Tag: ಪಿಸ್ತೂಲ್

  • ಗೌರಿ ಹತ್ಯೆಗೆ ಆಯುಧ ಒದಗಿಸಿದ್ದು ನಾನೇ – ಎಸ್‍ಐಟಿ ಮುಂದೆ ನವೀನ್ ಹೇಳಿಕೆ

    ಗೌರಿ ಹತ್ಯೆಗೆ ಆಯುಧ ಒದಗಿಸಿದ್ದು ನಾನೇ – ಎಸ್‍ಐಟಿ ಮುಂದೆ ನವೀನ್ ಹೇಳಿಕೆ

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಐಟಿ ತನಿಖೆ ಚುರುಕುಗೊಳಿಸಿದ್ದು, ಹತ್ಯೆಗೆ ಆಯುಧಗಳನ್ನು ಒದಗಿಸಿದ್ದು ನಾನೇ ಎಂದು ಶಂಕಿತ ಆರೋಪಿ ನವೀನ್ ಹೇಳಿಕೆ ನೀಡಿದ್ದಾನೆ.

    ನಾಲ್ವರು ಬಂದಿದ್ದರು. ಅವರಿಗೆ ತರಬೇತಿ ನೀಡಿದ್ದು ನಾನೇ. ಓಮ್ನಿ ಕಾರಿನಲ್ಲಿ ಬಂದು ನನ್ನನ್ನು ಭೇಟಿಯಾಗಿದ್ದು ನಿಜ. ಅವರ ಮುಖ ಪರಿಚಯ ಇದೆ. ಆದ್ರೆ ಹೆಸರುಗಳ ಬಗ್ಗೆ ಸ್ಪಷ್ಟತೆ ಇಲ್ಲ. ಮೈಸೂರಿನ ವ್ಯಕ್ತಿಯೊಬ್ಬರು ಪರಿಚಯ ಮಾಡಿಸಿದ್ದರು. ಇದಕ್ಕಿಂತ ಮುಂಚೆ ಸಾಕಷ್ಟು ಬಾರಿ ಅಯುಧಗಳನ್ನು ಮಾರಾಟ ಮಾಡಿದ್ದೇನೆ ಎಂದು ನವೀನ್ ಹೇಳಿದ್ದಾನೆ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರದಿಂದ ನಾಡ ಪಿಸ್ತೂಲ್ ಗಳನ್ನು ಮಾರಾಟ ಮಾಡುವ ವ್ಯಾಪಾರ ಮಾಡಿಕೊಂಡಿದ್ದೆ. ಹಿಂದೂ ಯುವ ಸೇನೆಯಲ್ಲಿ ಕಾರ್ಯಕರ್ತನಾಗಿದ್ದರಿಂದ ಬಹುಶಃ ಅವರು ನನ್ನ ಸಂಪರ್ಕ ಮಾಡಿರಬಹುದು. ಮೈಸೂರಿನ ವ್ಯಕ್ತಿಯ ಪರಿಚಯ ನನಗೆ ಕೆಲ ಸಮಾರಂಭಗಳಲ್ಲಿ ಆಗಿತ್ತು. ಆ ಪರಿಚಯದಿಂದ ನಾನು ನಾಲ್ವರಿಗೆ ಅತಿಥ್ಯ ನೀಡಿದ್ದೆ. ನಮ್ಮ ಹುಡುಗರೇ ಕಲ್ಬುರ್ಗಿ ಅವರನ್ನು ಹತ್ಯೆ ಮಾಡಿರಬಹುದು ಎಂದು ನವೀನ್ ಎಸ್‍ಐಟಿ ಮುಂದೆ ಸ್ಫೋಟಕ ಮಾಹಿತಿ ಹೇಳಿದ್ದಾನೆ ಎಂದು ಮೂಲಗಳು ತಿಳಿಸಿವೆ. ನವೀನ್ ನೀಡಿರುವ ಮಾಹಿತಿ ಆಧರಿಸಿ ಪೊಲೀಸರು ಇದೀಗ ತನಿಖೆ ಮತ್ತಷ್ಟು ತೀವ್ರಗೊಳಿಸಿದ್ದಾರೆ.

    ಎಸ್‍ಐಟಿಯಿಂದ ಕಿರುಕುಳ: ಪ್ರಕರಣದಲ್ಲಿ ಬಂಧನಕ್ಕೆ ಒಳಗಾದ ಬಳಿಕ ಎಸ್‍ಐಟಿ ನವೀನ್ ಹೇಳಿಕೆಯನ್ನು ಹಾಗೂ ಪ್ರಕರಣದ ಮಾಹಿತಿಯುಳ್ಳ ನಾಲ್ಕು ಸಿ.ಡಿಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ವಿಚಾರಣೆ ವೇಳೆ, ನಾನು ಯಾವುದೇ ಹೇಳಿಕೆ ನೀಡಿಲ್ಲ. ಅಧಿಕಾರಿಗಳು ತಮಗೆ ತೋಚಿದ್ದನ್ನು ಬರೆದುಕೊಂಡು ಸಹಿ ಮಾಡುವಂತೆ ಒತ್ತಾಯಿಸಿದ್ದಾರೆ. ನನಗೆ ನಿರಂತರ ಕಿರುಕುಳ ನೀಡುತ್ತಿದ್ದು, ನಾನು ಯಾವುದೇ ಹೇಳಿಕೆಗೆ ಸಹಿ ಮಾಡಿಲ್ಲ ಎಂದು ದೂರಿದ್ದ. ಈ ವೇಳೆ ಆರೋಪಿಗೆ ಕಿರುಕುಳ ನೀಡಬಾರದು ಎಂದು ಎಸ್‍ಐಟಿಗೆ ನ್ಯಾಯಾಧೀಶರು ಅಧಿಕಾರಿಗಳಿಗೆ ತಾಕೀತು ಮಾಡಿದ್ದರು.

  • ಅಪ್ಪನ ಪಿಸ್ತೂಲ್‍ನಿಂದ ವಿದ್ಯಾರ್ಥಿನಿಗೆ ಶೂಟ್ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ 11ನೇ ಕ್ಲಾಸ್ ವಿದ್ಯಾರ್ಥಿ

    ಅಪ್ಪನ ಪಿಸ್ತೂಲ್‍ನಿಂದ ವಿದ್ಯಾರ್ಥಿನಿಗೆ ಶೂಟ್ ಮಾಡಿ ತಾನೂ ಆತ್ಮಹತ್ಯೆಗೆ ಯತ್ನಿಸಿದ 11ನೇ ಕ್ಲಾಸ್ ವಿದ್ಯಾರ್ಥಿ

    ನವದೆಹಲಿ: 11ನೇ ತರಗತಿ ವಿದ್ಯಾರ್ಥಿಯೊಬ್ಬ 10ನೇ ಕ್ಲಾಸ್ ಬಾಲಕಿಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಆಕೆಯ ಸ್ಥಿತಿ ಗಂಭಿರವಾಗಿದೆ.

    ರಾಷ್ಟ್ರ ರಾಜಧಾನಿಯ ಸೆಕ್ಟರ್ 4 ಸಿ ಪ್ರದೇಶದಲ್ಲಿ ಬುಧವಾರದಂದು ಈ ಘಟನೆ ನಡೆದಿದೆ. ಇಲ್ಲಿನ ಶಾಲೆಯೊಂದರಲ್ಲಿ 10ನೇ ತರಗತಿ ಓದುತ್ತಿರೋ ವಿದ್ಯಾರ್ಥಿನಿ ಹಾಗೂ 11ನೇ ತರಗತಿಯ ವಿದ್ಯಾರ್ಥಿ ನಡುವೆ ವಾಗ್ವಾದ ನಡೆದಿದ್ದು, ಆತ ವಿದ್ಯಾರ್ಥಿನಿಯ ತಲೆಗೆ ಗುಂಡು ಹಾರಿಸಿದ್ದಾನೆ.

    ಈ ಇಬ್ಬರೂ ಸಂಜೆ ಕೋಚಿಂಗ್ ಸೆಂಟರ್‍ನಿಂದ ಸ್ಕೂಟಿಯಲ್ಲಿ ಹಿಂದಿರುತ್ತಿದ್ದರು. ಈ ವೇಳೆ ವಸುಂಧರಾ ಬಳಿಯ ವಾರ್ತಾಲೋಕ್ ಸೊಸೈಟಿ ಬಳಿ ವಿದ್ಯಾರ್ಥಿ ತನ್ನ ತಂದೆಯ ಲೈಸೆನ್ಸ್ಡ್ ಗನ್‍ನಿಂದ ವಿದ್ಯಾರ್ಥಿನಿ ಮೇಲೆ ಗುಂಡು ಹಾರಿಸಿದ್ದಾನೆ. ನಂತರ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.

    ಇಬ್ಬರನ್ನೂ ಸ್ಥಳೀಯ ಅಸ್ಪತ್ರೆಗೆ ದಾಖಲಿಸಲಾಗಿದ್ದು, ವಿದ್ಯಾರ್ಥಿನಿಯ ಸ್ಥಿತಿ ಗಂಭೀರವಾಗಿದೆ. ಪೊಲೀಸರು ಪಿಸ್ತೂಲ್ ವಶಪಡಿಸಿಕೊಂಡಿದ್ದು, ವಿದ್ಯಾರ್ಥಿಯ ತಂದೆಯನ್ನು ವಿಚಾರಣೆಗೆ ಕರೆದಿದ್ದಾರೆ. ವಿದ್ಯಾರ್ಥಿನಿಯ ಸಂಬಂಧಿಕರೊಬ್ಬರು ನೀಡಿದ ದೂರಿನನ್ವಯ 11ನೇ ಕ್ಲಾಸ್ ವಿದ್ಯಾರ್ಥಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಅನೂಪ್ ಸಿಂಗ್ ಹೇಳಿದ್ದಾರೆ.

    ಮತ್ತೊಂದು ವರದಿಯ ಪ್ರಕಾರ ಈ ಇಬ್ಬರೂ ಪ್ರೀತಿಸುತ್ತಿದ್ದು, ಜಗಳವಾದ ಕಾರಣ ಯುವಕ ಅಕೆಯ ಮೇಲೆ ಶೂಟ್ ಮಾಡಿದ್ದಾನೆ ಎನ್ನಲಾಗಿದೆ. ವಿದ್ಯಾರ್ಥಿ ತನ್ನ ತಂದೆಯ ಪಿಸ್ತೂಲ್ ಬ್ಯಾಗ್‍ನಲ್ಲಿ ಇಟ್ಟುಕೊಂಡಿದ್ದು, ಜಗಳವಾದಾಗ ಅದನ್ನ ತೆಗೆದು ಗುಂಡು ಹಾರಿಸಿದ್ದಾನೆ.

    ಆದ್ರೆ ನಮ್ಮ ಮಗಳಿಗೂ ಆ ಹುಡುಗನಿಗೂ ಸಂಬಂಧವಿಲ್ಲ ಎಂದು ಪೊಲೀಸರಿಗೆ ತಿಳಿಸಿದ್ದೇವೆ ಎಂದು ವಿದ್ಯಾರ್ಥಿನಿಯ ತಂದೆ ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ. ಆತ ಗನ್ ತೋರಿಸಿ ಬೆದರಿಸಿ ನಮ್ಮ ಮಗಳನ್ನ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಈ ಕೃತ್ಯವೆಸಗಿದ್ದಾನೆ. ನಂತರ ಆತ ಅಲ್ಲಿಂದ ಪರಾರಿಯಾಗಿದ್ದಾನೆ. ನಾವು ನಮ್ಮ ಮಗಳಿಗೆ ಫೋನ್ ಮಾಡುತ್ತಲೇ ಇದ್ದೆವು. ಸಾಕಷ್ಟು ಬಾರಿ ಕರೆ ಮಾಡಿದ ನಂತರ ಆತ ರಿಸೀವ್ ಮಾಡಿ, ಗುಂಡು ಹಾರಿಸಿರುವುದಾಗಿ ಹೇಳಿದ. ನಂತರ ನಮ್ಮ ಯಾವುದೇ ಕರೆಗಳನ್ನ ಸ್ವೀಕರಿಸಲಿಲ್ಲ. ಒಂದು ಗಂಟೆಯ ಬಳಿಕ ತನ್ನ ಸ್ನೇಹಿತನ ಜೊತೆ ಘಟನೆ ನಡೆದ ಸ್ಥಳಕ್ಕೆ ಬಂದಿದ್ದ. ಆತನ ತಲೆಯಿಂದ ರಕ್ತಸ್ರಾವವಾಗುತ್ತಿತ್ತು. ಆಗ ಪೊಲೀಸರು ಆತನನ್ನು ವಶಕ್ಕೆ ಪಡೆದರು ಎಂದು ಹೇಳಿದ್ದಾರೆ.

    ಬಳಿಕ ಹುಡುಗನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರಚಿಕಿತ್ಸೆ ಮೂಲಕ ಬುಲೆಟ್ ಹೊರತೆಗೆಯಲಾಗಿದೆ. ನಂತರ ಐಸಿಯುಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

  • 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದ ವ್ಯಕ್ತಿಯನ್ನು ಕೆಳಗಿಳಿಸಲು ಮರವನ್ನೇ ಉರುಳಿಸಿದ್ರು: ವಿಡಿಯೋ ನೋಡಿ

    3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದ ವ್ಯಕ್ತಿಯನ್ನು ಕೆಳಗಿಳಿಸಲು ಮರವನ್ನೇ ಉರುಳಿಸಿದ್ರು: ವಿಡಿಯೋ ನೋಡಿ

    ಮನಿಲಾ: ವ್ಯಕ್ತಿಯೊಬ್ಬ 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದು, ಆತನನ್ನು ಕೆಳಗಿಳಿಸಲು ಆಗದೆ ಮರವನ್ನೇ ಉರುಳಿಸಿರುವ ಘಟನೆ ಫಿಲಿಫೈನ್ಸ್ ನಲ್ಲಿ ನಡೆದಿದೆ.

    ಅಗುಸನ್ ದೆಲ್ ಸುರ್ ನ ಗಿಲ್ ಬರ್ಟ್ ಶಾನ್ ಚೇಜ್ ಎಂಬ ವ್ಯಕ್ತಿ 3 ವರ್ಷದಿಂದ ತೆಂಗಿನ ಮರದಲ್ಲಿ ವಾಸವಿದ್ದು, ಆತನನ್ನು ರಕ್ಷಣಾ ಸಿಬ್ಬಂದಿಯವರು ರಕ್ಷಿಸಿದ್ದಾರೆ. ಇತ್ತೀಚಿಗೆ ಮಾಧ್ಯಮವೊಂದು ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಆತನನ್ನು ರಕ್ಷಣೆ ಮಾಡಿದ ವಿಡಿಯೋವೊಂದನ್ನು ಹಾಕಿದ್ದು, ಸಾಕಷ್ಟು ವೈರಲ್ ಆಗಿದೆ.

    ಗಿಲ್ ಬರ್ಟ್ ತಲೆಗೆ ಪಿಸ್ತೂಲ್ ನಿಂದ ಏಟು ಬಿದ್ದಿದ್ದು, ಆ ದಿನದಿಂದ ಆತನು 60 ಅಡಿ ಎತ್ತರವಿರುವ ತೆಂಗಿನ ಮರದ ಮೇಲೆ ವಾಸಿಸುತ್ತಿದ್ದನು. ಹಳೆಯ ಬಟ್ಟೆಗಳ ಜೊತೆ ಮರದ ತುಂಡನ್ನು ತೆಗೆದುಕೊಂಡು ಹೋಗಿ, ಮರದ ಮೇಲೆ ತನ್ನ ಮನೆಯನ್ನು ನಿರ್ಮಿಸಿಕೊಂಡಿದ್ದನು. ಮನೆಗೆ ಗೋಡೆ ಇರದಿದ್ದರೂ ತೆಂಗಿನ ಗರಿಯಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿದ್ದನು. ಕೆಲವು ಬಟ್ಟೆಗಳು ಬಿಟ್ಟರೆ ಅವನ ಜೊತೆ ಬೇರೆ ಯಾವ ವಸ್ತು ಕೂಡ ಇರಲಿಲ್ಲ.

    ಗಿಲ್ ಬರ್ಟ್‍ನ ತಾಯಿ ವೇನೆಫ್ರೇಡ್ ಶಾನ್ ಚೇಜ್ ತನ್ನ ಮಗನ ಯೋಚನೆಯಿಂದ ಬೆಳಗ್ಗೆ ಬೇಗ ಎದ್ದು ಗಿಲ್ ಬರ್ಟ್‍ಗಾಗಿ ಅಡುಗೆ ಮಾಡಿ, ಅವನು ವಾಸವಿರುವ ಜಾಗಕ್ಕೆ ಹೋಗಿ ಊಟ ಹಾಗೂ ಸಿಗರೇಟ್ ಕೋಡುತ್ತಿದ್ದರು. ಗಿಲ್ ಬರ್ಟ್ ಉದ್ದದ ಹಗ್ಗವನ್ನು ಕೆಳಗೆ ಬಿಟ್ಟು ಅಲ್ಲಿಂದ ಊಟವನ್ನು ತೆಗೆದುಕೊಳ್ಳುತ್ತಿದ್ದನು.

    ಬಿಸಿಲು ಅಥವಾ ಮಳೆಯಿರಲ್ಲಿ ಗಿಲ್ ಬರ್ಟ್ ಎಲ್ಲರಿಂದಲ್ಲೂ ದೂರವಿರುತ್ತಿದ್ದ. ಗಿಲ್ ಬರ್ಟ್‍ನ ಸಹೋದರಿ ಪ್ರಕಾರ 2014 ರಲ್ಲಿ ನಡೆದ ಒಂದು ಜಗಳದಿಂದ ಆತನ ತಲೆಗೆ ಪಿಸ್ತೂಲ್ ನಿಂದ ಏಟು ಬಿದಿದ್ದ ಕಾರಣ ಗಿಲ್ ಬರ್ಟ್ ಈ ರೀತಿ ಮಾಡುತ್ತಿದ್ದಾನೆ ಎಂದು ಹೇಳಿದ್ದಾರೆ.

    ಗಿಲ್ ಬರ್ಟ್ ಕೆಳಗಿಳಿಯಲ್ಲು ನಿರಾಕರಿಸಿದ್ದಾಗ, ರಕ್ಷಣಾ ಸಿಬ್ಬಂದಿ ಆತನನ್ನು ರಕ್ಷಿಸಲು ಎಲ್ಲಾ ರೀತಿಯ ಉಪಕರಣಗಳನ್ನು ತಯಾರಿ ಮಾಡಿಕೊಂಡರು. ನಂತರ ಮರವನ್ನು ಕತ್ತರಿಸಿ ಆತನನ್ನು ಸುರಕ್ಷಿತವಾಗಿ ಕೆಳಗಿಳಿಸಿಕೊಂಡರು.

    ಫೇಸ್‍ ಬುಕ್ ನಲ್ಲಿ ಇದದೂವರೆಗೂ ವಿಡಿಯೋ 28 ಲಕ್ಷ ವ್ಯೂ ಕಂಡಿದ್ದು, 46 ಸಾವಿರಕ್ಕೂ ಅಧಿಕ ಮಂದಿ ಶೇರ್ ಮಾಡಿದ್ದಾರೆ.

  • ವಿಜಯಪುರದಲ್ಲಿ ಪಿಸ್ತೂಲ್ ಮಾರಾಟಗಾರರು ಅರೆಸ್ಟ್: ಎಷ್ಟು ಪಿಸ್ತೂಲ್ ಸಿಕ್ಕಿದೆ?

    ವಿಜಯಪುರದಲ್ಲಿ ಪಿಸ್ತೂಲ್ ಮಾರಾಟಗಾರರು ಅರೆಸ್ಟ್: ಎಷ್ಟು ಪಿಸ್ತೂಲ್ ಸಿಕ್ಕಿದೆ?

    ವಿಜಯಪುರ: ಮೂರು ಜಿಲ್ಲೆಯಲ್ಲಿ ಅಕ್ರಮವಾಗಿ ಪಿಸ್ತೂಲ್ ಮಾರಾಟ ಮಾಡುತ್ತಿದ್ದ 12 ಜನ ಆರೋಪಿಗಳನ್ನು ಬಂಧಿಸಿ, ಅವರಿಂದ 20 ನಾಡ ಪಿಸ್ತೂಲು ಮತ್ತು 49 ಮದ್ದುಗುಂಡುಗಳನ್ನು ವಿಜಯಪುರ ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

    ಪ್ರಾಥಮಿಕ ವಿಚಾರಣೆ ವೇಳೆಯಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಸರಬರಾಜಿನ ಕಿಂಗ್ ಪಿನ್ ಮಧ್ಯಪ್ರದೇಶದ ಧಾರ್ ಜಿಲ್ಲೆಯ ಬಚ್ಚನ್ ಸಿಂಗ್ ಹಾಗೂ ತನ್‍ಮನ್ ಸಿಂಗ್ ಎಂದು ಹೇಳಿದ್ದಾರೆ. ಹಾಗೂ ಆರೋಪಿಗಳು ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಲ್ಲಿ ನಾವು ಅಕ್ರಮವಾಗಿ ಪಿಸ್ತೂಲ್ ಗಳನ್ನು ಸರಬರಾಜು ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.

    12 ಮಂದಿಯ ವಿರುದ್ಧ 9 ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇವರ ಕಿಂಗ್ ಪಿನ್ ಆಗಿರುವ ಮಧ್ಯ ಪ್ರದೇಶದ ಇಬ್ಬರು ಆರೋಪಿಗಳಿಗೆ ಬಲೆ ಬೀಸಿದ್ದು ಆದಷ್ಟು ಬೇಗ, ಸೆರೆ ಹಿಡಿಯುವುದಾಗಿ ಉತ್ತರ ವಲಯ ಐಜಿಪಿ ಡಾ ಕೆ ರಾಮಚಂದ್ರರಾವ್ ತಿಳಿಸಿದರು.

    ಪೊಲೀಸರಿಗೆ ಬಹುಮಾನ: ಅಕ್ರಮ ಶಸ್ತ್ರಾಸ್ತ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದ ಜಿಲ್ಲಾ ಪೊಲೀಸರಿಗೆ 1 ಲಕ್ಷ ಬಹುಮಾನವನ್ನು ಐಜಿಪಿ ಘೋಷಿಸಿದ್ದಾರೆ. ವಿಜಯಪುರದಲ್ಲಿ ಅಕ್ರಮ ಪಿಸ್ತೂಲು ಮಾರಾಟ ದಂಧೆ ಬಗ್ಗೆ ಪಬ್ಲಿಕ್ ಟಿವಿಯಲ್ಲಿ ವರದಿ ಪ್ರಸಾರವಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಜಿಲ್ಲಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

  • ಗೌರಿ ಲಂಕೇಶ್ ಹತ್ಯೆ ತನಿಖೆ ಈಗ ಎಲ್ಲಿಯವರೆಗೆ ಬಂದಿದೆ?

    ಗೌರಿ ಲಂಕೇಶ್ ಹತ್ಯೆ ತನಿಖೆ ಈಗ ಎಲ್ಲಿಯವರೆಗೆ ಬಂದಿದೆ?

    ಬೆಂಗಳೂರು: ದೇಶಾದ್ಯಂತ ಸಂಚಲನವನ್ನು ಸೃಷ್ಟಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ನಡೆಸುತ್ತಿರುವ ವಿಶೇಷ ತನಿಖಾ ದಳದ(ಎಸ್‍ಐಟಿ) ಪೊಲೀಸರು ಈಗ ಕರ್ನಾಟಕದ ಎಲ್ಲಾ ಜೈಲುಗಳಲ್ಲಿ ಇರುವ ಸುಪಾರಿ ಹಂತಕರ ವಿಚಾರಣೆ ನಡೆಸಲು ಮುಂದಾಗಿದ್ದಾರೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ.

    ಉತ್ತರ ಕರ್ನಾಟಕ ಜೈಲುಗಳು ಸೇರಿದಂತೆ, ಉಡುಪಿ, ಬಿಜಾಪುರ, ಮಂಗಳೂರು, ಬೆಂಗಳೂರು ಜೈಲುಗಳಿಗೆ ಭೇಟಿ ನೀಡಿ ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ. ಗೌರಿ ಅವರ ಹತ್ಯೆಗೆ ನಾಡ ಪಿಸ್ತೂಲು ಬಳಕೆಯಾಗಿರುವ ಅಂಶ ಬೆಳಕಿಗೆ ಬಂದಿದ್ದು, ನಾಡಾ ಪಿಸ್ತೂಲು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಸದಸ್ಯರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅಲ್ಲದೆ ನಾಡಾ ಪಿಸ್ತೂಲು ಮಧ್ಯಪ್ರದೇಶದಿಂದ ಪೂರೈಕೆಯಾಗಿರುವ ಕುರಿತು ಅನುಮಾನ ಮೂಡಿದ್ದು, ಕರ್ನಾಟಕದ ಬೇರೆಂದು ಗ್ಯಾಂಗ್ ಪಿಸ್ತೂಲು ರವಾನೆ ಮಾಡಿರುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

    ಈ ಮದ್ಯೆ ಉಡುಪಿಯ ಜಿಲ್ಲಾ ಕಾರಾಗೃಹಕ್ಕೆ ತನಿಖಾ ತಂಡ ಭೇಟಿ ನೀಡಿದ್ದು, ಯಾವುದೇ ಮಾಹಿತಿ ಲಭಿಸದೆ ಹಿಂದಿರುಗಿದೆ. ಬೆಂಗಳೂರಿನ ರಾಜರಾಜೇಶ್ವರಿ ನಗರದ ಸುತ್ತಮುತ್ತ ಚಾಲ್ತಿಯಲ್ಲಿರುವ ರೌಡಿ ಶೀಟರ್‍ಗಳ ಬಗ್ಗೆಯು ವಿಚಾರಣೆಯನ್ನು ನಡೆಸಲಾಗುತ್ತಿದೆ ಎನ್ನುವ ಮಾಹಿತಿ ಮೂಲಗಳಿಂದ ಸಿಕ್ಕಿದೆ

    ಪ್ರಕರಣದ ಕುರಿತು ಮತ್ತಷ್ಟು ಸುಳಿವುಗಳನ್ನು ಪಡೆಯುವ ಸಲುವಾಗಿ ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಮತ್ತೆ ಕಾಟ್ರೇಜ್‍ಗಳ ಮರು ಪರೀಕ್ಷೆಯನ್ನು ನಡೆಸುತ್ತಿದೆ.

  • 2005ರಲ್ಲಿ ಗೌರಿ ಲಂಕೇಶ್‍ಗೆ ಪಿಸ್ತೂಲ್ ತೋರಿಸಿದ್ದ ಇಂದ್ರಜಿತ್ ಲಂಕೇಶ್

    2005ರಲ್ಲಿ ಗೌರಿ ಲಂಕೇಶ್‍ಗೆ ಪಿಸ್ತೂಲ್ ತೋರಿಸಿದ್ದ ಇಂದ್ರಜಿತ್ ಲಂಕೇಶ್

    ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ 2005 ರಲ್ಲಿ ಗೌರಿ ಲಂಕೇಶ್‍ಗೆ ಪಿಸ್ತೂಲ್ ತೋರಿಸಿ ಇಂದ್ರಜಿತ್ ಬೆದರಿಕೆ ಹಾಕಿದ್ದರು. ಲಂಕೇಶ್ ಪತ್ರಿಕೆ ಒಡೆತನದ ವಿಷಯಕ್ಕೆ ಇಂದ್ರಜಿತ್ ಹಾಗೂ ಗೌರಿ ಲಂಕೇಶ್ ನಡುವೆ ಜಗಳವಾಗಿತ್ತು. ಈ ಪ್ರಕರಣದ ಮಾಹಿತಿ ಪಡೆಯಲು ಪೊಲೀಸರು ಮುಂದಾಗಿದ್ದಾರೆ.

    2000ರಲ್ಲಿ ಲಂಕೇಶ್ ಮೃತ ಪಟ್ಟಿದ್ದರು. ಲಂಕೇಶ್ ಸಾವನಪ್ಪಿದ ಬಳಿಕ ಗೌರಿ ಲಂಕೇಶ್ ಅವರು ಲಂಕೇಶ್ ಪತ್ರಿಕೆಯ ಸಂಪಾದಕಿ ಆಗಿದ್ದರು. ಈ ವೇಳೆ ಪತ್ರಿಕೆಯಲ್ಲಿ ಪ್ರಕಟವಾದ ಕೆಲ ವರದಿಗಳಿಗೆ ಇಂದ್ರಜಿತ್ ಆಕ್ಷೇಪ ವ್ಯಕ್ತ ಪಡಿಸಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ವೈಮನಸ್ಸು ಕೂಡ ಉಂಟಾಗಿತ್ತು. 15 ಫೆಬ್ರವರಿ 2005 ರಂದು ಬಸವನಗುಡಿ ಪೊಲೀಸ್ ಠಾಣೆಯಲ್ಲಿ ತನ್ನ ಸಹೋದರ ಇಂದ್ರಜಿತ್ ವಿರುದ್ಧ ಗೌರಿ ಲಂಕೇಶ್ ದೂರುನೀಡಿದ್ದರು. ಪಿಸ್ತೂಲ್ ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆಂದು ಗೌರಿ ಲಂಕೇಶ್ ದೂರು ನೀಡಿದ್ದರು.

    ನಂತರ ಪ್ರತಿಯಾಗಿ ಗೌರಿ ಲಂಕೇಶ್ ವಿರುದ್ಧ ಇಂದ್ರಜಿತ್ ಲಂಕೇಶ್ ಪ್ರತಿ ದೂರು ದಾಖಲಿಸಿದ್ದರು. ಪತ್ರಿಕೆಗೆ ಸಂಬಂಧ ಪಟ್ಟ ದಾಖಲೆ ಹಾಗೂ ಕಂಪ್ಯೂಟರ್ ಕದ್ದೊಯ್ದಿದ್ದಾರೆಂದು ಇಂದ್ರಜಿತ್ ದೂರು ದಾಖಲಿಸಿದ್ದರು. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸಿದ್ದರು. ತನಿಖೆ ಮುಗಿಸಿದ ನಂತರ ನ್ಯಾಯಾಧೀಶರ ಮುಂದೆ ಚಾರ್ಜ್ ಶೀಟ್ ಕೂಡ ಸಲ್ಲಿಸಿದ್ದರು. ಈ ವಿಚಾರದ ಬಗ್ಗೆ ಈಗ ಮತ್ತೆ ಮಾಹಿತಿ ಪಡೆಯಲು ಎಸ್‍ಐಟಿ ಟೀಂ ಮುಂದಾಗಿದ್ದಾರೆ. ಮಾಹಿತಿ ಪಡೆದ ಬಳಿಕ ಸಂಬಂಧ ಪಟ್ಟವರ ವಿಚಾರಣೆಗೆ ಸಿದ್ಧತೆ ನಡೆಸುತ್ತಿದ್ದಾರೆ.

    ಗೌರಿ ಲಂಕೇಶ್ ಫಾರ್ಮ್ ಹೌಸ್‍ನಲ್ಲೂ ಶೋಧ ನಡೆಸಿದ ಪೊಲೀಸರು ಅಲ್ಲಿದ್ದ ಇಬ್ಬರು ಕೆಲಸಗಾರರಿಂದ ಮಾಹಿತಿ ಪಡೆದುಕೊಂಡಿದ್ದಾರೆ. ಫಾರ್ಮ್ ಹೌಸ್ ಹಂಚಿಕೆ ವಿಚಾರವಾಗಿ ಗೌರಿ ಲಂಕೇಶ್ ಹಾಗೂ ಕುಟುಂಬಸ್ಥರ ನಡುವೆ ಅಸಮಾಧಾನ ಇತ್ತು. ಇದೇ ವಿಚಾರಕ್ಕೆ ಆಗಾಗ ಜಗಳವಾಡುತ್ತಿದ್ದರು ಎಂದು ಎಸ್‍ಐಟಿ ಗಮಕ್ಕೆ ತಂದಿದ್ದಾರೆ. ಕಳೆದ ಸೋಮವಾರ ವಿಶೇಷ ತಂಡ ಭೇಟಿ ನೀಡಿ ಶೋಧ ಕಾರ್ಯ ನಡೆಸಿದ್ದರು. ಗೌರಿ ಲಂಕೇಶ್ ಕಚೇರಿಯಲ್ಲೂ ಎಸ್‍ಐಟಿ ತಂಡ ಪರಿಶೀಲನೆ ನಡೆಸಿದರು. ಈ ವೇಳೆ ಮಹತ್ವದ ದಾಖಲೆಗಳಿರುವ ಗೌರಿ ಲಂಕೇಶ್‍ಗೆ ಸೇರಿದ ಲ್ಯಾಪ್‍ಟಾಪ್ ಹಾಗೂ ಎರಡು ಪೆನ್ ಡ್ರೈವ್ ಎಸ್‍ಐಟಿ ವಶಕ್ಕೆ ಪಡೆದಿದ್ದಾರೆ. ಗೌರಿ- ಇಂದ್ರಜಿತ್ ನಡುವಿನ ಹಳೆ ಜಗಳದ ಮಾಹಿತಿಯನ್ನು ಪಡೆದುಕೊಂಡಿದ್ದಾರೆ.

    ಗೌರಿ ಲಂಕೇಶ್ ಹತ್ಯೆ ಪ್ರಕರಣದ ಹಿನ್ನಲೆಯಲ್ಲಿ ಪ್ರಕರಣದ ತನಿಖೆಯಲ್ಲಿ ಅತಿದೊಡ್ಡ ವಿಶೇಷ ತಂಡವನ್ನು ರಚಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ 100 ಪೊಲೀಸ್ ಅಧಿಕಾರಿಗಳು ಭಾಗಿಯಾಗಿದ್ದಾರೆ. ಈ ಹಿಂದೆ ಕಲಬುರ್ಗಿ ಪ್ರಕರಣದಲ್ಲಿ 70 ಪೊಲೀಸರ ತಂಡ ಕಾರ್ಯಾಚರಣೆ ನಡೆಸಿತ್ತು. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಕೊಲೆ ಪ್ರಕರಣಕ್ಕೆ 100 ಮಂದಿ ಅಧಿಕಾರಿಗಳ ನಿಯೋಜನೆ ಆಗಿದ್ದಾರೆ.

  • ತಿರುಮಲದಲ್ಲಿ ವ್ಯಕ್ತಿಯಿಂದ ಪಿಸ್ತೂಲ್, 14 ಬುಲೆಟ್ ವಶ

    ತಿರುಮಲದಲ್ಲಿ ವ್ಯಕ್ತಿಯಿಂದ ಪಿಸ್ತೂಲ್, 14 ಬುಲೆಟ್ ವಶ

    ತಿರುಮಲ: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ತಿರುಮಲದಲ್ಲಿ ವ್ಯಕ್ತಿಯೊಬ್ಬರು ಕಾರಿನಲ್ಲಿದ್ದ ಪಿಸ್ತೂಲ್ ಹಾಗೂ 14 ಬುಲೆಟ್‍ಗಳನ್ನ ವಶಪಡಿಸಿಕೊಳ್ಳಲಾಗಿದೆ.

    ಇಲ್ಲಿನ ಅಲಿಪಿರಿ ಚೆಕ್‍ಪೋಸ್ಟ್ ಬಳಿ ತಪಾಸಣೆ ವೇಳೆ ಪುಣೆ ಮೂಲದ ವ್ಯಕ್ತಿ ಕಾರಿನಲ್ಲಿ ಪಿಸ್ತೂಲ್ ಹಾಗೂ ಬುಲೆಟ್ ಅಡಗಿಸಿಟ್ಟಿದ್ದು ಪತ್ತೆಯಾಗಿದೆ. ಚೆಕ್‍ಪೋಸ್ಟ್ ನ ಸೆಕ್ಯೂರಿಟಿ ಗಾರ್ಡ್‍ಗಳು ಪಿಸ್ತೂಲ್ ಹಾಗೂ ಬುಲೆಟ್‍ಗಳನ್ನು ವಶಪಡಿಸಿಕೊಂಡಿದ್ದಾರೆ.

    ತಿರುಪತಿ ವೆಂಕಟೇಶ್ವರ ಸನ್ನಿಧಿಯ ಪ್ರವೇಶ ದ್ವಾರದ ಬಳಿ ಈ ಚೆಕ್‍ಪೋಸ್ಟ್ ಇದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ವಿಚಾರಣೆಗಾಗಿ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ.

    ದೇವಾಲಯದ ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ.

  • ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ನಿವೃತ್ತ ಕರ್ನಲ್ ಮನೆ ಮೇಲೆ ಡಿಆರ್‍ಐ ದಾಳಿ: ಸಿಕ್ಕಿರುವ ವಸ್ತುಗಳನ್ನು ನೋಡಿದ್ರೆ ಶಾಕ್ ಆಗುತ್ತೆ

    ಮೀರತ್: ನಿವೃತ್ತ ಕರ್ನಲ್ ಮನೆಗೆ ಕಂದಾಯ ಗುಪ್ತಚರ ಮಹಾ ನಿರ್ದೇಶನಾಲಯ(ಡಿಆರ್‍ಐ) ದಾಳಿ ನಡೆಸಿ ಭಾರೀ ಪ್ರಮಾಣದ ಆಯುಧಗಳನ್ನು ವಶಪಡಿಸಿಕೊಂಡಿದೆ.

    ಶನಿವಾರ ಉತ್ತರಪ್ರದೇಶದ ಮೀರತ್ ನಲ್ಲಿರುವ ನಿವೃತ್ತ ಕರ್ನಲ್ ದೇವೇಂದ್ರ ಸಿಂಗ್ ನಿವಾಸದ ಮೇಲೆ ಡಿಆರ್‍ಐ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ದಾಳಿ ವೇಳೆ 40 ರೈಫಲ್, 50 ಸಾವಿರ ಮದ್ದುಗುಂಡುಗಳು, ಪಿಸ್ತೂಲ್, 1 ಕೋಟಿ ರೂ. ನಗದು ಹಣ ಸಿಕ್ಕಿದೆ.

    16 ಗಂಟೆಗಳ ಪರಿಶೀಲನೆಯಲ್ಲಿ ಕಂಟೈನರ್‍ನಲ್ಲಿ ತುಂಬಿದ್ದ 117 ಕೆಜಿ ಮಾಂಸ, ಪ್ರಾಣಿಗಳ ತಲೆಬುರಡೆಗಳು, ಕೊಂಬುಗಳು, ಚರ್ಮಗಳು ಸಿಕ್ಕಿವೆ.

    ಬೆಳಗ್ಗೆ ದಾಳಿ ನಡೆಸಿದ್ದು, ಈ ವೇಳೆ ವಿದೇಶಿ ರೈಫಲ್ ಗಳು ಸಿಕ್ಕಿದೆ. ಈ ರೈಫಲ್‍ಗಳಿಗೆ ಯಾವುದೇ ಲೈಸನ್ಸ್ ಇಲ್ಲ. ಇದೇ ವೇಳೆ ಮಗನಾಗಿರುವ ರಾಷ್ಟ್ರಮಟ್ಟದ ಶೂಟರ್ ಪ್ರಶಾಂತ್ ಬಿಶ್ನೋಯಿ ಬಗ್ಗೆ ವಿಚಾರಿಸಿದ್ದು, ದೇವೇಂದ್ರ ಸಿಂಗ್ ಯಾವುದೇ ಮಾಹಿತಿ ನೀಡಿಲ್ಲ. ಆತ ದಾಳಿ ನಡೆದ ಬಳಿಕ ನಾಪತ್ತೆಯಾಗಿದ್ದಾನೆ ಎಂದು ಅಧಿಕಾರಿ ಮನೋಜ್ ಕುಮಾರ್ ತಿಳಿಸಿದ್ದಾರೆ.

    ಇಲ್ಲಿಯವರೆಗೆ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನು ಬಂಧಿಸಿಲ್ಲ. ದಾಳಿ ನಡೆಯುವ ಕೆಲವೇ ಕ್ಷಣಗಳ ಮೊದಲು ಪ್ರಶಾಂತ್ ಬಿಶ್ನೋಯಿ ಮನೆಯಿಂದ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಪೊಲೀಸರು ಶೋಧ ಕಾರ್ಯ ಆರಂಭಿಸಿದ್ದಾರೆ.

  • ಮತಗಟ್ಟೆಗೆ ಪಿಸ್ತೂಲ್ ತಗೊಂಡೋದ ಬಿಜೆಪಿ ಅಭ್ಯರ್ಥಿ ಸಹೋದರ ವಶಕ್ಕೆ

    ಲಕ್ನೋ: ಉತ್ತರ ಪ್ರದೇಶದಲ್ಲಿ ಇಂದು ಬೆಳಗ್ಗಿನಿಂದಲೇ ಮೊದಲ ಹಂತದ ಮತದಾನ ನಡೆಯುತ್ತಿದ್ದು, ಮತಗಟ್ಟೆಗೆ ಪಿಸ್ತೂಲ್ ತೆಗೆದುಕೊಂಡು ಹೋದ ಬಿಜೆಪಿ ಮುಖಂಡ ಸಂಗೀತಾ ಸೋಮ್ ಸಹೋದರನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

    ಗಗನ್ ಸೋಮ್ ಇದೀಗ ಪೊಲೀಸರ ವಶದಲ್ಲಿದ್ದು, ಇವರು ಸಾರ್ಧನ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಮತದಾನದ ಹಿನ್ನೆಲೆಯಲ್ಲಿ ಮತಗಟ್ಟೆಯ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಈ ಮಧ್ಯೆಯೂ ಮೀರತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಂಗೀತ್ ಸೋಮ್ ಸಹೋದರ ಗಗನ್ ಸೋಮ್ ಪಿಸ್ತೂಲ್‍ನೊಂದಿಗೆ ಮತಗಟ್ಟೆ ಪ್ರವೇಶಿಸಿದ್ದರು. ಕೂಡಲೇ ಮಾಹಿತಿ ಪಡೆದ ಪೊಲೀಸರು ಗಗನ್ ಸೋಮ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    ಪ್ರಕರಣ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಮೊದಲ ಹಂತದ ಮತದಾನದಲ್ಲಿ ಇಂದು 73 ವಿಧಾನಸಭಾ ಕ್ಷೇತ್ರಗಳಲ್ಲಿ 2.6 ಕೋಟಿಗೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. ಮುಂದಿನ 6 ಹಂತದ ಮತದಾನ ಫೆಬ್ರವರಿ 15, 19, 23 ಹಾಗೂ 27 ಮತ್ತು ಮಾರ್ಚ್ 4 ಹಾಗೂ 8ರಂದು ನಡೆಯಲಿದೆ.

  • ರಾಜ್ಯದಲ್ಲಿ ನಡೆಯಬಹುದಾಗಿದ್ದ ಗ್ಯಾಂಗ್‍ವಾರ್‍ಗೆ ಶಿವಮೊಗ್ಗ ಪೊಲೀಸರಿಂದ ಫುಲ್‍ಸ್ಟಾಪ್!

    ಶಿವಮೊಗ್ಗ: ರಾಜ್ಯದಲ್ಲಿ ನಡೆಯಬಹುದಾಗಿದ್ದ ಗ್ಯಾಂಗ್ ವಾರ್ ಗೆ ಪೊಲೀಸರು ಕಡಿವಾಣ ಹಾಕಿದ್ದಾರೆ. ಬೆಂಗಳೂರಿನಲ್ಲಿರುವ ರೌಡಿ ಶೀಟರ್ ಕೊರಂಗು ಕೃಷ್ಣನ ಹತ್ಯೆಗೆ ಸವಿದೇಶದಲ್ಲಿ ಭೂಗತನಾಗಿರುವ ಹೆಬ್ಬೆಟ್ಟು ಮಂಜ ರೂಪಿಸಿದ ಈ ಸಂಚನ್ನು ಶಿವಮೊಗ್ಗ ಪೊಲೀಸರು ವಿಫಲಗೊಳಿಸಿದ್ದಾರೆ.

    ಹೆಬ್ಬೆಟ್ಟು ಮಂಜನ ತನ್ನ ಸಹಚರ ಅಂಬರೀಶ್ ಎಂಬಾತನ ಮೂಲಕ ಶಿವಮೊಗ್ಗದಲ್ಲಿ ಇರುವ ಸಹಪಾಠಿ ಅಶ್ರಫ್ ಗೆ ಒಂದು ಪಿಸ್ತೂಲ್ ತಲುಪಿಸಿದ್ದ. ಅಲ್ಲದೆ ಈತನಿಂದಲೇ ಒರಿಸ್ಸಾದ ಬೆಹರಾಂಪುರದಿಂದ ಐದು ಪಿಸ್ತೂಲ್ ತರಿಸಿದ್ದ. ಒಟ್ಟು ಆರು ಪಿಸ್ತೂಲ್ ತಲುಪಿಸಿ, ನಾ ಹೇಳುವವರೆಗೂ ನಿನ್ನ ಬಳಿಯೇ ಇರಲಿ, ಬೆಂಗಳೂರಿನಿಂದ ನನ್ನ ಕಡೆಯವರು ಬಂದು ತೆಗೆದುಕೊಂಡು ಹೋಗುತ್ತಾರೆ ಎಂದು ಹೇಳಿದ್ದ.

    ಬೇರೆಬೇರೆ ವ್ಯವಹಾರ ಮಾಡಿ, ನಷ್ಟದಲ್ಲಿದ್ದ ಆಶ್ರಫ್ ಈ ಪಿಸ್ತೂಲ್ ಗಳನ್ನು ಮಾರಾಟ ಮಾಡಲು ಮುಂದಾದ. ಇದಕ್ಕಾಗಿ ಸ್ನೇಹಿತ ನದೀಮ್ ಎಂಬಾತನ ನೆರವು ಪಡೆದ. ಇವುಗಳಲ್ಲಿ ಎರಡು ಪಿಸ್ತೂಲ್ ಗಳನ್ನು ಮಂಡಗದ್ದೆ ಬಳಿ ಲಿಂಗಾಪುರದ ಮಥಾಯ್ ಎಂಬಾತನಿಗೆ ಮಾರಿದ್ದ. ಆದರೆ ಗುಂಡುಗಳನ್ನು ಕೊಟ್ಟಿರಲಿಲ್ಲ. ಕಳೆದ ವಾರ ಗುಂಡು ಕೊಡಲು ಹಾಗೂ ಉಳಿದ ಪಿಸ್ತೂಲ್ ಗಳ ಮಾರಾಟಕ್ಕೆ ಮುಂದಾದಾಗ ಶಿವಮೊಗ್ಗ ಪೊಲೀಸರ ಕೈಗೆ ಸಿಕ್ಕು ಬಿದ್ದಿದ್ದಾರೆ. ಪೊಲೀಸರು ನಾಲ್ಕು ಪಿಸ್ತೂಲ್ ಹಾಗೂ 48 ರೌಂಡ್ಸ್ ವಶ ಪಡಿಸಿಕೊಂಡಿದ್ದಾರೆ.

    ಇವುಗಳಲ್ಲಿ ಮೂರು ಪಿಸ್ತೂಲ್ ವಿದೇಶಿ ಕಂಪನಿಯವು. ಒಂದು ದೇಶಿ. ಈ ಮುಂಚೆಯೇ ಮಾರಾಟ ಮಾಡಿದ್ದ ಎರಡು ಪಿಸ್ತೂಲ್ ಸಮೇತ ನಾಪತ್ತೆ ಆಗಿರುವ 5 ಮಂದಿ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.