ಪ್ಯಾರ್ಗೆ ಆಗ್ಬಿಟ್ಟೈತಿ ಹುಡುಗಿ ಪಾರುಲ್ ಯಾದವ್ ಏನು ಮಾಡುತ್ತಿದ್ದಾರೆ ಎನ್ನುವ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಸದ್ಯ ಅವರು ಏಕಾಂಗಿಯಾಗಿ ಪ್ರವಾಸ ಮಾಡುತ್ತಿದ್ದಾರೆ. ಸೋಲೋ ಟ್ರಿಪ್ ಮಾಡುವ ಮಜವೆ ಬೇರೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ : ಸದ್ಯ ಡೇಟಿಂಗ್, ಮುಂದೆ ಮದ್ವೆ, ಹೃತಿಕ್ –ಸಬಾ ಜೋಡಿ ಪ್ರೇಮ್ ಕಹಾನಿ
ಗೋವಿಂದಾಯನಮಃ ಸಿನಿಮಾದ ಮೂಲಕ ಅಸಂಖ್ಯಾತ ಅಭಿಮಾನಿಗಳನ್ನು ಪಡೆದ ಪಾರುಲ್, ಆನಂತರ ಹಲವು ಚಿತ್ರಗಳಲ್ಲಿ ನಟಿಸಿದರು. ಮೂರ್ನಾಲ್ಕು ವರ್ಷಗಳಿಂದ ಅವರು ಸಿನಿಮಾ ರಂಗದಲ್ಲಿ ಸಕ್ರೀಯರಾಗಲಿಲ್ಲ. ಕಾರಣ ಬಟರ್ ಪ್ಲೈ ಸಿನಿಮಾ ಎನ್ನಲಾಗುತ್ತಿದೆ. ಇದನ್ನೂ ಓದಿ : ಪಂಜಾಬ್ ನಿಯೋಜಿತ ಸಿಎಂ ಭಗವಂತ್ ಮಾನ್ ನಟ ಹಾಗೂ ಕಾಮಿಡಿ ಕಲಾವಿದ
ಬಾಲಿವುಡ್ ನಲ್ಲಿ ತೆರೆಕಂಡ ಕ್ವೀನ್ ಸಿನಿಮಾದ ಕನ್ನಡದ ಅವತರಣಿಕೆ ಈ ‘ಬಟರ್ ಪ್ಲೈ’ . ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದು ರಮೇಶ್ ಅರವಿಂದ್. ಶೂಟಿಂಗ್ ಮುಗಿದು, ಬಿಡುಗಡೆ ಆಗಬೇಕಿದ್ದ ಚಿತ್ರ ಹಾಗೆಯೇ ಉಳಿದುಕೊಂಡಿತು. ಅದಕ್ಕೆ ಕಾರಣವೂ ಸಿಕ್ಕಿವಲ್ಲವಂತೆ. ಅಲ್ಲದೇ, ಈ ಸಿನಿಮಾದಲ್ಲಿ ಸ್ವತಃ ಪಾರುಲ್ ನಾಯಕಿಯಾಗಿ ನಟಿಸಿದ್ದಾರೆ ಮತ್ತು ಸಹ ನಿರ್ಮಾಪಕಿ ಕೂಡ. ಇದನ್ನೂ ಓದಿ : ಕಿಕ್ ಏರಿಸಲು ಹೊರಟಿದ್ದ ಸಮಂತಾಗೆ ‘ನೋ ನೋ’ ಅಂದ ಟ್ರೋಲಿಗರು
ಸಿನಿಮಾದಿಂದ ದೂರವಾಗಿ ಈಗ ಸೋಲೊ ಟ್ರಿಪ್ ನಲ್ಲಿ ಎಂಜಾಯ್ ಮಾಡುತ್ತಿದ್ದಾರಂತೆ ಪಾರೂಲ್. ಹೀಗೆ ಒಂಟಿಯಾಗಿ ಪ್ರವಾಸ ಮಾಡುವುದೇ ಒಂದು ರೀತಿಯಲ್ಲಿ ರೋಚನ ಅಂದಿದ್ದಾರೆ ಬಟರ್ ಫ್ಲೈ ಬೆಡಗಿ.
ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿಯನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಗರಂ ಆಗಿದ್ದು, ಇದೀಗ ಇವರ ಬೆನ್ನಿಗೆ ಶೃತಿ ಹರಿಹರನ್ ಕೂಡ ನಿಂತಿದ್ದಾರೆ.
ನಟಿ ಪಾರೂಲ್ ಆಕ್ರೋಶ ವ್ಯಕ್ತಪಡಿಸಿ ಮಾಡಿರುವ ಪೋಸ್ಟ್ ಅನ್ನು ಸೃಇ ತಮ್ಮ ಇನ್ಸ್ ಸ್ಟಾಗ್ರಾಂ ಸ್ಟೇಟಸ್ ನಲ್ಲಿ ಹಾಕಿಕೊಂಡು ಕೈ ಮುಗಿದಿದ್ದಾರೆ. ಅಲ್ಲದೆ ಒಳ್ಳೆಯ ಮಾತುಗಳನ್ನಾಡಿದ್ದೀರಿ. ನಮ್ಮಲ್ಲಿ ಹಲವರು ಒಂದೇ ರೀತಿಯ ಆಲೋಚನೆಗಳನ್ನು ಹಂಚಿಕೊಳ್ಳುತ್ತಾರೆ ಎಂದು ತಿಳಿಸಿದ್ದಾರೆ.
ಪಾರೂಲ್ ಹೇಳಿದ್ದೇನು..?
ಅಂತಿಮವಾಗಿ ಲಿಂಗ ಸಮಾನತೆ ಹೋರಾಟಕ್ಕೆ ಗೆಲುವು ಸಿಕ್ಕಿದೆ. ಮಾದಕ ವಸ್ತುಗಳ ವಿರುದ್ಧ ನಾನು ಸೇರಿದಂತೆ ಎಲ್ಲರೂ ಹೋರಾಡಬೇಕು. ಆದರೆ ಭಾರತದಲ್ಲಿ ಡ್ರಗ್ಸ್ ಮಾರಾಟಗಾರರು ಅಥವಾ ಬಳಕೆದಾರರು ಕೇವಲ ಮೂವರು ಮಹಿಳೆಯರು ಮಾತ್ರನಾ?, ಸ್ಯಾಂಡಲ್ವುಡ್ ಡ್ರಗ್ಸ್ ದಂಧೆಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ವಾ ಎಂದು ಪ್ರಶ್ನೆ ಮಾಡಿದ್ದರು.
ಯಾವುದೇ ಕಾರ್ಪೋರೇಟರ್ ಸಿಬ್ಬಂದಿ, ವ್ಯಾಪಾರಸ್ಥರು, ಕ್ರೀಡಾಪಟುಗಳು ಅಥವಾ ನಟರು ಸಹ ಡ್ರಗ್ಸ್ ಧಂದೆಯಲ್ಲಿ ಭಾಗಿಯಾಗಿಲ್ವಾ? ನಾವು ಲಿಂಗ ಸಮಾನತೆಯ ಹೋರಾಟವನ್ನು ಗೆದ್ದಿದ್ದೇವೆ ಎಂದು ಸಂಭ್ರಮಿಸಬೇಕಾ? ಅಥವಾ ನಮ್ಮಲ್ಲಿ ಕೆಲವರನ್ನು ಮಾತ್ರ ಬೇಟೆಯಾಡುವುದು ಎಷ್ಟು ಸುಲಭ ಎಂದು ನಾವು ಅಳಬೇಕೇ ಎಂದು ಡ್ರಗ್ಸ್ ದಂಧೆ ಬಗ್ಗೆ ನಟಿ ಪಾರುಲ್ ಯಾದವ್ ಪ್ರಶ್ನಿಸಿದ್ದರು.
ರಾಗಿಣಿ, ಸಂಜನಾ ಬಂಧನ:
ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸೋಮವಾರ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇತ್ತ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಬೆಂಗಳೂರು: ಸ್ಯಾಂಡಲ್ವುಡ್ ಡ್ರಗ್ಸ್ ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಮತ್ತು ಸಂಜನಾರನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಆದರೆ ಡ್ರಗ್ಸ್ ವಿಚಾರದಲ್ಲಿ ನಟಿಯರ ಹೆಸರು ಮಾತ್ರ ಕೇಳಿ ಬಂದ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಕಿಡಿಕಾರಿದ್ದಾರೆ. ಇದನ್ನೂ ಓದಿ: ವಿಚಾರಣೆ ವೇಳೆ ಬರೋಬ್ಬರಿ 24 ಜನರ ಹೆಸರು ಬಾಯ್ಬಿಟ್ಟ ಸಂಜನಾ
ಡ್ರಗ್ಸ್ ದಂಧೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನಟಿ ರಾಗಿಣಿ ಮನೆಯ ಮೇಲೆ ದಾಳಿ ಮಾಡಿದ್ದು, ಕಳೆದ ವಾರ ನಟಿಯನ್ನು ಬಂಧಿಸಲಾಗಿತ್ತು. ಮಂಗಳವಾರ ನಟಿ ಸಂಜನಾ ಮನೆಯ ಮೇಲೂ ಸಿಸಿಬಿ ಅಧಿಕಾರಿಗಳು ದಾಳಿ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಇದುವರೆಗೂ ಡ್ರಗ್ಸ್ ವಿಚಾರದಲ್ಲಿ ಸ್ಯಾಂಡಲ್ವುಡ್ನ ಇಬ್ಬರನ್ನು ನಟಿಯರನ್ನು ಬಂಧಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಟಿ ಪಾರೂಲ್ ಯಾದವ್ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ದಯಮಾಡಿ ಇಡೀ ಚಿತ್ರರಂಗವನ್ನು ಟಾರ್ಗೆಟ್ ಮಾಡಬೇಡಿ: ಸುಮಲತಾ
“ಅಂತಿಮವಾಗಿ ಲಿಂಗ ಸಮಾನತೆ ಹೋರಾಟಕ್ಕೆ ಗೆಲುವು ಸಿಕ್ಕಿದೆ. ಮಾದಕ ವಸ್ತುಗಳ ವಿರುದ್ಧ ನಾನು ಸೇರಿದಂತೆ ಎಲ್ಲರೂ ಹೋರಾಡಬೇಕು. ಆದರೆ ಭಾರತದಲ್ಲಿ ಡ್ರಗ್ಸ್ ಮಾರಾಟಗಾರರು ಅಥವಾ ಬಳಕೆದಾರರು ಕೇವಲ ಮೂವರು ಮಹಿಳೆಯರು ಮಾತ್ರನಾ?, ಸ್ಯಾಂಡಲ್ವುಡ್ ಡ್ರಗ್ಸ್ ದಂಧೆಯಲ್ಲಿ ಬೇರೆ ಯಾರೂ ಭಾಗಿಯಾಗಿಲ್ವಾ?” ಎಂದು ಪ್ರಶ್ನೆ ಮಾಡಿದ್ದಾರೆ.
Finally the fight for #genderequality has been won!! I am all for cleansing societal evils and drug abuse must be dealt with firmly but apparently the only drug dealers/ users in India are three women…
“ಯಾವುದೇ ಕಾರ್ಪೋರೇಟರ್ ಸಿಬ್ಬಂದಿ, ವ್ಯಾಪಾರಸ್ಥರು, ಕ್ರೀಡಾಪಟುಗಳು ಅಥವಾ ನಟರು ಸಹ ಡ್ರಗ್ಸ್ ಧಂದೆಯಲ್ಲಿ ಭಾಗಿಯಾಗಿಲ್ವಾ? ನಾವು ಲಿಂಗ ಸಮಾನತೆಯ ಹೋರಾಟವನ್ನು ಗೆದ್ದಿದ್ದೇವೆ ಎಂದು ಸಂಭ್ರಮಿಸಬೇಕಾ? ಅಥವಾ ನಮ್ಮಲ್ಲಿ ಕೆಲವರನ್ನು ಮಾತ್ರ ಬೇಟೆಯಾಡುವುದು ಎಷ್ಟು ಸುಲಭ ಎಂದು ನಾವು ಅಳಬೇಕೇ? ಎಂದು ಡ್ರಗ್ಸ್ ದಂಧೆ ಬಗ್ಗೆ ನಟಿ ಪಾರುಲ್ ಯಾದವ್ ಪ್ರಶ್ನಿಸಿದ್ದಾರೆ.
no one else – no corporate execs, business people, sportspeople or even male actors is doing/ dealing drugs… should we celebrate winning the gender equality fight or should we cry at how easy it is to prey on some of us..@narcoticsbureau#Drugsmafia#NCB#SandalwoodDrugMafia
ಮೊದಲಿಗೆ ಡ್ರಗ್ಸ್ ಮಾಫಿಯಾ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿದ್ದ ನಟಿ ರಾಗಿಣಿಯನ್ನು ಬಂಧಿಸಲಾಗಿತ್ತು. ನಂತರ ರಾಗಿಣಿ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಗರದ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ನಡೆದಿತ್ತು. ಈ ವೇಳೆ 10 ದಿನ ನಮ್ಮ ಕಸ್ಟಡಿಗೆ ನೀಡಬೇಕೆಂದು ಮನವಿ ಮಾಡಿದ್ದರು. ಸಿಸಿಬಿ ವಕೀಲರ ವಾದವವನ್ನು ಆಲಿಸಿದ ಬಳಿಕ ನ್ಯಾ.ಜಗದೀಶ್ ಅವರು 5 ದಿನ ಕಸ್ಟಡಿಗೆ ನೀಡಿದ್ದಾರೆ. ಹೀಗಾಗಿ ಕೋರ್ಟ್ ಆದೇಶದ ಅನ್ವಯ ಶುಕ್ರವಾರದವರೆಗೂ ರಾಗಿಣಿ ಸಿಸಿಬಿ ಪೊಲೀಸರ ವಶದಲ್ಲಿ ಇರಲಿದ್ದಾರೆ.
ಇನ್ನೂ ನಟಿ ಸಂಜನಾ ಆಪ್ತ ರಾಹುಲ್ ಹೇಳಿಕೆಯಿಂದಾಗಿ ಮಂಗಳವಾರ ಬೆಳಗ್ಗೆ ಸಿಸಿಬಿ ಅಧಿಕಾರಿಗಳು ಸಂಜನಾ ಮನೆ ಮೇಲೆ ದಾಳಿ ಮಾಡಿದ್ದರು. ಹಲವು ಗಂಟೆ ಶೋಧ ಕಾರ್ಯ ನಡೆಸಿ, ಸಂಜನಾರನ್ನು ಅರೆಸ್ಟ್ ಮಾಡಿದ್ದಾರೆ. ಎಫ್ಐಆರ್ನಲ್ಲಿ ಸಂಜನಾರನ್ನು ಎ-14 ಎಂದು ಉಲ್ಲೇಖಿಸಲಾಗಿದೆ. ಡ್ರಗ್ ಮಾಫಿಯಾ ಜೊತೆ ನಂಟಿರುವ ಅನುಮಾನದ ಮೇಲೆ ತೀವ್ರ ವಿಚಾರಣೆ ನಡೆಸಲಾಗಿದೆ. ಮೆಡಿಕಲ್ ಚೆಕಪ್ ಬಳಿಕ ವಸಂತನಗರದ ಸ್ಪೆಷಲ್ ರಿಮ್ಯಾಂಡ್ ಕೋರ್ಟ್ ಗೆ ಹಾಜರುಪಡಿಸಿ ಸಂಜನಾರನ್ನು ಐದು ದಿನ ಕಸ್ಟಡಿಗೆ ಪಡೆದುಕೊಂಡಿದೆ.
ಡ್ರಗ್ಸ್ ಪ್ರಕರಣದಲ್ಲಿ ಸಂಜನಾ ವಿರುದ್ಧ ಕಳೆದ ವಾರ ಯಾವುದೇ ಸಾಕ್ಷ್ಯಗಳು ಸಿಕ್ಕಿರಲಿಲ್ಲ. ಹೀಗಾಗಿ ಸೂಕ್ತ ಸಾಕ್ಷ್ಯಕ್ಕಾಗಿ ಕಾಯುತ್ತಿದ್ದರು. ಈ ಪ್ರಕರಣದಲ್ಲಿ ವಿಚಾರಣೆ ಎದುರಿಸಿದ ಮಂಗಳೂರು ಮೂಲದ ಪೃಥ್ವಿ ಶೆಟ್ಟಿ ಹಲವು ಮಾಹಿತಿಗಳನ್ನು ತಿಳಿಸಿದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಇವೆಂಟ್ ಮ್ಯಾನೇಜ್ಮೆಂಟ್ ನಡೆಸುತ್ತಿದ್ದ ಪೃಥ್ವಿ ಶೆಟ್ಟಿ ಕಂಪನಿಯಲ್ಲಿ ಸಂಜನಾ ಸಹ ಪಾಲುದಾರೆ ಎಂಬ ಮಾಹಿತಿ ಸಿಕ್ಕಿದೆ. ಇಬ್ಬರ ನಡುವೆ ಲಕ್ಷಾಂತರ ರೂಪಾಯಿ ವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ದಾಖಲೆಗಳನ್ನು ಕೆದಕಿದಾಗ ದೊಡ್ಡ ದೊಡ್ಡ ಹೋಟೆಲ್ಗಳಲ್ಲಿ ಪಾರ್ಟಿಗಳನ್ನು ಆಯೋಜನೆ ಮಾಡಿದ ಬಗ್ಗೆ ಮಾಹಿತಿ ಸಿಕ್ಕಿದೆ.
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಪಾರೂಲ್ ಯಾದವ್ ಓಲಾ ಚಾಲಕನ ವಿರುದ್ಧ ರೊಚ್ಚಿಗೆದಿದ್ದಾರೆ.
ನಟಿ ಪಾರೂಲ್ ಯಾದವ್ ತಮ್ಮ ಮನೆಯನ್ನು ಶಿಫ್ಟ್ ಮಾಡಿದ್ದಾರೆ. ಹಾಗಾಗಿ ಅವರು ಓಲಾ ಕ್ಯಾಬ್ ಬುಕ್ ಮಾಡಿ ಅದರಲ್ಲಿ ಪ್ರಯಾಣಿಸಿದ್ದರು. ದಾರಿ ಮಧ್ಯೆದಲ್ಲಿ ಸ್ನೇಹಿತೆಯ ಮದುವೆ ವಾರ್ಷಿಕೋತ್ಸವಕ್ಕಾಗಿ ಒಂದು ವಾಚ್ ನ್ನು ಖರೀದಿಸಿದ್ದರು. ವಾಚ್ ಖರೀದಿಸಿ ಅದನ್ನು ಓಲಾದಲ್ಲಿ ಇಟ್ಟು ಮರೆತು ಹೋಗಿದ್ದಾರೆ.
ಓಲಾದಲ್ಲಿ ಬರುತ್ತಿದ್ದ ವಸ್ತುಗಳನ್ನು ಹೊಸ ಮನೆಗೆ ಶಿಫ್ಟ್ ಮಾಡಲು ಪಾರೂಲ್ ಮುಂಬೈಗೆ ಹೋಗಲು ವಿಮಾನ ನಿಲ್ದಾಣದತ್ತ ಹೋಗಿದ್ದಾರೆ. ವಿಮಾನ ನಿಲ್ದಾಣ ತಲುಪುತ್ತಿದ್ದಂತೆ ವಾಚ್ ಕಾಣೆ ಆಗಿರುವುದು ತಿಳಿದು ಬಂದಿದೆ. ಆಗ ಓಲಾ ಚಾಲಕನಿಗೆ ಕರೆ ಮಾಡಿ ವಾಚ್ ಬಗ್ಗೆ ವಿಚಾರಿಸಿದ್ದಾರೆ. ಆಗ ಚಾಲಕ ನನಗೆ ಯಾವ ವಾಚ್ ಬಗ್ಗೆಯೂ ಗೊತ್ತಿಲ್ಲ ಎಂದು ಪ್ರತಿಕ್ರಿಯಿಸಿದ್ದಾನೆ.
Dear friends – Please note that @olacabs don't verify their drivers. I just went through a crazy situation where the driver hid a package containing expensive watches bought as gifts for a 50th wedding anniversary when I stepped out of the car for a couple of mins.
ತಕ್ಷಣವೇ ಪಾರೂಲ್ ಯಾದವ್ ವಿಮಾನ ನಿಲ್ದಾಣನಲ್ಲಿರುವ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ಪೊಲೀಸರು ಮೂರು ದಿನದಲ್ಲೇ ಓಲಾ ಚಾಲಕನನ್ನು ಸೆರೆ ಹಿಡಿದಿದ್ದಾರೆ. ಆಗ ಓಲಾ ಚಾಲಕ ಆ ವಾಚ್ ಅನ್ನು ಪಾರೂಲ್ಗೆ ಹಿಂದಿರುಗಿಸಿದ್ದಾರೆ.
ನಂತರ ಪಾರೂಲ್ ಇ-ಮೇಲ್ ಮೂಲಕ ಓಲಾದವರಿಗೆ ದೂರು ನೀಡಿದ್ದಾರೆ. ಆದರೆ ಮೂರು ದಿನವಾದರೂ ಓಲಾದವರು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಹಾಗೂ ಪಾರೂಲ್ ಅವರನ್ನು ಸಂಪರ್ಕಿಸಿ ವಿಚಾರಿಸಲಿಲ್ಲ ಎಂದು ಹೇಳಲಾಗಿದೆ.
He then pretended we never had the package when dropping me to the airport. @ola_support didn't respond at all initially. Thank God we didn't wait for them and filed a police complaint instantly. I want to let you know that the fab @BlrCityPolice have recovered the watches
But sadly @ola_supports still haven't been able to even contact their driver. @bhash Shame on you. Everyone please be careful of using Ola. Their drivers are not verified and Ola can't reach them in an emergency. And yes a big thank you to the Karnataka Police
ಬೆಂಗಳೂರು: ‘ಪ್ಯಾರ್ ಗೆ ಆಗ್ಬಿಟೈತೆ’ ಬೆಡಗಿ ಪಾರೂಲ್ ಯಾದವ್ ಸೀಜರ್ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಹಣ ಪಡೆಯದೇ ಚಿತ್ರದ ಪ್ರಚಾರಕ್ಕೂ ಬರದೇ ಕಾಣೆಯಾಗಿದ್ದಾರೆ ಎಂಬ ಸುದ್ದಿಗಳು ಗಾಂಧಿನಗರದಲ್ಲಿ ಕೇಳಿಬರುತ್ತಿದೆ.
ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಚಿರಂಜೀವಿ ಸರ್ಜಾ ಅಭಿನಯದ ಸೀಜರ್ ಸಿನಿಮಾದಲ್ಲಿ ಪಾರೂಲ್ ಯಾದವ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಇವರಿಗೆ ಚಿತ್ರತಂಡ 1.5 ಲಕ್ಷ ರೂ.ಕೊಡಬೇಕಿತ್ತು. ಬಾಕಿ ಉಳಿದಿರುವ ಹಣವನ್ನು ನೀಡಿ ಸಿನಿಮಾ ಪ್ರಮೋಶನ್ ಗೆ ಕರೆಯಬೇಕೆಂದರೂ ಸಂಪರ್ಕಕ್ಕೆ ಸಿಗ್ತಿಲ್ಲ. ಈ ಹಿನ್ನೆಲೆಯಲ್ಲಿ ಚಿತ್ರತಂಡ ಖುದ್ದಾಗಿ ಹಣ ನೀಡಲು ನಿರ್ಧರಿಸಿದೆ ಅಂತಾ ಹೇಳಲಾಗಿದೆ.
ವಿನಯ್ ಕೃಷ್ಣ ಸಾರಥ್ಯದ ಸೀಜರ್ ಸಿನಿಮಾ ಮುಹೂರ್ತ ಆಚರಿಸಿಕೊಂಡು ಬರೋಬ್ಬರಿ 4 ವರ್ಷ ಆಗಿದೆ. ಲಾಂಗ್ಜರ್ನಿ ಕಂಪ್ಲೀಟ್ ಮಾಡಿರೋ ಸೀಜರ್ ಎಲ್ಲಾ ಕೆಲಸ ಮುಗಿಸಿಕೊಂಡು ಥಿಯಟೇರ್ ಗೆ ಎಂಟ್ರಿ ಕೊಡಲು ರೆಡಿಯಾಗಿದೆ. ಇದೇ ಶುಕ್ರವಾರ ರವಿಚಂದ್ರನ್, ಚಿರು ಕಾಂಬಿನೇಷನ್ನ ಸಿನಿಮಾ 230 ಚಿತ್ರಮಂದಿರಗಳಲ್ಲಿ ಅದ್ಧೂರಿಯಾಗಿ ರಿಲೀಸ್ ಆಗ್ತಿದೆ.
ನಾಲ್ಕು ವರ್ಷಗಳ ಹಿಂದೆ ಚಂದನ್ ಸೈನ್ ಮಾಡಿದ ಮೊದಲ ಸಿನಿಮಾ ಇದು. ಈ ಸೀಜರ್ ಗೆ ಟ್ಯೂನ್ಸ್ ಕಂಪೋಸ್ ಮಾಡುವ ಮೂಲಕ ಟಾಲಿವುಡ್, ಕಾಲಿವುಡ್ ಜೊತೆ ಮಾಲಿವುಡ್ಗೂ ಎಂಟ್ರಿ ಕೊಡ್ತಿದ್ದಾರೆ ಚಂದನ್ ಶೆಟ್ಟಿ. ನಾಲ್ಕು ಭಾಷೆಯಲ್ಲಿ ರೆಡಿಯಾಗಿರೋ ಸೀಜರ್ ಬೇರೆ ಬೇರೆ ಟೈಮ್ನಲ್ಲಿ ಪರಭಾಷೆಯಲ್ಲಿ ಮಿಂಚಲಿದೆ.
ನಾಯಕಿ ಪಾರುಲ್ ಯಾದವ್ ಪ್ರಚಾರಕ್ಕೆ ಬರದೆ ಇರೋದರ ಬಗ್ಗೆ ಚಿತ್ರತಂಡ ಬೇಸರ ವ್ಯಕ್ತಪಡಿಸಿದೆ. 12 ರಿಂದ 13 ಕೋಟಿ ವೆಚ್ಚದಲ್ಲಿ ರೆಡಿಯಾಗಿರುವ ಅದ್ಧೂರಿ ಸೀಜರ್ ಸಿನಿಮಾ ಈ ಶುಕ್ರವಾರ ಬಿಡುಗಡೆಯಾಗಲಿದೆ. ಇದನ್ನೂ ಓದಿ: ಸೀಜರ್ ಸಿನೆಮಾದ ತಂತ್ರಜ್ಞರು ಹೇಳೋದೇನು ಗೊತ್ತಾ..?