Tag: ಪಿಎಂ ನರೇಂದ್ರ ಮೋದಿ

  • ಪಿಎಂ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ನೀಡಿದ ‘ಮಾಣಿಕ್ಯ’ ನಟಿ

    ಪಿಎಂ ನರೇಂದ್ರ ಮೋದಿಗೆ ಮದುವೆ ಆಮಂತ್ರಣ ನೀಡಿದ ‘ಮಾಣಿಕ್ಯ’ ನಟಿ

    ನ್ನಡದ ‘ಮಾಣಿಕ್ಯ’ ನಟಿ ವರಲಕ್ಷ್ಮಿ ಶರತ್‌ಕುಮಾರ್ (Varalaxmi Sarathkumar) ಸದ್ಯ ಮದುವೆಯ ಸಂಭ್ರಮದಲ್ಲಿದ್ದಾರೆ. ಸೌತ್‌ನ ಸ್ಟಾರ್ ನಟ, ನಟಿಯರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡೋದ್ರಲ್ಲಿ ಬ್ಯುಸಿಯಿದ್ದ ನಟಿ ಈಗ ಕುಟುಂಬ ಸಮೇತ ಪಿಎಂ ಆಫೀಸ್‌ಗೆ ಭೇಟಿ ನೀಡಿ ನರೇಂದ್ರ ಮೋದಿಗೆ (Narendra Modi) ಮದುವೆ ಆಮಂತ್ರಣ (Wedding Invite) ಪತ್ರಿಕೆ ನೀಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ನಟಿ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಗೆಳೆಯನ ದ್ರೋಹದ ಬಗ್ಗೆ ನೋವಿನ ಸಂಗತಿ ಬಿಚ್ಚಿಟ್ಟ ನಿವೇತಾ ಪೇತುರಾಜ್

    ನಮ್ಮ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಜೀ ಅವರನ್ನು ಭೇಟಿ ಮಾಡಿ ನಮ್ಮ ಮದುವೆಗೆ ಅವರನ್ನು ಆಹ್ವಾನಿಸಿದ್ದು ಎಂತಹ ಸೌಭಾಗ್ಯ. ಧನ್ಯವಾದಗಳು ತುಂಬಾ ಆತ್ಮೀಯ ಮತ್ತು ಸ್ವಾಗತಾರ್ಹ ಎಂದು ನಟಿ ಬರೆದುಕೊಂಡಿದ್ದಾರೆ. ನಿಮ್ಮ ಬಿಡುವಿಲ್ಲದ ವೇಳಾಪಟ್ಟಿಯ ಹೊರತಾಗಿಯೂ ನಿಮ್ಮ ಅಮೂಲ್ಯ ಸಮಯವನ್ನು ನಮ್ಮೊಂದಿಗೆ ಕಳೆದಿದ್ದೀರಿ. ನಿಜವಾಗಿಯೂ ನಿಮ್ಮ ಬಗ್ಗೆ ಹೆಚ್ಚು ಗೌರವವಿದೆ. ಇಂತಹ ಕ್ಷಣ ಸಾಧ್ಯ ಮಾಡಿದ ಅಪ್ಪ ಶರತ್ ಕುಮಾರ್ ಮತ್ತು ಅಮ್ಮ ರಾಧಿಕಾ ಶರತ್ ಕುಮಾರ್‌ಗೆ ಧನ್ಯವಾದಗಳು ಎಂದು ಮಾಣಿಕ್ಯ ನಟಿ ವರಲಕ್ಷ್ಮಿ ಸೋಷಿಯಲ್ ಮೀಡಿಯಾದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

    ವರಲಕ್ಷ್ಮಿ ಮತ್ತು ಉದ್ಯಮಿ ನಿಕೋಲಾಯ್ ಮದುವೆ ಜುಲೈ 2ರಂದು ಥೈಲ್ಯಾಂಡ್‌ನಲ್ಲಿ ಅದ್ಧೂರಿಯಾಗಿ ನಡೆಯಲಿದೆ. ನಟಿಯ ನಿವಾಸದಲ್ಲಿ ವಿವಾಹ ಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ನಡೆಯುತ್ತಿದೆ. ಈ ಮದುವೆ ಸಂಭ್ರಮಕ್ಕೆ ಸಾಕ್ಷಿಯಾಗಲು ಸ್ಟಾರ್ ನಟಿ ನಯನತಾರಾ ದಂಪತಿ, ರವಿತೇಜ, ತಮಿಳು ನಟ ಸಿದ್ಧಾರ್ಥ್, ಎ.ಆರ್ ಮುರುಗದಾಸ್, ಮುರಳಿ ಶರ್ಮಾ, ಸಮಂತಾ, ಕನ್ನಡದ ನಟ ಸುದೀಪ್ ಸೇರಿದಂತೆ ಅನೇಕರಿಗೆ ನಟಿ ಆಮಂತ್ರಣ ಪತ್ರಿಕೆ ನೀಡಿದ್ದಾರೆ.

    ಅಂದಹಾಗೆ, ಮಾಣಿಕ್ಯ ನಟಿ ವರಲಕ್ಷ್ಮಿ ಅವರು ಉದ್ಯಮಿ ನಿಕೋಲಾಯ್ ಜೊತೆ ಮಾರ್ಚ್ 1ರಂದು ನಿಶ್ಚಿತಾರ್ಥ ಅದ್ಧೂರಿಯಾಗಿ ಮಾಡಿಕೊಂಡಿದ್ದರು. ಹಲವು ವರ್ಷಗಳ ಪ್ರೀತಿಗೆ ಇಬ್ಬರೂ ಉಂಗುರದ ಮುದ್ರೆ ಒತ್ತಿದ್ದರು.

    ಇನ್ನೂ ‘ಮಾಣಿಕ್ಯ’ ಸಿನಿಮಾದ ನಂತರ ಮತ್ತೆ ಸುದೀಪ್ ಜೊತೆ ನಟಿ ಕೈಜೋಡಿಸಿದ್ದಾರೆ. ‘ಮ್ಯಾಕ್ಸ್’ ಸಿನಿಮಾದಲ್ಲಿ ನಟಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ತಿದ್ದಾರೆ.

  • ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ: ಅಚ್ಚರಿ ಹೇಳಿಕೆ ಕೊಟ್ಟ ಸವದಿ

    ಚಿಕ್ಕೋಡಿ: ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ ಎಂದು ಅಥಣಿಯಲ್ಲಿ ವಿಧಾನಪರಿಷತ್ ಸದಸ್ಯ ಲಕ್ಷ್ಮಣ್ ಸವದಿ ಅಚ್ಚರಿ ಹೇಳಿಕೆ ನೀಡಿದರು.

    ಅಗ್ನಿಪಥ್ ಯೋಜನೆ ಕುರಿತು ಇತ್ತೀಚೆಗೆ ಹಲವು ವಿವಾದಾತ್ಮಕ ಹೇಳಿಕೆಗಳು ಕೇಳಿಬರುತ್ತಿದೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಸವದಿ ಅವರು, ಅಗ್ನಿಪಥ್ ಯೋಜನೆಯನ್ನು ಕಾಂಗ್ರೆಸ್ ಸರ್ಕಾರ ರೂಪಿಸಿದೆ. ಕಳೆದ 30 ವರ್ಷದ ಹಿಂದೆ ಈ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಹೆಚ್ಚುತ್ತಿರುವ ಹಿನ್ನೆಲೆ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿದೆ. ಅಗ್ನಿಪಥ್ ಒಂದು ಒಳ್ಳೆಯ ಯೋಜನೆ. ಇದನ್ನು ಮುಂದಿಟ್ಟು ಯುವಕರನ್ನು ಕಟ್ಟಿಕೊಂಡು ಕಾಂಗ್ರೆಸ್ ಪ್ರತಿಭಟನೆಗೆ ಮುಂದಾಗುತ್ತಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ಮೋದಿ, ರಾಜನಾಥ್ ಸಿಂಗ್‍ಗೆ ಕರೆ ಮಾಡಿ ಬೆಂಬಲ ಕೋರಿದ ಯಶವಂತ್ ಸಿನ್ಹಾ

    ಮೋದಿ ಅವರಿಗೆ ಕುಟುಂಬ, ಮಕ್ಕಳು ಇಲ್ಲ. ದೇಶದ ಒಳಿತಿಗಾಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಹಗಲು-ರಾತ್ರಿಯೆನ್ನದೆ ದೇಶದ ಸೇವೆಯಲ್ಲಿ ತೊಡಗಿದ್ದಾರೆ ಎಂದು ಪ್ರಶಂಸಿಸಿದರು.

    Live Tv

  • ತೌಕ್ತೆ ಅಬ್ಬರ- ಹಡಗು ಮುಳುಗಡೆ 22 ಸಾವು, 188 ಜನರ ರಕ್ಷಣೆ, ಗುಜರಾತ್‍ನಲ್ಲಿ ಪ್ರಧಾನಿ ಮೋದಿ ಸಮೀಕ್ಷೆ

    ತೌಕ್ತೆ ಅಬ್ಬರ- ಹಡಗು ಮುಳುಗಡೆ 22 ಸಾವು, 188 ಜನರ ರಕ್ಷಣೆ, ಗುಜರಾತ್‍ನಲ್ಲಿ ಪ್ರಧಾನಿ ಮೋದಿ ಸಮೀಕ್ಷೆ

    – ಇಬನ್ನೂ 75 ಜನ ನಾಪತ್ತೆ, ಮುಂದುವರಿದ ನೌಕಾಪಡೆ ಕಾರ್ಯಾಚರಣೆ

    ನವದೆಹಲಿ: ಗುಜರಾತ್ ಹಾಗೂ ಮುಂಬೈನಲ್ಲಿ ತೌಕ್ತೆ ಅಬ್ಬರ ಹೆಚ್ಚಾಗಿದ್ದು, ಒಎನ್‍ಜಿಸಿಯ ಬಾರ್ಜ್ ಪಿ-305 ಹಡಗು ಮುಳುಗಡೆಯಾಗಿ 22 ಜನ ಸಾವನ್ನಪ್ಪಿದ್ದಾರೆ. 188 ಜನರನ್ನು ರಕ್ಷಣೆ ಮಾಡಲಾಗಿದ್ದು, 75 ಜನ ಸಿಬ್ಬಂದಿ ಕಾಣೆಯಾಗಿದ್ದಾರೆ. ಇತ್ತ ಗುಜರಾತ್‍ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಸುತ್ತಿದ್ದಾರೆ.

    ಗುಜರಾತ್ ಹಾಗೂ ಪಕ್ಕದ ಕೇಂದ್ರಾಡಳಿತ ಪ್ರದೇಶವಾಗಿರುವ ದಿಯುನಲ್ಲಿ ಹೆಲಿಕಾಪ್ಟರ್ ಮೂಲಕ ಸಮೀಕ್ಷೆ ನಡೆಸಿದ್ದಾರೆ. ಬಳಿಕ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಗುಜರಾತ್‍ನ ಗಿರ್-ಸೋಮನಾಥ್, ಭಾವನಗರ ಹಾಗೂ ಅಮ್ರೇಲಿ ಜಿಲ್ಲೆಗಳಲ್ಲಿ ಹಾಗೂ ದಿಯುನ ಹಲವು ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಿದ್ದಾರೆ. ಸರ್ವೇ ಬಳಿಕ ಅಹ್ಮದಾಬಾದ್‍ನಲ್ಲಿ ಪರಿಶೀಲನಾ ಸಭೆಯನ್ನು ಸಹ ನಡೆಸಿದ್ದಾರೆ.

    ತೌಕ್ತೆ ಮುಂಬೈನಲ್ಲಿ ಸಹ ಭಾರೀ ಅನಾಹುತ ಸೃಷ್ಟಿಸಿದ್ದು, ಮುಂಬೈನಿಂದ 35 ನಾಟಿಕಲ್ ಮೈಲಿ ದೂರದಲ್ಲಿ 261 ಜನರಿದ್ದ ಆಯಿಲ್ ಆ್ಯಂಡ್ ನ್ಯಾಚುರಲ್ ಗ್ಯಾಸ್ ಕಾರ್ಪೋರೇಷನ್(ಒಎನ್‍ಜಿಸಿ)ನ ಬಾರ್ಜ್ ಪಿ-305 ಹಡಗು ಮುಳುಗಡೆಯಾಗಿ 22 ಜನ ಸಾವನ್ನಪ್ಪಿದ್ದಾರೆ. ಇನ್ನೂ 57 ಜನ ಕಾಣೆಯಾಗಿದ್ದಾರೆ. 188 ಜನರನ್ನು ಈ ವರೆಗೆ ರಕ್ಷಣೆ ಮಾಡಲಾಗಿದೆ. ಭಾರತೀಯ ನೌಕಾಪಡೆ ಇನ್ನೂ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

    ಇದೀಗ ತೌಕ್ತೆ ಚಂಡಮಾರುತ ದುರ್ಬಲಗೊಂಡಿದ್ದು, ಬುಧವಾರ ಬೆಳಗ್ಗೆ ದಕ್ಷಿಣ ರಾಜಸ್ಥಾನ ಹಾಗೈ ಪಕ್ಕದ ಗುಜರಾತ್ ಪ್ರದೇಶಗಳಲ್ಲಿ ಅಬ್ಬರಿಸಿತ್ತು. ರಾಜಸ್ಥಾನದ ಉದಯಪುರದ ಪಶ್ಚಿಮ-ನೈಋತ್ಯದಲ್ಲಿ 60.ಕಿ.ಮೀ ಹಾಗೂ ಗುಜರಾತ್‍ನ 110 ಕಿ.ಮೀ.ದೂರದಲ್ಲಿ ದುರ್ಬಲಗೊಂಡಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

  • 5 ತಿಂಗಳ ಕೂಸಿನ ಪ್ರಾಣ ಉಳಿಸಲು 6 ಕೋಟಿ ತೆರಿಗೆ ಮನ್ನಾ ಮಾಡಿದ ಮೋದಿ ಸರ್ಕಾರ

    5 ತಿಂಗಳ ಕೂಸಿನ ಪ್ರಾಣ ಉಳಿಸಲು 6 ಕೋಟಿ ತೆರಿಗೆ ಮನ್ನಾ ಮಾಡಿದ ಮೋದಿ ಸರ್ಕಾರ

    ನವದೆಹಲಿ: ಐದು ತಿಂಗಳ ಕೂಸಿನ ಜೀವ ಉಳಿಸಲು ಕೇಂದ್ರ ಸರ್ಕಾರ ಬರೋಬ್ಬರಿ 6 ಕೋಟಿ ರೂ.ಗಳ ಆಮದು ಸುಂಕ ಹಾಗೂ ಜಿಎಸ್‍ಟಿಯನ್ನು ಮನ್ನಾ ಮಾಡಿದೆ. ಈ ಮೂಲಕ ಮಾನವೀಯತೆ ಮೆರೆದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಈ ವಿಚಾರವನ್ನು ಮಹಾರಾಷ್ಟ್ರ ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. 5 ತಿಂಗಳು ಕೂಸು ಟೀರಾ ಕಾಮತ್ ವಿಶ್ವದಲ್ಲಿ ಅಪರೂಪದಲ್ಲಿ ಅಪರೂಪವಾಗಿರುವ ಬೆನ್ನುಮೂಳೆಯ ಸ್ನಾಯು ಸಮಸ್ಯೆ(ಎಸ್‍ಎಂಎ) ಟೈಪ್-1 ಯಿಂದ ಬಳಲುತ್ತಿದ್ದಳು. ನರ ಕೋಶಗಳು ಸಂಪೂರ್ಣ ಸ್ಥಗಿತವಾಗಿ ಸ್ನಾಯುವಿನ ಮೇಲೆ ಶೂನ್ಯ ನಿಯಂತ್ರಣಕ್ಕೆ ಕಾರಣವಾಗಿತ್ತು. ಈಕೆ ಉಪನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

    ಟೀರಾ ಕಾಮತ್ ಪೋಷಕರಾದ ಪ್ರಿಯಾಂಕಾ ಹಾಗೂ ಮಿಹಿರ್ ಅವರು ಅಕ್ಟೋಬರ್ 2020ರಲ್ಲಿ ಹಾಗೂ ಬಳಿಕ ಜನವರಿ 2021ರಂದು ಆಕೆಯ ವೈದ್ಯಕೀಯ ಸ್ಥಿತಿಗತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಜೊತೆ ಹಂಚಿಕೊಂಡಿದ್ದರು. ಔಷಧಿ ಮೇಲಿನ ಆಮದು ಸುಂಕ ಹಾಗೂ ಜಿಎಸ್‍ಟಿಯನ್ನು ಮನ್ನಾ ಮಾಡುವಂತೆ ಮನವಿ ಮಾಡಿದ್ದರು.

     

    View this post on Instagram

     

    A post shared by TEERA M KAMAT (@teera_fights_sma)

    ಸ್ಪೈನಲ್ ಮಸಲ್ ಅಟ್ರೋಫಿಯ ಜೆನೆಟಿಕ್ ರೂಟ್(ಎಸ್‍ಎಂಎ)ಗೆ ಸಂಬಂಧಿಸಿದ ಜೊಲ್ಗೆನ್ಸ್ ಮಾ ಎಂಬ ಔಷಧಿಯನ್ನು ಅಮೆರಿಕದಿಂದ ಆಮದು ಮಾಡಿಕೊಳ್ಳಬೇಕಿತ್ತು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನವನ್ನೇ ಆರಂಭಿಸಲಾಗಿತ್ತು. ಶೇ.23ರಷ್ಟು ಆಮದು ಸುಂಕ ಹಾಗೂ ಶೇ.12ರಷ್ಟು ಜಿಎಸ್‍ಟಿ ಅಂದರೆ 6 ಕೋಟಿ ರೂ. ತೆರಿಗೆ ಹಾಗೂ 16 ಕೋಟಿ ರೂ. ಚಿಕಿತ್ಸಾ ವೆಚ್ಚವನ್ನು ಟೀರಾಳ ಪೋಷಕರು ಭರಿಸಬೇಕಿತ್ತು. ದಾನಿಗಳ ಸಹಾಯದಿಂದ 75 ದಿನಗಳಲ್ಲಿ 12 ಕೋಟಿ ರೂ. ಸಂಗ್ರಹಿಸಲು ಯಶಸ್ವಿಯಾಗಿದ್ದರು.

    ಇದಾದ ಬಳಿಕ ಆಮದು ಸುಂಕ ಹಾಗೂ ಜಿಎಸ್‍ಟಿಯನ್ನು ಮನ್ನಾ ಮಾಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದು ಗಮನ ಸೆಳೆದಿದ್ದರು. ಪೋಷಕರು ದಾನಿಗಳ ಸಹಾಯ ಹಾಗೂ ಸಾಲದ ರೂಪದಲ್ಲಿ ಹಣ ಪಡೆದರೂ ಆಮದು ಸುಂಕ ಹಾಗೂ ಜಿಎಸ್‍ಟಿ ಕಟ್ಟಲು ಅವರ ಬಳಿ ಹಣ ಇರಲಿಲ್ಲ. ಅಮೆರಿಕದಿಂದ ಭಾರತಕ್ಕೆ ಔಷಧಿ ತರಿಸಲು ಎಲ್ಲ ನಿಯಮ ಹಾಗೂ ಪತ್ರ ವ್ಯವಹಾರಗಳನ್ನು ಮುಗಿಸಿದ್ದರು. ಒಂದು ತಿಂಗಳಿಗೂ ಹೆಚ್ಚು ಕಾಲ ಪೋಷಕರು ಈ ಪತ್ರ ವ್ಯವಹಾರವನ್ನು ಪೂರ್ಣಗೊಳಿಸಿದ್ದರು.

    ಬಳಿಕ ಫೆಬ್ರವರಿ 1ರಂದು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಅವರು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು, ಆಮದು ಸುಂಕ ಹಾಗೂ ಜಿಎಸ್‍ಟಿ ರದ್ದು ಪಡಿಸುವಂತೆ ಕೇಳಿಕೊಂಡಿದ್ದರು. ಬಳಿಕ ಕೇಂದ್ರ ಸರ್ಕಾರ ಆಮದು ಸುಂಕ ಹಾಗೂ ತೆರಿಗೆಯನ್ನು ಮನ್ನಾ ಮಾಡಿ ಆದಷ್ಟು ಬೇಗ ಔಷಧಿ ಅಮೆರಿಕದಿಂದ ಭಾರತಕ್ಕೆ ಬರುವಂತೆ ಮಾಡಿತ್ತು. ಎಲ್ಲ ಕೆಲಸ ಆದ ಬಳಿಕ ಇದೀಗ ಫಡ್ನವಿಸ್ ಅವರು ಕೇಂದ್ರ ಸರ್ಕಾರಕ್ಕೆ ಧನ್ಯವಾದ ತಿಳಿಸಿ ಪತ್ರ ಬರೆದಿದ್ದಾರೆ.

  • ನಿಮ್ಮ ಗೋಯಲ್‍ಗೆ ಸರಿಯಾಗಿ ಕೆಲ್ಸ ಮಾಡೋಕೆ ಹೇಳಿ: ಮೋದಿಯನ್ನ ಕುಟುಕಿದ ಮಾಜಿ ಸಿಎಂ

    ನಿಮ್ಮ ಗೋಯಲ್‍ಗೆ ಸರಿಯಾಗಿ ಕೆಲ್ಸ ಮಾಡೋಕೆ ಹೇಳಿ: ಮೋದಿಯನ್ನ ಕುಟುಕಿದ ಮಾಜಿ ಸಿಎಂ

    ಬೆಂಗಳೂರು: ನಿಮ್ಮ ಪಿಯೂಷ್ ಗೋಯಲ್‍ಗೆ ಸರಿಯಾಗಿ ಕೆಲಸ ಮಾಡೋಕೆ ಹೇಳಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಪ್ರಧಾನಿ ನರೇಂದ್ರ ಮೋದಿ ಅವರನ್ನು ಕುಟುಕಿದ್ದಾರೆ.

    ಟ್ವೀಟ್ ಮೂಲಕ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ವಿರುದ್ಧ ಅಸಮಾಧಾನ ಹೊರ ಹಾಕಿರುವ ಮಾಜಿ ಸಿಎಂ, ರೈಲು ತಡವಾಗಿ ಆಗಮಿಸಿದ್ದರಿಂದ ನೂರಾರು ವಿದ್ಯಾರ್ಥಿಗಳಿಗೆ ನೀಟ್ ಪರೀಕ್ಷೆ ಬರೆಯುವ ಅವಕಾಶ ತಪ್ಪುವ ಸಂಭವವಿದೆ. ಹೀಗಾಗಿ ಕರ್ನಾಟಕದಲ್ಲಿ ನೀಟ್ ಮರು ಪರೀಕ್ಷೆಗೆ ಅವಕಾಶ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

    ಇತರರ ಸಾಧನೆಗಳಿಗೆ ನಿಮ್ಮ ಬೆನ್ನನ್ನು ನೀವೇ ತಟ್ಟಿಕೊಳ್ಳುತ್ತೀರಿ. ಆದರೆ ಈಗ ನಿಮ್ಮ ಕ್ಯಾಬಿನೆಟ್ ಸಚಿವರ ತಪ್ಪಿನ ಹೊಣೆಯನ್ನು ನೀವೇ ಹೊರಬೇಕು. ರೈಲು ಸೇವೆ ವಿಳಂಬದಿಂದಾಗಿ ಅನೇಕ ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಛಾಟಿ ಬೀಸಿದ್ದಾರೆ.

    ಬಳ್ಳಾರಿ, ಕೊಪ್ಪಳ ಸೇರಿದಂತೆ ವಿವಿಧ ಜಿಲ್ಲೆಯ ನೂರಾರು ವಿದ್ಯಾರ್ಥಿಗಳು ನೀಟ್ ಪರೀಕ್ಷೆ ಬರೆಯಲು ಹಂಪಿ ಎಕ್ಸ್‍ಪ್ರೆಸ್ ರೈಲು ಹೊಸಪೇಟೆ-ಗುಂತಕಲ್ ಮಾರ್ಗವಾಗಿ ಇಂದು ಬೆಂಗಳೂರಿಗೆ ಬರುತ್ತಿದ್ದರು. ಆದರೆ ರೈಲು ಮಾರ್ಗ ಸಮಸ್ಯೆಯಿಂದಾಗಿ ಚಿಕ್ಕಮಗಳೂರಿನ ಬಳ್ಳೆಕೆರೆಯಲ್ಲಿ ಮಾರ್ಗ ಬದಲಾವಣೆ ಮಾಡಲಾಗಿದೆ. ಹೀಗಾಗಿ ರೈಲು ಬೆಂಗಳೂರಿಗೆ ತಲುಪಲು ಮಧ್ಯಾಹ್ನ 2 ಗಂಟೆ ಆಗುತ್ತದೆ ಎಂದು ರೈಲ್ವೇ ಅಧಿಕಾರಿಗಳು ತಿಳಿಸಿದ್ದಾರೆ.

    ನೀಟ್ ಪರೀಕ್ಷೆಯು ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಆದರೆ ನಾವು ಬೆಂಗಳೂರಿಗೆ ತಲುಪಿ ಪರೀಕ್ಷಾ ಕೇಂದ್ರಕ್ಕೆ ಹೋಗುವ ವೇಳೆಗೆ ಪರೀಕ್ಷೆ ಮುಗಿದಿರುತ್ತದೆ. ಹೀಗೆ ಆಗುತ್ತದೆ ಎಂದು ನಾವು ಊಹೆ ಕೂಡ ಮಾಡಿರಲಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

  • ಚುನಾವಣೆ ಮುಗಿಯುವವರೆಗೂ ಮೋದಿ ಚಿತ್ರ ಬಿಡುಗಡೆ ಮಾಡುವಂತಿಲ್ಲ

    ಚುನಾವಣೆ ಮುಗಿಯುವವರೆಗೂ ಮೋದಿ ಚಿತ್ರ ಬಿಡುಗಡೆ ಮಾಡುವಂತಿಲ್ಲ

    – ನಿರ್ಮಾಪಕರಿಗೆ ಚುನಾವಣಾ ಆಯೋಗ ಆದೇಶ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಾಧಾರಿತ ಸಿನಿಮಾ ‘ಪಿಎಂ ನರೇಂದ್ರ ಮೋದಿ’ ಬಿಡುಗಡೆಗೆ ಚುನಾವಣಾ ಆಯೋಗ ಬುಧವಾರ ತಡೆಯಾಜ್ಞೆ ಹೇರಿದೆ. ಲೋಕಸಭಾ ಚುನಾವಣೆ ಮುಗಿಯುವವರೆಗೂ ಚಿತ್ರವನ್ನು ಬಿಡುಗಡೆ ಮಾಡಬಾರದು ಎಂದು ಆದೇಶಿಸಿದೆ.

    ಜೀವನಾಧಾರಿತ ಸಿನಿಮಾಗಳು ಚುನಾವಣೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಗಳಿವೆ. ಹೀಗಾಗಿ ಚುನಾವಣಾ ಸಮಯದಲ್ಲಿ ರಾಜಕೀಯ ನಾಯಕರ ಜೀವನಾಧಾರಿತ ಸಿನಿಮಾ, ಸಿನಿಮಾಟೋಗ್ರಾಫ್ ಗಳನ್ನು ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ತಿಳಿಸಿದೆ.

    ಈ ಹಿಂದೆ ಆಗಿದ್ದೇನು?:
    ಪಿಎಂ ನರೇಂದ್ರ ಮೋದಿ ಸಿನಿಮಾವನ್ನು ಮೊದಲ ಹಂತದ ಮತದಾನ ನಡೆಯಲಿರುವ ಏಪ್ರಿಲ್ 11ರಂದು ಚಿತ್ರ ಬಿಡುಗಡೆ ಮಾಡುವುದಾಗಿ ನಿರ್ಮಾಪಕರು ಪ್ರಕಟಿಸಿದ್ದರು. ಈ ಸಿನಿಮಾ ಮತದಾರರ ಮೇಲೆ ಪ್ರಭಾವ ಬೀರಲಿದೆ. ಹೀಗಾಗಿ ಚಿತ್ರ ಬಿಡುಗಡೆಗೆ ತಡೆ ನೀಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತ ಅಮಾನ್ ಪನ್ವರ್ ಆಗ್ರಹಿಸಿ ಕೋರ್ಟ್ ಮೆಟ್ಟಿಲೇರಿದ್ದರು.

    ಈ ಸಂಬಂಧ ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ, ಸಿನಿಮಾ ಬಿಡುಗಡೆಗೆ ತಡೆ ನೀಡಲು ಮಂಗಳವಾರ ನಿರಾಕರಿಸಿತ್ತು. ಇದೊಂದು ವಿವಾದದ ವಿಷಯವೇ ಅಲ್ಲ ಎಂದು ಅಭಿಪ್ರಾಯಪಟ್ಟ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ತ್ರಿಸದಸ್ಯ ಪೀಠವು, ಕೇವಲ ಎರಡು ಪ್ರೋಮೊ ನೋಡಿ ಇಡೀ ಚಿತ್ರದ ಬಗ್ಗೆ ಅಭಿಪ್ರಾಯಕ್ಕೆ ಬರಲಾಗದು. ಅರ್ಜಿದಾರರು ಬೇಕಿದ್ದರೆ ಚುನಾವಣಾ ಆಯೋಗದ ಮೊರೆ ಹೋಗಬಹುದು ಎಂದು ತಿಳಿಸಿದ್ದರು.

    ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದು, `ಮೇರಿ ಕೋಮ್’, ಸರಬ್ಜಿತ್ ಸಿಂಗ್ ಜೀವನಾಧಾರಿತ ಸಿನಿಮಾಗಳನ್ನು ಯಶಸ್ವಿಯಾಗಿ ನಿರ್ದೇಶನ ಮಾಡಿದ್ದ ಒಮಂಗ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೋದಿ ಅವರ ಜೀವನದಲ್ಲಿ ನಡೆದ ಪ್ರಮುಖ ಘಟನೆಗಳೊಂದಿಗೆ ಗುಜರಾತ್ ಸಿಎಂ ಆದ ಬಳಿಕ ಮಾಡಿದ ಸಾಧನೆಗಳಿಂದ ಪ್ರಧಾನಿಯಾಗುವ ಅವಧಿಯ ಜೀವನವನ್ನು ಆಧಾರಿಸಿದೆ. ಸಿನಿಮಾದ ಪೋಸ್ಟರ್ ಒಂದನ್ನೇ 27 ಭಾಷೆಗಳಲ್ಲಿ ಚಿತ್ರತಂಡ ಬಿಡುಗಡೆ ಮಾಡಿತ್ತು.

  • ಮೋದಿ ಜೀವನಾಧಾರಿತ ಸಿನಿಮಾ ಬಿಡುಗಡೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

    ಮೋದಿ ಜೀವನಾಧಾರಿತ ಸಿನಿಮಾ ಬಿಡುಗಡೆ ತಡೆ ಕೋರಿ ಹೈಕೋರ್ಟಿಗೆ ಅರ್ಜಿ

    ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಜೀವನಾಧಾರಿತವಾಗಿ ನಿರ್ಮಾಣ ಆಗಿರುವ ‘ಪಿಎಂ ನರೇಂದ್ರ ಮೋದಿ’ ಸಿನಿಮಾವನ್ನು ರಾಜ್ಯದಲ್ಲಿ ಬಿಡುಗಡೆಗೆ ತಡೆ ಕೋರಿ ವಕೀಲರೊಬ್ಬರು ರಾಜ್ಯ ಹೈಕೋರ್ಟಿನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.

    ವಕೀಲ ರಮೇಶ್ ನಾಯ್ಕ್ ಎಂಬುವವರಿಂದ ರಿಟ್ ಅರ್ಜಿ ಸಲ್ಲಿಕೆಯಾಗಿದ್ದು, ಈ ಸಿನಿಮಾ ಪ್ರಧಾನಿ ನರೇಂದ್ರ ಮೋದಿಯವರ ಜೀವನಾಧರಿತ ಕಥೆಯಾಗಿದೆ. ಅದ್ದರಿಂದ ಚಿತ್ರ ಬಿಡುಗಡೆ ಆಗುವುದರಿಂದ ಮತದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಇದರಿಂದ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗಲಿದೆ ಎಂದು ಅರ್ಜಿಯಲ್ಲಿ ವಿವರಿಸಿದ್ದಾರೆ.

    ಏಪ್ರಿಲ್ 12ಕ್ಕೆ ಪಿಎಂ ನರೇಂದ್ರ ಮೋದಿ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದ್ದು, ಚುನಾವಣೆ ಮುಗಿಯುವ ತನಕ ಬಿಡುಗಡೆಗೆ ತಡೆ ನೀಡಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ. ವಕೀಲರ ಅರ್ಜಿ ಸದ್ಯದಲ್ಲೇ ಹೈಕೋರ್ಟ್ ನಲ್ಲಿ ವಿಚಾರಣೆಗೆ ಬರುವ ಸಾಧ್ಯತೆ ಇದೆ.

    ಸಿನಿಮಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ವಿವೇಕ್ ಒಬೇರಾಯ್ ಕಾಣಿಸಿಕೊಂಡಿದ್ದು, ‘ಮೇರಿ ಕೋಮ್’, ಸರಬ್ಜಿತ್ ಸಿಂಗ್ ಜೀವನಾಧಾರಿತ ಸಿನಿಮಾಗಳನ್ನು ಯಶಸ್ವಿಯಾಗಿ ನಿರ್ದೇಶನ ಮಾಡಿದ್ದ ಒಮಂಗ್ ಕುಮಾರ್ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಮೋದಿ ಅವರ ಜೀವನದಲ್ಲಿ ನಡೆದ ಪ್ರಮುಖ ಘಟನೆಗಳೊಂದಿಗೆ ಗುಜರಾತ್ ಸಿಎಂ ಆದ ಬಳಿಕ ಮಾಡಿದ ಸಾಧನೆಗಳಿಂದ ಪ್ರಧಾನಿಯಾಗುವ ಅವಧಿಯ ಜೀವನವನ್ನು ಆಧಾರಿಸಿದೆ. ಸಿನಿಮಾದ ಪೋಸ್ಟರ್ ಒಂದನ್ನೇ 27 ಭಾಷೆಗಳಲ್ಲಿ ಚಿತ್ರತಂಡ ಬಿಡುಗಡೆ ಮಾಡಿತ್ತು.

  • ಮೋದಿ ಸ್ವಾತಂತ್ರ್ಯ ತಂದುಕೊಟ್ಟಿದ್ದನ್ನೇ ಟ್ರೈಲರ್‌ನಲ್ಲಿ ಬಿಟ್ಟಿದ್ದಾರೆ: ನಟ ಸಿದ್ಧಾರ್ಥ ಟಾಂಗ್

    ಮೋದಿ ಸ್ವಾತಂತ್ರ್ಯ ತಂದುಕೊಟ್ಟಿದ್ದನ್ನೇ ಟ್ರೈಲರ್‌ನಲ್ಲಿ ಬಿಟ್ಟಿದ್ದಾರೆ: ನಟ ಸಿದ್ಧಾರ್ಥ ಟಾಂಗ್

    ಬೆಂಗಳೂರು: ಎಲ್ಲವನ್ನೂ ತಾವೇ ಮಾಡಿದ್ದಾಗಿ ಹೇಳಿಕೊಳ್ಳುವ ಪ್ರಧಾನಿ ಮೋದಿ ಅವರೇ ಸ್ವಾತಂತ್ರ್ಯ ತಂದುಕೊಟ್ಟಿದ್ದಾರೆಂದು ‘ಪಿಎಂ ನರೇಂದ್ರ ಮೋದಿ’ ಸಿನಿಮಾದಲ್ಲಿ ತೋರಿಸಬೇಕಿತ್ತು ಎಂದು ತಮಿಳು ಭಾಷಾ ನಟ ಸಿದ್ಧಾರ್ಥ ವ್ಯಂಗ್ಯವಾಡಿದ್ದಾರೆ.

    ‘ರಂಗ್ ದೇ ಬಸಂತಿ’ ದೇಶಭಕ್ತಿ ಚಿತ್ರದಲ್ಲಿ ನಟಿಸಿದ್ದ ಸಿದ್ಧಾರ್ಥ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ‘ಪಿಎಂ ನರೇಂದ್ರ ಮೋದಿ’ ಸಿನಿಮಾದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    https://twitter.com/Actor_Siddharth/status/1108529874669654016

    ಟ್ವೀಟ್‍ನಲ್ಲಿ ಏನಿದೆ?:
    ಬ್ರಿಟಿಷ್ ಸಾಮ್ರಾಜ್ಯದ ವಿರುದ್ಧ ಪ್ರಧಾನಿ ಮೋದಿ ಅವರು ಏಕಾಂಗಿಯಾಗಿ ಹೇಗೆ ಹೋರಾಡಿ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟರೆಂದು ತೋರಿಸುವುದನ್ನು ಚಿತ್ರ ತಂಡ ಮರೆತಿದೆ. ಒಂದು ವೇಳೆ ಅದನ್ನು ತೋರಿಸಿದ್ದರೆ ಜಾತ್ಯಾತೀತತೆ, ಕಮ್ಯೂನಿಸ್ಟ್, ನಕ್ಸಲರ ಮತ್ತು ಮಾಜಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಕಾಲೆಳೆಯಬಹುದಿತ್ತು ಎಂದು ಸಿದ್ಧಾರ್ಥ ವ್ಯಂಗ್ಯವಾಡಿದ್ದಾರೆ.

    https://twitter.com/Actor_Siddharth/status/1108534625423351808

    ‘ಪಿಎಂ ನರೇಂದ್ರ ಮೋದಿ’ ಸಿನಿಮಾಗಳಂತಹ ಬಯೋಪಿಕ್ ಮಾಡುವ ನಮ್ಮ ನಿರ್ಮಾಪಕರ ಪ್ರಾಮಾಣಿಕತೆ ನೋಡಿ. ಈ ಸಿನಿಮಾದ ಮೂಲಕ ನೀವು ಜನರ ಮನಸ್ಸನ್ನು ಬದಲಾಯಿಸಲು ಪ್ರಯತ್ನಿಸಬಹುದು. ಆದರೆ ನಿಮ್ಮ ಇತಿಹಾಸವನ್ನು ಮರೆಸಲು ಸಾಧ್ಯವಿಲ್ಲ ಎಂದು ಸಿದ್ಧಾರ್ಥ ಅಸಮಾಧಾನ ಹೊರಹಾಕಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಜೀವನಾಧರಿತ ಸಿನಿಮಾದ ಟ್ರೈಲರ್ ಬುಧವಾರ ಬಿಡುಗಡೆಯಾಗಿದೆ. ಈ ಸಿನಿಮಾದಲ್ಲಿ ನಟ ವಿವೇಕ್ ಒಬೇರಾಯ್ ಅವರು ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಭಾರೀ ನಿರೀಕ್ಷೆಯಲ್ಲಿರುವ ‘ಪಿಎಂ ನರೇಂದ್ರ ಮೋದಿ’ ಸಿನಿಮಾ ಏಪ್ರಿಲ್ 12ಕ್ಕೆ ಬಿಡುಗಡೆಯಾಗಲಿದೆ.

    https://twitter.com/Actor_Siddharth/status/1108537225736654850

  • ಪ್ರಧಾನಿ ಜೀವನಚರಿತ್ರೆಗೆ ವಿವೇಕ್ ಓಬೆರಾಯ್ ಯಾಕೆ ಬೆಸ್ಟ್: ಸಂದೀಪ್ ಎಸ್ ಸಿಂಗ್ ಸ್ಪಷ್ಟನೆ

    ಪ್ರಧಾನಿ ಜೀವನಚರಿತ್ರೆಗೆ ವಿವೇಕ್ ಓಬೆರಾಯ್ ಯಾಕೆ ಬೆಸ್ಟ್: ಸಂದೀಪ್ ಎಸ್ ಸಿಂಗ್ ಸ್ಪಷ್ಟನೆ

    ಮುಂಬೈ: ಪ್ರಧಾನಿ ಮೋದಿ ಅವರ ಜೀವಚರಿತ್ರೆ ಆಧಾರಿತ `ಪಿಎಂ ನರೇಂದ್ರ ಮೋದಿ’ ಸಿನಿಮಾಕ್ಕೆ ವಿವೇಕ್ ಒಬೆರಾಯ್ ಅವರನ್ನು ಯಾಕೆ ಆಯ್ಕೆ ಮಾಡಲಾಯ್ತು ಎನ್ನುವ ಪ್ರಶ್ನೆಗೆ ಚಿತ್ರದ ನಿರ್ಮಾಪಕ ಸಂದೀಪ್ ಎಸ್. ಸಿಂಗ್ ಉತ್ತರಿಸಿದ್ದಾರೆ.

    ಸೋಮವಾರದಂದು ಬಿಡುಗಡೆಯಾದ `ಪಿಎಂ ನರೇಂದ್ರ ಮೋದಿ’ ಸಿನಿಮಾದ ಮೊದಲ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಸದ್ದು ಮಾಡುತ್ತಿದೆ. ಈ ಚಿತ್ರಕ್ಕೆ ವಿವೇಕ್ ಓಬೆರಾಯ್ ಸೂಕ್ತ ಅಲ್ಲ ಎಂದು ಹಲವರು ಟೀಕಿಸಿದ್ದಾರೆ. ಆದರಿಂದ ಜನರಿಗೆ ಯಾಕೆ ವಿವೇಕ್ ಅವರನ್ನೇ ಈ ಚಿತ್ರಕ್ಕೆ ಆಯ್ಕೆ ಮಾಡಲಾಯ್ತು ಎಂದು ನಿರ್ಮಾಪಕರು ತಿಳಿಸಿದ್ದಾರೆ.

    ಮಂಗಳವಾರ ಖಾಸಗಿ ಚಾನೆಲ್‍ವೊಂದರ ಸಂದರ್ಶನದಲ್ಲಿ ಈ ಕುರಿತು ಮಾತನಾಡಿ, ಈ ಚಿತ್ರದಲ್ಲಿ ಏನೇನು ಇರಬೇಕು, ಯಾವ ನಟರು ಮುಖ್ಯ ಪಾತ್ರಕ್ಕೆ ಸೂಕ್ತ ಎಂದು ಸೆಟ್ ಮಾಡಲು ನನಗೆ ಮೂರು ವರ್ಷ ಬೇಕಾಯ್ತು. ಚಿತ್ರದ ಬಗ್ಗೆ ಮೊದಲು ವಿವೇಕ್ ಅವರನ್ನು ಕೇಳಿದಕ್ಕೆ ತಕ್ಷಣ ಅವರು ನಟಿಸಲು ಒಪ್ಪಿಕೊಂಡರು. ಅವರಂತಹ ಪ್ರತಿಭಾವಂತ ನಟರೇ ನನಗೆ ಬೇಕಾಗಿತ್ತು. ಅವರಿಗೆ 18 ವರ್ಷ ಚಿತ್ರರಂಗದಲ್ಲಿ ನಟನೆಯ ಅನುಭವವಿದೆ. ಮೊದಲ ಚಿತ್ರದಲ್ಲೇ ವಿವೇಕ್ ಅವರ ಉತ್ತಮ ನಟನೆಯಿಂದ ಎಲ್ಲರ ಗಮನ ಸೆಳೆದವರು. ಶೃದ್ಧೆಯಿಂದ ನಟನೆ ಮಾಡುತ್ತಾರೆ. ಅವರು ಮೋದಿಯವರ ಪಾತ್ರವನ್ನು ಚೆನ್ನಾಗಿ ನಿಭಾಯಿಸಬಲ್ಲರು ಎಂಬ ನಂಬಿಕೆ ನನಗಿದೆ ಎಂದು ಹೇಳಿದರು.

    ಈ ಚಿತ್ರದ ಮೊದಲ ಪೋಸ್ಟರ್‍ವೊಂದಕ್ಕೆ ನಟ ವಿವೇಕ್ ಓಬೆರಾಯ್ ಸತತ 7 ಗಂಟೆ ಮೇಕಪ್ ಮಾಡಿಕೊಂಡು ಸುಮಾರು 15 ಲುಕ್‍ಗಳಲ್ಲಿ ಪೋಸ್ ಕೊಟ್ಟಿದ್ದಾರೆ. ಈ ಚಿತ್ರಕ್ಕಾಗಿ ಬಹಳ ಶೃದ್ಧೆಯಿಂದ ಕೆಲಸ ಮಾಡುತ್ತಿದ್ದಾರೆ. ಇಂತಹ ಅತ್ಯುತ್ತಮ ಪ್ರತಿಭೆಯನ್ನು ಟೀಕಿಸುವುದು ಸರಿಯಲ್ಲ ಎಂದರು. ಹಾಗೆಯೇ ಜನವರಿ ಮಧ್ಯದಲ್ಲಿ ಈ ಚಿತ್ರದ ಶೂಟಿಂಗ್ ಆರಂಭವಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.

    ಇತ್ತೀಚಿಗಷ್ಟೆ `ದಿ ಆಕ್ಸಿಡೆಂಟೆಲ್ ಪ್ರೈಮ್ ಮಿನಿಸ್ಟರ್’ ಸಿನಿಮಾದ ಟ್ರೇಲರ್ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದ್ದು, ಈ ಚಿತ್ರದ ವಿರುದ್ಧ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆಯೇ ಮತ್ತೆ ರಾಜಕೀಯ ವಲಯದಲ್ಲಿ ಸದ್ದು ಮಾಡಲು `ಪಿಎಂ ನರೇಂದ್ರ ಮೋದಿ’ ಸಿನಿಮಾ ತಯಾರಾಗ್ತಿದೆ.

    ಈ ಚಿತ್ರದಲ್ಲಿ ನರೇಂದ್ರ ಮೋದಿ ಅವರ ಪಾತ್ರದಲ್ಲಿ ವಿವೇಕ್ ಓಬೆರಾಯ್ ನಟಿಸುತ್ತಿದ್ದಾರೆ. ಚಿತ್ರವನ್ನು ಓಮಂಗ್ ಕುಮಾರ್ ನಿರ್ದೇಶಿಸುತ್ತಿದ್ದು, ಸುರೇಶ್ ಓಬೆರಾಯ್ ಹಾಗೂ ಸಂದೀಪ್ ಎಸ್. ಸಿಂಗ್ ನಿರ್ಮಿಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv