Tag: ಪಿಎಫ್

  • ಜು.1ರಿಂದ ಸ್ವಚ್ಛತಾ ಕಾರ್ಯ ಬಂದ್ – ಸಾರ್ವಜನಿಕರಿಗೆ ತೊಂದ್ರೆಯಾದ್ರೆ ಸರ್ಕಾರವೇ ಹೊಣೆ ಎಂದ ಪೌರಕಾರ್ಮಿಕರು

    ಜು.1ರಿಂದ ಸ್ವಚ್ಛತಾ ಕಾರ್ಯ ಬಂದ್ – ಸಾರ್ವಜನಿಕರಿಗೆ ತೊಂದ್ರೆಯಾದ್ರೆ ಸರ್ಕಾರವೇ ಹೊಣೆ ಎಂದ ಪೌರಕಾರ್ಮಿಕರು

    ಚಾಮರಾಜನಗರ: ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಪೌರಕಾರ್ಮಿಕ ಮಹಾಸಂಘವು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದೆ. ಅಲ್ಲದೆ ಜುಲೈ 1 ರಿಂದ ಸ್ವಚ್ಛತಾ ಕಾರ್ಯವನ್ನು ನಿಲ್ಲಿಸುವಂತೆ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಪೌರ ಕಾರ್ಮಿಕರಿಗೆ ತಿಳಿಸಿದ್ದಾರೆ.

    ಈ ಕುರಿತು ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನೇರ ಪಾವತಿ ಪೌರ ಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವಂತೆ ಒತ್ತಾಯಿಸಿ ಮುಷ್ಕರ ಕೈಗೊಳ್ಳಲಾಗುತ್ತಿದೆ. ಪುರಸಭೆ, ನಗರಸಭೆ, ಮಹಾನಗರಪಾಲಿಕೆ, ಬಿಬಿಎಂಪಿ ಕೇಂದ್ರಗಳಲ್ಲಿ ಪೌರಕಾರ್ಮಿಕರೂ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರಪತಿ ಚುನಾವಣೆ: ವಿಪಕ್ಷಗಳಿಂದ ಅಭ್ಯರ್ಥಿಯಾಗಿ ಯಶವಂತ್‌ ಸಿನ್ಹಾ ಆಯ್ಕೆ

    ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ 18 ಸಾವಿರ ಪೌರ ಕಾರ್ಮಿಕರು ಅನಿರ್ಧಿಷ್ಠಾವಧಿ ಧರಣಿ ನಡೆಸಲಿದ್ದಾರೆ. ಆಯಾ ಜಿಲ್ಲಾ ಕೇಂದ್ರಗಳಲ್ಲೂ ಅನಿರ್ಧಿಷ್ಠಾವಧಿ ಮುಷ್ಕರ ಆರಂಭವಾಗಲಿದೆ. ಸಾರ್ವಜನಿಕರಿಗೆ ತೊಂದರೆಯಾದರೆ ಸರ್ಕಾರವೇ ಹೊಣೆ ಎಂದು ನಾರಾಯಣ ಹೇಳಿದ್ದಾರೆ. ಇದನ್ನೂ ಓದಿ: ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

    ನಮ್ಮ ಬೇಡಿಕೆಗಳ ಬಗ್ಗೆ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ದರೂ ನಿರ್ಲಕ್ಷ್ಯ ವಹಿಸಿದೆ. ರಾಜ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ನೇರ ಪಾವತಿ ಪೌರ ಕಾರ್ಮಿಕರಿದ್ದಾರೆ. ಅವರಿಗೆ ಸರ್ಕಾರ ಸರ್ಕಾರ ತಿಂಗಳಿಗೆ ಕೇವಲ 14 ಸಾವಿರ ರೂಪಾಯಿ ವೇತನ ಮಾತ್ರ ನೀಡುತ್ತಿದೆ. ಪಿಎಫ್, ಇಎಸ್‌ಐ, ಗ್ರ್ಯಾಚುಯಿಟಿ ಯಾವುದೇ ಸೌಲಭ್ಯವಿಲ್ಲ. ಸಾಮಾಜಿಕ, ಆರ್ಥಿಕ ಭದ್ರತೆಯಿಲ್ಲದೇ ಪೌರ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    Live Tv

  • ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

    ನಿತ್ಯ 12 ಗಂಟೆ ಕೆಲಸ, ವಾರದಲ್ಲಿ 3 ದಿನ ರಜೆ – ಜುಲೈ 1ರಿಂದ ಹೊಸ ಕಾರ್ಮಿಕ ಸಂಹಿತೆ?

    ನವದೆಹಲಿ: ವೇತನ, ಸಾಮಾಜಿಕ ಭದ್ರತೆ, ಕೈಗಾರಿಕಾ ಸಂಬಂಧಗಳು ಮತ್ತು ಔದ್ಯೋಗಿಕ ಸುರಕ್ಷತೆ ದೃಷ್ಟಿಯಿಂದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸುವ ನಿರೀಕ್ಷೆ ಇದೆ. ಮುಂದಿನ ತಿಂಗಳ ಜುಲೈ 1ರಿಂದಲೇ ಈ ಸಂಹಿತೆ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಸರ್ಕಾರಿ ಮೂಲಗಳು ತಿಳಿಸಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ.

    ಹೊಸ ವೇತನ ಸಂಹಿತೆಯು ಉದ್ಯೋಗಿಗಳ ಕೆಲಸದ ಸಮಯ, ವೇತನ ಪುನರ್‌ರಚನೆ, ಪಿಎಫ್, ಗ್ರ್ಯಾಚುಟಿ ಕೊಡುಗೆಯಲ್ಲಿ ಬದಲಾವಣೆ ತರಲಿದೆ ಎಂದು ವರದಿಗಳು ಹೇಳುತ್ತಿವೆ. ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ಹಾಗೂ ಕಾರ್ಮಿಕ ಸಚಿವಾಲಯ ಯಾವುದೇ ಅಧಿಕೃತ ಪ್ರಕಟಣೆ ನೀಡಿಲ್ಲ ಎಂದು ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರ 90ರ ದಶಕದಲ್ಲಿಯೇ ಅಗ್ನಿಪಥ್ ಜಾರಿಗೆ ತರಲು ಚಿಂತಿಸಿತ್ತು: ಉಮೇಶ್ ಕತ್ತಿ ಹೊಸ ಬಾಂಬ್

    ಕೈಗೆ ಕಡಿಮೆ ಸಂಬಂಳ, ಪಿಎಫ್ ಹೆಚ್ಚಳ: ಹೊಸ ಸಂಹಿತೆಗಳು ಜಾರಿಗೆ ಬಂದರೆ, ನೌಕರರ ಕೈಗೆ ಸಿಗುವ ಸಂಬಳದ ಮೊತ್ತ ಕಡಿಮೆಯಾಗಲಿದ್ದು, ಭವಿಷ್ಯ ನಿಧಿ (PF) ಖಾತೆಗೆ ಜಮೆ ಆಗುವ ಮೊತ್ತ ಹೆಚ್ಚಳವಾಗಲಿದೆ. ಎಲ್ಲ ಬಗೆಯ ಭತ್ಯೆಗಳು ನೌಕರರ ಒಟ್ಟು ವೇತನದ ಶೇ.50ರಷ್ಟನ್ನು ಮೀರುವಂತಿಲ್ಲ. ಅಂದರೆ ಒಟ್ಟು ವೇತನದಲ್ಲಿ ಶೇ.50ರಷ್ಟು ಭಾಗವು ಮೂಲ ವೇತನ ಆಗಿರಬೇಕು. ಪಿಎಫ್ ಖಾತೆಗೆ ವರ್ಗಾವಣೆ ಆಗುವ ಮೊತ್ತವನ್ನು ನೌಕರರ ಮೂಲವೇತನದ ಆಧಾರದಲ್ಲಿ ಲೆಕ್ಕ ಹಾಕಲಾಗುತ್ತದೆ. ಇದನ್ನೂ ಓದಿ: ಕ್ರೆಡಿಟ್‌, ಡೇಬಿಟ್‌ ಕಾರ್ಡ್‌ ಬಳಕೆದಾರರಿಗೆ ಜುಲೈ 1 ರಿಂದ ಸಿಗಲಿದೆ ಗುಡ್‌ನ್ಯೂಸ್‌

    12 ಗಂಟೆ ಕೆಲಸ: ಹೊಸ ಕರಡು ನಿಯಮ ಪ್ರಕಾರ, ಕೆಲಸದ ಸಮಯವನ್ನು ಕಡಿತಗೊಳಿಸಲಾಗುವುದು. ವಾರದಲ್ಲಿ ನಾಲ್ಕು ದಿನ ಕೆಲಸ ಇರಲಿದ್ದು, ನಾಲ್ಕು ದಿನವೂ 12 ಗಂಟೆಗಳು ಮಾತ್ರ ಕೆಲಸ ಇರಲಿದೆ. ಆದರೆ ಕಾರ್ಮಿಕ ಸಚಿವಾಲಯವು ವಾರದಲ್ಲಿ 48 ಗಂಟೆಗಳ ಕೆಲಸ ಅಗತ್ಯವಾಗಿ ಮಾಡಬೇಕಿದೆ ಎಂದು ಸ್ಪಷ್ಟಪಡಿಸಿದೆ.

    ರಜೆಯ ಅವಧಿಯಲ್ಲಿ ಬದಲಾವಣೆ: ಸರ್ಕಾರಿ ಇಲಾಖೆಗಳು ಈಗ 1 ವರ್ಷದಲ್ಲಿ 30 ರಜೆಗಳನ್ನು ಅನುಮತಿಸುತ್ತವೆ. ರಕ್ಷಣಾ ನೌಕರರಿಗೆ ವರ್ಷದಲ್ಲಿ 60 ರಜೆಗಳನ್ನು ಪಡೆಯುತ್ತಾರೆ. ಆದರೆ ಹೊಸ ನೀತಿಯ ಪ್ರಕಾರ ರಜೆ ಅವಧಿಯೂ ಹೆಚ್ಚಾಗಲಿದೆ. 20 ವರ್ಷಗಳ ಸೇವೆ ಸಲ್ಲಿಸಿದ ನೌಕರರು ವೇತನ ಸಹಿತ ರಜೆಯನ್ನೂ ಪಡೆದುಕೊಳ್ಳಬಹುದು ಎಂದು ಹೇಳಲಾಗಿದೆ.

    ಇಲ್ಲಿಯವರೆಗೆ 23 ರಾಜ್ಯಗಳು ಈ ಅಧಿನಿಯಮವನ್ನು ಪ್ರಕಟಿಸಿವೆ.

    Live Tv

  • ಮುಂದಿನ ವರ್ಷದ ಮಾರ್ಚ್ ವರೆಗೆ ಶೇ.25 ಟಿಡಿಎಸ್ ಕಡಿತ

    ಮುಂದಿನ ವರ್ಷದ ಮಾರ್ಚ್ ವರೆಗೆ ಶೇ.25 ಟಿಡಿಎಸ್ ಕಡಿತ

    ನವದೆಹಲಿ: ಸ್ವಾವಲಂಬಿ ಭಾರತಕ್ಕಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಇಂದು ಹಲವು ಯೋಜನೆಗಳನ್ನ ಘೋಷಿಸಿ, ಅನುದಾನ ಬಿಡುಗಡೆ ಮಾಡಿದ್ದಾರೆ. ಮುಂದಿನ ವರ್ಷದ ಮಾರ್ಚ್‍ವರೆಗೆ ಟಿಡಿಎಸ್ ಮತ್ತು ಟಿಸಿಎಸ್ ಕಡಿತವನ್ನು ಸದ್ಯ ಇರೋ ದರದಲ್ಲಿ ಶೇ.25ರಷ್ಟು ಕಡಿತಗೊಳಿಸಲಾಗುತ್ತದೆ.

    ಪ್ರಫೋಷನಲ್ ಫೀ, ಕ್ಯಾಂಟ್ರಾಕ್ಟ್ ಪೇಮೆಂಟ್, ಬಡ್ಡಿ, ಬಾಡಿಗೆ, ಡಿವಿಡೆಂಡ್, ಕಮಿಷನ್, ಬ್ರೋಕರೇಜ್ ಸೇರಿದಂತೆ ಎಲ್ಲವೂ ಟಿಡಿಎಸ್ ಕಡಿತಕ್ಕೆ ಅನ್ವಯವಾಗಲಿದೆ. ಈ ಕಡಿತದ ಅನ್ವಯ ನಾಳೆಯಿಂದ ಮಾರ್ಚ್ 31, 2021ರವರೆಗೆ ಇರಲಿದೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 50 ಸಾವಿರ ಕೋಟಿ ಹೊರೆ ಆಗಲಿದೆ.

    ಇನ್‍ಕಮ್ ಟ್ಯಾಕ್ಸ್ ರಿಟರ್ನ್ ಸಲ್ಲಿಕೆಗೆ ಈ ಮೊದಲು ಜುಲೈ 31 ರಿಂದ ಅಕ್ಟೋಬರ್ 31ರವರೆಗೆ ದಿನಾಂಕ ನಿಗದಿಯಾಗಿತ್ತು. ಆದರೆ ಈಗ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ. ಟ್ಯಾಕ್ಸ್ ಆಡಿಟ್ ಅವಧಿಯನ್ನು ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ವಿವಾದ್ ಸೇ ವಿಶ್ವಾಸ್ ಯೋಜನೆಯಡಿಯಲ್ಲಿ ಹೆಚ್ಚುವರಿ ಮೊತ್ತವಿಲ್ಲದೇ ಪಾವತಿಸಲು ಅವಕಾಶ ನೀಡಿದ್ದು, 31ನೇ ಡಿಸೆಂಬರ್ 2020ರವರೆಗೆ ಅವಧಿ ವಿಸ್ತರಿಸಲಾಗಿದೆ.

  • ಕೇಂದ್ರದಿಂದ ಪಿಎಫ್ ಹಣ – 20 ಲಕ್ಷ ಕೋಟಿ ರೂ. ಹಂಚಿಕೆ ಹೇಗೆ?

    ಕೇಂದ್ರದಿಂದ ಪಿಎಫ್ ಹಣ – 20 ಲಕ್ಷ ಕೋಟಿ ರೂ. ಹಂಚಿಕೆ ಹೇಗೆ?

    ನವದೆಹಲಿ: 15 ಸಾವಿರ ರೂ.ಕ್ಕಿಂತ ಕಡಿಮೆ ವೇತನ ಪಡೆಯುವ ಉದ್ಯೋಗಿಗಳ ಸಂಬಳದಲ್ಲಿ ಕಡಿತವಾಗ್ತಿದ್ದ ಪಿಎಫ್ ಮತ್ತು ಇಪಿಎಫ್ ಮೊತ್ತವನ್ನು ಸರ್ಕಾರ ಮೂರು ತಿಂಗಳು ಪಾವತಿಸಲಿದೆ. 72 ಲಕ್ಷ ಉದ್ಯೋಗಿಗಳಿಗೆ ಈ ಯೋಜನೆಯ ಲಾಭ ಸಿಗಲಿದೆ ಎಂಧು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

    ಕೋವಿಡ್ 19 ನಿಂದಾಗಿ ದೇಶದ ಆರ್ಥಿಕತೆಯನ್ನು ಮೇಲಕ್ಕೆ ಎತ್ತಲು ಪ್ರಧಾನಿ ನರೇಂದ್ರಮೋದಿ ಮಂಗಳವಾರ 20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಪ್ರಕಟಿಸಿದ್ದರು. ಇಂದು ಈ ಪ್ಯಾಕೇಜಿಗೆ ಸಂಬಂಧಿಸಿದಂತೆ ನಿರ್ಮಲಾ ಸೀತಾರಾಮನ್ ಮತ್ತು ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸುದ್ದಿಗೋಷ್ಠಿ ನಡೆಸಿ ಯಾವುದಕ್ಕೆ ಹಣವನ್ನು ಹೇಗೆ ಹಂಚಿಕೆ ಮಾಡಲಾಗುತ್ತದೆ ಎಂಬ ವಿವರವನ್ನು ಪ್ರಕಟಿಸಿದರು.

    ಸ್ವಾವಲಂಬಿ ಭಾರತಕ್ಕೆ ಮತ್ತು ಮೇಕ್ ಇನ್ ಇಂಡಿಯಾ ಉತ್ತೇಜಿಸಲು 200ಕೋಟಿ ರೂ ಕಡಿಮೆ ಸರ್ಕಾರಿ ಖರೀದಿಗಳಿಗೆ ಜಾಗತಿಕ ಟೆಂಡರ್ ಕರೆಯುವುದಕ್ಕೆ ನಿಷೇಧ. ಮುಂದಿನ 45 ದಿನದೊಳಗೆ ಸರ್ಕಾರಿ ಕಚೇರಿಗಳು, ಸಂಸ್ಥೆಗಳಿಂದ ಎಂಎಸ್ ಎಂ ಇ ಗಳಿಗೆ ಬಾಕಿ ಇರುವ ಮೊತ್ತ ಪಾವತಿಸಲಾಗುತ್ತದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿದರು.

    ಸುದ್ದಿಗೋಷ್ಠಿಯ ಮುಖ್ಯಾಂಶಗಳು
    – ಇಪಿಎಫ್ ಮತ್ತು ಪಿಎಫ್‍ಗಾಗಿ ಸರ್ಕಾರದಿಂದ 2500 ಕೋಟಿ ರೂ. ಹಣ ಮೀಸಲು. ಉದ್ಯೋಗಿಗಳ ಸಂಬಳದಲ್ಲಿ ಇಪಿಎಫ್ ಕಡಿತವನ್ನು ಶೇ.12ರಿಂದ ಶೇ.10ಕ್ಕೆ ಇಳಿಕೆ. ಪಿಎಸ್‍ಯುನಲ್ಲಿ ಶೇ.12ರಷ್ಟು ಇಪಿಎಫ್ ಕಡಿತವಾಗಲಿದೆ.

    – ಸಣ್ಣ ಮತ್ತು ಲಘು ಕೈಗಾರಿಕೆಗಳಿಗೆ 3 ಲಕ್ಷ ಕೋಟಿ: ಸಣ್ಣ, ಅತಿ ಸಣ್ಣ ಉದ್ಯಮ ಹೊಸ ವ್ಯವಹಾರಗಳಿಗೆ – ಅಡಮಾನ ರಹಿತ 3 ಲಕ್ಷ ಕೋಟಿ ಸಾಲದ ಮಹತ್ವದ ಘೋಷಣೆ.
    – ಕೋವಿಡ್-19 ನಿಂದ ಬಹುತೇಕ ಮಧ್ಯಮ ಮತ್ತು ಸಣ್ಣ ಉದ್ಯಮಗಳ ಹೊಣೆಗಾರಿಕೆ ಹೆಚ್ಚಾಗುತ್ತಿದೆ. ಕಚ್ಚಾ ವಸ್ತುಗಳು ಖರೀದಿ ಮತ್ತು ವ್ಯವಹಾರಗಳನ್ನು ಪುನಃ ಆರಂಭಿಸಲು ಉತ್ತೇಜನ ನೀಡುವ ಅವಶ್ಯಕತೆ ಇದೆ.

    – ವ್ಯವಹಾರ/ಎಂಎಸ್‍ಎಂಇ ಗಳಿಗೆ ಬ್ಯಾಂಕ್ ಮತ್ತು ಎನ್‍ಬಿಎಫ್‍ಸಿಗಳಿಂದ ಅವರ ಔಟ್ ಸ್ಟ್ಯಾಂಡಿಂಗ್ (29.02.2020) ಕ್ರೆಡಿಟ್ ನ ಶೇ.20ರಷ್ಟು ಸಾಲ ಸೌಲಭ್ಯ. ಸಾಲ ಪಡೆಯುವ ವ್ಯವಹಾರದ ಟರ್ನ್ ಓವರ್ 25 ಕೋಟಿಯಿಂದ 100 ಕೋಟಿ ರೂ. ಒಳಗಿರಬೇಕು. ಸಾಲದ ಅವಧಿ 4 ವರ್ಷ ಇರಲಿದ್ದು, ಮೊದಲ 12 ತಿಂಗಳ ಅಸಲು ಪಾವತಿ ಮೇಲೆ ನಿಷೇಧ

    – ಬ್ಯಾಂಕ್ ಮತ್ತು ಎನ್‍ಬಿಎಫ್‍ಸಿ ಅಸಲು ಮತ್ತು ಬಡ್ಡಿಯ ಮೇಲೆ ಶೇ.100ರಷ್ಟು ಗ್ಯಾರೆಂಟಿ. ಅಕ್ಟೋಬರ್ 31, 2020ರಿಂದ ಈ ಯೋಜನೆ ಆರಂಭವಾಗಲಿದೆ. ಈ ಯೋಜನೆಯಿಂದ 45 ಲಕ್ಷ ಘಟಕಗಳಿಗೆ ಪ್ರೋತ್ಸಾಹ.

    – ಜಾಗತಿಕ ಟೆಂಡರ್ ಇಲ್ಲ: ಸ್ಥಳೀಯ ಮತ್ತು ಸಣ್ಣ ಹಾಗೂ ಲಘು ಕಂಪನಿಗಳು ಜಾಗತಿಕ ಮಾರುಕಟ್ಟೆಯ ಪೈಪೋಟಿಯಿಂದ ನಷ್ಟಕ್ಕೆ ಒಳಗಾಗಿದ್ದವು. ಹಾಗಾಗಿ ಜಾಗತಿಕ ಟೆಂಡರ್ ನಿಷೇಧಿಸಲಾಗಿದೆ. ಈ ಯೋಜನೆ ಸಂಪೂರ್ಣ ಆತ್ಮನಿರ್ಭರ ಭಾರತ ಅಭಿಯಾನದಡಿಯಲ್ಲಿ ಬರಲಿದೆ. ಜಾಗತಿಕ ಟೆಂಡರ್ ನಿಷೇಧ ಸಣ್ಣ ಹಾಗೂ ಲಘು ಉದ್ಯಮಗಳ ಚೇತರಿಕೆಗೆ ಕಾರಣವಾಗಲಿದೆ.

    – 30 ಸಾವಿರ ಕೋಟಿ ಅನುದಾನದಲ್ಲಿ ಸ್ಪೆಷಲ್ ಲಿಕ್ವಿಡಿಟಿ ಸ್ಕೀಮ್ ಆರಂಭಿಸಲಾಗುವುದು. ಭಾಗಶಃ ಕ್ರೆಡಿಟ್ ಗ್ಯಾರೆಂಟಿ ಸ್ಕೀಮ್ 2.0 ಮೂಲಕ 45 ಸಾವಿರ ಕೋಟಿ ಬಂಡವಾಳ ಹೂಡಿಕೆ. ವಿದ್ಯುತ್ ಪ್ರಸರಣ ಕಂಪನಿಗಳಿಗಾಗಿ 90 ಸಾವಿರ ಕೋಟಿ ರೂ. ಅನುದಾನದ ಘೋಷಣೆ. ಸರ್ಕಾರಿ ಗುತ್ತಿಗೆಗಳ ಎಲ್ಲ ಅವಧಿಯನ್ನು ಆರು ತಿಂಗಳಿಗೆ ವಿಸ್ತರಣೆಯ ಮಹತ್ವದ ಘೋಷಣೆಯನ್ನು ಮಾಡಿದೆ.

  • ಪಿಎಫ್ ಕೇಳಿದ್ದಕ್ಕೆ ಕಂಪನಿಯಿಂದ 30 ಮಂದಿ ಕಾರ್ಮಿಕರನ್ನ ಹೊರಹಾಕಿದ್ರು

    ಪಿಎಫ್ ಕೇಳಿದ್ದಕ್ಕೆ ಕಂಪನಿಯಿಂದ 30 ಮಂದಿ ಕಾರ್ಮಿಕರನ್ನ ಹೊರಹಾಕಿದ್ರು

    ಚಿಕ್ಕಬಳ್ಳಾಪುರ: ಕಂಪನಿ ಕಡೆಯಿಂದ ಪಿಎಫ್(ಭವಿಷ್ಯ ನಿಧಿ) ಕಟ್ಟುತ್ತಿಲ್ಲ ಯಾಕೆ ಎಂದು ಕೇಳಿದ 30 ಮಂದಿ ಕಾರ್ಮಿಕರನ್ನು ಕೆಲಸದಿಂದ ಹೊರಹಾಕಿದ್ದಾರೆ ಎಂದು ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ನಗರ ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ.

    ಸ್ಯಾಮ್ಕೋ ಕಂಪನಿಯಲ್ಲಿ ಕಳೆದ 2 ವರ್ಷಗಳಿಂದ ಚಿಕ್ಕಬಳ್ಳಾಪುರ ಮೂಲದ 24 ಮಂದಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಕೆಲಸಕ್ಕೆ ಸೇರಿದಾಗ 11,000 ಸಂಬಳ, ಇಎಸ್‍ಐ ಹಾಗೂ ಪಿಎಫ್ ಸೌಲಭ್ಯ ನೀಡುವುದಾಗಿ ಕೆಲಸ ಕೊಟ್ಟಿದ್ದ ಕಂಪನಿಯವರು, ಈಗ ತಿಂಗಳಿಗೆ 7,000 ಸಂಬಳ ಮಾತ್ರ ಕೊಡುತ್ತಿದ್ದಾರೆ.

    ಇಷ್ಟು ದಿನ ಪಿಎಫ್ ಕಟ್ಟುತ್ತಿದ್ದೇವೆ ಎಂದು ಹೇಳಿದ್ದ ಕಂಪನಿ ಈಗ ಕಟ್ಟಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ ಪ್ರಶ್ನೆ ಮಾಡಿದ ಕಾರ್ಮಿಕರನ್ನು ಹೊರಹಾಕಿದ ಮ್ಯಾನೇಜರ್ ಕಂಪನಿ ಓಳಗೆ ಬಾರದಂತೆ ಬೀಗ ಜಡಿದಿದ್ದಾರೆ. ಇದರಿಂದ ಕಾರ್ಮಿಕರು ಪ್ರತಿಭಟನೆ ನಡೆಸಿದರು.

    ಈ ವಿಷಯ ತಿಳಿದು ಸ್ಥಳಕ್ಕೆ ಬಂದ ನಂದಿಗಿರಿಧಾಮ ಪೊಲೀಸರು, ಕಾರ್ಮಿಕರು ಹಾಗೂ ಮ್ಯಾನೇಜರ್ ನಡುವೆ ಮಾತುಕತೆ ನಡೆಸಿದ್ದು, ಸಮಸ್ಯೆ ಬಗೆಹರಿಸಲು ಮುಂದಾಗಿದ್ದಾರೆ. ಆದರೆ ಕಂಪನಿಯಲ್ಲಿ ತಮಿಳುನಾಡಿನವರಿಗೊಂದು ನ್ಯಾಯ ಕನ್ನಡಿಗರಿಗೊಂಡು ನ್ಯಾಯ ಎಂಬಂತೆ, ಅವರಿಗೆ ಮಾತ್ರ ಅಪಾಯಿಂಟ್‍ಮೆಂಟ್ ಲೆಟರ್, ಐಡಿ ಕಾರ್ಡ್, ಪಿಎಫ್ ಎಲ್ಲಾ ಕೊಡುತ್ತಿದ್ದಾರೆ, ನಮಗೆ ಕೊಡುತ್ತಿಲ್ಲ ಎಂದು ದೂರಿದ್ದಾರೆ.