ್ಲಿ ಈ ಮ್ಯಾಚ್ ಆರಂಭಕ್ಕೂ ಮುನ್ನ ಪಾಕ್ ಮಾಡಿದ್ದ ಕುಚೇಷ್ಟೆಗೆ ತಕ್ಕ ಉತ್ತರವನ್ನೇ ಕೊಟ್ಟಿದ್ದಾರೆ.

    ಪಾಕ್ ಮಾಡಿದ್ದ ಸಣ್ಣತನದ ಕೆಲಸದ ವಿರುದ್ಧ ಈಗಾಗಲೇ ಬಾಲಿವುಡ್ ಸೇರಿದಂತೆ ನಾನಾ ಚಿತ್ರತಂಡಗಳ ತಾರೆಯರು ತಮ್ಮದೇ ಆದ ರೀತಿಯಲ್ಲಿ ವಿರೋಧ ವ್ಯಕ್ತಪಡಿಸಿದ್ದಾರೆ. ಪೂನಂ ಪಾಂಡೆ ಕೂಡಾ ಈ ನಿಟ್ಟಿನಲ್ಲಿ ಗಮನ ಸೆಳೆದಿದ್ದರು. ಇದೀಗ ಭಾರತ ತಂಡ ಪಾಕ್ ತಂಡದ ವಿರುದ್ಧ ಗೆದ್ದಿರೋದರಿಂದ ಪಾಕ್ ಕುಚೇಷ್ಟೆಗಳಿಗೆ ನಿರ್ಣಾಯಕ ಉತ್ತರ ರವಾನಿಸಿದಂತಾಗಿದೆ.

  • ಬಟರ್ ಫ್ಲೈ ಪಾರುಲ್ ಯಾದವ್‍ಗೆ ಬರ್ತ್ ಡೇ ಸಂಭ್ರಮ!

    ಬಟರ್ ಫ್ಲೈ ಪಾರುಲ್ ಯಾದವ್‍ಗೆ ಬರ್ತ್ ಡೇ ಸಂಭ್ರಮ!

    ಬೆಂಗಳೂರು: ಉತ್ತರಭಾರತದಿಂದ ಬಂದು ಕನ್ನಡದಲ್ಲಿ ನಟಿಯರಾಗಿ ನೆಲೆ ನಿಂತವರದ್ದೊಂದು ದೊಡ್ಡ ದಂಡೇ ಇದೆ. ಆದರೆ ಅದರಲ್ಲಿ ಕೆಲವೇ ಕೆಲವರು ಮಾತ್ರವೇ ಪ್ರೀತಿ ಕೊಟ್ಟ ಕನ್ನಡತನವನ್ನೂ ಮೈ ಮನಸುಗಳಲ್ಲಿ ತುಂಬಿಕೊಂಡು ಕನ್ನಡಿಗರೆಲ್ಲರ ಪ್ರೀತಿಪಾತ್ರರಾಗಿ ಕಂಗೊಳಿಸುತ್ತಾರೆ. ಅಂಥದ್ದೊಂದು ಅಪ್ಪಟ ಕನ್ನಡ ಪ್ರೇಮ ಹೊಂದಿರೋ ನಟಿ ಪಾರುಲ್ ಯಾದವ್. ಇದೀಗ ಅವರು ಮುಖ್ಯ ಪಾತ್ರದಲ್ಲಿ ನಟಿಸಿರುವ ಬಟರ್ ಫ್ಲೈ ಕೂಡಾ ಬಿಡುಗಡೆಗೆ ರೆಡಿಯಾಗಿದೆ. ಇಂಥಾ ಪಾರುಲ್ ಯಾದವ್ ಅವರಿಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ಮಿಂದೇಳುತ್ತಿದ್ದಾರೆ.

    ಪಾರುಲ್ ಯಾದವ್ ಮೂಲತಃ ಉತ್ತರ ಭಾರತದವರು. ಪವನ್ ಒಡೆಯರ್ ನಿರ್ದೇಶನದ ಗೋವಿಂದಾಯ ನಮಃ ಚಿತ್ರದ ಮೂಲಕ ಕನ್ನಡಕ್ಕೆ ಆಗಮಿಸಿದ್ದ ಇವರು ಪ್ಯಾರ್ ಗೇ ಆಗ್ಬಿಟ್ಟೈತೆ ಎಂಬ ಹಾಡಿನ ಮೂಲಕವೇ ವ್ಯಾಪಕ ಮನ್ನಣೆ ಗಳಿಸಿಕೊಂಡಿದ್ದರು. ಹೀಗೆ ಆರಂಭಿಕವಾಗಿಯೇ ಸಿಕ್ಕ ಯಶಸ್ಸಿನಿಂದಾಗಿ ಕನ್ನಡದಲ್ಲಿಯೇ ನೆಲೆ ನಿಂತಿರುವ ಪಾರುಲ್ ಇದೀಗ ಕನ್ನಡದ ಹುಡುಗಿಯಂತೆಯೇ ಆಗಿ ಹೋಗಿದ್ದಾರೆ.

    ಪಾರುಲ್ ಯಾದವ್ ಇದೀಗ ಓರ್ವ ನಟಿಯಾಗಿ ಒಂದು ಮಟ್ಟದ ಯಶ ಕಂಡಿದ್ದಾರೆ. ಹಲವಾರು ಹಿಟ್ ಚಿತ್ರಗಳೂ ಅವರ ಖಾತೆಗೆ ಜಮೆಯಾಗಿವೆ. ತಾನು ಉತ್ತರ ಭಾರತದವರಾದರೂ ಯಾವುದೇ ಭಾಷಾ ತಾರತಮ್ಯ ಮಾಡದೇ ಮುಖ್ಯ ನಟಿಯಾಗಿ ನೆಲೆ ನಿಲ್ಲಿಸಿದ ಕನ್ನಡಿಗರ ಮೇಲೆ ಪಾರುಲ್‍ಗೆ ಅಪಾರ ಪ್ರೀತಿಯಿದೆ. ಸಾಮಾನ್ಯವಾಗಿ ಕನ್ನಡದ ನಟಿಯರ ಮೇಲೆಯೇ ಆಗಾಗ ಪರಭಾಷಾ ವ್ಯಾಮೋಹದ ಆರೋಪಗಳು ಕೇಳಿ ಬರುತ್ತಿರುತ್ತವೆ. ಆದರೆ ಪಾರುಲ್ ಈ ವಿಚಾರದಲ್ಲಿ ಭಿನ್ನ.

    ಯಾಕೆಂದರೆ ಸ್ಪಷ್ಟವಾಗಿ ಕನ್ನಡ ಮಾತಾಡಲು ಬಾರದೇ ಇದ್ದರೂ ಸಾರ್ವಜನಿಕ ಸಮಾರಂಭಗಳಲ್ಲಿಯೇ ಕನ್ನಡದಲ್ಲಿ ಮಾತಾಡಲು ಪ್ರಯತ್ನಿಸುತ್ತಾರೆ. ಎದುರು ಸಿಕ್ಕ ಅಭಿಮಾನಿಗಳಲ್ಲಿಯೂ ಕನ್ನಡದಲ್ಲಿಯೇ ಸಂವಹನ ನಡೆಸುತ್ತಾರೆ. ಪಾರುಲ್ ಕನ್ನಡಿಗರಿಗೆಲ್ಲ ಇಷ್ಟವಾಗಿರೋದೇ ಈ ಕಾರಣದಿಂದ. ಇಂಥಾ ಪಾರುಲ್ ನಟಿಸಿರೋ ಬಟರ್ ಫ್ಲೈ ಚಿತ್ರವೀಗ ಬಿಡುಗಡೆಗೆ ರೆಡಿಯಾಗಿದೆ. ಈ ಪಾತ್ರದಲ್ಲಿ ಪಾರ್ವತಿ ಎಂಬ ಹುಡುಗಿಯ ಪಾತ್ರಕ್ಕೆ ಅವರು ಜೀವ ತುಂಬಿದ್ದಾರೆ. ಇನ್ನೇನು ಬಟರ್‍ಫ್ಲೈ ಆಗಿ ಪ್ರೇಕ್ಷಕರ ಮನಸಿಗೆ ಹಾರಿ ಕೂರೋ ಸನ್ನಾಹದಲ್ಲಿರುವ ಪಾರುಲ್ ಅವರಿಗೆ ಹ್ಯಾಪಿ ಬರ್ತಡೇ.

  • ಪಾರುಲ್ ಯಾದವ್ ಈಗ ಪಾರ್ವತಿ!

    ಪಾರುಲ್ ಯಾದವ್ ಈಗ ಪಾರ್ವತಿ!

    ಬೆಂಗಳೂರು: ಪ್ಯಾರ್ ಗೆ ಆಗ್ಬಿಟೈತೆ ಅಂತ ಹಾಡುತ್ತಲೇ ಕನ್ನಡ ಚಿತ್ರ ಪ್ರೇಕ್ಷಕರ ಮನಸಿಗೆ ಲಗ್ಗೆಯಿಟ್ಟಿದ್ದವರು ಪಾರೂಲ್ ಯಾದವ್. ಪರಭಾಷಾ ನಟಿಯಾದರೂ ಕನ್ನಡಿಗರಿಗೆ ಹತ್ತಿರವಾಗಿದ್ದ ಅವರು ಆ ನಂತರವೂ ಹಲವಾರು ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಈಗೊಂದಷ್ಟು ಕಾಲದಿಂದ ಕಣ್ಮರೆಯಾದಂತಿದ್ದ ಪಾರುಲ್ ಈಗ ಪಾರ್ವತಿಯ ಅವತಾರದಲ್ಲಿ ಪ್ರೇಕ್ಷಕರ ಮುಂದೆ ಬರೋ ಖುಷಿಯಲ್ಲಿದ್ದಾರೆ.

    ರಮೇಶ್ ಅರವಿಂದ್ ಕನ್ನಡ ಮತ್ತು ತಮಿಳಿನಲ್ಲಿ ಏಕಕಾಲದಲ್ಲಿಯೇ ನಿರ್ದೇಶನ ಮಾಡುತ್ತಿರೋ ಚಿತ್ರ ಬಟರ್ ಫ್ಲೈ. ಈ ಮೂರೂ ಭಾಷೆಗಳಲ್ಲಿ ಆಯಾ ಭಾಷೆಯ ನಟಿಯರು ಮುಖ್ಯ ಪಾತ್ರ ಮಾಡುತ್ತಿದ್ದಾರೆ. ಕನ್ನಡದಲ್ಲಿ ಕಂಗನಾ ಪಾತ್ರವನ್ನು ಪಾರುಲ್ ಯಾದವ್ ನಿರ್ವಹಿಸುತ್ತಿದ್ದಾರೆ. ಈ ಬಗ್ಗೆ ಖುದ್ದು ಅವರೇ ಸಾಮಾಜಿಕ ಜಾಲತಾಣಗಳ ಮೂಲಕ ವಿಚಾರ ಹಂಚಿಕೊಂಡಿದ್ದಾರೆ. ತಾನು ಪಾರ್ವತಿಯಾಗಿ ಕನ್ನಡದ ಪ್ರೇಕ್ಷಕರ ಮುಂದೆ ಬರಲು ಅಣಿಯಾಗಿರೋದರ ಬಗ್ಗೆ ಖುಷಿಯಿಂದಲೇ ಹೇಳಿಕೊಂಡಿರೋ ಪಾರುಲ್, ಪಾರ್ವತಿಯಾಗಿ ತಮ್ಮ ಲುಕ್ಕು ಹೇಗಿದೆ ಎಂಬುದಕ್ಕೆ ಒಂದು ಭಾವಚಿತ್ರವನ್ನೂ ಜಾಹೀರು ಮಾಡಿದ್ದಾರೆ.

    ತಮಿಳಿನಲ್ಲಿ ಈ ಪಾತ್ರವನ್ನು ಕಾಜಲ್ ನಿರ್ವಹಿಸಿದ್ದಾರೆ. ತೆಲುಗಿನಲ್ಲಿ ಈ ಪಾತ್ರ ಮಿಲ್ಕಿ ಬ್ಯೂಟಿ ತಮನ್ನಾ ಪಾಲಾಗಿದೆ. ಕನ್ನಡದಲ್ಲಿ ಪಾರುಲ್ ಪಾರ್ವತಿಯಾಗಿ ಈ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಚಿತ್ರದಲ್ಲಿ ಕೇವಲ ನಾಯಕಿ ಮಾತ್ರವಲ್ಲದೇ ಪಾರುಲ್ ನಿರ್ಮಾಪಕಿಯಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಈ ಮೂಲಕವೇ ಕನ್ನಡದಲ್ಲಿ ತನ್ನ ಮತ್ತೊಂದು ಇನ್ನಿಂಗ್ಸ್ ಭರ್ಜರಿಯಾಗಿ ಶುರುವಾಗೋ ನಿರೀಕ್ಷೆ ಪಾರುಲ್ ಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಮಾಸ್ಟರ್ ಹಿರಣ್ಣಯ್ಯ ಬರೆದ ರಂಗ ಗೀತೆ ಈಗ ಚಿತ್ರಗೀತೆ!

    ಮಾಸ್ಟರ್ ಹಿರಣ್ಣಯ್ಯ ಬರೆದ ರಂಗ ಗೀತೆ ಈಗ ಚಿತ್ರಗೀತೆ!

    ಬೆಂಗಳೂರು: ಹಿಂದಿಯಲ್ಲಿ ಕಂಗನಾ ರಣಾವತ್ ನಟಿಸಿ ಸೂಪರ್ ಹಿಟ್ ಆಗಿದ್ದ ಕ್ವೀನ್ ಚಿತ್ರ ಕನ್ನಡದಲ್ಲಿ ‘ಬಟರ್ ಫ್ಲೈ’ ಆಗಿ ಅವತಾರವೆತ್ತುತ್ತಿದೆ. ಯಾವ ಕಥೆಯನ್ನಾದರೂ ಇಲ್ಲಿನ ನೇಟಿವಿಟಿಗೆ ತಕ್ಕುದಾಗಿ ಒಗ್ಗಿಸಿಕೊಳ್ಳುವ ಕಲೆ ಕರಗತ ಮಾಡಿಕೊಂಡಿರೋ ರಮೇಶ್ ಅರವಿಂದ್ ನಿರ್ದೇಶನದಲ್ಲಿ ಈ ಚಿತ್ರ ರೆಡಿಯಾಗುತ್ತಿದೆ.

    ಚಿತ್ರೀಕರಣವನ್ನು ಅಂದುಕೊಂಡಂತೆಯೇ ಸುಸೂತ್ರವಾಗಿ ನಡೆಸುತ್ತಿದ್ದರೂ ರಮೇಶ್ ಅವರವಿಂದ್ ಅವರನ್ನು ಭಾರೀ ಚಿಂತೆಗೀಡು ಮಾಡಿದ್ದದ್ದು ವಿಶೇಷವಾದ ಒಂದು ಹಾಡು. ಮೂಲ ಚಿತ್ರ ಕ್ವೀನ್‍ನಲ್ಲಿ ಹಿಂದಿಯ ಹಳೆಯ ಹಾಡೊಂದನ್ನು ವಿಶೇಷವಾಗಿ ಬಳಸಿಕೊಳ್ಳಲಾಗಿತ್ತು. ಆ ಹಾಡು ಸೂಪರ್ ಹಿಟ್ ಆಗಿತ್ತು. ಕನ್ನಡದಲ್ಲಿಯೂ ಕೂಡಾ ಈ ಹಾಡನ್ನು ಅದೇ ರೀತಿ ರೂಪಿಸೋ ಕನಸು ಹೊಂದಿದ್ದ ರಮೇಶ್ ಅವರನ್ನು ಬಹು ದಿನದಿಂದಲೂ ಯಾವ ಗೀತೆಯನ್ನು ಆಯ್ಕೆ ಮಾಡಿಕೊಳ್ಳೋದೆಂಬ ಗೊಂದಲ ಕಾಡುತ್ತಿತ್ತಂತೆ. ಕಡೆಗೂ ಅವರು ಇದಕ್ಕಾಗಿ ಪ್ರಸಿದ್ಧ ರಂಗಗೀತೆಯೊಂದನ್ನು ಆಯ್ಕೆ ಮಾಡಿಕೊಂಡಿದ್ದಾರೆ.

    ಅದು ದೇವದಾಸಿ ನಾಟಕಕ್ಕಾಗಿ ಮಾಸ್ಟರ್ ಹಿರಣ್ಣಯ್ಯನವರು ಬರೆದಿದ್ದ ಪ್ರಸಿದ್ಧ ರಂಗಗೀತೆ. ಸುಖವೀವ ಸುರಪಾನವಿದೇ ಸ್ವರ್ಗಸಮಾನನಂ ಎಂಬ ರಂಗಗೀತೆಯನ್ನು ರಮೇಶ್ ಅರವಿಂದ್ ಈ ಚಿತ್ರಕ್ಕೆ ಹೊಸಾ ಥರದಲ್ಲಿ ಬಳಸಿಕೊಂಡಿದ್ದಾರೆ. ಇದಕ್ಕೆ ಕೇವಲ ಅರ್ಧ ದಿನದಲ್ಲಿಯೇ ಕೊರಿಯೋಗ್ರಫಿ ಮಾಡಿರೋ ಗಣೇಶ್ ಆಚಾರ್ಯ ಚಿತ್ರೀಕರಣ ಮುಗಿಸಿಕೊಟ್ಟಿದ್ದಾರಂತೆ. ಈ ವಿಶೇಷವಾದ ಹಾಡಿಗೆ ಕುಣಿದಿರುವ ಪಾರುಲ್ ಕೂಡಾ ಇದನ್ನೊಂದು ಗ್ರೇಟ್ ಎಕ್ಸ್ ಪೀರಿಯನ್ಸ್ ಅಂತ ಖುಷಿಯಿಂದಲೇ ಹೇಳಿಕೊಂಡಿದ್ದಾರೆ.

    ಸದಾ ಹೊಸತೇನನ್ನೋ ಸೃಷ್ಟಿಸಲು ಹಂಬಲಿಸುವ ರಮೇಶ್ ಅರವಿಂದ್ ಅವರು ತಮ್ಮ ಚಿತ್ರಕ್ಕೆ ರಂಗಗೀತೆಯೊಂದನ್ನು ಆರಿಸಿಕೊಂಡಿರುವುದು ಸಕಾರಾತ್ಮಕ ಬೆಳವಣಿಗೆ.

  • ಶೂಟಿಂಗ್ ವೇಳೆ ಅಸ್ವಸ್ಥ – ಪಾರುಲ್ ಯಾದವ್ ಆಸ್ಪತ್ರೆಗೆ ದಾಖಲು

    ಶೂಟಿಂಗ್ ವೇಳೆ ಅಸ್ವಸ್ಥ – ಪಾರುಲ್ ಯಾದವ್ ಆಸ್ಪತ್ರೆಗೆ ದಾಖಲು

    ಬೆಂಗಳೂರು: ಸ್ಯಾಂಡಲ್‍ವುಡ್ ನಟಿ ಪಾರುಲ್ ಯಾದವ್‍ಗೆ ಆರೋಗ್ಯದಲ್ಲಿ ಮತ್ತೊಮ್ಮೆ ಸಮಸ್ಯೆ ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಬಟರ್ ಫ್ಲೈ ಸಿನಿಮಾ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದ ಪಾರುಲ್ ಆರೋಗ್ಯದಲ್ಲಿ ಸಮಸ್ಯೆ ಕಾಣಸಿಕೊಂಡಿದ್ದು, ಅವರು ಆಸ್ಪತ್ರೆಗೆ ದಾಖಲಾಗಿರುವ ಕುರಿತ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಪಾರುಲ್ ಯಾದವ್ ಹೊಟ್ಟೆನೋವಿನಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಟರ್ ಫ್ಲೈ ಸಿನಿಮಾ ಚಿತ್ರೀಕರಣ ಮೈಸೂರಿನಲ್ಲಿ ನಡೆಯುತ್ತಿದ್ದು, ಪಾರುಲ್ ಯಾದವ್ ಸಿನಿಮಾ ಶೂಟಿಂಗ್‍ನಲ್ಲಿ ಪಾಲ್ಗೊಂಡಿದ್ದರು. ರಮೇಶ್ ಅರವಿಂದ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಬಟರ್ ಫ್ಲೈ ಸಿನಿಮಾ ಕೊನೆಯ ಹಂತದ ಚಿತ್ರೀಕರಣ ನಡೆಯುತ್ತಿದೆ.

    https://www.facebook.com/varunmediastation/videos/2040856136180141/