Tag: ಪಾರ್ವತಮ್ಮ ರಾಜ್ ಕುಮಾರ್

  • ನಟ ಸೂರಜ್ ಗೆ ಕಾಲು ಕತ್ತರಿಸಿದ ವಿಷಯ 4 ದಿನದ ನಂತರ ಹೇಳಿದೆವು : ಡಾ. ಅಜಯ್ ಹೆಗಡೆ ಕೊಟ್ಟ ಹೆಲ್ತ್ ಅಪ್ ಡೇಟ್

    ನಟ ಸೂರಜ್ ಗೆ ಕಾಲು ಕತ್ತರಿಸಿದ ವಿಷಯ 4 ದಿನದ ನಂತರ ಹೇಳಿದೆವು : ಡಾ. ಅಜಯ್ ಹೆಗಡೆ ಕೊಟ್ಟ ಹೆಲ್ತ್ ಅಪ್ ಡೇಟ್

    ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ ಹಾಗೂ ನಟ ಧ್ರುವನ್ (Dhruvan) ಅಲಿಯಾಸ್ ಸೂರಜ್ (Suraj) ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದರು. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಕಾಲು ಕತ್ತರಿಸುವುದು ವೈದ್ಯರಿಗೆ ಅನಿವಾರ್ಯವಾಗಿತ್ತು. ಈ ಕುರಿತು ಮಣಿಪಾಲ್ ಆಸ್ಪತ್ರೆಯ ವೈದ್ಯ ಅಜಯ್ ಹೆಗಡೆ (Ajay Hegde) ಇದೇ ಮೊದಲ ಬಾರಿಗೆ ಮಾತನಾಡಿದ್ದಾರೆ. ಸೂರಜ್ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.

    ‘ಸೂರಜ್ ಅವರನ್ನು ಆಸ್ಪತ್ರೆಗೆ ಸೇರಿಸಿದಾಗ ಬಲಗಾಲಿನಲ್ಲಿ ತೀವ್ರ ರಕ್ತಸ್ರಾವ ಆಗಿತ್ತು. ಬಲ ಮೊಣಕಾಲಿಗೆ ಸಾಕಷ್ಟು ಏಟು ಬಿದ್ದಿರುವುದರಿಂದ ಕತ್ತರಿಸಿ ತೆಗೆಯುವುದು ಅನಿವಾರ್ಯವಾಗಿತ್ತು. ಅಪಘಾತದ ದಿನ ಅವರನ್ನು ವೆಂಟಿಲೇಟರ್ ನಲ್ಲೇ ಇಟ್ಟು ಚಿಕಿತ್ಸೆ ನೀಡಲಾಯಿತು. ಕಾಲಿನಲ್ಲಿ 6 ಇಂಚಿನಷ್ಟು ಜಾಗದಲ್ಲಿ ಮೂಳೆ ಹಾಗೂ ನರಗಳೇ ಇರಲಿಲ್ಲ. ಜಜ್ಜಿ ಹೋಗಿದ್ದವು. ಕಾಲಿನ ಭಾಗ ಕತ್ತರಿಸಿ ತೆಗೆದಿದ್ದನ್ನು ನಾಲ್ಕು ದಿನಗಳ ಬಳಿಕ ಅವರಿಗೆ ಹೇಳಲಾಯಿತು’ ಎಂದಿದ್ದಾರೆ ಡಾ. ಅಜಯ್ ಹೆಗಡೆ.

    ಒಟ್ಟು ನಾಲ್ಕರಿಂದ ಐದು ತಾಸುಗಳ ಕಾಲ ಸೂರಜ್ ಕಾಲಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಇನ್ನೂ ಕೆಲವು ತಿಂಗಳ ಕಾಲ ಚಿಕಿತ್ಸೆಯ ಅಗತ್ಯವಿದೆ. ಪ್ರಸ್ತುತ ಹಿಮೋಗ್ಲೋಬಿಕ್ ಕೊರತೆಯಿದೆ. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದರು ವೈದ್ಯರು ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು. ಘಟನೆಯ ಬಗ್ಗೆ ಅವರು ಶಾಂತವಾಗಿ ಸ್ವೀಕರಿಸಿದ್ದಾರೆ ಎಂದೂ ವಿವರಿಸಿದರು. ಇದನ್ನೂ ಓದಿ:ಕಾರವಾರದಲ್ಲಿ ಬದುಕಿದ್ದ ವಿಲಕ್ಷಣ ವ್ಯಕ್ತಿಯ ಕಥೆಯೇ ‘ಟೋಬಿ’ : ಗುಟ್ಟು ರಟ್ಟು

    ಘಟನೆ ವಿವರ :

    ನಟ ಸೂರಜ್ (ಧ್ರುವನ್) ಬುಲೆಟ್ ನಲ್ಲಿ ಊಟಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಮುಂದಿನಿಂದ ಬಂದ ಟಿಪ್ಪರ್ ಸೂರಜ್ ಮೇಲೆ ಹರಿದಿದೆ ಎಂದು ಹೇಳಲಾಘುತ್ತಿದೆ. ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿದ್ದರು

    ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಅದಾಗಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಸೂರಜ್ ಬುಲೆಟ್ ಬೈಕ್ ಗೆ ಡಿಕ್ಕಿ  ಹೊಡೆದಿದೆ. ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು.

     

    ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ.  ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ರಾಜ್ ಸಂಬಂಧಿ ಧ್ರುವನ್ ತೀವ್ರ ಅಪಘಾತ : ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಆಸ್ಪತ್ರೆಗೆ ಭೇಟಿ

    ಡಾ.ರಾಜ್ ಸಂಬಂಧಿ ಧ್ರುವನ್ ತೀವ್ರ ಅಪಘಾತ : ಶಿವರಾಜ್ ಕುಮಾರ್ ಹಾಗೂ ಮತ್ತಿತರರು ಆಸ್ಪತ್ರೆಗೆ ಭೇಟಿ

    ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಹೋದರ, ನಿರ್ಮಾಪಕ ಎಸ್. ಎ ಶ್ರೀನಿವಾಸ್ ಪುತ್ರ ಹಾಗೂ ನಟ ಧ್ರುವನ್ (Dhruvan) ಅಲಿಯಾಸ್ ಸೂರಜ್ (Suraj) ನಿನ್ನೆ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದಾರೆ. ಬಲಗಾಲಿಗೆ ತೀವ್ರ ಪೆಟ್ಟು ಬಿದ್ದಿದ್ದರಿಂದ ಮೊದಲ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು. ಕಾಲು ಕತ್ತರಿಸುವ ಅನಿವಾರ್ಯತೆ ವೈದ್ಯರಿಗೆ ಬಂದಿರುವ ಕಾರಣದಿಂದಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

     

    ಅಪಘಾತ (Road Accident) ನಡೆದ ಸ್ಥಳದಲ್ಲೇ ಧ್ರುವನ್ ಬಲಗಾಲಿನ ಕೆಳ ಭಾಗ ಟ್ವಿಸ್ಟ್ ಆಗಿತ್ತು. ಅಲ್ಲದೇ ಮುಕ್ಕಾಲು ಭಾಗ ತುಂಡರಿಸಿತ್ತು. ಮಂಡಿಯ ಮೇಲ್ಭಾಗದಲ್ಲೂ ತೀವ್ರ ಪೆಟ್ಟಾಗಿತ್ತು. ಹಾಗಾಗಿ ಮಣಿಪಾಲ್ ಆಸ್ಪತ್ರೆಯ (Manipal Hospital) ವೈದ್ಯರು ಮಂಡಿಯ ಕೆಳಭಾಗವನ್ನು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ವಿಷಯ ತಿಳಿಯುತ್ತಿದ್ದಂತೆಯೇ ನಟ ಶಿವರಾಜ್ ಕುಮಾರ್ (Shivraj Kumar), ನಿರ್ಮಾಪಕ ಚಿನ್ನೇಗೌಡ ಮತ್ತು ಧ್ರುವನ್ ಸಿನಿಮಾದ ನಿರ್ದೇಶಕರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

    ಘಟನೆ ವಿವರ :

    ನಟ ಸೂರಜ್ (ಧ್ರುವನ್) ನಿನ್ನೆ ಬುಲೆಟ್ ನಲ್ಲಿ ಊಟಿಗೆ ಪ್ರವಾಸಕ್ಕೆ ಹೋಗುತ್ತಿದ್ದರು. ಮಾರ್ಗಮಧ್ಯೆ ಟ್ರ್ಯಾಕ್ಟರ್ ಅನ್ನು ಹಿಂದಿಕ್ಕಿ ಹೋಗುತ್ತಿದ್ದಾಗ ಮುಂದಿನಿಂದ ಬಂದ ಟಿಪ್ಪರ್ ಸೂರಜ್ ಮೇಲೆ ಹರಿದಿದೆ ಎಂದು ಹೇಳಲಾಘುತ್ತಿದೆ. ಚಾಮರಾಜನಗರ ಬೇಗೂರು (ಗುಂಡ್ಲುಪೇಟೆ) ಸಮೀಪದ ಹಿರಿಕಾಟಿ ಗೇಟ್ ಬಳಿ ಈ ಘಟನೆ ನಡೆದಿದ್ದು, ಬೈಕ್ ಸವಾರ ಸೂರಜ್ ತೀವ್ರವಾಗಿ ಗಾಯಗೊಂಡಿದ್ದರು

    ಬೇಗೂರಿನಿಂದ ಹಿರಿಕಾಟಿ ಕಡೆಗೆ ತೆರಳುತ್ತಿದ್ದ ಟಿಪ್ಪರ್ ಲಾರಿ ಅದಾಗಿದ್ದು, ಮೈಸೂರು ಕಡೆಯಿಂದ ಬರುತ್ತಿದ್ದ ಸೂರಜ್ ಬುಲೆಟ್ ಬೈಕ್ ಗೆ ಡಿಕ್ಕಿ  ಹೊಡೆದಿದೆ. ವಿಷಯ ತಿಳಿದ ಬೇಗೂರು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಗಾಯಾಳವನ್ನು ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಇದನ್ನೂ ಓದಿ:ಕಾಸ್ಟಿಂಗ್ ಕೌಚ್ ಬಗ್ಗೆ ಕಿಡಿಕಾರಿದ ನಟ ರಾಜೀವ್ ಖಂಡೇಲ್ವಾಲ್

    ಈ ಸಂಬಂಧ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಟಿಪ್ಪರ್ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸೂರಜ್ ಆಪ್ತರು ನೀಡಿದ ಮಾಹಿತಿಯಂತೆ ನಿನ್ನೆಯೇ ಅವರಿಗೆ ಶಸ್ತ್ರ ಚಿಕಿತ್ಸೆ ನೀಡಲಾಗಿದ್ದು, ಕಾಲಿಗೆ ತೀವ್ರವಾಗಿ ಪೆಟ್ಟಾಗಿದ್ದರಿಂದ ಒಂದು ಕಾಲು ಕತ್ತರಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಅವರಿಗೆ ಪ್ರಜ್ಞೆ ಬಾರದೇ ಇರುವ ಹಿನ್ನೆಲೆಯಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆಯಂತೆ.

     

    ಮೂಲ ಸೂರಜ್ ಅಂತಿದ್ದ ಹೆಸರನ್ನು ಧ್ರುವನ್ ಅಂತ ಬದಲಾಯಿಸಿಕೊಂಡು ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದರು. ಭಗವಾನ್ ಶ್ರೀಕೃಷ್ಣ ಪರಮಾತ್ಮ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.

  • ಇಂದು ಡಾ.ರಾಜ್ ಕುಮಾರ್ ಪುಣ್ಯತಿಥಿ : ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ಇಂದು ಡಾ.ರಾಜ್ ಕುಮಾರ್ ಪುಣ್ಯತಿಥಿ : ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ಇಂದು ವರನಟ ಡಾ.ರಾಜ್ ಕುಮಾರ್ (Rajkumar) ಅವರ 17ನೇ ಪುಣ್ಯತಿಥಿ. ಬೆಂಗಳೂರಿನ ಕಂಠೀರವ ಸ್ಟುಡಿಯೋ  ಬಳಿಯ ಸಮಾಧಿಗೆ ಡಾ.ರಾಜ್ ಕುಟುಂಬ ಆಗಮಿಸಿ ಪೂಜೆ ಸಲ್ಲಿಸಿತು. ರಾಘವೇಂದ್ರ ರಾಜ್ ಕುಮಾರ್, ಯುವರಾಜ್ ಕುಮಾರ್, ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಅನೇಕ ಸದಸ್ಯರು ಸ್ಮಾರಕಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

    ರಾಜ್ ಕುಮಾರ್ ಅವರ ಪುಣ್ಯತಿಥಿಗಾಗಿ ಪುನೀತ್ ರಾಜ್ ಕುಮಾರ್ (Puneeth) ಮತ್ತು ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಮಾಧಿಗೂ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಸ್ಮಾರಕದ ಮುಂದೆ ಅಭಿಮಾನಿಗಳು ರಕ್ತದಾನ, ಅನ್ನದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದರು. ತಮ್ಮ ನೆಚ್ಚಿನ ನಟನಿಗೆ ಈ ಮೂಲಕ ನಮನ ಸಲ್ಲಿಸಿದರು. ಇದನ್ನೂ ಓದಿ: ಮದುವೆ ಆಗುವ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಶರ್ಮಿಳಾ ಮಾಂಡ್ರೆ

    ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಅಭಿಮಾನಿಗಳು ಡಾ.ರಾಜ್ ಕುಮರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಭಾವುಕರಾದರು. ಪಕ್ಕದಲ್ಲಿಯೇ ಇರುವ ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೂ ಪೂಜೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಸ್ಮಾರಕದ ದರ್ಶನ ಪಡೆದರು.

  • ಸ್ಯಾಂಡಲ್‌ವುಡ್‌ ಕ್ವೀನ್ ಚಿತ್ರರಂಗಕ್ಕೆ ಬಂದು ನಿನ್ನೆಗೆ 19 ವರ್ಷ: ಸದ್ಯದಲ್ಲೇ ರೀ ಎಂಟ್ರಿ

    ಸ್ಯಾಂಡಲ್‌ವುಡ್‌ ಕ್ವೀನ್ ಚಿತ್ರರಂಗಕ್ಕೆ ಬಂದು ನಿನ್ನೆಗೆ 19 ವರ್ಷ: ಸದ್ಯದಲ್ಲೇ ರೀ ಎಂಟ್ರಿ

    ಸ್ಯಾಂಡಲ್ ವುಡ್ ಪದ್ಮಾವತಿ ರಮ್ಯಾ ಸಿನಿಮಾ ರಂಗಕ್ಕೆ ಬಂದು ನಿನ್ನೆ (25 ಏಪ್ರಿಲ್ 2003)ಗೆ 19 ವರ್ಷಗಳ ಪೂರೈಸಿವೆ. ಪುನೀತ್ ರಾಜ್ ಕುಮಾರ್ ನಟನೆಯ ‘ಅಭಿ’ ಸಿನಿಮಾದ ಮೂಲಕ ಸಿನಿಮಾ ರಂಗಕ್ಕೆ ಕಾಲಿಟ್ಟ ರಮ್ಯಾ ಆನಂತರ ಸಿನಿಮಾ ರಂಗದ ಕ್ವೀನ್ ಆಗಿ ಬೆಳೆದರು. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ರಮ್ಯಾ ಮೊದಲ ಹೆಸರು ದಿವ್ಯ ಸ್ಪಂದನ. ಉದ್ಯಮಿ ಆರ್.ಟಿ. ನಾರಾಯಣ್ ಮತ್ತು ರಂಜಿತ ದಂಪತಿಯ ಏಕೈಕ ಪುತ್ರಿ. ಪ್ರಾಥಮಿಕ ಶಿಕ್ಷಣವನ್ನು ಊಟಿ ಮತ್ತು ಪ್ರೌಢ ಶಿಕ್ಷಣವನ್ನು ಚನ್ನೈನಲ್ಲಿ ಮುಗಿಸಿದ ನಂತರ ಚಿತ್ರೋದ್ಯಮಕ್ಕೆ ಕಾಲಿಟ್ಟವರು. ನಟನೆಯ ಬಗ್ಗೆ ಯಾವತ್ತೂ ಕನಸು ಕಾಣದೇ ಇರುವಂತಹ ಈ ನಟಿ ಸಿನಿಮಾ ರಂಗಕ್ಕೆ ಬಂದಿದ್ದು ಆಕಸ್ಮಿಕವಾದರೂ, ಬಂದ ನಂತರ ಖ್ಯಾತ ನಟಿಯಾಗಿ ಬೆಳೆದದ್ದು ರೋಚಕ. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಅಂದುಕೊಂಡಂತೆ ಆಗಿದ್ದರೆ ಪುನೀತ್ ಅವರ ಚೊಚ್ಚಲು ಸಿನಿಮಾ ಅಪ್ಪು ಮೂಲಕವೇ ಸಿನಿಮಾ ರಂಗ ಪ್ರವೇಶ ಮಾಡಬೇಕಿತ್ತು. ಆದರೆ, ನಾನಾ ಕಾರಣಗಳಿಂದಾಗಿ ಈ ಸಿನಿಮಾದಲ್ಲಿ ರಮ್ಯಾ ನಟಿಸಲಿಲ್ಲ. ಆ ಪಾತ್ರ ರಕ್ಷಿತಾ ಪಾಲಾಯಿತು. ಹೀಗಾಗಿ ಕನ್ನಡದ ಖ್ಯಾತ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ತಮ್ಮ ಬ್ಯಾನರ್ ನ, ಅಪ್ಪು ನಟನೆಯ ಎರಡನೇ ಚಿತ್ರಕ್ಕೆ ರಮ್ಯಾ ಅವರನ್ನು ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡರು. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ಅಭಿ ನಂತರ ಎಕ್ಸ್ ಕ್ಯೂಸ್ ಮಿ ಚಿತ್ರದಲ್ಲಿ ನಟಿಸಿದರು ರಮ್ಯಾ. ಎರಡೂ ಚಿತ್ರಗಳು ಸೂಪರ್ ಹಿಟ್. ಬಾಕ್ಸ್ ಆಫೀಸಿನಲ್ಲೂ ಗೆದ್ದವು. ಹಾಗಾಗಿ ಮೂರನೇ ಚಿತ್ರವನ್ನು ತೆಲುಗಿನಲ್ಲಿ ಮಾಡಿದರು. ಅತೀ ಕಡಿಮೆ ಅವಧಿಯಲ್ಲಿ ಬೇರೆ ಭಾಷೆಗೆ ಹೋದ ಕನ್ನಡದ ನಟಿ ಎಂಬ ಕೀರ್ತಿಗೂ ಅವರು ಪಾತ್ರರಾದರು. ಅಲ್ಲಿಂದ ತಮಿಳು, ಕನ್ನಡ, ತೆಲುಗು ಹೀಗೆ ನಾನಾ ಭಾಷೆಗಳಲ್ಲಿ ರಮ್ಯಾ ನಟಿಸಿದರು.  ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ರಮ್ಯಾ ಬಂದ ಅವಧಿಯಲ್ಲೇ ರಕ್ಷಿತಾ ಕೂಡ ಸಿನಿಮಾ ರಂಗಕ್ಕೆ ಬಂದಾಗಿತ್ತು. ಹಾಗಾಗಿ ಸಹಜವಾಗಿಯೂ ಇಬ್ಬರ ಮಧ್ಯ ಪೈಪೋಟಿ ಕೂಡ ಇತ್ತು. ಸ್ನೇಹಿತರಾಗಿದ್ದವರು ಕೆಲಸ ಸಿನಿಮಾಗಳಲ್ಲಿ ಕಿತ್ತಾಡಿಕೊಂಡರು ಎಂಬ ಸುದ್ದಿಯೂ ಆಗಿತ್ತು. ಏನೇ ಆದರೂ, ರಮ್ಯಾ ಮಾತ್ರ ತಮ್ಮ ನಂಬರ್ 1 ಸ್ಥಾನವನ್ನೂ ಯಾವತ್ತೂ ಬಿಟ್ಟುಕೊಡಲಿಲ್ಲ. ಬಹುತೇಕ ಸ್ಟಾರ್ ನಟರ ಜತೆ ತೆರೆ ಹಂಚಿಕೊಂಡು ಸ್ಯಾಂಡಲ್ ವುಡ್ ಕ್ವೀನ್ ಆಗಿಯೇ ಮೆರೆದರು. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ನಂತರ ರಾಜಕೀಯ ಪ್ರವೇಶ ಮಾಡಿದರು. ಮಂಡ್ಯ ಕ್ಷೇತ್ರದ ಸಂಸದೆಯಾಗಿ ಕೆಲಸ ಮಾಡಿದರು. ಮತ್ತೆ ಸೋತರು. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಹುದ್ದೆಯಲ್ಲಿದ್ದರು. ಸದ್ಯ ಸಿನಿಮಾ ಮತ್ತು ರಾಜಕಾರಣದಿಂದ ದೂರವಿದ್ದಾರೆ. ಸದ್ಯದಲ್ಲೇ ಮತ್ತೆ ಸಿನಿಮಾ ರಂಗಕ್ಕೆ ಬರುತ್ತಾರೆ ಎನ್ನುವ ಸುದ್ದಿ ಕೂಡ ಇದೆ.

  • ಅಮ್ಮನ ಬಗ್ಗೆ ಅಪ್ಪು ಮಾತನಾಡಿದ್ದ ಸ್ಫೂರ್ತಿದಾಯಕ ಮಾತುಗಳು ವೈರಲ್

    ಅಮ್ಮನ ಬಗ್ಗೆ ಅಪ್ಪು ಮಾತನಾಡಿದ್ದ ಸ್ಫೂರ್ತಿದಾಯಕ ಮಾತುಗಳು ವೈರಲ್

    ಸ್ಯಾಂಡಲ್‍ವುಡ್ ಪವರ್ ಸ್ಟಾರ್ ದಿ. ಡಾ. ಪುನೀತ್ ರಾಜ್ ಕುಮಾರ್ ನಮ್ಮನ್ನಗಲಿ ತಿಂಗಳುಗಳೇ ಕಳೆದರೂ ಅವರ ಮೇಲಿನ ಅಭಿಮಾನ ಇನ್ನೂ ಕರಗಿಲ್ಲ. ಈ ಮಧ್ಯೆ ಪುನೀತ್ ಸಿನಿಮಾ ಡೈಲಾಗ್‍ಗಳು, ಕಾರ್ಯಕ್ರಮದಲ್ಲಿ ಅವರು ಮಾತಾಡಿದ ಮಾತುಗಳು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿವೆ. ಅದೇ ರೀತಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗಿರುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಅಪ್ಪು, ಅಲ್ಲಿ ತಮ್ಮ ಅಮ್ಮನ ಬಗ್ಗೆ ಮಾತಾನಾಡಿರುವ ಸ್ಫೂರ್ತಿದಾಯಕ ಮಾತುಗಳು ವೈರಲ್ ಆಗುತ್ತಿದೆ.

    ಹೌದು. ಕಾರ್ಯಕ್ರಮದಲ್ಲಿ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ರಾಜ್ ಕುಮಾರ್ ಬಗ್ಗೆ ಮಾತಾನಾಡುತ್ತಾ ಅಪ್ಪು ಹೆಮ್ಮೆ ವ್ಯಕ್ತಪಡಿಸಿದರು. ನಾನು ನನ್ನ ಅಮ್ಮನಂತೆ ಆಗಬೇಕು. ಕೈಯಲ್ಲಿ ಪರ್ಸ್ ಇಟ್ಟುಕೊಂಡರೆ ತುಂಬಾ ಹಣ ಇದೆ ಅಂತ ಅನಿಸೋದು. ಅಮ್ಮನಂತೆ ಚೆನ್ನಾಗಿ ಸಂಪಾದನೆ ಮಾಡ್ಬೇಕು. ನಮ್ಮಮ್ಮ ಸಂಪಾದನೆ ಅನ್ನೋದಕ್ಕಿಂತ ಹೆಚ್ಚಾಗಿ ಸಾಕಷ್ಟು ಸಿನಿಮಾಗಳನ್ನು ಮಾಡಿದ್ದಾರೆ. ಅಲ್ಲದೆ ಹಲವಾರು ಮಂದಿಯನ್ನು ಇಂಡಸ್ಟ್ರಿಗೆ ಪರಿಚಯಿಸಿದ್ದಾರೆ ಎಂದಿದ್ದರು.  ಇದನ್ನೂ ಓದಿ: 88 ವರ್ಷಗಳ ಕನ್ನಡ ಚಿತ್ರರಂಗದ ಎಲ್ಲ ದಾಖಲೆ ಮುರಿದ ಜೇಮ್ಸ್ : 100 ಕೋಟಿ, ಅಧಿಕೃತ ಹೇಳಿಕೆ

    ನನಗೆ ಇಬ್ಬರು ಹೆಣ್ಣುಮಕ್ಕಳು. ಆದರೆ ಇಲ್ಲಿ ಹೆಣ್ಣು ಬೇರೆ ಅಲ್ಲ, ಗಂಡು ಬೇರೆ ಅಲ್ಲ, ಇಲ್ಲಿ ಎಲ್ಲಾರು ಸಮಾನರು ಎಂದು ಹೇಳಿದರು. ಸಮಾಜಕ್ಕೆ ಹೆಣ್ಣು ಮಗಳು ಅಂತ ಬಂದಾದ ಬಳಿಕ ಅವರೂ ಕೆಲಸ ಮಾಡಲೇಬೇಕು. ನಮ್ಮ ಅಮ್ಮನೂ ಕೆಲಸ ಮಾಡುತ್ತಿದ್ದರು. ಅದಕ್ಕೆ ನಾನು ಯಾರನ್ನು ನೋಡಿದರೂ ಯಾವಾಗ್ಲೂ ಕೆಲಸ ಮಾಡಿ, ಜೀವನದಲ್ಲಿ ಚೆನ್ನಾಗಿರಿ ಅಂತ ಹೇಳುತ್ತೇನೆ. ಇದಕ್ಕೆ ನಮ್ಮ ಅಮ್ಮನೇ ಸ್ಫೂರ್ತಿ ಅಂತ ಅಪ್ಪು ಸಂತಸ ವ್ಯಕ್ತಪಡಿಸಿದ್ದರು.

    ನಾನೆಷ್ಟು ಒಳ್ಳೆಯ ಕೆಲಸ ಮಾಡುರುತ್ತೀನೋ, ಅಷ್ಟು ಕೆಟ್ಟ ಕೆಲಸನೂ ಮಾಡಿರುತ್ತೇನೆ. ಯಾಕೆಂದರೆ ಇದು ಜೀವನ ಎಂದ ಅವರು, ಈ ಜೀವನದಲ್ಲಿ ನನ್ನ ತಿದ್ದಿ, ಬೆಳೆಸಿರುವವರೆಂದರೆ ನನ್ನ ತಾಯಿ ಎಂದಿದ್ದರು. ಅಪ್ಪು ಅವರ ಈ ಮಾತುಗಳು ಇದೀಗ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದೆ. ಇದನ್ನೂ ಓದಿ: ಬರಲಿವೆ ಪುನೀತ್ ನಟನೆಯ ‘ಯುವರತ್ನ’ ಸಿನಿಮಾದ ಅನ್ ಕಟ್ ಸೀನ್ಸ್ : ನಿರ್ದೇಶಕ ಸಂತೋಷ್ ಆನಂದ್

    ಮಾರ್ಚ್ 17ರಂದು ಅಪ್ಪು ಹುಟ್ಟುಹಬ್ಬವಾಗಿದ್ದು, ಅಂದೇ ಪುನೀತ್ ನಟನೆಯ ಕೊನೆಯ ಚಿತ್ರ ಜೇಮ್ಸ್ ರಿಲೀಸ್ ಆಗಿದೆ. ಅದ್ಯ ಚಿತ್ರ ಅದ್ಭುತ ಪ್ರದರ್ಶನ ಕಾಣುತ್ತಿದ್ದು, ಸಿನಿಮಾ ವೀಕ್ಷಿಸಿದ ಪ್ರತಿಯೊಬ್ಬರು ಕಣ್ಣೀರು ಹಾಕಿದ್ದಾರೆ.

  • ಅಮ್ಮನ ಕನಸು ನನಸು ಮಾಡಲು ಮುಂದಾದ ಅಪ್ಪು!

    ಅಮ್ಮನ ಕನಸು ನನಸು ಮಾಡಲು ಮುಂದಾದ ಅಪ್ಪು!

    ಬೆಂಗಳೂರು: ಪುನೀತ್ ರಾಜ್ ಕುಮಾರ್ ಕಾದಂಬರಿ ಆಧಾರಿತ ಚಿತ್ರಗಳಲ್ಲಿ ನಟಿಸಬೇಕೆಂಬುದು ಪಾರ್ವತಮ್ಮನವರ ಕನಸಾಗಿತ್ತು. ಕಾದಂಬರಿಗಳನ್ನು ಓದುವ ಅತೀವ ಆಸಕ್ತಿ ಹೊಂದಿದ್ದ ಪಾರ್ವತಮ್ಮ ಸಿನಿಮಾ ಕಥೆಗಳನ್ನು ಆರಿಸುವಲ್ಲಿಯೂ ಸಿದ್ಧಹಸ್ತರಾಗಿದ್ದವರು. ಆದ್ದರಿಂದಲೇ ಕನ್ನಡದ ಪ್ರಸಿದ್ಧ ಸಾಹಿತಿ ಕುಂ.ವೀರಭದ್ರಪ್ಪನವರ ಕನಕಾಂಗಿ ಕಲ್ಯಾಣ ಕಾದಂಬರಿಯನ್ನು ಮೆಚ್ಚಿಕೊಂಡಿದ್ದರು. ಇದಕ್ಕೆ ಸಿನಿಮಾ ರೂಪ ಕೊಟ್ಟು, ತಮ್ಮ ಪುತ್ರ ಪುನೀತ್ ನಟಿಸಬೇಕೆಂಬ ಆಸೆ ಹೊಂದಿದ್ದರು. ಆದರೆ ಆ ನಂತರದಲ್ಲಿ ಅನಾರೋಗ್ಯಕ್ಕೀಡಾಗಿದ್ದ ಪಾರ್ವತಮ್ಮನವರ ಪಾಲಿಗೆ ತಮ್ಮ ಕನಸು ನನಸು ಮಾಡಿಕೊಳ್ಳುವ ಸುಯೋಗ ಕೂಡಿ ಬರಲೇ ಇಲ್ಲ.

    ಪುನೀತ್ ರಾಜ್ ಕುಮಾರ್ ಅವರಿಗೂ ಕೂಡಾ ಅಮ್ಮನ ಕನಸನ್ನು ನನಸು ಮಾಡಲಾಗಲಿಲ್ಲ ಎಂಬ ಕೊರಗು ಇದ್ದೇ ಇತ್ತು. ಆದರೀಗ ಮತ್ತೆ ಕನಕಾಂಗಿ ಕಲ್ಯಾಣಕ್ಕೆ ಮುಹೂರ್ತ ನಿಗದಿಯಾಗೋ ಲಕ್ಷಣಗಳು ಕಾಣಿಸುತ್ತಿವೆ. ಇದೀಗ ಯುವರತ್ನ ಚಿತ್ರದಲ್ಲಿ ತೊಡಗಿಸಿಕೊಂಡಿರೋ ಪುನೀತ್ ಅದಾದ ನಂತರ ಜೇಮ್ಸ್ ಚಿತ್ರದಲ್ಲಿ ನಟಿಸಲಿದ್ದಾರೆಂಬ ಸುದ್ದಿ ಬಂದಿತ್ತು. ಆದರೆ ಅದರ ಜೊತೆಜೊತೆಗೇ ಕನಕಾಂಗಿ ಕಲ್ಯಾಣಕ್ಕೂ ಸಿದ್ಧತೆ ಮಾಡಿಕೊಳ್ಳಲು ಪುನೀತ್ ನಿರ್ಧರಿಸಿದ್ದಾರಂತೆ.

    ಕುಂವೀ ಅವರ ಕನಕಾಂಗಿ ಕಲ್ಯಾಣವನ್ನು ಸಿನಿಮಾ ಮಾಡಬೇಕೆಂಬುದು ಪಾರ್ವತಮ್ಮನವರ ಕನಸಾಗಿತ್ತು. ಈ ಬಗ್ಗೆ ಖುದ್ದು ಕುಂವೀ ಅವರ ಬಳಿಯೂ ಅವರು ಮಾತುಕತೆ ನಡೆಸಿದ್ದರಂತೆ. ಕಾದಂಬರಿಯನ್ನು ಮೆಚ್ಚಿಕೊಳ್ಳುತ್ತಲೇ ಅದನ್ನು ಸಿನಿಮಾ ಮಾಡುವ ಪ್ರಸ್ತಾಪವನ್ನೂ ಇಟ್ಟಿದ್ದರಂತೆ. ಇದೀಗ ಅದೆಲ್ಲದಕ್ಕೂ ಮತ್ತೆ ಜೀವ ಬಂದಿದೆ. ಈ ಸಿನಿಮಾವನ್ನು ಯಾರು ನಿರ್ದೇಶನ ಮಾಡಲಿದ್ದಾರೆಂಬ ಪ್ರಶ್ನೆಯ ಬೆಂಬಿದ್ದರೆ ಅದು ದುನಿಯಾ ಸೂರಿಯವರತ್ತ ಬೊಟ್ಟು ಮಾಡುತ್ತದೆ. ಪಾರ್ವತಮ್ಮ ಜಾಕಿ ಚಿತ್ರದ ಸಂದರ್ಭದಲ್ಲಿಯೇ ಕನಕಾಂಗಿ ಕಲ್ಯಾಣದ ಬಗ್ಗೆ ಸೂರಿ ಬಳಿ ಚರ್ಚೆ ನಡೆಸಿದ್ದರಂತೆ. ಆದ್ದರಿಂದ ಸೂರಿಯೇ ಈ ಚಿತ್ರವನ್ನು ನಿರ್ದೇಶನ ಮಾಡೋದು ಗ್ಯಾರೆಂಟಿ ಅನ್ನಲಾಗುತ್ತಿದೆ.

    ಸೂರಿ ಈಗ ಪಾಪ್ ಕಾರ್ನ್ ಮಂಕಿ ಟೈಗರ್ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಅತ್ತ ಪುನೀತ್ ಕೂಡಾ ಯುವರತ್ನ ಚಿತ್ರದ ಅಂತಿಮ ಹಂತದ ಚಿತ್ರೀಕರಣದಲ್ಲಿ ತೊಡಗಿಕೊಂಡಿದ್ದಾರೆ. ಆದರೂ ಈ ನಡುವೆಯೇ ಕನಕಾಂಗಿ ಕಲ್ಯಾಣದ ಬಗ್ಗೆಯೂ ಚರ್ಚೆಗಳು ಚಾಲ್ತಿಯಲ್ಲಿವೆ. ಈ ಚಿತ್ರ ಟೇಕಾಫ್ ಆಗೋ ಮೂಲಕ ಕಾದಂಬರಿ ಆಧಾರಿತ ಚಿತ್ರಗಳ ಜಮಾನ ಮತ್ತೆ ಶುರುವಾಗೋ ಲಕ್ಷಣಗಳೂ ಗೋಚರಿಸುತ್ತಿವೆ.

  • ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

    ಅಮ್ಮನನ್ನು ನೆನೆದು ಭಾವುಕರಾದ್ರು ಪುನೀತ್ ರಾಜ್ ಕುಮಾರ್

    ಬೆಂಗಳೂರು: ಇಂದು ತಮ್ಮ 43ನೇ ವರ್ಷದ ಹುಟ್ಟುಹಬ್ಬದ ಸಂಭ್ರದಲ್ಲಿರೋ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ಅಮ್ಮನನ್ನು ನೆನೆದು ಭಾವುಕರಾಗಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅಮ್ಮ ಪಾರ್ವತಮ್ಮ ಅವರನನ್ನು ನೆನೆದು ಬೇಸರ ವ್ಯಕ್ತಪಡಿಸಿದ್ರು. ಅಭಿಮಾನಗಳ ಜತೆ ಹುಟ್ಟುಹಬ್ಬ ಆಚರಿಸಿಕೊಳ್ತಿರೋದಕ್ಕೆ ಖುಷಿಯಾಗ್ತಿದೆ. ಆದ್ರೆ ಈ ಬಾರಿ ನನ್ನ ಹುಟ್ಟುಹಬ್ಬ ಆಚರಣೆಯಲ್ಲಿ ಅಮ್ಮ ಇಲ್ಲ ಅನ್ನೋದೇ ಬೇಜಾರಿನ ಸಂಗಂತಿಯಾಗಿದೆ ಅಂದ್ರು. ಇದನ್ನೂ ಓದಿ: ಪವರ್ ಸ್ಟಾರ್ ಹುಟ್ಟುಹಬ್ಬಕ್ಕೆ ಹ್ಯಾಟ್ರಿಕ್ ಹೀರೋ ವಿಶ್- ಅಪ್ಪು ನಂಗೆ ಮಗ ಇದ್ದಂಗೆ ಅಂದ್ರು ಶಿವಣ್ಣ

    ಈ ಬಾರಿ ನನ್ನ ಹುಟ್ಟುಹಬ್ಬವನ್ನು ಅಭಿಮಾನಿಗಳು ಆಚರಿಸುತ್ತಿದ್ದಾರೆ. ಅದು ಅವರ ಪ್ರೀತಿ, ವಿಶ್ವಾಸ ಹಾಗೂ ಅಭಿಮಾನ. ಆದ್ರೆ ಈ ಬಾರಿ ನಾನು ಆಚರಿಸಿಕೊಳ್ಳುತ್ತಿಲ್ಲ. ಹೀಗಾಗಿ ಈ ಎರಡು ದಿನ ನಾನು ಅಭಿಮಾನಿಗಳಿಗೋಸ್ಕರ ಅಂತಾನೇ ಇಟ್ಟಿದ್ದೇನೆ. ಈ ಬಾರಿ ಅಮ್ಮನನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕಳೆದ ವರ್ಷ ಇದೇ ಸಂದರ್ಭದಲ್ಲಿ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಬಾರಿ ಅವರು ನಮ್ಮ ಜೊತೆ ಇಲ್ಲ. ಜೀವನದಲ್ಲಿ ಏನೇ ಸಾಧಿಸಿದ್ರೂ, ಅದಕ್ಕೆ ಅವರೇ ಕಾರಣ. ಹೀಗಾಗಿ ತುಂಬಾ ವಿಚಾರಗಳಲ್ಲಿ ಅಪ್ಪ-ಅಮ್ಮನ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಅಪ್ಪ-ಅಮ್ಮ ನಮ್ಮ ಜೊತೆ ಇಲ್ಲ ಆದ್ರೆ ಅಭಿಮಾನಿಗಳು ಬೇರೆ ಬೇರೆ ಊರುಗಳಿಂದ ಬರುತ್ತಿದ್ದಾರೆ. ಹೀಗಾಗಿ ಅವರನ್ನು ನಿರಾಸೆ ಮಾಡಕ್ಕಾಗಲ್ಲ ಅಂತ ಹೇಳಿದ್ರು.

    ರಾಜ್ ಕುಮಾರ್ ಅವರನ್ನು ಯಾರಿಗೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಅವರಿಗೆ ಅವರೇ ಸಾಟಿ. ಅವರ ಮಗನಾಗಿರುವುದು ನನ್ನ ಪುಣ್ಯ. ಆ ಪ್ರೀತಿ, ವಿಶ್ವಾಸ, ಅಭಿಮಾನ ನಮ್ಮ ಕುಟುಂಬದಲ್ಲಿ ಎಲ್ಲರೂ ನೋಡುತ್ತಿದ್ದಾರೆ. ಅದಕ್ಕೆ ನಾವು ಅವರಿಗೆ ಯಾವತ್ತೂ ಚಿರಋಣಿ ಅಂದ್ರು.

    ಅಭಿಮಾನಿಗಳು ರಾಜರತ್ಸೋತ್ಸವ ಹೆಸರಲ್ಲಿ ಅದ್ಧೂರಿಯಾಗಿಯೇ ನನ್ನ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದಾರೆ. ನಟಸಾರ್ವಭೌಮ ಅಂತ ಸಿನಿಮಾಗೆ ಹೆಸರಿಟ್ಟಿರೋದಕ್ಕೆ ಭಯ ಆಗ್ತಿದೆ. ಯಾಕಂದ್ರೆ ಈ ಹಿಂದೆ ರಾಜಕುಮಾರ ಅಂತ ಸಿನಿಮಾಗೆ ಹೆಸರಿಟ್ಟಾಗಲೂ ಭಯವಾಗಿತ್ತು ಅಂತ ಹೇಳಿದ್ರು. ಇದನ್ನೂ ಓದಿ: ದೊಡ್ಮನೆ ರಾಜಕುಮಾರನಿಗೆ ಹುಟ್ಟು ಹಬ್ಬದ ಸಂಭ್ರಮ- ನಟಸಾರ್ವಭೌಮ ತಂಡದಿಂದ ಫಸ್ಟ್ ಟೀಸರ್ ಗಿಫ್ಟ್

    ಇದೇ ವೇಳೆ ತಮ್ಮ ಹೇರ್ ಸ್ಟೈಲ್ ಬಗ್ಗೆ ಮಾತನಾಡಿದ ಅವರು, ಹೇರ್ ಸ್ಟೈಲ್ ಸಿಕ್ಕಾಪಟ್ಟೆ ಟ್ರೆಂಡ್ ಆಗ್ತಿರೋದಕ್ಕೆ ಖುಷಿಯಿದೆ. ಜುಲೈಗೆ ಸಂತೋಷ್ ಆನಂದ್ ರಾಮ್ ನಿರ್ದೇಶನದ ಸಿನಿಮಾ ಅಧಿಕೃತವಾಗಿ ಅನೌನ್ಸ್ ಆಗಲಿದೆ ಅಂತ ತಿಳಿಸಿದ್ರು.

  • ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

    ಅಭಿಮಾನಿ ಮನೆಗೆ ತೆರಳಿ ಸರಳತೆ ಮೆರೆದ ಸ್ಯಾಂಡಲ್ ವುಡ್ ಪವರ್ ಸ್ಟಾರ್

    ಬಳ್ಳಾರಿ: ಸ್ಯಾಂಡಲ್ ವುಡ್ ನಟ ಪುನಿತ್ ರಾಜ್‍ಕುಮಾರ್ ಗೆ ಅಭಿಮಾನಿಗಳು ಅಂದ್ರೆ ಎಲ್ಲಿಲ್ಲದ ಪ್ರೀತಿ. ಹೀಗಾಗಿಯೇ ಪವರ್ ಸ್ಟಾರ್ ಪುನೀತ್ ಅವರನ್ನು ಅಭಿಮಾನಿಗಳು ಅತಿ ಹೆಚ್ಚಾಗಿ ಪ್ರೀತಿ ಮಾಡ್ತಾರೆ. ಹೀಗೆ ತಮ್ಮನ್ನು ಪ್ರೀತಿ ಮಾಡೋ ಅಭಿಮಾನಿಯೊಬ್ಬರ ಮನೆಗೆ ಪುನೀತ್ ರಾಜ್‍ಕುಮಾರ್ ಹೋಗಿ ಬಂದಿದ್ದಾರೆ.

    ರವಿವಾರ ಬಳ್ಳಾರಿಯಲ್ಲಿ ನಿರ್ದೇಶಕ ಸಂತೋಷ ಆನಂದರಾಮ್ ನಿಶ್ಚಿತಾರ್ಥ ಸಮಾರಂಭಕ್ಕೆ ಪುನೀತ್ ಆಗಮಿಸಿದ್ದರು. ಇದೇ ವೇಳೆ ಅವರು ಹೊಸಪೇಟೆಯ ಅಭಿಮಾನಿಯೊಬ್ಬರ ಮನೆಗೆ ಭೇಟಿ ನೀಡಿದ್ದರು. ಕಟ್ಟಾ ಅಭಿಮಾನಿಯಾಗಿರುವ ಕಿಚಡಿ ವಿಶ್ವ ಎಂಬವರ ಮನೆಗೆ ತೆರಳಿದ ಪುನೀತ್ ರಾಜ್‍ಕುಮಾರ್ ಅವರನ್ನು ಅಭಿಮಾನಿ ಕುಟುಂಬದವರೆಲ್ಲಾ ಆರತಿ ಬೆಳಗಿ ಸ್ವಾಗತಿಸಿ, ಸನ್ಮಾನಿಸಿ, ಗೌರವಿಸಿದ್ದಾರೆ.

    ಸಹೋದರಿ ರೇಣುಕಾರ ಮದುವೆ ಸಮಾರಂಭಕ್ಕೆ ಆಗಮಿಸುವಂತೆ ಈ ಹಿಂದೆ ವಿಶ್ವ ಕುಟುಂಬ ಆಹ್ವಾನವನ್ನು ನೀಡಿತ್ತು. ಅದರೆ ಅಂದು ಪಾರ್ವತಮ್ಮ ರಾಜಕುಮಾರ್ ಅವರಿಗೆ ಅನಾರೋಗ್ಯ ಇದ್ದ ಹಿನ್ನಲೆಯಲ್ಲಿ ಪುನೀತ್ ರಾಜ್‍ಕುಮಾರ್ ಮದುವೆ ಸಮಾರಂಭದಲ್ಲಿ ಭಾಗವಹಿಸಿರಲಿಲ್ಲ. ಹೀಗಾಗಿಯೇ ಪುನೀತ್ ರಾಜ್ ಕುಮಾರ್ ಇತ್ತೀಚೆಗೆ ಹೊಸಪೇಟೆಗೆ ಬಂದಾಗ ವಿಶ್ವ ಅವರು ಅಂದು ನೀಡಿದ್ದ ಆಹ್ವಾನವನ್ನು ಮರೆಯದೇ ಅವರ ನಿವಾಸಕ್ಕೆ ಭೇಟಿ ನೀಡಿ ಸರಳತೆ ಮೆರೆದಿದ್ದಾರೆ.

    ಇದನ್ನೂ ಓದಿ: `ರಾಜಕುಮಾರ’, `Mr & Mrs ರಾಮಾಚಾರಿ’ ಚಿತ್ರದ ನಿರ್ದೇಶಕರಿಗೆ ನಿಶ್ಚಿತಾರ್ಥ

  • ಕೊನೆಗೂ `ಅಮ್ಮ’ನ ಈ ಆಸೆ ಈಡೇರಲಿಲ್ಲ- ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಕೊನೆಗೂ `ಅಮ್ಮ’ನ ಈ ಆಸೆ ಈಡೇರಲಿಲ್ಲ- ಹಿರಿಯ ನಟ ಶ್ರೀನಿವಾಸ್ ಮೂರ್ತಿ

    ಬೆಂಗಳೂರು: ತನ್ನ ಮೂರು ಮಕ್ಕಳನ್ನು ಒಂದೇ ಸಿನಿಮಾದಲ್ಲಿ ನೋಡಬೇಕೆಂಬ ಆಸೆ ಡಾ. ಪಾರ್ವತಮ್ಮ ರಾಜ್ ಕುಮಾರ್ ಅವರಿಗಿತ್ತು. ಆದ್ರೆ ಇಂದು ಅವರು ವಿಧಿವಶರಾಗಿದ್ದು, ಅವರ ಆಸೆ ಈಡೇರಲೇ ಇಲ್ಲ ಅಂತಾ ಹಿರಿಯ ನಟ ಶ್ರೀನಿವಾಸ್ ಮೂರ್ತಿ ಹೇಳಿದ್ದಾರೆ.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಾರ್ವತಮ್ಮ ಅವರ ಮೂವರು ಮಕ್ಕಳಾದ, ರಾಘವೇಂದ್ರ ರಾಜ್ ಕುಮಾರ್, ಶಿವರಾಜ್ ಕುಮಾರ್ ಹಾಗೂ ಪುನೀತ್ ರಾಜ್ ಕುಮಾರ್ ಇವರುಗಳನ್ನು ಒಂದೇ ಪೌರಾಣಿಕ ಸಿನಿಮಾದಲ್ಲಿ ನೋಡೋ ದೊಡ್ದ ಆಸೆಯನ್ನು ನನ್ನ ಬಳಿ ವ್ಯಕ್ತಪಡಿಸಿದ್ದರು. ನಾಲ್ಕು ದಿನಗಳ ಹಿಂದೆಯಷ್ಟೇ ಆಸ್ಪತ್ರೆಯಲ್ಲಿರುವಾಗ ಬೇಗ ಗುಣಮುಖರಾಗಿ ಬನ್ನಿ ಮಾತನಾಡೋಣ ಅಂತ ಹೇಳಿದ್ದೆ. ಈ ವೇಳೆ ಅವರು ಕಣ್ಣಲ್ಲೇ ಸನ್ನೆ ಮಾಡಿದ್ರು. ಆದ್ರೆ ಇದೀಗ ಅವರು ನಮ್ಮನ್ನು ಅಗಲಿದ್ದಾರೆ. ಈ ಮೂಲಕ ಮೂವರು ಮಕ್ಕಳನ್ನ ಒಂದೇ ಸಿನಿಮಾದಲ್ಲಿ ನೋಡೋ ಅಮ್ಮನ ಆಸೆ ಈಡೇರಲಿಲ್ಲ ಅಂತಾ ಶ್ರೀನಿವಾಸ ಮೂರ್ತಿ ಗದ್ಗದಿತರಾದ್ರು.

    ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆಯಿಂದ ಬಳುತ್ತಿದ್ದ ಪಾರ್ವತಮ್ಮ ಅವರು ನಗರದ ರಾಮಯ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.

  • ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ

    ಪಾರ್ವತಮ್ಮ ರಾಜ್ ಕುಮಾರ್ ನಿಧನಕ್ಕೆ ಚಿತ್ರರಂಗದ ಕಂಬನಿ

    ಬೆಂಗಳೂರು: ಹಿರಿಯ ನಿರ್ಮಾಪಕಿ ಪಾರ್ವತಮ್ಮ ರಾಜ್ ಕುಮಾರ್ ಅವರ ನಿಧನಕ್ಕೆ ಚಿತ್ರರಂಗದವರು ಕಂಬನಿ ಮಿಡಿದಿದ್ದಾರೆ. ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ಬುಧವಾರ ಮುಂಜಾನೆ ಬಹು ಅಂಗಾಂಗ ವೈಫಲ್ಯದಿಂದ ಪಾರ್ವತಮ್ಮ ಅವರು ನಿಧನರಾದರು.

    ಚಿತ್ರರಂಗಕ್ಕೆ ಅಮ್ಮನವರ ಕೊಡುಗೆ ಅಪಾರ. ಜೀವನವೆಂಬ ಸಂಸಾರವನ್ನು ಅಷ್ಟೇ ಚೆನ್ನಾಗಿ ಸಾಗಿಸಿದ್ದಾರೆ ಎಂದು ಕುಮಾರ್ ಬಂಗಾರಪ್ಪ ಹೇಳಿದ್ದಾರೆ. ಎಲ್ಲರನ್ನು ಕೂಡ ಅವರು ಬಹಳ ಪ್ರೀತಿಯಿಂದ ನೋಡಿಕೊಳ್ಳುತ್ತಿದ್ರು.. ವಿಷೇಷವಾಗಿ ನನ್ನ ಬಗ್ಗೆ ಪ್ರೀತಿಯಿತ್ತು. ಅಶ್ವಮೇಧ ಹಾಡನ್ನ ಹಾಡಲು ಕೇಳಿದಾಗ ಏನೂ ಮಾತನಾಡದೆ ಒಪ್ಪಿದ್ರು. ನನ್ನ ಮಗ ಶಿವರಾಜ್ ಕುಮಾರ್ ಬೇರೆಯಲ್ಲ ನೀನು ಬೇರೆಯಲ್ಲವೆಂದೂ ಹೇಳಿದ್ರು.

    ನಟಿ, ಮಂಡ್ಯದ ಮಾಜಿ ಸಂಸದೆ ರಮ್ಯಾ ಅವರು, ಕನ್ನಡ ಚಿತ್ರರಂಗದ ಕಲಾವಿದರಿಗೆ ಬಹುದೊಡ್ಡ ಆಸರೆಯಾಗಿದ್ದ ಮಹಾನ್ ಶಕ್ತಿ ಇನ್ನಿಲ್ಲ. ಪಾರ್ವತಮ್ಮ ರಾಜ್ ಕುಮಾರ್ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಟ್ವೀಟ್ ಮಾಡಿದ್ದಾರೆ.

    ನಟ, ನಿರ್ದೇಶಕ ರಮೇಶ್ ಅರವಿಂದ್ ಟ್ವೀಟ್ ಮಾಡಿ ತಮ್ಮ ಕಂಬನಿ ಮಿಡಿದಿದ್ದಾರೆ. ನಿರ್ಮಾಪಕಿಯಾಗಿ, ಡಾ.ರಾಜ್ ಹೆಂಡತಿಯಾಗಿ, ನನ್ನ ಗೆಳೆಯರ ತಾಯಿಯಾಗಿ ಪಾರ್ವತಮ್ಮನವರನ್ನು ಮೆಚ್ಚುತಾ… ಆತ್ಮಕ್ಕೆ ಶಾಂತಿ ಸಿಗಲಿ ಎಂದಿದ್ದಾರೆ.

    ಪಾರ್ವತಮ್ಮ ರಾಜ್ ಕುಮಾರ್ ಅವರು ವಿಧಿವಶರಾಗಿರುವುದು ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟ. ಅವರ ಅಗಲಿಕೆಯನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ, ನಾಡಿಗೆ ಭಗವಂತ ನೀಡಲಿ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

    ಕನ್ನಡ ಚಿತ್ರರಂಗದ ಕಲಾವಿದರಿಗೆ ಸ್ಪೂರ್ತಿಯಾಗಿ, ಅನ್ನದಾತೆಯಾಗಿ, ಆಸರೆಯಾಗಿದ್ದ ಆಲದಮರ ಇನ್ನಿಲ್ಲ. ಅಮ್ಮ ನಿಮ್ಮ ತರಹ ಇನ್ಯಾರು ಇಲ್ಲಾ.. ನಿಮಗೆ ನೀವೇ ಸಾಟಿ.. ಅಮ್ಮ ನಿಮ್ಮ ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಟಿ ಮಾನ್ವಿತಾ ಹರೀಶ್ ಟ್ವೀಟ್ ಮಾಡಿದ್ದಾರೆ.

    https://twitter.com/ManvithaHarish/status/869760090513035264