Tag: ಪಿ.ಸಿ.ಶೇಖರ್

  • ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ರೋಮಿಯೋ ಚಿತ್ರ ನಿರ್ದೇಶಕನ ಸಿನಿಮಾಗೆ ವಿಜಯ ರಾಘವೇಂದ್ರ ಹೀರೋ

    ಕಾಶ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಪ್ರಕಾಶ್ ಸಿದ್ದಪ್ಪ (Prakash Siddappa) ನಿರ್ಮಿಸುತ್ತಿರುವ ಹೊಸ ಚಿತ್ರವನ್ನು ರೋಮಿಯೋ, ರಾಗ ಸೇರಿದಂತೆ ಹಲವು ಸೂಪರ್ ಹಿಟ್ ಚಿತ್ರಗಳ ನಿರ್ದೇಶಕ ಪಿ.ಸಿ.ಶೇಖರ್ (P. C. Shekhar) ನಿರ್ದೇಶಿಸುತ್ತಿದ್ದಾರೆ. ತಮ್ಮ ನಟನೆಯಿಂದಲೇ ಜನಪ್ರಿಯರಾಗಿರುವ ವಿಜಯ ರಾಘವೇಂದ್ರ (Vijaya Raghavendra) ಈ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ಪ್ರಕಾಶ್, “ರೈತರ ಕುರಿತ ವಿಷಯ ನನ್ನ ಹೃದಯಕ್ಕೆ ತುಂಬಾ ಹತ್ತಿರವಾಗಿದೆ” ಮತ್ತು ಪಿ.ಸಿ. ಶೇಖರ್ ಅಲಯನ್ಸ್ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಯಾಗಿದ್ದರು. ಈಗ ಅವರು ಅಲಯನ್ಸ್ ಯೂನಿವರ್ಸಿಟಿಯ ಫಿಲ್ಮ್ ಮೇಕಿಂಗ್ ಕೋರ್ಸ್‌ನ ಸಹಯೋಗದಲ್ಲಿ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಮೊದಲ ಚಿತ್ರವನ್ನು ನಿರ್ದೇಶಿಸುತ್ತಿರುವುದು ಸಂತೋಷದ ಸಂಗತಿ. ಅಲಯನ್ಸ್‌ನಲ್ಲಿ ಕಲಿತು ಈಗ ಬೇರೆ ಬೇರೆ ಉದ್ಯೋಗದಲ್ಲಿರುವ ಹಳೆ ವಿದ್ಯಾರ್ಥಿಗಳು ಚಿತ್ರ ನಿರ್ಮಾಣದಲ್ಲಿ ನಮ್ಮೊಂದಿಗಿದ್ದಾರೆ. ಸದ್ಯದಲ್ಲೇ ಚಿತ್ರೀಕರಣ ಆರಂಭಿಸುವ ಪ್ರಯತ್ನ ನಡೆಯುತ್ತಿದೆ. ಚಿತ್ರದಲ್ಲಿ ವಿಜಯ ರಾಘವೇಂದ್ರ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ಉಳಿದ ಕಲಾವಿದರು ಮತ್ತು ತಂತ್ರಜ್ಞರ ಕುರಿತು ಮುಂದಿನ ದಿನಗಳಲ್ಲಿ ಹೆಚ್ಚಿನ ಮಾಹಿತಿ ನೀಡಲಾಗುವುದು.

    ಅಲಯನ್ಸ್ ಯೂನಿವರ್ಸಿಟಿಯ ಚಲನಚಿತ್ರ ನಿರ್ಮಾಣ ಮತ್ತು ಮಾಧ್ಯಮ ಅಧ್ಯಯನದ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡುತ್ತಿರುವ ಆಕಾಶ ಪಿಕ್ಚರ್ಸ್ ಬ್ಯಾನರ್‌ನಡಿಯಲ್ಲಿ ಚಲನಚಿತ್ರವನ್ನು ನಿರ್ದೇಶಿಸುವುದಕ್ಕಿಂತ ಹೆಚ್ಚಿನ ಖುಷಿ ಏನಿದೆ. ಈ ಅವಕಾಶಕ್ಕಾಗಿ ಪ್ರಕಾಶ್ ಅವರಿಗೆ ಧನ್ಯವಾದಗಳು. ಇದನ್ನು ಗುರು-ಶಿಷ್ಯ ಸಂಬಂಧ ಎನ್ನುತ್ತಾರೆ.

    ಇನ್ನು ಈ ಸಿನಿಮಾದ ಬಗ್ಗೆ ಮಾತನಾಡೋಣ, ಇದು ರೈತನ ಕುರಿತ ಸಿನಿಮಾ. ಬಹುತೇಕ ಚಿತ್ರೀಕರಣ ಹಳ್ಳಿಯಲ್ಲಿಯೇ ನಡೆಯಲಿದೆ. ರೈತ ಮತ್ತು ಸಾರ್ವಜನಿಕರ ನಡುವಿನ ಸಂಬಂಧದ ಜೊತೆಗೆ ದೇಶಕ್ಕೆ ರೈತನ ಮಹತ್ವವನ್ನು ತೋರಿಸುವ ಪ್ರಯತ್ನವನ್ನು ಈ ಚಿತ್ರದಲ್ಲಿ ಮಾಡಲಾಗುವುದು. ಈ ಚಿತ್ರಕ್ಕೆ ನಾನೇ ಕಥೆ, ಚಿತ್ರಕಥೆ ಬರೆದಿದ್ದೇನೆ. ಕಥೆ ಬರೆಯುವಾಗ ವಿಜಯ ರಾಘವೇಂದ್ರರನ್ನು ಗಮನದಲ್ಲಿಟ್ಟುಕೊಂಡು ಕಥೆ ಬರೆದಿದ್ದೆ. ಅವರಿಗೆ ಕಥೆ ಹೇಳಿದಾಗ ಅವರು ಇಷ್ಟಪಟ್ಟು ನಟಿಸಲು ಒಪ್ಪಿದ್ದು ತುಂಬಾ ಖುಷಿ ತಂದಿದೆ. ಚಿತ್ರವು ಅದ್ದೂರಿ ತಾರಾಗಣ ಮತ್ತು ತಾಂತ್ರಿಕ ಸಿಬ್ಬಂದಿಯನ್ನು ಹೊಂದಿದೆ.  ಇಷ್ಟು ವರ್ಷಗಳ ನನ್ನ ಸಿನಿ ಪಯಣದಲ್ಲಿ ಇದೊಂದು ವಿಭಿನ್ನ ಶೈಲಿಯ ಸಿನಿಮಾ. ಇದು ನನ್ನ ಹೃದಯಕ್ಕೆ ಹತ್ತಿರವಾದ ಚಿತ್ರವಾಗಿದ್ದು, ತುಂಬಾ ಪ್ರೀತಿಯಿಂದ ಮಾಡಲಾಗುತ್ತಿದೆ ಎನ್ನುತ್ತಾರೆ ನಿರ್ದೇಶಕ ಪಿ.ಸಿ.ಶೇಖರ್.

    ನಿರ್ದೇಶಕ ಪಿ.ಸಿ.ಶೇಖರ್ ಬಂದು ಈ ಚಿತ್ರದ ಕಥೆ ಹೇಳಿದಾಗ ಕಥೆ ಕೇಳಿ ತುಂಬಾ ಖುಷಿಯಾಯಿತು. ಅನ್ನದಾತ ರೈತನ ಕುರಿತಾದ ಈ ಚಿತ್ರದ ನಾಯಕನನ್ನಾಗಿ ಆಯ್ಕೆ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್ ಹಾಗೂ ನಿರ್ಮಾಪಕ ಪ್ರಕಾಶ್ ಸಿದ್ದಪ್ಪ ಅವರಿಗೆ ಧನ್ಯವಾದಗಳು. ಪಿ.ಸಿ.ಶೇಖರ್ ನಿರ್ದೇಶನದ ನನ್ನ ಮೊದಲ ಸಿನಿಮಾ ಇದು ಎನ್ನುತ್ತಾರೆ ನಟ ವಿಜಯ ರಾಘವೇಂದ್ರ.

  • ಜ.12ರಂದು ಪಿ.ಸಿ.ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರದ ಟ್ರೈಲರ್ ರಿಲೀಸ್

    ಜ.12ರಂದು ಪಿ.ಸಿ.ಶೇಖರ್ ನಿರ್ದೇಶನದ ‘ಬ್ಯಾಡ್’ ಚಿತ್ರದ ಟ್ರೈಲರ್ ರಿಲೀಸ್

    ಎಸ್.ಆರ್.ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ ‘BAD’ ಚಿತ್ರದ ಟ್ರೈಲರ್ ಜನವರಿ 12 ರಂದು ಬಿಡುಗಡೆಯಾಗಲಿದೆ. ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ ಚಿತ್ರದ ಟ್ರೈಲರ್ (Trailer) ನಲ್ಲಿ ಏನೆಲ್ಲಾ ಇರಬಹುದು? ಎಂಬುದನ್ನು ತಿಳಿಸಲು ಚಿತ್ರತಂಡ ಪ್ರೋಮೊ ಬಿಡುಗಡೆ ಮಾಡಿದೆ.

    ಈ ಪ್ರೋಮೊದಲ್ಲಿ ನಿರ್ದೇಶಕರಾದ ಪಿ.ಸಿ.ಶೇಖರ್ ಹಾಗೂ ನಾಯಕರಾದ ನಕುಲ್ ಗೌಡ ಸುಂದರವಾದ ನಿರೂಪಣೆಯಲ್ಲಿ ಚಿತ್ರದ ಟ್ರೈಲರ್ ನ ವೈಶಿಷ್ಟ್ಯತೆ  ಹಾಗು ತಾಂತ್ರಿಕ ವಿಭಿನ್ನತೆಯ ಮಾಹಿತಿ ನೀಡಿದ್ದಾರೆ‌. ಈ ಪ್ರೋಮೊ ನೋಡಿದ ಮೇಲೆ ಚಿತ್ರದ ಬಗ್ಗೆ ಹಾಗೂ ಬಿಡುಗಡೆಯಾಗಲಿರುವ ಟ್ರೈಲರ್ ಬಗ್ಗೆ ಮತ್ತಷ್ಟು ನಿರೀಕ್ಷೆ ಹೆಚ್ಚಿಸಿದೆ.

    ಅರ್ಜುನ್ ಜನ್ಯ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಪಿ.ಸಿ.ಶೇಖರ್ (PC Shekhar) ಸಂಕಲನ,  ಜಿ.ರಾಜಶೇಖರ್ ಕಲಾ ನಿರ್ದೇಶನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿದೆ‌. ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ.  ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ  ನಕುಲ್ ಗೌಡ (Nakul Gowda) ಚಿತ್ರದ ನಾಯಕನಾಗಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಲ್ಲಿ ಆರು ಜನ ಕಲಾವಿದರು ಅಭಿನಯಿಸಿರುವುದು ಈ ಚಿತ್ರದ ವಿಶೇಷ.

  • ‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

    ‘BAD’ ಸಿನಿಮಾದಲ್ಲಿ ಪ್ರೀತಿಯ ಪ್ರತಿನಿಧಿಯಾದ ಅಪೂರ್ವ ಭಾರದ್ವಾಜ್

    ಸಾಕಷ್ಟು ಜನಪ್ರಿಯ ಧಾರಾವಾಹಿಗಳು ಹಾಗೂ ಇತ್ತೀಚೆಗೆ ತೆರೆಕಂಡ ‘ನಾನು, ಅದು ಮತ್ತು ಸರೋಜ’ ಚಿತ್ರದಲ್ಲಿ ಅಭಿನಯಿಸಿರುವ ನಟಿ ಅಪೂರ್ವ ಭಾರದ್ವಾಜ್ (Apoorva Bhardwaj) ಇದೀಗ ಪಿ.ಸಿ.ಶೇಖರ್ (PC Shekhar) ನಿರ್ದೇಶನದ ‘BAD’ ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

    ಈ ಚಿತ್ರದಲ್ಲಿ ಕಾಮ, ಕ್ರೋಧ ಮೊದಲಾದ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳಿವೆ ಎಂದು ಮೊದಲೆ ತಿಳಿಸಲಾಗಿತ್ತು. ಆ ಪೈಕಿ ಕಾಮ ಎಂಬ‌ ವರ್ಗವನ್ನು ಅನು ಎಂಬ ಪಾತ್ರದ ಮೂಲಕ ತೋರಿಸಲಾಗುತ್ತಿದೆ. ಈ ಪಾತ್ರದಲ್ಲಿ  ಅಪೂರ್ವ ಭಾರದ್ವಾಜ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದಲ್ಲಿ ಕಾಮವನ್ನು ಪ್ರೀತಿಗೆ ಬದಲಾಯಿಸಿ ತೋರಿಸಲಾಗುತ್ತಿದೆ. ಇದನ್ನೂ ಓದಿ:ತಮಿಳು ‘ಜೈಲರ್’ ವಿರುದ್ದ ಮಲಯಾಳಂ ‘ಜೈಲರ್’ ರಿಲೀಸ್: ರಜನಿ ಸಿನಿಮಾಗೆ ಟಕ್ಕರ್

    ಚಿಕ್ಕವಯಸ್ಸಿನಲ್ಲೇ ತಾಯಿಯನ್ನು ಕಳೆದುಕೊಂಡು, ತಂದೆಯ ಆಸರೆಯಲ್ಲಿ ಬೆಳೆದ ಹುಡುಗಿ ಅನು.  ತಾಯಿ ಪ್ರೀತಿ ಕಾಣದ ಈ ಹುಡುಗಿಗೆ ಯಾರ ಬಳಿ ಹೇಗೆ ಪ್ರೀತಿ ವ್ಯಕ್ತಪಡಿಸಬೇಕೆಂದು ತಿಳಿದಿರುವುದಿಲ್ಲ. ಈ ಪಾತ್ರಕ್ಕೆ ಮಾತು ಕಡಿಮೆ. ಕಣ್ಣಿನಲ್ಲೇ ಭಾವನೆಗಳನ್ನು ಹೇಳುವ ಹಾಗೂ ಗುಂಗುರು ಕೂದಲುಳ್ಳ ಸಹಜ ಸುಂದರಿಯಂತೆ ಕಾಣುವ ಪಾತ್ರವಿದು.‌ ಹಾಗಾಗಿ ಅಪೂರ್ವ ಅವರ ಹಿಂದಿನ ಧಾರಾವಾಹಿ ಹಾಗೂ ಚಿತ್ರಗಳನ್ನು ನೋಡಿ, ಈ ಪಾತ್ರಕ್ಕೆ ಇವರೆ ಸರಿ ಹೊಂದುತ್ತಾರೆ ಎಂದು ಅಪೂರ್ವ ಅವರನ್ನು ಆಯ್ಕೆ ಮಾಡಿಕೊಂಡಿರುವುದಾಗಿ ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ.

    ಅಪೂರ್ವ ಅವರು ಬಹಳ ಅದ್ಭುತವಾಗಿ ಅಭಿನಯಿಸಿದ್ದಾರೆ ಹಾಗೂ ಚಿತ್ರದಲ್ಲಿ ಅವರ ಪಾತ್ರ ಬರುವ ಕಡೆಯೆಲ್ಲಾ ಪಿಂಕ್(ಗುಲಾಬಿ ಬಣ್ಣ) ಶೇಡ್ ನಲ್ಲಿ ಚಿತ್ರಿಸಲಾಗಿದೆ ಎನ್ನುತ್ತಾರೆ ನಿರ್ದೇಶಕರು. ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

    ಪ್ರೀತಿಯ ರಾಯಭಾರಿ ಚಿತ್ರದ ಮೂಲಕ ಜನರ ಮನಗೆದ್ದಿರುವ  ನಕುಲ್ ಗೌಡ (Nakul Gowda) ಈ  ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್, ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘BAD’ ಹುಡುಗಿ ಜೊತೆಗೆ ‘ಬೋಲ್ಡ್’ ಹುಡುಗಿಯೂ ಹೌದು ಮಾನ್ವಿತಾ

    ‘BAD’ ಹುಡುಗಿ ಜೊತೆಗೆ ‘ಬೋಲ್ಡ್’ ಹುಡುಗಿಯೂ ಹೌದು ಮಾನ್ವಿತಾ

    ಗರು ಸೇರಿದಂತೆ ಅನೇಕ ಚಿತ್ರಗಳಲ್ಲಿ ತಮ್ಮ ಅಮೋಘ ಅಭಿನಯದ ಮೂಲಕ ಜನಪ್ರಿಯರಾಗಿರುವ ಮಾನ್ವಿತ ಕಾಮತ್ (Manvita Kamat), ಪ್ರಸ್ತುತ ಪಿ.ಸಿ ಶೇಖರ್ (PC Shekhar) ನಿರ್ದೇಶನದ ‘BAD ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈಗಾಗಲೇ ಈ  ಚಿತ್ರ ಫಸ್ಟ್ ಲುಕ್ ಮೂಲಕ ಜನರ ಮನ ಗೆದ್ದಿದೆ. ಪ್ರಮುಖ ಪಾತ್ರಧಾರಿ ನಕುಲ್ ಗೌಡ ಅವರ ಲುಕ್ ಗೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಮಾನ್ವಿತ ಕಾಮತ್ ಅವರ ಪಾತ್ರದ ಕುರಿತು ಮಾತನಾಡುವ ನಿರ್ದೇಶಕ ಪಿ.ಸಿ.ಶೇಖರ್, ಈ ಚಿತ್ರದಲ್ಲಿ ಮಾನ್ವಿತ ಅವರ ಪಾತ್ರದ ಹೆಸರು ಪವಿತ್ರ(ಪವಿ). ತುಂಬಾ ಬೋಲ್ಡ್ ಕ್ಯಾರೆಕ್ಟರ್ ಅವರದು. ವಿಲೇಜ್ ಬ್ಯಾಕ್ ಡ್ರಾಪ್ ನಲ್ಲಿ ಅವರ ಸ್ಟೋರಿ ಸಾಗುತ್ತಾ ಹೋಗುತ್ತದೆ. ನಾನು ಮುಂಚೆ ತಿಳಿಸಿದ ಹಾಗೆ ಕಾಮ, ಕ್ರೋಧ ಸೇರಿದಂತೆ ಅರಿಷಡ್ವರ್ಗಗಳನ್ನು ಪ್ರತಿನಿಧಿಸುವ ಆರು ಪಾತ್ರಗಳು ನಮ್ಮ‌ ಚಿತ್ರದಲ್ಲಿದೆ. ಈ ಆರು ಪಾತ್ರಗಳಲ್ಲದೆ ಇನ್ನೊಂದು ಪಾತ್ರ ಕೂಡ ಇದೆ ಎಂದು. ಆ ಪಾತ್ರದಲ್ಲಿ ಮಾನ್ವಿತ ಅಭಿನಯಿಸುತ್ತಿದ್ದಾರೆ ಎಂದರು.

    ನನಗೆ ಈ ಚಿತ್ರದ ಪಾತ್ರ ಬಹಳ ಇಷ್ಟವಾಯಿತು. ಪವಿತ್ರ ನನ್ನ ಪಾತ್ರದ ಹೆಸರು. ಯಾವುದಕ್ಕೂ ಅಂಜದ, ಬೋಲ್ಡ್ ಹುಡುಗಿಯ ಪಾತ್ರ ನನ್ನದು. ಈ ಹಿಂದೆ ನಿರ್ದೇಶಕ ಸೂರಿ ಅವರು ಕಾಸ್ಟ್ಯೂಮ್ಸ್ ಇದೇ ರೀತಿ ಇರಬೇಕು ಎಂದು ಆಸಕ್ತಿ ತೋರಿಸುತ್ತಿದ್ದರು. ಅದೇ ರೀತಿ ಪಿ.ಸಿ.ಶೇಖರ್ ಅವರು ಕೂಡ ಕಾಸ್ಟ್ಯೂಮ್ಸ್ ಗೆ ಹೆಚ್ಚು ಒತ್ತು ಕೊಟ್ಟಿದ್ದಾರೆ. ನಾನು ಈವರೆಗೂ ಮಾಡಿರದ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತದ್ದೇನೆ ಎಂದು ನಟಿ ಮಾನ್ವಿತ ಕಾಮತ್ ತಿಳಿಸಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ ರಾಧಿಕಾ ರಾವ್

    ಎಸ್ ಆರ್ ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ “BAD” ಚಿತ್ರಕ್ಕಿದೆ.

    ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ (Nakul Gowda), ಮಾನ್ವಿತ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘BAD’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

    ‘BAD’ ಸಿನಿಮಾದ ಫಸ್ಟ್ ಲುಕ್ ರಿಲೀಸ್ ಮಾಡಿದ ಗಣೇಶ್

    ಪಿ.ಸಿ ಶೇಖರ್ ನಿರ್ದೇಶನದ ಹತ್ತನೇ ಚಿತ್ರ ಹಾಗೂ ನಕುಲ್ ಗೌಡ (ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯಭೂಮಿಕೆಯಲ್ಲಿ ಅಭಿನಯಿಸುತ್ತಿರುವ ‘BAD’ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಗೋಲ್ಡನ್ ಸ್ಟಾರ್ ಗಣೇಶ್  (Ganesh) ಫಸ್ಟ್ ಲುಕ್ (First Look) ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.

    ಇದು ನಾಯಕ ಪ್ರಧಾನ ಚಿತ್ರವಲ್ಲ‌‌. ಏಳು ಮುಖ್ಯಪಾತ್ರಗಳಿವೆ.  ಮನುಷ್ಯನಲ್ಲಿ ಕಾಮ, ಕ್ರೋಧ, ಲೋಭ, ಮೋಹ, ಮದ, ಮಾತ್ಸರ್ಯವೆಂಬ  ಅರಿಷಡ್ವರ್ಗಗಳಿರುತ್ತದೆ. ಈ ಆರು ಅರಿಷಡ್ವರ್ಗಗಳನ್ನು ಚಿತ್ರದ ಆರು ಪಾತ್ರಗಳು ಪ್ರತಿನಿಧಿಸುತ್ತದೆ. ಆ ಪೈಕಿ ಕ್ರೋಧವನ್ನು ಪ್ರತಿನಿಧಿಸುತ್ತಿರುವ ನಕುಲ್ ಗೌಡ ಅವರ ಫಸ್ಟ್ ಲುಕ್ ಪೋಸ್ಟರ್ ಇಂದು ಬಿಡುಗಡೆಯಾಗಿದೆ.

    ಸಾಮಾನ್ಯವಾಗಿ ಕ್ರೋಧವನ್ನು ಕಿರಿಚುವುದು, ಅರಚುವುದು ಮುಂತಾದ ವಿಚಿತ್ರ ರೀತಿಗಳಿಂದ ತೋರಿಸುತ್ತಾರೆ. ನಾವು ಮುಖದ ಹಾವಭಾವದಲ್ಲಿ ಕ್ರೋಧವನ್ನು ತೋರಿಸುವ ಪ್ರಯತ್ನ ಮಾಡಿದ್ದೇವೆ. ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ ಎಂದು ನಿರ್ದೇಶಕ ಪಿ.ಸಿ.ಶೇಖರ್ ತಿಳಿಸಿದ್ದಾರೆ. ಇದನ್ನೂ ಓದಿ:‘ಕೆಡಿ’ ಸಿನಿಮಾದಲ್ಲಿ ಧ್ರುವ ಸರ್ಜಾ: ರೆಟ್ರೋ ಲುಕ್ ಫೋಟೋ ಲೀಕ್

    ಇದೊಂದು ವಿಭಿನ್ನ ಕಥೆಯ ಚಿತ್ರ ಎಂದು ತಿಳಿಸಿರುವ ಮುಖ್ಯ ಪಾತ್ರಧಾರಿ ನಕುಲ್, ನನ್ನದು ಈ ಚಿತ್ರದಲ್ಲಿ ಕ್ರೋಧವನ್ನು ಪ್ರತಿನಿಧಿಸುವ ಪಾತ್ರ. ಕ್ರೋಧವನ್ನು ಚಿತ್ರದಲ್ಲಿ ಭೀಕರವಾಗಿ ತೋರಿಸಿಲ್ಲ. ನಿರ್ದೇಶಕ ಪಿ‌.ಸಿ.ಶೇಖರ್ (PC Shekhar) ಉತ್ತಮವಾದ ಕಥೆ ಮಾಡಿದ್ದಾರೆ. ಚಿತ್ರಕಥೆ ಚಿತ್ರದ ಹೈಲೆಟ್ ಎಂದರೆ ತಪ್ಪಾಗಲಾರದು. ಬಹುತೇಕ ಭಾಗದ ಚಿತ್ರೀಕರಣ ಸೆಟ್ ನಲ್ಲೇ ನಡೆದಿರುವುದು ವಿಶೇಷ ಎನ್ನುತ್ತಾರೆ.

    ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ BAD ಚಿತ್ರದಲ್ಲಿ   ರೋಷಮಾನ್ ಎಫೆಕ್ಟ್ ಎಂಬ ವಿಶೇಷ ವಿಧಾನವನ್ನು ಬಳಸಿಕೊಳ್ಳಲಾಗಿದೆ‌.  ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಪಿ.ಸಿ.ಶೇಖರ್ ಸಂಕಲನ ಹಾಗೂ ಶಕ್ತಿ ಶೇಖರ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ   ಸಚಿನ್ ಬಿ ಹೊಳಗುಂಡಿ  ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನ ಚಿತ್ರಕ್ಕಿದೆ.

    ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ (Nakul Gowda), ಮಾನ್ವಿತ ಹರೀಶ್ (Manvita Harish), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಲನ್ ಇಟ್ಟುಕೊಂಡು ‘BAD’ ಸಿನಿಮಾ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

    ವಿಲನ್ ಇಟ್ಟುಕೊಂಡು ‘BAD’ ಸಿನಿಮಾ ಮಾಡಿದ ನಿರ್ದೇಶಕ ಪಿ.ಸಿ.ಶೇಖರ್

    ರೋಮಿಯೋ ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ ಶೇಖರ್(P.C. Shekhar) ನಿರ್ದೇಶನದಲ್ಲಿ ನಕುಲ್ ಗೌಡ (Nakul Gowda) (ಪ್ರೀತಿಯ ರಾಯಭಾರಿ ಖ್ಯಾತಿ) ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರ ‘BAD’. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದ ಈ ಚಿತ್ರ ಕನ್ನಡದಲ್ಲಿ ವಿಭಿನ್ನ ಪ್ರಯತ್ನ ಎನ್ನಬಹುದು.

    ಈ ಚಿತ್ರಕ್ಕೆ  BAD ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೆ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. ರೋಷಮಾನ್ ಎಫೆಕ್ಟ್ ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ‌. ಜಪಾನ್ ನಿರ್ದೇಶಕರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಎನ್ನಬಹುದು. ಇದನ್ನೂ ಓದಿ:ಅಮ್ಮು ಜೊತೆಗಿನ ಮದುವೆ ಬಗ್ಗೆ ರಾಕೇಶ್ ಅಡಿಗ ಸ್ಪಷ್ಟನೆ

    ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಬತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ.  ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ ರಾಗ ಹಾಗೂ ದಿ ಟೆರರಿಸ್ಟ್ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ ಎನ್ನುತ್ತಾರೆ ಶೇಖರ್.

    ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರೆ ಅಭಿನಯಿಸುತ್ತಿದ್ದಾರೆ ಎನ್ನುವುದು ನಿರ್ದೇಶಕರ ಮಾತು.

     

    ಪ್ರೀತಿಯ ರಾಯಭಾರಿ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತ ಹರೀಶ್ (Manvita Harish), ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ‌. ಶಕ್ತಿ ಶೇಖರ್ ಈ ಚಿತ್ರದ ಛಾಯಾಗ್ರಾಹಕರು ಎಂದು ನಿರ್ದೇಶಕ ಪಿ.ಸಿ.ಶೇಖರ್ ಚಿತ್ರದ ಕುರಿತು ಮಾಹಿತಿ ನೀಡಿದ್ದಾರೆ.

  • ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ತೆರೆಯ ಮೇಲೂ ಒಂದಾದ ಮಿಲನಾ ನಾಗರಾಜ್ ಮತ್ತು ಡಾರ್ಲಿಂಗ್ ಕೃಷ್ಣ

    ವ್ ಮಾಕ್ಟೈಲ್ ಚಿತ್ರದಲ್ಲಿ ಜೋಡಿಯಾಗಿ ಸಿನಿರಂಗವನ್ನು ರಂಜಿಸಿದ್ದ ಡಾರ್ಲಿಂಗ್ ಕೃಷ್ಣ ಮತ್ತು ಮಿಲನಾ ನಾಗರಾಜ್, ಈ ಸಿನಿಮಾದಲ್ಲಿ ಮಾತ್ರವಲ್ಲ ವೈಯಕ್ತಿಕ ಜೀವನದಲ್ಲೂ ಅವರು ಜೊತೆಯಾದರು. ಸತಿ ಪತಿಯಾಗಿ ಒಂದೊಳ್ಳೆ ಜೀವನ ಸಾಗಿಸುತ್ತಿದ್ದಾರೆ. ಸಿನಿಮಾದಲ್ಲಿ ಪ್ರೇಮಿಯಾಗಿ ಪಾತ್ರ ಮಾಡಿದ್ದವರು, ನಿಜ ಜೀವನದಲ್ಲೂ ಅದನ್ನು ಮುಂದುವರೆಸಿಕೊಂಡು ಹೋಗಿ, ನಂತರ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಇದನ್ನೂ ಓದಿ: ಹೊಂಬಾಳೆ ಫಿಲ್ಮ್ಸ್ ನಿಂದ ಮತ್ತೆರಡು ಪ್ಯಾನ್ ಇಂಡಿಯಾ ಸಿನಿಮಾ

    ಲವ್ ಮಾಕ್ಟೈಲ್ ಇಬ್ಬರ ವೃತ್ತಿ ಜೀವನಕ್ಕೆ ದೊಡ್ಡ ಬ್ರೇಕ್ ನೀಡಿತು. ಆನಂತರ ಅವರು ಲವ್ ಮಾಕ್ಟೈಲ್ 2 ನಲ್ಲೂ ಜೊತೆಯಾಗಿಯೇ ನಟಿಸಿದರು. ಬಾಕ್ಸ್ ಆಫೀಸಿನಲ್ಲಿ ಅದು ಅಷ್ಟೇನೂ ಸದ್ದು ಮಾಡದೇ ಇದ್ದರೂ, ಜೋಡಿಯು ನೋಡುಗರಿಗೆ ಇಷ್ಟವಾಯಿತು. ಈಗ ಅದನ್ನೇ ಮುಂದುವರೆಸುವ ನಿಟ್ಟಿನಲ್ಲಿ ನಿರ್ದೇಶಕ ಪಿ.ಸಿ.ಶೇಖರ್ ಮತ್ತೊಂದು ಹೊಸ ಸಿನಿಮಾವನ್ನು ಇದೇ ಜೋಡಿಯಾಗಿ ನಿರ್ದೇಶನ ಮಾಡುತ್ತಿದ್ದಾರೆ. ಅದಕ್ಕೆ ಬ್ಯುಟಿಫುಲ್ ಆಗಿರುವ ಶೀರ್ಷಿಕೆಯನ್ನೂ ಇಟ್ಟಿದ್ದಾರೆ. ಇದನ್ನೂ ಓದಿ : ‘ಕಾಳಿ’ ಟೈಟಲ್ ಧ್ರುವ ಸರ್ಜಾಗಾ? ಅಥವಾ ಅಭಿಷೇಕ್ ಅಂಬರೀಶ್ ಗಾ?

    ಪಿ.ಸಿ. ಶೇಖರ್ ಸಿನಿಮಾ ರಂಗದಲ್ಲಿ ಕೊಂಚ ಗ್ಯಾಪ್ ತಗೆದುಕೊಂಡು ಸಿನಿಮಾವೊಂದನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರಕ್ಕೆ ಲವ್ ಬರ್ಡ್ಸ್ ಎಂದು ಹೆಸರಿಟ್ಟಿದ್ದಾರೆ. ರಿಯಲ್ ಲೈಫ್‍ನ ಲವ್ ಬರ್ಡ್ಸ್ ಅನ್ನೇ ನಾಯಕ ನಾಯಕಿಯನ್ನಾಗಿ ಆಯ್ಕೆ ಮಾಡಿಕೊಂಡಿದ್ದಾರೆ. ಕಥೆಗೂ ಮತ್ತು ಡಾರ್ಲಿಂಗ್ ಕೃಷ್ಣ ಹಾಗೂ ಮಿಲನಾ ನಾಗರಾಜ್ ಅವರ ಜೋಡಿಗೂ ಒಂದಾಣಿಕೆ ಆಗುತ್ತಿದ್ದರಿಂದ, ಇದೇ ಜೋಡಿಯನ್ನು ಆಯ್ಕೆ ಮಾಡಿಕೊಂಡು, ಸಿನಿಮಾ ಮಾಡುತ್ತಿದ್ದಾರೆ. ಇದನ್ನೂ ಓದಿ: ಬ್ರ್ಯಾಂಡ್ ಬೆಂಗಳೂರು ಹೆಸರು ಉಳಿಸಿ – ಪ್ರಧಾನಿಗೆ ನಟ ಅನಿರುದ್ಧ್ ಪತ್ರ

    ಲವ್ ಬರ್ಡ್ಸ್ ಚಿತ್ರಕ್ಕೆ ಮಿಲನಾ ನಾಗರಾಜ್ ನಾಯಕಿಯಾದರೆ, ಡಾರ್ಲಿಂಗ್ ಕೃಷ್ಣ ನಾಯಕ. ಮದುವೆಯಾದ ಜೋಡಿಯ ನಂತರದ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗುತ್ತಿದೆಯಂತೆ. ದಾಂಪತ್ಯ ಜೀವನದ ಹಲವು ಸಂಗತಿಗಳನ್ನು ಈ ಸಿನಿಮಾದ ಮೂಲಕ ಹೇಳಲು ಹೊರಟಿದ್ದಾರಂತೆ ನಿರ್ದೇಶಕರು.

  • `ಪ್ರೀತಿಯ ರಾಯಭಾರಿ’ಗೆ ಜೋಡಿಯಾದ ಟಗರು ಬ್ಯೂಟಿ ಮಾನ್ವಿತಾ

    `ಪ್ರೀತಿಯ ರಾಯಭಾರಿ’ಗೆ ಜೋಡಿಯಾದ ಟಗರು ಬ್ಯೂಟಿ ಮಾನ್ವಿತಾ

    `ಕೆಂಡಸಂಪಿಗೆ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಪರಿಚಿತರಾದ ನಟಿ ಮಾನ್ವಿತಾ ಹರೀಶ್, ಬಳಿಕ ಸಾಕಷ್ಟು ಚಿತ್ರಗಳ ಮೂಲಕ ಸಂಚಲನ ಮೂಡಿಸಿದ್ರು. ಇದೀಗ ʻರೋಮಿಯೋʼ  ಖ್ಯಾತಿಯ ಪಿ. ಸಿ ಶೇಖರ್ ನಿರ್ದೇಶನದ ಹೊಸ ಚಿತ್ರದಲ್ಲಿ ನಟ ನಕುಲ್ ಗೌಡಗೆ ನಾಯಕಿಯಾಗಿ ನಟಿಸಿದ್ದಾರೆ.

    ಪಿ.ಸಿ ಶೇಖರ್ ನಿರ್ದೇಶನದ ಹೆಸರಿಡದ ಚಿತ್ರದಲ್ಲಿ ಟಗರು ಪುಟ್ಟಿ ಮಾನ್ವಿತಾ ನಾಯಕಿಯಾಗಿ ನಟಿಸಿದ್ದಾರೆ. 2018ರಲ್ಲಿ ತೆರೆಕಂಡ `ಪ್ರೀತಿಯ ರಾಯಭಾರಿ’ ಚಿತ್ರದ ಮೂಲಕ ಪರಿಚಿತರಾದ ನಕುಲ್ ಗೌಡಗೆ ಜೋಡಿಯಾಗಿ ಕಾಣಿಸಿಕೊಂಡಿದ್ದಾರೆ. ಪಿ. ಸಿ ಶೇಖರ್ ಡೈರೆಕ್ಷನ್‌ನಲ್ಲಿ ನಕುಲ್ ಮತ್ತು ಮಾನ್ವಿತಾ ಕಮಾಲ್ ಮಾಡೋಕೆ ರೆಡಿಯಾಗಿದ್ದಾರೆ.

    ಇದೊಂದು ಪಕ್ಕಾ ಲವ್‌ಸ್ಟೋರಿ ಮತ್ತು ಥ್ರಿಲರ್ ಚಿತ್ರವಾಗಿದ್ದು, ನಟ ನಕುಲ್ ಗೌಡ ಡಿಫರೆಂಟ್ ಶೇಡ್‌ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ರೈತ ಕುಟುಂಬದಿಂದ ಬಂದ ಹಳ್ಳಿ ಹುಡುಗಿಯ ಪಾತ್ರದಲ್ಲಿ ಮಾನ್ವಿತಾ ನಟಿಸಿದ್ದಾರೆ.

    `ಪ್ರೀತಿಯ ರಾಯಭಾರಿ’ ಚಿತ್ರದ ಮೂಲಕ ಈಗಾಗಲೇ ಪರಿಚಿತರಾಗಿರೋ ನಟ ನಕುಲ್‌ಗೆ ಇದು ಎರಡನೇ ಚಿತ್ರವಾಗಿದ್ದು, ಈ ಚಿತ್ರದ ಮೂಲಕ ನಕುಲ್ ಮತ್ತೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಚಿತ್ರ ಅದ್ದೂರಿಯಾಗಿ ಮೂಡಿ ಬಂದಿದೆ. ಇನ್ನು ಏಪ್ರಿಲ್ ಅಂತ್ಯದಲ್ಲಿ ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಲಿದೆ ಚಿತ್ರತಂಡ. ಇದನ್ನೂ ಓದಿ:ರಣಬೀರ್ – ಆಲಿಯಾ ಮದುವೆ : ದಿಲ್ಬರೋ ಹಾಡಿಗೆ ಹೆಜ್ಜೆ ಹಾಕಲಿದೆ ಸ್ಟಾರ್ ಜೋಡಿ

    ಸದ್ಯ ಮಾನ್ವಿತಾ ಹರೀಶ್ ಕನ್ನಡ ಚಿತ್ರಗಳಲ್ಲಿ ಮಾತ್ರವಲ್ಲದೇ ತೆಲುಗು ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಹೊಸ ಬಗೆಯ ಪಾತ್ರಗಳಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಇದೀಗ ಪಿ.ಸಿ ಶೇಖರ್ ಮತ್ತು ನಕುಲ್ ಕಾಂಬಿನೇಷನ್ ಚಿತ್ರದಲ್ಲಿ ಭಿನ್ನ ಪಾತ್ರದ ಮೂಲಕ ಕಮಾಲ್ ಮಾಡಲು ರೆಡಿಯಾಗಿದ್ದಾರೆ. ಈ ಸುದ್ದಿ ಕೇಳಿ ಟಗರು ಪುಟ್ಟಿ ಫ್ಯಾನ್ಸ್ ಥ್ರಿಲ್ ಆಗಿದ್ದಾರೆ.

  • ಗ್ಯಾಂಗ್‍ಸ್ಟರ್ ಆಗ್ತಾರಂತೆ ಪ್ರಜ್ವಲ್ ದೇವರಾಜ್!

    ಗ್ಯಾಂಗ್‍ಸ್ಟರ್ ಆಗ್ತಾರಂತೆ ಪ್ರಜ್ವಲ್ ದೇವರಾಜ್!

    ಬೆಂಗಳೂರು: ಡೈನಾಮಿಕ್ ಸ್ಟಾರ್ ದೇವರಾಜ್ ಪುತ್ರ ಪ್ರಜ್ವಲ್ ಇದೀಗ ಕೊಂಚವೂ ಬಿಡುವಿಲ್ಲದಂತೆ ಬ್ಯುಸಿಯಾಗಿ ಬಿಟ್ಟಿದ್ದಾರೆ. ವೆರೈಟಿ ವೆರೈಟಿ ಚಿತ್ರ, ಥರ ಥರದ ಪಾತ್ರಗಳು ಸಿಗುತ್ತಿರೋ ಖುಷಿಯಲ್ಲಿರೋ ಪ್ರಜ್ವಲ್ ಪಾಲಿಗೆ ಮತ್ತಷ್ಟು ಅವಕಾಶಗಳು ಒಲಿದು ಬರುತ್ತಿವೆ. ಇತ್ತೀಚೆಗಷ್ಟೇ ರಾಮ್ ನಾರಾಯಣ್ ನಿರ್ದೇಶನದ ಚಿತ್ರವೊಂದನ್ನು ಪ್ರಜ್ವಲ್ ಒಪ್ಪಿಕೊಂಡಿದ್ದರು. ಇನ್ನಷ್ಟೇ ಹೆಸರಿಡಬೇಕಿರೋ ಆ ಚಿತ್ರದ ಚಿತ್ರೀಕರಣ ಚಾಲ್ತಿಯಲ್ಲಿರುವಾಗಲೇ ಅವರು ಮತ್ತೊಂದು ಚಿತ್ರಕ್ಕೆ ರೆಡಿಯಾಗಿ ಬಿಟ್ಟಿದ್ದಾರೆ.

    ಪ್ರಜ್ವಲ್ ದೇವರಾಜ್ ಹೊಸದಾಗಿ ಒಪ್ಪಿಕೊಂಡಿರೋದು ಪಿ.ಸಿ. ಶೇಖರ್ ನಿರ್ದೇಶನದ ಚಿತ್ರವನ್ನು. ಇವರಿಬ್ಬರೂ ಒಟ್ಟಾಗಿ ವರ್ಷಾಂತರಗಳ ಹಿಂದೆ ಅರ್ಜುನ ಎಂಬ ಚಿತ್ರವನ್ನು ಕೊಟ್ಟಿದ್ದರು. ಇದೀಗ ಒಂದು ದೊಡ್ಡ ಗ್ಯಾಪಿನ ನಂತರ ಮತ್ತೆ ಈ ಜೋಡಿ ಒಂದಾಗುತ್ತಿದೆ. ಈಗಾಗಲೇ ಈ ಚಿತ್ರದ ಕಥೆಯನ್ನೂ ಕೇಳಿರೋ ಪ್ರಜ್ವಲ್ ಖುಷಿಯಿಂದಲೇ ಒಪ್ಪಿಕೊಂಡಿದ್ದಾರಂತೆ. ಈ ಚಿತ್ರದ ಪಾತ್ರ ತನ್ನ ಇದುವರೆಗಿನ ಸಿನಿಮಾ ಯಾನದಲ್ಲಿಯೇ ಸ್ಪೆಷಲ್ ಆಗಿರೋದು ಮತ್ತು ಅದು ತನ್ನ ಇಮೇಜಿಗೆ ಹೊಸ ಹೊಳಪು ನೀಡೋ ಭರವಸೆ ಹುಟ್ಟಿಕೊಂಡಿರೋದು ಪ್ರಜ್ವಲ್ ಖುಷಿಗೆ ಕಾರಣವಾಗಿದೆ.

    ಸದ್ಯ ಈ ಚಿತ್ರದ ಪ್ರೀ ಪ್ರೊಡಕ್ಷನ್ ಕಾರ್ಯಗಳು ನಡೆಯುತ್ತಿವೆ. ಸ್ಟ್ರಿಪ್ಟ್ ಕೆಲಸವನ್ನು ಅಂತಿಮ ಹಂತಕ್ಕೆ ಕೊಂಡೊಯ್ಯುತ್ತಿರುವ ಶೇಖರ್ ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ ಅವರ ಪಾತ್ರ ಹೇಗಿದೆ ಎಂಬ ಬಗ್ಗೆ ಸಣ್ಣ ಹಿಂಟ್ ಕೊಟ್ಟಿದ್ದಾರೆ. ಇದು ರಗಡ್ ಸ್ಟೋರಿ. ಇದರಲ್ಲಿ ಪ್ರಜ್ವಲ್ ಗ್ಯಾಂಗ್‍ಸ್ಟರ್ ಪಾತ್ರದಲ್ಲಿ ಅಬ್ಬರಿಸಲಿದ್ದಾರಂತೆ. ಆದರೆ ವೈಲೆನ್ಸ್ ಅತಿಯಾಗಿರೋದಿಲ್ಲ. ಇಡೀ ಚಿತ್ರವನ್ನು ಮಾಸ್ ಪ್ರೇಕ್ಷಕರ ಜೊತೆಗೆ ಕುಟುಂಬ ಸಮೇತರಾಗಿ ಕೂತು ನೋಡುವಂತೆ ರೂಪಿಸಲು ಶೇಖರ್ ತಯಾರಾಗುತ್ತಿದ್ದಾರೆ.

    ಚಂದನ ಸಿನಿ ಕ್ರಿಯೇಷನ್ಸ್ ಬ್ಯಾನರಿನಡಿಯಲ್ಲಿ ಚಂದನ ಗೌಡ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಇದು ಅವರ ಪಾಲಿಗೆ ಮೊದಲ ಹೆಜ್ಜೆ. ಪ್ರಜ್ವಲ್ ದೇವರಾಜ್ ಕೂಡಾ ಬಹುಕಾಲದಿಂದ ಇಂಥಾ ಪಾತ್ರಕ್ಕೆ, ಬದಲಾವಣೆಗೆ ಕಾದು ಕೂತಿದ್ದರಂತೆ. ಅದಕ್ಕೆ ತಕ್ಕುದಾದ ಕಥೆಯನ್ನೇ ಪಿ.ಸಿ. ಶೇಖರ್ ಇದೀಗ ರೆಡಿ ಮಾಡಿಕೊಂಡಿದ್ದಾರೆ.

  • ವಿಲನ್ ಅಬ್ಬರಕ್ಕೆ ಸೆಡ್ಡು ಹೊಡೆದ ಟೆರರಿಸ್ಟ್!

    ವಿಲನ್ ಅಬ್ಬರಕ್ಕೆ ಸೆಡ್ಡು ಹೊಡೆದ ಟೆರರಿಸ್ಟ್!

    ಬೆಂಗಳೂರು: ಸುದೀಪ್ ಮತ್ತು ಶಿವರಾಜ್ ಕುಮಾರ್ ಮುಖ್ಯಭೂಮಿಕೆಯಲ್ಲಿರೋ ವಿಲನ್ ಚಿತ್ರ ಭಾರೀ ಅಬ್ಬರದೊಂದಿಗೆ ಬಿಡುಗಡೆಗೆ ರೆಡಿಯಾಗಿದೆ. ಪ್ರೇಮ್ ನಿರ್ದೇಶನದ ಈ ಚಿತ್ರ ವಿಶ್ವಾದ್ಯಂತ ತೆರೆ ಕಾಣುತ್ತಿದೆ. ಸಾವಿರಕ್ಕೂ ಹೆಚ್ಚು ಥಿಯೇಟರುಗಳಲ್ಲಿ ಬಿಡುಗಡೆಯಾಗುತ್ತಿರೋ ಈ ಚಿತ್ರದ ಮುಂದೆ ಬರಲು ಬಹುತೇಕ ಚಿತ್ರಗಳು ಕೊಸರಾಡಿವೆ. ಆದರೆ ರಾಗಿಣಿ ಅಭಿನಯದ ಟೆರರಿಸ್ಟ್ ಚಿತ್ರ ಮಾತ್ರ ಅಂಥಾದ್ದೊಂದು ಧೈರ್ಯ ಪ್ರದರ್ಶಿಸಿದೆ!

    ರಾಗಿಣಿ ಅಭಿನಯದ ಬಹು ನಿರೀಕ್ಷಿತ ಚಿತ್ರ ಟೆರರಿಸ್ಟ್. ಪಿಸಿ ಶೇಖರ್ ನಿರ್ದೇಶನದ ಈ ಚಿತ್ರ ಮಹಿಳಾ ಕೇಂದ್ರಿತವಾದ ರೋಚಕ ಕಥಾ ಹಂದರ ಹೊಂದಿದೆಯಂತೆ. ಈ ಚಿತ್ರವೂ ಯಾವಾಗ ಬಿಡುಗಡೆಯಾಗುತ್ತದೆ ಎಂಬ ನಿರೀಕ್ಷೆ ಹುಟ್ಟಿಕೊಂಡಿದ್ದದ್ದು ಸುಳ್ಳಲ್ಲ. ಆದರೆ ಈ ಚಿತ್ರ ಬಿಡುಗಡೆಯಾಗುತ್ತಿರೋ ಸಂದರ್ಭ ಕಂಡು ಎಲ್ಲರೂ ಹೌಹಾರುವಂತಾಗಿದೆ.

    ಯಾಕೆಂದರೆ ಈ ಚಿತ್ರವನ್ನು ವಿಲನ್ ಅಬ್ಬರಕ್ಕೆ ಎದುರಾಗಿ ಬಿಡುಗಡೆ ಮಾಡಲು ನಿರ್ದೇಶಕ ಪಿ.ಸಿ. ಶೇಖರ್ ನಿರ್ಧರಿಸಿದ್ದಾರೆ. ವಿಲನ್ ಚಿತ್ರದ ಮುಂದೆ ನಿಲ್ಲಲು ಬಹುತೇಕ ಚಿತ್ರಗಳು ಹಿಂದೇಟು ಹಾಕಿರುವಾಗಲೇ ಟೆರರಿಸ್ಟ್ ಚಿತ್ರವನ್ನು ರಿಲೀಸ್ ಮಾಡಲು ಮುಂದಾಗಿರೋ ಶೇಖರ್ ಸಾಹಸವನ್ನು ಎಲ್ಲರೂ ಅಚ್ಚರಿಯಿಂದಲೇ ನೋಡುತ್ತಿದ್ದಾರೆ. ಈ ಸಾಹಸ ಫಲಿಸಬಹುದಾ? ವಿಲನ್ ಅಬ್ಬರವನ್ನು ಟೆರರಿಸ್ಟ್ ಚಿತ್ರ ಹೇಗೆ ತಡೆದುಕೊಳ್ಳುತ್ತದೆ ಎಂಬ ಪ್ರಶ್ನೆಯೇ ಈ ಚಿತ್ರಕ್ಕೆ ಪ್ಲಸ್ ಪಾಯಿಂಟ್ ಆದರೂ ಅಚ್ಚರಿಯೇನಿಲ್ಲ!

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv