Tag: ಪಾಸ್

  • ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ: ಮೇಯರ್-ಡಿಸಿ ನಡುವೆ ಫೈಟ್

    ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ: ಮೇಯರ್-ಡಿಸಿ ನಡುವೆ ಫೈಟ್

    – ನಾನು ಸಣ್ಣ ಹುಡುಗ ಅಲ್ಲ, ಪಾಸ್ ಮಾರಾಟ ಮಾಡಿಕೊಂಡಿಲ್ಲ

    ದಾವಣಗೆರೆ: ಕೊರೊನಾ ಭೀತಿ ಹಿನ್ನೆಲೆಯಲ್ಲಿ ದೇಶವೇ ಲಾಕ್‍ಡೌನ್ ಆಗಿದೆ. ಆದರೆ ಅಗತ್ಯ ಸೇವೆಗಳಿಗೆ ಮನೆಯಿಂದ ಹೊರಬರಬೇಕಾದರೆ ಪಾಸ್ ವ್ಯವಸ್ಥೆ ಮಾಡಲಾಗಿದೆ. ಪೊಲೀಸರಿಂದ ಪಾಸ್ ತೆಗೆದುಕೊಂಡು ಮನೆಯಿಂದ ಹೊರಬರಬಹುದು. ಆದರೆ ಈ ಪಾಸ್ ವಿಚಾರದಲ್ಲಿ ದಾವಣಗೆರೆಯ ಮೇಯರ್ ಮತ್ತು ಡಿಸಿ ನಡುವೆ ಫೈಟ್ ನಡೆದಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.

    ಲಾಕ್‍ಡೌನ್ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಸೇವೆಗಳಿಗೆ ಪಾಸ್ ವಿತರಣೆ ಮಾಡಿದ್ದರು. ಮೇಯರ್ ಕೂಡ ಪಾಲಿಕೆ ವತಿಯಿಂದ ವ್ಯಾಪಾರಸ್ಥರಿಗೆ ಸಾವಿರಾರು ಪಾಸ್ ವಿತರಿಸಿದ್ದರು. ಆದರೆ ಮೇಯರ್ ನೀಡಿದ ಪಾಸ್ ದುರ್ಬಳಕೆಯಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಆದ್ದರಿಂದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಮೇಯರ್ ನೀಡಿದ್ದ ಪಾಸ್‍ಗಳನ್ನು ಅಸಿಂಧು ಮಾಡಿದ್ದಾರೆ. ಈ ವಿಚಾರದಲ್ಲಿ ಮೇಯರ್ ಬಿ.ಜಿ.ಅಜಯ್‍ಕುಮಾರ್ ಮತ್ತು ಡಿಸಿ ಮಹಾಂತೇಶ್ ಬೀಳಗಿ ನಡುವೆ ಜಗಳ ನಡೆದಿದೆ.

    ನಾನು ಪುಂಡಪೋಕರಿಗಳಿಗೆ ಪಾಸ್ ಕೊಟ್ಟಿಲ್ಲ. ಕಳೆದ 15 ದಿನಗಳಿಂದ ಪಾಸ್‍ಗಾಗಿ ಪಾಲಿಕೆ ಪರದಾಡಿದೆ. ಆದರೆ ಜಿಲ್ಲಾಡಳಿತ ಪಾಸ್ ಕೊಡಲಿಲ್ಲ. ನಾನು ವ್ಯಾಪಾರಿಗಳ ಕಷ್ಟ ನೋಡಲಾಗದೆ ಪಾಸ್ ನೀಡಿರುವೆ. ಆದರೆ ನಾನು ಪಾಸ್ ಮಾರಾಟ ಮಾಡಿಕೊಂಡಿಲ್ಲ. ಮೇಯರ್ ಸ್ಥಾನದಲ್ಲಿ ಕುಳಿತ ನನಗೆ ಕನಿಷ್ಠ ಜ್ಞಾನ ಇದೆ ಎಂದು ಡಿಸಿಗೆ ಮೇಯರ್ ಬಿ.ಜಿ. ಅಜಯ್‍ಕುಮಾರ್ ತಿರುಗೇಟು ನೀಡಿದ್ದಾರೆ.

    ನಾನು ಸಣ್ಣ ಹುಡುಗ ಅಲ್ಲ, ಪಾಲಿಕೆ ಸದಸ್ಯರ ಆಗ್ರಹದ ಮೇಲೆ ಪಾಸ್ ನೀಡಲಾಗಿದೆ. ಅಷ್ಟೇ ಅಲ್ಲದೇ ಎಲ್ಲ ದಾಖಲೆ ಪಡೆದು ಪಾಸ್ ನೀಡಲಾಗಿದೆ. ನಾನು ಕೊಟ್ಟ ಪಾಸ್ ಅಸಿಂಧು ಮಾಡಿ. ಆದರೆ ಬೇಕಾದಷ್ಟು ಪಾಸ್ ಜಿಲ್ಲಾಡಳಿತ ನೀಡಲಿ ಎಂದು ಮೇಯರ್ ಗರಂ ಆಗಿ ಮಾತನಾಡಿದರು.

  • ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ್ದಕ್ಕೆ ಬಸ್ ಚೇಸ್ ಮಾಡಿ ಸಿಬ್ಬಂದಿಗೆ ಅಂಜಲಿ ನಿಂಬಾಳ್ಕರ್ ಕ್ಲಾಸ್!

    ಪಾಸ್ ಇರೋ ವಿದ್ಯಾರ್ಥಿಗಳನ್ನು ಹತ್ತಿಸದ್ದಕ್ಕೆ ಬಸ್ ಚೇಸ್ ಮಾಡಿ ಸಿಬ್ಬಂದಿಗೆ ಅಂಜಲಿ ನಿಂಬಾಳ್ಕರ್ ಕ್ಲಾಸ್!

    ಬೆಳಗಾವಿ: ಪಾಸ್ ಇರುವ ವಿದ್ಯಾರ್ಥಿಗಳನ್ನು ಹತ್ತಿಸದೇ ಸತಾಯಿಸುತ್ತಿದ್ದ ಸರ್ಕಾರಿ ಬಸ್ ಕಂಡಕ್ಟರ್ ಗೆ  ಖಾನಪುರದ ಎಂಎಲ್‍ಎ ಅಂಜಲಿ ನಿಂಬಾಳ್ಕರ್ ಅವರು ತರಾಟೆಗೆ ತೆಗೆದುಕೊಂಡಿದ್ದಾರೆ.

    ಈ ಘಟನೆ ಖಾನಾಪುರದ ಬಳಿ ನಡೆದಿದ್ದು, ಬಸ್ ಪಾಸ್ ಇರೋ ವಿದ್ಯಾರ್ಥಿಗಳು ಹತ್ತಿದರೆ ರಷ್ ಆಗುತ್ತೆ. ರಷ್ ಆದರೆ ಬೇರೆ ಪ್ರಯಾಣಿಕರನ್ನು ಹತ್ತಿಸೋಕೆ ಆಗುವುದಿಲ್ಲ. ಬೇರೆ ಪ್ರಯಾಣಿಕರು ಹತ್ತದೆ ಇದ್ದರೆ ಹಣ ಬರುವುದಿಲ್ಲ ಎಂದು ಹೇಳಿ ವಿದ್ಯಾರ್ಥಿಗಳನ್ನು ಬಸ್ ಹತ್ತಿಸದೇ ಕಂಡಕ್ಟರ್ ಸತ್ತಾಯಿಸುತ್ತಿದ್ದರು.

    ಇದೇ ವೇಳೆ ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೆ ಖಾಲಿ ಹೋಗುತ್ತಿದ್ದ ಮೂರು ಬಸ್ಸುಗಳನ್ನು ಖಾನಾಪುರದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ಹಿಂಬಾಲಿಸಿದ್ದಾರೆ. ಬಸ್ ಖಾಲಿ ಇದ್ದರೂ ವಿದ್ಯಾರ್ಥಿಗಳನ್ನ ಯಾಕೆ ಹತ್ತಿಸಿಲ್ಲ. ವಿದ್ಯಾರ್ಥಿಗಳು ಬಸ್ ಹತ್ತಿದರೆ ಕಷ್ಟ ಆಗುತ್ತೆ ಅಂತ ಈ ರೀತಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಇನ್ನೊಮ್ಮೆ ಈ ರೀತಿ ಪ್ರಕರಣ ನಡೆದರೆ ನಿಮ್ಮನ್ನು ಸೇವೆಯಿಂದ ಅಮಾನತು ಮಾಡಿಸುತ್ತೇನೆ ಎಂದು ಡ್ರೈವರ್ ಹಾಗೂ ಕಂಡಕ್ಟರ್ ಎಚ್ಚರಿಕೆ ನೀಡಿ ಸಖತ್ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=JVfCbmWNqpQ