Tag: ಪಿಯೂಶ್ ಗೋಯಲ್

  • ಆರ್‌ಪಿಎಫ್‌ನಲ್ಲಿ ಮಹಿಳೆಯರಿಗೆ 50% ಮೀಸಲಾತಿ: ಸಚಿವ ಪಿಯೂಶ್ ಗೋಯಲ್

    ಆರ್‌ಪಿಎಫ್‌ನಲ್ಲಿ ಮಹಿಳೆಯರಿಗೆ 50% ಮೀಸಲಾತಿ: ಸಚಿವ ಪಿಯೂಶ್ ಗೋಯಲ್

    ನವದೆಹಲಿ: ಭಾರತೀಯ ರೈಲ್ವೇಯಲ್ಲಿ ಮಹಿಳಾ ಉದ್ಯೋಗಿಗಳ ಸಂಖ್ಯೆಯನ್ನು ಹೆಚ್ಚಿಸುವ ಸಲುವಾಗಿ ರೈಲ್ವೇ ಸುರಕ್ಷಾ ದಳ(ಆರ್‌ಪಿಎಫ್‌)ದ ಪರೀಕ್ಷೆಯಲ್ಲಿ 50% ಮಹಿಳೆಯರಿಗೆ ಮೀಸಲಾತಿ ನೀಡುವುದಾಗಿ ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಪ್ರಕಟಿಸಿದ್ದಾರೆ.

    ಶನಿವಾರ ಮಹಿಳಾ ಸಿಬ್ಬಂದಿ ಉತ್ತರ ಪ್ರದೇಶದ ಅಜಂಗಢ ದೀನ್ ದಯಾಳ್ ಉಪಾಧ್ಯಾಯ ನಿಲ್ದಾಣದಲ್ಲಿ ಗೂಡ್ಸ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದರು. ಹಸಿರು ನಿಶಾನೆ ತೋರಿಸಿದ ಒಂದು ದಿನದ ನಂತರ ಪಿಯೂಶ್ ಗೋಯಲ್ ಅವರಿಂದ ಈ ಘೋಷಣೆ ಪ್ರಕಟವಾಗಿದೆ.

    9500 -10000 ಆರ್‌ಪಿಎಫ್‌ ಹುದ್ದೆಗಳ ನೇಮಕಾತಿ ಮುಂದಿನ ದಿನಗಳಲ್ಲಿ ನಡೆಯಲಿದ್ದು ಮಹಿಳೆಯರಿಗೆ 50% ಮೀಸಲಾತಿ ಕಲ್ಪಿಸಲಾಗುವುದು ಎಂದು ಅವರು ತಿಳಿಸಿದರು.

    ಇದರ ಜೊತೆಯಲ್ಲೇ ಶೀಘ್ರವೇ ರೈಲ್ವೇಗೆ 13 ಸಾವಿರ ಉದ್ಯೋಗಿಗಳ ನೇಮಕವಾಗಲಿದೆ. ಈ ಉದ್ಯೋಗಳ ಸಂಬಂಧ ಸಚಿವಾಲಯ ಯಾವುದೇ ಸಂದರ್ಶನವನ್ನು ನಡೆಸುವುದಿಲ್ಲ. ಕಂಪ್ಯೂಟರ್ ಆಧಾರಿತ ಪರೀಕ್ಷೆ ಆಧಾರದ ಮೇಲೆ ಅಭ್ಯರ್ಥಿಗಳನ್ನು ನೇಮಕ ಮಾಡಲಾಗುವುದು ಎಂದು ಅವರು ತಿಳಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಐತಿಹಾಸಿಕ ಸಾಧನೆ: ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ

    ಐತಿಹಾಸಿಕ ಸಾಧನೆ: ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ

    ನವದೆಹಲಿ: ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ತಲುಪುವ ಮೂಲಕ ಭಾರತ ಐತಿಹಾಸಿಕ ಸಾಧನೆ ನಿರ್ಮಿಸಿದೆ. ಮಣಿಪುರದ ಸೇನಾಪತಿ ಜಿಲ್ಲೆಯ ಗ್ರಾಮವೊಂದಕ್ಕೆ ಶನಿವಾರ ಸಂಜೆ 5.30ಕ್ಕೆ ವಿದ್ಯುತ್ ತಲುಪುವ ಮೂಲಕ ಈ ಸಾಧನೆ ನಿರ್ಮಾಣವಾಗಿದೆ.

    2014ರಲ್ಲಿ ಮೋದಿ ಸರ್ಕಾರ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುತ್ತೇವೆ ಎಂದು ಭರವಸೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಟ್ವೀಟ್ ಮಾಡಿ, ಭಾರತದ ಅಭಿವೃದ್ಧಿಯ ಪ್ರಯಾಣದಲ್ಲಿ 2018ರ ಏಪ್ರಿಲ್ 28 ಐತಿಹಾಸಿಕ ದಿನ. ಶನಿವಾರ ನಾವು ನೀಡಿದ್ಧ ಭರವಸೆ ಪೂರ್ಣವಾಗಿದೆ. ಭಾರತದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಸಿಕ್ಕಿದ್ದಕ್ಕೆ ನನಗೆ ಬಹಳ ಹೆಮ್ಮೆಯಾಗುತ್ತಿದೆ ಎಂದು ಬರೆದುಕೊಂಡಿದ್ದಾರೆ.

    ಪ್ರಧಾನಿ ಮೋದಿ 2015ರ ಸ್ವಾತಂತ್ರ್ಯ ದಿನಾಚಣೆಯ ಭಾಷಣದಲ್ಲಿ, 1 ಸಾವಿರ ದಿನದ ಒಳಗಡೆ ದೇಶದ ಎಲ್ಲ ಗ್ರಾಮಗಳಿಗೆ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಆದರೆ ಈ ಗುರಿಯನ್ನು 987 ದಿನದಲ್ಲೇ ಪೂರ್ಣಗೊಳಿಸಿದ್ದೇವೆ ಎಂದು ಪೀಯುಷ್ ಗೋಯಲ್ ರೀಟ್ವೀಟ್ ಮಾಡಿದ್ದಾರೆ.

    ಈ ಗುರಿಯನ್ನು ತಲುಪಲು ಸಹಕರಿಸಿದ ಅಧಿಕಾರಿಗಳು, ತಾಂತ್ರಿಕ ಸಿಬ್ಬಂದಿ ಮತ್ತು ಎಲ್ಲ ಕೆಲಸಗಾರರಿಗೆ ಮೋದಿ ಟ್ವೀಟ್ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

    https://twitter.com/India_Policy/status/990479994362122240

     

  • ಅಭಿಯಾನಕ್ಕೆ ಸಿಕ್ತು ಜಯ: ಕನ್ನಡದಲ್ಲೂ ಸಿಗುತ್ತೆ ರೈಲ್ವೇ ಟಿಕೆಟ್

    ಅಭಿಯಾನಕ್ಕೆ ಸಿಕ್ತು ಜಯ: ಕನ್ನಡದಲ್ಲೂ ಸಿಗುತ್ತೆ ರೈಲ್ವೇ ಟಿಕೆಟ್

    ಬೆಂಗಳೂರು: ಇನ್ನು ಮುಂದೆ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿರುವ  ಟಿಕೆಟ್ ರೈಲು ಪ್ರಯಾಣಿಕರಿಗೆ ಸಿಗಲಿದೆ.

    ಕೇಂದ್ರ ರೈಲ್ವೇ ಸಚಿವ ಪಿಯೂಶ್ ಗೋಯಲ್ ಫೇಸ್‍ಬುಕ್, ಟ್ವಿಟ್ಟರ್ ನಲ್ಲಿ ಕನ್ನಡದಲ್ಲಿ ಮುದ್ರಣಗೊಂಡಿರುವ ಟಿಕೆಟ್ ಫೋಟೋ ಪ್ರಕಟಿಸಿ ಈ ವಿಚಾರವನ್ನು ತಿಳಿಸಿದ್ದಾರೆ. ಹೀಗಾಗಿ ಇನ್ನು ಮುಂದೆ ಇಂಗ್ಲಿಷ್, ಹಿಂದಿ ಅಲ್ಲದೇ ದಕ್ಷಿಣ ಭಾರತದಲ್ಲಿ ಆಯಾ ರಾಜ್ಯಗಳ ಭಾಷೆಯಲ್ಲಿ ಮುದ್ರಣಗೊಂಡಿರುವ ಟಿಕೆಟ್ ಸಿಗಲಿದೆ.

    ಈ ವಿಚಾರದ ಬಗ್ಗೆ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿ, ಕರ್ನಾಟಕದ ಎಲ್ಲ ಕೌಂಟರ್ ಗಳಲ್ಲಿ ಕನ್ನಡ ಭಾಷೆಯಲ್ಲಿ ಮುದ್ರಣಗೊಂಡಿರುವ ಟಿಕೆಟ್ ಸಿಗಲಿದೆ. ಆದರೆ ಆನ್ ಲೈನ್ ಮೂಲಕ ಟಿಕೆಟ್ ಬುಕ್ ಮಾಡಿದವರಿಗೆ ಈ ಟಿಕೆಟ್ ಸಿಗುವುದಿಲ್ಲ ಎಂದು ತಿಳಿಸಿದ್ದಾರೆ.

    ಈ ಮೂಲಕ ಹಿಂದಿ ಹೇರಿಕೆ ವಿರುದ್ಧ ನಡೆಸಲಾಗಿದ್ದ ಅಭಿಯಾನಕ್ಕೆ ಜಯ ಸಿಕ್ಕಂತಾಗಿದೆ. ರೈಲ್ವೆ ಟಿಕೆಟ್‍ಗಳಲ್ಲಿ ಕನ್ನಡ ಇರಲಿದೆ ಎಂಬುದನ್ನು ಕೇಳಲು ಖುಷಿಯ ವಿಚಾರ ಎಂದು ಹಿಂದಿ ಹೇರಿಕೆಯನ್ನು ವಿರೋಧಿಸಿ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದ ಕನ್ನಡರಿಗರು ಫೇಸ್‍ಬುಕ್ ಮತ್ತು ಟ್ವಿಟ್ಟರ್ ನಲ್ಲಿ ಸಂತಸವನ್ನು ಹಂಚಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಗೋವಾದಿಂದ ಮುಂಬೈಗೆ ಮರಳಿದ ತೇಜಸ್ ರೈಲಿನ ಸ್ಥಿತಿ ನೋಡಿ ಅಧಿಕಾರಿಗಳಿಗೆ ಶಾಕ್!

    ಕನ್ನಡ ಬಂದಿದ್ದು ಹೇಗೆ?
    ದಕ್ಷಿಣ ಭಾರತದ ಜನರಿಗೆ ಆಯಾ ರಾಜ್ಯ ಭಾಷೆಯಲ್ಲಿ ರೈಲು ಟಿಕೆಟ್ ನೀಡಬೇಕೆಂದು ಜನ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭಿಸಿದ್ದರು. ಈ ಅಭಿಯಾನಕ್ಕೆ ರೈಲ್ವೇ ಸಚಿವಾಲಯ 2017ರ ಜೂನ್ ನಲ್ಲಿ ಸಮ್ಮತಿ ಸೂಚಿಸಿತ್ತು. 2018ರಲ್ಲಿ ರೈಲ್ವೆ ಟಿಕೆಟ್‍ಗಳನ್ನು ಹಿಂದಿ ಹಾಗೂ ಇಂಗ್ಲಿಷ್ ಜೊತೆಗೆ ಸ್ಥಳೀಯ ಭಾಷೆಯಲ್ಲೂ ಮುದ್ರಿಸಲು ಭಾರತೀಯ ರೈಲ್ವೆ ಇಲಾಖೆ ಮುಂದಾಗಿದೆ ಪ್ರಯಾಣಿಕರ ಸೌಲಭ್ಯ ಸಮಿತಿ ಹೇಳಿತ್ತು.

    ಮೊದಲಿಗೆ ಅಧಿಕಾರಿಗಳು ಮೂರನೇ ಭಾಷೆಯನ್ನ ಸೇರಿಸಲು ತಯಾರಿರಲಿಲ್ಲ. ಯಾಕೆಂದರೆ ದೀರ್ಘ ಕಾಲದಿಂದ ದ್ವಿಭಾಷಾ ನೀತಿಯ ಜೊತೆಗೆ ಕೆಲಸ ಮಾಡಿದ್ದರು. ಮತ್ತೊಂದು ಕಾರಣವೆಂದರೆ ಅವರು ಇನ್ನೂ ಆರ್ಕಿಯಾಕ್ ಕೊಬೊಲ್ ಸಾಫ್ಟ್ ವೇರ್ ಬಳಸುತ್ತಿದ್ದು, ಇದನ್ನು ಕೂಡಲೇ ಬದಲಾಯಿಸೋದು ಕಷ್ಟವಾಗಿತ್ತು. ಅದ್ರೆ ಡಿಜಿಟಲ್ ಯುಗದಲ್ಲಿ ಇದನ್ನ ಪರಿಗಣಿಸಲು ಸಾಧ್ಯವಿಲ್ಲ. ದೇಶದಲ್ಲಿ ರೈಲ್ವೇ ಇಲಾಖೆ ಅತ್ಯಂತ ದೊಡ್ಡ ಸೇವಾ ಪೂರೈಕೆದಾರ ಆಗಿದೆ. ಈಗಿನ ದಿನಗಳಲ್ಲಿ ಸೆಲ್‍ಫೋನ್ ಸಂಸ್ಥೆಗಳೂ ಕೂಡ ಶುಲ್ಕ ರಹಿತ ನಂಬರ್ ಗೆ ಕರೆ ಮಾಡಿದಾಗ 3 ಭಾಷೆಗಳಲ್ಲಿ ಸೇವೆ ನೀಡುತ್ತಿವೆ. ಹಿಂದಿ ಮಾತನಾಡದ ರಾಜ್ಯಗಳಲ್ಲಿ ಮೂರನೆಯ, ಸ್ಥಳೀಯ ಭಾಷೆಯನ್ನು ತರುವುದು ನಮ್ಮ ಕರ್ತವ್ಯವಲ್ಲವೇ ಎಂದು ರೈಲ್ವೇ ಪ್ರಯಾಣಿಕರ ಸೌಲಭ್ಯ ಸಮಿತಿಯ ಸದಸ್ಯ ಆಚಾರಿ ಈ ಹಿಂದೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದರು.

    ದಕ್ಷಿಣ ಭಾರತದಲ್ಲಿ ಸಾಕಷ್ಟು ಜನ ರೈಲ್ವೆ ಟಿಕೆಟ್‍ನಿಂದ ತೊಂದರೆ ಅನುಭವಿಸುತ್ತಿದ್ದರು. ಕೆಲವರಿಗೆ ಅವರು ಸರಿಯಾದ ಟಿಕೆಟ್ ಹೊಂದಿದ್ದಾರಾ ಇಲ್ಲವಾ ಎಂಬುದೇ ಗೊತ್ತಿರುತ್ತಿರಲಿಲ್ಲ. ಟಿಕೆಟ್ ಮೇಲೆ ಮುದ್ರಣವಾಗಿರೋದನ್ನು ಓದಲು ಬಾರದೇ ಹಲವು ಬಾರಿ ತಮ್ಮದಲ್ಲದ ತಪ್ಪಿಗೆ ಜನ ದಂಡ ಕಟ್ಟಿದ್ದರು. ಈಗ ಸಾಫ್ಟ್ ವೇರ್ ಅಪ್‍ಡೇಟ್ ಆಗಿದ್ದು ಟಿಕೆಟ್ ವಿತರಿಸಲಾಗುವ ಪ್ರದೇಶಕ್ಕೆ ತಕ್ಕಂತೆ ಆಯಾ ರಾಜ್ಯದ ಭಾಷೆಯಲ್ಲಿ ಟಿಕೆಟ್ ಮುದ್ರಣವಿರಲಿದೆ. ಅಂದರೆ ನೀವು ಕನ್ಯಾಕುಮಾರಿಯಿಂದ ಶುರುವಾಗಿ 5 ರಾಜ್ಯಗಳನ್ನ ಸಂಚರಿಸುವ ರೈಲಿಗೆ ಕರ್ನಾಟಕದಲ್ಲಿ ರೈಲ್ವೇ ಟಿಕೆಟ್ ಬುಕ್ ಮಾಡಿದ್ರೆ ನಿಮ್ಮ ಟಿಕೆಟ್ ಕನ್ನಡದಲ್ಲೇ ಇರಲಿದೆ.

    ಇದು ಎಲ್ಲಾ ವರ್ಗದ ಪ್ರಯಾಣಕ್ಕೆ ಹಾಗೂ ಕೌಂಟರ್ ಗಳಲ್ಲಿ ವಿತರಿಸಲಾಗುವ ಪ್ಯಾಸೆಂಜರ್ ರೈಲುಗಳ ಟಿಕೆಟ್‍ಗಳಿಗೆ ಮಾತ್ರ ಅನ್ವಯವಾಗಲಿದೆ. ಆದ್ರೆ ಆನ್‍ಲೈನ್‍ನಲ್ಲಿ ಬುಕ್ಕಿಂಗ್ ಮಾಡಿದಾಗ ಅನ್ವಯವಾಗುವುದಿಲ್ಲ. ಜಗತ್ತಿನ ಯಾವುದೇ ಭಾಗದಲ್ಲಿದ್ರೂ ಆನ್‍ಲೈನ್ ಟಿಕೆಟ್ ಬುಕ್ ಮಾಡಬಹುದಾಗಿದ್ದು, ಈ ವೇಳೆ ಸ್ಥಳೀಯ ಭಾಷೆಯನ್ನು ಅಳವಡಿಸುವುದು ಕಷ್ಟವಾದ ಹಿನ್ನೆಲೆಯಲ್ಲಿ ಆನ್‍ಲೈನ್ ಗ್ರಾಹಕರಿಗೆ ಈ ಸೇವೆ ಸಿಗುವುದಿಲ್ಲ. ಇದನ್ನೂ ಓದಿ: 42 ಕೋಟಿ ರೂ. ವೆಚ್ಚದಲ್ಲಿ 3,350 ಟ್ರಕ್ ಸಗಣಿ ಖರೀದಿಸಲಿದೆ ಭಾರತೀಯ ರೈಲ್ವೇ!

     

  • ಕೋರ್ ಕಮಿಟಿ ಸಭೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಿದ ಜಾವಡೇಕರ್, ಗೋಯಲ್

    ಕೋರ್ ಕಮಿಟಿ ಸಭೆಯಲ್ಲಿ ನಾಯಕರಿಗೆ ಬಿಸಿ ಮುಟ್ಟಿಸಿದ ಜಾವಡೇಕರ್, ಗೋಯಲ್

    ಬೆಂಗಳೂರು: ಮೊದಲ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ಬಿಜೆಪಿ ನಾಯಕರಿಗೆ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಸಹ ಉಸ್ತುವಾರಿ ಪಿಯೂಶ್ ಗೋಯಲ್ ಬಿಸಿ ಮುಟ್ಟಿಸಿದ್ದಾರೆ.

    ಭ್ರಷ್ಟಾಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ನಂಬರ್ 1 ಸ್ಥಾನದಲ್ಲಿದ್ರೂ ನೀವ್ಯಾಕೆ ಸುಮ್ಮನಾಗಿದ್ದೀರಾ.? ಮೊದಲು ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡಿ. ಆಮೇಲೆ ಕಾಂಗ್ರೆಸ್ ಮುಕ್ತ ಭಾರತ ತನ್ನಿಂದ ತಾನೇ ಆಗುತ್ತದೆ ಎನ್ನುವುದನ್ನು ಜಾವಡೇಕರ್ ಹೇಳಿದ್ದಾರೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.

    ಹೊಸಬರಿಗೆ ಟಿಕೆಟ್ ಗ್ಯಾರಂಟಿ ನೀಡುತ್ತೇವೆ ಎಂದು ಯಾರು ಮಾತು ಕೊಡಬೇಡಿ. ಬಂದವರಿಗೆಲ್ಲಾ ಟಿಕೆಟ್ ನೀಡಲು ಸಾಧ್ಯವಿಲ್ಲ. ಟಿಕೆಟ್ ಬಗ್ಗೆ ಜನವರಿ ಬಳಿಕ ನೋಡೋಣ ಎನ್ನುವುದಾಗಿ ತಿಳಿಸಿ ಎಂದು ಯಡಿಯೂರಪ್ಪ ಸೇರಿ ಹಲವು ನಾಯಕರಿಗೆ ಜಾವಡೇಕರ್ ಸೂಚಿಸಿದ್ದಾರೆ.

    ಯಾರಿಗೆ ಟಿಕೆಟ್ ಹಂಚಿಕೆಯನ್ನು ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನಿರ್ಧರಿಸುತ್ತಾರೆ. ಇದರ ಬಗ್ಗೆ ಯಾರು ತಲೆ ಕೆಡಿಸಿಕೊಳ್ಳುವುದು ಬೇಡ ಎಂದು ಕೇಂದ್ರ ಸಚಿವರು ಎಚ್ಚರಿಸಿದ್ದಾರೆ. ಈ ಮಧ್ಯೆ ಜಾವಡೇಕರ್ ಬಿಜೆಪಿ ಕಚೇರಿಗೆ ಬಂದಾಗ ಮಲ್ಲೇಶ್ವರಂ ಶಾಸಕ ಡಾ. ಅಶ್ವಥ್ ನಾರಾಯಣ್, ಮುಧೋಳ ಶಾಸಕ ಗೋವಿಂದ ಕಾರಜೋಳ ಮಾತ್ರ ಇದ್ದರು.

    ಯಡಿಯೂರಪ್ಪನವರು ಕೇಂದ್ರ ಸಚಿವರ ಹೆಸರು ಹೇಳುವಾಗ ಅನಂತ್‍ಕುಮಾರ್ ಹೆಗಡೆ ಹೆಸರನ್ನ ಮರೆತುಬಿಟ್ಟಿದ್ದರು. ಆಗ ಈಶ್ವರಪ್ಪ ಅನಂತ್‍ಕುಮಾರ್ ಹೆಗಡೆ ಹೆಸರನ್ನು ನೆನಪಿಸಿದರು. ಈ ವೇಳೆ ಕರ್ನಾಟಕ ಅನಂತಮಯವಾಗಿದೆ ಅಂತ ಯಡಿಯೂರಪ್ಪ ತಮಾಷೆ ಮಾಡಿದರು.

  • ಶೀಘ್ರದಲ್ಲೇ 10 ಸಾವಿರ ರೂ. ಬೆಲೆಯ ವಿದ್ಯುತ್ ಮೀಟರ್ 1000 ರೂ. ಗೆ- ಮೋದಿ ಸರ್ಕಾರದ ಹೊಸ ಯೋಜನೆ

    ಶೀಘ್ರದಲ್ಲೇ 10 ಸಾವಿರ ರೂ. ಬೆಲೆಯ ವಿದ್ಯುತ್ ಮೀಟರ್ 1000 ರೂ. ಗೆ- ಮೋದಿ ಸರ್ಕಾರದ ಹೊಸ ಯೋಜನೆ

     

    ನವದೆಹಲಿ: ದುಬಾರಿ ಎಲೆಕ್ಟ್ರಿಸಿಟಿ ಮೀಟರ್‍ಗಳು ಹಾಗೂ ದೊಡ್ಡ ರೀಡಿಂಗ್‍ಗಳ ದಿನಗಳು ಶೀಘ್ರದಲ್ಲೇ ಕೊನೆಯಾಗಲಿವೆ. ಎಲ್‍ಇಡಿ ಬಲ್ಬ್‍ಗಳನ್ನು ಕಡಿಮೆ ಬೆಲೆಯನ್ನು ವಿತರಿಸಿದ ನಂತರ ಇದೀಗ ಮೋದಿ ಸರ್ಕಾರ ಮನೆ ಹಾಗೂ ಕಚೇರಿಗಳಿಗೆ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳ ಬೆಲೆಯನ್ನು ಇಳಿಸಲು ಚಿಂತನೆ ನಡೆಸಿದೆ.

    ಸುಮಾರು 10 ರಿಂದ 15 ಸಾವಿರ ರೂ. ಬೆಲೆಯಿರುವ ವಿದ್ಯುತ್ ಮೀಟರ್‍ಗಳು 1 ಸಾವಿರ ರೂ.ಗೆ ಇಳಿಕೆಯಾಗಲಿದೆ ಎಂದು ಕೇಂದ್ರ ಇಂಧನ ಸಚಿವ ಪಿಯೂಶ್ ಗೋಯಲ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಾತನಾಡುವ ವೇಳೆ ಪಿಯೂಶ್ ಗೋಯಲ್ ಸರ್ಕಾರದ ಈ ಯೋಜನೆಯ ಬಗ್ಗೆ ತಿಳಿಸಿದ್ದಾರೆ. ಈ ಬಗ್ಗೆ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ಸರ್ಕಾರ ಲಕ್ಷಾಂತರ ಹೊಸ ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳನ್ನು ಖರೀದಿಸಲು ಮುಂದಾಗಿರುವ ಬಗ್ಗೆ ಹೇಳಿದ್ರು. ಒಂದು ವೇಳೆ ಈ ಯೋಜನೆ ಜಾರಿಗೆ ಬಂದ್ರೆ ವಿದ್ಯುತ್ ಕಳ್ಳತನ ಹಾಗೂ ರೀಡಿಂಗ್‍ನಲ್ಲಿ ಮೋಸವಾಗುದನ್ನು ತಡೆಯಬಹುದು ಅಂತ ಅವರು ಹೇಳಿದ್ರು.

    ಸ್ಮಾರ್ಟ್ ಎಲೆಕ್ಟ್ರಿಸಿಟಿ ಮೀಟರ್‍ಗಳು ನಕಲು ಮಾಡದಂತವಾಗಿರುತ್ತವೆ. ರೀಡಿಂಗ್‍ಗಳು ನೇರವಾಗಿ ಕಂಪ್ಯೂಟರ್‍ಗೆ ಹೋಗುವುದರಿಂದ ಲೈನ್‍ಮನ್‍ಗಳಿಗೆ ಇದರಲ್ಲಿ ಕೆಲಸ ಇರುವುದಿಲ್ಲ. ಮೊದಲಿಗೆ ಇದರ ಬೆಲೆಯನ್ನು 2 ಸಾವಿರದಿಂದ 1500 ರವರೆಗೆ ಇಳಿಸಿ ಕೊನೆಗೆ 1 ಸಾವಿರ ರೂ. ಗಿಂತಲೂ ಕಡಿಮೆಗೆ ಇಳಿಸುವ ಪ್ರಯತ್ನ ಇದಾಗಿದೆ ಅಂದ್ರು. ಹರಿಯಾಣಾದಲ್ಲಿ ಇದೇ ರೀತಿಯ ಯೋಜನೆಗೆ ಮುಂದಾಗಿರುವ ಬಗ್ಗೆ ತಿಳಿಸಿದ್ರು.

    ಇಡೀ ವಿಶ್ವದಲ್ಲೇ ಈ ರೀತಿಯ ಸಾಧನ ತಯಾರಿಸವಲ್ಲಿ ಭಾರತ ಅತ್ಯುತ್ತಮ ಉತ್ಪಾದಕ ರಾಷ್ಟ್ರಗಳಲ್ಲಿ ಒಂದಾಗಿರುವುದರಿಂದ ಈ ಮೀಟರ್‍ಗಳು ಸಂಪೂರ್ಣವಾಗಿ ಮೇಡ್ ಇನ್ ಇಂಡಿಯಾ ಆಗಿರಲಿವೆ ಅಂತ ಹೇಳಿದ್ರು.

    ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಧ್ಯೆ ಮಾತುಕತೆ ನಡೆಯುತ್ತಿದೆ ಅಂತ ಅವರು ಹೇಳಿದ್ರು. ಅಲ್ಲದೆ ಹೇಗೆ ಸರ್ಕಾರ ಎಲ್‍ಇಡಿ ಬಲ್ಬ್‍ಗಳ ಬೆಲೆಯನ್ನು 300 ರೂ.ನಿಂದ 40 ರೂ. ಗೆ ಇಳಿಸುವಲ್ಲಿ ಸಫಲವಾಗಿದೆ ಎಂಬ ಬಗ್ಗೆ ಗೋಯಲ್ ಮಾತನಾಡಿದ್ರು.

  • ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 99ರಿಂದ 26ನೇ ಸ್ಥಾನಕ್ಕೆ ಜಿಗಿದ ಭಾರತ

    ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 99ರಿಂದ 26ನೇ ಸ್ಥಾನಕ್ಕೆ ಜಿಗಿದ ಭಾರತ

    ಲಂಡನ್: ವಿಶ್ವ ಬ್ಯಾಂಕ್‍ನ ವಿದ್ಯುತ್ ಲಭ್ಯತೆ ಶ್ರೇಯಾಂಕದಲ್ಲಿ 2015ರಲ್ಲಿ 99ನೇ ಸ್ಥಾನದಲ್ಲಿದ್ದ ಭಾರತ ಈಗ 26ನೇ ಸ್ಥಾನಕ್ಕೆ ಜಿಗಿದಿದೆ ಎಂದು ಕೇಂದ್ರ ಇಂಧನ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.

    ನಮ್ಮ ಶ್ರೇಯಾಂಕ 99 ರಿಂದ 26ಕ್ಕೆ ಏರಿದೆ. ಪ್ರತಿ ಮನೆಗೆ ವಿದ್ಯುತ್ ಸೌಲಭ್ಯ ಸಿಗಬೇಕು, ಸುಲಭವಾಗಿ ವಿದುತ್ ಲಭ್ಯವಾಗಬೇಕು ಹಾಗೂ ಕೈಗೆಟುಕುವ ದರದಲ್ಲಿ ಸಿಗಬೇಕು ಎಂಬ ಪ್ರಧಾನ ಮಂತ್ರಿಯವರ ಉದ್ದೇಶ ಇದರಿಂದ ಮತ್ತಷ್ಟು ವೇಗವಾಗಲಿದೆ ಎಂದು ಅವರು ಹೇಳಿದ್ದಾರೆ.

    2019ರ ವೇಳೆಗೆ, ಉದ್ದೇಶಿತ ಸಮಯಕ್ಕಿಂತ ಮೂರು ವರ್ಷ ಮುಂಚಿತವಾಗಿಯೇ ಸರ್ಕಾರ ಪ್ರತಿ ಮನೆಗೆ ವಿದ್ಯುತ್ ಸೌಲಭ್ಯ ಒದಗಿಸಬಲ್ಲದಾಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಯಾವುದೇ ವ್ಯಕ್ತಿ ವಿದ್ಯುತ್ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಲು ಅನಕೂಲಕರವಾಗಿರಬೇಕು. ಮೂಲಸೌಕರ್ಯಗಳು ಲಭ್ಯವಿದ್ದಲ್ಲಿ 24 ಗಂಟೆಯೊಳಗೆ ವಿದ್ಯುತ್ ಸಂಪರ್ಕ ಸಿಗಬೇಕು. ಮೂಲ ಸೌಕರ್ಯದ ವ್ಯವಸ್ಥೆ ಮಾಡಬೇಕಿದ್ದರೆ ಒಂದು ವಾರದ ಒಳಗಾಗಿ ವಿದ್ಯುತ್ ಸಂಪರ್ಕ ಸಿಗಬೇಕು ಎಂದು ಪಿಯೂಶ್ ಗೋಯಲ್ ಹೇಳಿದ್ರು.

    ಮೇ 11ರಂದು ನಡೆದ ವಿಯನ್ನಾ ಎನರ್ಜಿ ಫೋರಂನಲ್ಲಿ ಎಲ್ಲರೂ ಭರತದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ರು ಅಂತ ತಿಳಿಸಿದ್ರು.

    ಸರ್ಕಾರದ ಗ್ರಾಮೀಣ ವಿದ್ಯುದ್ದೀಕರಣ ಯೋಜನೆ ತ್ವರಿತ ಗತಿಯಲ್ಲಿ ಸಾಗುತ್ತಿದ್ದು, ಒಟ್ಟು 18,452 ಗ್ರಾಮಗಳಲ್ಲಿ 13 ಸಾವಿರ ಗ್ರಾಮಗಳಿಗೆ ವಿದ್ಯುತ್ ಸಂಪರ್ಕ ಕಲಿಪಿಸಲಾಗಿದೆ. ಉಳಿದ ಭಾಗವನ್ನು ಮುಂದಿನ 1 ಸಾವಿರ ದಿನದೊಳಗೆ ಪೂರ್ಣಗೊಳಿಸಲಾಗುತ್ತದೆ ಎಂದಿದ್ದಾರೆ.