Tag: ಪಿಎ

  • ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಬಿಎಂಟಿಸಿ ಟು ಪಿಎ ಜರ್ನಿ – ಸಾವಿರ ಲೆಕ್ಕದಲ್ಲಿ ಸಂಬಳ ಪಡೆಯುತ್ತಿದ್ದವ ಕೋಟಿ ಕುಬೇರನಾದ ಕಥೆ ಓದಿ

    ಬೆಂಗಳೂರು: ಬಿಎಂಟಿಸಿ ನಿರ್ವಾಹಕನಾಗಿ ತಿಂಗಳಿಗೆ ಸಾವಿರದಲ್ಲಿ ಸಂಬಳ ಪಡೆಯುತ್ತಿದ್ದ ಉಮೇಶ್ 10 ವರ್ಷದಲ್ಲಿ ಕೋಟಿ ಕುಳವಾಗಿ ಬೆಳೆದ ಕಥೆಯೇ ರೋಚಕ.

    ಐಟಿ ರೇಡ್ ಆಗಿರುವ ಬಿಎಂಟಿಸಿ ಸಿಬ್ಬಂದಿ ಉಮೇಶ್ ಡಿಪೋ ನಂಬರ್ 11ರಲ್ಲಿ ಕಂಡಕ್ಟರ್ ಕಂ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಉಮೇಶ್ ಬಿಎಂಟಿಸಿಯಿಂದ ಪಡೆಯುತ್ತಿದ್ದ ತಿಂಗಳ ಸಂಬಳ 32 ಸಾವಿರ ರೂಪಾಯಿ. ಕೈಗೆ ಸಿಗುತ್ತಿದ್ದಿದ್ದು 28 ಸಾವಿರ ರೂಪಾಯಿ.

    2007-08ರಲ್ಲಿ ಬಿಎಂಟಿಸಿ ಉದ್ಯೋಗಿಯಾದ ಉಮೇಶ್, ಟ್ರೈನಿಯಾಗಿ ಕೆಲಸ ಮಾಡುತ್ತಿದ್ದ. ಕೆಲಸಕ್ಕೆ ಸೇರಿದ ಒಂದೇ ವರ್ಷಕ್ಕೆ ಉದ್ಯೋಗ ಬೇಡ ಎನ್ನಿಸಿತ್ತು. ಇದೇ ವೇಳೆ ಬಿ.ಎಸ್.ಯಡಿಯೂರಪ್ಪ ಮೊದಲಬಾರಿಗೆ ಸಿಎಂ ಆಗಿದ್ದರು. ಈ ವೇಳೆ ಉಮೇಶ್ ಎರವಲು ಸೇವೆ ಅರ್ಜಿ ಸಲ್ಲಿಸಿದ್ದ. 2008ರಲ್ಲಿ ಎರವಲು ಸೇವೆಯಡಿ ವಿಧಾನಸೌಧದತ್ತ ಪ್ರಯಾಣ ಬೆಳೆಸಿದ್ದ. ಎರವಲು ಸೇವೆಗೆ ನಿಯೋಜನೆಯಾಗುವ ಮುನ್ನ ಉಮೇಶ್ ತಿಂಗಳಿಗೆ 3,500ರೂ. ಸಂಬಳ ಪಡೆಯುತ್ತಿದ್ದ. ಒಂದೇ ವರ್ಷಕ್ಕೆ ಟ್ರೇನಿಯಿಂದ ಪ್ರೊಬೆಷನರಿಯಾಗಿ ಬಡ್ತಿ ಪಡೆದು ತಿಂಗಳಿಗೆ 18 ಸಾವಿರ ರೂ.ವೇತನ ಪಡೆಯುತ್ತಿದ್ದ. ಇದನ್ನೂ ಓದಿ: ಬಿಎಸ್‍ವೈ ಆಪ್ತನ ಮನೆ ಮೇಲೆ ಐಟಿ ರೇಡ್

    ಇದೀಗ ಉಮೇಶ್ ವೇತನ ತಿಂಗಳೀಗೆ 30ರಿಂದ 32 ಸಾವಿರ ರೂ. ಇದೆ. ಎರವಲು ಸೇವೆಗೆ ನಿಯೋಜನೆಯಾದರೆ ಎರಡು ವರ್ಷದ ಬಳಿಕ ಮಾತೃ ಇಲಾಖೆಯಲ್ಲಿ ಕೆಲಸ ಮಾಡಿ, ಡೆಪ್ಟೇಷನ್ ಪಡೆಯಬಹುದು. ಆದರೆ ಉಮೇಶ್ ಮಾತ್ರ 2008ರಿಂದ ಎರವಲು ಸೇವೆಯಲ್ಲಿಯೇ ಮುಂದುವರಿಯುತ್ತಿರುವುದು ವಿಶೇಷ.

    ಇಷ್ಟು ಕಡಿಮೆ ವೇತನವಿದ್ದರೂ ಉಮೇಶ್ ಕೋಟ್ಯಧಿಪತಿ ಆಗಿದ್ದಾನೆ. ಸದ್ಯ ರಾಜಾಜಿನಗರದ ಭಾಷ್ಯಂ ಸರ್ಕಲ್ ಬಳಿ 3 ಅಂತಸ್ತಿನ ಮನೆಯಲ್ಲಿ ಬಾಡಿಗೆ ಇದ್ದು, ಸಹಕಾರ ನಗರದಲ್ಲಿ ಕೋಟ್ಯಂತರ ಮೌಲ್ಯದ ಮನೆ ನಿರ್ಮಾಣ ಮಾಡುತ್ತಿದ್ದಾನೆ. ಬಗಲಗುಂಟೆಯಲ್ಲಿ ಸೈಟ್‍ಗಳಿವೆ. ನೆಲಮಂಗಲದಲ್ಲಿ ಜಮೀನು, ಬಿಡಿಎನಲ್ಲಿ ಅನೇಕ ಸೈಟ್‍ಗಳು ಮಂಜೂರಾಗಿವೆ. ಅಲ್ಲದೆ ತನ್ನ ಹಾಗೂ ಕುಟುಂಬಸ್ಥರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಆಸ್ತಿ ಹೊಂದಿದ್ದಾನೆ. ಇತ್ತೀಚೆಗೆ ಎಲೆಕ್ಷನ್‍ನಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸಹೋದರನನ್ನೂ ಗೆಲ್ಲಿಸಿಕೊಂಡಿದ್ದಾನೆ.

    ಬಿಎಸ್‍ವೈ ಸಂಪರ್ಕ ಹೇಗೆ?
    ಮೂಲತಃ ಶಿವಮೊಗ್ಗ ಜಿಲ್ಲೆಯ ಆಯನೂರಿನವನಾದ ಉಮೇಶ್, ಬಿ.ಎಸ್.ಯಡಿಯೂರಪ್ಪನವರ ಕುಟುಂಬದ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ. 2008ರಲ್ಲಿ ಬಿಎಸ್‍ವೈ ಸಿಎಂ ಆಗಿದ್ದಾಗ ಆಪ್ತ ಶಾಖೆಯಲ್ಲಿ ಕೆಲಸ ಕೆಲಸ ಮಾಡಿದ್ದ. ಅಧಿಕಾರ ಕಳೆದುಕೊಂಡರೂ ಬಿಎಸ್‍ವೈ ನಂಟು ಬಿಟ್ಟಿರಲಿಲ್ಲ. ಬಿಎಸ್‍ವೈ ವಿರೋಧ ಪಕ್ಷದ ನಾಯಕರಾಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. 2019ರಲ್ಲಿ ಮತ್ತೆ ಬಿಎಸ್‍ವೈ ಸಿಎಂ ಆದಾಗ ಸಹ ಆಪ್ತ ಸಹಾಯಕನಾಗಿ ಮುಂದುವರಿದಿದ್ದ. ಯಡಿಯೂರಪ್ಪನವರ ಎಲ್ಲ ಖಾಸಗಿ ಕೆಲಸಗಳನ್ನು ನಿರ್ವಹಿಸುತ್ತಿದ್ದ. ಇದೀಗ ಬಿಎಸ್‍ವೈ ರಾಜೀನಾಮೆ ಬಳಿಕ ಹಾಲಿ ಸಿಎಂ ಬಸವರಾಜ್ ಬೊಮ್ಮಾಯಿಯವರ ಕಚೇರಿಯಲ್ಲಿ ಸಹಾಯಕನಾಗಿ ಸೇರ್ಪಡೆಯಾಗಿದ್ದ. ಸಿಎಂ ಆಪ್ತ ಸಹಾಯಕನಾದರೂ ಬಿಎಸ್‍ವೈ ಮನೆಯಲ್ಲೇ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ.

    ಉಮೇಶ್ ಮೊದಲು ಆಯನೂರು ಮಂಜುನಾಥ್ ಅವರಿಗೆ ಪಿಎ ಆಗಿದ್ದ. ಆಯನೂರು ಎಂಪಿ ಆದ ಮೇಲೆ ಬಿಎಸ್‍ವೈ ಜೊತೆ ಇರಲು ಬಿಟ್ಟರು. ಆಗಿನಿಂದ ಯಡಿಯೂರಪ್ಪನವರ ಕುಟುಂಬದ ಜತೆ ಆಪ್ತತೆ ಬೆಳೆಯಿತು. ಯಡಿಯೂರಪ್ಪನವರು ವಿಧಾನಸಭೆ ವಿಪಕ್ಷ ನಾಯಕರಾದಾಗಿಂದ ಉಮೇಶ್ ಜೊತೆಗಿದ್ದಾನೆ. ಇದನ್ನೂ ಓದಿ: ವಿಶ್ವವಿಖ್ಯಾತ ಮೈಸೂರು ದಸರಾಗೆ ಚಾಲನೆ ನೀಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ

    ವರ್ಗಾವಣೆ, ಟೆಂಡರ್ ಡೀಲ್‍ಗಳಲ್ಲಿ ಶಾಮೀಲು
    ಇದೀಗ ಶಿವಮೊಗ್ಗ, ಬೆಂಗಳೂರಿನಲ್ಲಿ ನೂರಾರು ಕೋಟಿ ರೂ. ಆಸ್ತಿ ಮಾಡಿರುವ ಆರೋಪ ಕೇಳಿಬಂದಿದೆ. ಉಮೇಶ್ ವಿಜಯನಗರದಲ್ಲಿ ಒಂದು ಭವ್ಯ ಮನೆಯ ನಿರ್ಮಾಣ ಮಾಡುತ್ತಿದ್ದಾನೆ. 60*120 ವಿಸ್ತೀರ್ಣದಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಹಲವು ವರ್ಗಾವಣೆಗಳು, ಟೆಂಡರ್ ಡೀಲ್ ಗಳಲ್ಲಿ ಶಾಮೀಲಾಗಿರುವ ಆರೋಪ ಕೇಳಿ ಬಂದಿದೆ.

    ಬಿ.ಎಸ್.ಯಡಿಯೂರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರಗೆ ಉಮೇಶ್ ಪಿಎ ಆಗಿದ್ದ. ತನ್ನೊಂದಿಗೂ ಅರವಿಂದ್ ಎಂಬುವವನನ್ನು ಪಿಎಯಾಗಿ ಇಟ್ಟುಕೊಂಡಿದ್ದ. ಶಿವಮೊಗ್ಗದ ಡೀಲ್ ಗಳನ್ನು ಅರವಿಂದ್ ನೋಡಿಕೊಳ್ಳುತ್ತಿದ್ದಾನೆ ಎನ್ನಲಾಗಿದೆ. ಅರವಿಂದ್ ಹಾಗೂ ಇನ್ನೂ ಇಬ್ಬರ ಜೊತೆ ಸೇರಿ ಡೀಲ್ ವ್ಯವಹಾರ ಮಾಡುತ್ತಿದ್ದಾನೆ ಎನ್ನುವುದು ಈಗ ಬಂದಿರುವ ಆರೋಪ. ಇದನ್ನೂ ಓದಿ: 2023ರಲ್ಲೂ ಬೊಮ್ಮಾಯಿ ಸಿಎಂ ಆಗಿ ದಸರಾ ಉದ್ಘಾಟಿಸಲಿದ್ದಾರೆ: ಪ್ರತಾಪ್ ಸಿಂಹ

    ಆ ಇಬ್ಬರ ಪೈಕಿ ಒಬ್ಬ ಬಿ.ಎಸ್.ಯಡಿಯೂರಪ್ಪನವರಿಗೆ ಗನ್ ಮ್ಯಾನ್ ಆಗಿದ್ದವ. ಮತ್ತೊಬ್ಬ ವಿಧಾನಸೌಧದಲ್ಲಿ ಈಗ ಗುತ್ತಿಗೆ ನೌಕರ. ವರ್ಗಾವಣೆ, ಟೆಂಡರ್ ಡೀಲ್ ಗೆ ಇಳಿದ ಮೇಲೆ ರಹಸ್ಯ ನಡೆ ಅನುಸರಿಸುತ್ತಿದ್ದ. ತನ್ನ ಗುಪ್ತ ವ್ಯವಹಾರಗಳ ಬಗ್ಗೆ ಉಮೇಶ್ ರಹಸ್ಯ ಕಾಪಾಡುತ್ತಿದ್ದ. ಉಮೇಶ್ ಬಿ.ಎಸ್.ಯಡಿಯೂರಪ್ಪನವರಿಗೆ ಪಿಎ ಆಗಿದ್ದಾಗ ಸರ್ಕಾರಿ ಕಾರಲ್ಲೇ ಓಡಾಡುತ್ತಿದ್ದ, ಡೀಲ್ ನಡೆಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ.

  • ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    ಸಿಎಂ ಪುತ್ರನ ಹೆಸರಲ್ಲಿ ರಾಮುಲು PA ಡೀಲ್..? – 3 ಆಡಿಯೋದಲ್ಲಿ 5 ಕೋಟಿಗೆ ಡಿಮ್ಯಾಂಡ್

    – ಕೋಟಿ ಡೀಲ್‍ಗೆ ನೂರು ರೂಪಾಯಿ ಕೋಡ್‍ವರ್ಡ್
    – ಪ್ರಭಾವಿಗಳ ಒತ್ತಡಕ್ಕೆ ಮಣಿದ್ರಾ ಸಿಸಿಬಿ ಪೊಲೀಸರು..?
    – ನಂಗೆ ಗೊತ್ತಿಲ್ಲದೆ ಅರೆಸ್ಟ್ ಮಾಡಿದ್ದು ಸರೀನಾ ಅಂದ್ರು ರಾಮುಲು..?

    ಬೆಂಗಳೂರು: ಸಿಎಂ ಪುತ್ರ ವಿಜಯೇಂದ್ರ ಹಾಗೂ ಮೂವರು ಸಚಿವರ ಹೆಸರೇಳಿಕೊಂಡು ಗುತ್ತಿಗೆ, ವರ್ಗಾವಣೆ, ಕೆಲಸದ ಆಮಿಷವೊಡ್ಡಿ ಕೋಟಿ ಕೋಟಿ ದೋಖಾ ಮಾಡಿದರೂ ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಆಪ್ತ ಸಹಾಯಕ ಬಚಾವ್ ಆಗಿದ್ದಾರೆ.

    ನೀರಾವರಿ ಇಲಾಖೆ ಸಬ್ ಕಾಂಟ್ರಾಕ್ಟ್ ನೀಡೋ ವಿಚಾರದಲ್ಲಿ ಮೂವರು ಗುತ್ತಿಗೆದಾರರೊಂದಿಗೆ ಸಚಿವ ಶ್ರೀರಾಮುಲು ಪಿಎ ರಾಜಣ್ಣ ಮಾತನಾಡಿದ್ದಾರೆ ಎನ್ನಲಾಗಿದ್ದು, ಅದರಲ್ಲಿ ಸಿಎಂ ಪುತ್ರ ವಿಜಯೇಂದ್ರ ಹೆಸರನ್ನು ಪ್ರಸ್ತಾಪಿಸಿದ್ದಾರೆ ಅಂತ ಗೊತ್ತಾಗಿದೆ. 3 ಆಡಿಯೋದಲ್ಲಿ ಸುಮಾರು 5 ಕೋಟಿವರೆಗೆ ಪ್ರಸ್ತಾಪಿಸಿದ್ದಾರೆ. ಡೀಲ್ ಓಕೆಯಾದ್ರೆ ವಿಜಯೇಂದ್ರ ಹತ್ತಿರ ಮಾತನಾಡಿ ಸಹಿ ಹಾಕಿಸಿಕೊಡೋದಾಗಿಯೂ ರಾಮುಲು ಪಿಎ ಆಶ್ವಾಸನೆ ಕೊಟ್ಟಿದ್ದಾರೆ ಅಂತ ಹೇಳಲಾಗಿದೆ.

    ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟಿದ್ಯಾಕೆ…?:
    * ಆಡಿಯೋ 1 – ಗುತ್ತಿಗೆದಾರನ ಬಳಿ 1 ಕೋಟಿ ಹಣಕ್ಕೆ ಬೇಡಿಕೆ!
    (1 ಕೋಟಿಗೆ 100 ರೂ. ಅಂತ ಕೋಡ್ ವರ್ಡ್)
    * ಆಡಿಯೋ 2 – ಗುತ್ತಿಗೆದಾರನ ಬಳಿ 3 ಕೋಟಿ ಹಣಕ್ಕೆ ಡಿಮ್ಯಾಂಡ್!
    (3 ಕೋಟಿಗೆ 300 ರೂ. ಅಂತ ಕೋಡ್ ವರ್ಡ್)
    * ಆಡಿಯೋ 3 – 75 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ!
    (75 ಲಕ್ಷಕ್ಕೆ 75 ರೂಪಾಯಿ ಅಂತ ಕೋಡ್ ವರ್ಡ್…..)

    ಪೊಲೀಸ್ ಫ್ರೆಶರ್: ಸಚಿವ ಶ್ರೀರಾಮುಲು ಆಪ್ತ ಸಹಾಯಕ ರಾಜಣ್ಣ ಕೇಸಲ್ಲಿ ಸಿಸಿಬಿ ಪೊಲೀಸರು ಒತ್ತಡಕ್ಕೆ ಒಳಗಾದ್ರಾ ಅನ್ನೋ ಸಂಶಯ ವ್ಯಕ್ತವಾಗಿದೆ. ಸಿಎಂ ಪುತ್ರ ವಿಜಯೇಂದ್ರ ದೂರು ಕೊಟ್ಟರೂ, ಕೇವಲ ವಿಚಾರಣೆಯನ್ನಷ್ಟೇ ನಡೆಸಿ, ಬಂಧನ ಮಾಡದೆ ರಾಮುಲು ಆಪ್ತನನ್ನು ಬಿಟ್ಟು ಕಳುಹಿಸಿದ್ದಾರೆ. ಬೆಳಗ್ಗೆಯಿಂದ ಪೊಲೀಸರ ಮೇಲೆ ರಾಮುಲು ಒತ್ತಡ ಹೇರಿದ್ದರಿಂದ ಯಾವುದೇ ಎಫ್‍ಐಆರ್ ಹಾಕದೆ ಧ್ವನಿ ಮಾದರಿ ಸಂಗ್ರಹ, ವಾಟ್ಸಪ್ ಚಾಟ್, ಡೀಲ್ ಆಡಿಯೋವನ್ನು ಪಡೆದು ಮತ್ತೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೊಟ್ಟು ಕಳುಹಿಸಿದ್ದಾರೆ. ಸಾಮಾನ್ಯರ ಮೇಲೆ ದೂರು ಬಂದಿದ್ದರೆ, ಸಿಸಿಬಿ ಪೊಲೀಸರು ಹೀಗೆಯೇ ವರ್ತಿಸುತ್ತಿದ್ದಾರಾ..? ಪ್ರಭಾವಿಗಳ ಕೇಸ್ ಅಂತ ಪೊಲೀಸರು ಬೇಕಾಬಿಟ್ಟಿಯಾಗಿ ವರ್ತಿಸಿದ್ರಾ ಅನ್ನೋ ಪ್ರಶ್ನೆ ಎದ್ದಿದೆ. ಇದನ್ನೂ ಓದಿ: ವಿಜಯೇಂದ್ರನೇ ಡಿ ಪ್ಯಾಕ್ಟರ್ ಸಿಎಂ, ಯಡಿಯೂರಪ್ಪ ಡಿ ಜೀರೋ ಸಿಎಂ: ಸಿದ್ದರಾಮಯ್ಯ

    ಸಿಸಿಬಿ ಪೊಲೀಸರು ಎಡವಿದ್ದೆಲ್ಲಿ….?
    ಸೈಬರ್ ಠಾಣೆಯಲ್ಲಿ ಎಫ್‍ಐಆರ್ ದಾಖಲು ವೇಳೆ ಎಡವಟ್ಟು ಮಾಡಿದ್ದಾರೆ. ರಾಮುಲು ಆಪ್ತನ ವಿರುದ್ಧ ಸಿಸಿಬಿ ಹಾಕಿರೋದು 2 ಸೆಕ್ಷನ್ ಅಷ್ಟೇ. ಐಟಿ ಆಕ್ಟ್ ಸೆಕ್ಷನ್ 66 ಮತ್ತು ಐಪಿಸಿ ಸೆಕ್ಷನ್ 420 ಅಡಿ ಎಫ್‍ಐಆರ್ ದಾಖಲಿಸಲಾಗಿದೆ. ಐಟಿ ಆಕ್ಟ್ 66- ಸೋಷಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಬಿಡುಗಡೆ ಮಾಡಲಾಗಿದೆ. ಐಪಿಸಿ 420- ವಂಚನೆ ಆರೋಪ(ವಿಜಯೇಂದ್ರ ತನಗೆ ಆಗಿರೋ ವಂಚನೆ ಉಲ್ಲೇಖಿಸಿಲ್ಲ). ಎಫ್‍ಐಆರ್ ಪ್ರಾಥಮಿಕ ಸಾರಂಶದಲ್ಲಿ ಹೆಸರಷ್ಟೇ ಬಳಕೆ ಮಾಡಲಾಗಿದೆ.

    ಇತ್ತ ತಮ್ಮ ಆಪ್ತ ಸಹಾಯಕ ರಾಜಣ್ಣ ಕೋಟಿ ಕೋಟಿ ಡೀಲ್ ಮಾಡಿ ವಂಚನೆ ಎಸಗಿದ್ದಾನೆ ಅನ್ನೋ ಆರೋಪಕ್ಕಿಂತ ವಿಜಯೇಂದ್ರ ತಮಗೆ ನೆಪಮಾತ್ರಕ್ಕೂ ಮಾಹಿತಿ ಕೊಟ್ಟಿಲ್ಲ ಅಂತ ಸಚಿವ ಶ್ರೀರಾಮುಲು ಆಪ್ತರ ಬಳಿ ಬೇಸರ ವ್ಯಕ್ತಪಡಿಸಿದ್ದಾರೆ. ಆಪ್ತ ರಾಜಣ್ಣನನ್ನು ಸಿಸಿಬಿಯವರು ಎತ್ತಾಕಿಕೊಂಡು ಹೋದ್ರು ಎಂಬ ಸುದ್ದಿ ಕೇಳಿ, ಆಪ್ತರ ಬಳಿ ವಿಜಯೇಂದ್ರ ಬಗ್ಗೆ ರಾಮುಲು ಕೂಗಾಡಿದ್ರಂತೆ. ನನಗೆ ಹೇಳಿದ್ರೆ ಆಗ್ತಿರಲಿಲ್ವಾ..? ನಾನು ಸರಿ ಮಾಡ್ತಿರಲಿಲ್ವಾ..? ನನಗೆ ಕೆಟ್ಟ ಹೆಸರು ತರಬೇಕು ಅಂತಾನೆ ಹೀಗೆ ಮಾಡಿದಂತಿದೆ. ನಾನು ವಿಜಯೇಂದ್ರರನ್ನು ಭೇಟಿ ಮಾಡಲ್ಲ, ಅದೇನಾಗುತ್ತೋ ಆಗ್ಲಿ ಅಂತಾ ಗರಂ ಆಗಿದ್ರು ಎನ್ನಲಾಗಿದೆ.

    ಇಡೀ ರಾತ್ರಿ ಸಚಿವ ರಾಮುಲು ನಿದ್ದೆ ಕೂಡ ಮಾಡಿರಲಿಲ್ಲ ಅಂತಾ ತಿಳಿದುಬಂದಿದೆ. ಬೆಳಗ್ಗೆ ರಾಮುಲು ಆಡಿದ ಮಾತುಗಳಲ್ಲೂ ಇದೇ ಧ್ವನಿಸ್ತಾ ಇತ್ತು. ತಪ್ಪು ಯಾರು ಮಾಡಿದ್ರು ತಪ್ಪು.. ತನಿಖೆ ನಡೀತಿದೆ ಅಂದ್ರು. ಹಿರಿಯ ಮಂತ್ರಿಯಾಗಿ ತಮಗೆ ಈ ವಿಚಾರದಲ್ಲಿ ಅವಮಾನವಾಗಿದೆ ಎಂಬುದನ್ನು ಪರೋಕ್ಷವಾಗಿ ಹೇಳಿದ್ರು. ಇದಾದ ಕೂಡಲೇ ಸಿಎಂ ಭೇಟಿ ಮಾಡಿ ರಾಜಣ್ಣನ ಬಿಡುಗಡೆಗೆ ಒತ್ತಡ ಹೇರಿದ್ರು. ಕೆಲವೇ ಕ್ಷಣಗಳಲ್ಲಿ ಆರೋಪಿ ರಾಜಣ್ಣನನ್ನು ಸಿಸಿಬಿ ಬಿಟ್ಟು ಕಳಿಸಿದ್ದು ಕಾಕತಾಳಿಯ.

    ಟ್ವೀಟ್ ಸಮರ: ಸಿಎಂ ಪುತ್ರ ವಿಜಯೇಂದ್ರ ಹಾಗೂ ರಾಮುಲು ಆಪ್ತ ಸಹಾಯಕ ರಾಜಣ್ಣ ಮಧ್ಯೆ ಟ್ವೀಟ್ ಸಮರ ನಡೆದಿದೆ. ರಾಮುಲು ಪಿಎ ವಿರುದ್ಧ ದೂರು ನೀಡಿದ್ದನ್ನು ವಿಜಯೇಂದ್ರ ಸಮರ್ಥಿಸಿಕೊಂಡಿದ್ದಾರೆ. ಹಾಗೆಯೇ ರಾಮುಲು ಆಪ್ತ ಸಹಾಯಕ, ಆರೋಪಿ ರಾಜಣ್ಣ ನಾನು ತಪ್ಪೇ ಮಾಡಿಲ್ಲ. ಆಡಿಯೋದಲ್ಲಿರುವ ಧ್ವನಿ ನನ್ನದಲ್ಲ ಎಂದಿದ್ದಾರೆ. ವಿಜಯೇಂದ್ರ ಕರೆದು ಮಾತನಾಡಬಹುದಿತ್ತು ಅಂತಲೂ ಬೇಸರಿಸಿಕೊಂಡಿದ್ದಾರೆ. ಅಂದ ಹಾಗೇ ಬಳ್ಳಾರಿ ಮೂಲದ ರಾಜಣ್ಣ ಕಳೆದ 20 ವರ್ಷದಿಂದ ರಾಮುಲು-ಜನಾರ್ದನರೆಡ್ಡಿ ಬಲಗೈ ಬಂಟರಾಗಿದ್ದರು.

    ಸಚಿವ ರಾಮುಲು ಪಿಎ ರಾಜಣ್ಣ ವಿರುದ್ಧದ ಡೀಲ್ ಆರೋಪ, ಬಂಧನ ಬಿಡುಗಡೆ ಪ್ರಹಸನ.. ಸಹಜವಾಗಿಯೇ ವಿಪಕ್ಷಗಳಿಗೆ ಅಸ್ತ್ರವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರಂತೂ ಸಿಎಂ ಕುಟುಂಬದ ವಿರುದ್ಧ, ಸಚಿವ ರಾಮುಲು ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾತ್ರ, ರಾಮುಲು ಪಿಎ, ವಿಜಯೇಂದ್ರ ಬಗ್ಗೆ ಮಾತನಾಡೋದು ನನ್ನ ಲೆವೆಲ್ ಅಲ್ಲ ಎನ್ನುತ್ತಾ ಜಾರಿಕೊಂಡಿದ್ದಾರೆ. ಇನ್ನೂ ಸಿಎಂ ಯಡಿಯೂರಪ್ಪ ವಿರುದ್ಧ ಕಿಡಿಕಾಡಿರೋ ಮಾಜಿ ಸಚಿವ ರೇವಣ್ಣ, ಡಿನೋಟಿಫಿಕೇಶನ್ ಮುಖ್ಯಮಂತ್ರಿ ಯಡಿಯೂರಪ್ಪಗೆ ದೇವರೇ ಶಿಕ್ಷೆ ಕೊಡೋ ಕಾಲ ಬರುತ್ತೆ ಅಂತಾ ಶಪಿಸಿದ್ದಾರೆ.

  • ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಸಚಿವ ರಾಮುಲು ಪಿಎ ರಾಜಣ್ಣ ಅರೆಸ್ಟ್

    ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೆಸರೇಳಿಕೊಂಡು ಹಣ ವಸೂಲಿ ಆರೋಪದಲ್ಲಿ ಸಚಿವ ಶ್ರೀರಾಮುಲು ಪಿಎ ಅರೆಸ್ಟ್ ಆಗಿದ್ದಾರೆ.

    ಸ್ವತಃ ವಿಜಯೇಂದ್ರ ದೂರು ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ಶ್ರೀರಾಮುಲು ಮನೆಯಲ್ಲೇ ಆರೋಪಿ ರಾಜಣ್ಣನನ್ನ ವಶಕ್ಕೆ ಪಡೆದಿದ್ದಾರೆ. ಕೆಲಸ ಕೊಡಿಸ್ತೀನಿ, ವರ್ಗಾವಣೆ ಮಾಡಿಸ್ತೀನಿ ಅಂತ ಕೋಟ್ಯಂತರ ರೂಪಾಯಿ ಹಣ ವಸೂಲಿ ಮಾಡಿರೋ ಆರೋಪ ಕೇಳಿ ಬಂದಿದೆ.

    ರಾಜಣ್ಣ 8 ವರ್ಷದಿಂದ ರಾಮುಲು ಬಳಿ ಕೆಲಸ ಮಾಡ್ತಿದ್ದಾರೆ. ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು 20ಕ್ಕೂ ಹೆಚ್ಚು ಆಡಿಯೋ ವಶಕ್ಕೆ ಪಡೆದಿದ್ದಾರೆ. ಪ್ರತಿಯೊಂದು ಆಡಿಯೋದಲ್ಲಿ ಸಿಎಂ ಹೆಸರು ಉಲ್ಲೇಖ ಮಾಡಿರೋದು ಪತ್ತೆಯಾಗಿದೆ. ನಿನ್ನೆಯಿಂದ ಆರೋಪಿಯನ್ನು ಟ್ರೇಸ್ ಮಾಡ್ತಿದ್ದ ಪೊಲೀಸರು ಇಂದು ಬಂಧಿಸಿದ್ದಾರೆ.

    ಇತ್ತ ರಾಮುಲು ಬೆಂಬಲಿಗರು ಕಿಡ್ನಾಪ್ ಅಂತ ಹೈಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಇದನ್ನೂ ಓದಿ: ಮಗುವಿನ ಗಂಟಲಲ್ಲಿ ಸಿಲುಕಿದ್ದ ಡಬ್ಬಿ ಹೊರತೆಗೆದ ವೈದ್ಯರು

  • ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ- ಎಫ್‍ಐಆರ್ ದಾಖಲು

    ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ- ಎಫ್‍ಐಆರ್ ದಾಖಲು

    – ಬೆಡ್, ವೆಂಟಿಲೇಟರ್, ರೆಮ್‍ಡಿಸಿವಿರ್ ಕೊಡಿಸುವುದಾಗಿ ಹಣ ಪಡೆದು ವಂಚನೆ

    ಬೆಂಗಳೂರು: ಸಂಸದ ತೇಜಸ್ವಿ ಸೂರ್ಯ ಆಪ್ತ ಸಹಾಯಕನ ಹೆಸರಿನಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯ ವಿರುದ್ಧ ಎಫ್‍ಐಆರ್ ದಾಖಲಾಗಿದೆ.

    ಜಯನಗರ ಠಾಣಾ ವ್ಯಾಪ್ತಿಯ ಕೆಲ ಆಸ್ಪತ್ರೆ ಬಳಿ ಕೊರೊನಾ ರೋಗಿಗಳ ಪೋಷಕರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಆರೋಪಿ ಶಿವಲಿಂಗಯ್ಯ, ನಾನು ಸಂಸದ ತೇಜಸ್ವಿ ಸೂರ್ಯ ಪಿಎ ಎಂದು ಹೇಳಿಕೊಳ್ಳುತ್ತಿದ್ದ. ನಂತರ ಕೊರೊನಾ ಸಂಬಂಧಿಸಿದ ಚಿಕಿತ್ಸೆ, ಬೆಡ್ ವ್ಯವಸ್ಥೆ, ವೆಂಟಿಲೇಟರ್, ರೆಮ್‍ಡಿಸಿವಿರ್ ಬೇಕಾದರೆ ನಾನು ಕೊಡಿಸುತ್ತೇನೆ ಎಂದು ಹೇಳಿ ಹಣ ಪಡೆದು ವಂಚನೆ ಮಾಡುತ್ತಿದ್ದ.

    ಇದೇ ರೀತಿ ವ್ಯಕ್ತಿಯೊಬ್ಬರ ಬಳಿ, ಹತ್ತು ಸಾವಿರ ಹಣ ನೀಡಿದರೆ ಐದು ರೆಮ್‍ಡಿಸಿವಿರ್ ಇಂಜೆಕ್ಷನ್ ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದ. ಈ ಸಂಬಂಧ ತೇಜಸ್ವಿ ಸೂರ್ಯರ ಕಚೇರಿ ಬಳಿ ತೆರಳಿ ವಿಚಾರಿಸಿದಾಗ ಆ ವ್ಯಕ್ತಿ ನಕಲಿ ಅನ್ನೋದು ಪತ್ತೆಯಾಗಿತ್ತು. ಅವರ ಬಳಿ ಫೋನ್ ನಂಬರ್ ಪಡೆದು ಖುದ್ದು ತೇಜಸ್ವಿ ಸೂರ್ಯ ಪಿಎ ಭಾನುಪ್ರಕಾಶ್ ಫೋನ್ ಮಾಡಿದಾಗ ನಾನೇ ಅವರ ಪಿಎ ಎಂದು ಶಿವಲಿಂಗಯ್ಯ ಪರಿಚಯ ಮಾಡಿಕೊಂಡಿದ್ದ.

    ನಂತರ ಅಸಲಿ ವಿಚಾರ ತಿಳಿದ ಆರೋಪಿ ಶಿವಲಿಂಗಯ್ಯ ಫೋನ್ ಸ್ವೀಚ್ ಆಫ್ ಮಾಡಿಕೊಂಡು ಎಸ್ಕೇಪ್ ಆಗಿದ್ದಾನೆ. ಈ ಸಂಬಂಧ ಜಯನಗರ ಠಾಣೆ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡು ಆರೋಪಿಯ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ.

  • ಲಂಚಕ್ಕೆ ಬೇಡಿಕೆ ಆರೋಪ – ಆರ್ ಅಶೋಕ್ ಪಿಎ ವಿರುದ್ಧ ಎಫ್‍ಐಆರ್

    ಲಂಚಕ್ಕೆ ಬೇಡಿಕೆ ಆರೋಪ – ಆರ್ ಅಶೋಕ್ ಪಿಎ ವಿರುದ್ಧ ಎಫ್‍ಐಆರ್

    – ಕೇಸ್ ದಾಖಲಿಸಿ ತನಿಖೆಗೆ ಸೂಚಿಸಿದ ನ್ಯಾಯಾಲಯ

    ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ತಾಲೂಕಿನ ಸಬ್ ರಿಜಿಸ್ಟ್ರಾರ್ ಚೆಲುವರಾಜು ಅವರಿಂದ ಲಂಚ ಕೇಳಿದ ಕಂದಾಯ ಸಚಿವ ಆರ್ ಅಶೋಕ್ ಪಿ.ಎ ಗಂಗಾಧರ್ ವಿರುದ್ಧ ಶೃಂಗೇರಿ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

    ಜನವರಿ 20ರಂದು ವಾಟ್ಸಪ್ ಮೂಲಕ ಫೋನ್ ಮಾಡಿದ್ದ ಅಶೋಕ್ ಪಿಎ ಗಂಗಾಧರ್, 24ರಂದು ಸಚಿವರು ಶೃಂಗೇರಿಗೆ ಬರುತ್ತಾರೆ ಭೇಟಿಯಾಗಿ ಎಂದು ಹೇಳಿದ್ದರು. 24ರಂದು ಸಂಜೆ 6 ಗಂಟೆಗೆ ಸಬ್ ರಿಜಿಸ್ಟ್ರಾರ್ ಚೆಲುವರಾಜು ಶೃಂಗೇರಿಯ ಆದಿಚುಂಚನಗಿರಿ ಸಮುದಾಯ ಭವನಕ್ಕೆ ಬಂದಿದ್ದರು. ಸಚಿವರು ಸಂಜೆ 7.30ಕ್ಕೆ ಶೃಂಗೇರಿಗೆ ಭೇಟಿ ನೀಡಿದ್ದರು.

    ಆಗ ಪಿ.ಎ. ಗಂಗಾಧರ್ ಅಲ್ಲೇ ಇದ್ದ ಒಂದು ರೂಮಿನಲ್ಲಿ ಭೇಟಿಯಾಗಿ ಏನಿದೆ ಕೊಡಿ ಎಂದಿದ್ದರು. ಇದೇ ವೇಳೆ ಚೆಲುವರಾಜು, ನಾನು ಯಾರಿಗೂ ಹಣ ಕೊಡುವುದಿಲ್ಲ. ಯಾರಿಂದಲೂ ಹಣ ಪಡೆಯುವುದಿಲ್ಲ ಎಂದಿದ್ದರು. ಅದಕ್ಕೆ ಅವರು ಆಯ್ತು ಹೋಗಿ ಎಂದಿದ್ದರು. ಕೈಯಲ್ಲಿದ್ದ ಪೇಪರ್ ನೋಡಿ ಏನದು ಎಂದು ಕೇಳಿದ್ದರು. ನಾನು ದೂರಿನ ಪ್ರತಿ. ಕರ್ನಾಟಕ ಸೆಕ್ರೆಟರಿಗೆ ಕಳಿಸಿದ್ದೇನೆ. ಸಚಿವರಿಗೂ ಕೊಡಿ ಎಂದು ಹೇಳಿದೆ. ಅವರು ನೀವೇ ಕೊಡಿ ಎಂದು ಹೋದರು.

    ಸಚಿವರ ಪಿ.ಎ. ಗಂಗಾಧರ್ ರಾತ್ರಿ ಮತ್ತೆ ಫೋನ್ ಮಾಡಿದ್ದರು. ನಾನು ನೋಡಿರಲಿಲ್ಲ, ನಾನು ಬೆಳಗ್ಗೆ ಫೋನ್ ಮಾಡಿದ್ದಕ್ಕೆ ಏನೋ… ಫೈಲ್ ಕೊಡುತ್ತೇನೆ ಎಂದು ಹೇಳಿ ಕೊಡಲಿಲ್ಲ ಎಂದರು. ನಾನು ಯಾವ ಫೈಲ್ ಇಲ್ಲ. ನೀವು ಲಂಚ ಕೇಳಿದ್ರಿ ನಾನು ಇಲ್ಲ ಎಂದು ಹೇಳಿದ್ದೆ ಎಂದು ಚೆಲುವರಾಜು ಹೇಳಿದ್ದರಂತೆ.

    ಸರ್ಕಾರಿ ಅಧಿಕಾರಿಯಿಂದ ಲಂಚ ಕೇಳಿದ ಬಗ್ಗೆ ಹಾಗೂ ನಿನ್ನ ನೋಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ್ದಾರೆಂದು ಶೃಂಗೇರಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸರ್ಕಾರಿ ಅಧಿಕಾರಿಯಾಗಿರುವುದರಿಂದ ಪೊಲೀಸರು ಕೇಸ್ ದಾಖಲಿಸಿ ತನಿಖೆ ನಡೆಸುವಂತೆ ಕೋರಿ ಶೃಂಗೇರಿ ಜೆಎಂಎಫ್‍ಸಿ ನ್ಯಾಯಾಲಯದ ಅನುಮತಿ ಕೋರಿದ್ದರು. ಈ ಬಗ್ಗೆ ಶೃಂಗೇರಿ ನ್ಯಾಯಾಲಯ ಕೂಡ ಕೇಸ್ ದಾಖಲಿಸಿ ತನಿಖೆ ನಡೆಸುವಂತೆ ಸೂಚಿಸಿರೊ ಹಿನ್ನೆಲೆ ಶೃಂಗೇರಿ ಪೊಲೀಸರು ಎಫ್‍ಐಆರ್ ತನಿಖೆ ಕೈಗೊಂಡಿದ್ದಾರೆ.

  • ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ಪರಂ ಪಿಎ ಸೂಸೈಡ್ ಪ್ರಕರಣ – ಇಂದು ರಾಮನಗರದ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ

    ರಾಮನಗರ: ಆದಾಯ ತೆರಿಗೆ ಇಲಾಖೆ(ಐಟಿ) ದಾಳಿಯಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿರುವ ಮಾಜಿ ಉಪಮುಖ್ಯಮಂತ್ರಿ ಪರಮೇಶ್ವರ್ ಆಪ್ತ ಸಹಾಯಕ ರಮೇಶ್ ಅಂತ್ಯಕ್ರಿಯೆ ಇಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಸ್ವಗ್ರಾಮ ಮೆಳೆಹಳ್ಳಿಯಲ್ಲಿ ನಡೆಯಲಿದೆ.

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹವನ್ನ ಸ್ವಗ್ರಾಮಕ್ಕೆ ರವಾನಿಸಲಾಯಿತು. ಮೃತದೇಹ ನೋಡುತ್ತಿದ್ದಂತೆಯೇ ರಮೇಶ್ ಪತ್ನಿ, ತಾಯಿ-ತಂದೆ ಸೇರಿದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

    ರಮೇಶ್ ಮೃತದೇಹವನ್ನ ರಾತ್ರಿ ಮನೆಯ ಮುಂಭಾಗ ಅಂತಿಮ ದರ್ಶನಕ್ಕೆ ಇಡಲಾಗಿತ್ತು. 11 ಗಂಟೆಯ ನಂತರ ಸ್ವಗ್ರಾಮದಲ್ಲಿನ ರಮೇಶ್ ಜಮೀನಿನಲ್ಲಿ ಚಿತೆಯಲ್ಲಿಟ್ಟು ಅಗ್ನಿ ಸ್ಪರ್ಶಿಸುವ ಮೂಲಕ ಅಂತ್ಯಸಂಸ್ಕಾರವನ್ನು ನೆರವೇರಿಸುವುದಾಗಿ ಅವರ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಪರಮೇಶ್ವರ್ ಆಪ್ತ ರಮೇಶ್ ಐಟಿಗೆ ಬೆದರಿದ್ರಾ? ಕೊನೆ ಕ್ಷಣ ಹೇಗಿತ್ತು?

    ಶನಿವಾರ ಬೆಳಗ್ಗೆ ತನ್ನಿಬ್ಬರು ಆಪ್ತರಿಗೆ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಹೇಳಿ ಮೊಬೈಲ್ ಸ್ವಿಚ್ಚ್ ಆಫ್ ಆಡಿಕೊಂಡಿದ್ದರು. ಆ ನಂತರ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ರಮೇಶ್ ಶವ ಪತ್ತೆಯಾಗಿತ್ತು.

    https://www.youtube.com/watch?v=unFC-S4yhps

  • ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಶರಣು

    ಪರಮೇಶ್ವರ್ ಪಿಎ ಆತ್ಮಹತ್ಯೆಗೆ ಶರಣು

    ಬೆಂಗಳೂರು: ಐಟಿ ವಿಚಾರಣೆ ಎದುರಿಸುವುದಕ್ಕೆ ಆಗಲ್ಲ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದ ಮಾಜಿ ಡಿಸಿಎಂ ಪರಮೇಶ್ವರ್ ಅವರ ಪಿಎ ರಮೇಶ್ ಜ್ಞಾನಭಾರತಿ ಕ್ಯಾಂಪಸ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

    ರಮೇಶ್ 6 ವರ್ಷದಿಂದ ಪರಮೇಶ್ವರ್ ಬಳಿ ಟೈಪಿಸ್ಟ್ ಆಗಿ ಕೆಲಸ ಮಾಡುತ್ತಿದ್ದರು. ಪರಮೇಶ್ವರ್ ಮನೆ ಮೇಲೆ ಐಟಿ ದಾಳಿ ಆದ ಹಿನ್ನೆಲೆಯಲ್ಲಿ ರಮೇಶ್ ಮನೆ ಮೇಲೂ ದಾಳಿ ನಡೆದಿತ್ತು. ಆದರೆ ಮನೆಯಲ್ಲಿ ಯಾವುದೇ ದಾಖಲೆ ಸಿಕ್ಕಿರಲಿಲ್ಲ. ಪರಮೇಶ್ವರ್ ಪತ್ರ ವ್ಯವಹಾರದ ಬಗ್ಗೆ ರಮೇಶ್‍ಗೆ ತಿಳಿದಿತ್ತು. ಹಾಗಾಗಿ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದರು.

    ಪತ್ರ ವ್ಯವಹಾರದ ಬಗ್ಗೆ ಐಟಿ ಅಧಿಕಾರಿಗಳು 2 ದಿನ ವಿಚಾರಣೆ ನಡೆಸಿದ್ದರು. ಈ ವೇಳೆ ಐಟಿ ಅಧಿಕಾರಿಗಳು ಜೈಲಿಗೆ ಹೋಗ್ತಿಯಾ, ಈಗಾಗಲೇ ನಮಗೆ ಹವಾಲಾ ದಂಧೆ ಸಾಕ್ಷ್ಯ ಸಿಕ್ಕಿದೆ ಎಂದು ಬೆದರಿಕೆ ಹಾಕಿದ್ದರು. ಇದರಿಂದ ರಮೇಶ್ ಹೆದರಿಕೊಂಡಿದ್ದರು ಎನ್ನಲಾಗಿದೆ.

    ಇಂದು ಬೆಳಗ್ಗೆ ರಮೇಶ್ ತನ್ನ ಆಪ್ತರಿಗೆ ಕರೆ ಮಾಡಿ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಕೊಂಡಿದ್ದರು. ಇಬ್ಬರು ಆಪ್ತರ ಬಳಿ ಮಾತನಾಡಿ, ನಾನು ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿದ್ದೀನಿ ಎಂದು ಹೇಳಿ ರಮೇಶ್ ನಾಪತ್ತೆ ಆಗಿದ್ದಾರೆ.

    ಆಪ್ತರಿಗೆ ಕರೆ ಮಾಡಿ ರಮೇಶ್, ನಾನು ಬಡವ. ಹೀಗಿದ್ದರೂ ಅಧಿಕಾರಿಗಳು ನನ್ನ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ನನಗೆ ಐಟಿ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ಐಟಿ ಅಧಿಕಾರಿಗಳು ಸಿಕ್ಕಾಪಟ್ಟೆ ಪ್ರಶ್ನೆಗಳನ್ನು ಕೇಳುತ್ತಾರೆ. ನನಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದರು.

    https://www.youtube.com/watch?v=YMis798cmjE

  • ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪರಮೇಶ್ವರ್ ಪಿಎ ಬೆದರಿಕೆ

    ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪರಮೇಶ್ವರ್ ಪಿಎ ಬೆದರಿಕೆ

    ಬೆಂಗಳೂರು: ಮಾಜಿ ಡಿಸಿಎಂ ಪರಮೇಶ್ವರ್ ಅವರ ಮನೆಯಲ್ಲಿ ಐಟಿ ದಾಳಿ ಆದ ಬೆನ್ನಲ್ಲೇ ಐಟಿ ಅಧಿಕಾರಿಗಳು ಪರಂ ಪಿಎ ಮನೆ ಮೇಲೂ ದಾಳಿ ನಡೆಸಿದ್ದಾರೆ. ಹೀಗಾಗಿ ನನಗೆ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಪಿಎ ರಮೇಶ್ ಬೆದರಿಕೆ ಹಾಕಿದ್ದಾರೆ.

    ಪರಮೇಶ್ವರ್ ಅವರ ಪಿಎ ರಮೇಶ್ ತನ್ನ ಆಪ್ತರಿಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿದ್ದಾರೆ. ಇಬ್ಬರು ಆಪ್ತರ ಬಳಿ ಮಾತನಾಡಿ, ನಾನು ಯೂನಿವರ್ಸಿಟಿ ಕ್ಯಾಂಪಸ್‍ನಲ್ಲಿದ್ದೀನಿ ಎಂದು ಹೇಳಿ ರಮೇಶ್ ನಾಪತ್ತೆ ಆಗಿದ್ದಾರೆ. ಇದನ್ನೂ ಓದಿ: ಮಾಜಿ ಡಿಸಿಎಂ ಪರಮೇಶ್ವರ್​ಗೆ ಇಡಿ ಸಂಕಷ್ಟ?

    ನಾನು ಬಡವ. ಹೀಗಿದ್ದರೂ ಐಟಿ ಅಧಿಕಾರಿಗಳು ನನ್ನ ಮನೆ ಮೇಲೆ ಐಟಿ ದಾಳಿ ನಡೆಸಿದ್ದಾರೆ. ನನಗೆ ಐಟಿ ವಿಚಾರಣೆ ಎದುರಿಸುವುದಕ್ಕೆ ಆಗುವುದಿಲ್ಲ. ಐಟಿ ಅಧಿಕಾರಿಗಳು ಸಿಕ್ಕಾಪಟ್ಟೆ ಪ್ರಶ್ನೆಗಳನ್ನು ಕೇಳುತ್ತಾರೆ. ನನಗೆ ಅವರ ಪ್ರಶ್ನೆಗಳಿಗೆ ಉತ್ತರಿಸಲು ಆಗುವುದಿಲ್ಲ ಎಂದು ಹೇಳಿ ಮೊಬೈಲ್ ಸ್ವಿಚ್ ಆಫ್ ಮಾಡಿ ಎಸ್ಕೇಪ್ ಆಗಿದ್ದಾರೆ. ಇದನ್ನೂ ಓದಿ: ಮೆಡಿಕಲ್ ಕಾಲೇಜಿಗೆ 500 ಕೋಟಿ ರೂ. ಸುರಿದು ತಗ್ಲಾಕ್ಕೊಂಡ ಮಾಜಿ ಡಿಸಿಎಂ

    ಎರಡು ದಿನಗಳ ಕಾಲ ಐಟಿ ಅಧಿಕಾರಿಗಳು ಪರಮೇಶ್ವರ್ ಅವರ ಮನೆಯಲ್ಲಿ ಶೋಧಕಾರ್ಯ ನಡೆಸಿದ್ದು, ಸಿಕ್ಕ ಸಂಪತ್ತು ನೋಡಿ ಶಾಕ್ ಗೆ ಒಳಗಾಗಿದ್ದಾರೆ. ಪರಮೇಶ್ವರ್ ಬರೋಬ್ಬರಿ 103 ಕೋಟಿ ಆಸ್ತಿಯನ್ನು ಬಹಿರಂಗಪಡಿಸಿಲ್ಲ. 100 ಕೋಟಿ ದಾಖಲೆ ಪತ್ರಗಳಿಗೆ ಉತ್ತರ ನೀಡಿಲ್ಲ. ಕಾಲೇಜಿನಲ್ಲಿ ದುಡಿದ ಹಣ ಪಂಚತಾರಾ ಹೋಟೆಲ್ ಮೇಲೆ ಹಾಗೂ ಕಾಲೇಜಿನ ಸಿಬ್ಬಂದಿಗೆ ಗೊತ್ತಾಗದ ರೀತಿಯಲ್ಲಿ ಅವರ ಹೆಸರಲ್ಲಿ 4.6 ಕೋಟಿ ಹೂಡಿಕೆ ಮಾಡಿದ್ದಾರೆ. ಇದನ್ನೂ ಓದಿಪರಮೇಶ್ವರ್ ಬಹಿರಂಗಪಡಿಸದ ಆಸ್ತಿ ಬರೋಬ್ಬರಿ 103 ಕೋಟಿ ರೂ.

    ಸದಾಶಿವನಗರದ ನಿವಾಸದಲ್ಲಿ 89 ಲಕ್ಷ ರೂ., ನೆಲಮಂಗಲದ ಮನೆಯಲ್ಲಿ 1.8 ಕೋಟಿ ರೂ. ಹೀಗೆ ಪರಮೇಶ್ವರ್ ಗೆ ಸಂಬಂಧಿಸಿದ್ದ ಒಟ್ಟು 4.5 ಕೋಟಿ ರೂ. ನಗದು ದೊರಕಿದೆ. ಸಿದ್ದಾರ್ಥ ಶಿಕ್ಷಣ ಸಂಸ್ಥೆಯಿಂದ ಕೋಟಿ ಕೋಟಿ ತೆರಿಗೆ ವಂಚನೆ ಮಾಡಲಾಗಿದೆ. 2002ರಿಂದಲೂ ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿ ತೆರಿಗೆ ಕಟ್ಟಿಲ್ಲ. ಈ ಮೂಲಕ ಶಿಕ್ಷಣ ಸಂಸ್ಥೆ ಪಾಲಿಕೆಗೆ ಸುಮಾರು 2 ಕೋಟಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ಪರಮೇಶ್ವರ್ ಅಣ್ಣನ ಮಗ ಆನಂದ್ ಸಿದ್ದಾರ್ಥ್ ಬಳಿ ಡೈರಿ ಪತ್ತೆಯಾಗಿದ್ದು, ಡೈರಿಯಲ್ಲಿ ಮೆಡಿಕಲ್ ಸೀಟು ಹಂಚಿಕೆ ಬಗ್ಗೆ ಉಲ್ಲೇಖ ಮಾಡಿರುವುದನ್ನು ಮಾಡಿದನ್ನು ಆದಾಯ ತೆರಿಗೆ ಅಧಿಕಾರಿಗಳು ಬಹಿರಂಗಪಡಿಸಿದ್ದಾರೆ.

  • ಅತ್ತ ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇತ್ತ ಸಚಿವರ ಕ್ಷೇತ್ರದಲ್ಲಿ ಪಿಎಗಳ ದರ್ಬಾರ್..!

    ಅತ್ತ ಕಾಂಗ್ರೆಸ್ ಶಾಸಕರ ರೆಸಾರ್ಟ್ ಪಾಲಿಟಿಕ್ಸ್ – ಇತ್ತ ಸಚಿವರ ಕ್ಷೇತ್ರದಲ್ಲಿ ಪಿಎಗಳ ದರ್ಬಾರ್..!

    ಚಿಕ್ಕೋಡಿ/ಬೆಳಗಾವಿ: ಒಂದು ಕಡೆ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಶಾಸಕರು ಲಜ್ಜೆ ಬಿಟ್ಟು ರೆಸಾರ್ಟ್ ರಾಜಕಾರಣದಲ್ಲಿ ಬ್ಯುಸಿ ಆಗಿದ್ದಾರೆ. ಆದರೆ ಇದೇ ಅವಕಾಶ ಅಂತ ಸಚಿವರ ಪಿಎಗಳು ದರ್ಪ ಮೆರೆಯುತ್ತಿದ್ದಾರೆ.

    ಆಪರೇಷನ್ ಕಮಲ ಭೀತಿಯಿಂದ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿದ್ದೇ ಸೇರಿದ್ದು ಸಚಿವರ ಪಿಎಗಳ ದರ್ಬಾರ್ ಶುರುವಾಗಿದೆ. ಯಮಕನಮರಡಿ ಕ್ಷೇತ್ರದ ಶಾಸಕ ಹಾಗೂ ಅರಣ್ಯ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಪ್ರಕಾಶ್ ಬಸ್ಸಾಪೂರೆ, ಹುಕ್ಕೇರಿ ತಾಲೂಕಿನ ಗೋಟೂರ ಗ್ರಾಮದಲ್ಲಿ ರಾಜ್ಯ ಹೆದ್ದಾರಿಯ ರಸ್ತೆ ಅಗಲೀಕರಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ್ದಾರೆ. ಈಗ ಶಾಸಕರ ಪಿಎಗಳ ಶಿಷ್ಟಾಚಾರ ಉಲ್ಲಂಘನೆ ಹಾಗೂ ದರ್ಬಾರ್ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬೇಸಿಗೆ ಮುನ್ನವೇ ನೀರಿಗೆ ಹಾಹಾಕಾರ

    ಸತೀಶ್ ಜಾರಕಿಹೊಳಿ ಅವರಿಗೆ 10 ಕ್ಕೂ ಹೆಚ್ಚು ಜನ ಪಿಎಗಳಿದ್ದಾರೆ. ಕ್ಷೇತ್ರದಲ್ಲಿ ಶಾಸಕರಗಿಂತ ಪಿಎಗಳ ದೌಲತ್ತೆ ಹೆಚ್ಚು. ಯಾವುದೇ ಕೆಲಸ ಕಾರ್ಯಗಳು ಆಗಬೇಕಾದರೆ ಪಿಎಗಳ ರೆಕಮೆಂಡ್ ಇರಲೇಬೇಕು ಎಂದು ಕ್ಷೇತ್ರದ ಜನ ಅಳಲು ತೋಡಿಕೊಳ್ಳುತ್ತಿದ್ದರು ಶಾಸಕರು ಕೇರ್ ಮಾಡುತ್ತಿಲ್ಲ. ಹೀಗಾಗಿ ಪಿಎಗಳ ದರ್ಬಾರ್ ಹಾಗೂ ಅರಣ್ಯ ಸಚಿವರ ರೆಸಾರ್ಟ್ ರಾಜಕಾರಣದ ವಿರುದ್ಧ ಬಿಜೆಪಿ ಮುಖಂಡ ಹಾಗೂ ಕ್ಷೇತ್ರದ ಪರಾಜಿತ ಅಭ್ಯರ್ಥಿ ಮಾರುತಿ ಅಷ್ಟಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕಾಲು-ಬಾಯಿ ಜ್ವರದಿಂದ ಸಾವನ್ನಪ್ಪಿದ ಹಸುಗಳು- ರೆಸಾರ್ಟ್ ನಲ್ಲಿ ಕುಳಿತ್ರು ಕಷ್ಟ ಕೇಳಬೇಕಾದ ಶಾಸಕರು !

    ಇನ್ನೂ ಭೂಮಿ ಪೂಜೆಗೆ ಲೋಕೋಪಯೋಗಿ ಅಧಿಕಾರಿಗಳು ಶಿಷ್ಟಾಚಾರ ಉಲ್ಲಂಘಿಸಿ ಪಿಎಗಳಿಗೆ ಅವಕಾಶ ಕೊಟ್ಟಿದ್ದು, ಕೂಡ ಈಗ ಜನರ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕಡೆ ಜನ ಬರಗಾಲದಿಂದ ನೀರು, ಜಾನುವಾರುಗಳ ಮೇವಿಗಾಗಿ ಪರದಾಡುತ್ತಿದ್ದರೆ ಇತ್ತ ಶಾಸಕರು ರೆಸಾರ್ಟ್ ರಾಜಕಾರಣದಲ್ಲಿ ಬ್ಯುಸಿ ಆಗಿರುವುದು ನಿಜಕ್ಕೂ ದುರಂತವಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಪ್ರಮುಖ ಆರೋಪಿಯ ಜೊತೆ ಮಾಜಿ ಸಿಎಂ ಪಿಎ ನಂಟು

    ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಟ್ವಿಸ್ಟ್ – ಪ್ರಮುಖ ಆರೋಪಿಯ ಜೊತೆ ಮಾಜಿ ಸಿಎಂ ಪಿಎ ನಂಟು

    ಬೆಂಗಳೂರು: ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ದೊರೆತಿದ್ದು, ಪ್ರಮುಖ ಆರೋಪಿ ಶಿವಕುಮಾರ್ ಜೊತೆ ಮಾಜಿ ಸಿಎಂ ಪಿಎ ನಂಟು ಹೊಂದಿದ್ದಾರೆ ಎಂಬ ಮಾಹಿತಿಯೊಂದು ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು, ಪೊಲೀಸ್ ಪೇದೆ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣದ ಹಿಂದೆ ಬಿಜೆಪಿ ಮುಖಂಡ ಈಶಪ್ಪ ಕೈವಾಡ ಇದೆ ಎನ್ನುವ ವಿಚಾರ ಮೂಲಗಳು ತಿಳಿಸಿವೆ. ಶಾಸಕ ಸ್ಥಾನದ ಆಕಾಂಕ್ಷಿಯಾಗಿದ್ದ ಈಶಪ್ಪ ಶಿವಕುಮಾರ್ ಜೊತೆ ಸೇರಿಕೊಂಡಿದ್ದರು ಎನ್ನುವ ವಿಚಾರದ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಕೊಪ್ಪಳದ ಗಜೇಂದ್ರಗಡದಲ್ಲಿ ಪ್ರಭಾವಿ ವ್ಯಕ್ತಿಯಾಗಿರುವ ಈಶಪ್ಪ, ಪ್ರಾಥಮಿಕ ಶಾಲೆ ಶಿಕ್ಷಕರಾಗಿ ಈಗ ಕೋಟಿ ಕೋಟಿ ಒಡೆಯರಾಗಿ ಬದಲಾಗಿದ್ದಾರೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಲೀಕ್ ನಲ್ಲಿ ಸ್ವಾಮೀಜಿಯ ಕೈವಾಡ

    ನವೆಂಬರ್ 25ರಂದು ನಡೆಯಬೇಕಿದ್ದ ಪೊಲೀಸ್ ಪೇದೆ ಹುದ್ದೆಯ ಲಿಖಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿತ್ತು. ಹೀಗಾಗಿ ಪರೀಕ್ಷೆಯನ್ನು ಅನಿರ್ಧಿಷ್ಟಾವಧಿಗೆ ಮುಂದೂಡಲಾಗಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಭಾರೀ ಜಾಲವನ್ನು ಪತ್ತೆ ಹಚ್ಚಿ ಕಿಂಗ್ ಪಿನ್ ಸೇರಿದಂತೆ 115 ಮಂದಿಯನ್ನು ಬಂಧಿಸಿದ್ದರು.

    ಕೊಡಗು ಜಿಲ್ಲೆಯ ಸೋಮವಾರಪೇಟೆಯ ವಿದ್ಯಾಮಂದಿರ ಕೊಠಡಿಯೊಂದರಲ್ಲಿ ರಾಜ್ಯದ ವಿವಿಧೆಡೆಯಿಂದ ಪರೀಕ್ಷಾರ್ಥಿಗಳನ್ನು ಕರೆಸಿಕೊಂಡು ಪ್ರಶ್ನೆ ಪತ್ರಿಕೆ ವಿತರಿಸಲು ಸಿದ್ಧತೆ ನಡೆಸಲಾಗಿತ್ತು. ನೇರವಾಗಿ ಪರೀಕ್ಷಾ ಕೇಂದ್ರಕ್ಕೆ ತೆರಳುವ ವ್ಯವಸ್ಥೆಯನ್ನೂ ಮಾಡಲಾಗಿತ್ತು. ಆದ್ರೆ ಈ ಮೊದಲೇ ಖಚಿತ ಮಾಹಿತಿಯ ಮೇರೆಗೆ ಸಿಸಿಬಿ ಅಧಿಕಾರಿಗಳಾದ ಬಿ.ಆರ್.ವೇಣುಗೋಪಾಲ್, ಬಿ.ಬಾಲರಾಜು ನೇತೃತ್ವದ ಎರಡು ತಂಡಗಳು ದಾಳಿ ನಡೆಸಿದ್ದವು. ದಾಳಿ ವೇಳೆ ಕಿಂಗ್‍ಪಿನ್ ಶಿವಕುಮಾರ್‍ನನ್ನು ಪ್ರಶ್ನೆ ಪತ್ರಿಕೆಗಳ ಸಹಿತ ಬಂಧಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv