ನವದೆಹಲಿ: ಕಾಂಗ್ರೆಸ್ ಪಿಒಕೆಯನ್ನು (ಪಾಕ್ ಆಕ್ರಮಿತ ಕಾಶ್ಮೀರ) ಪಾಕಿಸ್ತಾನಕ್ಕೆ ಬಿಟ್ಟುಕೊಟ್ಟಿದೆ. ಅದನ್ನು ನಾವು ಮರಳಿ ಪಡೆಯುತ್ತೇವೆ ಎಂದು ವಿಪಕ್ಷಗಳಿಗೆ ಕೇಂದ್ರ ಸಚಿವ ಅಮಿತ್ ಶಾ (Amit Shah) ಖಡಕ್ ಸಂದೇಶ ರವಾನಿಸಿದ್ದಾರೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರಾಣ ಕಳೆದುಕೊಂಡವರ ಸಂಬಂಧಿಕರಿಂದ ನನಗೆ ಬಹಳಷ್ಟು ಕರೆಗಳು ಬಂದವು. ಅವರು ಈ ಭಯೋತ್ಪಾದಕರ ತಲೆಗೆ ಗುಂಡು ಹಾರಿಸಿ ಕೊಲ್ಲುವಂತೆ ನನ್ನನ್ನು ವಿನಂತಿಸಿದ್ದರು. ನಮ್ಮ ಅಧಿಕಾರಿಗಳು ಅವರ ತಲೆಗೆ ಗುಂಡು ಹಾರಿಸಿ ಕೊಂದಿದ್ದಾರೆಂದು ತಿಳಿಸಿದ್ದಾರೆ.
ಸ್ಥಳದಲ್ಲಿ ವಶಪಡಿಸಿಕೊಂಡ ಗುಂಡುಗಳ ಕವಚಗಳು ಪಹಲ್ಗಾಮ್ನಲ್ಲಿ ಪತ್ತೆಯಾದ ಕವಚಗಳೊಂದಿಗೆ ಶೇ.99 ರಷ್ಟು ಹೊಂದಿಕೆಯಾಗುತ್ತವೆ ಎಂದು ಹೇಳಿದ್ದಾರೆ. ಕಾಶ್ಮೀರ ಭಯೋತ್ಪಾದನೆಯಿಂದ ಮುಕ್ತವಾಗಲಿದೆ ಎಂಬ ಬಲವಾದ ಸಂದೇಶವನ್ನು ನಾನು ನೀಡಲು ಬಯಸುತ್ತೇನೆ ಎಂದಿದ್ದಾರೆ.
ಗೃಹ ಸಚಿವರ ಭಾಷಣಕ್ಕೂ ಮುನ್ನ ಕಾಂಗ್ರೆಸ್ ಪ್ರತಿಭಟನೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಸದನದಲ್ಲಿ ಉಪಸ್ಥಿತರಿಲ್ಲ, ಚರ್ಚೆಗೆ ಉತ್ತರಿಸುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು. ನಂತರ ಪಕ್ಷವು ಸಚಿವರ ಪ್ರತಿಕ್ರಿಯೆಯನ್ನು ನಿರ್ಲಕ್ಷಿಸಿ ಸಭಾತ್ಯಾಗ ಮಾಡಿತು.
ಇಸ್ಲಾಮಾಬಾದ್: ‘ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಮಂಗಳವಾರ ತಡರಾತ್ರಿ ಪಾಕ್ ಆಕ್ರಮಿತ ಕಾಶ್ಮೀರ (POK) ಹಾಗೂ ಪಾಕಿಸ್ತಾನದ ಪ್ರಮುಖ ಪ್ರದೇಶಗಳಲ್ಲಿದ್ದ ಉಗ್ರರ 9 ತಾಣಗಳನ್ನು ಗುರಿಯಾಗಿಸಿ ಕ್ಷಿಪಣಿ ದಾಳಿ ನಡೆಸಿ ಪಹಲ್ಗಾಮ್ ದಾಳಿಗೆ ಭಾರತ ಪ್ರತೀಕಾರ ತೀರಿಸಿಕೊಂಡಿದೆ. ಈ ಬೆನ್ನಲ್ಲೇ ಪಿಒಕೆ ರಾಜಧಾನಿ ಮುಜಾಫರಾಬಾದ್ ನಿವಾಸಿಗಳಲ್ಲಿ ಆತಂಕ ಮನೆಮಾಡಿದ್ದು, ಊರು ತೊರೆಯುವ ನಿರ್ಧಾರ ಮಾಡುತ್ತಿದ್ದಾರೆ.
ದೇಶದ ಸೇನಾಪಡೆ, ವಾಯುಪಡೆ ಹಾಗೂ ನೌಕಾಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಊಹೆ ಮಾಡದಂಥ ರೀತಿಯಲ್ಲಿ ತಿರುಗೇಟು ನೀಡಿದೆ. ಬರೋಬ್ಬರಿ 24 ಕ್ಷಿಪಣಿಗಳನ್ನು ಬಳಸಿಕೊಂಡು ಕೇವಲ 25 ನಿಮಿಷಗಳಲ್ಲಿ ದಾಳಿ ನಡೆಸಿ ಉಗ್ರರ ಕ್ಯಾಂಪ್ ಹಾಗೂ 80 ಉಗ್ರರನ್ನು ಭಾರತ ಹೊಡೆದುರುಳಿಸಿದೆ. ಈ ದಾಳಿಯಲ್ಲಿ ಮುಜಾಫರಾಬಾದ್ನಲ್ಲಿದ್ದ ಲಷ್ಕರ್ ಉಗ್ರರ ತರಬೇತಿ ಕೇಂದ್ರವನ್ನೂ ಧ್ವಂಸ ಮಾಡಲಾಗಿದೆ. ಮುಜಾಫರಾಬಾದ್ನ (Muzaffarabad) ಮಸೀದಿಯಲ್ಲಿ ಅಡಗಿದ್ದ ಉಗ್ರರ ಕ್ಯಾಂಪ್ಗಳನ್ನು ಭಾರತ ಉಡಾಯಿಸಿದೆ. ಇದನ್ನೂ ಓದಿ: ಮೇ 11ರಂದು ಲಕ್ನೋದಲ್ಲಿ ಬ್ರಹ್ಮೋಸ್ ಕ್ಷಿಪಣಿ ಉತ್ಪಾದನಾ ಘಟಕ ಉದ್ಘಾಟನೆ – ಪಾಕ್ಗೆ ಶುರುವಾಯ್ತು ನಡುಕ
1971ರ ಪಾಕ್-ಭಾರತ ದಾಳಿ ಬಳಿಕ ಸೇನಾಪಡೆ, ವಾಯುಪಡೆ ಹಾಗೂ ನೌಕಾಪಡೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ಇದಾಗಿದೆ. ಘಟನೆ ಬಳಿಕ ಮುಜಾಫರಬಾದ್ ಉಗ್ರರ ಕ್ಯಾಂಪ್ ಬಳಿ ವಾಸವಿದ್ದ ಜನರ ಮನಸಲ್ಲಿ ಭಾರತ ಮತ್ತೆ ದಾಳಿ ಮಾಡುವ ಭೀತಿ ಎದುರಾಗಿದೆ. ಇದರಿಂದಾಗಿ ಜನರು ತಮ್ಮತಮ್ಮ ಮನೆಗಳನ್ನು ಖಾಲಿ ಮಾಡಿ ಗುಳೆ ಹೊರಟಿದ್ದಾರೆ. ಇದನ್ನೂ ಓದಿ: ʼಆಪರೇಷನ್ ಸಿಂಧೂರ್ʼ ಟ್ರೇಡ್ ಮಾರ್ಕ್ಗಾಗಿ ರಿಲಯನ್ಸ್ ಸೇರಿ ಹಲವರಿಂದ ಅರ್ಜಿ
ಶ್ರೀನಗರ: ಜಮ್ಮುವಿನಲ್ಲಿಂದು ನಡೆದ ಚುನಾವಣಾ ರ್ಯಾಲಿಯನ್ನಿದ್ದೇಶಿಸಿ ಭಾಷಣ ಮಾಡುವ ವೇಳೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಯಡವಟ್ಟು ಮಾಡಿದ್ದಾರೆ. ಕಾಶ್ಮೀರಿ ಪಂಡಿತರು (Kashmiri Pandits) ಅನ್ನುವುದಕ್ಕೆ ಬದಲಾಗಿ ʻಪಾಕ್ ಆಕ್ರಮಿತ ಕಾಶ್ಮೀರʼದಿಂದ (Refugees from PoK) ಬಂದ ನಿರಾತ್ರಿಯರು ಎಂದು ಉಲ್ಲೇಖಿಸಿದ್ದಾರೆ. ಬಳಿಕ ಎಚ್ಚೆತ್ತುಕೊಂಡು ಮತ್ತೆ ಕಾಶ್ಮೀರಿ ಪಂಡಿತರು ಎಂದು ಹೇಳಿದ್ದಾರೆ.
Then Sam Pitroda wants us to believe that he isn’t Pappu anymore… a man who is the Leader of Opposition can’t distinguish between refugees from PoK and Kashmiri Pandits.
The mess in Kashmir is a legacy of Jawaharlal Nehru. As if that wasn’t enough, we now have Rahul Gandhi also. pic.twitter.com/xKFhpirM2Z
ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಪಿಒಕೆಯಿಂದ ಬಂದಿರುವ ನಿರಾತ್ರಿತರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ನೀಡಿದ್ದ ಭರವಸೆಗಳನ್ನು ಈಡೇರಿಸಲಾಗುವುದು ಎಂದು ಹೇಳಿದ್ದರ. ಬಳಿಕ ಕ್ಷಮಿಸಿ, ಕಾಶ್ಮೀರಿ ಪಂಡಿತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಲಾಗುವುದು ಎಂದು ತಿಳಿಸಿದರು.
No matter how hard you try to hide the truth, it eventually comes out!
Kudos to Rahul Gandhi for speaking the actual truth, even though by mistake.. pic.twitter.com/aZpp0RNXs2
ರಾಹುಲ್ ಗಾಂಧಿ (Rahul Gandhi) ಅವರ ಹೇಳಿಕೆ ಕುರಿತ ಈ ವೀಡಿಯೋ ಸಾಮಾಜಿಕ ತಾಲತಾಣದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಬಿಜೆಪಿ ನಾಯಕರೂ ರಾಗಾ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಐಟಿ ಸೆಲ್ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ, ಲೋಕಸಭೆಯ ವಿರೋಧ ಪಕ್ಷದ ನಾಯಕನಿಗೆ ಪಿಒಕೆ ನಿರಾಶ್ರಿತರು ಮತ್ತು ಕಾಶ್ಮೀರಿ ಪಂಡಿತರ ನಡುವಿನ ವ್ಯತ್ಯಾಸವೇ ಗೊತ್ತಿಲ್ಲ. ಒಂದು ಕಡೆ ಸಾಗರೋತ್ತರ ಕಾಂಗ್ರೆಸ್ ನಾಯಕ ಸ್ಯಾಮ್ ಪಿತ್ರೋಡಾ, ರಾಹುಲ್ ಗಾಂದಿ ಪಪ್ಪು ಅಲ್ಲ ಅಂತಾರೆ, ರಾಹುಲ್ ಗಾಂದಿ ಹೀಗೆ ಮಾಡ್ತಾರೆ. ಕಾಶ್ಮೀರದ ಅವ್ಯವಸ್ಥೆ ನೆಹರೂ ಅವರ ಪರಂಪರೆಯಾಗಿದೆ. ಅದು ಸಾಕಾಗಲ್ಲ ಅಂತ ಈಗ ರಾಹುಲ್ ಗಾಂಧಿ ಬಂದಿದ್ದಾರೆ. ಅದಕ್ಕೆ ಅವರ ಇಂದಿನ ಹೇಳಿಕೆಯೇ ಸಾಕ್ಷಿ ಎಂದು ಲೇವಡಿ ಮಾಡಿದ್ದಾರೆ.
ಕೊನೆಗೂ ತಪ್ಪನ್ನು ಒಪ್ಪಿಕೊಂಡಿದ್ದಾರೆ:
ಆಂಧ್ರಪ್ರದೇಶದ ಬಿಜೆಪಿ ನಾಯಕ ವಿಷ್ಣುವರ್ಧನ್ ರೆಡ್ಡಿ (Vishnu Vardhan Reddy) ಮಾತನಾಡಿ, ಕಾಂಗ್ರೆಸ್ ಮತ್ತು ಅವರ ಮಿತ್ರಪಕ್ಷಗಳು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಪಾಕ್ನೊಂದಿಗಿನ ಮಾತುಕತೆಯನ್ನು ಪ್ರತಿಪಾದಿಸುತ್ತಲೇ ಇವೆ. ಹಾಗಾಗಿ ಭಾರತ ಸರ್ಕಾರ ಅವರಿಗೆ ಹೊರಗಿನದ್ದು ಅನ್ನಿಸಿದೆ. ನೀವು ಸತ್ಯವನ್ನು ಮರೆಮಾಚಲು ಎಷ್ಟೇ ಪ್ರಯತ್ನಿಸಿದರೂ ಕೊನೆಗೆ ಅದು ಹೊರಗೆ ಬರಲೇಬೇಕು. ತಪ್ಪು ಮಾಡಿದ್ದರೂ ನಿಜವಾದ ಸತ್ಯವನ್ನೇ ಮಾತನಾಡಿದ್ದೀರಿ ನಿಮಗೆ ಅಭಿನಂದನೆಗಳು ಎಂದು ಟಾಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ: ಗಂಭೀರ ಆರೋಪಗಳಿರುವಾಗ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಸಂತೋಷ್ ಹೆಗ್ಡೆ
ಭಾರತದ ಇತಿಹಾಸದಲ್ಲಿ 1947ರ ನಂತರ ಹಲವು ಕೇಂದ್ರಾಡಳಿತ ಪ್ರದೇಶಗಳನ್ನು ರಾಜ್ಯಗಳನ್ನಾಗಿ ಪರಿವರ್ತಿಸಲಾಯಿತು. ರಾಜ್ಯಗಳನ್ನು ವಿಭಜಿಸಲಾಯಿತು. ಆಂಧ್ರಪ್ರದೇಶದಿಂದ ತೆಲಂಗಾಣ, ಬಿಹಾರದಿಂ ಜಾರ್ಖಂಡ್, ಮಧ್ಯಪ್ರದೇಶದಿಂದ ಛತ್ತಿಸ್ಘಡವನ್ನು ರಾಜ್ಯಗಳನ್ನಾಗಿ ವಿಭಜಿಸಲಾಯಿತು. ಆದ್ರೆ ಸ್ವಾತಂತ್ರ್ಯ ನಂತರ ಒಂದು ರಾಜ್ಯವನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಪರಿವರ್ತಿಸಿದ್ದು ಇದೇ ಮೊದಲು. ಅದೇ ಜಮ್ಮು ಮತ್ತು ಕಾಶ್ಮೀರ. ಇರದಿಂದ ಇಲ್ಲಿನ ಜನಕ್ಕೆ ಅನ್ಯಾಯವಾಗಿದೆ, ಇಲ್ಲಿನ ಜನರ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಅವರಿಂದ ಕಿತ್ತುಕೊಳ್ಳಲಾಗಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಈ ಬಾರಿ ಚುನಾವಣೆಗೂ ಮುನ್ನವೇ ರಾಜ್ಯ ಸ್ಥಾನಮಾನ ಸಿಗುತ್ತದೆ ಅಂದುಕೊಂಡಿದ್ದೆವು. ಆಗ ಸರಿಯಾದ ಚುನಾವಣೆ ನಡೆಸಲು ಮಾರ್ಗವಾಗುತ್ತಿತ್ತು. ಆದಾಗ್ಯೂ ಮೊದಲು ಚುನಾವಣೆ ನಡೆಯುತ್ತಿರುವುದು ಒಳ್ಳೆಯದೇ ನಾವು ನಿಮಗೆ ಮತ್ತೆ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಒದಗಿಸಲು ಬಯಸುತ್ತೇವೆ. ಜೆ&ಕೆ ರಾಜ್ಯತ್ವವನ್ನು ನಿಮಗೆ ಮರಳಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ತನಿಖೆ ಬೇಕಾದ್ರೆ ಆಗಲಿ, ಸಿಎಂ ರಾಜೀನಾಮೆ ಕೊಡೋ ಅವಶ್ಯಕತೆ ಇಲ್ಲ: ಬೇಳೂರು ಗೋಪಾಲಕೃಷ್ಣ
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶವನ್ನು ಭಾರತಕ್ಕೆ ಹಿಂಪಡೆದೇ ಪಡೆಯುತ್ತೇವೆ ಎಂಬ ಕೇಂದ್ರದ ನಾಯಕರ ಹೇಳಿಕೆ ಬೆನ್ನಲ್ಲೇ ಪಾಕ್ನಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಭಾರತಕ್ಕೆ ಶುಭ ಸುದ್ದಿ ಸಿಕ್ಕಂತಾಗಿದೆ. ಇತ್ತೀಚೆಗೆ ಚೀನಾ ನೆರವಿನಿಂದ ಜಮ್ಮು ಮತ್ತು ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನವು (Pakistan) ತನ್ನ ರಕ್ಷಣಾ ಬಲ ಹೆಚ್ಚಿಸಿಕೊಂಡಿದೆ ಎಂಬ ವರದಿಗಳ ನಡುವೆ ಮಹತ್ವದ ಬೆಳವಣಿಗೆ ಕಂಡುಬಂದಿದೆ.
State representatives referred to AJK as a “ Foreign Territory “ ! ? Is he saying AJK is under Pakistan’s occupation?
کیا یہ “مقبوضہ کشمیر ہے ؟ https://t.co/XcmfeP6HAc
ಆಜಾದ್ ಕಾಶ್ಮೀರ (Azad Kashmir) ಅಥವಾ ಪಾಕ್ ಆಕ್ರಮಿತ ಕಾಶ್ಮೀರ (POK) ದೇಶದ ಅವಿಭಾಜ್ಯ ಅಂಗವಲ್ಲ ಎಂದು ಪಾಕಿಸ್ತಾನ ಒಪ್ಪಿಕೊಂಡಿದೆ. ಸರ್ಕಾರಿ ವಕೀಲರೊಬ್ಬರು ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ (IHC) ಅಚ್ಚರಿಯ ಹೇಳಿಕೆ ನೀಡಿದ್ದು, ಇಡೀ ಪಾಕ್ ದೇಶವನ್ನೇ ತಲ್ಲಣಗೊಳಿಸಿದೆ. ಪಾಕ್ ಆಕ್ರಮಿತ ಕಾಶ್ಮೀರ ವಿದೇಶಿ ಪ್ರದೇಶವಾಗಿದೆ ಎಂದು ವಕೀಲರು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಸಿಕ್ಕಿಂನಿಂದ 150 ಕಿಮೀ ದೂರದ ಗಡಿಯಲ್ಲಿ ಚೀನಾ ಅತ್ಯಾಧುನಿಕ ಫೈಟರ್ ಜೆಟ್ ನಿಯೋಜನೆ!
State of Pakistan projecting AJK in a very negative perspective. They kidnapped a poet from Islamabad. They don’t have moral courage to admit the kidnapping and now they showed his arrest in AJK and told IHC that AJK is foreign territory. Means they have the authority of an… https://t.co/UoHavyXyva
ವಕೀಲರ ವಾದ ಏನು?
ಪಿಒಕೆ ವಿದೇಶಿ ಪ್ರದೇಶವಾಗಿದ್ದು, ಭಾರತದ ಅವಿಭಾಜ್ಯ ಅಂಗವೆಂದು ಪರಿಗಣಿಸಲ್ಪಟ್ಟಿದೆ. ಆದ್ರೆ ಪಾಕಿಸ್ತಾನವು ಆಜಾದ್ ಕಾಶ್ಮೀರ ಎಂದು ಹೇಳಿಕೊಂಡು ಭೂಮಿಯನ್ನು ಆಕ್ರಮಿಸಿಕೊಂಡಿದೆ ಎಂಬುದಾಗಿ ಒತ್ತಿ ಹೇಳಿದ್ದಾರೆ. ಅಪಹರಣಕ್ಕೊಳಗಾದ ಕವಿ ಹಾಗೂ ಪತ್ರಕರ್ತ ಅಹ್ಮದ್ ಫರ್ಹಾದ್ ಅವರನ್ನ ಜೂನ್ 2ರ ವರೆಗೆ ಕಾಶ್ಮೀರದಲ್ಲಿ ಬಂಧನದಲ್ಲಿ ಇರಿಸಲಾಗಿದೆ. ಆಜಾದ್ ಕಾಶ್ಮೀರವು ವಿದೇಶಿ ಪ್ರದೇಶ ಆಗಿರುವುದರಿಂದ ಅವರನ್ನ ಇಸ್ಲಾಮಾಬಾದ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಿಲ್ಲ ಎಂದು ಫೆಡರಲ್ ಪ್ರಾಸಿಕ್ಯೂಟರ್ ಜನರಲ್ ಕೋರ್ಟ್ಗೆ ತಿಳಿಸಿದ್ದಾರೆ.
ವಕೀಲರ ವಾದಕ್ಕೆ ಇಸ್ಲಾಮಾಬಾದ್ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಆಜಾದ್ ಕಾಶ್ಮೀರವು ವಿದೇಶಿ ನೆಲವಾಗಿದ್ದರೆ, ಪಾಕಿಸ್ತಾನದ ಅವಿಭಾಜ್ಯ ಅಂಗವಲ್ಲ ಎನ್ನುವುದಾದರೆ ಪಾಕಿಸ್ತಾನದ ಮಿಲಿಟರಿ ಮತ್ತು ಪಾಕಿಸ್ತಾನಿ ರೇಂಜರ್ಗಳು ಪಾಕ್ನಿಂದ ಹೇಗೆ ಅಲ್ಲಿಗೆ ಪ್ರವೇಶಿಸಿದರು ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಟೇಕಾಫ್ ಆಗಲು 20 ಗಂಟೆ ತಡ ಮಾಡಿದ ಏರ್ ಇಂಡಿಯಾ ವಿಮಾನ – ಎಸಿ ಇಲ್ಲದೇ ಮೂರ್ಛೆ ಹೋದ ಪ್ರಯಾಣಿಕರು
ಆಜಾದ್ ಕಾಶ್ಮೀರದ ಸ್ಥಾನಮಾನದ ಬಗ್ಗೆ ಕೋರ್ಟ್ನಲ್ಲಿ ವಾದ ಮಂಡಿಸಿದ ವಕೀಲರ ವಿರುದ್ಧ ಪಾಕ್ ಜನರು ಆಕ್ರೋಶ ಹೊರಹಾಕಿದ್ದಾರೆ. ಪ್ರಮುಖ ನಾಯಕರು ಸೋಷಿಯಲ್ ಮೀಡಿಯಾಗಳಲ್ಲಿ ವಕೀಲರ ವಾದವನ್ನು ಖಂಡಿಸಿದ್ದಾರೆ. ಈ ನಡುವೆ ಕೆಲವರು ಭಾರತದ ಪರ ಬೆಂಬಲ ಸೂಚಿಸಿರುವುದೂ ಕಂಡುಬಂದಿದೆ.
ಕಾಶ್ಮೀರದ ಕವಿ ಫರ್ಹಾದ್ ಕಳೆದ ಎರಡು ವಾರಗಳಿಂದ ನಾಪತ್ತೆಯಾಗಿದ್ದು, ಇತ್ತೀಚೆಗೆ ಆತನ ವಿರುದ್ಧ ಪಿಒಕೆಯಲ್ಲಿ ಎರಡು ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ ಎಂದು ತಿಳಿದುಬಂದಿತ್ತು. ಈ ನಡುವೆ ಫರ್ಹಾದ್ ಪರ ವಕೀಲ ಇಮಾನ್ ಮಜಾರಿ, ಪ್ರಸ್ತುತ ಅವರು ವಿದೇಶಿ ನೆಲದಲ್ಲಿ ಇದ್ದಾರೆ. ಆದ್ದರಿಂದ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದಿಲ್ಲ ಎಂದು ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿ ಪ್ರತಿಪಾದಿಸಿದ್ದರು. ಇದನ್ನೂ ಓದಿ: ಅಮೆರಿಕದಲ್ಲಿ ನಡೆದ ಸ್ಪೆಲ್ಲಿಂಗ್ ಬೀ ಸ್ಪರ್ಧೆಯಲ್ಲಿ 12 ವರ್ಷದ ಭಾರತೀಯ-ಅಮೆರಿಕನ್ ವಿಜೇತ
ಇಸ್ಲಾಮಾಬಾದ್: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ಸತತ ಐದನೇ ದಿನವೂ ಪ್ರತಿಭಟನೆ ಮುಂದುವರೆದಿದ್ದು ಹಲವೆಡೆ ಹಿಂಸಾಚಾರಗಳು ನಡೆದಿವೆ.
ಪಿಓಕೆ ರಾಜಧಾನಿ ಮುಜಾಫರಾಬಾದ್ನನಲ್ಲಿ ಪ್ರತಿಭಟನೆ ಹತ್ತಿಕ್ಕಲು ಪಾಕಿಸ್ತಾನ ಸೇನೆ (Pakistan Army) ನಡೆಸಿದ ಗುಂಡಿನ ದಾಳಿಗೆ ಕನಿಷ್ಠ ಮೂವರು ಬಲಿಯಾಗಿ, ಆರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮದರಸಾದ ಮೇಲೆ ಟಿಯರ್ ಗ್ಯಾಸ್ ಸಿಡಿಸಿದ್ದು ಮಕ್ಕಳು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯ ಸೆರೆಯಾಗಿದೆ.
POK: A large number of people gather in Muzaffarabad City chanting 'Azadi' to demonstrate against inflation and the energy crisis pic.twitter.com/2MieNRYu9X
ಪುಲ್ವಾಮಾ ದಾಳಿ ಬಳಿಕ ಪಾಕ್ನಿಂದ ರಫ್ತಾಗುವ ಒಣಹಣ್ಣು, ಕಲ್ಲುಪ್ಪು, ಸಿಮೆಂಟ್ ಮೇಲೆ ಆಮದು ಸುಂಕವನ್ನು ಭಾರತ 200ರಷ್ಟು ಹೆಚ್ಚಿಸಿತ್ತು. 2019ರ ನಂತರ ಜಮ್ಮು ಕಾಶ್ಮೀರದಲ್ಲಿ ಆರ್ಟಿಕಲ್ 370 ರದ್ದಾದ ನಂತರ ಭಾರತದ ಜೊತೆಗಿನ ಸಂಪೂರ್ಣ ವ್ಯವಹಾರವನ್ನು ಭಾರತ ನಿಲ್ಲಿಸಿತ್ತು. ಇದನ್ನೂ ಓದಿ: ಸೇನಾ ಪೈಲಟ್ಗಳಿಗೆ ಭಾರತ ಕೊಟ್ಟ ವಿಮಾನಗಳನ್ನು ಹಾರಿಸಲು ಬರಲ್ಲ: ಮಾಲ್ಡೀವ್ಸ್ ರಕ್ಷಣಾ ಸಚಿವ
ಈ ಆರ್ಥಿಕ ಒತ್ತಡ ಪಿಓಕೆ ಮೇಲೆಯೂ ಪ್ರತಿಕೂಲ ಪರಿಣಾಮ ಬೀರಿದೆ. ಪಿಓಕೆಯಲ್ಲಿ ನಡೆಯುತ್ತಿರುವ ಹೋರಾಟಗಳು ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಈ ಮಧ್ಯೆಯೇ ದೇಶದ ಆರ್ಥಿಕತೆ ಸುಧಾರಣೆಗಾಗಿ ಪಾಕಿಸ್ತಾನದ ಎಲ್ಲಾ ಸರ್ಕಾರಿ ಸಂಸ್ಥೆಗಳನ್ನು ಖಾಸಗೀಕರಣ ಮಾಡೋದಾಗಿ ಪ್ರಧಾನಿ ಷೆಹಬಾಜ್ ಷರೀಫ್ ಘೋಷಣೆ ಮಾಡಿದ್ದಾರೆ.
ಹಣದುಬ್ಬರ, ಹೆಚ್ಚಿನ ತೆರಿಗೆ ಮತ್ತು ವಿದ್ಯುತ್ ಕೊರತೆಯ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿದೆ. ಪಿಒಕೆಯಾದ್ಯಂತ ಹಕ್ಕುಗಳು ಮತ್ತು ಸ್ವಾತಂತ್ರ್ಯಕ್ಕಾಗಿ ಚಳವಳಿಯಾಗಿ ಮಾರ್ಪಟ್ಟಿವೆ.
ಪ್ರತಿಭಟನಾಕಾರರು ‘ಆಜಾದಿ’ (ಸ್ವಾತಂತ್ರ್ಯ) ಘೋಷಣೆಗಳನ್ನು ಕೂಗುತ್ತಿದ್ದಾರೆ. ಪ್ರತಿಭಟನಾಕಾರರು ಮುಜಫರಾಬಾದ್ ಮತ್ತು ಇತರ ಜಿಲ್ಲೆಗಳಲ್ಲಿ ಪೊಲೀಸರು ಮತ್ತು ಭದ್ರತಾ ಏಜೆನ್ಸಿಗಳ ನಡುವೆ ಘರ್ಷಣೆಯಾಗಿದೆ. ಪ್ರತಿಭಟನೆಯ ನೇತೃತ್ವವನ್ನು ಜಮ್ಮು ಮತ್ತು ಕಾಶ್ಮೀರ ಜಂಟಿ ಅವಾಮಿ ಕ್ರಿಯಾ ಸಮಿತಿ ಹೊತ್ತುಕೊಂಡಿದೆ. ಇದನ್ನೂ ಓದಿ: ಕಾಂಗ್ರೆಸ್ ಪಕ್ಷ 50 ಸ್ಥಾನ ಕೂಡ ಗಳಿಸಲ್ಲ: ಮೋದಿ ಭವಿಷ್ಯ
ಶುಕ್ರವಾರ ಮುಷ್ಕರಕ್ಕೆ ಕರೆ ನೀಡಿದ ನಂತರ ಹತ್ತಾರು ನಾಯಕರು ಮತ್ತು ಕ್ರಿಯಾ ಸಮಿತಿಯ ಸದಸ್ಯರನ್ನು ಬಂಧಿಸಲಾಗಿದೆ.
ಬಾಲ್ಟಿಸ್ತಾನ್: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (Pakistan-Occupied Kashmir) ಗಿಲ್ಗಿಟ್-ಬಾಲ್ಟಿಸ್ತಾನ್ ಪ್ರದೇಶದ ಡೈಮರ್ ಜಿಲ್ಲೆಯಲ್ಲಿ ವೇಗವಾಗಿ ಚಲಿಸುತ್ತಿದ್ದ ಬಸ್ಸೊಂದು ಕಿರಿದಾದ ಪರ್ವತ ರಸ್ತೆಯಿಂದ ಬಿದ್ದು ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ. 21 ಮಂದಿ ಗಾಯಗೊಂಡಿದ್ದಾರೆ.
ಇಂದು ಬೆಳಗ್ಗೆ 6 ಗಂಟೆಗೆ ಪಿಒಕೆಯ (POK) ಡೈಮರ್ನಲ್ಲಿರುವ ಕಾರಕೋರಂ ಹೆದ್ದಾರಿಯ ಯಶೋಖಲ್ ಪ್ರದೇಶದಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಪಾಕಿಸ್ತಾನದ ರಾವಲ್ಪಿಂಡಿಯಿಂದ ಪಿಒಕೆಯ ಗಿಲ್ಗಿಟ್ಗೆ ತೆರಳುತ್ತಿತ್ತು. ಬಸ್ನಲ್ಲಿ 40 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಇದನ್ನೂ ಓದಿ: ಚೀನಾದಲ್ಲಿ ಹೆದ್ದಾರಿ ಕುಸಿತಕ್ಕೆ 48 ಬಲಿ
ರಕ್ಷಣಾ ತಂಡಗಳನ್ನು ಅಪಘಾತದ ಸ್ಥಳಕ್ಕೆ ರವಾನಿಸಲಾಗಿದೆ. ಗಾಯಗೊಂಡವರನ್ನು ಚಿಲಾಸ್ನ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಗಾಯಗೊಂಡಿರುವ ಕನಿಷ್ಠ ಐವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಗಿಲ್ಗಿಟ್ಗೆ ಸ್ಥಳಾಂತರಿಸಲಾಗಿದೆ.
ನವದೆಹಲಿ: ಭಯೋತ್ಪಾದಕರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಲ್ಲ. ಪಾಕಿಸ್ತಾನಕ್ಕೆ ನುಗ್ಗಿಯಾದರೂ ಸರಿ ಅವರನ್ನು ಕೊಲ್ಲುವುದಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಎಚ್ಚರಿಕೆ ನೀಡಿದ್ದಾರೆ.
ಟಿವಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ರಕ್ಷಣಾ ಸಚಿವರು, ಭಾರತದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪ್ರಯತ್ನಿಸಿದ ನಂತರ ಗಡಿಯಾಚೆ ಪಲಾಯನ ಮಾಡುವವರನ್ನು ನಿರ್ಮೂಲನೆ ಮಾಡಲು ಭಾರತವು ಪಾಕಿಸ್ತಾನದೊಳಗೆ (India- Pakistan) ಪ್ರವೇಶಿಸಲಿದೆ. ಯಾವುದೇ ಭಯೋತ್ಪಾದಕನನ್ನು ಬಿಡುವುದಿಲ್ಲ, ಮನೆಗೆ ನುಗ್ಗಿ ಅವನನ್ನು ಕೊಲ್ಲುತ್ತೇವೆ. ದೇಶದ ಶಾಂತಿ ಕದಡಲು ಯತ್ನಿಸಿದರೆ ಅದಕ್ಕೆ ತಕ್ಕ ಉತ್ತರ ನೀಡುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಏಳೆಂಟು ದಿನದಲ್ಲಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ : ರಾಜನಾಥ್ ಸಿಂಗ್
ಭಾರತವು ತನ್ನ ನೆರೆಹೊರೆಯವರೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಲು ಬಯಸುತ್ತದೆ. ನಮ್ಮ ಇತಿಹಾಸವನ್ನು ನೋಡಿ. ನಾವು ಯಾವುದೇ ದೇಶದ ಮೇಲೆ ದಾಳಿ ಮಾಡಿಲ್ಲ ಅಥವಾ ಯಾವುದೇ ದೇಶದ ಭೂಪ್ರದೇಶದ ಒಂದು ಇಂಚು ಕೂಡ ಆಕ್ರಮಿಸಿಕೊಂಡಿಲ್ಲ. ಇದು ಭಾರತದ ಲಕ್ಷಣವಾಗಿದೆ. ಆದರೆ ಯಾರಾದರೂ ನಮ್ಮ ನೆಲದಲ್ಲಿ ಭಯೋತ್ಪಾದನೆಯನ್ನು ಹರಡುವ ಮೂಲಕ ಭಾರತವನ್ನು ಹೆದರಿಸಲು ಪ್ರಯತ್ನಿಸಿದರೆ, ಅವರನ್ನು ಯಾವುದೇ ಕಾರಣಕ್ಕೂ ಬಿಡಲ್ಲ ಎಂದು ಸಿಂಗ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಪಾಕ್ ಆಕ್ರಮಿತ ಕಾಶ್ಮೀರದ ಬಗ್ಗೆ ಪ್ರತಿಕ್ರಿಯಿಸಿ, ಪಿಒಕೆ ಜನರು ಭಾರತದೊಂದಿಗೆ ಇರಬೇಕೆಂದು ಒತ್ತಾಯಿಸುತ್ತಾರೆ. 370 ನೇ ವಿಧಿಯನ್ನು ರದ್ದುಗೊಳಿಸಿದ ನಂತರ, ಕಾಶ್ಮೀರದಲ್ಲಿ ಸಹಜ ಸ್ಥಿತಿ ಮರಳಿದೆ ಮತ್ತು ಅಭಿವೃದ್ಧಿಯು ವೇಗವಾಗಿ ನಡೆಯುತ್ತಿದೆ ಎಂದು ಹೇಳಿದರು.
ಇಸ್ಲಾಮಾಬಾದ್: ಪಾಕಿಸ್ತಾನದ ಆರ್ಥಿಕ ಸ್ಥಿತಿ (Pakistan Economy) ದಿನಕಳೆದಂತೆ ದಯನೀಯವಾಗುತ್ತಿದ್ದು ಅಂತಾರಾಷ್ಟ್ರೀಯ ಹಣಕಾಸು ನಿಧಿ (IMF) ಭಾರೀ ಪ್ರಮಾಣದಲ್ಲಿ ವಿದ್ಯುತ್ ದರ (Electricity Tariff) ಏರಿಸುವಂತೆ ಸೂಚನೆ ನೀಡಿದೆ.
ಮಂಗಳವಾರದಿಂದ ಪಾಕ್ (Pakistan) ಪ್ರವಾಸದಲ್ಲಿದ್ದ ಐಎಂಎಫ್ ತಂಡ, ಪಾಕ್ ಸರ್ಕಾರದ ಸಾಲ ನಿರ್ವಹಣೆ ಯೋಜನೆಯನ್ನು(CDMP)ತಿರಸ್ಕರಿಸಿದೆ. ಅಲ್ಲದೇ ಪ್ರತಿ ಯೂನಿಟ್ ವಿದ್ಯುತ್ ದರವನ್ನು 11-12.50 ಪಾಕಿಸ್ತಾನ ರೂಪಾಯಿ ಮಿತಿಯಲ್ಲಿ ವಿದ್ಯುತ್ ದರವನ್ನು ಹೆಚ್ಚಿಸುವಂತೆ ಸಲಹೆ ನೀಡಿದೆ.
ಐಎಂಫ್ ಪಾಕಿಸ್ತಾನ ಕಳೆದ ಹಣಕಾಸು ವರ್ಷದಲ್ಲೇ ಪ್ರತಿ ಯೂನಿಟ್ ವಿದ್ಯುತ್ ದರವನ್ನು 7.91 ಪಾಕಿಸ್ತಾನ ರೂಪಾಯಿಗೆ ಏರಿಸುವಂತೆ ಸೂಚನೆ ನೀಡಿತ್ತು. ಆದರೆ ಕಳೆದ ಜುಲೈ 1 ರಿಂದ ಇದು ಜಾರಿಗೆ ಬಂದಿತ್ತು. ಕಳೆದ 7 ದಶಕಗಳಿಂದ ಪಾಕ್ ಆಕ್ರಮಿತ ಕಾಶ್ಮೀರಲ್ಲಿ (PoK) ವಿದ್ಯುತ್ ಸಬ್ಸಿಡಿ ನೀಡಲಾಗುತ್ತಿತ್ತು. ಫೆ.1 ರಿಂದ ಈ ಸಬ್ಸಿಡಿಯನ್ನು ಪಾಕ್ ಸ್ಥಗಿತಗೊಳಿಸಿದೆ. ಈಗ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪ್ರತಿ ಯೂನಿಟ್ಗೆ 16-22 ಪಾಕ್ ರೂಪಾಯಿ ನಿಗದಿ ಪಡಿಸಲಾಗಿದೆ. ಪಾಕ್ ಆಕ್ರಮಿತ ಕಾಶ್ಮೀರದ ಆಡಳಿತ ಈ ನಿರ್ಧಾರವನ್ನು ವಿರೋಧಿಸಿದ್ದು ಜನತೆ ಪ್ರತಿಭಟನೆಗೆ ಇಳಿದಿದ್ದಾರೆ.
ಪಾಕಿಸ್ತಾನದ ವಿದೇಶಿ ಮೀಸಲು ನಿಧಿ 3.2 ಶತಕೋಟಿ ಡಾಲರ್ಗೆ ಕುಸಿದಿದ್ದು, ಸುಮಾರು ಮೂರು ವಾರಗಳ ಆಮದಿಗೆ ಮಾತ್ರ ಸಾಕಾಗುತ್ತದೆ. ಇದರಿಂದ ತೈಲ ಖರೀದಿ ಇನ್ಮುಂದೆ ಕಷ್ಟವಾಗಲಿದ್ದು, ಈಗಾಗಲೇ ಗಾರ್ಮೆಂಟ್ಸ್ ಫ್ಯಾಕ್ಟರಿಗಳೆಲ್ಲಾ ಬಹುತೇಕ ಮುಚ್ಚಿವೆ.
ದಿನಗೂಲಿ ಕೂಡ ಸಿಗದೇ ಬಡವರು ತತ್ತರಿಸಿದ್ದಾರೆ. ಪಾಕಿಸ್ತಾನದಲ್ಲೀಗ ಭಿಕ್ಷುಕರ ಸಂಖ್ಯೆ ಗಣನೀಯವಾಗಿ ಹೆಚ್ಚಾಗಿದ್ದು ಒಂದು ರೀತಿಯಲ್ಲಿ ದಿವಾಳಿ ಹಂತ ತಲುಪಿದೆ. ಲಂಕಾದಲ್ಲಿ ಇತ್ತೀಚಿಗೆ ಕಂಡು ಬಂದ ಪರಿಸ್ಥಿತಿಗಳು ಇಲ್ಲೂ ಕಾಣುವ ದಿನಗಳು ದೂರವಿಲ್ಲ ಎಂಬ ವಿಶ್ಲೇಷಣೆ ಕೇಳಿ ಬಂದಿದೆ.
Live Tv
[brid partner=56869869 player=32851 video=960834 autoplay=true]
ಹೈದರಾಬಾದ್: `ಗಾಲ್ವಾನ್ ಸೇಸ್ ಹಾಯ್’ ಎಂದು ಟ್ವೀಟ್ (Galwan Tweet) ಮಾಡುವ ಮೂಲಕ ವಿವಾದ ಸೃಷ್ಟಿಸಿದ ರಿಚಾ ಚಡ್ಡಾ (Richa Chadha) ಅವರಿಗೆ ಬಹುಭಾಷಾ ನಟ ಪ್ರಕಾಶ್ ರಾಜ್ (Prakash Raj) ಬೆಂಬಲ ಸೂಚಿಸಿದ್ದಾರೆ.
ರಿಚಾ ಹೇಳಿಕೆಗೆ ನಟ ಅಕ್ಷಯ ಕುಮಾರ್ (Akshay Kumar) ಆಕ್ರೋಶ ವ್ಯಕ್ತಪಡಿಸಿದಕ್ಕೆ ಪ್ರಕಾಶ್ ರಾಜ್ ಅವರು ಪ್ರತಿಕ್ರಿಯೆ ನೀಡಿದ್ದು, `ಅಕ್ಷಯ ಕುಮಾರ್… ನಿಮ್ಮಿಂದ ಇದನ್ನು ಅಪೇಕ್ಷಿಸಿರಲಿಲ್ಲ. ರಿಚಾ ಚಡ್ಡಾ ಹೇಳಿದ್ದು ದೇಶಕ್ಕೆ ನಿಮಗಿಂತ ಹೆಚ್ಚು ನಿಮಗಿಂತ ಹೆಚ್ಚು ಪ್ರಸ್ತುತ ಸರ್’ ಎನ್ನುವ ಮೂಲಕ ಕೆನಡಾ ಪ್ರಜೆ ಆಗಿರುವ ಅಕ್ಷಯ್ ಕಾಲೆಳೆದಿದ್ದಾರೆ. ಇದನ್ನೂ ಓದಿ: `ಗಾಲ್ವಾನ್ ಹಾಯ್’ ಎಂದ ನಟಿಗೆ ಚಳಿ ಬಿಡಿಸಿದ ಸಚಿವ – ಕಾನೂನು ಕ್ರಮಕ್ಕೆ ಚಿಂತನೆ
`ಪಾಕ್ ಆಕ್ರಮಿತ ಕಾಶ್ಮೀರ ವಶಕ್ಕೆ ಸೇನೆ ಸಿದ್ಧವಾಗಿದೆ’ ಎಂದು ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಉಪೇಂದ್ರ ದ್ವಿವೇದಿ ಹೇಳಿಕೆ ನೀಡಿದ್ದರು. ಅದನ್ನು ಅವಮಾನಿಸುವಂತೆ ರಿಚಾ ಟ್ವೀಟ್ ಮಾಡಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಯಿತು. ಅಕ್ಷಯ್ ಕುಮಾರ್ ಸೇರಿದಂತೆ ಹಲವರು ರಿಚಾ ನಡೆಯನ್ನು ಖಂಡಿಸಿದ್ದರು. ಇದರ ಬೆನ್ನಲ್ಲೇ ನಟಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದರು. ಇದರ ಹೊರತಾಗಿಯೂ ಮಧ್ಯಪ್ರದೇಶದ ಗೃಹ ಸಚಿವರು ರಿಚಾ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.
ನಿಮ್ಮ ವಿರುದ್ಧ ದೂರುಗಳು ಕೇಳಿಬಂದಿದೆ. ಆದ್ದರಿಂದ ಸೂಕ್ತ ಕ್ರಮಕ್ಕಾಗಿ ಕಾನೂನು ತಜ್ಞರ ಅಭಿಪ್ರಾಯ ತೆಗೆದುಕೊಳ್ಳುತ್ತಿದ್ದೇವೆ ಎಂದು ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಶನಿವಾರ ಹೇಳಿದ್ದಾರೆ. ಈ ಬೆನ್ನಲ್ಲೇ ನಟ ಪ್ರಕಾಶ್ ರಾಜ್ ಬೆಂಬಲ ಚಡ್ಡಾ ಹೇಳಿಕೆ ಬೆಂಬಲಿಸಿ ಟ್ವೀಟ್ ಮಾಡಿದ್ದಾರೆ.
Live Tv
[brid partner=56869869 player=32851 video=960834 autoplay=true]