Tag: ಪಿಯೂಶ್ ಗೋಯಲ್

  • ಅನ್ನ ಭಾಗ್ಯ ಫೈಟ್‌ ದೆಹಲಿಗೆ ಶಿಫ್ಟ್‌

    ಅನ್ನ ಭಾಗ್ಯ ಫೈಟ್‌ ದೆಹಲಿಗೆ ಶಿಫ್ಟ್‌

    ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಅಕ್ಕಿ ಫೈಟ್ ರಾಷ್ಟ್ರ ರಾಜಧಾನಿ ದೆಹಲಿಗೆ ಶಿಫ್ಟ್ ಆಗುವ ಸಾಧ್ಯತೆಗಳಿದೆ.

    ಅನ್ನಭಾಗ್ಯ (Anna Bhagya) ಯೋಜನೆಗೆ ಅಕ್ಕಿ ನೀಡಲು ಭಾರತೀಯ ಆಹಾರ ನಿಗಮ ನಿರಾಕರಿಸಿದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಇಂದು ದೆಹಲಿ ಪ್ರವಾಸ (Delhi) ಹಮ್ಮಿಕೊಂಡಿದ್ದು, ತಮ್ಮ ಪ್ರವಾಸ ವೇಳೆ ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪಿಯೂಷ್ ಗೋಯಲ್ (Piyush Goyal) ಅವರನ್ನ ಭೇಟಿ ಮಾಡಿ ಅಕ್ಕಿ ನೀಡುವ ಬಗ್ಗೆ ಚರ್ಚೆ ನಡೆಸಲಿದ್ದಾರೆ.  ಇದನ್ನೂ ಓದಿ: ರಷ್ಯಾ-ಉಕ್ರೇನ್ ಯುದ್ಧದ ವಿಚಾರದಲ್ಲಿ ನಾವು ತಟಸ್ಥವಾಗಿಲ್ಲ: ಮೋದಿ

     

    ಹಲವು ರಾಜ್ಯಗಳಲ್ಲಿ ಅಕ್ಕಿಗಾಗಿ ರಾಜ್ಯ ಸರ್ಕಾರ ಪ್ರಯತ್ನಿಸಿದರೂ ದುಬಾರಿ ಬೆಲೆ ತೆರಬೇಕಾದ ಅನಿವಾರ್ಯತೆ ಹಿನ್ನಲೆ ಸಿದ್ದರಾಮಯ್ಯ ಮತ್ತೊಮ್ಮೆ ಕೇಂದ್ರ ಸರ್ಕಾರದ ಜೊತೆಗೆ ಚರ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಇದರ ಜೊತೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನೂ  ಭೇಟಿಯಾಗುತ್ತಿದ್ದು ಸೌಹಾರ್ದಯುತ ಮಾತುಕತೆ ನಡೆಯಲಿದೆ ಎನ್ನಲಾಗಿದೆ.

    ಸಿದ್ದರಾಮಯ್ಯ ತಮ್ಮ ದೆಹಲಿ ಪ್ರವಾಸದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರನ್ನು ಭೇಟಿಯಾಗುತ್ತಿದ್ದು ಸಿಎಂ ಆದ ಬಳಿಕ ಸೌಜನ್ಯಯುತ ಭೇಟಿ ಮಾಡುತ್ತಿದ್ದಾರೆ.

  • ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    ಹೂಡಿಕೆದಾರರಿಗೆ ‘ಕಾಂತಾರ’ ಸಿನಿಮಾದ ಉದಾಹರಣೆ ನೀಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ (Kantara) ಸಿನಿಮಾದ ಬಗ್ಗೆ ಚಿತ್ರರಂಗದವರು ಮೆಚ್ಚುಗೆ ವ್ಯಕ್ತ ಪಡಿಸಿದ್ದು ವಿಶೇಷವಾದರೂ, ಅದಕ್ಕಿಂತ ವಿಶೇಷ ಅನಿಸಿದ್ದು ಕೇಂದ್ರ ಸಚಿವ ಪಿಯೂಶ್ ಗೋಯಲ್ (Piyush Goyal) ಮೆಚ್ಚಿಕೊಂಡ ರೀತಿಗೆ. ಜೊತೆಗೆ ಅದನ್ನು ಸ್ಪೂರ್ತಿಯಾಗಿ ತಗೆದುಕೊಳ್ಳುವಂತೆ ಹೂಡಿಕೆದಾರರಿಗೆ ಹೇಳಿದ್ದು. ಬೆಂಗಳೂರಿನಲ್ಲಿ (Bangalore) ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಯುತ್ತಿದ್ದು, ಈ ಸಮಾವೇಶದಲ್ಲಿ ಸಚಿವರು ಚಿತ್ರವನ್ನು ಉದಾಹರಣೆಯಾಗಿ ನೀಡಿದ್ದಾರೆ.

    ಜಾಗತಿಕ ಬಂಡವಾಳ ಹೂಡಿಕೆದಾರರ (Investors Conference) ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಸಚಿವ ಪಿಯೂಶ್ ಗೋಯಲ್, ‘ಕಾಂತಾರ ಸಿನಿಮಾವನ್ನು ಉಲ್ಲೇಖ ಮಾಡಿದ್ದಲ್ಲದೇ, ಚಿತ್ರವನ್ನು ಹೊಗಳಿದರು. ಇದೊಂದು ಸಣ್ಣ ಬಂಡವಾಳದಲ್ಲಿ ನಿರ್ಮಿಸಿದ ಚಿತ್ರ. ಸೂಪರ್ ಹಿಟ್ ಆಗಿದೆ. ಬ್ಲಾಕ್ ಬಸ್ಟರ್ ಚಿತ್ರ ಎನಿಸಿಕೊಂಡಿದೆ. ನೂರಾರು ಕೋಟಿ ಬಿಸ್ನೆಸ್ ಮಾಡಿದೆ’ ಎಂದು ಅವರು ಉಲ್ಲೇಖಿಸಿದರು. ಇದನ್ನೂ ಓದಿ:ಹೈವೋಲ್ಟೇಜ್ ಆ್ಯಕ್ಷನ್ ʻಪಠಾಣ್ʼ ಟೀಸರ್‌ನಲ್ಲಿ ಶಾರುಖ್ ಖಾನ್ ಗ್ರ್ಯಾಂಡ್ ಎಂಟ್ರಿ

    ಹೂಡಿಕೆದಾರರ ಜೊತೆ ಮಾತನಾಡಿದ ಸಚಿವರು, ‘ಸ್ಥಳೀಯ ಸಂಸ್ಕೃತಿ, ಆಚರಣೆಯ ಕಥಾಹಂದರ ಇರುವ ಚಿತ್ರ ಈ ಚಿತ್ರದ ತಯಾರಿಕೆಗೆ ಸಣ್ಣ ಬಂಡವಾಳವನ್ನೇ ಹೂಡಲಾಗಿದೆ. ಆದರೆ, ಈಗ ಆ ಚಿತ್ರ 300 ಕೋಟಿಗೂ ಹೆಚ್ಚು ಗಳಿಸಿದೆ. ಕಾಂತಾರ ಚಿತ್ರವನ್ನು ನಾನೂ ವೀಕ್ಷಿಸಿದ್ದೇನೆ. ತುಂಬಾ ಚೆನ್ನಾಗಿ ಮೂಡಿ ಬಂದಿದೆ. ಸ್ಥಳಿಯ ಕಥೆಯನ್ನೇ ಜಾಗತಿಕ ಮಟ್ಟದಲ್ಲಿ ಹೇಳುವಂತೆ ಸಿನಿಮಾವನ್ನು ಕಟ್ಟಿಕೊಟ್ಟಿದ್ದಾರೆ’ ಎಂದು ವಿವರಿಸಿದರು.

    Live Tv
    [brid partner=56869869 player=32851 video=960834 autoplay=true]

  • ಸೋಫಾ ತೆಗೆಸಿ ಎಲ್ಲರೊಂದಿಗೆ ಖುರ್ಚಿಯಲ್ಲಿ ಆಸೀನರಾದ ಮೋದಿ- ವಿಡಿಯೋ

    ಸೋಫಾ ತೆಗೆಸಿ ಎಲ್ಲರೊಂದಿಗೆ ಖುರ್ಚಿಯಲ್ಲಿ ಆಸೀನರಾದ ಮೋದಿ- ವಿಡಿಯೋ

    ನವದೆಹಲಿ: ರಷ್ಯಾ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ತಮ್ಮ ಸರಳತೆಯ ಮೂಲಕ ಮತ್ತೊಮ್ಮೆ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ಪ್ರಧಾನಿಗಳ ಸರಳತೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವಿಶ್ವದೆಲ್ಲಡೆ ಮೆಚ್ಚುಗೆಯನ್ನು ಪಡೆದುಕೊಂಡಿದೆ.

    ಫೋಟೋ ಸೆಷನ್ ವೇಳೆ ಮೋದಿ ಅವರಿಗಾಗಿ ವಿಶೇಷ ಸೋಫಾ ಹಾಕಲಾಗಿತ್ತು. ಉಳಿದ ಎಲ್ಲ ಗಣ್ಯರಿಗೂ ಖುರ್ಚಿ ಹಾಕಲಾಗಿತ್ತು. ಫೋಟೋ ಸೆಷನ್ ಗೆ ಬಂದ ಪ್ರಧಾನಿಗಳು ಕೂಡಲೇ ಸೋಫಾ ತೆಗೆಯುವಂತೆ ಸೂಚಿಸಿದ್ದಾರೆ. ಪ್ರಧಾನಿಗಳ ಸೂಚನೆಯ ಮೇರೆ ಸೋಫಾ ತೆಗೆದು ಎಲ್ಲರಿಗೆ ಹಾಕಲಾಗಿದ್ದ ಖುರ್ಚಿಯನ್ನು ಹಾಕಿದ ಮೇಲೆಯೇ ಮೋದಿಯವರು ಫೋಟೋ ತೆಗೆಸಿಕೊಂಡರು.

    ಈಸ್ಟರ್ನ್ ಎಕಾನಮಿಕ್ ಫೋರಂನಲ್ಲಿ ಪ್ರಧಾನಿಗಳು ಭಾರತದ ಪೆವಿಲಿಯನ್ ಗೆ ಭೇಟಿ ನೀಡಿದ್ದರು. ಫೋಟೋ ಸೆಷನ್ ವೇಳೆ ಅಧಿಕಾರಿಗಳು ದೇಶದ ಪ್ರಧಾನಿಗಳಿಗೆ ಗೌರವ ನೀಡುವ ಹಿನ್ನೆಲೆಯಲ್ಲಿ ವಿಶೇಷ ವ್ಯವಸ್ಥೆಯನ್ನು ಕಲ್ಪಿಸಿದ್ದರು.

    ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ವಿಡಿಯೋವನ್ನು ಟ್ವೀಟ್ ಮಾಡಿಕೊಂಡಿದ್ದಾರೆ. ಪಿಎಂ ಮೋದಿಯವರ ಸರಳತೆ ಕಾಣುವ ಅವಕಾಶ ಮತ್ತೊಮ್ಮೆ ಸಿಕ್ಕಿದೆ. ರಷ್ಯಾದಲ್ಲಿ ತಮಗಾಗಿ ಕಲ್ಪಿಸಿದ್ದ ವಿಶೇಷ ವ್ಯವಸ್ಥೆಯನ್ನು ತಿರಸ್ಕರಿಸಿ, ಉಳಿದವರಂತೆ ಸಾಮಾಣ್ಯ ಖುರ್ಚಿಯಲ್ಲಿ ಆಸೀನರಾದರು ಎಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

    2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾದಾಗ ಮೋದಿಯವರು ವಿಐಪಿ ಪದ್ಧತಿಗೆ ಬ್ರೇಕ್ ಹಾಕಿದ್ದರು. ವಿಐಪಿ ಪದ್ಧತಿ ಶಮನಗೊಳಿಸುವ ಹಿನ್ನೆಲೆಯಲ್ಲಿ ಸರ್ಕಾರಿ ವಾಹನಗಳ ಮೇಲೆ ಕೆಂಪು ದೀಪವನ್ನು ತೆಗೆಯುವಂತೆ ಆದೇಶಿಸಿದ್ದರು. ಸಂಸದರಾಗಿ ಆಯ್ಕೆಯಾಗುವ ಜನಪ್ರತಿನಿಧಿಗಳು ವಿಐಪಿ ಪದ್ಧತಿಯಿಂದ ದೂರ ಉಳಿದು, ಜನರಿಗೆ ಹತ್ತಿರವಾಗಿ ಎಂದು ಸಲಹೆ ನೀಡಿದ್ದರು.

  • ಜಿಲ್ಲೆಯ ಸಮಸ್ಯೆ ಬಗೆಹರಿಸಿಕೊಡಿ – ಅಮಿತ್ ಶಾ ಬಳಿ ಸುಮಲತಾ ಮನವಿ

    ಜಿಲ್ಲೆಯ ಸಮಸ್ಯೆ ಬಗೆಹರಿಸಿಕೊಡಿ – ಅಮಿತ್ ಶಾ ಬಳಿ ಸುಮಲತಾ ಮನವಿ

    ಮಂಡ್ಯ: ನೂತನ ಸಂಸದೆ ಸುಮಲತಾ ಅಂಬರೀಶ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದಾರೆ.

    ಸುಮಲತಾ ಅವರು ಮಂಡ್ಯದಲ್ಲಿನ ಹಲವು ಕಾಮಗಾರಿಗಳಿಗೆ ಕೇಂದ್ರ ಸರ್ಕಾರದಿಂದ ಅನುದಾನ ಕೊಡಿಸುವಂತೆ ಗೃಹ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ ಎಂದು ಅವರ ಆಪ್ತ ಮೂಲಗಳಿದ ತಿಳಿದು ಬಂದಿದೆ. ಅಮಿತ್ ಶಾ ಅವರನ್ನು ಭೇಟಿಯಾಗಿರುವ ಬಗ್ಗೆ ಸುಮಲತಾ ಅವರು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ತಿಳಿಸಿದ್ದಾರೆ. “ದೇಶದ ಗೃಹ ಸಚಿವರೊಂದಿಗೆ ಕ್ಷೇತ್ರದ ಹಲವಾರು ಕೆಲಸಗಳಿಗೆ ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದೇನೆ” ಎಂದು ಬರೆದುಕೊಂಡಿದ್ದಾರೆ.

    ಜೊತೆಗೆ ಅಮಿತಾ ಶಾ ಜೊತೆ ಇದ್ದ ತಮ್ಮ ಫೋಟೋ ಕ್ಲಿಕ್ಕಿಸಿಕೊಂಡು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಕಡೆ ಮುಂಗಾರು ಕೈ ಕೊಟ್ಟಿದೆ. ಮಂಡ್ಯದ ರೈತರು ಕಾವೇರಿ ನೀರನ್ನೇ ಅವಲಂಬಿಸಿದ್ದಾರೆ. ಆದರೆ ಸರಿಯಾಗಿ ಮಳೆಯಾಗದ ಕಾರಣ ಕಾವೇರಿ ನದಿಯೂ ತುಂಬಿಲ್ಲ. ಇದರಿಂದ ರೈತರು ತೀವ್ರ ಆತಂಕಕ್ಕೊಳಗಾಗಿದ್ದಾರೆ. ಹೀಗಾಗಿ ಸುಮಲತಾ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ತಮ್ಮ ಜಿಲ್ಲೆಯ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ.


    ಇತ್ತೀಚೆಗಷ್ಟೆ ಸುಮಲತಾ ಅವರು ಕೇಂದ್ರ ರೈಲ್ವೆ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ದಿನನಿತ್ಯ ಮೈಸೂರು- ಮಂಡ್ಯ-ಬೆಂಗಳೂರು ನಡುವೆ ಪ್ರಯಾಣಿಸುತ್ತಿರುವ ಮಹಿಳೆಯರಿಗೆ ಹೆಚ್ಚಿನ ಮಹಿಳಾ ಬೋಗಿಗಳನ್ನು ಅಳವಡಿಸುವಂತೆ ಹಾಗೂ ಹೆಚ್ಚಿನ ಪೊಲೀಸ್ ಬಂದೋಬಸ್ತುಗಳನ್ನು ಒದಗಿಸುವಂತೆ ಮನವಿ ಮಾಡಿಕೊಂಡಿದ್ದರು.

    ಅಷ್ಟೇ ಅಲ್ಲದೇ ಮುಂಬೈ ಮಾದರಿಯಲ್ಲಿ ವಿಶೇಷ ಮಹಿಳಾ ರೈಲನ್ನು ಬೆಳಗ್ಗೆ ಮತ್ತು ಸಂಜೆ ಕೆಲಸಕ್ಕೆ ತೆರಳುವ ಮಹಿಳೆಯರಿಗೆ ಅನುಕೂಲ ಮಾಡಿಕೊಡುವಂತೆ ಮನವಿ ಮಾಡಿದ್ದರು. ಜೊತೆಗೆ ಕೆ.ಆರ್ ನಗರದಲ್ಲಿ ರೈಲ್ವೆ ಪೊಲೀಸ್ ಫೋರ್ಸ್ ಟ್ರೈನಿಂಗ್ ಸೆಂಟರನ್ನು ತೆರೆಯಲು ಮನವಿ ಮಾಡಿದ್ದರು.

  • 5 ಲಕ್ಷಕ್ಕೆ 1 ರೂ. ಸೇರಿದ್ರೂ 12,500 ರೂ. ಟ್ಯಾಕ್ಸ್ ಕಟ್ಟಿ: ಏನಿದು ಮೋದಿಯ ಹೊಸ ತೆರಿಗೆ ಲೆಕ್ಕಾಚಾರ?

    5 ಲಕ್ಷಕ್ಕೆ 1 ರೂ. ಸೇರಿದ್ರೂ 12,500 ರೂ. ಟ್ಯಾಕ್ಸ್ ಕಟ್ಟಿ: ಏನಿದು ಮೋದಿಯ ಹೊಸ ತೆರಿಗೆ ಲೆಕ್ಕಾಚಾರ?

    ನವದೆಹಲಿ: ಮಧ್ಯಮ ವರ್ಗ ಕುತೂಹಲದಿಂದ ಬೆರಗುಗಣ್ಣಿನಿಂದ ಕಾದು ಕುಳಿತಿದ್ದ ತೆರಿಗೆ ವಿಷಯದಲ್ಲಿ ಕೇಂದ್ರ ಸರ್ಕಾರ ಭರ್ಜರಿ ಸಿಹಿ ಸುದ್ದಿ ನೀಡಿದೆ. 5 ಲಕ್ಷದವರೆಗೆ ಆದಾಯ ಇರುವವರು ಯಾವುದೇ ತೆರಿಗೆ ಕಟ್ಟುವ ಅಗತ್ಯವಿಲ್ಲ. ಆದರೆ 5 ಲಕ್ಷಕ್ಕಿಂತಲೂ ಒಂದು ರೂ. ಜಾಸ್ತಿ ಆದಾಯ ಇದ್ದರೂ ತೆರಿಗೆಯನ್ನು ಪಾವತಿಸಬೇಕಾಗುತ್ತದೆ.

    ಈ ಹಿಂದೆ 2.50 ಲಕ್ಷ ರೂ. ನಿಂದ 5 ಲಕ್ಷ ರೂ. ಆದಾಯ ಇದ್ದವರಿಗೆ 5% ರಷ್ಟು ತೆರಿಗೆ ವಿಧಿಸಲಾಗುತಿತ್ತು. ಆದರೆ ಈಗ ಈ ತೆರಿಗೆ ವಿನಾಯಿತಿ ಮಿತಿಯನ್ನು ಕಿತ್ತು ಹಾಕಿಲ್ಲ. ಈ ಹಿಂದೆ 3 ಲಕ್ಷ ಆದಾಯವುಳ್ಳವರು ತೆರಿಗೆ ವ್ಯಾಪ್ತಿಗೂ ಬಂದರೂ ಅನ್ವಯವಾಗುತ್ತಿದ್ದ 2,500 ರಿಬೇಟ್ ಮೂಲಕ ಮನ್ನಾ ಆಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ ಆದಾಯವುಳ್ಳವರಿಗೆ ಅನ್ವಯವಾಗುವ 12,500ವರೆಗಿನ ತೆರಿಗೆ ರಿಬೇಟ್ ಮೂಲಕ ಮನ್ನಾ ಆಗಲಿದೆ.

    ಮೋದಿ ತೆರಿಗೆ ಲೆಕ್ಕಾಚಾರ ಹೀಗಿದೆ ನೋಡಿ:
    5 ಲಕ್ಷವರೆಗೆ 2018ರ ವರೆಗೆ 2,500 ರೂ. ರಿಬೇಟ್ ಇತ್ತು. ಈಗ ರಿಬೇಟ್ 12,500 ರೂಪಾಯಿಗೆ ಹೆಚ್ಚಳ ಮಾಡಲಾಗಿದೆ. ಈ ಹಿಂದೆ 3 ಲಕ್ಷ ರೂ. ಆದಾಯವುಳ್ಳವರು ತೆರಿಗೆ ವ್ಯಾಪ್ತಿಗೂ ಬಂದರೂ ಅನ್ವಯವಾಗುತ್ತಿದ್ದ 2,500 ರಿಬೇಟ್ ಮನ್ನಾ ಆಗುತ್ತಿತ್ತು. ಈಗ 5 ಲಕ್ಷ ರೂ.ವರೆಗೆ ಆದಾಯವುಳ್ಳವರಿಗೆ ಅನ್ವಯವಾಗುವ 12,500ರವರೆಗಿನ ರಿಬೇಟ್ ಮನ್ನಾ ಆಗಲಿದೆ. 5 ಲಕ್ಷಕ್ಕಿಂತ ಒಂದು ರೂಪಾಯಿ ಮೇಲ್ಪಟ್ಟರೂ ರಿಬೇಟ್ ಅನ್ವಯವಾಗುದಿಲ್ಲ.

    ಸ್ಟ್ಯಾಂಡರ್ಡ್ ಡಿಡಕ್ಷನ್ 40 ಸಾವಿರದಿಂದ 50 ಸಾವಿರ ರೂ. ಏರಿಕೆ ಮಾಡಿದ್ದು, ಗೃಹ ಸಾಲ 2 ಲಕ್ಷದವರೆಗೆ ತೆರಿಗೆ ವಿನಾಯ್ತಿ ನೀಡಲಾಗಿದೆ. ಪಿಎಫ್, ಪಿಪಿಎಫ್ ಸೇರಿದಂತೆ ನಿಗದಿತ ಹೂಡಿಕೆಗೆ 6.50 ಲಕ್ಷದವರೆಗೆ ತೆರಿಗೆ ಭರಿಸಬೇಕಿಲ್ಲ. ಬ್ಯಾಂಕ್, ಅಂಚೆಯಂತ ಉಳಿತಾಯ ಯೋಜನೆಗಳ ಮೇಲೆ 1.5 ಲಕ್ಷದವರೆಗೆ ತೆರಿಗೆ ವಿನಾಯ್ತಿ ಘೋಷಿಸಲಾಗಿದೆ.

    40 ಸಾವಿರದವರೆಗಿನ ಬಡ್ಡಿ ಆದಾಯಕ್ಕೆ ಟಿಡಿಎಸ್ ಇಲ್ಲ. ಟಿಡಿಎಸ್‍ನ ಬಡ್ಡಿ ಮಿತಿ ವಿನಾಯಿತಿಯನ್ನು 10 ಸಾವಿರದಿಂದ 40 ಸಾವಿರದವರೆಗೆ ಏರಿಸಲಾಗಿದೆ. ಸ್ಟಾಂಡರ್ಡ್ ಡಿಡಕ್ಷನ್ ಎಲ್ಲವನ್ನು ಕಳೆದು 5 ಲಕ್ಷ ರೂ. ಒಳಗಡೆ ಆದಾಯ ಇದ್ದರೆ ತೆರಿಗೆ ಕಟ್ಟಬೇಕಿಲ್ಲ. ಎಲ್ಲವನ್ನು ಕಳೆದು 1 ರೂಪಾಯಿ ಜಾಸ್ತಿಯಾದರೆ ಅದಕ್ಕೆ ತೆರಿಗೆ ಕಟ್ಟಬೇಕಾಗುತ್ತದೆ.

    12,500 ರೂ. ಹೇಗೆ? ಉದಾಹರಣೆಗೆ ವ್ಯಕ್ತಿ ಎಲ್ಲ ಸ್ಟ್ಯಾಂಡರ್ಡ್ ಡಿಡಕ್ಷನ್ ಕಳೆದು 6 ಲಕ್ಷ ರೂ. ಆದಾಯ ಹೊಂದಿದ್ದಾನೆ ಎಂದು ಭಾವಿಸಿಕೊಳ್ಳಿ. ಈಗ ಕೇವಲ ರಿಬೇಟ್ ಮೊತ್ತವಷ್ಟೇ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಾರ್ಷಿಕ ಆದಾಯ 5 ಲಕ್ಷ ರೂ. ಗಿಂತ ಮೇಲ್ಪಟ್ಟಿದ್ದರೆ ಆಗ 2.5 ಲಕ್ಷ ರೂ.( 2.5 ಲಕ್ಷ ರೂ.ವರೆಗೆ ತೆರಿಗೆ ಇಲ್ಲ)ನಿಂದ 6 ಲಕ್ಷ ರೂ.ವರೆಗೆ ಆದಾಯಕ್ಕೆ ತೆರಿಗೆ ಕಡ್ಡಾಯವಾಗಿ ಕಟ್ಟಬೇಕಾಗುತ್ತದೆ. 2.5 ಲಕ್ಷದವರೆಗೆ 5 ಲಕ್ಷದವರೆಗೆ 5%ರಷ್ಟು, 5 ಲಕ್ಷದಿಂದ ಉಳಿದ 1 ಲಕ್ಷ ರೂ.ಗೆ  20%ರಷ್ಟು ತೆರಿಗೆ ಒಟ್ಟು 12,500 ರೂ.  ಕಟ್ಟಬೇಕು.

    ಯಾರಿಗೆ ಎಷ್ಟೆಷ್ಟು ತೆರಿಗೆ?
    ಆದಾಯ ತೆರಿಗೆ ಸ್ಲಾಬ್‍ಗಳಲ್ಲಿ ಯಾವುದೇ ಬದಲಾವಣೆ ಆಗಿಲ್ಲ. 2018-19ರ ಹಣಕಾಸು ವರ್ಷದಲ್ಲಿ ಇರುವಂತೆ 2019-20 ರಲ್ಲಿ ತೆರಿಗೆ ಕಟ್ಟಬೇಕು. 2.5 ಲಕ್ಷದ ವರೆಗೆ ಯಾವುದೇ ತೆರಿಗೆ ಇಲ್ಲ. 2.5 ಲಕ್ಷದಿಂದ 5 ಲಕ್ಷದ ವರೆಗೆ 5%, 5 ಲಕ್ಷಕ್ಕಿಂತ ಮೇಲ್ಪಟ್ಟು 10 ಲಕ್ಷದ ಒಳಗಡೆ ಇದ್ದರೆ 20%, 10 ಲಕ್ಷಕ್ಕೂ ಮೇಲ್ಪಟ್ಟು 30% ತೆರಿಗೆಯನ್ನು ಕಟ್ಟಬೇಕು.

    ಎಷ್ಟು ಆದಾಯ ಇರುವವರಿಗೆ ಎಷ್ಟು ತೆರಿಗೆ?
    5 ಲಕ್ಷ ರೂ. ಒಳಗಡೆ (ಸ್ಟ್ಯಾಂಡರ್ಡ್ ಡಿಡಕ್ಷನ್ ಕಳೆದು ಸಿಗುವ ಆದಾಯ) ಇರುವ ಆದಾಯಕ್ಕೆ ಯಾವುದೇ ತೆರಿಗೆ ಇಲ್ಲ. 5 ಲಕ್ಷದ ಮೇಲೆ 1 ರೂಪಾಯಿ ಆದಾಯ ಹೆಚ್ಚಾದರೂ 12,500 ಟ್ಯಾಕ್ಸ್ ಕಟ್ಟಬೇಕಾಗುತ್ತದೆ. ಇದಕ್ಕೆ ರಿಬೇಟ್ ಇರುವುದಿಲ್ಲ. 7.5 ಲಕ್ಷಕ್ಕೆ 62,500 ರೂ., 10 ಲಕ್ಷಕ್ಕೆ 1,12,500 ರೂ., 15 ಲಕ್ಷಕ್ಕೆ 2,62,500 ರೂ., 20 ಲಕ್ಷಕ್ಕೆ 4,12,500 ರೂ. ತೆರಿಗೆ ಕಟ್ಟಬೇಕು. (ಗಮನಿಸಿ: 5 ಲಕ್ಷದ 1 ರೂಪಾಯಿ ಮೀರಿದ ಎಲ್ಲಾ ಮೊತ್ತದ ಟ್ಯಾಕ್ಸ್ ಮೇಲೆ 3% ರಷ್ಟು ಸೆಸ್ ಅನ್ವಯ ಆಗಲಿದೆ)

    https://www.youtube.com/watch?v=W4j4iILKQNc

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕೇಂದ್ರ ಬಜೆಟ್ 2019: ಗ್ರಾಮೀಣ ವಿಭಾಗಕ್ಕೆ ಪಿಯೂಶ್ ಗೋಯಲ್ ನೀಡಿದ್ದೇನು?

    ಕೇಂದ್ರ ಬಜೆಟ್ 2019: ಗ್ರಾಮೀಣ ವಿಭಾಗಕ್ಕೆ ಪಿಯೂಶ್ ಗೋಯಲ್ ನೀಡಿದ್ದೇನು?

    ನವದೆಹಲಿ: ರೈತ ಮತ್ತು ಕಾರ್ಮಿಕ ವರ್ಗವನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡಿದ್ದು, ರೈತರ ಖಾತೆಗೆ ನೇರವಾಗಿ ವಾರ್ಷಿಕವಾಗಿ 6 ಸಾವಿರ ರೂ. ಹಾಕುವುದಾಗಿ ಬಜೆಟ್ ನಲ್ಲಿ ತಿಳಿಸಲಾಗಿದೆ.

    2 ಹೆಕ್ಟೇರ್(4.94 ಎಕ್ರೆ)ಜಾಗ ಇರುವ ರೈತರ ಖಾತೆಗೆ 2 ಸಾವಿರದಂತೆ ಮೂರು ಕಂತುಗಳಲ್ಲಿ ಹಣವನ್ನು ಜಮೆ ಮಾಡಲಾಗುವುದು. 2018ರ ಪೂರ್ವಾನ್ವಯದಂತೆ ಇದು ಜಾರಿಯಾಗಲಿದೆ ಎಂದು ಪಿಯೂಶ್ ಗೋಯಲ್ ತಿಳಿಸಿದರು.

    ಬಜೆಟ್ ಘೋಷಣೆ ಏನು?
    ಪ್ರತಿಯೊಂದು ಗ್ರಾಮಗಳಿಗೆ ವಿದ್ಯುಚ್ಛಕ್ತಿ ನೀಡಲಾಗುತ್ತಿದ್ದು, ಮಾರ್ಚ್ 2019ರೊಳಗೆ ದೇಶದ ಪ್ರತಿ ಕುಟುಂಬಗಳ ಮನೆಯಲ್ಲಿ ವಿದ್ಯುತ್ ದೀಪ ಬೆಳಗಲಿದೆ. ಈ ಯೋಜನೆಗಾಗಿ 143 ಕೋಟಿ ಎಲ್‍ಇಡಿ ವಿದ್ಯುತ್ ದೀಪಗಳನ್ನು ಉತ್ಪಾದಿಸಲಾಗಿದ್ದು, ಇವುಗಳ ಬಳಕೆಯಿಂದಾಗಿ 50 ಸಾವಿರ ಕೋಟಿ ರೂ. ಮೌಲ್ಯದ ವಿದ್ಯುಚ್ಛಕ್ತಿ ಉಳಿತಾಯವಾಗಲಿದೆ ಎಂದು ವಿತ್ತ ಸಚಿವರು ತಿಳಿಸಿದರು.

    ಐದು ವರ್ಷದ ಆಡಳಿತಾವಧಿಯಲ್ಲಿ ಪ್ರಧಾನಮಂತ್ರಿ ಆವಾಸ ಯೋಜನೆಯಡಿಯಲ್ಲಿ 1.53 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ. 2014ಕ್ಕಿಂತ ಹೋಲಿಕೆ ಮಾಡಿದ್ರೆ ಮನೆಗಳ ನಿರ್ಮಾಣ ಐದು ಪಟ್ಟು ಹೆಚ್ಚಳವಾಗಿದೆ ಎಂದು ವಿತ್ತ ಸಚಿವರು ಸ್ಪಷ್ಟಪಡಿಸಿದರು.

    ಬಡ ಮತ್ತು ಮಧ್ಯಮ ವರ್ಗದವರು ಕಡಿಮೆ ಬೆಲೆಯಲ್ಲಿ ಆಹಾರ ಧಾನ್ಯಗಳು ಲಭ್ಯವಾಗಲು 2018-19 ಅವಧಿಯಲ್ಲಿ ಕೇಂದ್ರ ಸರ್ಕಾರ 1 ಲಕ್ಷ ಕೋಟಿ ರೂ.ಗೂ ಅಧಿಕ ಹಣವನ್ನು ಖರ್ಚು ಮಾಡಿದೆ. 2013-14ರಲ್ಲಿ ಕೇವಲ 92 ಕೋಟಿ ರೂ. ಖರ್ಚು ಮಾಡಲಾಗಿತ್ತು. ಮನರೇಗಾ ಯೋಜನೆಗಾಗಿ 60 ಸಾವಿರ ಕೋಟಿ ರೂ. ಮೀಸಲಿರಿಸಲಾಗಿದೆ.

    ಬಡ ವರ್ಗದ ಜನರು ಸಹ ದೇಶದಲ್ಲಿರುವ ಸಂಸದರನ್ನು ಪ್ರಶ್ನಿಸಬಹುದು. ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಎಸ್‍ಸಿ-ಎಸ್‍ಟಿ ಮತ್ತು ಓಬಿಸಿ ಕೋಟಾದಡಿ ಶೇ.10 ಮೀಸಲಾತಿ ನೀಡಲಾಗಿದೆ. ಇದರಿಂದ ಅಂದಾಜು 2 ಲಕ್ಷ ಸೀಟ್ ಗಳು ಲಭ್ಯವಾಗಲಿದೆ ಎಂದು ವಿತ್ತ ಸಚಿವರು ತಿಳಿಸಿದ್ರು.

    2019-20 ಅವಧಿಗೆ ಗ್ರಾಮೀಣ ಮತ್ತು ಹಿಂದುಳಿದ ಪ್ರದೇಶದ ರಸ್ತೆ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನಗೆ 19 ಸಾವಿರ ಕೋಟಿ ಮೀಸಲು. ರಸ್ತೆ ಅಭಿವೃದ್ಧಿ ಮತ್ತು ವಿಸ್ತರಣೆ ಕಾರ್ಯ ಐದು ವರ್ಷಗಳಲ್ಲಿ ಮೂರುಪಟ್ಟು ಹೆಚ್ಚಳವಾಗಿದ್ದು, ಕಳೆದ ವರ್ಷ 15,500 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿತ್ತು.

    2013-14ರಲ್ಲಿ ರಸ್ತೆ ಕಾಮಗಾರಿ ಪ್ರತಿ ದಿನ 69 ಕಿ.ಮೀ. ನಡೆಯುತ್ತಿತ್ತು. 2014-15ರಿಂದ ಪ್ರತಿದಿನ 100 ಕಿ.ಮೀ.ನಷ್ಟು ಕಾಮಗಾರಿ ನಡೆಯುತ್ತಿದೆ ಎಂದು ಪತ್ರಿಕೆ ವರದಿ ಮಾಡಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಕೇಂದ್ರದ ಮಧ್ಯಂತರ ಬಜೆಟ್-ರೈಲ್ವೆ ಇಲಾಖೆಗೆ ಸಿಕ್ಕಿದ್ದೇನು?

    ಕೇಂದ್ರದ ಮಧ್ಯಂತರ ಬಜೆಟ್-ರೈಲ್ವೆ ಇಲಾಖೆಗೆ ಸಿಕ್ಕಿದ್ದೇನು?

    ನವದೆಹಲಿ: ಕೇಂದ್ರ ಹಣಕಾಸು ಮತ್ತು ರೈಲ್ವೆ ಸಚಿವರಾಗಿರುವ ಪಿಯೂಶ್ ಗೋಯಲ್ ಮೋದಿ ಸರ್ಕಾರದ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಕಾರ್ಮಿಕ, ಮಧ್ಯಮ ವರ್ಗಕ್ಕೆ ಭರಪೂರ ಯೋಜನೆಗಳನ್ನು ಮಂಡನೆ ಮಾಡಲಾಗಿದೆ. ಇದೇ ವೇಳೆ ರೈಲ್ವೆ ಇಲಾಖೆಗೆ ಅನುದಾನವನ್ನು ಘೋಷಿಸಲಾಯ್ತು.

    1. ರೈಲ್ವೆ ಅಭಿವೃದ್ಧಿಗಾಗಿ 1.58 ಲಕ್ಷ ಕೋಟಿ ಅನುದಾನ ಮೀಸಲಿರಿಸಿದೆ. 2018ರ ಬಜೆಟ್ ನಲ್ಲಿ ಸರ್ಕಾರ 1.48 ಲಕ್ಷ ಕೋಟಿ ಅನುದಾನವನ್ನು ಬಿಡುಗಡೆ ಮಾಡಿತ್ತು.
    2. ಬ್ರಾಡ್‍ಗೇಜ್ ಮಾರ್ಗದಲ್ಲಿ ಮಾನವ ರಹಿತ ಕ್ರಾಸಿಂಗ್ ತೆಗೆದು ಹಾಕಲಾಗಿದ್ದು ಈಗ ಮಾನವ ಸಹಿತ ಕ್ರಾಸಿಂಗ್ ಇದೆ.

    3. ಪೂರ್ವ ರಾಜ್ಯಗಳಲ್ಲಿ ರೈಲ್ವೆ ವಿಸ್ತಾರ ಹೆಚ್ಚಾಗುತ್ತಿದೆ. ಮಿಜೋರಾಂ, ತ್ರಿಪುರಾ ಮತ್ತು ಮೇಘಾಲಯಗಳಲ್ಲಿ ಮೊದಲ ಬಾರಿಗೆ ರೈಲ್ವೆ ಸೇವೆಯನ್ನು ವಿಸ್ತರಿಸಲಾಗುತ್ತಿದೆ.

    4. ಮೇಕ್ ಇನ್ ಇಂಡಿಯಾದ ಅಡಿಯಲ್ಲಿ ವಂದೇ ಭಾರತ್ ಹೆಸರಿನ ಹೈ ಸ್ಪೀಡ್ ರೈಲು ನಿರ್ಮಿಸಲಾಗಿದ್ದು, ವಿದೇಶಿ ರೈಲುಗಳ ಅನುಭವವನ್ನು ಪ್ರಯಾಣಿಕರಿಗೆ ನೀಡಲಿದೆ. ಈ ಯೋಜನೆಯಿಂದ ಉದ್ಯೋಗ ಸೃಷ್ಟಿಯಾಗಲಿದೆ. ಇದರ ಹೊರತಾಗಿ ಟಿಕೆಟ್ ದರ ಹೆಚ್ಚಳ ಸೇರಿದಂತೆ ಸರ್ಕಾರ ಪ್ರಯಾಣಿಕರ ಜೇಬಿಗೆ ಕತ್ತರಿ ಹಾಕಿಲ್ಲ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಧ್ಯಮ ವರ್ಗದ ಮನಗೆದ್ದ ಮೋದಿ – ಬಜೆಟ್‍ನಲ್ಲಿ ಸಿಕ್ಕಿದ್ದು ಏನು?

    ಮಧ್ಯಮ ವರ್ಗದ ಮನಗೆದ್ದ ಮೋದಿ – ಬಜೆಟ್‍ನಲ್ಲಿ ಸಿಕ್ಕಿದ್ದು ಏನು?

    ನವದೆಹಲಿ: ಇಂದು ಮೋದಿ ಸರ್ಕಾರದ ಕೊನೆಯ ಬಜೆಟ್ ಮಂಡನೆಯಾಗಿದ್ದು, ಮಧ್ಯಮ ವರ್ಗಕ್ಕೆ ಹಣಕಾಸು ಸಚಿವ ಪಿಯೂಶ್ ಗೋಯಲ್ ಭರಪೂರ ಕೊಡುಗೆಗಳನ್ನು ನೀಡಿದ್ದಾರೆ.

    1. ಹೊಸ ಪಿಂಚಣಿ ಯೋಜನೆಯ ಅನುದಾನವನ್ನು ಸರ್ಕಾರ ಶೇ. 4ರಿಂದ 14ಕ್ಕೆ ಹೆಚ್ಚಳ ಮಾಡಿದೆ.
    2. 21 ಸಾವಿರ ರೂ.ಗೆ ಸಂಬಳ ಪಡೆಯುವ ಕಾರ್ಮಿಕ ವರ್ಗದವರಿಗೆ 7 ಸಾವಿರ ಬೋನಸ್ ಸಿಗಲಿದೆ. ಗ್ರಾಚ್ಯೂಟಿ ಮೊತ್ತವನ್ನು 10 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗಿದೆ.
    3. ಮನೆ ಖರೀದಿಸುವ ಮಧ್ಯಮ ವರ್ಗದವರಿಗೆ ಜಿಎಸ್‍ಟಿಯಲ್ಲಿ ವಿನಾಯಿತಿ ನೀಡಲಾಗಿದೆ.

    4. ಪ್ರಧಾನ ಮಂತ್ರಿ ಶ್ರಮಯೋಗಿ ಮನಧನ್ ಮೆಗಾ ಪೆನ್ಷನ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಯಿಂದಾಗಿ ಅಸಂಘಟಿತ ವಲಯದಲ್ಲಿ ಕಾರ್ಯ ನಿರ್ವಹಿಸುವ ಕಾರ್ಮಿಕರಿಗೆ 60 ವರ್ಷದ ಬಳಿಕ 3 ಸಾವಿರ ರೂ. ಪ್ರತಿ ತಿಂಗಳು ಮಾಸಿಕ ಪಿಂಚಣಿ ಸಿಗಲಿದೆ. ಈ ಯೋಜನೆಯಿಂದಾಗಿ 10 ಕೋಟಿ ಕಾರ್ಮಿಕರಿಗೆ ಲಾಭ ಸಿಗಲಿದೆ. ಕರ್ತವ್ಯದಲ್ಲಿದ್ದ ಸಮಯದಲ್ಲಿ ಕಾರ್ಮಿಕ ಮೃತಪಟ್ಟರೆ 6 ಲಕ್ಷ ರೂ. ಪರಿಹಾರ ಸಿಗಲಿದೆ.

    5. ಆದಾಯ ತೆರಿಗೆ ಮಿತಿಯನ್ನು 2.50 ಲಕ್ಷ ರೂ. ನಿಂದ 5 ಲಕ್ಷ ರೂ.ಗಳಿಗೆ ಏರಿಕೆ ಮಾಡಿದೆ. ಒಟ್ಟು 5 ಲಕ್ಷ ರೂ. ವರೆಗಿನ ಮಿತಿಯನ್ನು ಏರಿಸಿದೆ. ಇದರ ಜೊತೆಯಲ್ಲಿ ಹೂಡಿಕೆ ಮಾಡಿದರೆ 6.5 ಲಕ್ಷ ರೂ. ವಿನಾಯಿತಿ, ಗೃಹ ಸಾಲ 2.5 ಲಕ್ಷ ರೂ. ವಿನಾಯಿತಿ, ಶೈಕ್ಷಣಿಕ ಸಾಲ ಪಡೆದುಕೊಂಡಿದ್ದರೆ ತೆರಿಗೆ ವಿನಾಯಿತಿಯನ್ನು ಪ್ರಕಟಿಸಿದೆ.

    6. ಮನೆ ಮಾಲೀಕ ಬಾಡಿಗೆಯಾಗಿ ಪಡೆಯುವ ಹಣ ಅಂದ್ರೆ ಎರಡನೇ ಮನೆಯ ಮೇಲಿನ ಆದಾಯಕ್ಕೆ ಎರಡು ವರ್ಷ ತೆರಿಗೆ ವಿನಾಯಿತಿ.
    7. ಮನೆ ಖರೀದಿ ಮಾಡುವವರ ಜಿಎಸ್‍ಟಿ ಕಡಿಮೆ ಮಾಡುವಂತೆ ಜಿಎಸ್‍ಟಿ ಕೌನ್ಸಿಲ್ ಗೆ ಪಿಯೂಶ್ ಗೋಯಲ್ ಮನವಿ ಮಾಡಿಕೊಂಡಿದ್ದಾರೆ.
    8. 2.5 ಲಕ್ಷದವರೆಗೂ ಮನೆ ಬಾಡಿಗೆಗೆ ತೆರಿಗೆ ಕಟ್ಟುವಂತಿಲ್ಲ. ಈ ಮೊದಲು 1.80 ಲಕ್ಷದವರೆಗೆ ಮಾತ್ರ ಇತ್ತು. ಗೃಹ ಸಾಲ 2 ಲಕ್ಷದರೆಗೂ ತೆರಿಗೆ ವಿನಾಯಿತಿ.

    9. ಬ್ಯಾಂಕ್ ಮತ್ತು ಅಂಚೆ ಕಚೇರಿ ಠೇವಣಿಯ ಟಿಡಿಎಸ್ ಮಿತಿಯನ್ನು 10 ಸಾವಿರದಿಂದ 40 ಸಾವಿರಕ್ಕೆ ಏರಿಕೆ ಮಾಡಲಾಗಿದೆ.
    10. Affordable Housing Scheme ನಲ್ಲಿ ಮನೆ ಬುಕ್ ಮಾಡಿದ್ದ ಹಣದ ಮೇಲಿನ ಬಡ್ಡಿಯನ್ನು 31 ಮಾರ್ಚ್ 2020ರರೆಗೆ ವಿಸ್ತರಿಸಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ

    ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆ

    -ಜನಪ್ರಿಯತೆಯ ಹಳಿ ಮೇಲೆ ಸಾಗುತ್ತಾ ಮೋದಿ ಲೆಕ್ಕ?

    ನವದೆಹಲಿ: ಇಂದು ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ಮಂಡನೆಯಾಗಲಿದೆ. ಮೋದಿ ಸರ್ಕಾರದ ಕೊನೇ ಬಜೆಟ್ ಇದಾಗಿದ್ದು, ಈ ಬಾರಿ ಭರಪೂರ ಘೋಷಣೆ ಬಜೆಟ್‍ನಲ್ಲಿ ಹೊರಬೀಳುವ ಸಾಧ್ಯತೆ ಇದೆ.

    ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ಪಿಯೂಶ್ ಗೋಯಲ್ ಮೊದಲ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಸಂಸತ್ ಅಧಿವೇಶನ ಪ್ರಾರಂಭವಾಗಲಿದ್ದು, ಪಿಯೂಶ್ ಗೋಯೆಲ್ ಮಧ್ಯಂತರ ಬಜೆಟ್ ಮಂಡಿಸಲಿದ್ದಾರೆ. ಪಂಚ ಸಮರದಲ್ಲಿ ಸೋತ ಬೆನ್ನಲ್ಲೇ ಲೋಕಸಮರ ಬೇರೆ ಬರ್ತಿರೋದ್ರಿಂದ ಮತದಾರರನ್ನು ಓಲೈಸಲು ಸಹಜವಾಗಿಯೇ ಈ ಬಜೆಟ್ ಜನಪ್ರಿಯತೆಯ ಹಳಿ ಮೇಲೆ ಸಾಗಲಿದೆ ಎಂದು ಹೇಳಲಾಗುತ್ತಿದೆ.

    ಈ ಮೊದಲೇ ಕೃಷಿ ಸಚಿವ ರಾಧಾ ಮೋಹನ್ ಸಿಂಗ್ ಘೋಷಿಸಿಸದಂತೆ ಈ ಬಜೆಟ್ ರೈತ ಬಜೆಟ್ ಆಗಲಿದೆ ಎನ್ನಲಾಗ್ತಿದೆ. ರೈತರನ್ನು, ಗ್ರಾಮೀಣ ಭಾರತೀಯರನ್ನು, ಮಧ್ಯಮ ವರ್ಗದವರನ್ನು ಓಲೈಸೋ ದೃಷ್ಟಿಯಿಂದ ಹಲವು ಜನಪ್ರಿಯ ಘೋಷಣೆಗಳನ್ನು ಇಂದು ಮಧ್ಯಂತರ ಬಜೆಟ್‍ನಲ್ಲಿ ಮಾಡಲಾಗುತ್ತದೆ ಎನ್ನಲಾಗಿದೆ. ಆರ್ಥಿಕ ಶಿಸ್ತನ್ನು ಕಾಪಾಡುವ ಹೊಣೆಯೂ ಪಿಯೂಶ್ ಅವರ ಮೇಲಿದೆ.

    ಪಿಯೂಶ್ ಬಜೆಟ್ ಪ್ರಮುಖವಾಗಿ ಮೂರು ಭಾಗಗಳನ್ನು ಒಳಗೊಂಡಿರುತ್ತದೆ. ಮೊದಲನೇ ಭಾಗದಲ್ಲಿ ಅಯವ್ಯಯದ ಹೇಳಿಕೆ, ಎರಡನೇ ಭಾಗದಲ್ಲಿ ಏಪ್ರಿಲ್‍ನಿಂದ ಜುಲೈವರೆಗೆ ಮಾಡಬೇಕಾದ ಖರ್ಚಿನ ಬಗ್ಗೆ ವೋಟ್‍ಆನ್ ಅಕೌಂಟ್. ಮೂರನೇ ಭಾಗ ಮೋದಿ ಸರ್ಕಾರದ ನಾಲ್ಕೂವರೆ ವರ್ಷದ ಸಾಧನೆ ಮತ್ತು ಭವಿಷ್ಯದ ಬಗೆಗೆ ಇರಲಿದೆ ಎನ್ನಲಾಗಿದೆ. ಇನ್ನು ಬಜೆಟ್ ಅವಧಿಯನ್ನು ಕ್ಯಾಲೆಂಡರ್ ವರ್ಷಕ್ಕೆ ಬದಲಿಸುವ ಸಾಧ್ಯತೆಯೂ ಇದೆ.

    ಕಳೆದ ಐದು ವರ್ಷಗಳಲ್ಲಿ ಮೋದಿ ಸರ್ಕಾರ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದೆ. ಮತ್ತೊಮ್ಮೆ ದೇಶದ ಜನತೆ ಮೋದಿಯವರನ್ನೇ ಪ್ರಧಾನಿಯಾಗಿ ಆಯ್ಕೆ ಮಾಡುವ ನಿರೀಕ್ಷೆಯಿದೆ. ಬಜೆಟ್‍ನಲ್ಲಿ ದೇಶದ ರಕ್ಷಣೆ, ರೈತಾಪಿ ವರ್ಗ, ನೌಕರರ ಪರ, ಅಭಿವೃದ್ಧಿಪರ ಯೋಜನೆಗಳು ಘೋಷಣೆಯಾಗಾಲಿವೆ. ಅಲ್ಲದೇ ಹಿಂದಿನ ಬಜೆಟ್‍ನಲ್ಲಿ ರಾಜ್ಯಕ್ಕೆ ಘೋಷಣೆ ಮಾಡಿದ ಎಲ್ಲ ಯೋಜನೆಗಳನ್ನು ಮೋದಿ ಸರ್ಕಾರ ಪೂರ್ಣಗೊಳಿಸಿದೆ. ಕಾವೇರಿ-ಗೋದಾವರಿ ನದಿ ನೀರು ಜೋಡಣೆ ಯೋಜನೆ ನಿರೀಕ್ಷೆ ಇದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ತಿಳಿಸಿದ್ದಾರೆ.

    ಮೋದಿ ಸರ್ಕಾರಕ್ಕೆ ಅಗ್ನಿ ಪರೀಕ್ಷೆ ಎದುರಾಗಿದೆ. ಒಂದ್ಕಡೆ ಅಂದ್ಕೊಂಡ ರೀತಿಯಲ್ಲಿ ಜಿಎಸ್‍ಟಿ ಸಂಗ್ರಹ ನಿರೀಕ್ಷಿತ ಪ್ರಮಾಣದಲ್ಲಿ ಏರಿಕೆ ಆಗ್ತಿಲ್ಲ. ಇನ್ನೊಂದ್ಕಡೆ ನಿರುದ್ಯೋಗ ಪ್ರಮಾಣ ಹೆಚ್ಚಳ. ಈ ಸಮಸ್ಯೆಗಳ ನಡುವೆ ಲೋಕಸಭೆ ಚುನಾವಣೆ ಬಂದಿರೋದು ಕೇಂದ್ರಕ್ಕೆ ಸವಾಲಾಗಿ ಪರಿಣಮಿಸಿದೆ. ಇಂತಹ ಸಂದರ್ಭದಲ್ಲೇ ಬಜೆಟ್ ಮಂಡನೆ ಮಾಡೋದು ಆರ್ಥಿಕ ಸಚಿವರಿಗೆ ಅಗ್ನಿ ಪರೀಕ್ಷೆ ಆಗಿದೆ ಎಂದು ರಾಜಕೀಯ ವಿಶ್ಲೇಷಕರು ವಿಶ್ಲೇಷಣೆ ಮಾಡುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv 

  • ಮಂಡನೆಯಾಗಲಿದೆ ಮೋದಿ ಸರ್ಕಾರದ ಕೊನೆಯ ಬಜೆಟ್ – ಕೃಷಿ, ಜನ ಸಾಮಾನ್ಯರಿಗೆ ಏನು ಸಿಗಬಹುದು?

    ಮಂಡನೆಯಾಗಲಿದೆ ಮೋದಿ ಸರ್ಕಾರದ ಕೊನೆಯ ಬಜೆಟ್ – ಕೃಷಿ, ಜನ ಸಾಮಾನ್ಯರಿಗೆ ಏನು ಸಿಗಬಹುದು?

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ಕೊನೆಯ ಬಜೆಟ್ ಮಂಡನೆಗೆ ಮುಂದಾಗಿದೆ. ಲೋಕಸಭೆ ಚುನಾವಣೆ ಹೊಸ್ತಿಲಲ್ಲಿ ಬಜೆಟ್ ಮಂಡನೆಯಾಗುತ್ತಿರುವ ಕಾರಣ ಭರಪೂರ ಘೋಷಣೆ ಹೊರಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ.

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಬಿಜೆಪಿಗೆ ಹೊಡೆತ ನೀಡಿದ್ದು, ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ಕೋವಿಂದ್ ಅವರ ಭಾಷಣವನ್ನು ಸೂಕ್ಷ್ಮವಾಗಿ ಗಮನಿಸಿದಾಗ  ಬಜೆಟ್ ರೈತರು, ಬಡವರು, ಮಧ್ಯಮ ವರ್ಗದ ಪರ ಇರಲಿದೆ ಎನ್ನುವ ಸುಳಿವು ನೀಡಿದೆ.

    ಹಣಕಾಸು ಸಚಿವ ಅರುಣ್ ಜೇಟ್ಲಿ ಅನಾರೋಗ್ಯದ ಕಾರಣ ರೈಲ್ವೆ ಖಾತೆ ಹೊಂದಿರುವ ಪಿಯೂಶ್ ಗೋಯಲ್ ಮೊದಲ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ. ಸಾಮಾನ್ಯವಾಗಿ ಚುನಾವಣಾ ವರ್ಷದಲ್ಲಿ ಯಾವುದೇ ಸರ್ಕಾರ ಪೂರ್ಣ ಬಜೆಟ್ ಮಂಡಿಸದೆ, ಮಧ್ಯಂತರ ಬಜೆಟ್ ಅಥವಾ ಕೇವಲ ಲೇಖಾನುದಾನ ಮಂಡಿಸುವುದು ವಾಡಿಕೆ. ಆದರೆ, ಗೋಯಲ್ ಅವರು ಪೂರ್ಣ ಬಜೆಟ್ ಮಂಡಿಸಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುತ್ತಿದ್ದಾರೆ ಎನ್ನಲಾಗಿದೆ.

    ಕೃಷಿಗೆ ಏನು ಸಿಗಬಹುದು?
    * ಬಜೆಟ್‍ನಲ್ಲಿ ಕೃಷಿ ವಲಯಕ್ಕೆ ಬಂಪರ್ ಕೊಡುಗೆ ಸಾಧ್ಯತೆ
    * ಕೃಷಿ ಉಪಕರಣ, ರಸಗೊಬ್ಬರ ಖರೀದಿಗೆ ರೈತರ ಖಾತೆಗೆ ವಾರ್ಷಿಕ 10 ಸಾವಿರ ರೂ. ಜಮೆ ಸಾಧ್ಯತೆ
    * ಸಕಾಲಕ್ಕೆ ಕೃಷಿ ಸಾಲ ಮರು ಪಾವತಿಸುವ ರೈತರಿಗೆ ಗಿಫ್ಟ್ ನಿರೀಕ್ಷೆ
    * ಪೂರ್ಣ ಬಡ್ಡಿ ಮನ್ನಾ ಸಾಧ್ಯತೆ

    * ತೆಲಂಗಾಣ ಮಾದರಿಯಲ್ಲಿ ರೈತರ ಬ್ಯಾಂಕ್ ಖಾತೆಗೆ ನೇರ ನಗದು ವರ್ಗಾವಣೆ?
    * ಕೃಷಿ ವಿಮೆ ಪ್ರೀಮಿಯಂ ಪೂರ್ಣವಾಗಿ ಸರ್ಕಾರದಿಂದಲೇ ಪಾವತಿ
    * ಸಾಮಾನ್ಯ ಕನಿಷ್ಠ ಬೆಂಬಲ ಬೆಲೆ ಘೋಷಣೆ ಸಾಧ್ಯತೆ
    * ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಗೆ ಹೆಚ್ಚಿನ ಅನುದಾನ
    * ನರೇಗಾದ ಮೂಲಕ ಗ್ರಾಮೀಣ ಭಾಗದ ನೌಕರರ ಕೂಲಿ ಹೆಚ್ಚಿಸಬಹುದು

    ತೆರಿಗೆ ಪಾವತಿದಾರರಿಗೆ ಏನು ಸಿಗಬಹುದು?
    * ಆದಾಯ ತೆರಿಗೆ ಮಿತಿ 2.5 ಲಕ್ಷದಿಂದ ಏರಿಕೆ
    * ಆದಾಯ ತೆರಿಗೆ ಸಲ್ಲಿಕೆ ನಿಯಮಗಳನ್ನು ಕೊಂಚ ಸಡಿಸಬಹುದು
    * ಟಿಡಿಎಸ್ ಸಲ್ಲಿಕೆ ದಿನವೇ ಮರು ಪಾವತಿಗೆ ನಿಯಮ ಜಾರಿಗೊಳಿಸಬಹುದು
    * ಶೇ.30ರಷ್ಟಿರುವ ಕಾರ್ಪೋರೇಟ್ ತೆರಿಗೆಯನ್ನು ಶೇ.25ಕ್ಕೆ ಇಳಿಕೆ ಮಾಡಬಹುದು

    ಶ್ರೀಸಾಮಾನ್ಯರಿಗೆ ಏನು ಸಿಗಬಹುದು?
    * ಮೆಡಿಕಲ್ ವಿಮೆ ಕಡಿಮೆ ಮಾಡುವ ನಿರೀಕ್ಷೆ
    * ಪ್ರತಿ ವ್ಯಕ್ತಿಗೂ 5 ಲಕ್ಷದ ವರೆಗಿನ ಏಕರೂಪದ ವಿಮೆ ಭಾಗ್ಯ ಕಲ್ಪಿಸಬಹುದು
    * ಸಣ್ಣ ಉದ್ದಿಮೆದಾರರಿಗೆ ಕಡಿಮೆ ಬಡ್ಡಿದರದಲ್ಲಿ ಸಾಲ ಸಾಧ್ಯತೆ (ಉದ್ದಿಮೆದಾರರಿಗೆ ವಿಮೆಯೂ ಘೋಷಣೆ ಮಾಡಬಹುದು)
    * ಬಡವರಿಗೆ ಕನಿಷ್ಠ ವರಮಾನ ಯೋಜನೆ ಪ್ರಕಟಣೆ ಸಾಧ್ಯತೆ
    * ಜಿಎಸ್‍ಟಿ ವ್ಯಾಪ್ತಿಯಿಂದ ಮತ್ತಷ್ಟು ವಸ್ತುಗಳನ್ನು ಕೈ ಬಿಡುವ ಸಾಧ್ಯತೆ
    * ಐಟಿ ಕಾನೂನುಗಳಿಗೆ ಬದಲಾವಣೆ ತಂದು ಉದ್ಯೋಗ ಸೃಷ್ಟಿಸಬಹುದು