Tag: ಪಾರು ಧಾರಾವಾಹಿ

  • ತಮಿಳು ಸೀರಿಯಲ್‌ನಿಂದ ಹೊರನಡೆದ `ಪಾರು’ ನಟಿ ಮೋಕ್ಷಿತಾ ಪೈ

    ತಮಿಳು ಸೀರಿಯಲ್‌ನಿಂದ ಹೊರನಡೆದ `ಪಾರು’ ನಟಿ ಮೋಕ್ಷಿತಾ ಪೈ

    ನ್ನಡ ಕಿರುತೆರೆ `ಪಾರು’ ಧಾರಾವಾಹಿ(Paaru Serial) ಮೂಲಕ ಮನೆಮಾತಾದ ನಟಿ ಮೋಕ್ಷಿತಾ ಪೈ ಇದೀಗ ತಮಿಳಿನ `ಮೀನಾಕ್ಷಿ ಪೊನ್ನುಂಗ’ (Meenakshi Ponnunga) ಧಾರಾವಾಹಿಯಿಂದ ಹೊರಬಂದಿದ್ದಾರೆ. ಕನ್ನಡ ಮತ್ತು ತಮಿಳು ಕಿರುತೆರೆಯಲ್ಲಿ ಆಕ್ಟೀವ್ ಆಗಿದ್ದ ನಟಿ ಈಗ ತಮಿಳು ಸೀರಿಯಲ್‌ನಿಂದ ಹೊರನಡೆದಿದ್ದಾರೆ.

    `ಪಾರು’ ಸೀರಿಯಲ್ ಮೂಲಕ ಅಪಾರ ಅಭಿಮಾನಿಗಳ ಮನಗೆದ್ದ ಕರಾವಳಿ ಚೆಲುವೆ ಮೋಕ್ಷಿತಾ ಪೈ (Mokshitha Pai) ತಮಿಳಿನ ಖಾಸಗಿ ವಾಹಿನಿಯಲ್ಲಿ ಮೂಡಿ ಬರುತ್ತಿದ್ದ `ಮೀನಾಕ್ಷಿ ಪೊನ್ನುಂಗ’ ಸೀರಿಯಲ್‌ನ ಮುಖ್ಯ ಪಾತ್ರಧಾರಿ ಶಕ್ತಿಯಾಗಿ ಕಾಣಿಸಿಕೊಂಡಿದ್ದರು. ಈ ಪ್ರಾಜೆಕ್ಟ್ ಮೂಲಕ ತಮಿಳಿನ ಪ್ರೇಕ್ಷಕ ವರ್ಗಕ್ಕೂ ಪಾರು ನಟಿ ಹತ್ತಿರವಾಗಿದ್ದರು. ಆದರೆ ಈಗ ಮೋಕ್ಷಿತಾ, ಈ ಧಾರಾವಾಹಿಯನ್ನ ಕೈಬಿಟ್ಟಿದ್ದಾರೆ. ಇದನ್ನೂ ಓದಿ: ಪ್ರತಿಷ್ಠಿತ ಆಭರಣ ಸಂಸ್ಥೆಯ ಬ್ರ್ಯಾಂಡ್ ಅಂಬಾಸಿಡರ್ ಸ್ಥಾನದಿಂದ ರಶ್ಮಿಕಾ ಔಟ್

     

    View this post on Instagram

     

    A post shared by Mokshitha Pai (@mokshitha22)

    ತಮಿಳು ಸೀರಿಯಲ್ ಮತ್ತು ʻಪಾರುʼ ಧಾರಾವಾಹಿ ಎರಡನ್ನು ನಟಿ ನಿಭಾಯಿಸುತ್ತಿದ್ದರು. ಆದರೆ ಕೆಲವು ವೈಯಕ್ತಿಕ ಕಾರಣದಿಂದ ಸೀರಿಯಲ್‌ನ ಕೈಬಿಟ್ಟಿದ್ದೇನೆ. ಶಕ್ತಿ ಪಾತ್ರ ಮತ್ತು ಈ ಧಾರಾವಾಹಿಯಲ್ಲಿ ಕೆಲಸ ಮಾಡಿದ್ದು ನಿಜಕ್ಕೂ ಅದ್ಭುತ ಅನುಭವ ನೀಡಿದೆ. ಶಕ್ತಿ ಪಾತ್ರದಲ್ಲಿ ನನ್ನ ಮೆಚ್ಚಿಕೊಂಡ ಪ್ರೇಕ್ಷಕರಿಗೆ ನನ್ನ ಧನ್ಯವಾದಗಳು ಎಂದು ನಟಿ ಪ್ರತಿಕ್ರಿಯೆ ನೀಡಿದ್ದಾರೆ.

    ಇನ್ನೂ `ಪಾರು’ ಧಾರಾವಾಹಿ ನನ್ನ ಮೊದಲ ಸೀರಿಯಲ್ ಆಗಿದ್ದು, ಈ ಪ್ರಾಜೆಕ್ಟ್ ನನ್ನ ಆದ್ಯತೆ ಕೂಡ‌ ಎಂದು ನಟಿ ಮೋಕ್ಷಿತಾ ತಿಳಿಸಿದ್ದಾರೆ. ಇನ್ಮುಂದೆ `ಪಾರು’ ಸೀರಿಯಲ್ ಜೊತೆ ಸಿನಿಮಾಗಳತ್ತ ಕೂಡ ಗಮನ ನೀಡುತ್ತೇನೆ ಎಂದು ಮಾತನಾಡಿದ್ದಾರೆ. ಈ ವೇಳೆ `ನಿರ್ಭಯಾ 2′ ಚಿತ್ರದ ಬಗ್ಗೆ ನಟಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಚಿತ್ರದಲ್ಲಿ ನಾನು ನಟಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಸದ್ಯದಲ್ಲೇ ಒಂದೊಳ್ಳೆ ಕಥೆ, ಸಿನಿಮಾದ ಮೂಲಕ ಅಭಿಮಾನಿಗಳ ಮುಂದೆ ಬರುತ್ತೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪಾರುಗೆ ಒಲಿದು ಬಂದ ಕಂಕಣಭಾಗ್ಯ

    ಪಾರುಗೆ ಒಲಿದು ಬಂದ ಕಂಕಣಭಾಗ್ಯ

    ಬೆಂಗಳೂರು: ಸದಾ ನವನವೀನ ಕಾರ್ಯಕ್ರಮಗಳನ್ನು ಪ್ರೇಕ್ಷಕರಿಗೆ ನೀಡುವ ಮೂಲಕ ಜೀ ಕನ್ನಡವಾಹಿನಿ ಕನ್ನಡಿಗರ ಮನೆಮಾತಾಗಿದೆ. ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ರಿಯಾಲಿಟಿ ಷೋಗಳು ಹಾಗೂ ವಿಶಿಷ್ಟ ಕಥಾಹಂದರವುಳ್ಳ ಧಾರಾವಾಹಿಗಳನ್ನು ನೀಡುವ ಮೂಲಕ ಕನ್ನಡಿಗರಿಗೆ ಮನರಂಜನೆಯ ಮಹಾಪೂರವನ್ನೇ ಒದಗಿಸುತ್ತಿದೆ. ಕಿರುತೆರೆಯ ಸಾಂಪ್ರದಾಯಿಕ ಚೌಕಟ್ಟನ್ನೂ ಮೀರಿ, ಸತತವಾಗಿ ವೀಕ್ಷಕರಿಗೆ ಹೊಸ ಅಲೆಯ ಕಥೆಗಳನ್ನು ಕಟ್ಟಿಕೊಡುತ್ತಿದೆ. ಅಂಥ ಹೊಸ ಅಲೆಯ ಧಾರಾವಾಹಿಗಳಲ್ಲಿ ‘ಪಾರು’ ಧಾರಾವಾಹಿಯೂ ಒಂದು. ಈಗಾಗಲೇ ‘ಪಾರು’ ವೀಕ್ಷಕರಿಂದ ಅಪಾರ ಮೆಚ್ಚುಗೆ ಪಡೆದು ಮುನ್ನಡೆದಿದೆ.

    ಅರಸನ ಕೋಟೆಯ ಅಖಿಲಾಂಡೇಶ್ವರಿಯ ಪಾತ್ರದಲ್ಲಿ ಹಿರಿಯ ನಟಿ ವಿನಯಾ ಪ್ರಸಾದ್ ಅವರ ಮಾಗಿದ ಅಭಿನಯ, ದಿಟ್ಟ ಮಾತುಗಳು ಇದರ ಜೊತೆ ನಾಯಕಿ ಪಾರುವಿನ ಮುಗ್ಧತೆ, ಆದಿತ್ಯನ ಶಿಸ್ತು, ಪ್ರೀತಮ್ ಮಾಡುವ ತರಲೆಗಳು ವೀಕ್ಷಕರನ್ನು ಇನ್ನೂ ಹೆಚ್ಚಾಗಿ ತಲುಪುವಂತೆ ಮಾಡಿದೆ. ಪಕ್ಕಾ ಸಿನಿಮಾ ಶೈಲಿಯ ಮೇಕಿಂಗ್ ವೀಕ್ಷಕರನ್ನು ಸೆಳೆಯುತ್ತಿದೆ. ಅದ್ದೂರಿ ಬಂಗಲೆಗಳು, ಪಾತ್ರಧಾರಿಗಳ ಕಾಸ್ಟೂಮ್ಸ್, ಖಡಕ್ ಡೈಲಾಗ್‍ಗಳು ವೀಕ್ಷಕರಿಗೆ ಹೊಸತನ ನೀಡಿದೆ. ಪಾರು ಧಾರಾವಾಹಿಯಲ್ಲಿನ ಗಟ್ಟಿ ಕಥಾಹಂದರ ಪ್ರತಿ ಎಪಿಸೋಡನ್ನು ವೀಕ್ಷಕರನ್ನು ಕಾತುರದಿಂದ ಕಾಯುವಂತೆ ಮಾಡಿದೆ.

    ಕಥಾಹಂದರದ ಬಗ್ಗೆ ಹೇಳುವುದಾದರೆ ಅಖಿಲಾಂಡೇಶ್ವರಿಯ ಮನೆಗೆ ಬರುವ ನಾಯಕಿ ಪಾರು ಅವರ ಮನೆಯಲ್ಲೇ ಅಡುಗೆ ಕೆಲಸಕ್ಕೆ ಸೇರುತ್ತಾಳೆ. ಅಖಿಲಾಂಡೇಶ್ವರಿಯ ಶಿಸ್ತಿನ ಅರಮನೆಯಲ್ಲಿ ಬರುವ ಸಂಕಷ್ಟಗಳನ್ನು ಎದುರಿಸುತ್ತಲೇ ಮುಂದೆ ಸಾಗುತ್ತಾಳೆ. ಮುಂದೆ ಅಖಿಲಾಂಡೇಶ್ವರಿ ಸಾಮ್ರಾಜ್ಯಕ್ಕೇ ರಾಯಭಾರಿಯಾಗುತ್ತಾಳೆ. ಈಗ ನಾಯಕಿ ಪಾರು ಬದುಕಲ್ಲೊಂದು ನಾಟಕೀಯ ತಿರುವು ಎದುರಾಗಿದೆ. ಪಾರುವಿಗೆ ಮದುವೆಯ ಯೋಗ ಕೂಡಿಬಂದಿದೆ. ಅದೂ ಯಾರೊಂದಿಗೆ ಗೊತ್ತಾ? ಅಖಿಲಾಂಡೇಶ್ವರಿಯ ಹಿರಿಯ ಮಗ ಆದಿತ್ಯ ಗ್ರೂಪ್ ಆಫ್ ಕಂಪನೀಸ್ ಒಡೆಯ ಆದಿತ್ಯನೊಂದಿಗೆ. ಆದಿತ್ಯ ಮತ್ತು ಪಾರು ಇಬ್ಬರ ಮದುವೆ ಅದ್ಧೂರಿಯಾಗಿ ನೆರವೇರಿದೆ. ಮದುವೆಯ ಎಲ್ಲಾ ಶಾಸ್ತ್ರ ಸಂಪ್ರದಾಯಗಳನ್ನು ಭರ್ಜರಿಯಾಗಿ ಚಿತ್ರೀಕರಿಸಲಾಗಿದೆ.

    ಅಖಿಲಾಂಡೇಶ್ವರಿಯನ್ನು ಸದಾ ದೇವತೆಯಂತೆ ಆರಾಧಿಸುವ, ಅವರ ಮಾತನ್ನು ವೇದವಾಕ್ಯದಂತೆ ಪಾಲಿಸುವ ಪಾರು ಅಖಿಲಾಂಡೇಶ್ವರಿಯ ಮಗನನ್ನು ಮದುವೆಯಾಗಲು ಹೇಗೆ ಸಾಧ್ಯವಾಯಿತು ಎನ್ನುವ ಪ್ರಶ್ನೆ ವೀಕ್ಷಕರಲ್ಲಿ ಸಹಜವಾಗಿಯೇ ಕಾಡುತ್ತದೆ. ಇದಕ್ಕೆಲ್ಲ ಉತ್ತರ ಪಾರು ಮುಂದಿನ ಸಂಚಿಕೆಗಳಲ್ಲಿ ಸಿಗಲಿದೆ. ಪಾರು ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9.30ಕ್ಕೆ ಪ್ರಸಾರವಾಗುತ್ತಿದೆ.