Tag: ಪಿತೃಪಕ್ಷ

  • ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೋಕರ್ಣದಲ್ಲಿ ಪಿತೃಕಾರ್ಯ

    ಅಹಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟವರಿಗೆ ಗೋಕರ್ಣದಲ್ಲಿ ಪಿತೃಕಾರ್ಯ

    ಕಾರವಾರ: ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ 171 (Air India Crash) ದುರಂತಕ್ಕೀಡಾಗಿ 260 ಮಂದಿ ಮೃತಪಟ್ಟಿದ್ದರು. ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ (Gokarna) ಮೃತರ ಪಿತೃಕಾರ್ಯ (Pitru Karya) ನೆರವೇರಿಸಲಾಯಿತು.

    ಜೂನ್ 12 ರಂದು ದುರಂತ ಸಂಭವಿಸಿ 260 ಜನ ಮೃತಪಟ್ಟಿದ್ದರು. ಇದರಲ್ಲಿ ಭಾರತ ಹಾಗೂ ಲಂಡನ್ ಪ್ರಜೆಗಳು ಸಹ ಅಸುನೀಗಿದ್ದರು. ಈ ಘಟನೆ ನಡೆದು ನಾಲ್ಕು ತಿಂಗಳ ನಂತರ ಮೃತರ ಆತ್ಮಕ್ಕೆ ಶಾಂತಿಗಾಗಿ ಪಿತೃ ಪಕ್ಷ ಹಿನ್ನೆಲೆಯಲ್ಲಿ ಗೋಕರ್ಣದಲ್ಲಿ ಮೃತರ ಪಿತೃಕಾರ್ಯ ನೆರವೇರಿಸಲಾಗಿದೆ. ಇದನ್ನೂ ಓದಿ: ಅಹಮದಾಬಾದ್‌ ವಿಮಾನ ದುರಂತದಲ್ಲಿ 241 ಮಂದಿ ಸಾವು, ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು: ಏರ್‌ ಇಂಡಿಯಾ

    ಪಿತೃಕಾರ್ಯಕ್ಕೆ ಪ್ರಾಮುಖ್ಯತೆ ಹೊಂದಿರುವ ಗೋಕರ್ಣದಲ್ಲಿ ಮೃತರ ಕುಟುಂಬದವರು ಪಿತೃಪಕ್ಷದಲ್ಲಿ ಪಿಂಡ ಪ್ರದಾನ ಮಾಡಿ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಬೇಡಿಕೊಳ್ಳುವುದು ಸಂಪ್ರದಾಯ. ದೇಶ ವಿದೇಶದಿಂದಲೂ ಪಿತೃಪಕ್ಷದ ಸಂದರ್ಭದಲ್ಲಿ ಗೋಕರ್ಣಕ್ಕೆ ಬಂದು ಪಿತೃಕಾರ್ಯ ನಡೆಸಿ, ಇಲ್ಲಿಯೇ ಅಸ್ತಿ ವಿಸರ್ಜಿಸುತ್ತಾರೆ. ಹೀಗಾಗಿ, ಮಹಾಬಲೇಶ್ವರ ದೇವಸ್ಥಾನ ಕಾಶಿಯಷ್ಟೇ ಪ್ರಾಮುಖ್ಯತೆ ಹೊಂದಿದೆ.

    ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಪುಣ್ಯಾಶ್ರಮದಲ್ಲಿ ಅಹಮದಾಬಾದ್ ವಿಮಾನ ದುರಂತ (Ahmedabad Plane Crash) ಮಡಿದ 260 ಜನರ ಪಿತೃಕಾರ್ಯ ನಡೆಸಲಾಗಿದೆ. ದೇಶದಲ್ಲಿ ನಡೆದ ದೊಡ್ಡ ದುರಂತದ ಸಾಲಿಗೆ ಈ ವಿಮಾನ ದುರಂತ ಸೇರಿಹೋಗಿತ್ತು. ಹೀಗಾಗಿ ದುರಂತದಲ್ಲಿ ಮಡಿದ ಪ್ರತಿಯೊಬ್ಬರ ಹೆಸರನ್ನೂ ಸಹ ಪಡೆದು ಅವರ ಹೆಸರಲ್ಲಿ ಎಳ್ಳು-ನೀರಿನ ಅರ್ಗೆ ಸಮರ್ಪಿಸಿ ಪಿಂಡ ಪ್ರದಾನವನ್ನು ಗೋಕರ್ಣ ಮಹಾಬಲೇಶ್ವರ ದೇವಸ್ಥಾನದ ಮುಖ್ಯ ಅರ್ಚಕ ರಾಜು ಅಡಿಯವರು ತಮ್ಮ ಪುಣ್ಯಾಶ್ರಮದಲ್ಲಿ ನೆರವೇರಿಸಿದರು. ಇದನ್ನೂ ಓದಿ: Photo Gallery: ಅಹಮದಾಬಾದ್‌ನಲ್ಲಿ ವಿಮಾನ ದುರಂತ ನಡೆದ ಸ್ಥಳಕ್ಕೆ ಮೋದಿ ಭೇಟಿ

    ಗೋಕರ್ಣದ ಪುಣ್ಯಾಶ್ರಮದಲ್ಲಿ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜುಗೋಪಾಲ ಅಡಿ ಅವರ ನೇತೃತ್ವದಲ್ಲಿ 30 ಜನ ಪುರೋಹಿತರೊಂದಿಗೆ ಈ ಪಿತೃಕಾರ್ಯವನ್ನು ಕೈಗೊಳ್ಳಲಾಯಿತು. ಗುಜರಾತ್‌ನ ಮಾಜಿ ಮುಖ್ಯಮಂತ್ರಿ ದಿವಂಗತ ವಿಜಯ್ ರೂಪಾನಿ ಅವರಿಂದ ಹಿಡಿದು ಲಂಡನ್‌ನ ಮೃತ ಪ್ರಜೆಗಳಿಗೂ ಇಲ್ಲಿ ಪಿತೃಕಾರ್ಯ ನಡೆಸಲಾಯಿತು. ಎರಡು ದಿನದ ಈ ಕಾರ್ಯದಲ್ಲಿ ವಿಘ್ನ ನಿವಾರಕ ಗಣಪತಿಯ ಪೂಜೆ ನಡೆಸಿ, ನಾರಾಯಣ, ಈಶ್ವರನ ನೆನೆದು ನಾರಾಯಣ ಬಲಿ, ದಶ ಪಿಂಡ ಪ್ರದಾನ ಮಾಡಲಾಯ್ತು. ನಂತರ ಗೋದಾನ, ವಸ್ತ್ರದಾನ ಮಾಡಲಾಗಿದ್ದು, ಇಂದು ನೂರಾರು ಜನರಿಗೆ ಮೃತರ ಹೆಸರಿನಲ್ಲಿ ಅನ್ನ ಸಂತರ್ಪಣೆ ಕಾರ್ಯ ಸಹ ಕೈಗೊಳ್ಳಲಾಗಿದೆ.

    ಈ ಕಾರ್ಯವನ್ನು ಮುಂದೆ ದೇಶದಲ್ಲಿ ಈರೀತಿಯ ಘಟನೆ ನಡೆಯದಿರಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರೆಯಬೇಕು ಎಂಬ ಉದ್ದೇಶದಿಂದ ಮಾಡಲಾಗಿದೆ. ಪಿತೃಮಾಸದ ಈ ಸಂದರ್ಭದಲ್ಲಿ ಪುಣ್ಯಾಶ್ರಮದ ಮಹಾಬಲೇಶ್ವರ ದೇವಾಲಯದ ಮುಖ್ಯ ಅರ್ಚಕ ರಾಜು ಗೋಪಾಲ ಅಡಿ ಅವರಿಂದ ಪಿತೃಕಾರ್ಯ ನೆರವೇರಿಸಲಾಗಿದೆ.

  • ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

    ಪಿತೃಪಕ್ಷದ ಊಟಕ್ಕೆ ಹೋಗಲು ಪೊಲೀಸ್ ಜೀಪ್ ಕರೆಸಿಕೊಂಡ ಭೂಪ!

    – ಸರ್.. ಗಲಾಟೆ ನಡೀತಿದೆ ಬೇಗ ಬನ್ನಿ ಅಂತಾ ಪೊಲೀಸರಿಗೆ ಸುಳ್ಳು ಕರೆ
    – ಸ್ಥಳಕ್ಕೆ ದೌಡಾಯಿಸಿದ ಪೊಲೀಸರ ಬಳಿ ಮಾವನ ಮನೆಗೆ ಡ್ರಾಪ್ ಕೇಳಿದ – ಮುಂದೇನಾಯ್ತು?

    ಚಿಕ್ಕಮಗಳೂರು: ಪಿತೃಪಕ್ಷದ ಊಟಕ್ಕೆ ಹೋಗಲು ವ್ಯಕ್ತಿಯೊಬ್ಬ ಪೊಲೀಸ್ ಜೀಪ್ ಕರೆಸಿಕೊಂಡಿರುವ ಘಟನೆ ಚಿಕ್ಕಮಗಳೂರಿನ (Chikkamagaluru) ಮೂಡಿಗೆರೆಯಲ್ಲಿ ನಡೆದಿದೆ.

    112 ಗೆ ಫೋನ್ ಮಾಡಿದ ವ್ಯಕ್ತಿ, ‘ಸರ್… ಗಲಾಟೆ ನಡೀತಿದೆ.. ಬೇಗ ಬನ್ನಿ’ ಅಂತಾ ಮನವಿ ಮಾಡಿದ್ದ. ಸ್ಥಳಕ್ಕೆ ಬಂದ ಪೊಲೀಸರಿಗೆ ಮಾವನ ಮನೆಗೆ ಡ್ರಾಪ್ ಮಾಡುವಂತೆ ಕೇಳಿಕೊಂಡಿದ್ದಾನೆ. ಇದನ್ನೂ ಓದಿ: ಕೆರೆ ಕೋಡಿ ಕೆಲಸ ಮಾಡುವಾಗ ಮಣ್ಣು ಕುಸಿತ- ಮಣ್ಣಿನಡಿ ಸಿಲುಕಿ ಓರ್ವ ಸಾವು, ಇಬ್ಬರ ಸ್ಥಿತಿ ಗಂಭೀರ

    ‘ಗಾಡಿ ಯಾವು ಇಲ್ಲ… ಮಳೆ ಬೇರೆ, ಪಲ್ಗುಣಿ ಗ್ರಾಮಕ್ಕೆ ಡ್ರಾಪ್ ಮಾಡುವಂತೆ ಪೊಲೀಸರ ಬಳಿ ವ್ಯಕ್ತಿ ಮನವಿ ಮಾಡಿದ್ದಾನೆ. ಇದರಿಂದ ಪೆಚ್ಚಾದ ಪೊಲೀಸರು, ಆ ವ್ಯಕ್ತಿಗೆ ಬೈಯ್ಯಬೇಕೋ ಅಥವಾ ನಗಬೇಕೋ ತಿಳಿಯದೇ ಸುಮ್ಮನಾದರು.

    ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ತರುವೆ ಗ್ರಾಮದಲ್ಲಿ ಗಲಾಟೆ ನಡೆಯುತ್ತಿದೆ ಎಂದು ಅದೇ ಗ್ರಾಮದ ಅಶೋಕ್ ಎಂಬ ವ್ಯಕ್ತಿ, ಪೊಲೀಸರಿಗೆ ಫೋನ್ ಮಾಡಿದ್ದ. ಮಾವನ ಮನೆಗೆ ಊಟಕ್ಕೆ ಹೊರಟಿದ್ದ ಅಶೋಕ್‌ಗೆ ಪೊಲೀಸರು ಬುದ್ದಿಮಾತು ಹೇಳಿದ್ದಾರೆ. ಕೊನೆಗೆ ಪೊಲೀಸರು, ಲಾರಿಯೊಂದಕ್ಕೆ ಅಡ್ಡ ಹಾಕಿ ಆ ವ್ಯಕ್ತಿಯನ್ನ ಮಾವನ ಮನೆಗೆ ಕಳಿಸಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದಕ್ಕೆ ಪ್ರಾಣಿಗಳ ಕೊಬ್ಬು ಬಳಕೆ ವಿವಾದ – ಇಂದಿನಿಂದ ಟಿಟಿಡಿ ದೇವಾಲಯ ಪವಿತ್ರೋತ್ಸವ

  • ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    ಪಿತೃಪಕ್ಷದಂದು ಧರ್ಮ ಸಂಕಟ – ಗಾಂಧಿ ಜಯಂತಿಯಂದು ಮಾಂಸ ಮಾರಾಟಕ್ಕೆ ಅನುಮತಿ ನೀಡುವಂತೆ ಮನವಿ

    – ಮಾಂಸ ಮಾರಾಟಕ್ಕೆ ಅವಕಾಶ ಕೋರಿ ಸಿಎಂಗೆ ಸಂಘಟನೆಗಳ ಮನವಿ

    ಬೆಂಗಳೂರು: ಈ ಬಾರಿ ಪಿತೃಪಕ್ಷ (Pitrupaksha) ಮಾಡಿ ಎಡೆ ಇಡುವವರಿಗೆ ಧರ್ಮ ಸಂಕಟ ಎದುರಾಗಿದೆ. ಗಾಂಧಿ ಜಯಂತಿ (Gandhi Jayanthi) ಮತ್ತು ಮಹಾಲಯ ಅಮಾವಾಸ್ಯೆ (Mahalaya Amavasya) ಒಂದೇ ದಿನ ಬಂದಿದೆ. ಗಾಂಧಿಜಯಂತಿ ದಿನ ಮಾಂಸ ಮಾರಾಟ (Meat Sale) ನಿಷೇಧ ಇರಲಿದೆ. ಹೀಗಾಗಿ ಮಹಾಲಯ ಅಮಾವಾಸ್ಯೆ ಇರುವುದರಿಂದ ಪಿತೃಪಕ್ಷ ಮಾಡೋರಿಗೆ ಮಾಂಸದ ಕೊರತೆ ಎದುರಾಗಲಿದೆ.

    ಮಾಂಸ ಮಾರಾಟ ನಿಷೇಧ ಮಾಡಿದರೆ ಮಾಂಸ ಸಿಗಲ್ಲ. ಅದಕ್ಕಾಗಿ ಗಾಂಧಿ ಜಯಂತಿ ದಿನ ಮಾಂಸ ಮಾರಾಟಕ್ಕೆ ಅವಕಾಶ ಕೊಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸಂಘಟನೆಗಳು, ಸಮಿತಿಗಳು ಮನವಿ ಮಾಡಿಕೊಂಡಿದೆ. ಈ ಸಂಬಂಧ ಬಿಬಿಎಂಪಿಯ ಮಾಜಿ ಕಾರ್ಪೊರೇಟರ್ ವಿ.ವಿ ಸತ್ಯನಾರಾಯಣ ಹಾಗೂ ಜಯಪ್ರಕಾಶ್ ನಾರಾಯಣ್ ವಿಚಾರ ವೇದಿಕಯ ಅಧ್ಯಕ್ಷ ಬಿ.ಎಂ ಶಿವಕುಮಾರ್ ಅವರು ಸಿಎಂಗೆ ಪತ್ರ ಬರೆದಿದ್ದಾರೆ. ಕಾಕತಾಳಿಯವಾಗಿ ಒಂದೇ ದಿನ ಎರಡು ಆಚರಣೆ ಬಂದಿರುವುದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗದಂತೆ ಪಿತೃಪಕ್ಷ ಆಚರಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿ ಪತ್ರ ಸಲ್ಲಿಸಲಾಗಿದೆ. ಇದನ್ನೂ ಓದಿ: ದೆಹಲಿಯಲ್ಲಿ ಪಟಾಕಿ ಬ್ಯಾನ್‌ ಯಾಕೆ?

    ಹಳ್ಳಿಗಳ ಕಡೆ ಏನಾಗಲಿದೆಯೋ ಗೊತ್ತಿಲ್ಲ. ಹಲವು ಮಂದಿ ಮಾಂಸಾಹಾರವನ್ನು ಸಿದ್ಧಪಡಿಸಿ ತಮ್ಮ ಹಿರಿಯರಿಗೆ ಎಡೆ ಇಟ್ಟು ಪೂಜೆ ಸಲ್ಲಿಸುತ್ತಾರೆ. ಈ ಹಿನ್ನೆಲೆ ಬೆಂಗಳೂರಿನಂತಹ ಸಿಟಿಗಳಲ್ಲಿ ಮಾಂಸ ಮಾರಾಟ ನಿಷೇಧ ಆದರೆ ಸಮಸ್ಯೆ ಆಗುತ್ತೆ. ತಲಾತಲಾಂತರದಿಂದ ಪಿತೃಪಕ್ಷದ ದಿನ ಎಡೆ ಇಟ್ಟುಕೊಂಡು ಬರುತ್ತಿದ್ದೇವೆ. ಈ ಬಾರಿಯು ಸಂಪ್ರದಾಯ ಪಾಲಿಸಬೇಕು. ಮಾಂಸ ಮಾರಾಟಕ್ಕೆ ಅವಕಾಶ ಕೊಡಿ ಎಂದು ಮನವಿ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಅಕ್ರಮ ಮದ್ಯ ನಾಶದ ವೇಳೆ ಬಾಟಲಿ ದೋಚಿ ಓಡಿದ್ರು!

  • ಕೆಟ್ಟು ಹೋದ ಸರ್ವರ್‌ಗೆ ಪಿಂಡ ಇಟ್ಟ ಹೋರಾಟಗಾರ

    ಕೆಟ್ಟು ಹೋದ ಸರ್ವರ್‌ಗೆ ಪಿಂಡ ಇಟ್ಟ ಹೋರಾಟಗಾರ

    ಕೋಲಾರ: ಜಿಲ್ಲೆಯ ಬಹುತೇಕ ಸರ್ಕಾರಿ ಕಛೇರಿಗಳಲ್ಲಿ (Government Office) ಸರ್ವರ್ ಸಮಸ್ಯೆ (Server Down) ಎದುರಾಗಿ ಸಾರ್ವಜನಿಕರು ಇನ್ನಿಲ್ಲದ ಕಷ್ಟಪಡುತ್ತಿರುವುದನ್ನು ಗಮನಿಸಿದ ಹೋರಾಟಗಾರರೊಬ್ಬರು ಪಿಂಡ ಪ್ರದಾನ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

    ಇಂದು ಪಿತೃಪಕ್ಷವಾದ ಹಿನ್ನೆಲೆ ನೊಂದ ಹೋರಾಟಗಾರ ಸರ್ವರ್‌ಗಳಿಗೆ ಪಿಂಡ ಪ್ರದಾನ ಮಾಡಿ ಗಮನ ಸೆಳೆದಿದ್ದಾರೆ. ಪಿತೃಪಕ್ಷದ ಹಿನ್ನೆಲೆ ಸರ್ಕಾರಿ ಮಾಲೀಕತ್ವದ ಸರ್ವರ್‌ಗಳಿಗೆ ಪಿಂಡ ಪ್ರದಾನ ಮಾಡಿದ ಸಾಮಾಜಿಕ ಹೋರಾಟಗಾರನ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ.

    ಕೋಲಾರದ (Kolar) ಬಂಗಾರಪೇಟೆ ತಾಲೂಕಿನ ಕರಪನಹಳ್ಳಿ ನಿವಾಸಿ ಪ್ರಸನ್ನ ಕುಮಾರ್ ಹೀಗೆ ಪಡಿತರ, ಆಧಾರ್, ಪಹಣಿ, ಮುಟೇಷನ್, ಬ್ಯಾಂಕ್ ಕಾರ್ಯಗಳಿಗೆ ಅಡ್ಡಿಯಾಗಿರುವ ಸರ್ವರ್‌ಗೆ ಪಿಂಡ ಬಿಟ್ಟು, ವಿನೂತನ ಪ್ರತಿಭಟನೆ ಮಾಡಿ ಗಮನ ಸೆಳೆದಿದ್ದಾರೆ. ಅಂತರ್ಜಾಲ ಮತ್ತು ಸರ್ವರ್‌ಗಳಿಗೆ ಎಡೆ ಇಟ್ಟು ಶ್ಲೋಕಗಳನ್ನು ಹೇಳಿ ಪಿತೃಪಕ್ಷ ಮಾಡಿರುವ ವಿಡಿಯೋ ಭಾರೀ ವೈರಲ್ ಆಗಿದೆ. ಸರ್ವರ್‌ಗಳು ಸತ್ತು ಹೋಗಿವೆ, ಅದಕ್ಕಾಗಿ ಇಂದು ಪಿತೃಪಕ್ಷದ ಹಿನ್ನೆಲೆ, ಪಿಂಡ ಪ್ರದಾನ ಮಾಡಲಾಗುತ್ತಿದೆ ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: ಹುಡುಗಿಯನ್ನು ದಪ್ಪ, ಪುಷ್ಠಿಯಾಗಿ ಕಾಣುವಂತೆ ಮಾಡಿ ಮದುವೆ ಫಿಕ್ಸ್ ಮಾಡು – ದೇವರಿಗೆ ಪತ್ರ ಬರೆದ ಭಕ್ತ

    ನನ್ನ ಬಳಿ ರೇಷನ್ ಕಾರ್ಡ್ ಇದೆ, ಆದ್ರೆ ಸರ್ವರ್ ಸತ್ತು ಹೋಗಿದೆ. ಮೊಬೈಲ್‌ಗೆ ಆಧಾರ್ ಲಿಂಕ್ ಮಾಡಬೇಕು, ಸರ್ವರ್ ಸತ್ತು ಹೋಗಿದೆ. ನಮ್ಮ ತಾತ ಮುತ್ತಾತ ತಂದೆಯವರ ಸಂಪಾದನೆಯ ಆಸ್ತಿ ಮ್ಯೂಟೇಷನ್ ತೆಗೋಬೇಕು, ಸರ್ವರ್ ಸತ್ತು ಹೋಗಿದೆ. ಹೀಗೆ ಯಾವುದೇ ದಾಖಲೆ ಪಡೆಯಲಾಗದೇ ಸಾರ್ವಜನಿಕರು ಪರದಾಡುವಂತಾಗಿದೆ. ಅದಕ್ಕಾಗಿ ಸತ್ತು ಹೋದ ಸರ್ವರ್‌ಗೆ ಪಿಂಡ ಪ್ರದಾನ ಮಾಡುತ್ತಿದ್ದೇನೆ ಎಂದು ಹೇಳಿ ವಿಭಿನ್ನವಾಗಿ ಸರ್ವರ್ ಸಮಸ್ಯೆ ವಿರುದ್ಧ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ. ಇದನ್ನೂ ಓದಿ: ನಾನು Law ಓದಿದ್ದೀನಿ, ಬೊಮ್ಮಾಯಿ ಲಾ ಓದಿಲ್ಲ – ಕಾನೂನು ಕ್ರಮ ತಗೊಂಡ್ರೆ ನಾವ್ ಸುಮ್ನೆ ಇರ್ತೀವಾ?: ಸಿದ್ದರಾಮಯ್ಯ

    ಹಿಂದೆ ಕಿತ್ತುಹೋಗಿದ್ದ ಡಾಂಬರ್ ರಸ್ತೆಗೆ ಎಳ್ಳು ನೀರು ಬಿಟ್ಟು ಪ್ರತಿಭಟಿಸಿದ್ದ ಕನ್ನಡಪರ ಹೋರಾಟಗಾರರೂ ಆಗಿರುವ ಪ್ರಸನ್ನ ಕುಮಾರ್ ಅವರ ಹೋರಾಟ ಹಾಗೂ ಪಿಂಡ ಪ್ರದಾನ ಜಿಲ್ಲೆಯಲ್ಲಿ ಸಖತ್ ಸದ್ದು ಮಾಡುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

    ‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

    ಬೆಂಗಳೂರು: ಮನೆಯ ಹಿರಿಯರನ್ನು ಸ್ಮರಿಸುವುದಕ್ಕಾಗಿಯೇ ಒಂದು ತಿಂಗಳನ್ನು ನಮ್ಮ ಹಿಂದೂ ಶಾಸ್ತ್ರದಲ್ಲಿ ಮೀಸಲಿಡಲಾಗಿದೆ. ಆ ತಿಂಗಳನ್ನು ಪಿತೃ ಪಕ್ಷವೆಂದು ಕರೆಯುತ್ತಾರೆ. ಆ ಒಂದು ಆಚರಣೆಗೆ ಮಾರ್ಲಾಮಿ ಹಬ್ಬವೆಂದೂ ಕರೆಯುತ್ತಾರೆ. ಈ ಆಚರಣೆ ಹೇಗೆ ಬಂತು? ಇದರ ಹಿನ್ನೆಲೆ ಏನು? ಈ ಹಬ್ಬದ ವಿಶೇಷತೆಗಳೇನು? ಈ ಎಲ್ಲಾ ಸಂಗತಿಗಳನ್ನು ಇಟ್ಟುಕೊಂಡು ಈಗ ಸ್ಯಾಂಡಲ್‍ವುಡ್‍ನಲ್ಲಿ ಚಲನಚಿತ್ರವೊಂದು ನಿರ್ಮಾಣವಾಗುತ್ತಿದೆ.

    ಟಿ.ವಿನಯ್‍ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ಮುಹೂರ್ತ ಸಮಾರಂಭ ಕಳೆದ ಸೋಮವಾರ ನೆರವೇರಿತು. ಗವಿಪುರಂ ಗುಟ್ಟಹಳ್ಳಿಯ ಬಂಡೆ ಮಹಾಕಾಳಿಯ ದೇವಸ್ಥಾನದಲ್ಲಿ ನಡೆದ ಮುಹೂರ್ತದ ದೃಶ್ಯಕ್ಕೆ ಬಿಗ್‍ಬಾಸ್ ಖ್ಯಾತಿಯ ಪ್ರಥಮ್ ಕ್ಲ್ಯಾಪ್ ಮಾಡಿದರೆ ಧಾತ್ರಿ ಮಂಜುನಾಥ್ ಕ್ಯಾಮರಾ ಚಾಲನೆ ಮಾಡಿದರು.

    ಸರಿಗಮಪ ರಿಯಾಲಿಟಿ ಶೋ ವಿನ್ನರ್ ಚನ್ನಪ್ಪ ನಾಯಕನಾಗಿ ಕಾಣಿಸಿಕೊಳ್ಳುತ್ತಿರುವ ಮಾರ್ಲಾಮಿ ಚಿತ್ರದ ನಾಯಕಿಯಾಗಿ ಪದ್ಮಾವತಿ ಧಾರವಾಹಿ ಖ್ಯಾತಿಯ ವರ್ಷಿತ ವರ್ಮ ನಟಿಸುತ್ತಿದ್ದಾರೆ. ಎರಿಕ್ ವಿ.ಜಿ. ಅವರ ಛಾಯಾಗ್ರಹಣ ಹಾಗೂ ಅರುಣ್ ಆಂಡ್ರೋ ಅವರ ಸಂಗೀತ ಈ ಚಿತ್ರಕ್ಕಿದೆ.

    ಮುಹೂರ್ತದ ನಂತರ ಚಿತ್ರದ ವಿಶೇಷತೆಗಳ ಬಗ್ಗೆ ಮಾತನಾಡಿದ ನಿರ್ದೇಶಕ ವಿನಯ್ ಕುಮಾರ್ ಪಕ್ಕಾ ಗ್ರಾಮೀಣ ಹಿನ್ನೆಲೆಯಲ್ಲಿ ನಡೆಯುವ ಕಥೆಯೇ ಇದು. ಪಿತೃಪಕ್ಷವನ್ನು ಗ್ರಾಮೀಣ ಪ್ರದೇಶಗಳಲ್ಲಿ ತುಂಭಾ ಭಯ ಭಕ್ತಿಯಿಂದ ಆಚರಿಸುತ್ತಾರೆ. ಈ ಹಬ್ಬವನ್ನು ತೋರಿಸುವ ಮೂಲಕ ಸಮಾಜಕ್ಕೆ ಸಂದೇಶ ಹೇಳಲು ಪ್ರಯತ್ನಿಸುತ್ತಿದ್ದೇನೆ. ಈ ಚಿತ್ರದಲ್ಲಿ ಕಥೆಯೇ ಹೀರೋ. ಕಥೆಯಲ್ಲಿ ಸಾಕಷ್ಟು ಟ್ವಿಸ್ಟ್ ಆಂಡ್ ಟರ್ನ್ ಇದೆ. ಚೆನ್ನಪ್ಪ ಅವರ ಪಾತ್ರ ಚಿತ್ರಕ್ಕೆ ಹೊಸ ತಿರುವು ಕೊಡುತ್ತದೆ. ಇದರ ಜೊತೆಗೆ ಹಾರರ್ ಟಚ್ ಕೂಡ ಇದೆ. ಚನ್ನರಾಯಪಟ್ಟಣ ಸುತ್ತಮುತ್ತ ನಡೆಯುವ ಕಥೆ ಇದಾಗಿದ್ದು, 95% ಅಲ್ಲೇ ಚಿತ್ರೀಕರಣ ಮಾಡುತ್ತಿದ್ದೇವೆ. ಉಳಿದಂತೆ ಸಿಟಿ ಬ್ಯಾಕ್ ಡ್ರಾಪ್‍ನಲ್ಲಿ ನಡೆಯುತ್ತಿದೆ ಎಂದು ಹೇಳಿದರು.

    ಈ ಚಿತ್ರಕ್ಕೆ ಕುಮಾರ್ ಬಂಡವಾಳ ಹಾಕಿದ್ದು, ಚಿತ್ರದ ಕುರಿತಂತೆ ಮಾತನಾಡುತ್ತಾ, ಮಂಡ್ಯ, ಹಾಸನ ಏರಿಯಾದಲ್ಲಿ ನಡೆಯುವ ಕಥೆ ಇದು. ನಿರ್ದೇಶಕರು ಈ ಕಥೆ ಹೇಳಿದಾಗ ನನಗೆ ತುಂಬಾ ಇಷ್ಟವಾಯಿತು. ಕಥೆಯಲ್ಲಿ ಒಂದಿಷ್ಟು ಸಸ್ಪೆನ್ಸ್ ಹಾರರ್ ಕೂಡ ಇದೆ. ಈ ಚಿತ್ರದ ಕಾನ್ಸೆಪ್ಟ್ ಹೇಗಿರುತ್ತದೆ ಎಂಬುದನ್ನು ಚಿತ್ರ ಮುಗಿದ ನಂತರ ಟ್ರೈಲರ್ ಮಾಡಿ ಅದರ ಮೂಲಕ ಜನರಿಗೆ ಹೇಳಬೇಕೆಂದು ಪ್ಲಾನ್ ಹಾಕಿಕೊಂಡಿದ್ದೇವೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ಪ್ರಥಮ್ ಮಾತನಾಡಿ ನಮ್ಮನ್ನಗಲಿರುವ ಹಿರಿಯರನ್ನು ನೆನಪಿಸಿಕೊಂಡು ಮಾಡುವ ಪೂಜೆಯನ್ನು ಮಾರ್ಲಾಮಿ ಎನ್ನುತ್ತೇವೆ. ಈ ತರದ ಹಳ್ಳಿ ಸೊಗಡಿನ ಸಿನಿಮಾಗಳು ಇನ್ನು ಹೆಚ್ಚು ಬರಬೇಕೆಂದು ಶುಭ ಹಾರೈಸಿದರು. ಚಿತ್ರದಲ್ಲಿ 5 ಹಾಡುಗಳಿದ್ದು, ಅರುಣ್ ಆಂಡ್ರೋ ಈ ಚಿತ್ರಕ್ಕೆ ಸಂಗೀತ ಸಂಯೋಜನೆ ಮಾಡಿದ್ದಾರೆ. ವರುಣ್ ಮೋಹನ್ ಜುನೇಜ, ಶೋಭರಾಜ್, ಮುನಿ ಕೆಂಪೇಗೌಡ, ಸುಧಾ, ದಿನೇಶ್ ಗುರೂಜಿ, ರೆಮೋ ಉಳಿದ ತಾರಾಬಳಗದಲ್ಲಿದ್ದಾರೆ.

  • ಪಿತೃಪಕ್ಷ ಇತ್ತು, ಮನೆ ಕಟ್ಟಿಸಿಕೊಡೋಕೆ ಆಗ್ಲಿಲ್ಲ- ಡಿಸಿಎಂ ಮುಂದೆ ಪುಂಗಿದ ಅಧಿಕಾರಿ

    ಪಿತೃಪಕ್ಷ ಇತ್ತು, ಮನೆ ಕಟ್ಟಿಸಿಕೊಡೋಕೆ ಆಗ್ಲಿಲ್ಲ- ಡಿಸಿಎಂ ಮುಂದೆ ಪುಂಗಿದ ಅಧಿಕಾರಿ

    ತುಮಕೂರು: ವಸತಿ ಯೋಜನೆಯ ಮನೆಗಳ ನಿರ್ಮಾಣಕ್ಕೆ ಪಿತೃಪಕ್ಷ ಅಡ್ಡಿಯಾಗಿದೆ ಅಂತ ಕೆಡಿಪಿ ಸಭೆಯಲ್ಲಿ ಅಧಿಕಾರಿಯೊಬ್ಬರು ಹೇಳಿರುವುದು ಹಾಸ್ಯಾಸ್ಪದವಾಗಿತ್ತು.


    ಮಧುಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಮೋಹನಕುಮಾರ್ ಅವರು ಶುಕ್ರವಾರ ತುಮಕೂರು ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಈ ಹೇಳಿಕೆ ನಿಡಿದ್ದರು, ಅಧಿಕಾರಿಯ ಹೇಳಿಕೆಯಿಂದ ಡಿಸಿಎಂ ಪರಮೇಶ್ವರ್ ಅವರು ಕೆಂಡಾಮಂಡಲರಾಗಿದ್ದಾರೆ.

    ವಿವಿಧ ವಸತಿ ಯೋಜನೆಯಡಿ 35,410 ಮನೆಗಳ ನಿರ್ಮಾಣ ಮಾಡುವ ಗುರಿ ಹೊಂದಲಾಗಿತ್ತು. ಆದ್ರೆ ಇಲ್ಲಿಯವರೆಗೂ 3118 ಮನೆಯಷ್ಟನ್ನೇ ನಿರ್ಮಿಸಲಾಗಿದೆ. 12240 ಮನೆಗಳು ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಡಿಸಿಎಂ ಜಿ.ಪರಮೇಶ್ವರ್ ಅವರು ಮನೆ ನಿರ್ಮಾಣ ವಿಳಂಬಕ್ಕೆ ಕಾರಣ ಕೇಳಿದ್ದಾರೆ. ಡಿಸಿಎಂ ಪ್ರಶ್ನೆಗೆ ಪಿತೃಪಕ್ಷ ಅಂತ ಅಧಿಕಾರಿ ಉತ್ತರ ಕೊಟ್ಟಿದ್ದಾರೆ. ಅಧಿಕಾರಿ ಮಾತು ಕೇಳಿ ಸಭೆ ನಗೆ ಗಡಲಿನಲ್ಲಿ ತೇಲಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv