Tag: ಪಿಎಂ ಮೋದಿ

  • ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    ಕೊನೆಗೂ ಭಾರತದ ಮುಂದೆ ಮಂಡಿಯೂರಿದ ಪಾಕ್‌ – ಶಾಂತಿ ಮಾತುಕತೆಗೆ ಪಾಕ್‌ ಪ್ರಧಾನಿ ಆಹ್ವಾನ

    – ಪಾಕಿಸ್ತಾನ ಶಾಂತಿಗಾಗಿ ತೊಡಗಿಸಿಕೊಳ್ಳು ಸಿದ್ಧ: ಶೆಹಬಾಜ್‌ ಷರೀಫ್‌

    ಇಸ್ಲಾಮಾಬಾದ್: ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ನಡೆದ ‘ಆಪರೇಷನ್‌ ಸಿಂಧೂರ’ (Operation Sindoor) ಕಾರ್ಯಾಚರಣೆಯಲ್ಲಿ ತತ್ತರಿಸಿದ ಪಾಕಿಸ್ತಾನ (Pakistan) ಕೊನೆಗೂ ಭಾರತದ (India) ಮುಂದೆ ಮಂಡಿಯೂರಿದೆ. ಪಾಕಿಸ್ತಾನ ಶಾಂತಿಗಾಗಿ ತೊಡಗಿಸಿಕೊಳ್ಳಲು ಸಿದ್ಧವಾಗಿದೆ ಎಂದು ಪ್ರಧಾನಿ ಶೆಹಬಾಜ್‌ ಶರೀಫ್‌ ಭಾರತದ ಮುಂದೆ ಮಾತುಕತೆ ಪ್ರಸ್ತಾಪ ಇಟ್ಟಿದ್ದಾರೆ.

    ಭಾರತದೊಂದಿಗಿನ ಮಿಲಿಟರಿ ಮುಖಾಮುಖಿಯಲ್ಲಿ ಭಾಗಿಯಾಗಿದ್ದ ಅಧಿಕಾರಿಗಳು ಮತ್ತು ಸೈನಿಕರೊಂದಿಗೆ ಸಂವಾದ ನಡೆಸಲು ಗುರುವಾರ ಪಂಜಾಬ್ ಪ್ರಾಂತ್ಯದ ಕಮ್ರಾ ವಾಯುನೆಲೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶೆಹಬಾಜ್ ಈ ಹೇಳಿಕೆಗಳನ್ನು ನೀಡಿದ್ದಾರೆ. ಇದನ್ನೂ ಓದಿ: ಡಮ್ಮಿ ಜೆಟ್‌, 15 ಬ್ರಹ್ಮೋಸ್‌ ಕ್ಷಿಪಣಿ ದಾಳಿ, 11 ಏರ್‌ಬೇಸ್‌ ಧ್ವಂಸ – ಪಾಕ್‌ ಕರೆಯ ಹಿಂದಿದೆ ಭಾರತದ ಪರಾಕ್ರಮದ ಕಥೆ

    ಶಾಂತಿಗಾಗಿ ನಾವು ಅದರೊಂದಿಗೆ (ಭಾರತ) ಮಾತುಕತೆಗೆ ಸಿದ್ಧರಿದ್ದೇವೆ. ಶಾಂತಿಗಾಗಿ ಷರತ್ತುಗಳು ಕಾಶ್ಮೀರ ಸಮಸ್ಯೆಯನ್ನೂ ಒಳಗೊಂಡಿವೆ ಎಂದು ಶೆಹಬಾಜ್‌ (Shehbaz Sharif) ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳು ಯಾವಾಗಲೂ ಭಾರತದ ಅವಿಭಾಜ್ಯ ಮತ್ತು ಬೇರ್ಪಡಿಸಲಾಗದ ಭಾಗಗಳಾಗಿರುತ್ತವೆ ಎಂದು ಭಾರತ ಈಗಾಗಲೇ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಮೊದಲು ಉಗ್ರರನ್ನು ಹಸ್ತಾಂತರಿಸಿ – ಪಾಕ್‌ನ ಸಿಂಧೂ ನದಿ ಒಪ್ಪಂದ ಮನವಿಗೆ ಜೈಶಂಕರ್‌ ಮಾತು

    ಶೆಹಬಾಜ್ ಅವರೊಂದಿಗೆ ಉಪ ಪ್ರಧಾನಿ ಇಶಾಕ್ ದಾರ್, ರಕ್ಷಣಾ ಸಚಿವ ಖವಾಜಾ ಆಸಿಫ್, ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್, ವಾಯುಪಡೆಯ ಮುಖ್ಯಸ್ಥ, ವಾಯುಪಡೆ ಮುಖ್ಯಸ್ಥ ಮಾರ್ಷಲ್ ಜಹೀರ್ ಅಹ್ಮದ್ ಬಾಬರ್ ಸಿಧು ಕೂಡ ಗುರುವಾರ ವಾಯುನೆಲೆಗೆ ಬಂದಿದ್ದರು.

    ಪಹಲ್ಗಾಮ್‌ ಭಯೋತ್ಪಾದಕ ದಾಳಿಯಿಂದಾಗಿ 26 ಪ್ರವಾಸಿಗರು ಪ್ರಾಣ ಕಳೆದುಕೊಂಡರು. ಇದಕ್ಕೆ ಪ್ರತೀಕಾರವಾಗಿ ಉಗ್ರರ ವಿರುದ್ಧ ಭಾರತ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ನಡೆಸಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳನ್ನು ಗುರಿಯಾಗಿಸಿಕೊಂಡು ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತರಾಗಿದ್ದಾರೆ. ಇದನ್ನೂ ಓದಿ: ಈಗ U Turn – ಕದನ ವಿರಾಮ ಬಿಲ್ಡಪ್ ಕೊಟ್ಟು ಈಗ ತಣ್ಣಗಾದ ಟ್ರಂಪ್‌!

    ನಂತರ ಪಾಕಿಸ್ತಾನವು ಮೇ 8, 9 ಮತ್ತು 10 ರಂದು ಹಲವಾರು ಭಾರತೀಯ ಸೇನಾ ನೆಲೆಗಳ ಮೇಲೆ ದಾಳಿ ಮಾಡಲು ಪ್ರಯತ್ನಿಸಿತು. ಪ್ರತ್ಯುತ್ತರವಾಗಿ ಭಾರತೀಯ ಸಶಸ್ತ್ರ ಪಡೆಗಳು ರಫೀಕಿ, ಮುರಿಯದ್, ಚಕ್ಲಾಲಾ, ರಹೀಮ್ ಯಾರ್ ಖಾನ್, ಸುಕ್ಕೂರ್ ಮತ್ತು ಚುನಿಯನ್ ಸೇರಿದಂತೆ ಹಲವಾರು ಪಾಕಿಸ್ತಾನಿ ಮಿಲಿಟರಿ ನೆಲೆಗಳ ಮೇಲೆ ಭೀಕರ ಪ್ರತಿದಾಳಿ ನಡೆಸಿದವು.

  • ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

    ಮೋದಿಗೆ ಟಕ್ಕರ್‌ ಕೊಡಲು ಹೋಗಿ ನಗೆಪಾಟಲು – ಧ್ವಂಸಗೊಂಡ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಪಾಕ್‌ ಪ್ರಧಾನಿ ಸಂವಾದ

    ಇಸ್ಲಾಮಾಬಾದ್‌: ಪ್ರಧಾನಿ ನರೇಂದ್ರ ಮೋದಿ (PM Modi) ಭಾಷಣಕ್ಕೆ ಟಕ್ಕರ್‌ ಕೊಡಲು ಹೋಗಿ ಮತ್ತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ನಗೆಪಾಟಲಿಗೀಡಾದ್ದಾರೆ. ಧ್ವಂಸಗೊಂಡಿದ್ದ ಏರ್‌ಫೀಲ್ಡ್‌ ಮುಚ್ಚಿಕೊಳ್ಳಲು ಮೈದಾನದಲ್ಲಿ ಸಂವಾದ ನಡೆಸಿ ಟ್ರೋಲ್‌ ಆಗಿದ್ದಾರೆ.

    ಭಾರತದ ಅದಂಪುರ ವಾಯುನೆಲೆಯನ್ನು ಧ್ವಂಸಗೊಳಿಸಿದ್ದೇವೆಂದು ಪಾಕ್‌ ಸುಳ್ಳು ಸುದ್ದಿ ಹರಿಬಿಟ್ಟಿತ್ತು. ಅದೇ ಸ್ಥಳಕ್ಕೆ ಭೇಟಿ ನೀಡಿ ಸೈನಿಕರೊಂದಿಗೆ ಮಾತನಾಡಿ ಪ್ರಧಾನಿ ಮೋದಿ ಅವರು ಪಾಕ್‌ಗೆ ತಿರುಗೇಟು ಕೊಟ್ಟಿದ್ದರು. ಈಗ ಭಾರತದ ವಿರುದ್ಧದ ಕಾರ್ಯಾಚರಣೆಯಲ್ಲಿ ಭಾಗಿಯಾದ ಸೈನಿಕರನ್ನು ಪಾಕ್‌ ಪ್ರಧಾನಿ ಭೇಟಿಯಾಗಿದ್ದಾರೆ. ಇದು ಪ್ರಧಾನಿ ಮೋದಿ ಅವರ ನಕಲು ಎಂದು ನೆಟ್ಟಿಗರು ಟ್ರೋಲ್‌ ಮಾಡುತ್ತಿದ್ದಾರೆ. ಇದನ್ನೂ ಓದಿ: ರಾಕ್ಷಸ ರಾಷ್ಟ್ರದ ಕೈಯಲ್ಲಿ ಪರಮಾಣು ಶಸ್ತ್ರಾಸ್ತ್ರಗಳು ಸುರಕ್ಷಿತವೇ? – ರಾಜನಾಥ್ ಸಿಂಗ್

    ಡ್ಯಾಮೇಜ್ ಆಗಿರುವ ಏರ್‌ಫೀಲ್ಡ್ ಮುಚ್ಚಿಕೊಳ್ಳಲು ಮೈದಾನದಂತಹ ಜಾಗದಲ್ಲಿ ಸೈನಿಕರ ಜೊತೆ ಶೆಹಬಾಜ್‌ ಷರೀಫ್‌ ಸಂವಾದ ನಡೆಸಿದ್ದಾರೆ. ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತೆ ವರ್ತಿಸಿ ಸಂವಾದದ ವೀಡಿಯೋ ರಿಲೀಸ್‌ ಮಾಡಿದ್ದಾರೆ.

    ಪ್ರಧಾನಿ ಮೋದಿ ಅದಂಪುರ ವಾಯುನೆಲೆಯಲ್ಲಿ ಸೈನಿಕರನ್ನುದ್ದೇಶಿಸಿ ಮಾತಾನಾಡಿ ಜೈಕಾರ ಕೂಗಿದ್ದರು. ಅದನ್ನು ಅನುಕರಿಸಲು ಹೋಗಿ ಪಾಕ್‌ ಪ್ರಧಾನಿ ನಗೆಪಾಟಲಿಗೀಡಾಗಿದ್ದಾರೆ. ಗುಡ್ಡಗಾಡು ಬೆಟ್ಟದ ಮಧ್ಯೆ ಕಾಣುವ ಮೈದಾನದಂತಹ ಜಾಗದಲ್ಲಿ ಪಾಕ್ ಪ್ರಧಾನಿ, ಪಾಕ್‌ನ ಸೇನಾ ಮುಖ್ಯಸ್ಥ ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಭಾರತದ ದಾಳಿ ನಂತ್ರ ಪಾಕ್‌ನಲ್ಲಿ ಪರಮಾಣು ವಿಕಿರಣ ಸೋರಿಕೆ ಆಗ್ತಿದ್ಯಾ? ಮತ್ತೆ ಜಗತ್ತಿನ ಮುಂದೆ ಬೆತ್ತಲಾದ ಪಾಕ್‌

    ಡ್ಯಾಮೇಜ್ ಆಗಿರುವ ಏರ್‌ಪೀಲ್ಡ್‌ನಲ್ಲಿ ಸಂವಾದ ಮಾಡಿದರೆ ಮರ್ಯಾದೆ ಪೂರ್ತಿ ಹೋಗುತ್ತದೆ ಎಂದು ಪಾಕಿಸ್ತಾನ ಈ ಕಸರತ್ತು ಮಾಡಿದೆ.

  • ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

    ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ಸುಮ್ಮನೆ ಬಿಡಲ್ಲ: ಪಾಕ್‌ ವಿರುದ್ಧ ಗುಡುಗಿದ ಯೋಗಿ ಆದಿತ್ಯನಾಥ್‌

    ಲಕ್ನೋ: ನಮಗೆ ಯಾರಾದ್ರು ತೊಂದರೆ ಕೊಟ್ಟರೆ, ನಾವು ಸುಮ್ಮನೆ ಬಿಡಲ್ಲ ಎಂದು ಪಾಕಿಸ್ತಾನಕ್ಕೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಎಚ್ಚರಿಕೆ ನೀಡಿದ್ದಾರೆ.

    ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಭಾರತೀಯ ಸಶಸ್ತ್ರ ಪಡೆಗಳ ಶೌರ್ಯವನ್ನು ಶ್ಲಾಘಿಸಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬುಧವಾರ ಲಕ್ನೋದಲ್ಲಿ ‘ಭಾರತ್ ಶೌರ್ಯ ತಿರಂಗ ಯಾತ್ರೆ’ಯನ್ನು ಪ್ರಾರಂಭಿಸಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ವಿಲವಿಲ – ಪಾಕ್‌ನಲ್ಲಿ ಮದರಸಾಗಳ ಮೇಲೆ ನಾಗರಿಕರಿಂದಲೇ ಕಲ್ಲು ತೂರಾಟ

    ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಭಯೋತ್ಪಾದಕರನ್ನು ಬೆಂಬಲಿಸುತ್ತಿರುವ ಪಾಕಿಸ್ತಾನದ ವಿರುದ್ಧ ವಾಗ್ದಾಳಿ ನಡೆಸಿ, ಅವರಿಗೆ ಕಠಿಣ ಸಂದೇಶ ರವಾನಿಸಿದ್ದಾರೆ.

    ನಮ್ಮ ಸೈನಿಕರು ‘ನಾವು ಯಾರಿಗೂ ತೊಂದರೆ ನೀಡುವುದಿಲ್ಲ. ಆದರೆ ಯಾರಾದರೂ ನಮಗೆ ತೊಂದರೆ ನೀಡಿದರೆ ನಾವು ಅವರನ್ನು ಬಿಡುವುದಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ರವಾನಿಸಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಭಾರತೀಯ ಸೈನಿಕರ ಶೌರ್ಯ, ತ್ಯಾಗ ಹಾಡಿಹೊಗಳಿದ ರಷ್ಯಾ ಮಹಿಳೆ

    ಅಮಾನವೀಯ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಆಪರೇಷನ್ ಸಿಂಧೂರ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಿಎಂ ಯೋಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಇಡೀ ಜಗತ್ತು ಈಗ ಭಾರತೀಯ ಸೈನಿಕರ ಶೌರ್ಯವನ್ನು ಗುರುತಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

    ಆಪರೇಷನ್ ಸಿಂಧೂರಗಾಗಿ ನಾವು ಪ್ರಧಾನಿಗೆ ಧನ್ಯವಾದ ಹೇಳುತ್ತೇವೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರ ಅನಾಗರಿಕ ಕೃತ್ಯವನ್ನು ಇಡೀ ದೇಶ ಮತ್ತು ಜಗತ್ತು ಖಂಡಿಸಿತ್ತು. ಭಯೋತ್ಪಾದನೆಯನ್ನು ಪೋಷಿಸುವ ಪಾಕಿಸ್ತಾನ ಈ ಇಡೀ ಘಟನೆಯಲ್ಲಿ ಮೌನವಾಗಿತ್ತು. ಪಾಕಿಸ್ತಾನ ತನ್ನ ಕ್ರಮದಿಂದ ಪಾಠ ಕಲಿಯದ ನಂತರ ಭಾರತ ಆಪರೇಷನ್ ಸಿಂಧೂರ ಕಾರ್ಯಾಚರಣೆ ಪ್ರಾರಂಭಿಸಿತು. ಮೊದಲ ದಿನ 100 ಕ್ಕೂ ಹೆಚ್ಚು ಭಯೋತ್ಪಾದಕರು ಹತ್ಯೆಯಾದರು. ಈ ಭಯೋತ್ಪಾದಕರಿಗೆ ಅವರ ದುಷ್ಕೃತ್ಯಗಳಿಗೆ ಶಿಕ್ಷೆ ವಿಧಿಸಿದ ರೀತಿಯನ್ನು ಇಡೀ ಜಗತ್ತು ನೋಡಿದೆ. ಭಾರತೀಯ ಸೈನಿಕರ ಶೌರ್ಯವನ್ನು ಒಪ್ಪಿಕೊಂಡಿದೆ ಎಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಮರಾಠಿಯಲ್ಲಿ ಮಾತಾಡು, ಇಲ್ಲದಿದ್ರೆ ಹಣ ಕೊಡಲ್ಲ; ಪಿಜ್ಜಾ ಡೆಲಿವರಿ ಬಾಯ್‌ಗೆ ದಂಪತಿ ಧಮ್ಕಿ

    ಬಿಜೆಪಿ ಇಡೀ ದೇಶದಲ್ಲಿ ತಿರಂಗ ಯಾತ್ರೆಯನ್ನು ಆಯೋಜಿಸುತ್ತಿದೆ. ಈ ತಿರಂಗ ಭಾರತದ ಗೌರವ, ಪ್ರತಿಷ್ಠೆ ಮತ್ತು ಹೆಮ್ಮೆಯ ಸಂಕೇತವಾಗಿದೆ. ಈ ತಿರಂಗ ಭಾರತದ ಶೌರ್ಯ ಮತ್ತು ಧೈರ್ಯದ ಸಂಕೇತವಾಗಿದೆ. ಈ ತಿರಂಗ ಮತ್ತು ನಮ್ಮ ಸೈನಿಕರಿಗೆ ನಮ್ಮ ಗೌರವವನ್ನು ತೋರಿಸಲು, ಪ್ರಧಾನಿ ಮೋದಿಜಿಗೆ ಕೃತಜ್ಞತೆಯನ್ನು ವ್ಯಕ್ತಪಡಿಸಲು ವೇದಿಕೆಯಾಗಲಿದೆ ಎಂದು ಮಾತನಾಡಿದ್ದಾರೆ.

  • Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

    Photo Gallery: ‘ಆಪರೇಷನ್‌ ಸಿಂಧೂರ’ ವೀರರನ್ನು ಭೇಟಿಯಾದ ಪಿಎಂ ಮೋದಿ

    ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್‌ನ ಅದಮ್‌ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಏರ್‌ ಡಿಫೆನ್ಸ್‌ ಹೊಡೆದುರುಳಿಸಿರುವುದಾಗಿ ಪಾಕ್‌ ಸುಳ್ಳು ಹೇಳಿತ್ತು. ಈಗ ಅದೇ ಸ್ಥಳಕ್ಕೆ ಭೇಟಿ ಕೊಟ್ಟು ಪಾಕ್‌ಗೆ ಮೋದಿ ತಿರುಗೇಟು ನೀಡಿದ್ದಾರೆ. ಯೋಧರೊಂದಿಗೆ ಪ್ರಧಾನಿ ಸಂಭ್ರಮಾಚರಣೆ ಮಾಡಿದ್ದಾರೆ.

    ಯೋಧರೊಂದಿಗೆ ಪ್ರಧಾನಿ ಮೋದಿ ಮಾತುಕತೆ

    ಸೈನಿಕರೊಂದಿಗೆ ‘ಭಾರತ್‌ ಮಾತಾ ಕಿ ಜೈ’ ಎಂದು ಕೂಗಿದ ಪ್ರಧಾನಿ.

    ‘ವೈರಿ ಪೈಲಟ್‌ಗಳು ಯಾಕೆ ನೆಮ್ಮದಿಯಾಗಿ ನಿದ್ರೆ ಮಾಡಲ್ಲ ಅಂದ್ರೆ’ ಗೋಡೆ ಬರಹವಿರುವ ಚಿತ್ರದ ಮುಂದೆ ಫೋಟೊ ತೆಗೆಸಿಕೊಂಡ ಮೋದಿ.

    ಯೋಧರೊಂದಿಗೆ ಫೋಟೊಗೆ ಪೋಸ್‌ ಕೊಟ್ಟ ಮೋದಿ.

    ದೇಶಕ್ಕಾಗಿ ಹೋರಾಡುತ್ತಿರುವ ಯೋಧರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಿ.

     

  • ‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ

    ‘ಆಪರೇಷನ್ ಸಿಂಧೂರ’ ಮೆಚ್ಚಿ ಪ್ರಧಾನಿ ಮೋದಿಗೆ ಕಿಚ್ಚ ಸುದೀಪ್ ಪತ್ರ

    – ಪ್ರತಿಯೊಬ್ಬ ಕನ್ನಡಿಗ, ಕನ್ನಡ ಚಿತ್ರರಂಗ ನಿಮ್ಮೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದ ನಟ

    ಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತ ನಡೆಸುತ್ತಿರುವ ‘ಆಪರೇಷನ್‌ ಸಿಂಧೂರ’ (Operation Sindoor) ಕಾರ್ಯಾಚರಣೆ ಮೆಚ್ಚಿ ಪ್ರಧಾನಿ ನರೇಂದ್ರ ಮೋದಿ (PM Modi) ಅವರಿಗೆ ನಟ ಕಿಚ್ಚು ಸುದೀಪ್‌ (Kiccha Supeep) ಪತ್ರ ಬರೆದಿದ್ದಾರೆ.

    ಸುದೀಪ್‌ ಪತ್ರದಲ್ಲೇನಿದೆ?
    ನನ್ನ ತಾಯಿ ನಿಧನದ ಸಂತಾಪ ಪತ್ರಕ್ಕೆ ನಿಮಗೆ ಧನ್ಯವಾದ ಅರ್ಪಿಸುತ್ತೇನೆ. ಇಂದು ನಾನು ಕೇವಲ ಕೃತಜ್ಞತಾಪೂರ್ವಕ ಮಗನಾಗಿ ಅಲ್ಲದೇ ಹೆಮ್ಮೆಯ ಭಾರತೀಯನಾಗಿ ಪತ್ರ ಬರೆಯುತ್ತಿದ್ದೇನೆ. ಆಪರೇಷನ್ ಸಿಂಧೂರ ವಿಜಯೋತ್ಸವಕ್ಕೆ ನನ್ನ ಮೆಚ್ಚುಗೆ ಇದೆ. ಅದು ಕೇವಲ ಪ್ರತಿಕ್ರಿಯೆಯಾಗಿರಲಿಲ್ಲ. ಈ ಮೂಲಕ ಜಗತ್ತಿಗೆ ಒಂದು ದಿಟ್ಟ, ನಿರ್ಣಾಯಕ ಸಂದೇಶ. ಇದನ್ನೂ ಓದಿ: ಮನಸ್ಸು ಮಾಡಿದ್ರೆ ಎರಡೇ ದಿನಕ್ಕೆ ಪಾಕಿಸ್ತಾನ ನಿರ್ನಾಮ ಮಾಡ್ಬೋದು: ಜಮೀರ್

    ಭಾರತವು ಹಿಂಜರಿಯುವುದಿಲ್ಲ, ಭಾರತವು ಮರೆಯುವುದಿಲ್ಲ ಮತ್ತು ಭಾರತವು ಯಾವಾಗಲೂ ಮೇಲಿರುತ್ತದೆ. ಕೇವಲ ಪದಗಳಿಂದ ಮಾರ್ಗದರ್ಶನ ಮಾಡದೆ, ದೃಢ ನಿಶ್ಚಯದಿಂದ ಮಾರ್ಗದರ್ಶನ ಮಾಡುವ ನಾಯಕನನ್ನು ನಾವು ನೋಡುತ್ತಿದ್ದೇವೆ. ಪ್ರತಿಯೊಬ್ಬ ಕನ್ನಡಿಗ ಮತ್ತು ಇಡೀ ಕನ್ನಡ ಚಲನಚಿತ್ರೋದ್ಯಮವು ನಿಮ್ಮೊಂದಿಗೆ ದೃಢವಾಗಿ ನಿಂತಿದೆ. ನಿಮ್ಮ ಧೈರ್ಯದಿಂದ ಸ್ಫೂರ್ತಿ ಪಡೆಯುತ್ತೇವೆ. ನಿಮ್ಮ ನಾಯಕತ್ವದಲ್ಲಿ, ನಮ್ಮ ರಕ್ಷಣಾ ಪಡೆಗಳು ಅಪ್ರತಿಮ ನಿಖರತೆ, ಶಿಸ್ತು ಮತ್ತು ಶೌರ್ಯವನ್ನು ಪ್ರದರ್ಶಿಸಿವೆ. ಅವರ ಯಶಸ್ಸು ನಮ್ಮ ಹೆಮ್ಮೆ. ನಾವೆಲ್ಲರೂ ಒಂದೇ, ಧ್ವನಿಯೂ ಒಂದೇ, ಒಂದೇ ರಾಷ್ಟ್ರವಾಗಿ ಒಗ್ಗಟ್ಟಿನಿಂದ ನಿಂತಿದ್ದೇವೆ. ಪ್ರಧಾನಿ ಮೋದಿ ಅವರಿಗೆ ಕಿಚ್ಚ ಸುದೀಪ್‌ ಪತ್ರ ಬರೆದಿದ್ದಾರೆ.

    ಉದ್ವಿಗ್ನತೆ ಸಂದರ್ಭದಲ್ಲಿ ದೇಶವನ್ನು ಉತ್ತಮ ನಾಯಕತ್ವದೊಂದಿಗೆ ಪ್ರಧಾನಿ ಮೋದಿ ಮುನ್ನಡೆಸುತ್ತಿದ್ದಾರೆಂಬ ಆಶಯವನ್ನು ಸುದೀಪ್‌ ವ್ಯಕ್ತಪಡಿಸಿದ್ದಾರೆ. ಭಾರತೀಯ ಸೇನೆಯ ಹೋರಾಟಕ್ಕೆ ನಟ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಯುದ್ಧ ಭೀತಿ – ಕರ್ನಾಟಕದ ಪೊಲೀಸರಿಗೆ ರಜೆ ರದ್ದು: ಪರಮೇಶ್ವರ್‌

    ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಪ್ರದೇಶದ ಉಗ್ರರ ನೆಲೆಗಳನ್ನು ಗುರಿಯಾಗಿ ಭಾರತ ಆಪರೇಷನ್‌ ಸಿಂಧೂರ ಕಾರ್ಯಾಚರಣೆ ನಡೆಯಿತು. ಇದರ ಬೆನ್ನಲ್ಲೇ ಉಭಯ ದೇಶಗಳ ನಡುವೆ ಉದ್ವಿಗ್ನತೆ ಮತ್ತಷ್ಟು ಬಿಗಡಾಯಿಸಿದೆ.

  • ಭಾರತ-ಪಾಕ್‌ ಉದ್ವಿಗ್ನತೆ ತೀವ್ರ ಬೆನ್ನಲ್ಲೇ 3 ಸೇನಾ ಮುಖ್ಯಸ್ಥರೊಂದಿಗೆ ಮೋದಿ ಸಭೆ

    ಭಾರತ-ಪಾಕ್‌ ಉದ್ವಿಗ್ನತೆ ತೀವ್ರ ಬೆನ್ನಲ್ಲೇ 3 ಸೇನಾ ಮುಖ್ಯಸ್ಥರೊಂದಿಗೆ ಮೋದಿ ಸಭೆ

    ನವದೆಹಲಿ: ಭಾರತ-ಪಾಕಿಸ್ತಾನ (India Pakistan War) ನಡುವಿನ ಉದ್ವಿಗ್ನತೆ ಮತ್ತಷ್ಟು ತೀವ್ರಗೊಂಡಿರುವ ಹೊತ್ತಲ್ಲೇ ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಶುಕ್ರವಾರ ಮತ್ತೆ ಮೂರು ಸೇನಾ ಮುಖ್ಯಸ್ಥರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಸಿಡಿಎಸ್ ಮತ್ತು ಎಲ್ಲಾ ಸಶಸ್ತ್ರ ಪಡೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಯಿತು. ಪ್ರಸ್ತುತ ಪರಿಸ್ಥಿತಿಗಳ ಬಗ್ಗೆ ಮೋದಿ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಭಾರತ-ಪಾಕ್ ಗಡಿಯಲ್ಲಿರುವ 24 ವಿಮಾನ ನಿಲ್ದಾಣಗಳು ಮೇ 15ರವರೆಗೆ ಬಂದ್

    ಎರಡು ವಾರಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಬುಧವಾರ ಭಾರತವು ಭಯೋತ್ಪಾದಕ ಮೂಲಸೌಕರ್ಯವಿದ್ದ ಪಾಕಿಸ್ತಾನ ಮತ್ತು ಪಿಒಕೆ ತಾಣಗಳನ್ನು ಟಾರ್ಗೆಟ್‌ ಮಾಡಿ ದಾಳಿ ನಡೆಸಿತು. ಆಪರೇಷನ್ ಸಿಂಧೂರ ಕಾರ್ಯಾಚರಣೆ ಮೂಲಕ ಉಗ್ರರ ನೆಲೆಗಳನ್ನು ಧ್ವಂಸ ಮಾಡಿತು.

    ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನದ ಸಶಸ್ತ್ರ ಪಡೆಗಳು ಗುರುವಾರ ರಾತ್ರಿ ಇಡೀ ಪಶ್ಚಿಮ ಗಡಿಯಲ್ಲಿ ಡ್ರೋನ್‌ಗಳು ಮತ್ತು ಇತರ ಯುದ್ಧಸಾಮಗ್ರಿಗಳನ್ನು ಬಳಸಿ ಅನೇಕ ದಾಳಿಗಳನ್ನು ನಡೆಸಿದವು. ಆದರೆ, ಅವುಗಳನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸಲಾಗಿದೆ ಎಂದು ಭಾರತೀಯ ಸೇನೆ ತಿಳಿಸಿದೆ. ಇದನ್ನೂ ಓದಿ: ಪಾಕ್‌ನಿಂದ ಜಮ್ಮು & ಕಾಶ್ಮೀರ, ಪೂಂಚ್, ಉರಿ ಮೇಲೆ ಶೆಲ್ ದಾಳಿ

    ಸ್ಥಳೀಯವಾಗಿ ಅಭಿವೃದ್ಧಿಪಡಿಸಲಾದ ‘ಆಕಾಶ್’ ಮೇಲ್ಮೈಯಿಂದ ಆಕಾಶಕ್ಕೆ ಚಿಮ್ಮುವ ಕ್ಷಿಪಣಿ ವಾಯು ರಕ್ಷಣಾ ವ್ಯವಸ್ಥೆಯು ಗುರುವಾರ ಭಾರತೀಯ ಸೇನಾ ನೆಲೆಗಳನ್ನು ಟಾರ್ಗೆಟ್‌ ಮಾಡಿದ್ದ ಪಾಕಿಸ್ತಾನದ ಡ್ರೋನ್ ದಾಳಿಯನ್ನು ತಡೆಯುವಲ್ಲಿ ನಿರ್ಣಾಯಕ ಪಾತ್ರ ವಹಿಸಿದೆ. ಭಾರತೀಯ ಸೇನೆ ಮತ್ತು ವಾಯುಪಡೆ ಎರಡೂ ಕ್ಷಿಪಣಿ ವ್ಯವಸ್ಥೆಯನ್ನು ಪಾಕಿಸ್ತಾನ ಗಡಿಯಲ್ಲಿ ನಿಯೋಜಿಸಿವೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.

    ಭಾರತೀಯ ಮಿಲಿಟರಿ ಸ್ಥಾಪನೆಗಳನ್ನು ಗುರಿಯಾಗಿಸುವ ಪಾಕಿಸ್ತಾನದ ಪ್ರಯತ್ನಗಳನ್ನು ಹಿಮ್ಮೆಟ್ಟಿಸಿದ ಬಳಿಕ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಉನ್ನತ ಮಿಲಿಟರಿ ನಾಯಕರೊಂದಿಗೆ ರಾಷ್ಟ್ರೀಯ ಭದ್ರತಾ ಸನ್ನಿವೇಶದ ಸಮಗ್ರ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತದ ಧಾರ್ಮಿಕ ಕೇಂದ್ರಗಳನ್ನು ಗುರಿಯಾಗಿಸಿ ಪಾಕ್‌ ದಾಳಿ: ಕೇಂದ್ರ ಸರ್ಕಾರ ವಾಗ್ದಾಳಿ

  • ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

    ನಮ್ಮ ನಾಯಕ ಹೇಡಿ.. ಮೋದಿ ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ: ತಮ್ಮ ಪ್ರಧಾನಿ ವಿರುದ್ಧವೇ ಗುಡುಗಿದ ಪಾಕ್ ಸಂಸದ

    ಇಸ್ಲಾಮಾಬಾದ್: ನಮ್ಮ ನಾಯಕ ಹೇಡಿ. ಭಾರತದ ಪ್ರಧಾನಿ ಮೋದಿ (PM Modi) ಹೆಸರು ಹೇಳುವುದಕ್ಕೂ ಹೆದರುತ್ತಿದ್ದಾರೆ ಎಂದು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ವಿರುದ್ಧ ಸಂಸದ ಶಾಹಿದ್‌ ಖಟ್ಟಕ್‌ ಗುಡುಗಿದ್ದಾನೆ.

    ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚುತ್ತಿರುವ ನಡುವೆಯೂ ಭಾರತದೊಂದಿಗೆ ನಡೆಯುತ್ತಿರುವ ಸಂಘರ್ಷವನ್ನು ಸರ್ಕಾರ ಹೇಗೆ ನಿಭಾಯಿಸುತ್ತಿದೆ ಎಂಬುದರ ಕುರಿತು ಶುಕ್ರವಾರ ನಡೆದ ಚರ್ಚೆಯಲ್ಲಿ ಪಾಕಿಸ್ತಾನ ಸಂಸತ್ತು ತೀವ್ರ ಕದನಗಳ ತಾಣವಾಯಿತು. ಇದನ್ನೂ ಓದಿ: ಎಲ್‌ಒಸಿಯಲ್ಲಿ ಭಾರತ-ಪಾಕ್ ಸಂಘರ್ಷ; ಭಾರತೀಯ ಯೋಧ ಹುತಾತ್ಮ

    ಶುಕ್ರವಾರ ನಡೆದ ಸಂಸತ್ ಅಧಿವೇಶನದಲ್ಲಿ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಪಕ್ಷದ ದಕ್ಷಿಣ ವಲಯ ಖೈಬರ್ ಪಖ್ತುನ್ಖ್ವಾ ಅಧ್ಯಕ್ಷನೂ ಆಗಿರುವ ಪಾಕಿಸ್ತಾನ ಸಂಸದ ಶಾಹಿದ್ ಖಟ್ಟಕ್, ಪ್ರಧಾನಿ ಶೆಹಬಾಜ್ ಷರೀಫ್ ವಿರುದ್ಧ ತರಾಟೆಗೆ ತೆಗೆದುಕೊಂಡಿದ್ದಾನೆ. ಭಾರತ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹೇಳಿಕೆ ನೀಡದ ಹೇಡಿ ಎಂದು ಟೀಕಿಸಿದ್ದಾನೆ.

    ಸರ್ಕಾರದ ವಿಧಾನವನ್ನು ಟೀಕಿಸಿದ ಸಂಸದ ಖಟ್ಟಕ್, ಭಾರತದ ವಿರುದ್ಧ ಒಂದೇ ಒಂದು ಹೇಳಿಕೆ ಬಂದಿಲ್ಲ. ಗಡಿಯಲ್ಲಿ ನಿಂತಿರುವ ಪಾಕಿಸ್ತಾನಿ ಸೈನಿಕರು ಸರ್ಕಾರ ಧೈರ್ಯದಿಂದ ಹೋರಾಡುತ್ತದೆ ಎಂದು ನಿರೀಕ್ಷಿಸುತ್ತಾರೆ. ನಮ್ಮ ನಾಯಕ, ಮೋದಿಯ ಹೆಸರನ್ನು ಸಹ ಉಚ್ಚರಿಸಲಾಗದ ಹೇಡಿ. ಗಡಿಯಲ್ಲಿ ಹೋರಾಡುವ ಸೈನಿಕನಿಗೆ ನೀವು ಯಾವ ಸಂದೇಶವನ್ನು ನೀಡುತ್ತಿದ್ದೀರಿ ಎಂದು ಪಾಕ್‌ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದಾನೆ. ಇದನ್ನೂ ಓದಿ: ಗುಜರಾತ್ ಸಿಎಂ ಜೊತೆ ಗಡಿ ಜಿಲ್ಲೆಗಳ ಭದ್ರತೆ ಬಗ್ಗೆ ಮಾಹಿತಿ ಪಡೆದ ಪ್ರಧಾನಿ ಮೋದಿ

    ಏಪ್ರಿಲ್ 22 ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನೇಪಾಳಿ ಪ್ರಜೆ ಸೇರಿದಂತೆ 26 ಜನರ ಪ್ರಾಣವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಮೇ 7 ರಂದು ‘ಆಪರೇಷನ್ ಸಿಂಧೂರ’ ಕಾರ್ಯಾಚರಣೆ ಆರಂಭಿಸಲಾಗಿದೆ.

  • ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು ಈಗ ತಮ್ಮ ಇಡೀ ಕುಟುಂಬ ಕಳೆದುಕೊಂಡಿದ್ದಾರೆ: ಯೋಗಿ ಆದಿತ್ಯನಾಥ್‌

    ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು ಈಗ ತಮ್ಮ ಇಡೀ ಕುಟುಂಬ ಕಳೆದುಕೊಂಡಿದ್ದಾರೆ: ಯೋಗಿ ಆದಿತ್ಯನಾಥ್‌

    – ಭಾರತದ ‘ಆಪರೇಷನ್‌ ಸಿಂಧೂರ’ ಬಗ್ಗೆ ಮೆಚ್ಚಿ ಮಾತನಾಡಿದ ಯುಪಿ ಸಿಎಂ

    ಲಕ್ನೋ: ನಮ್ಮ ಸಹೋದರಿಯರ ಗಂಡಂದಿರನ್ನು ಕೊಂದವರು, ಈಗ ಭಾರತದ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ (Yogi Adityanath) ಹೇಳಿದ್ದಾರೆ.

    ಪಹಲ್ಗಾಮ್‌ ಭಯೋತ್ಪಾದಕ (Pahalgam Terror Attack) ದಾಳಿಗೆ ಪ್ರತೀಕಾರವಾಗಿ ಪಾಕ್‌ ಮತ್ತು ಪಿಒಕೆಯ ಉಗ್ರರ ಅಡಗು ತಾಣಗಳ ಮೇಲೆ ಭಾರತೀಯ ಸೇನಾ ಪಡೆ ನಡೆಸಿದ ದಾಳಿಗೆ ಯೋಗಿ ಆದಿತ್ಯನಾಥ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ಆಪರೇಷನ್‌ ಸಿಂಧೂರ’ (Operation Sindoor) ನಡೆಸಿದ್ದಕ್ಕೆ ಪ್ರಧಾನಿ ಮೋದಿ (PM Modi) ಮತ್ತು ಭಾರತೀಯ ಮೂರು ಸೇನಾ ಪಡೆಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ತಮ್ಮ ಗಂಡಂದಿರನ್ನು ಕಳೆದುಕೊಂಡ ನಮ್ಮ ಸಹೋದರಿಯರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ನಮ್ಮ ಭದ್ರತಾ ಪಡೆಗಳ ಭಾವನೆ ಏನೆಂಬುದು ಈ ಕಾರ್ಯಾಚರಣೆಯಿಂದ ಗೊತ್ತಾಗಿದೆ. ನಮ್ಮ ಸಹೋದರಿಯರು ಮತ್ತು ತಾಯಂದಿರ ಗಂಡಂದಿರನ್ನು ಕೊಲ್ಲಲು ಧೈರ್ಯ ಮಾಡಿದವರು ಈಗ ಕ್ಷಿಪಣಿ ದಾಳಿಯಲ್ಲಿ ತಮ್ಮ ಇಡೀ ಕುಟುಂಬವನ್ನು ಕಳೆದುಕೊಂಡಿದ್ದಾರೆ ಎಂದು ಸಿಎಂ ತಿಳಿಸಿದ್ದಾರೆ.

    ಏ.22 ರಂದು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 26 ಮಂದಿ ಅಸುನೀಗಿದ್ದರು. ಅದರ ಬೆನ್ನಲ್ಲೇ ಭಾರತ ಮತ್ತು ಪಾಕ್‌ ನಡುವೆ ಉದ್ವಿಗ್ನತೆ ತಲೆದೋರಿತು. ಉಗ್ರರ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಬೇಕೆಂದು ಭಾರತ ಸರ್ಕಾರ ಫಣ ತೊಟ್ಟಿತು. ಅದರಂತೆ ಮಂಗಳವಾರ ತಡರಾತ್ರಿ ಪಾಕ್‌ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ದಾಳಿ ನಡೆಸಿತು. ಪರಿಣಾಮವಾಗಿ 100 ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

  • ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ: ಬುರುಡೆ ಬಿಟ್ಟ ಪಾಕ್‌ ಪ್ರಧಾನಿ

    ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ: ಬುರುಡೆ ಬಿಟ್ಟ ಪಾಕ್‌ ಪ್ರಧಾನಿ

    – 80 ಜೆಟ್‌ಗಳಲ್ಲಿ 5 ನ್ನು ಪಾಕ್‌ ವಾಯು ಸೇನೆ ಹೊಡೆದುರುಳಿಸಿದೆ ಎಂದ ಶೆಹಬಾಜ್‌ 

    ಇಸ್ಲಾಮಾಬಾದ್: ಭಾರತದ ದಾಳಿಯನ್ನು ವಿಫಲಗೊಳಿಸಿದ್ದೇವೆ ಎಂದು ಮತ್ತೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್‌ ಷರೀಫ್‌ (Shehbaz Sharif) ಬುರುಡೆ ಬಿಟ್ಟಿದ್ದಾರೆ.

    ತಡರಾತ್ರಿ ಪಾಕ್ ಮತ್ತು ಪಿಒಕೆ ಹಲವಾರು ಸ್ಥಳಗಳಲ್ಲಿ ಭಾರತ ಕ್ಷಿಪಣಿ ದಾಳಿ ನಡೆಸಿದ ನಂತರ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಬುಧವಾರ ರಾಷ್ಟ್ರೀಯ ಅಸೆಂಬ್ಲಿಯನ್ನುದ್ದೇಶಿಸಿ ಮಾತನಾಡಿದರು. ಈ ದಾಳಿ ಅಚ್ಚರಿ ಮೂಡಿಸಿತು. ಇಡೀ ದೇಶವನ್ನೇ ಬೆಚ್ಚಿಬೀಳಿಸಿತು. ಭಾರತೀಯ ವಿಮಾನಗಳು ತಮ್ಮ ದೇಶವನ್ನು ಪ್ರವೇಶಿಸಿದರೆ ಸಮುದ್ರಕ್ಕೆ ಎಸೆಯಲು ಪಾಕಿಸ್ತಾನ ವಾಯುಪಡೆ ಸಿದ್ಧವಾಗಿದೆ ಮತ್ತು ಅದಕ್ಕಾಗಿ ಕಾಯುತ್ತಿದೆ. ಪಾಕಿಸ್ತಾನವು 5 ರಫೇಲ್ ಜೆಟ್‌ಗಳು ಮತ್ತು 2 ಡ್ರೋನ್‌ಗಳನ್ನು ಹೊಡೆದುರುಳಿಸಿದೆ ಎಂದು ಹಸಿಹಸಿ ಸುಳ್ಳು ಹೇಳಿದ್ದಾರೆ. ಇದನ್ನೂ ಓದಿ: ಲಡಾಖ್‍ನಲ್ಲಿ ಪ್ರವಾಸಿಗರಿಗೆ ಉಚಿತ ವಸತಿ!

    ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳುವಲ್ಲಿ ಯಶಸ್ವಿಯಾಯಿತು. ಈ ರಾತ್ರಿಯನ್ನು ಐತಿಹಾಸಿಕ ರಾತ್ರಿಯನ್ನಾಗಿ ಮಾಡಿತು. ದಾಳಿಯಲ್ಲಿ ಮಕ್ಕಳು, ಪುರುಷರು ಮತ್ತು ಮಹಿಳೆಯರು ಸೇರಿದಂತೆ ಅನೇಕ ಪಾಕಿಸ್ತಾನಿಗಳು ಪ್ರಾಣ ಕಳೆದುಕೊಂಡಿದ್ದಾರೆ. ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಜನರಿಗೆ ಪಾಕ್‌ ಪ್ರಧಾನಿ ಸಂತಾಪ ಸೂಚಿಸಿದ್ದಾರೆ.

    ಏ.22 ರಂದು ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪಾಕಿಸ್ತಾನವನ್ನು ಭಾರತ ದೂಷಿಸಿದೆ. ಆದರೆ, ಬಲೂಚಿಸ್ತಾನದಲ್ಲಿ ನಡೆದ ರೈಲು ಅಪಹರಣವಾಯಿತು. ಈ ದಾಳಿಗೆ ಭಾರತವೇ ಕಾರಣ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಆಪರೇಷನ್‌ ಸಿಂಧೂರ, 4 ದಿನ ಕ್ವಾರಂಟೈನ್‌ – ಕಾರ್ಯಾಚರಣೆ ಯಶಸ್ವಿಯಾಗಿದ್ದು ಹೇಗೆ? ಇಲ್ಲಿದೆ ಇನ್‌ಸೈಡ್‌ ಸ್ಟೋರಿ

    ಪಹಲ್ಗಾಮ್ ದಾಳಿಯು ನಾನು ಟರ್ಕಿಯಲ್ಲಿದ್ದಾಗ ನಡೆದಿದೆ. ಈ ದಾಳಿಯಲ್ಲಿ ಪಾಕಿಸ್ತಾನ ಭಾಗಿಯಾಗಿಲ್ಲ. ಈ ವಿಷಯದ ಬಗ್ಗೆ ತನಿಖೆಗೆ ಆಹ್ವಾನ ನೀಡಿದ್ದೇನೆ. ತನಿಖೆಗೆ ಸಹಕರಿಸಲು ಪಾಕಿಸ್ತಾನ ಸಿದ್ಧವಾಗಿದೆ. ಆದಾಗ್ಯೂ, ಭಾರತ ಈ ಪ್ರಸ್ತಾಪವನ್ನು ತಿರಸ್ಕರಿಸಿತು ಎಂದು ಹೇಳಿಕೆ ನೀಡಿದ್ದಾರೆ.

    ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತೀಯ ವಾಯುಪಡೆಯು ಯಾವುದೇ ದಿನ ದಾಳಿ ನಡೆಸುತ್ತದೆ ಎಂಬ ಮಾಹಿತಿ ನಮಗೆ ಬರುತ್ತಿದೆ. ಪಾಕಿಸ್ತಾನ ವಾಯುಪಡೆಯು ಪ್ರತೀಕಾರ ತೀರಿಸಿಕೊಳ್ಳಲು ಸಿದ್ಧವಾಗಿದೆ ಎಂದು ಮಾತನಾಡಿದ್ದಾರೆ. ಇದನ್ನೂ ಓದಿ: ಬಾಲಾಕೋಟ್‌, ಬ್ರಹ್ಮೋಸ್‌ ಬಳಿಕ ʻಆಪರೇಷನ್‌ ಸಿಂಧೂರʼ – ಪಾಕ್‌ ನಂಬಿದ್ದ ʻಮೇಡ್‌ ಇನ್‌ ಚೈನಾʼ ರೆಡಾರ್‌ ಫೇಲ್‌

    ಭಾರತ ನಡೆಸುತ್ತಿರುವ ದಾಳಿಗಳ ಬಗ್ಗೆ ನಮಗೆ ಮಾಹಿತಿ ಇದೆ. ದಾಳಿಯಲ್ಲಿ ಒಟ್ಟು 80 ಯುದ್ಧ ವಿಮಾನಗಳು ಭಾಗಿಯಾಗಿದ್ದು, ದೇಶದ ಆರು ಸ್ಥಳಗಳಲ್ಲಿ ಅವು ದಾಳಿ ನಡೆಸಿವೆ. ಇದಕ್ಕೆ ಪಿಎಎಫ್ ಸಿದ್ಧವಾಗಿತ್ತು. ಭಾರತೀಯ ಯುದ್ಧ ವಿಮಾನಗಳು ಪೇಲೋಡ್ ಅನ್ನು ಬಿಡುಗಡೆ ಮಾಡಿದ ನಂತರ ಅವುಗಳ ಮೇಲೆ ದಾಳಿ ಮಾಡಿತು. ಐದು ರಫೇಲ್ ಜೆಟ್‌ಗಳನ್ನು ಹೊಡೆದುರುಳಿಸಲು ಸಾಧ್ಯವಾಯಿತು. ಒಂದು ವಿಮಾನ ಪಂಜಾಬ್‌ನ ಭಟಿಂಡಾದಲ್ಲಿ ಬಿದ್ದಿತು. ಪ್ರತಿದಾಳಿಯಲ್ಲಿ ಎರಡು ಡ್ರೋನ್‌ಗಳನ್ನು ಸಹ ಹೊಡೆದುರುಳಿಸಲಾಗಿದೆ. ಇದು ಸಾಂಪ್ರದಾಯಿಕ ಯುದ್ಧವಾಗಿತ್ತು. ಪಾಕಿಸ್ತಾನವು ಈ ಸಾಂಪ್ರದಾಯಿಕ ಯುದ್ಧದಲ್ಲಿ ಭಾರತವನ್ನು ಸೋಲಿಸಲು ಸಾಧ್ಯವಾಯಿತು. ಪಾಕಿಸ್ತಾನ ಸೇನೆಯು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಸಮರ್ಥವಾಗಿದೆ. ಕಠಿಣ ಸಮಯದಲ್ಲಿ ಅವರಿಗೆ ಸಹಾಯ ಮಾಡಲು ಸಾಧ್ಯವಾಗುತ್ತದೆ ಎಂದು ಜಗತ್ತಿಗೆ ಈಗ ತಿಳಿದಿದೆ ಎಂದು ಪಾಕ್‌ ಪ್ರಧಾನಿ ಬುರುಡೆ ಬಿಟ್ಟಿದ್ದಾರೆ.

  • ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ರಾಷ್ಟ್ರಪತಿ ಭೇಟಿಯಾಗಿ ‘ಆಪರೇಷನ್‌ ಸಿಂಧೂರ’ ಬಗ್ಗೆ ವಿವರಿಸಿದ ಮೋದಿ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (PM Modi) ಅವರು ಬುಧವಾರ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರನ್ನು ಭೇಟಿಯಾಗಿ, ಪಹಲ್ಗಾಮ್‌ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನಾ ಪಡೆಗಳು ಪಾಕ್‌ ಮತ್ತು ಪಿಒಕೆ ಉಗ್ರರ ಅಡಗು ತಾಣಗಳ ಮೇಲೆ ನಡೆಸಿರುವ ‘ಆಪರೇಷನ್‌ ಸಿಂಧೂರ’ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ.

    ಭಾರತೀಯ ಸಶಸ್ತ್ರ ಪಡೆಗಳು, ಪಾಕಿಸ್ತಾನ ಮತ್ತು ಪಾಕ್‌ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ಮೂಲಸೌಕರ್ಯಗಳ ಮೇಲೆ ನಿಖರವಾದ ದಾಳಿ ನಡೆಸಿದ ಆಪರೇಷನ್‌ ಬಗ್ಗೆ ರಾಷ್ಟ್ರಪತಿಗೆ ವಿವರಿಸಿದ್ದಾರೆ. ಸರ್ಕಾರ ನಾಳೆ ಸರ್ವಪಕ್ಷ ಸಭೆಯನ್ನೂ ಕರೆದಿದೆ. ಇದನ್ನೂ ಓದಿ: ಯಾವುದೇ ದೋಷವಿಲ್ಲದೆ ತನ್ನ ಗುರಿ ಸಾಧಿಸಿದೆ – ಸೇನೆಯನ್ನು ಶ್ಲಾಘಿಸಿದ ಪ್ರಧಾನಿ ಮೋದಿ

    ಭಾರತೀಯ ಸಶಸ್ತ್ರ ಪಡೆಗಳು ಬುಧವಾರ ಮುಂಜಾನೆ ‘ಆಪರೇಷನ್ ಸಿಂಧೂರ’ ಅನ್ನು ಪ್ರಾರಂಭಿಸಿದವು. ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಸಾವನ್ನಪ್ಪಿದ್ದರು. ದಾಳಿಗೆ ತಕ್ಕ ಪ್ರತೀಕಾರ ತೀರಿಸಿಕೊಳ್ಳಲಾಗುವುದು ಎಂದು ಭಾರತ ಸರ್ಕಾರ ಪ್ರತಿಜ್ಞೆ ಮಾಡಿತ್ತು.