Tag: ಪಿಪಿಪಿ

  • ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಪಂಜಾಬ್ ಸಿಎಂ ಆಯ್ಕೆ ವಿರೋಧಿಸಿ ಪಾಕಿಸ್ತಾನದಲ್ಲಿ ಭುಗಿಲೆದ್ದ ಪ್ರತಿಭಟನೆ

    ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಹಮ್ಜಾ ಶಹಬಾಜ್ ಅವರ ಆಯ್ಕೆಯನ್ನು ಖಂಡಿಸಿ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಹ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ.

    ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪರ್ವೇಜ್ ಇಲಾಹಿ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ನಾಯಕ ಹಮ್ಜಾ ಶಹಬಾಜ್ ಅವರು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್-ಕ್ವಾಡ್ (PML-Q) ಮತಗಳನ್ನು ಪಂಜಾಬ್ ವಿಧಾನಸಭೆ ಉಪ ಸಭಾಪತಿ ತಿರಸ್ಕರಿಸಿದ ಬಳಿಕ ಅವರು ಜಯ ಸಾಧಿಸಿದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ

    ಪಿಟಿಐ ಮತ್ತು ಪಿಎಂಎಲ್-ಕ್ಯೂ ಜಂಟಿ ಅಭ್ಯರ್ಥಿ ಪರ್ವೈಜ್ ಇಲಾಹಿ 186 ಮತಗಳನ್ನು ಪಡೆದರೆ, ಹಮ್ಜಾ ಶಹಬಾಜ್ 179 ಮತಗಳನ್ನು ಪಡೆದಿದ್ದರು. ಆದರೆ ಪಿಎಂಎಲ್-ಕ್ಯೂನ 10 ಮತಗಳನ್ನು ಡೆಪ್ಯುಟಿ ಸ್ಪೀಕರ್ ದೋಸ್ತ್ ಮುಹಮ್ಮದ್ ಮಜಾರಿ ಅವರು ತಿರಸ್ಕರಿಸಿದ್ದರಿಂದಾಗಿ ಪರ್ವೈಜ್ ಇಲಾಹಿ ಅವರು 176 ಮತಗಳನ್ನು ತೆಗೆದುಕೊಂಡರು. ಇದರಿಂದಾಗಿ ಇಲಾಹಿಗೆ ಸೋಲುಂಟಾಯಿತು.

    ಸಾಂರ್ಭಿಕ ಚಿತ್ರ

    ಸಿಎಂ ಆಗಿ ಮರು ಆಯ್ಕೆಯಾದ ಬಳಿಕ ಮಾತನಾಡಿದ ಹಮ್ಜಾ ಶಹಬಾಜ್, `ಕೆಲವರು ಆಯ್ಕೆ ವಿರುದ್ಧ ಈಗ ಸುಪ್ರೀಂ ಕೋರ್ಟ್ಗೆ ಹೋಗಿದ್ದಾರೆ. ಆದರೆ ಸಂಸತ್ತಿಗೆ ನೈತಿಕತೆಯ ಅಧಿಕಾರವಿದೆ. ಪ್ರಜಾಪ್ರಭುತ್ವವು ನೈತಿಕತೆಯ ಮೇಲೆ ಆಧಾರಿತವಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಬ್ಲ್ಯಾಕ್ ಏಲಿಯನ್‍ನಂತೆ ಬದಲಾದ ಇವನನ್ನು ನೋಡಿದವರು ಕೆಲಸವನ್ನೆ ಕೊಡುತ್ತಿಲ್ಲ – ಓದಿ ವಿಚಿತ್ರ ಕಥೆ

    ಸಿಎಂ ಆಯ್ಕೆ ಕುರಿತು ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪಂಜಾಬ್ ಮುಖ್ಯಮಂತ್ರಿ ಚುನಾವಣೆಯ ಬೆಳವಣಿಗೆಯನ್ನು ಕುದುರೆ ವ್ಯಾಪಾರಕ್ಕೆ ಹೋಲಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಾಯಕ ಆಸಿಫ್ ಜರ್ದಾರಿ ವಿರುದ್ಧ ಕಿಡಿಕಾರಿದ್ದಾರೆ. ದೇಶದ ದೊಡ್ಡ ಡಕಾಯಿತ ಆಸಿಫ್ ಜರ್ದಾರಿ 30 ವರ್ಷಗಳಿಂದ ದೇಶವನ್ನು ದರೋಡೆ ಮಾಡುತ್ತಿದ್ದಾನೆ ದೂರಿದ್ದಾರೆ.

    ಬೇರೆ ಯಾವುದೇ ಸಮಾಜದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗಾಗಿ ಇಂದು ರಾತ್ರಿ ಪಂಜಾಬ್ ಅಸೆಂಬ್ಲಿ ಬೆಳವಣಿಗೆಗಳ ವಿರುದ್ಧ ಶಾಂತಿಯುತ ಪ್ರತಿಭಟನೆ ದಾಖಲಿಸಲು ನಾನು ರಾಷ್ಟ್ರಕ್ಕೆ ಮನವಿ ಮಾಡುತ್ತೇನೆ ಎಂದು ಕರೆ ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲು ಕ್ರಮ: ಬೊಮ್ಮಾಯಿ

    8 ಜಿಲ್ಲೆಗಳಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜುಗಳನ್ನು PPP ಮಾದರಿಯಲ್ಲಿ ಸ್ಥಾಪಿಸಲು ಕ್ರಮ: ಬೊಮ್ಮಾಯಿ

    ಚಾಮರಾಜನಗರ: ರಾಜ್ಯದ ಎಂಟು ಜಿಲ್ಲೆಗಳಿಗೆ ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜುಗಳನ್ನು ಒಂದೂವರೆ ವರ್ಷಗಳಲ್ಲಿ ಪಿ.ಪಿ.ಪಿ ಮಾದರಿಯಲ್ಲಿ ಸ್ಥಾಪಿಸಲು ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಚಾಮರಾಜನಗರದ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವತಿಯಿಂದ ಆಯೋಜಿಸಿರುವ 450 ಹಾಸಿಗೆಯ ಬೋಧನಾ ಆಸ್ಪತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬುಡಕಟ್ಟು ಜನಾಂಗದವರು ಹೆಚ್ಚಾಗಿ ವಾಸಿಸುವ ಚಾಮರಾಜನಗರ ಜಿಲ್ಲೆಯು ನೈಸರ್ಗಿಕವಾಗಿ ಸಂಪದ್ಭರಿತವಾಗಿದ್ದರೂ, ಹಿಂದುಳಿದ ಜಿಲ್ಲೆ ಎಂದು ಪರಿಗಣಿಸ್ಪಟ್ಟಿದೆ. ಜಿಲ್ಲೆ ದೇವಸ್ಥಾನಗಳ ತವರೂರು ಕೂಡ ಹೌದು. ನಮ್ಮ ಸರ್ಕಾರ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸುವ ಪಣತೊಟ್ಟಿದೆ. ಶಿಕ್ಷಣ, ಆರೋಗ್ಯ, ಆರ್ಥಿಕ ಹಾಗೂ ಸಾಮಾಜಿಕ ತಾರತಮ್ಯಗಳನ್ನು ಹೋಗಲಾಡಿಸಿ, ಉಳಿದ ಜಿಲ್ಲೆಗಳಂತೆ ಮುಖ್ಯವಾಹಿನಿಗೆ ತರಲು ಶ್ರಮಿಸಲಾಗುವುದು ಎಂದರು.

    ಆರೋಗ್ಯ ಎನ್ನುವುದು ವ್ಯಕ್ತಿಗೆ ಬಹಳ ಮುಖ್ಯ. ಆದರೆ ಅದನ್ನು ನಾವು ನಿರ್ಲಕ್ಷಿಸುತ್ತೇವೆ. ಯಾರು ಆರೋಗ್ಯವನ್ನು ಕಾಪಾಡಿಕೊಳ್ಳುತ್ತಾರೋ ಅವರು ಬದುಕಿನಲ್ಲಿ ಸಾಧನೆಯನ್ನು ಮಾಡುತ್ತಾರೆ ಎಂದ ಮುಖ್ಯಮಂತ್ರಿಗಳು ಈ ಆಸ್ಪತ್ರೆ ಜಿಲ್ಲೆಯ ಆರೋಗ್ಯವನ್ನು ಸಂಪೂರ್ಣವಾಗಿ ಅಭಿವೃದ್ದಿಪಡಿಸಲು ಸಶಕ್ತವಾದ ಆರೋಗ್ಯ ವ್ಯವಸ್ಥೆ ಮಾಡುವು ಕೇಂದ್ರಬಿಂದು ಆಗಲಿದೆ ಎಂಬ ಆಶಯವನ್ನು ವ್ಯಕ್ತಪಡಿಸಿದರು. ಇದನ್ನೂ ಓದಿ: ಮೌಢ್ಯಕ್ಕೆ ಹೆದರಿದ್ರಾ ಸಿಎಂ ಬೊಮ್ಮಾಯಿ?

    ಇಲ್ಲಿ ವಿದ್ಯೆ ಕಲಿಸುವ ಎಲ್ಲಾ ಪ್ರಾಧ್ಯಾಪಕರು, ಪ್ರಾಮಾಣಿಕವಾಗಿ ವಿದ್ಯಾರ್ಥಿಗಳಿಗೆ ವಿದ್ಯಾದಾನ ಮಾಡಬೇಕು. ಇಲ್ಲಿ ಕಲಿತವರು ಅತ್ಯಂತ ಯಶಸ್ವಿ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿ ಹಾಗೂ ದಾದಿಯರಾಗಿ ಹೊರಹೊಮ್ಮಬೇಕು. ನಾಡಿನ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೌಲಭ್ಯ ತಲುಪಬೇಕು. ಅದಕ್ಕೆ ಸರ್ಕಾರ ಬದ್ಧವಾಗಿದ್ದು, ಆರೋಗ್ಯ ಮೂಲಸೌಕರ್ಯ ಹೆಚ್ಚಳವಾಗಬೇಕು. ವೈದ್ಯರಿಗೂ ಹಾಗೂ ರೋಗಿಯ ಅನುಪಾತದಲ್ಲಿ ಬಹಳಷ್ಟು ವ್ಯತ್ಯಾಸವಿದೆ. ವಿಶ್ವ ಆರೋಗ್ಯ ಸಂಸ್ಥೆಯ ನಿಯಮಗಳಿಗಿಂತಲೂ ರೋಗಿಗಳ ಮತ್ತು ಬೆಡ್ ಅನುಪಾತ ಕಡಿಮೆ ಇದೆ. ಇದನ್ನು ಸರಿದೂಗಿಸಲು ನಮ್ಮ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು 154 ವೈದ್ಯಕೀಯ ಕಾಲೇಜುಗಳನ್ನು ಕೇವಲ 4 ವರ್ಷಗಳಲ್ಲಿ ಪ್ರಾರಂಭ ಮಾಡಿದ್ದಾರೆ. ರಾಜ್ಯದಲ್ಲಿ ಹಾವೇರಿ, ಯಾದಗಿರಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭವಾಗಿದ್ದರೆ ಶೇ 60 ರಷ್ಟು ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಕೋವಿಡ್ ಸಂದರ್ಭದಲ್ಲಿ ಆರೋಗ್ಯ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಬಹಳ ದೊಡ್ಡ ಪ್ರಮಾಣದ ಸಹಕಾರವನ್ನು ಕೊಟ್ಟಿದೆ ಎಂದರು.

    ಕೇಂದ್ರ ಸರ್ಕಾರ ಕರೊನಾ ಉಚಿತ ಲಸಿಕೆಯನ್ನು ಪೂರೈಕೆಯಲ್ಲಿ ಸಹಕಾರ ನೀಡಿದೆ. ಈಗಾಗಲೇ ರಾಜ್ಯದ ಜನತೆಗೆ ಶೇ.80 ರಷ್ಟು ಮೊದಲನೇ ಡೋಸ್ ಹಾಗೂ ಶೇ. 30 ರಷ್ಟು ಎರಡನೇ ಡೋಸ್ ನೀಡಲಾಗಿದೆ. ಡಿಸೆಂಬರ್ ತಿಂಗಳೊಳಗೆ ರಾಜ್ಯದ ಎಲ್ಲರಿಗೂ ಲಸಿಕೆಯನ್ನು ಪೂರೈಸುವ ಗುರಿ ಇದೆ ಎಂದು ಮಾಹಿತಿ ಹಂಚಿಕೊಂಡರು. ಇದನ್ನೂ ಓದಿ: ಅದೃಷ್ಟ ಖುಲಾಯಿಸುತ್ತೆ ಅಂತಾ ಹೊಸ ಮನೆ ನಿರ್ಮಿಸಿ ಬಾಡಿಗೆ ಮನೆಯಲ್ಲಿದ್ದ ಉಮೇಶ್‍ಗೆ ಐಟಿ ಶಾಕ್

    ಚಾಮರಾಜನಗರ ಜಿಲ್ಲೆಗೆ ಬಾರದೇ ಕರ್ತವ್ಯಲೋಪ ಎಸಗಲಾರೆ:
    ಚಾಮರಾಜನಗರ ಜಿಲ್ಲೆ ರಾಜ್ಯದ ಅವಿಭಾಜ್ಯ ಅಂಗ. ಜಿಲ್ಲೆಗೆ ಬಂದು ಇಲ್ಲಿನ ಜನತೆಗೆ ಜನ ಕಲ್ಯಾಣ ಕಾರ್ಯಕ್ರಮ ನೀಡುವುದು ನಮ್ಮ ಆದ್ಯ ಕರ್ತವ್ಯ. ಈ ಜಿಲ್ಲೆಗೆ ಬಾರದೇ ಇದ್ದು ಕರ್ತವ್ಯಲೋಪ ಎಸಗಲಾರೆ ಎಂದ ಮುಖ್ಯಮಂತ್ರಿಗಳು ಒಳ್ಳೆಯ ಮನಸ್ಸಿನಿಂದ ಕೆಲಸ ಮಾಡಿದಾಗ ಪರಿಣಾಮವೂ ಒಳ್ಳೆಯದೇ ಇರುತ್ತದೆ ಈ ಸಂಕುಚಿತ ಭಾವನೆಯಿಂದ ಹೊರಬಂದಾಗ ಮಾತ್ರ ಆರೋಗ್ಯಕರ ಸಮಾಜ ನಿರ್ಮಾಣ ಸಾಧ್ಯ ಎಂದರು. ವೈಜ್ಞಾನಿಕ ಹಾಗೂ ತರ್ಕಬದ್ಧವಾದ ಯುವಪೀಳಿಗೆ ನಿರ್ಮಾಣವಾಗಬೇಕು. ಅದಕ್ಕಿರುವ ಎಲ್ಲ ಅಡೆತಡೆಗಳನ್ನು ತೊಡೆದುಹಾಕಿ ಮುನ್ನುಗ್ಗಲು ಎಲ್ಲರ ಸಹಕಾರ ಬೇಕು. ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಶ್ರಮಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

  • ಪಾಕ್ ರಾಷ್ಟ್ರಪತಿ ಭವನದಲ್ಲೇ ನನ್ನ ಮೇಲೆ ಅತ್ಯಾಚಾರವಾಗಿತ್ತು: ಸಿಂಥಿಯಾ ಆರೋಪ

    ಪಾಕ್ ರಾಷ್ಟ್ರಪತಿ ಭವನದಲ್ಲೇ ನನ್ನ ಮೇಲೆ ಅತ್ಯಾಚಾರವಾಗಿತ್ತು: ಸಿಂಥಿಯಾ ಆರೋಪ

    ಇಸ್ಲಾಮಾಬಾದ್: ಪಾಕಿಸ್ತಾನದ ರಾಷ್ಟ್ರಪತಿಭವನದಲ್ಲೇ ನನ್ನ ಮೇಲೆ ಅತ್ಯಾಚಾರವಾಗಿತ್ತು ಎಂದು ಅಮೆರಿಕದ ಮಹಿಳೆ, ಬ್ಲಾಗರ್ ಸಿಂಥಿಯಾ ಡಾನ್ ರಿಚ್ಚಿ ಆರೋಪಿಸಿದ್ದಾರೆ.

    ಪಾಕಿಸ್ತಾನದ ಮಾಜಿ ಪ್ರಧಾನಿ, ಪಾಕಿಸ್ತಾನ ಪೀಪಲ್ಸ್ ಪಾರ್ಟಿ (ಪಿಪಿಪಿ) ಮುಖಂಡ ಯೂಸುಫ್ ರಾಜಾ ಗಿಲಾನಿ ದೈಹಿಕ ಹಿಂಸೆ ನೀಡಿದ್ದರು. ಅಷ್ಟೇ ಅಲ್ಲದೆ ಮಾಜಿ ಗೃಹ ಸಚಿವ ರೆಹಮಾನ್ ಮಲಿಕ್ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಸಿಂಥಿಯಾ ರಿಚ್ಚಿ ಗಂಭೀರ ಆರೋಪ ಮಾಡಿದ್ದಾರೆ. ಈ ಘಟನೆ 2011ಕ್ಕೂ ಮುನ್ನವೇ ನಡೆದಿದೆ ಎನ್ನಲಾಗಿದೆ.

    ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿಂಥಿಯಾ ರಿಚ್ಚಿ, ನನ್ನ ಕಥೆ ತುಂಬಾ ಭಾವುಕವಾಗಿದೆ. ಈ ಬಗ್ಗೆ ಇದುವರೆಗೂ ನನ್ನ ಕುಟುಂಬಕ್ಕೂ ತಿಳಿದಿಲ್ಲ. ನಾನು ಸಕಾರಾತ್ಮಕವಾಗಿರಲು ಪ್ರಯತ್ನಿಸಿ, ಪಾಕಿಸ್ತಾನದ ಒಳ್ಳೆಯದನ್ನೇ ಸ್ವೀಕರಿಸಿದೆ. ಆದರೆ ಕೆಟ್ಟದ್ದನ್ನು ಸಹ ಅನುಭವಿಸಿದ್ದೇನೆ. ಸದ್ಯ ಸತ್ಯವನ್ನು ಹೇಳಲು ಬಯಸುತ್ತೇನೆ. ಇದರಿಂದ ಮಹಿಳೆಯರು, ಸ್ಥಳೀಯರು ಏಕಾಂಗಿಯಾಗಿಲ್ಲ ಎಂದು ಅರ್ಥಮಾಡಿಕೊಳ್ಳಬಹುದು ಎಂದು ಬರೆದುಕೊಂಡಿದ್ದಾರೆ.

    ಮತ್ತೊಂದು ಟ್ವೀಟ್‍ನಲ್ಲಿ, “ನಾನು ಪಿಪಿಪಿ ಮೇಲೆ ದೋಷಾರೋಪಣೆ ಮಾಡುತ್ತಿಲ್ಲ. ಏಕೆಂದರೆ ನಾನು ಬೇರೆ ಬೇರೆ ಪಕ್ಷಗಳ ಪುರುಷರಿಂದ ನಿಂದಿಸಲ್ಪಟ್ಟಿದ್ದೇನೆ. ಆದರೆ ಎರಡು ಪ್ರಕರಣಗಳು ಪಿಪಿಪಿಗೆ ಸಂಬಂಧಿಸಿವೆ. ಅನೇಕರು ಸೆಕ್ಸ್ ಗಾಗಿ ಇಷ್ಟಪಟ್ಟರು ಎನ್ನುವುದನ್ನು ನಿಮಗೆ ತಿಳಿಸುತ್ತಿದ್ದೇನೆ” ಎಂದು ಸಿಂಥಿಯಾ ಹೇಳಿದ್ದಾರೆ.

    “ಪಿಪಿಪಿ ನಾಯಕರು ನನ್ನ ವಿರುದ್ಧ ನಿಂದನೀಯ ಭಾಷೆಯನ್ನು ಬಳಸುತ್ತಿದ್ದಾರೆ. ಮಹಿಳೆಯರ ಮೇಲೆ ಅತ್ಯಾಚಾರ ಮಾಡುವ ಗೀಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೆ ಮಹಿಳೆಯರಿಗೆ ಅತ್ಯಾಚಾರದ ಅದ್ಭುತ ಕಥೆಗಳನ್ನು ಹೇಳುವುದನ್ನು ಆನಂದಿಸುತ್ತಾರೆ” ಎಂದು ಅಸಮಾಧಾನ ಹೊರಹಾಕಿದ್ದಾರೆ.

    “ಅವರು ಅತ್ಯಾಚಾರ ಸಂಸ್ಕೃತಿಯನ್ನು ನಿಲ್ಲಿಸಬೇಕು. ಈ ಅಸಹ್ಯಕರ ಕೆಲಸದ ಬಗ್ಗೆ ಮಹಿಳೆಯರು ಒಂದಾಗಬೇಕು ಮತ್ತು ಮಕ್ಕಳಿಗೆ ತಿಳಿಸಬೇಕು. ಇದು ಕೇವಲ ಪಿಪಿಪಿಯ ವಿಷಯವಲ್ಲ. ಅನೇಕ ರಾಜಕೀಯ ಪಕ್ಷಗಳು ನನ್ನನ್ನು ಶೋಷಿಸಿವೆ. ಈ ಘಟನೆಗಳ ಬಗ್ಗೆ ನಾನು ಕುಟುಂಬಕ್ಕೆ ಎಂದಿಗೂ ಹೇಳಲಿಲ್ಲ. ಪಾಕಿಸ್ತಾನದ ಉತ್ತಮ ಚಿತ್ರಣವನ್ನು ರಚಿಸಲು ನಾನು ಯಾವಾಗಲೂ ಶ್ರಮಿಸುತ್ತೇನೆ” ಎಂದು ಸಿಂಥಿಯಾ ತಿಳಿಸಿದ್ದಾರೆ.

    ಈ ಸಂಬಂಧ ಸಿಂಥಿಯಾ ಶುಕ್ರವಾರ ಫೇಸ್‍ಬುಕ್‍ನಲ್ಲಿ ವಿಡಿಯೋ ಬಿಡುಗಡೆ ಮಾಡಿ, ರಹಮಾನ್ ಮಲಿಕ್ ಮತ್ತು ಗಿಲಾನಿ ವಿರುದ್ಧ ಆರೋಪಿಸಿದ್ದರು. ಸಿಂಥಿಯಾ ಪ್ರಕಾರ, 2011ರಲ್ಲಿ ರಾಷ್ಟ್ರಪತಿ ಭವನದಲ್ಲಿ ವಾಸವಾಗಿದ್ದಾಗ ಈ ಘಟನೆ ಸಂಭವಿಸಿದೆ. ವಿಶೇಷವೆಂದರೆ ಅವರು ಈಗ ಪ್ರಧಾನಿ ಇಮ್ರಾನ್ ಖಾನ್ ಅವರ ಸೋಷಿಯಲ್ ಮೀಡಿಯಾ ತಂಡದಲ್ಲಿದ್ದಾರೆ.

    ಮಾದಕ ಪದಾರ್ಥಗಳನ್ನು ಬೆರೆಸಿದ ಪಾನೀಯವನ್ನು ನನಗೆ ನೀಡಲಾಗಿತ್ತು. ಆಗ ನನ್ನ ಮೇಲೆ ಅತ್ಯಾಚಾರ ಎಸಗಿದ್ದರು. ಆದರೆ ನಾನು ಸುಮ್ಮನಿದ್ದೆ. ಏಕೆಂದರೆ ಪಿಪಿಪಿ ನನಗೆ ಸರ್ಕಾರದಲ್ಲಿ ಸಹಾಯ ಮಾಡುತ್ತಿತ್ತು. ಈಗ ನಾನು ಯಾರನ್ನ ಬೇಕಾದರೂ ಎದುರಿಸಲು ಸಿದ್ಧ ಎಂದು ಸಿಂಥಿಯಾ ಶುಕ್ರವಾರ ಹೇಳಿದ್ದರು.

    https://www.facebook.com/cynthiadritchie/videos/3012638535481275/?t=330

    ಈ ಘಟನೆಯನ್ನು ಪಾಕಿಸ್ತಾನದ ಅಮೆರಿಕ ರಾಯಭಾರ ಕಚೇರಿಗೆ ತಿಳಿಸಿದ್ದೇನೆ. ಆದರೆ ಅಲ್ಲಿಂದ ಸರಿಯಾದ ಉತ್ತರ ದೊರೆತಿಲ್ಲ. ನನ್ನ ಮೇಲೆ ಅತ್ಯಾಚಾರ, ದೈಹಿಕ ಹಿಂಸೆ ನಡೆದ ಸಂದರ್ಭದಲ್ಲಿ ಅಮೆರಿಕ ಮತ್ತು ಪಾಕಿಸ್ತಾನ ನಡುವೆ ಉತ್ತಮ ಸಂಬಂಧವಿರಲಿಲ್ಲ ಎಂದು ತಿಳಿಸಿದ್ದರು.

    ಆದರೆ ಮಾಜಿ ಪ್ರಧಾನಿ ಗಿಲಾನಿ ಸಿಂಥಿಯಾ ಅವರ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ಅವನ್-ಎ-ಸದರ್ (ಪಾಕಿಸ್ತಾನದ ರಾಷ್ಟ್ರಪತಿ ಭವನ)ದಲ್ಲಿ ಪ್ರಧಾನ ಮಂತ್ರಿಯೊಬ್ಬರು ಈ ರೀತಿಯ ನಡೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಇತ್ತ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರೆಹಮಾನ್ ಮಲಿಕ್ ಈವರಿಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.