Tag: ಪಿಯೂಷ್ ಗೋಯೆಲ್

  • 1 ತಿಂಗಳ ಹಿಂದೆ ಪಿಯೂಷ್ ಗೋಯಲ್ ಹೇಳಿದ್ದ ಭವಿಷ್ಯ ನಿಜವಾಯ್ತು – ವೀಡಿಯೋ ವೈರಲ್

    1 ತಿಂಗಳ ಹಿಂದೆ ಪಿಯೂಷ್ ಗೋಯಲ್ ಹೇಳಿದ್ದ ಭವಿಷ್ಯ ನಿಜವಾಯ್ತು – ವೀಡಿಯೋ ವೈರಲ್

    ಗಾಂಧಿನಗರ: ತೀವ್ರ ಕುತೂಹಲ ಕೆರಳಿಸಿದ್ದ ಗುಜರಾತ್ ಚುನಾವಣೆಯಲ್ಲಿ (Gujarat Election) ಬಿಜೆಪಿ (BJP) 150ಕ್ಕೂ ಹೆಚ್ಚು ಸ್ಥಾನಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದ್ದು, ಪ್ರತಿಪಕ್ಷಗಳನ್ನ ಧೂಳೀಪಟ ಮಾಡಿದೆ.

    ಈ ನಡುವೆ ಗುಜರಾತ್ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಗೆಲುವಿನ ಭವಿಷ್ಯ ನುಡಿದಿದ್ದ ಕೇಂದ್ರ ಸಚಿವ ಪಿಯೂಷ್ ಗೋಯಲ್ (Piyush Goyal) ಅವರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ (Social Media) ಸದ್ದು ಮಾಡುತ್ತಿದೆ. ಇದನ್ನೂ ಓದಿ: ಮೋರ್ಬಿ ಸೇತುವೆ ದುರಂತದ ವೇಳೆ ರಕ್ಷಣೆ ಮಾಡಿದ್ದ ಕಾಂತಿಲಾಲ್‌ಗೆ ಭರ್ಜರಿ ಜಯ

    ಖಾಸಗಿ ವಾಹಿನಿಯ ಕಾರ್ಯಕ್ರಮವೊಂದರಲ್ಲಿ ಪಿಯೂಷ್ ಗೋಯಲ್ ಅವರು, ಗುಜರಾತ್‌ನಲ್ಲಿ ಬಿಜೆಪಿಗೆ (BJP) ಯಾವುದೇ ಪ್ರತಿ ಸ್ಪರ್ಧಿಯಿಲ್ಲ. ನಾವು ಈ ಬಾರಿ ಗುಜರಾತ್ ಅನ್ನು ದಾಖಲೆಯ ಸ್ಥಾನಗಳೊಂದಿಗೆ ಗೆಲ್ಲೋದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಆಪ್‌, ಓವೈಸಿ ಪಕ್ಷ ಕೊಟ್ಟ ಹೊಡೆತಕ್ಕೆ ಕಾಂಗ್ರೆಸ್‌ ಪಲ್ಟಿ

    ಗುಜರಾತ್ ಚುನಾವಣಾ ಇತಿಹಾಸದಲ್ಲಿ ಕಾಂಗ್ರೆಸ್ 149 ಸ್ಥಾನಗಳನ್ನು ಗೆದ್ದಿರುವುದು ಇದುವೆರಗಿನ ದಾಖಲೆ. ಆದರೆ ಬಿಜೆಪಿ ಈ ಬಾರಿ 150ಕ್ಕಿಂತಲೂ ಹೆಚ್ಚಿನ ಸ್ಥಾನಗಳನ್ನ ಗೆದ್ದು ದಾಖಲೆ ಬರೆಯುತ್ತೆ. ನಾನು ಅಹಂಕಾರದಿಂದ ಈ ಮಾತನ್ನು ಹೇಳುತ್ತಿಲ್ಲ. ಗುಜರಾತ್ ಒಳಾಂಗಣ ಪ್ರವೇಶಿಸಿದ್ದೇನೆ. ಅಲ್ಲಿನ ಜನರ ಮನಸ್ಥಿತಿಯು ಮೋದಿ (Narendra Modi) ಅವರಿಗೆ ಸಂಪೂರ್ಣ ಮೆಚ್ಚುಗೆಯಾಗಿದೆ. ಬಿಜೆಪಿ ಅಧಿಕಾರದಲ್ಲಿ ಮುಂದುವರಿಯೋದನ್ನು ಅಲ್ಲಿನ ಜನರೂ ಎದುರು ನೋಡ್ತಿದ್ದಾರೆ ಎಂದು ಹೇಳಿದ್ದರು.

    ಇದೀಗ ಕಾರ್ಯಕ್ರಮದಲ್ಲಿ ಗೋಯಲ್ ಮಾತನಾಡಿದ್ದ ವೀಡಿಯೋವನ್ನು ಟ್ವೀಟ್ ಮೂಲಕ ಹಂಚಿಕೊಂಡಿದ್ದು, ಪ್ರಧಾನಿ ಮೋದಿ ಅವರಿಗೆ ಜನ ಮತ ಹಾಕಿದ್ದಾರೆ ಎಂದು ಬರೆದುಕೊಂಡಿದ್ದಾರೆ.

    ಈ ವೀಡಿಯೋ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಾರ 1 ಲಕ್ಷಕ್ಕೂ ಅಧಿಕ ಮಂದಿ ವೀಡಿಯೋ ವೀಕ್ಷಣೆ ಮಾಡಿದ್ದಾರೆ. ಸಾವಿರಾರು ಮಂದಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • 30 ಬಸ್ಕಿ ಹೊಡೆದ್ರೆ ರೈಲ್ವೇ ಪ್ಲಾಟ್‍ಫಾರಂ ಟಿಕೆಟ್ ಫ್ರೀ

    30 ಬಸ್ಕಿ ಹೊಡೆದ್ರೆ ರೈಲ್ವೇ ಪ್ಲಾಟ್‍ಫಾರಂ ಟಿಕೆಟ್ ಫ್ರೀ

    ನವದೆಹಲಿ: ದೇಶಾದ್ಯಂತ ಫಿಟ್ ಇಂಡಿಯಾ ಉತ್ತೇಜಿಸಲು ಕೇಂದ್ರ ಸರ್ಕಾರ ಹೊಸ ಪ್ರಯತ್ನಕ್ಕೆ ಕೈ ಹಾಕಿದೆ. ಇದರ ಭಾಗವಾಗಿ 30 ಬಸ್ಕಿ ಹೊಡೆದರೆ ಫ್ರೀ ಪ್ಲಾಟ್‍ಫಾರಂ ಟಿಕೆಟ್ ನೀಡುವ ಯೋಜನೆಯನ್ನು ದೆಹಲಿಯಲ್ಲಿ ಪ್ರಾಯೋಗಿಕವಾಗಿ ಜಾರಿಗೆ ತರಲಾಗಿದೆ.

    ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಬಸ್ಕಿ ಹೊಡೆದರೆ ಉಚಿತವಾಗಿ ಪ್ಲಾಟ್‍ಫಾರಂ ಟಿಕೆಟ್ ಕೊಡುವಂತಹ ಮೆಷಿನ್‍ನ್ನು ಇರಿಸಲಾಗಿದೆ. ಈ ಮಷಿನ್ ಮುಂದೆ 3 ನಿಮಿಷದಲ್ಲಿ 30 ಬಸ್ಕಿ ಹೊಡೆದರೆ ಅದು ಫ್ರೀಯಾಗಿ ಟಿಕೆಟ್ ಕೊಡುತ್ತದೆ.

    ಪ್ರಯಾಣಿಕರೊಬ್ಬರು ಫ್ರೀ ಟಿಕೆಟ್ ಪಡೆಯುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿರು ರೈಲ್ವೆ ಸಚಿವ ಪಿಯೂಷ್ ಗೋಯೆಲ್, ಫಿಟ್‍ನೆಸ್‍ನೊಂದಿಗೆ ಉಳಿತಾಯ. ದೆಹಲಿಯ ಆನಂದ್ ವಿಹಾರ್ ರೈಲ್ವೆ ನಿಲ್ದಾಣದಲ್ಲಿ ಫಿಟ್‍ನೆಸ್ ಉತ್ತೇಜಿಸಲು ಒಂದು ವಿಶಿಷ್ಟ ಪ್ರಯೋಗವನ್ನು ಮಾಡಲಾಗಿದೆ. ಇಲ್ಲಿ ಇರಿಸಲಾದ ಯಂತ್ರದ ಮುಂದೆ ಬಸ್ಕಿ ಹೊಡೆದರೆ ಪ್ಲಾಟ್‍ಫಾರಂ ಟಿಕೆಟ್‍ಗಳನ್ನು ಉಚಿತವಾಗಿ ತೆಗೆದುಕೊಳ್ಳಬಹುದು ಎಂದು ಬರೆದುಕೊಂಡಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರು ಸದೃಢ ಭಾರತವನ್ನು ರೂಪಿಸುವ ಜೊತೆಗೆ ಭಾರತದ ನಾಗರಿಕರ ಆರೋಗ್ಯದ ಕಾಳಜಿಯಿಂದ ಫಿಟ್ ಇಂಡಿಯಾ ಯೋಜನೆ ಜಾರಿಗೆ ತಂದಿದ್ದಾರೆ. ಅದರ ಭಾಗವಾಗಿ ಪಿಯೂಷ್ ಗೋಯೆಲ್ ಅವರು ಫ್ರೀ ಪ್ಲಾಟ್‍ಫಾರಂ ಟಿಕೆಟ್ ಯೋಜನೆ ಜಾರಿಗೆ ತಂದಿದ್ದಾರೆ.

    ನೂತನ ಯೋಜನೆ ಈಗಾಗಲೇ ದೆಹಲಿಯಲ್ಲಿ ಜಾರಿಗೆ ಬಂದಿದ್ದು, ಶೀಘ್ರದಲ್ಲಿಯೇ ದೇಶದ ಇತರೆ ರೈಲ್ವೆ ನಿಲ್ದಾಣದಲ್ಲಿ ಯಂತ್ರವನ್ನು ಅಳವಡಿಸಲಾಗುತ್ತದೆ ಎಂದು ರೈಲ್ವೆ ಸಚಿವರು ತಿಳಿಸಿದ್ದಾರೆ.