Tag: ಪಿಡಬ್ಲ್ಯುಡಿ

  • ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ

    ಯೋಗಿ ಸರ್ಕಾರದಿಂದ ಇಲ್ಲಿಯವರೆಗೆ 15246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಾಣ

    ಲಕ್ನೋ: ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರವು ಇದುವರೆಗೆ 15,246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಿಸಿದೆ ಎಂದು ಯುಪಿಯಲ್ಲಿ ಬಿಜೆಪಿ ಸರ್ಕಾರ ತಿಳಿಸಿದೆ.

    ಉತ್ತರಪ್ರದೇಶದಲ್ಲಿ 2017ರಂದು ಬಿಜೆಪಿ ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಸರ್ಕಾರದ ಪ್ರಾಥಮಿಕ ಉದ್ದೇಶವೆಂದರೆ ಉತ್ತಮ ಸಂಪರ್ಕ ಮತ್ತು ಮೂಲಸೌಕರ್ಯಗಳು ಗ್ರಾಮಾಂತರ ಪ್ರದೇಶಗಳಿಗೆ ನೀಡುವುದು ಎಂದು ಬಿಜೆಪಿ ಸದಸ್ಯರು ತಮ್ಮ ಸರ್ಕಾರದ ಸಾಧನೆ ಕುರಿತು ವಿವರಿಸಿದ್ದಾರೆ. ಈಗ ರಾಜ್ಯವು ವಿಧಾನಸಭಾ ಚುನಾವಣೆಗೆ ಸಜ್ಜಾಗುತ್ತಿದ್ದು, ಗ್ರಾಮಾಂತರ ಪ್ರದೇಶಗಳು ಮತ್ತೆ ಬಿಜೆಪಿಗೆ ಮತ ಹಾಕಲು ಸಜ್ಜಾಗಿದೆ ಎಂದು ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ‘ಬೀಸ್ಟ್’ ಸಿನಿಮಾ ವಿಶೇಷ ಫೋಟೋ ಶೇರ್ ಮಾಡಿದ ಚಿತ್ರತಂಡ

    ಯೋಗಿ ಅವರ ಸರ್ಕಾರವು ಇದುವರೆಗೆ 15,246 ಕಿ.ಮೀ.ಗೂ ಹೆಚ್ಚು ಗ್ರಾಮೀಣ ರಸ್ತೆಗಳನ್ನು ನಿರ್ಮಿಸಿದೆ. ಇದು ಹಿಂದಿನ ಸರ್ಕಾರಗಳಿಗಿಂತ ಹೆಚ್ಚು. ಉತ್ತಮ ರಸ್ತೆಗಳು ಮತ್ತು ಸುಧಾರಿತ ವಿದ್ಯುತ್ ಪೂರೈಕೆಯ ಸಹಾಯದಿಂದ ರಾಜ್ಯವು ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಸಜ್ಜಾಗಿದೆ. ಕಳೆದ ಐದು ವರ್ಷಗಳಲ್ಲಿ ಗ್ರಾಮ-ಗ್ರಾಮೀಣ-ರೈತರನ್ನು ಸುಧಾರಿಸಲು ನಮ್ಮ ಸರ್ಕಾರ ಶ್ರಮಿಸಿದೆ. ಇದಕ್ಕೆ ಜನರು ಯೋಗಿ ಅವರ ಸರ್ಕಾರವನ್ನು ಪ್ರಶಂಸಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ಉತ್ತಮ ರಸ್ತೆಗಳು ರೈತರು ತಮ್ಮ ಬೆಳೆಗಳನ್ನು ಖರೀದಿ ಕೇಂದ್ರಗಳಿಗೆ ಕೊಂಡೊಯ್ಯಲು ಸಹಾಯ ಮಾಡುತ್ತೆ. ಯೋಗಿ ಸರ್ಕಾರವು ಗ್ರಾಮ ಮತ್ತು ನಗರಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮುಖ್ಯ ರಸ್ತೆಯನ್ನು ಹಳ್ಳಿಗಳಿಗೆ ಸಂಪರ್ಕ ಹೊಂದಿಸುವ ಕೆಲಸ ಮಾಡಿದೆ. ರಸ್ತೆ ಜಾಲ ಅಳವಡಿಕೆಯಿಂದ ಒಂದೆಡೆ ಹಳ್ಳಿಗಳಿಂದ ವಲಸೆ ಕಡಿಮೆಯಾದರೆ, ಮತ್ತೊಂದೆಡೆ ಗ್ರಾಮಗಳಲ್ಲಿಯೇ ಉದ್ಯೋಗ, ಅಭಿವೃದ್ಧಿಗೆ ರೆಕ್ಕೆಪುಕ್ಕಗಳು ಸಿಕ್ಕಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಯುವಕನ ಜೊತೆಗೆ ವಾಸವಿದ್ದ ಅಪ್ರಾಪ್ತ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು

    ಲೋಕೋಪಯೋಗಿ ಇಲಾಖೆ(ಪಿಡಬ್ಲ್ಯುಡಿ) ಪ್ರಕಾರ, ಕಳೆದ ಎಪ್ಪತ್ತು ವರ್ಷಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದ್ದ ಸುಮಾರು 1,557 ಕಂದಾಯ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸುವ ಕೆಲಸ ಮಾಡಲಾಗಿದೆ. ಈ ಗ್ರಾಮಗಳಲ್ಲಿ 1,114 ಕೋಟಿ ರೂಪಾಯಿ ವೆಚ್ಚದಲ್ಲಿ 1763-ಕಿಮೀ ಉದ್ದದ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ ಎಂದು ತಿಳಿಸಿದೆ.

  • ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    ನೌಕರರಿದ್ದರೂ, ವಿಧಾನಸೌಧ ಸ್ವಚ್ಛ ಮಾಡಲು 59 ಲಕ್ಷ ಟೆಂಡರ್

    – ಅನುಮಾನ ಹುಟ್ಟಿಸಿದ ಪಿಡಬ್ಲ್ಯುಡಿ ಇಲಾಖೆಯ ನಿರ್ಧಾರ

    ಬೆಂಗಳೂರು: ರಾಜ್ಯದ ಶಕ್ತಿಸೌಧ ವಿಧಾನಸೌಧವನ್ನು ಸ್ವಚ್ಛ ಮಾಡಲು ಪಿಡಬ್ಲ್ಯುಡಿ ಇಲಾಖೆ 59 ಲಕ್ಷ ವೆಚ್ಚದಲ್ಲಿ ಟೆಂಡರ್ ಕರೆದು ದುಂದು ವೆಚ್ಚಕ್ಕೆ ಮುಂದಾಗಿದೆ.

    ವಿಧಾನಸೌಧವನ್ನು ಸ್ವಚ್ಛವಾಗಿ ಇಡಲು ಸ್ವಚ್ಛತಾ ಸಿಬ್ಬಂದಿ, ಪ್ರತಿ ವಿಭಾಗದಲ್ಲಿ ಡಿ ಗ್ರೂಪ್ ನೌಕರರು ಇದ್ದಾರೆ. ಈಗಾಗಲೇ ಪ್ರತಿದಿನ ವಿಧಾನಸೌಧದ ಪ್ರತಿ ಕಚೇರಿ ಹಾಗೂ ಕಾರಿಡಾರ್ ಗಳನ್ನು ಸ್ವಚ್ಛಗೊಳಿಸಲಾಗುತ್ತೆ. ಇವೆಲ್ಲ ಇದ್ದರೂ ವಿಧಾನಸೌಧ ಕ್ಲೀನ್ ಮಾಡಲು ಹೊಸ ಟೆಂಡರ್ ಕರೆಯಲಾಗಿದೆ.

    ವಿಧಾನಸೌಧದಲ್ಲಿರುವ ಕಚೇರಿಗಳನ್ನು ಆಯಾ ಇಲಾಖೆಯಲ್ಲಿನ ಡಿ ಗ್ರೂಪ್ ನೌಕರರು ಸ್ವಚ್ಛಗೊಳಿಸುತ್ತಾರೆ. ವಿಧಾನ ಸೌಧದ ಕಾರಿಡಾರ್ ಹಾಗೂ ಹೊರ ಭಾಗದ ಸ್ವಚ್ಛತೆಗೆ ಗುತ್ತಿಗೆ ಆಧಾರಿತ ಕಾರ್ಮಿಕರು ಪ್ರತ್ಯೇಕವಾಗಿದ್ದಾರೆ. ಇಷ್ಟಾಗಿಯೂ ವಿಧಾನಸೌಧದ ಕಾರಿಡಾರ್ ಗಳನ್ನು ನೀರು ಹಾಕಿ ತೊಳೆಯಲು ಪ್ರತ್ಯೇಕ ಟೆಂಡರ್ ಕರೆದಿದ್ದು ಪಿಡಬ್ಲ್ಯುಡಿ ಇಲಾಖೆಯ ಈ ನಿರ್ಧಾರ ಅನುಮಾನ ಕಾರಣವಾಗಿದೆ.

    ಕೊರೊನಾ ಸಮಯದಲ್ಲಿ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ. ಹೀಗಿರುವಾಗ ವಿಧಾನಸೌಧದ ಪಿಡಬ್ಲ್ಯುಡಿ ಅಧಿಕಾರಿಗಳು ʼವಾಟರ್ ವಾಶ್ ಹೆಸರಲ್ಲಿ ಟೆಂಡರ್ ಕಾಸು ಮಾಡಲು ಹೊರಟ್ಟಿದ್ದಾರಾ ಎಂಬ ಪ್ರಶ್ನೆ ಎದ್ದಿದೆ.