Tag: ಪಿಎಸ್‌ಐ ಅಕ್ರಮ

  • PSI ಅಕ್ರಮ – ಪರೀಕ್ಷಾ ಕೇಂದ್ರದಲ್ಲಿ ಡೀಲಿಂಗ್ ಹೇಗೆ ನಡೀತಿತ್ತು? ಒಬ್ಬರಿಗೆ ಎಷ್ಟು ಲಕ್ಷ?

    PSI ಅಕ್ರಮ – ಪರೀಕ್ಷಾ ಕೇಂದ್ರದಲ್ಲಿ ಡೀಲಿಂಗ್ ಹೇಗೆ ನಡೀತಿತ್ತು? ಒಬ್ಬರಿಗೆ ಎಷ್ಟು ಲಕ್ಷ?

    ಬೆಂಗಳೂರು: ಪಿಎಸ್‍ಐ ಪರೀಕ್ಷೆಯ ಅಕ್ರಮದಲ್ಲಿ ಬಗೆದಷ್ಟು ರಹಸ್ಯ ಬಯಲಾಗುತ್ತಿದ್ದು, ಜ್ಞಾನಜ್ಯೋತಿ ಇಂಗ್ಲೀಷ್ ಮೀಡಿಯಂ ಸ್ಕೂಲ್ ನಲ್ಲಿ ಡಿಲಿಂಗ್ ಹೇಗೆ ನಡೆಯುತಿತ್ತು ಎಂಬುವುದರ ಬಗ್ಗೆ ಪ್ರಿನ್ಸಿಪಾಲ್ ಆಗಿರುವ ಆರೋಪಿ ಕಾಶಿನಾಥ ಬಹಿರಂಗ ಪಡೆಸಿದ್ದಾನೆ.

    ಸಿಐಡಿ ಆರೋಪಿಗಳನ್ನು ವಿಚಾರಣೆ ನಡೆಸುತ್ತಿದ್ದು ಸ್ಫೋಟಕ ವಿಚಾರಗಳು ಲಭ್ಯವಾಗುತ್ತಿದೆ. 2014ರಿಂದ ಈ ರೀತಿಯ ಕೃತ್ಯ ಎಸಗುತ್ತಿದ್ದೆ ಎಂದು ಕಾಶಿನಾಥ ಹೇಳಿರುವುದಾಗಿ ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ. ಇದನ್ನೂ ಓದಿ: ಉಸ್ಮಾನಿಯಾ ವಿವಿಯಲ್ಲಿ ರಾಹುಲ್ ಸಂವಾದಕ್ಕೆ ಬ್ರೇಕ್ – ಹೈಕೋರ್ಟ್‍ನಿಂದ ಅರ್ಜಿ ವಜಾ

    KARNATAKA PSI EXAM

    ದಿವ್ಯಾ ಹಾಗರಗಿ ಹಾಗೂ ಮಂಜುನಾಥ ಮೇಲ್ಕುಂದಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದ್ದರು. ಕ್ಯಾಂಡಿಡೇಟ್‍ಗಳಿಂದ ಅರ್ಧ ಹಣ ಪಾವತಿ ಆಗುತ್ತಿದ್ದಂತೆ ಆಗುತ್ತಿದ್ದಂತೆ ರೋಲ್ ನಂಬರ್ ಸ್ಕೂಲ್ ಪ್ರಿನ್ಸಿಪಾಲ್‍ಗೆ ಹೋಗುತ್ತಿತ್ತು. ನಂತರ ಜ್ಞಾನ ಜ್ಯೋತಿ ಸ್ಕೂಲ್ ಪ್ರಿನ್ಸಿಪಾಲ್ ಕಾಶಿನಾಥ ಡೀಲಿಂಗ್ ಪಡೆಯುತ್ತಿದ್ದ. ಡೀಲಿಂಗ್ ಪಡೆದು ಇನ್ವಿಜಿಲೇಟರ್‌ಗಳನ್ನು ಬುಕ್ ಮಾಡಿಕೊಳ್ಳುತ್ತಿದ್ದ.

    545 ಪಿಎಸ್‍ಐ ಪೋಸ್ಟ್ ಪರೀಕ್ಷೆ ಯಲ್ಲಿ ಜ್ಞಾನ ಜ್ಯೋತಿ ಪರೀಕ್ಷಾ ಕೇಂದ್ರಕ್ಕೆ ಸಾವಿತ್ರಿ, ಸುಮಾ, ಅರ್ಚನಾ, ಸುನಂದಾ, ಸಿದ್ದಮ್ಮ ಇನ್ವಿಜಿಲೇಟರ್‌ಗಳಾಗಿ ಹೋಗಿದ್ದರು. ಈ ಐವರಿಗೂ ಕಾಶಿನಾಥ್ ಅಭ್ಯರ್ಥಿಗಳ ರೋಲ್ ನಂಬರ್ ಮೆಸೇಜ್ ಮಾಡುತ್ತಿದ್ದನು. ನಂತರ ಆ ರೋಲ್ ನಂಬರ್‌ನಲ್ಲಿರುವ ಕ್ಯಾಂಡಿಡೇಟ್‍ಗಳಿಗೆ ಇದೇ ಮೇಲ್ವಿಚಾರಕರು ಉತ್ತರಗಳ ಚೀಟಿಯನ್ನು ತೆಗೆದುಕೊಂಡು ಹೋಗಿ ಕೊಡುತ್ತಿದ್ದರು. ಇದೇ ವೇಳೆ ಬೇರೆ ಅಭ್ಯರ್ಥಿಗಳು ನೋಡಬಹುದು ಅಂತ ಎಕ್ಸಾಂನ ಬಳಿಕ ಮೇಲ್ವಿಚಾರಕರು ತಿದ್ದುವುದಾಗಿ ಹೇಳುತ್ತಿದ್ದರು.

    Divya hagaragi (2)

    ಕೇವಲ ವಾಟ್ಸಪ್ ಮೂಲಕವೇ ಕಾಶಿನಾಥ ಮೇಲ್ವಿಚಾರಕರಿಗೆ ಎಲ್ಲ ಮಾಹಿತಿಯನ್ನು ನೀಡುತ್ತಿದ್ದ. ಈ ಕೆಲಸವನ್ನು ಮಾಡಲು ಒಬ್ಬೊಬ್ಬ ಮೇಲ್ವಿಚಾರಕರಿಗೆ ಕಾಶಿನಾಥ 1 ಲಕ್ಷ ರೂಪಾಯಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನವೇ ನೀಡುತ್ತಿದ್ದ. ಹಣವನ್ನು ಪಡೆದ ಬಳಿಕ ಇವರು ಕೊಠಡಿಯ ಪರಿವೀಕ್ಷಣೆಗೆ ತೆರಳುತ್ತಿದ್ದರು. ಈ ಸ್ಕ್ಯಾಮ್‍ನಲ್ಲಿ ಕಾಶಿನಾಥ ನಾಲ್ಕು ಲಕ್ಷ ರೂಪಾಯಿ ಇಟ್ಟುಕೊಳ್ಳುತ್ತಿದ್ದನು. ಇದೀಗ ಸಿಐಡಿ  ಪೊಲೀಸರ ಮುಂದೆ 2014 ರಿಂದ ವ್ಯವಹಾರ ಮಾಡುತ್ತಿದ್ದೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾನೆ. ದಿವ್ಯಾ, ಮಂಜುನಾಥ ಹೇಳುತ್ತಿದ್ದಂತೆ ನನಗೆ ಬೇಕಾದ ಮೇಲ್ವಿಚಾರಕರನ್ನು ಆಯ್ಕೆ ಮಾಡಿಕೊಳ್ಳುತ್ತಿದ್ದೆ ಎಂದಿದ್ದಾನೆ. ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಆರ್ಭಟ – GRPA ಆ್ಯಕ್ಷನ್ ಪ್ಲಾನ್‌ನಂತೆ ರೆಡ್‌ಅಲರ್ಟ್ ಘೋಷಣೆ

    ಮತ್ತಷ್ಟು ತನಿಖೆ ನಡೆಸಬೇಕಾದ ಕಾರಣ ಮತ್ತೆ ಎಂಟು ದಿನಗಳ ಕಾಲ ಮಂಜುನಾಥ ಮೇಲ್ಕುಂದಿ, ಕಾಶಿನಾಥ, ಅಭ್ಯರ್ಥಿ ಶ್ರೀಧರನನ್ನು ಕಸ್ಟಡಿಗೆ ಪಡೆಯಲಾಗಿದೆ. ಈ ಹಿಂದೆ ಸೆಲೆಕ್ಟ್ ಆದ ವ್ಯಕ್ತಿಗಳ ಮಾಹಿತಿಯನ್ನು ಕೂಡ ಕಾಶಿನಾಥ ಬಾಯ್ಬಿಟ್ಟಿದ್ದಾನಂತೆ. ಈಗಿರುವ ಹಾಲಿ ಪಿಎಸ್‍ಐಗಳ ಗುಂಪಲ್ಲೂ ಗೋಲ್ ಮಾಲ್ ನಡೆದು ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಶಿನಾಥ ಹೇಳಿದ್ದಾನೆ.

    ಮತ್ತೊಂದೆಡೆ ಪರೀಕ್ಷಾ ಕೇಂದ್ರದಲ್ಲಿ ನಡೆದಿರುವ ಅಕ್ರಮಗಳಿಗೆ ಪೊಲೀಸರೇ ಶ್ರೀರಕ್ಷೆ ನೀಡಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರಿನ ಪಾಲು ಬಹಳ ದೊಡ್ಡದಿದೆ. ಅದಕ್ಕೆ ಅರೆಸ್ಟ್ ಆಗಿ ಸಿಐಡಿ ಕಸ್ಟಡಿಯಲ್ಲಿರೋ ಅಭ್ಯರ್ಥಿಗಳ ಸಂಖ್ಯೆ ಸಾಕ್ಷಿ. ಅಲ್ಲದೆ, ಬಹುತೇಕ ಟಾಪರ್ಸ್‍ಗಳೇ ಹಿಟ್ ಲಿಸ್ಟ್‍ನಲ್ಲಿದ್ದಾರೆ. ಪಿಎಸ್‍ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಟಾಪರ್ಸ್‍ಗಳೇ ಆರೋಪಿಗಳ ಪಟ್ಟಿಯಲ್ಲಿದ್ದಾರೆ.

    ಈ ಪ್ರಕರಣದಲ್ಲಿ ನಾಲ್ವರು ಡಿವೈಎಸ್‍ಪಿ, ಇಬ್ಬರು ಸಿಪಿಐಗಳು ಭಾಗಿಯಾಗಿದ್ದು, ಅಭ್ಯರ್ಥಿಗಳಿಗೆ ಬ್ಲೂಟೂತ್ ಸರಬರಾಜು ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈಗಾಗಲೇ ಮೂವರು ಡಿವೈಎಸ್‍ಪಿಗಳ ವಿಚಾರಣೆ ನಡೆಸಿದ ಸಿಐಡಿ ಅಧಿಕಾರಿಗಳು ಓರ್ವ ಡಿವೈಎಸ್‍ಪಿಯ ಎರಡು ಮೊಬೈಲ್ ಸೀಜ್ ಮಾಡಿದ್ದಾರೆ.

  • ಪಿಎಸ್‍ಐ ನೇಮಕಾತಿಯಲ್ಲಿ 300 ಕೋಟಿಗೂ ಅಕ್ರಮ: ಸಿದ್ದರಾಮಯ್ಯ ಬಾಂಬ್

    ಪಿಎಸ್‍ಐ ನೇಮಕಾತಿಯಲ್ಲಿ 300 ಕೋಟಿಗೂ ಅಕ್ರಮ: ಸಿದ್ದರಾಮಯ್ಯ ಬಾಂಬ್

    ಬೆಂಗಳೂರು: ಪಿಎಸ್‍ಐ ಅಕ್ರಮದಲ್ಲಿ ಸಚಿವರು, ರಾಜಕಾರಣಿಗಳು, ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

    karnataka highcourt

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ, ಮಂತ್ರಿಗಳು, ಪೊಲೀಸ್ ಅಧಿಕಾರಿಗಳೇ ಶಾಮೀಲಾಗಿರೋದ್ರಿಂದ ಸಿಐಡಿಯಿಂದ ತನಿಖೆ ಸಾಧ್ಯವಿಲ್ಲ. ಇದನ್ನು ಕೂಡಲೇ ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು. ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆ ಆಗಬೇಕು ಅಂತಾ ಆಗ್ರಹಿಸಿದರು. ಇದನ್ನೂ ಓದಿ: ‘ಆರ್‌ಎಸ್‌ಎಸ್’ ದೇಶದ ಶ್ರೀಮಂತ ಎನ್‍ಜಿಓ, ಅದಕ್ಕೆ ಹಣ ಎಲ್ಲಿಂದ ಬರುತ್ತೆ?: ಬಿ.ಕೆ ಹರಿಪ್ರಸಾದ್

    ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಅಕ್ರಮವನ್ನು ಸೇರಿಸಿ ಎರಡು ನೇಮಕಾತಿ ಅಕ್ರಮ ಪ್ರಕರಣಗಳನ್ನ ನ್ಯಾಯಾಂಗ ತನಿಖೆಗೆ ಕೊಡಲಿ. ಜನ ಸಾಮಾನ್ಯರ ಪೀಡಕ ಸರ್ಕಾರ, ಜನ ಸಾಮಾನ್ಯರ ಸುಲಿಗೆ ಸರ್ಕಾರ ಇದು. ನರೇಂದ್ರ ಮೋದಿ ಅವರು ನಾಟಕ ಬಿಟ್ಟು ಇನ್ನಾದರೂ ತನಿಖೆ ಮಾಡಿಸಲಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವತ್ಥ ನಾರಾಯಣ್ ಶಾಮೀಲು: ಸಿದ್ದು ಆರೋಪ

    ಸರ್ಕಾರದ ಬಗ್ಗೆ ಜನರು ಛೀ ಥೂ ಅಂತಾ ಉಗಿಯುತ್ತಿದ್ದಾರೆ. ಬೇರೆ ಬೇರೆ ಇಲಾಖೆಗಳ ನೇಮಕಾತಿ ಅಕ್ರಮವೂ ಇದೆ. ಮತ್ತೊಮ್ಮೆ ಎಲ್ಲವನ್ನೂ ಹೇಳುತ್ತೇನೆ ಅಂತಾ ಕುತೂಹಲ ಹುಟ್ಟು ಹಾಕಿದರು. ನಮ್ಮಿಂದ ಮಾಹಿತಿಯನ್ನು ತೆಗೆದುಕೊಳ್ಳುವುದಾದರೆ ತೆಗೆದುಕೊಳ್ಳಲಿ. ಅದು ಬಿಟ್ಟು ನೋಟೀಸ್ ಕೊಡಲು ಅವರು ಯಾರು.? ಯಾವ ಕಾನೂನು ಇದೆ.? ಪ್ರಿಯಾಂಕ್ ಖರ್ಗೆಗೆ ನೊಟೀಸ್ ಕೊಟ್ಟಿರೋದು ತಪ್ಪು ಎಂದು ಸಿಡಿದರು.

    ಇದೇ ವೇಳೆ ಕುಮಾರಸ್ವಾಮಿ ಹೇಳಿಕೆ ಬಗ್ಗೆ ರಿಯಾಕ್ಟ್ ಮಾಡಲ್ಲ. ಅವರು ಬಿಜೆಪಿಗೆ ಸಪೋರ್ಟ್ ಮಾಡ್ತಾರೋ.? ಅಥವಾ ಬೇರೆ ಏನೋ.? ನಾನು ರಿಯಾಕ್ಟ್ ಮಾಡಲ್ಲ ಎಂದರು.

  • PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

    PSI ಟಾಪರ್ಸ್‍ಗಳ ಅಸಲಿ ಮುಖವಾಡ ಬಯಲು – ತಾತ್ಕಾಲಿಕ ಪಟ್ಟಿಯಲ್ಲಿ ಬೆಂಗ್ಳೂರಿನ 172 ಮಂದಿ ಆಯ್ಕೆ!

    ಬೆಂಗಳೂರು: ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಹಿಟ್ ಲಿಸ್ಟ್‌ನಲ್ಲಿರೋದೆ ಬಹುತೇಕ ಟಾಪರ್ಸ್‍ಗಳು. ಪಿಎಸ್‍ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಬಗೆದಷ್ಟು ಬಯಲಾಗುತ್ತಿದೆ ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಟಾಪರ್ಸ್‍ಗಳೇ ಆರೋಪಿಗಳ ಪಟ್ಟಿಯಲ್ಲಿದ್ದಾರೆ.

    ಸರ್ಕಾರ ನೇಮಕಾತಿ ರದ್ದು ಮಾಡುತ್ತಿದ್ದಂತೆ ಸಾಚಾಗಳ ರೀತಿಯಲ್ಲಿ ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಅಭ್ಯರ್ಥಿಗಳೇ ಹೈಗ್ರೌಂಡ್ಸ್ ಪೊಲೀಸ್ ಠಾಣೆಯ ಎಫ್‍ಐಆರ್‍ನಲ್ಲಿ ಎ1, ಎ17 ಆರೋಪಿಗಳಾಗಿದ್ದಾರೆ. ಪ್ರತಿಭಟನೆ ಮಾಡಿ ಶೋ ಕೊಟ್ಟಿದ್ದ ಜಾಗೃತ್ ಎ1 ಆರೋಪಿಯಾಗಿದ್ದು, ರಚನಾ ಎ17 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ 22 ಅಭ್ಯರ್ಥಿಗಳಲ್ಲಿ 12 ಮಂದಿಯನ್ನು ಹೈಗ್ರೌಂಡ್ಸ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ರಘುವೀರ್ ಹೆಚ್ ಯು.ಚೇತನ್ ಕುಮಾರ್.ಎಂಸಿ.ವೆಂಕಟೇಶ್ ಗೌಡ ಸಿ, ಮಮತೇಸ್ ಗೌಡ, ಮಧು ಆರ್, ದಿಲೀಪ್ ಕುಮಾರ್ ಸಿಕೆ, ಪ್ರವೀಣ್ ಕುಮಾರ್ ಹೆಚ್‍ಆರ್, ಸೂರ್ಯನಾರಾಯಣ, ನಾಗರಾಜ ಸಿ.ಎಂ ಸೇರಿ ಒಟ್ಟು 12 ಮಂದಿ ಅಭ್ಯರ್ಥಿಗಳನ್ನು ಸಿಐಡಿ ವಶಪಡಿಸಿಕೊಂಡಿದ್ದು ತನಿಖೆ ನಡೆಸಲಾಗುತ್ತಿದೆ. ಉಳಿದ ಹತ್ತು ಮಂದಿ ಅಭ್ಯರ್ಥಿಗಳು ತಲೆಮರೆಸಿಕೊಂಡಿದ್ದು ಹೈಗ್ರೌಂಡ್ಸ್ ಪೊಲೀಸರಿಂದ ಹುಡುಕಾಟ ನಡೆಸಲಾಗಿದೆ.

    ಇಷ್ಟಲ್ಲದೇ ದರ್ಶನ್ ಗೌಡ ಎಂಬ ಅಭ್ಯರ್ಥಿಯ ಹೆಸರು ಅಕ್ರಮದಲ್ಲಿ ಕೇಳಿ ಬಂದಿದ್ದು, ವಿಚಾರಣೆಗೆ ಬರುವಂತೆ ನೋಟಿಸ್ ಕೊಟ್ಟಿದ್ದರು ಅಕ್ರಮದ ಪ್ರಕರಣದಿಂದ ದರ್ಶನ್ ಗೌಡನನ್ನು ಬಚಾವ್ ಮಾಡಲಾಗಿದೆ ಎಂಬ ಗಂಭೀರವಾದ ಆರೋಪ ಕೇಳಿ ಬರುತ್ತಿದೆ. ಸದ್ಯ ಬಂಧಿತ 12 ಆರೋಪಿಗಳನ್ನು ಸಿಐಡಿ ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರೆಸಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ – ಕೈ ನಾಯಕರು ಗಾಳಿಯಲ್ಲಿ ಗುಂಡು ಹೊಡೆದಿದ್ದಾರೆ: ಅಶ್ವಥ್ ನಾರಾಯಣ

    ಪಿಎಸ್ ಐ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿ 545 ಅಭ್ಯರ್ಥಿಗಳು ಆಯ್ಕೆ ಆಗಿದ್ದು, ಬೆಂಗಳೂರಿನಿಂದ 172 ಜನ ಅಭ್ಯರ್ಥಿಗಳು ಆಯ್ಕೆ ಆಗಿದ್ರು. 172 ಅಭ್ಯರ್ಥಿಗಳಿಗೆ ತಮ್ಮ ಹಾಲ್ ಟಿಕೆಟ್ ಮತ್ತು ಓಎಮ್‍ಆರ್ ಪ್ರತಿಗಳನ್ನು ಹಾಜರುಪಡಿಸಲು ಸೂಚಿಸಿ ನೋಟಿಸ್ ನೀಡಿದ್ದ ಸಿಐಡಿ ಅಧಿಕಾರಿಗಳು. ಅದರಂತೆ 2022ರ ಏಪ್ರಿಲ್ 20, 21, 22 ರಂದು ವಿಚಾರಣೆ ಹಾಜರಾಗಿದ್ದರು 172 ಮಂದಿಯಲ್ಲಿ ಕೇವಲ 4 ಅಭ್ಯರ್ಥಿಗಳು ಕಾರ್ಬನ್ ಕಾಪಿ ಹಾಜರು ಪಡಿಸಿರಲಿಲ್ಲಾ. ಉಳಿದ 168 ಅಭ್ಯರ್ಥಿಗಳು ತಮ್ಮ ಕಾರ್ಬನ್ ಓಎಮ್‍ಆರ್ ಪ್ರತಿಗಳನ್ನು ಹಾಜರುಪಡಿಸಿದ್ರು. 168 ಕಾರ್ಬನ್ ಕಾಪಿಗಳನ್ನು ಎಫ್‍ಎಸ್‍ಎಲ್‍ಗೆ ಸಿಐಡಿ ಕಳುಹಿಸಿಕೊಟ್ಟಿತ್ತು. ಎಫ್‍ಎಸ್‍ಎಲ್ ವರದಿಯಲ್ಲಿ 22 ಅಭ್ಯರ್ಥಿಗಳ ಅಸಲಿ ಓಎಮ್‍ಆರ್ ಮತ್ತು ಓಎಮ್‍ಆರ್ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಪತ್ತೆಯಾಗಿದೆ.

    ಜಾಗೃತ್ ಎಸ್, ಗಜೇಂದ್ರ ಬಿ, ಸೋಮನಾಥ್ ಮಲಿಕಾರ್ಜುನಯ್ಯ, ರಘುವೀರ್ ಹೆಚ್.ಯು, ಚೇತನ್ ಕುಮಾರ್ ಎಂ.ಸಿ, ವೆಂಕಟೇಶ್ ಗೌಡ ಬಿ.ಸಿ, ಮನೋಜ್ ಎ.ಪಿ, ಮನುಕುಮಾರ್ ಜಿ ಆರ್, ಸಿದ್ದಲಿಂಗಪ್ಪ ಪದಶವಾಗಿ, ಮಮತೇಸ್ ಗೌಡ ಎಸ್, ಯಶವಂತಗೌಡ ಹೆಚ್, ನಾರಾಯಣ ಎಂ ಸಿ, ನಾಗೇಶ್ ಗೌಡ ಸಿ.ಎಸ್, ಮಧು ಆರ್, ಯಶವಂತ್ ದೀಪ್ ಸಿ, ದೀಲಿಪ್ ಕುಮಾರ್ ಸಿ.ಕೆ, ರಚನಾ ಹನಮಂತ್, ಶಿವರಾಜ ಜಿ, ಪ್ರವೀಣ್ ಕುಮಾರ್ ಹೆಚ್.ಆರ್, ಸೂರ್ಯನಾರಾಯಣ ಕೆ, ನಾಗರಾಜ ಸಿ.ಎಂ ಮತ್ತು ರಾಘವೇಂದ್ರ ಜಿ.ಸಿ ಸೇರಿ ಒಟ್ಟು 22 ಮಂದಿ ಸಿಐಡಿಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮದಲ್ಲಿ ಅಶ್ವಥ್ ನಾರಾಯಣ ಸಹೋದರನಿಗೆ ಲಿಂಕ್ : ಉಗ್ರಪ್ಪ ಆರೋಪ

  • ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಬೆಂಗಳೂರು: ಕುಂಬಳಕಾಯಿ ಕಳ್ಳ ಅಂದರೆ ಅಶ್ವಥ್‌ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

    ಅಶ್ವಥ್ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಮಾಧ್ಯಮಗಳು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂದು ಬಿಚ್ಚಿಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡಿದ್ದು. ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ? ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಬಂಡವಾಳ ಬಿಚ್ಚಿಡ್ತೀನಿ, ಕೊಳಕಿನ ಜಾಲ ಬಿಡಿಸ್ತೀನಿ: ಅಶ್ವಥ್ ನಾರಾಯಣ ಕಿಡಿ

    ಈ ಪ್ರಕರಣದ ವಿಚಾರವಾಗಿ ನನ್ನ ವಿರುದ್ಧ ದಾಖಲೆ ಇದ್ದರೆ ಶಿವಕುಮಾರ್ ಅವರು ಪ್ರಕಟಿಸಲಿ ಎಂದು ಸಚಿವ ಅಶ್ವಥ್ ನಾರಾಯಣ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ದೊಡ್ಡವರು, ದೊಡ್ಡವರಾಗಬೇಕು ಎಂದುಕೊಂಡಿರುವವರು. ಅವರ ವಿಚಾರವನ್ನು ನಾನು ಬಿಚ್ಚಿಡಲಿಲ್ಲ. ಮಾಧ್ಯಮಗಳು, ಮಾಗಡಿಯ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದಾಗ ಸಂತೋಷವಾಗಿತ್ತು. ಆನಂತರ ನಮ್ಮ ಪಕ್ಷದಲ್ಲಿದ್ದ ಕಾರ್ಯಕರ್ತರ ಕುಟುಂಬದವರು ಆಗಿದ್ದಾರೆ ಎಂದು ಹೇಳಿದ್ದು ಕೇಳಿ ಖುಷಿ ಆಯ್ತು. ಪರಿಸ್ಥಿತಿ ಹೀಗಿರುವಾಗ ಅನುಮಾನಗಳೆಲ್ಲವೂ ತಮ್ಮ ವಿರುದ್ಧವೇ ತಿರುಗುತ್ತಿದೆ ಎಂದು ಸಚಿವರು ಯಾಕೆ ಭಾವಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

    ಅಧಿಕಾರದ ದರ್ಪ ಹಾಗೂ ಭ್ರಷ್ಟಾಚಾರ ಡಿ.ಕೆ.ಶಿವಕುಮಾರ್ ಅವರ ಕುಟುಂಬದಲ್ಲಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಹೆಣದಲ್ಲಿ ಹಣ, ಸಹಾಯಕ ಪ್ರಾಧ್ಯಾಪಕ ಹುದ್ದೆ ಅಕ್ರಮ ಇವುಗಳನ್ನೆಲ್ಲಾ ನಾನು ಮಾಡಿದ್ದೀನಾ? ಈಗ ಸಾಲು ಸಾಲು ಹಗರಣಗಳು ಬೆಳಕಿಗೆ ಬಂದವಲ್ಲಾ ಅದನ್ನು ನಾವು ಮಾಡಿದ್ದೇವಾ? ನಮ್ಮ ಸರ್ಕಾರದಲ್ಲಿ ಈ ರೀತಿ ಆಗಿದೆಯಾ? ನಾವು ಕೇಳುತ್ತಿರುವುದು ಪಿಎಸ್ಐ ಅಕ್ರಮದ ಬಗ್ಗೆ ತನಿಖೆ ಮಾಡಿ, ನಂತರ ತೀರ್ಮಾನಿಸಿ ಎಂದು. ದರ್ಶನ್ ಗೌಡಗೆ ನೋಟಿಸ್ ಜಾರಿ ಮಾಡಿದ್ದೀರಿ. ಅವನ ವಿಚಾರಣೆ ಮಾಡಿದ ವರದಿ ಬಂದಿಲ್ಲ. ಆತ ಏಕಾಏಕಿ ಬಿಡುಗಡೆಯಾದ ಎಂದರೆ ಆತ ನಿರ್ದೋಷಿ ಎಂದು ಸಾಬೀತಾಯ್ತಾ? ಅವನ ವಿರುದ್ಧ ಯಾವ ರೀತಿ ತನಿಖೆ ನಡೆದಿದೆ? ಆತ ವಿಚಾರಣೆ ಮುಕ್ತನಾಗಲು ಯಾರು ಕಾರಣ? ಇದರ ಹಿನ್ನೆಲೆ ಏನು‌, ಯಾರು? ಮಾಧ್ಯಮಗಳಿಗೆ ಮಾಹಿತಿ ಎಲ್ಲಿಂದ ಬಂದಿದೆ ಎಂದು ಮೂಲದ ಬಗ್ಗೆ ಹೇಳುತ್ತೀರಾ? ನಾವು ನಮಗೆ ಯಾರು ಕರೆ ಮಾಡಿ ಹೇಳಿದ್ದಾರೆ ಎಂದು ಹೇಳಲು ಸಾಧ್ಯವೇ? ಸಮಯ ಬಂದಾಗ ಅದನ್ನೂ ಮಾಡುತ್ತೇವೆ ಎಂದು ಟಾಂಗ್‌ ನೀಡಿದ್ದಾರೆ. ಇದನ್ನೂ ಓದಿ: ಬದಲಾವಣೆ ಕಾಲ ಪ್ರಾರಂಭವಾಗಿದೆ, ಸಬೂಬುಗಳ ಕಾಲ ಮುಗಿದಿದೆ: ಬೊಮ್ಮಾಯಿ

    ರಾಮನಗರಕ್ಕೂ ಶಿವಕುಮಾರ್ ಅವರಿಗೂ ಸಂಬಂಧವಿಲ್ಲ. ಅಮಿತ್ ಶಾ ಬರುತ್ತಾರೆ ಎಂಬ ಕಾರಣಕ್ಕೆ ಈ ರೀತಿ ಪೂರ್ವನಿಯೋಜಿತ ಷಡ್ಯಂತ್ರ ಮಾಡಲಾಗಿದೆ ಎಂಬ ಸುಧಾಕರ್ ಅವರ ಆರೋಪ ಕುರಿತು ಮಾತನಾಡಿ, ನಾನು ಹಳ್ಳಿಯವನು. ದೊಡ್ಡಾಲಹಳ್ಳಿ ಕೆಂಪೇಗೌಡನ ಮಗ ಶಿವಕುಮಾರ್. ಹಳ್ಳಿಯಿಂದ ಇಲ್ಲಿಗೆ ಬಂದು ರಾಜಕಾರಣ ಮಾಡುತ್ತಿದ್ದೇನೆ. ಅವರು ರಾಮನಗರ ಸ್ವಚ್ಛ ಮಾಡಲು ಬಂದಿದ್ದಾರೆ, ಮಾಡಲಿ ಸಂತೋಷ ಎಂದು ಕುಟುಕಿದ್ದಾರೆ.

    ಡಿಕೆಶಿ ಬಂಡವಾಳ ಬಿಚ್ಚಿಡುತ್ತೇನೆ ಎಂಬ ಸವಾಲಿಗೆ ಪ್ರತಿಕ್ರಿಯಿಸಿ, ಮೊದಲು ಅವರು ವಿವಿಧ ನೇಮಕಾತಿ ಅಕ್ರಮದಲ್ಲಿ ಯುವಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲಿ. ನಂತರ ಉಳಿದ ವಿಚಾರ ಮಾತನಾಡೋಣ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

  • ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

    ಪ್ರಿಯಾಂಕ್ ಖರ್ಗೆಗೆ ಪ್ರಚಾರದ ಹುಚ್ಚು: ಸುನಿಲ್ ಕುಮಾರ್ ತಿರುಗೇಟು

    ಉಡುಪಿ: ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರ ಆರೋಪಗಳಿಗೆ ಇಂಧನ ಸಚಿವ ಸುನಿಲ್ ಕುಮಾರ್ ತಿರುಗೇಟು ನೀಡಿದ್ದಾರೆ. ಅಂದು ಬಿಟ್ ಕಾಯಿನ್, ಇಂದು ಪಿಎಸ್‌ಐ. ಪ್ರಿಯಾಂಕ್ ಖರ್ಗೆಗೆ ಕೇವಲ ಪ್ರಚಾರದ ಹುಚ್ಚು ಎಂದಿದ್ದಾರೆ.

    ಪ್ರಿಯಾಂಕ್ ಗಂಭೀರ ಆರೋಪಗಳನ್ನು ಯಾವತ್ತೂ ಮಾಡಿಲ್ಲ. ಬಿಟ್‌ಕಾಯಿನ್ ವಿಷಯದಲ್ಲೂ ಕೋಟ್ಯಂತರ ರೂ. ಅವ್ಯವಹಾರ ಆಗಿದೆ ಎಂದು ದೂರಿದ್ದಾರೆ. ಆದರೆ ಯಾವುದೇ ದಾಖಲೆಗಳನ್ನೂ ಕೊಟ್ಟಿಲ್ಲ. ಪ್ರತಿಯೊಂದು ವಿಷಯಕ್ಕೂ ಗಾಳಿಯಲ್ಲಿ ತೇಲಿಸಿ ದಾಖಲೆಗಳಿಲ್ಲದೆ ಮಾತನಾಡುತ್ತಾರೆ. ಅವರಿಗೆ ಪ್ರಚಾರದ ಹುಚ್ಚು ಇರುವುದರಿಂದ ನಿರಂತರ ಆರೋಪ ಮಾಡುತ್ತಾರೆ ಎಂದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಇಲ್ಲದಿರುವ ವಿಷಯವನ್ನು ಸೃಷ್ಟಿಸಿಲು ಪ್ರಯತ್ನಿಸ್ತಿದ್ದಾರೆ: ಡಾ.ಕೆ.ಸುಧಾಕರ್

    ಬಿಟ್‌ಕಾಯಿನ್ ವಿಚಾರದಲ್ಲಿ ಸಾಧಿಸಿದ್ದೇನು? ತನ್ನ ಮೇಲೆ ಬಂದ ಆರೋಪಗಳನ್ನು ಅಲ್ಲಗೆಳೆಯಲು ಈ ರೀತಿ ಮಾತನಾಡುತ್ತಾರೆ. ಪೊಲೀಸರಿಗೆ ಸಿಗದ ವಾಯ್ಸ್ ರೆಕಾರ್ಡ್ ಇವರಿಗೆ ಹೇಗೆ ಸಿಗುತ್ತದೆ? ಇವರ ಹುನ್ನಾರ ಇಲ್ಲದೇ ಇಷ್ಟೆಲ್ಲಾ ನಡೆಯಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ 20 ಕಡೆ ಒಬ್ಬರನ್ನೇ ಚುನಾವಣೆಗೆ ನಿಲ್ಲಿಸುವ ದಾರಿದ್ರ್ಯ ಬಂದಿದೆ: ಸುನಿಲ್ ಕುಮಾರ್

    ಪ್ರಿಯಾಂಕ್ ಖರ್ಗೆಗೆ ತನಿಖೆಯಾಗಬೇಕು ಎಂದು ಹೇಳಿದ್ದೇನೆ. ನೋಟಿಸ್ ಕೊಟ್ಟರೆ ಅವರು ಉತ್ತರ ಕೊಡುವುದಿಲ್ಲ ಎನ್ನುತ್ತಾರೆ. ಇದು ಪಲಾಯನವಾದ ಅಲ್ಲದೇ ಮತ್ತೇನು? ತಲೆಮರೆಸಿಕೊಂಡ ಆರೋಪಿಗಳ ರೀತಿಯಲ್ಲೇ ಇವರೂ ವರ್ತಿಸುತ್ತಾರೆ ಎಂದು ಸುನಿಲ್ ಕುಮಾರ್ ನೇರ ಆರೋಪ ಮಾಡಿದರು.

  • PSI ಅಕ್ರಮ – ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ಧ ಎಫ್‌ಐಆರ್

    PSI ಅಕ್ರಮ – ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ಧ ಎಫ್‌ಐಆರ್

    ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಟಾಪರ್ ಆಗಿದ್ದ ಅಭ್ಯರ್ಥಿ ರಚನಾ ಹನುಮಂತ ಸೇರಿದಂತೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಎಫ್‌ಐಆರ್‌ನಲ್ಲಿ ಎ 17ನೇ ಆರೋಪಿಯಾಗಿರುವ ರಚನಾ, ಮಹಿಳೆ ಎಸ್‌ಐ ಮೆರಿಟ್ ಪಟ್ಟಿಯಲ್ಲಿ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    police (1)

    ಸಿಐಡಿ ಡಿವೈಎಸ್‌ಪಿ ನರಸಿಂಹಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಈವರೆಗೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಒಟ್ಟು 172 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಕರೆಯಲಾಗಿತ್ತು. 4 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು.

    ಅಭ್ಯರ್ಥಿಗಳ ನಕಲಿ ಓಎಂಆರ್ ಶೀಟ್‌ಗಳನ್ನು ಪಂಚನಾಮೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ಬಳಿಕ ವೈಜ್ಞಾನಿಕವಾಗಿ ಪರಿಶೀಲಿಸಲು ಅಸಲು ಮತ್ತು ನಕಲಿ ಓಎಂಆರ್ ಪ್ರತಿಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು. ಏಪ್ರಿಲ್ 28 ರಂದು ಎಫ್‌ಎಸ್‌ಎಲ್‌ನಿಂದ ವರದಿ ಬಂದಿದ್ದು, 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದೆ. ಅಕ್ರಮವೆಸಗಿರೊ 22 ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. 22 ಅಭ್ಯರ್ಥಿಗಳು ಇತರ ವ್ಯಕ್ತಿಗಳೊಂದಿಗೆ ಸೇರಿ ಸಂಚು ರೂಪಿಸಿ ಅಕ್ರಮ ಎಸಗಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 13 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

    ಪ್ರಕರಣದ ಆರೋಪಿಯಾಗಿರುವ ರಚನಾ, ಆರಂಭದಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಾಮಾಣಿಕರ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಧ್ಯಮಗಳ ಮುಂದೆ ಮಾತನಾಡುವಾಗ, ಇಡೀ ರಾಜ್ಯಕ್ಕೆ ಮಹಿಳಾ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದು, ತುಂಬಾ ಖುಷಿ ಪಟ್ಟಿದ್ದೆ. ಆದರೆ ಈಗ ಮರು ಪರೀಕ್ಷೆಗೆ ಸರ್ಕಾರ ಆದೇಶ ಮಾಡಿದೆ. ಇದನ್ನು ಕೇಳಿ ತುಂಬಾ ಬೇಸರವಾಗಿದೆ. ಕಡು ಬಡತನದಿಂದ ಬಂದು ನಾನು ಓದಿದ್ದೇನೆ. ನಾನು ನಮ್ಮ ತಾಯಿ ಇಬ್ಬರೇ ಇದ್ದೇವೆ. ಹೆಣ್ಣು ಮಗು ಆಯ್ತು ಅಂತ ನಮ್ಮನ್ನು ನಮ್ಮ ತಂದೆ ಬಿಟ್ಟು ಹೋಗಿದ್ದರು. ನನಗಾಗಿ ನಮ್ಮ ತಾಯಿ 25 ವರ್ಷದಿಂದ ಕಷ್ಟ ಪಡುತ್ತಿದ್ದಾರೆ ಎಂದು ರಚನಾ ಹೇಳಿಕೊಂಡಿದ್ದರು.

    ಪಿಎಸ್ಐ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮೂಲದವರು. ರಚನಾ ತನ್ನ ತಾಯಿಯೊಂದಿಗೆ ವಾಸವಾಗಿದ್ದಾರೆ. ಬಾಗೇವಾಡಿಯ ಮಾವ, ಅಜ್ಜಿಯ ಜೊತೆಗಿದ್ದಾರೆ. ರಚನಾ ತಾಯಿ ಸಾವಿತ್ರಿ ಮುತ್ತಲಗೇರಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಸಾವಿತ್ರಿ ಅವರು ಈ ಹಿಂದೆ ಬಸವನ ಬಾಗೇವಾಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾದ್ದರು. ಕಳೆದ 5 ವರ್ಷದ ಹಿಂದೆ ಬೀದರ್ ಸೇರಿದ್ದರು. ಇದನ್ನೂ ಓದಿ: ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ

  • ದಿವ್ಯಾ ಹಾಗರಗಿ ವಾರದಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು – ನ್ಯಾಯಾಲಯ ಆದೇಶ

    ದಿವ್ಯಾ ಹಾಗರಗಿ ವಾರದಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು – ನ್ಯಾಯಾಲಯ ಆದೇಶ

    ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮದಲ್ಲಿ ಸಿಐಡಿಯಿಂದ ತಲೆ ಮರೆಸಿಕೊಂಡಿರುವ ದಿವ್ಯಾ ಹಾಗರಗಿ ಸೇರಿ 6 ಜನರಿಗೆ ಕಂಟಕ ಎದುರಾಗಿದೆ. ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ದಾವುದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಮಾದರಿಯಲ್ಲಿಯೇ ಈ 6 ಆರೋಪಿಗಳಿಗೆ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ.

    ಕರ್ನಾಟಕದ ಅಪರಾಧ ಪ್ರಕರಣಗಳಲ್ಲಿ ಇಂತಹ ಅರೆಸ್ಟ್ ವಾರೆಂಟ್ ಜಾರಿ ಆಗಿರುವುದು ಬಹು ಅಪರೂಪ. ತನಿಖಾ ಹಂತದಲ್ಲಿ ಜಾರಿ ಮಾಡಲಾಗುವ ವಾರೆಂಟ್ ಅನ್ವಯ ಆರೋಪಿಗಳು ಎಲ್ಲಿದ್ದರೂ ಬಂದು ಶರಣಾಗಲೇ ಬೇಕು. ಇಲ್ಲದಿದ್ದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕುವ ಸಾಧ್ಯತೆ ಇರುತ್ತದೆ. ಇದನ್ನೂ ಓದಿ: ಆರಗ ಜ್ಞಾನೇಂದ್ರ ರಾಜೀನಾಮೆ ನೀಡಬೇಕು – ರಾಜ್ಯಪಾಲರಿಗೆ ಎಎಪಿ ಮನವಿ

    court order law

    ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಮಾಸ್ಟರ್ ಮೈಂಡ್ ದಿವ್ಯಾ ಹಾಗರಗಿ, ಮಂಜುನಾಥ್ ಮೇಳಕುಂದಿ, ರವೀಂದ್ರ ಮೇಳಕುಂದಿ, ಅರ್ಚನಾ, ಕಾಶಿನಾಥ್, ಶಾಂತಿಬಾಯಿಗೆ ಕಲಬುರಗಿಯ 3ನೇ ಜೆಎಂಎಫ್‌ಸಿ ನ್ಯಾಯಾಲಯ ಇಂತಹದೊಂದು ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಮುಂಬೈ ಬ್ಲಾಸ್ಟ್ ಪ್ರಕರಣದಲ್ಲಿ ದಾವುದ್ ಇಬ್ರಾಹಿಂಗೆ ನೀಡಲಾಗಿದ್ದ ಅರೆಸ್ಟ್ ವಾರೆಂಟ್ ಉಲ್ಲೇಖಿಸಿ, ಸಿಐಡಿ ಪೊಲೀಸರು ನ್ಯಾಯಾಲಯಕ್ಕೆ ಕೋರಿಕೆ ಸಲ್ಲಿಸಿದ್ದರು. ಇದನ್ನೂ ಓದಿ: ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್

    ಸಿಐಡಿ ಕೋರಿಕೆಯಂತೆ ತನಿಖಾ ಹಂತದ ಅರೆಸ್ಟ್ ವಾರೆಂಟ್ ಜಾರಿ ಮಾಡಿ, ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವಾರದ ಒಳಗಡೆ ಆರೋಪಿಗಳು ಶರಣಾಗದಿದ್ದರೆ, ಉದ್ಘೋಷಿತ ಅಪರಾಧಿ ಎಂದು ಆಸ್ತಿ ಮುಟ್ಟುಗೋಲು ಹಾಕಿಕೊಳ್ಳವ ಎಲ್ಲಾ ಸಾಧ್ಯತೆ ಇದೆ. ಕಳೆದ 15 ದಿನಗಳಿಂದ ದಿವ್ಯಾ ಸೇರಿ 6 ಮಂದಿ ಆರೋಪಿಗಳು ಸಿಐಡಿಯಿಂದ ತಲೆ ಮರೆಸಿಕೊಂಡಿದ್ದಾರೆ. ಸಾಕಷ್ಟು ಶೋಧ ನಡೆಸಿದರೂ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂತಹ ಕಠಿಣ ಮಾರ್ಗಕ್ಕೆ ಸಿಐಡಿ ಇಳಿದಿದೆ.

  • 35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    ಕಲಬುರಗಿ: 35 ಲಕ್ಷ ಮುಂಗಡ ಪಾವತಿ. ಉಳಿದ ಹಣಕ್ಕೆ ಬೇಡಿಕೆ. ಬೇಡಿಕೆ ಈಡೇರಿಸದ್ದಕ್ಕೆ ಪ್ರಶ್ನೆ ಪತ್ರಿಕೆಯ ಅಕ್ರಮ ವ್ಯವಹಾರ ಔಟ್‌. ಇದು ರಾಜ್ಯದಲ್ಲಿ ಸಂಚಲನಕ್ಕೆ ಕಾರಣವಾಗಿರುವ ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌( ಪಿಎಸ್‌ಐ) ಹುದ್ದೆಗಳ ನೇಮಕಾತಿ ಅಕ್ರಮ ಬೆಳಕಿಗೆ ಬಂದ ಒಂದು ಪ್ಯಾರಾ ಸ್ಟೋರಿ.

    ಹೌದು. ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್‌ ಆಗುವುದು ಗೊತ್ತು. ಆದರೆ ಇಲ್ಲಿ ಪ್ರಶ್ನೆ ಪತ್ರಿಕೆ ಅಲ್ಲ. ಒಎಂಆರ್‌ ಶೀಟ್‌ನಲ್ಲೇ ಗೋಲ್ಮಾಲ್‌ ಮಾಡಲಾಗಿದೆ. ಈ ಕೃತ್ಯಕ್ಕೆ ಸಹಕಾರ ನೀಡಿದ ಸ್ನೇಹಿತನಿಂದಲೇ ಈಗ ಈ ಅಕ್ರಮ ಬಯಲಾಗಿರುವುದು ವಿಶೇಷ.

    ಅಕ್ರಮ ಎಸಗಿದ್ದು ಹೇಗೆ?
    2021ರ ಅಕ್ಟೋಬರ್‌ 3 ರಂದು ರಾಜ್ಯಾದ್ಯಂತ ಪಿಎಸ್‌ಐ ಪರೀಕ್ಷೆ ನಡೆದಿತ್ತು. ಕಲಬುರಗಿ ಜ್ಞಾನಜ್ಯೋತಿ ಶಾಲೆಯ ಮುಖ್ಯಸ್ಥೆ ದಿವ್ಯಾ ಮತ್ತು ತಂಡ ಹಣ ಬಲ ಹೊಂದಿರುವ ಅಭ್ಯರ್ಥಿಗಳ ಮಾಹಿತಿ ಸಂಗ್ರಹಿಸಿತ್ತು. ಲಕ್ಷಾಂತರ ರೂ. ನೀಡಿದವರ ಪರವಾಗಿ ಪರೀಕ್ಷೆಯಲ್ಲಿ ಅಕ್ರಮ ಮಾಡಲು ಸಹಕಾರ ನೀಡಿತ್ತು. ಪರೀಕ್ಷೆ ಮುಗಿದ ಬಳಿಕ ಕ್ಯಾಮೆರಾವನ್ನು ಬಂದ್‌ ಮಾಡಿ ಬಳಿಕ ಅಭ್ಯರ್ಥಿಗಳ ಒಎಂಆರ್‌ ಶೀಟ್‌ಗೆ ಸರಿ ಉತ್ತರವನ್ನು ಭರ್ತಿ ಮಾಡಲಾಗಿತ್ತು.

    ಬೆಳಕಿಗೆ ಬಂದಿದ್ದು ಹೇಗೆ?
    ಬಂಧನಕ್ಕೆ ಒಳಗಾದ ವೀರೇಶ್‌ಗೂ ಜ್ಞಾನ ಜ್ಯೋತಿ ಶಾಲೆಯೇ ಪರೀಕ್ಷೆ ಕೇಂದ್ರವಾಗಿತ್ತು. ವೀರೇಶ್ ಜ್ಞಾನ ಜ್ಯೋತಿ ಕೇಂದ್ರದಲ್ಲಿ ಪರೀಕ್ಷೆ ಬರೆಯುತ್ತಿರುವ ವಿಚಾರ ತಿಳಿದ ಆತನ ಸ್ನೇಹಿತ, ಜ್ಞಾನಜ್ಯೋತಿ ಕೇಂದ್ರವನ್ನೇ ಬಹಳ ಜನ ಇಷ್ಟಪಟ್ಟು ಆಯ್ಕೆ ಮಾಡುತ್ತಾರೆ. ಆದರೆ ನಿನ್ನ ಅದೃಷ್ಟದಿಂದ ಜ್ಞಾನ ಜ್ಯೋತಿ ಶಾಲೆಯ ಸೆಂಟರ್ ‌ಸಿಕ್ಕಿದೆ ಎಂದು ಹೇಳಿದ್ದ.

    ಈ ವಿಚಾರ ತಿಳಿದ ವೀರೇಶ್ ಕುತೂಹಲದಿಂದ ಜ್ಞಾನ ಜ್ಯೋತಿ ಕೇಂದ್ರದ ಬಗ್ಗೆ ವಿಚಾರಿಸಿದ್ದ. ಆಗ ಪಿಎಸ್ಐ ಪರೀಕ್ಷೆಯಲ್ಲಿ ಹಣ ನೀಡಿದರೆ ನೌಕರಿ ಖಂಡಿತ ಸಿಗುತ್ತೆ ಎಂದು ಸ್ನೇಹಿತ ವೀರೇಶನನ್ನು ಸ್ನೇಹಿತ ನಂಬಿಸಿದ್ದ. ಸ್ನೇಹಿತನ ಮಾತನ್ನು ಕೇಳಿದ ವೀರೇಶ್‌ ಎಷ್ಟು ಬೇಕಾದರೂ ಹಣ ನೀಡುತ್ತೇನೆ. ಏನಾದರೂ ಮಾಡಿ ಪರೀಕ್ಷೆಯಲ್ಲಿ ಪಾಸ್‌ ಮಾಡು ಎಂದು ಬೇಡಿಕೊಂಡಿದ್ದ. ವೀರೇಶನ ಮನವಿಯಂತೆ ಸ್ನೇಹಿತ ಅಕ್ರಮದ ಕಿಂಗ್‌ಪಿನ್‌ ಬಗ್ಗೆ ಮಾಹಿತಿ ನೀಡಿದ್ದ. ಬಳಿಕ ವಿರೇಶ್ ಕಿಂಗ್‌ಪಿನ್ ಜೊತೆ ಸೇರಿಕೊಂಡು ಪಿಎಸ್ಐ ನೌಕರಿಯ ಡೀಲ್‌ ಅನ್ನು 80 ಲಕ್ಷಕ್ಕೆ ಕುದುರಿಸಿದ್ದ. ಇದನ್ನೂ ಓದಿ: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡುವ ಆಲೋಚನೆ ಇಲ್ಲ: ಸುನಿಲ್‍ ಕುಮಾರ್

    ಈ ಡೀಲ್‌ನಂತೆ ಪರೀಕ್ಷೆಗೂ ಮುನ್ನವೇ ವೀರೇಶ್‌ 35 ಲಕ್ಷ ರೂ. ಹಣವನ್ನು ಪಾವತಿಸಿದ್ದ. ಹಣ ಕೊಟ್ಟ ಬಳಿಕ ವೀರೇಶ್‌ ಪರೀಕ್ಷೆಯಲ್ಲಿ ಕೇವಲ 20 ಅಂಕಕ್ಕೆ ಉತ್ತರ ಬರೆದಿದ್ದ. ಆದರೆ ಪರೀಕ್ಷಾ ಫಲಿತಾಂಶದ ವೇಳೆ 121 ಅಂಕ ಬಂದಿತ್ತು. ಇಷ್ಟೊಂದು ಅಂಕ ಬಂದ ಕಾರಣ ಸ್ನೇಹಿತ ವೀರೇಶ್ ಬಳಿ ಉಳಿದ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ.

    ನೀನು ಪಿಎಸ್ಐ ಆಗಲು ದಾರಿ ಹೇಳಿ ಕೊಟ್ಟವನು ನಾನು. ಹಾಗಾಗಿ ಹಣವನ್ನು ಸಂದಾಯ ಮಾಡು. ಕನಿಷ್ಟ ಐದು ಲಕ್ಷ ಹಣ ಕೊಡುವಂತೆ ಪೀಡಿಸುತ್ತಿದ್ದ. ಆದರೆ ವೀರೇಶ್‌ ಬಳಿ ಇಷ್ಟೊಂದು ಹಣ ಇರಲಿಲ್ಲ.

    ಹಣ ಕೊಡದೇ ಇದ್ದಾಗ ವಿರೇಶ್ ಸ್ನೇಹಿತನೇ ಆತನ ಒಎಂಆರ್ ಶೀಟ್ ಬೇರೆ ಅಭ್ಯರ್ಥಿಗಳಿಗೆ ಶೇರ್ ಮಾಡಿ ಅಕ್ರಮದ ಬಗ್ಗೆ ಬಾಯಿ ಬಿಟ್ಟಿದ್ದ. ಆಗ ಪರೀಕ್ಷೆಯಲ್ಲಿ ಅಕ್ರಮ ಆಗಿದೆ ಎಂದು ತಿಳಿದು ಉಳಿದ ಅಭ್ಯರ್ಥಿಗಳು ಸಿಎಂ ಮತ್ತು ಗೃಹ ಸಚಿವರಿಗೆ ದೂರು ನೀಡಿದ್ದರು. ಅಭ್ಯರ್ಥಿಗಳು ಸಲ್ಲಿಸಿದ ದೂರಿನ ಆಧಾರದ ಮೇಲೆ ಸರ್ಕಾರ ಅಕ್ರಮದ‌ ತನಿಖೆಯನ್ನು ಸಿಐಡಿ ಹೆಗಲಿಗೆ ನೀಡಿತ್ತು.

    ಸಿಐಡಿ ಅಧಿಕಾರಿಗಳು ಕಲಬುರಗಿಯ ಚೌಕ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಿ ಮೊದಲು ಬಂಧಿಸಿದ್ದೆ ವೀರೇಶನನ್ನು. ವೀರೇಶ್ ಬಂಧನದ ಬಳಿಕ ಅಕ್ರಮದ ಬಗ್ಗೆ ಒಂದೊಂದೇ ಮಾಹಿತಿ ಬಹಿರಂಗವಾಗತೊಡಗಿತು. ವೀರೇಶ್‌ನಂತೆ ಇನ್ನೂ ಹಲವಾರು ಅಭ್ಯರ್ಥಿಗಳು ಕಿಂಗ್‌ ಪಿನ್ ಗೆ ಹಣ ನೀಡಿದ್ದರು. ಇದನ್ನೂ ಓದಿ: ಮಠಕ್ಕೆ ನಾನು ಸಿಎಂ ಆಗಿ ಬಂದಿಲ್ಲ, ಭಕ್ತನಾಗಿ ಬಂದಿದ್ದೇನೆ: ಬೊಮ್ಮಾಯಿ

    ಕೋಟಿ ಕೋಟಿ ಹಣ ಪಡೆದ ಕಿಂಗ್‌ ಪಿನ್ ಅಭ್ಯರ್ಥಿಗಳನ್ನು ಪಾಸ್ ಮಾಡಿಸುವಲ್ಲಿ ಯಶಸ್ವಿಯಾಗಿದ್ದ. ಅಕ್ರಮದಲ್ಲಿ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಗೂ ಪಾಲು ಸಂದಾಯ ಆಗಿದ್ದು, ಅದಕ್ಕಾಗಿಯೇ ಜ್ಞಾನ ಜ್ಯೋತಿ ಶಾಲೆಯ ಮೇಲ್ವಿಚಾರಕರರಿಗೆ ನಾಲ್ಕು ಸಾವಿರ ರೂ. ಹಣವನ್ನು ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಅಕ್ರಮದ‌ ಬೆಳಕಿಗೆ ಬಂದಂತೆ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು ದಿವ್ಯಾ ಬಂಧನದ ಬಳಿಕವಷ್ಟೇ ಕಿಂಗ್ ಪಿನ್ ಪೂರ್ಣ  ಮಾಹಿತಿ ಹೊರ ಬರಲಿದೆ.

    ವೀರೇಶನಿಗೆ ಸಹಾಯ ಮಾಡಿದ್ದ ಸ್ನೇಹಿತ ಸಹ ಪರೀಕ್ಷೆ ಬರೆದಿದ್ದಾನೆ. ಆತ ಯಾರು? ಯಾವ ಕೇಂದ್ರದಲ್ಲಿ ಬರೆದಿದ್ದಾನೆ ಎಂಬುದರ ಬಗ್ಗೆ ಮಾಹಿತಿ ಸಿಕ್ಕಿಲ್ಲ.