Tag: ಪೀಣ್ಯ

  • 20 ದಿನದಲ್ಲಿ ಪೀಣ್ಯ ಫ್ಲೈಓವರ್‌ ಮೇಲೆ ಬಸ್‌, ಲಾರಿ ಓಡಾಟಕ್ಕೆ ಅವಕಾಶ?

    20 ದಿನದಲ್ಲಿ ಪೀಣ್ಯ ಫ್ಲೈಓವರ್‌ ಮೇಲೆ ಬಸ್‌, ಲಾರಿ ಓಡಾಟಕ್ಕೆ ಅವಕಾಶ?

    ಬೆಂಗಳೂರು: ರಾಜ್ಯದ 18 ಜಿಲ್ಲೆಗಳನ್ನು ಬೆಂಗಳೂರಿನಿಂದ ಸಂಪರ್ಕಿಸುವ ಪೀಣ್ಯ ಮೇಲ್ಸೇತುವೆಯಲ್ಲಿ ಮಲ್ಟಿ ವ್ಹೀಲ್‌ ವೆಹಿಕಲ್‌ ಹೊರತುಪಡಿಸಿ(ಎಂವಿವಿ) ಬಸ್‌, ಲಾರಿ ಓಡಾಟಕ್ಕೆ 20 ದಿನದಲ್ಲಿ ಅವಕಾಶ ಸಿಗುವ ಸಾಧ್ಯತೆಯಿದೆ.

    ಫ್ಲೈ ಓವರ್‌ ಭಾರ ತಡೆಯುವ ಸಾಮರ್ಥ್ಯದ ಸಾಮರ್ಥ್ಯದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ(ಎನ್‌ಎಚ್‌ಎಐ) ಭಾರತೀಯ ವಿಜ್ಞಾನ ಸಂಸ್ಥೆಯ(ಐಐಎಸ್‌ಸಿ) ತಜ್ಞರು ವರದಿ ನೀಡಿದ್ದಾರೆ.

    ಇತ್ತೀಚೆಗೆ ನಗರಕ್ಕೆ ಆಗಮಿಸಿದ್ದ ಎನ್‌ಎಚ್ಎಐ ಉನ್ನತ ಅಧಿಕಾರಿಗಳ ತಂಡ ತ್ರಿಸದಸ್ಯ ಸಮಿತಿ ರಚಿಸಿದ್ದು ಸಾಧಕ ಬಾಧಕವನ್ನ ಪರಿಶೀಲಿಸಿ ಮತ್ತೊಂದು ವರದಿ ನೀಡುವಂತೆ ಕೋರಿದೆ.

    ಐಐಎಸ್‌ಸಿಯ ತಜ್ಞ ಚಂದ್ರ ಕಿಶನ್, ಟ್ಯಾಂಡನ್ ಕನ್ಸಲ್ಟೆನ್ಸಿಯ ಬ್ರಿಡ್ಜ್ ಎಂಜಿನಿಯರ್ ದೆಹಲಿಯ ಮಹೇಶ್ ಟೆಂಡನ್, ದೆಹಲಿ ಸೆಂಟ್ರಲ್ ರೋಡ್ ರಿಸರ್ಚ್ ಇನ್ಸ್ಟಿಟ್ಯೂಟ್ ನ ನಿವೃತ್ತ ಇಂಜಿನಿಯರ್ ಡಾ. ಶರ್ಮಾ ನೇತೃತ್ವದ ತ್ರಿಸದಸ್ಯ ಸಮಿತಿ ಜೂನ್‌ ಮೊದಲ ವಾರದಲ್ಲಿ ಎನ್‌ಎಚ್‌ಎಐಗೆ ಶಿಫಾರಸು ಇರುವ ವರದಿ ಸಲ್ಲಿಸಲಿದೆ. ಈ ವರದಿಯನ್ನು ಎನ್‌ಎಚ್‌ಎಐ ಒಪ್ಪುವ ಸಾಧ್ಯತೆಯಿದೆ. ಇದನ್ನೂ ಓದಿ: ನಾವೆಲ್ಲಾ ಪೋಸ್ಟ್ ಮ್ಯಾನ್ ಕೆಲಸ ಮಾಡ್ತೇವೆ- ಬಿಜೆಪಿ ಕುರಿತು ನಟ ಜಗ್ಗೇಶ್ ಹೇಳಿದ್ದಿಷ್ಟು

    ಜೂನ್ 15 ರ ವರದಿ ಸಲ್ಲಿಕೆಯ ಬಳಿಕ ನಂತರ ಬಸ್ , ಲಾರಿ ಗಳ ಓಡಾಟಕ್ಕೆ ಅವಕಾಶ ಸಿಗಲಿದೆ. ಆದರೆ ಫ್ಲೈಓವರ್‌ನಲ್ಲಿ ಅತ್ಯಂತ ಭಾರದ ವಾಹನ(ಎಂವಿವಿ) ಸಂಚಾರ ನಿರ್ಬಂಧ ಮುಂದುವರೆಯಲಿದೆ.

    ಮೇಲ್ಸೇತುವೆ ಸಾಮರ್ಥ್ಯದ ಬಗ್ಗೆ ವಿಸ್ತೃತ ಪರಿಶೀಲನೆಗೆ 6 ರಿಂದ 9 ತಿಂಗಳು ಬೇಕಾಗುವ ಸಾಧ್ಯತೆ ಇದ್ದು, ಅಲ್ಲಿಯವರೆಗೆ ಟ್ರಕ್‌ ಸೇರಿದಂತೆ ಘನ ವಾಹನಗಳಿಗೆ ನಿರ್ಬಂಧ ಮುಂದುವರೆಯಲಿದೆ.

    ಭಾರಿ ವಾಹನಗಳ ಓಡಾಟದಿಂದ 7 ತಿಂಗಳ ಹಿಂದೆ 102, ಮತ್ತು 103 ಪಿಲ್ಲರ್ ನಡುವೆ ಕೇಬಲ್ ಬಾಗಿತ್ತು. ಹೀಗಾಗಿ ಈ ಫ್ಲೈ ಓವರ್‌ ಮೇಲೆ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಬಳಿಕ ಕೆಲ ತಿಂಗಳ ಬಳಿಕ ಕೇಬಲ್ ಸರಿಪಡಿಸಿ ತಜ್ಞರ ವರದಿ ಬಳಿಕ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶ ನೀಡಲಾಗಿತ್ತು.

  • ನಕಲಿ ಪೊಲೀಸ್ ಹೆಸ್ರಲ್ಲಿ ಯುವತಿ ಮಾವನಿಗೆ ಕಾಲ್- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿ ಸೂಸೈಡ್..!

    ನಕಲಿ ಪೊಲೀಸ್ ಹೆಸ್ರಲ್ಲಿ ಯುವತಿ ಮಾವನಿಗೆ ಕಾಲ್- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಸಾಕ್ಷಿ ಸೂಸೈಡ್..!

    ಬೆಂಗಳೂರು: ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಮಿತಿಯೇ ಇರಲಿಲ್ಲ ಅನ್ಸುತ್ತೆ. ಮಾಜಿ ಪ್ರಿಯಕರನ ಹುಚ್ಚಾಟಕ್ಕೆ ಯುವತಿಯೊಬ್ಬಳು ನೇಣಿಗೆ ಕೊರಳೊಡ್ಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಮೃತ ಯುವತಿ ಸಾಕಮ್ಮ(ಸಾಕ್ಷಿ). ಮೂಲತ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದವಳು. ಬೆಂಗಳೂರಿನ ದೊಡ್ಡಬಿದರಕಲ್ಲು ಗ್ರಾಮದಲ್ಲಿರುವ ತನ್ನ ಅಕ್ಕನ ಮನೆಯಲ್ಲಿದ್ದುಕೊಂಡು, ಯಶವಂತಪುರದ ಮೆಟ್ರೋ ಕ್ಯಾಸ್ ಅಂಡ್ ಕ್ಯಾರಿಂ ಮಾರ್ಕೆಟ್‍ನಲ್ಲಿ ಕೆಲಸ ಮಾಡ್ತಿದ್ದಳು. ಅಲ್ಲಿ ಸಾಕ್ಷಿಗೆ ಅರುಣ್ ಎಂಬಾತನ ಪರಿಚಯವಾಗಿತ್ತು. ಸಾಕ್ಷಿ ಸಲುಗೆಯಿಂದ ಇರೋದನ್ನ ನೋಡಿ ಅರುಣ್, ಆಕೆಯ ಹಿಂದೆ ಬಿದ್ದಿದ್ದ. ಹಾಗೂ ಕೆಲದಿನಗಳಿಂದ ಮದುವೆ ಆಗುವಂತೆ ಪೀಡಿಸುತ್ತಿದ್ದ. ಈ ವಿಷಯವನ್ನ ಸಾಕ್ಷಿ ಮನೆಯಲ್ಲೂ ತಿಳಿಸಿದ್ದಳಂತೆ. ಮದುವೆ ಮಾಡಿದ್ರೆ ಸಮಸ್ಯೆ ಸರಿ ಹೋಗುತ್ತೆ ಎಂದು ಸಾಕ್ಷಿ ಮನೆಯವರು ಮದುವೆಗೆ ತಯಾರಿ ಮಾಡಿಕೊಳ್ಳುತ್ತಿದ್ದರು. ಇದನ್ನೂ ಓದಿ: ಅಪಘಾತದಲ್ಲಿ ವಿದ್ಯಾರ್ಥಿ ಸಾವು – ನುಚ್ಚು ನೂರಾದ ಮೆಡಿಕಲ್ ಕನಸು

    ಪಾಗಲ್ ಪ್ರೇಮಿ ಸ್ನೇಹಿತ ಮಾಡಿದ ಎಡವಟ್ಟು..!
    ಸಾಕ್ಷಿಗೆ ಮದುವೆ ಮಾಡಲು ಓಡಾಡ್ತಿರೋ ವಿಷಯ ತಿಳಿದ ಅರುಣ್, ಸಾಕ್ಷಿಯ ಭಾವ ಪ್ರಜ್ವಲ್‍ಗೆ ತನ್ನ ಸ್ನೇಹಿತ ಗೋಪಾಲನ ಕಡೆಯಿಂದ ಪೊಲೀಸರ ಸೋಗಿನಲ್ಲಿ ಕರೆ ಮಾಡಿಸಿದ್ದ. ಬಸವೇಶ್ವರ ಪೊಲೀಸ್ ಠಾಣೆಯಿಂದ ಕರೆ ಮಾಡ್ತಿದ್ದೀನಿ. ಅರುಣ್ ಎಂಬ ಯುವಕ ನಿಮ್ಮ ಹೆಸರೇಳಿ ಸೂಸೈಡ್ ಅಟೆಂಮ್ಟ್ ಮಾಡ್ಕೊಂಡಿದ್ದಾನೆ. ಅವನನ್ನ ಮದುವೆ ಮಾಡಿಕೊಳ್ಳಿ, ಇಲ್ಲವಾದ್ರೆ ಎಫ್‍ಐಆರ್ ದಾಖಲಿಸುತ್ತೇವೆ ಅಂತ ಬೆದರಿಸಿದ್ದ. ಈ ಸುದ್ದಿ ಕೇಳಿ ಬೆದರಿದ ಸಾಕ್ಷಿ, ಅಕ್ಕನ ಮನೆಯಲ್ಲೇ ಫ್ಯಾನ್‍ಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾಳೆ.

    ಸದ್ಯ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡ ಪೀಣ್ಯಾ ಪೊಲೀಸರು ಆರೋಪಿಗಳಾದ ಪಾಗಲ್ ಪ್ರೇಮಿ ಅರುಣ್ ಹಾಗೂ ನಕಲಿ ಪೊಲೀಸ್ ಗೋಪಾಲ್‍ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ ಕತ್ತು ಹಿಸುಕಿ ಕೊಂದ – ಕೊನೆಗೆ ತಾನೂ ಸತ್ತ

  • ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಆನಂದ್ ಬರ್ಬರ ಕೊಲೆ

    ಬೆಂಗಳೂರು: ಪೀಣ್ಯದಲ್ಲಿ ರೌಡಿಶೀಟರೊಬ್ಬನ ಭೀಕರ ಹತ್ಯೆಯಾಗಿದೆ. ಜೆ.ಸಿ ಆನಂದ್ (36) ಕೊಲೆಯಾದ ರೌಡಿಶೀಟರ್.

    ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗದರನಹಳ್ಳಿಯ ಶಿವಪುರ ಬಳಿ ಈತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಈ ಘಟನೆ ರಾತ್ರಿ 8 ಗಂಟೆ ಸಮಯದಲ್ಲಿ ನಡೆದಿದೆ.

    ಪೀಣ್ಯ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಕೊಲೆಯಾದ ಆನಂದ್, ಕಳೆದ ಮೂರು ದಿನಗಳಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿದ್ದ. ಇದೀಗ ಐದಾರು ಜನ ಬೈಕ್ ನಲ್ಲಿ ಬಂದು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ.

    ಸ್ಥಳಕ್ಕೆ ಪೀಣ್ಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಭಾರತಕ್ಕೆ ಹೀನಾಯ ಸೋಲು – ಪಾಕಿಸ್ತಾನಕ್ಕೆ 10 ವಿಕೆಟ್ ಜಯ

  • ಬಸ್ಸಿನಲ್ಲಿ ‘ಗೀತ ಗೋವಿಂದಂ’ ಸೀನ್ – ನಿದ್ದೆಗೆ ಜಾರಿದ್ದ ಯುವತಿಗೆ ಮುತ್ತಿಟ್ಟ ಅಪರಿಚಿತ ಯುವಕ!

    ಬಸ್ಸಿನಲ್ಲಿ ‘ಗೀತ ಗೋವಿಂದಂ’ ಸೀನ್ – ನಿದ್ದೆಗೆ ಜಾರಿದ್ದ ಯುವತಿಗೆ ಮುತ್ತಿಟ್ಟ ಅಪರಿಚಿತ ಯುವಕ!

    ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ‘ಗೀತ ಗೋವಿಂದಂ’ ಚಿತ್ರ ಸೀನ್ ರೀಕ್ರಿಯೆಟ್ ಆಗಿರುವ ಘಟನೆಯೊಂದು ನಡೆದಿರುವ ಬಗ್ಗೆ ಬೆಳಕಿಗೆ ಬಂದಿದೆ.

    ಹೌದು. ಬಳ್ಳಾರಿಯಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿದ್ದ ಯುವತಿಗೆ ಅಪರಿಚಿತ ಯುವಕನೊಬ್ಬ ಮುತ್ತುಕೊಟ್ಟಿದ್ದಾನೆ. ಈ ಘಟನೆ ಸೇಮ್ ‘ಗೀತ ಗೋವಿಂದಂ’ ಸೀನ್ ತರಾನೇ ಇತ್ತು ಎನ್ನಲಾಗಿದೆ.

    ಯುವತಿ ಬೆಂಗಳೂರಿನಲ್ಲಿ ಆರ್ಕಿಟೆಕ್ಚರ್ ವಿದ್ಯಾಭ್ಯಾಸ ಮಾಡುತ್ತಿದ್ದಾಳೆ ಎಂಬುದಾಗಿ ತಿಳಿದುಬಂದಿದೆ. ನಿನ್ನೆ ರಾತ್ರಿ 10.40ಕ್ಕೆ ಬಳ್ಳಾರಿಯಿಂದ ಬೆಂಗಳೂರಿಗೆ ಹೊರಟಿದ್ದ ಕೆಎಸ್‍ಆರ್‍ಟಿಸಿ ಬಸ್ಸಿನಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: ಕೆಟ್ಟ ದಾಖಲೆ ಬರೆದ ಸಿಕ್ಸರ್ ಕಿಂಗ್ ಕ್ರಿಸ್ ಗೇಲ್

    21 ವರ್ಷದ ಯುವತಿ ಬಸ್ ಹತ್ತಿದ ಸಂದರ್ಭದಲ್ಲಿಯೇ ಯುವಕ ಆಕೆಯನ್ನ ಫಾಲೋ ಮಾಡಿಕೊಂಡು ಬಂದು ಬಸ್ಸಿನಲ್ಲಿ ಕುಳಿತಿದ್ದಾನೆ. ಬಳಿಕ ಯುವತಿಯನ್ನೇ ನೋಡಿ ಕೆಟ್ಟ ಕೆಟ್ಟ ಸನ್ನೆ ಮಾಡಿದ್ದಾನೆ. ಇತ್ತ ಬಸ್ ಬೆಂಗಳೂರಿಗೆ ಬರುತ್ತಿದ್ದಂತೆಯೇ ಪೀಣ್ಯ ಬಳಿ ಯುವತಿ ನಿದ್ದೆಗೆ ಜಾರಿದಾಗ ಆಸಾಮಿ, ಯುವತಿಗೆ ಫಿಲಂ ಸ್ಟೈಲಿನಲ್ಲಿ ಕಿಸ್ ಕೊಟ್ಟಿದ್ದಾನೆ. ಬೆಳಗ್ಗಿನ 5 ಗಂಟೆಯ ವೇಳೆಗೆ ಬಸ್ ಪೀಣ್ಯ ನಿಲ್ದಾಣಕ್ಕೆ ಬರುತ್ತಿದ್ದ ವೇಳೆ ಯುವಕ, ಯುವತಿಗೆ ಮುತ್ತು ಕೊಟ್ಟಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

    ಇತ್ತ ಯುವಕನ ಮುತ್ತಿನಿಂದ ಆತಂಕಗೊಂಡ ಯುವತಿ ಬಸ್ಸಿನಿಂದ ಇಳಿದು ನೇರವಾಗಿ ಪೀಣ್ಯ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾಳೆ. ಸದ್ಯ ಯುವತಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಎಫ್‍ಐಆರ್ ದಾಖಲಿಸಿ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

  • ಬೆಂಗಳೂರಿನಲ್ಲಿ ಶೇ.30 ರಷ್ಟು ಕಾರ್ಮಿಕರೊಂದಿಗೆ ಗಾರ್ಮೆಂಟ್ಸ್ ಪ್ರಾರಂಭ

    ಬೆಂಗಳೂರಿನಲ್ಲಿ ಶೇ.30 ರಷ್ಟು ಕಾರ್ಮಿಕರೊಂದಿಗೆ ಗಾರ್ಮೆಂಟ್ಸ್ ಪ್ರಾರಂಭ

    ಬೆಂಗಳೂರು: ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿ ಶೇ.30 ರಷ್ಟು ನೌಕರರನ್ನು ಬಳಸಿಕೊಂಡು ಉತ್ಪಾದನೆ ಶುರು ಮಾಡುವುದಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬಹುತೇಕ ಗಾರ್ಮೆಂಟ್ಸ್ ಗಳು ಕಾರ್ಯಾರಂಭ ಶುರು ಮಾಡಿಕೊಂಡಿದೆ.

    ಪೀಣ್ಯ ಬಳಿ ಇರುವ ಎಂ ಎಸ್ ಗಾರ್ಮೆಂಟ್ಸ್  ನಲ್ಲಿ ಕೆಲಸ ಮಾಡುವ ನೌಕರರು ಕೋವಿಡ್ ನಿಯಮಗಳನ್ನು ಪಾಲನೆ ಮಾಡುತ್ತಿದ್ದಾರೆ.  ಒಳ ಹೋಗುವ ಮೊದಲು ಅಲ್ಲಿನ ಸಿಬ್ಬಂದಿ ಪ್ರತಿ ನೌಕರರ ದೇಹದ ಉಷ್ಣಾಂಶವನ್ನು ಪರೀಕ್ಷೆ ಮಾಡಲಾಗುತ್ತದೆ.  ಜೊತೆಗೆ ಸ್ಯಾನಿಟೈಸರ್ ನೀಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗಾರ್ಮೆಂಟ್ಸ್ ಸಿಬ್ಬಂದಿ ಗುಂಪು ಸೇರಬಾರದು ಎಂದು ತಿಳಿಸಿ ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಕ್ರಮವಹಿಸಿದ್ದಾರೆ.

    ಗಾರ್ಮೆಂಟ್ಸ್ ಒಳಭಾಗದಲ್ಲೂ ಕಾರ್ಮಿಕರು ಕಡ್ಡಾಯವಾಗಿ ಮಾಸ್ಕ್ ಹಾಕಿಕೊಂಡಿದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಕೆಲಸ ಮಾಡುತ್ತಿದ್ದಾರೆ.

    ಮಾಲೀಕರಾದ ಮಂಜು ಮಾತಾನಾಡಿ, ಲಾಕ್ ಡೌನ್ ಮತ್ತು ಕೊರೊನಾ ಸಮಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಷ್ಟ ಆಗುತ್ತಿದೆ. ಅದರೂ ಜೀವನ ಮಾಡಬೇಕಾಗಿದೆ. ಸರ್ಕಾರದ ನಿಯಮಗಳ ಪ್ರಕಾರವೇ ನಾವೂ ಉತ್ಪಾದನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಅನ್‍ಲಾಕ್‍ಗೂ ಮೊದಲೇ ಕೊವೀಡ್ ನಿಯಮ ಉಲ್ಲಂಘನೆ- ಸೋಂಕು ಹರಡುವ ಭೀತಿ

    ಈ ಗಾರ್ಮೆಂಟ್ಸ್ ನಲ್ಲಿ ಕೋವಿಡ್ ಸಮಯದಲ್ಲಿ ಹೆಚ್ಚು ಬಳಕೆಯಾಗುತ್ತಿರುವ ಪಿಪಿಇ ಕಿಟ್ ಗಳನ್ನು ತಯಾರಿಸಲಾಗುತ್ತಿದೆ.

  • ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರರು!

    ವೋಟ್ ಮಾಡಿ ಎಲ್ಲೆಂದರಲ್ಲಿ ಗ್ಲೌಸ್ ಬಿಸಾಕಿದ ಮತದಾರರು!

    ಬೆಂಗಳೂರು: ತುಮಕೂರಿನ ಶಿರಾ ಹಾಗೂ ಬೆಂಗಳೂರಿನ ಆರ್‍ಆರ್ ನಗರದ ಉಪಚುನಾವಣೆಗೆ ಈಗಾಗಲೇ ಮತದಾನ ಆರಂಭವಾಗಿದ್ದು, ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಆದರೆ ಪೀಣ್ಯ ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಎಲ್ಲೆಂದರಲ್ಲಿ ಬಿಸಾಕಿರುವುದು ಕಂಡು ಬಂದಿದೆ.

    ಹೌದು. ರಸ್ತೆಯಲ್ಲಿ ಹ್ಯಾಂಡ್ ಗ್ಲೌಸ್ ಗಳನ್ನು ಬಿಸಾಡಲಾಗಿದೆ. ಮತದಾನ ಮಾಡಿದ ಬಳಿಕ ಜನ ಎಲ್ಲೆಂದರಲ್ಲಿ ಹಾಕಿಹೋಗಿದ್ದಾರೆ. ಮತದಾನ ಮಾಡಲು ಒಬ್ಬ ವ್ಯಕ್ತಿಗೆ ಒಂದು ಗ್ಲೌಸ್ ವಿತರಣೆ ಮಾಡಲಾಗುತ್ತಿದೆ. ಆದರೆ ಸಿಬ್ಬಂದಿ ಮತದಾರರಲ್ಲಿ ಜಾಗೃತಿ ಮೂಡಿಸಿಲ್ಲ. ಹೀಗಾಗಿ ಜನ ಮತದಾನ ಮಾಡಿ ಬಳಿಕ ಗ್ಲೌಸ್ ಗಳನ್ನು ಸಿಕ್ಕ ಸಿಕ್ಕ ಕಡೆ ಬಿಸಾಡಿ ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಡಸ್ಟ್‍ಬಿನ್ ವ್ಯವಸ್ಥೆ ಮಾಡಬೇಕಿದೆ.

    ಪೀಣ್ಯದ ಸರ್ಕಾರಿ ಪದವಿಪೂರ್ವ ಕಾಲೇಜಿನ ಮತದಾನ ಕೇಂದ್ರದಲ್ಲಿ ಆಗ್ಗಾಗ್ಗೆ ಸ್ಯಾನಿಟೈಸರ್ ಮಾಡಲಾಗುತ್ತಿದೆ. ಮತದಾನ ಕೇಂದ್ರದ ಹೊರಗೆ, ಕಾರಿಡಾರ್ ನಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ. ಬಿಬಿಎಂಪಿ ಸಿಬ್ಬಂದಿ ಪ್ರತೀ ಗಂಟೆಗೊಮ್ಮೆ ಸ್ಯಾನಿಟೈಸ್ ಮಾಡ್ತಿದ್ದಾರೆ.

  • ಲಾಕ್‍ಡೌನ್‍ನಿಂದ ಪೀಣ್ಯ ಕೈಗಾರಿಕೆ ತತ್ತರಿಸಿದೆ- ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕಳವಳ

    ಲಾಕ್‍ಡೌನ್‍ನಿಂದ ಪೀಣ್ಯ ಕೈಗಾರಿಕೆ ತತ್ತರಿಸಿದೆ- ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಕಳವಳ

    ಪೀಣ್ಯ: ಮಾರಾಣಾಂತಿಕ ಕೋವಿಡ್-19 ಲಾಕ್‍ಡೌನ್‍ನಿಂದ ಪೀಣ್ಯ ಕೈಗಾರಿಕೆ ವಲಯ ಅಕ್ಷರಶಃ ನಲುಗಿದೆ. ಬೆಂಗಳೂರು ಹೊರವಲಯದ ಸಣ್ಣ ಕೈಗಾರಿಕೆಗಳು ಸಂಕಷ್ಟದಲ್ಲಿದೆ. ಈ ಹಿನ್ನೆಲೆಯಲ್ಲಿ ಪೀಣ್ಯ ಕೈಗಾರಿಕಾ ಸಂಘದ ಅಧ್ಯಕ್ಷ ಶ್ರೀನಿವಾಸ ಅಸ್ರಣ್ಣ ಕಳವಳ ವ್ಯಕ್ತಪಡಿಸಿದ್ದಾರೆ.

    ಕೈಗಾರಿಕ ವಲಯದ ಶೇ.70 ರಷ್ಟು ಭಾಗದ ಕೈಗಾರಿಕೆಗಳು ಕಾರ್ಯನಿರ್ವಹಣೆ ಮಾಡುತ್ತಿದ್ದು, ಉಳಿದ ಶೇ.30 ರಷ್ಟು ಕೈಗಾರಿಕೆಗಳು ಕಾರ್ಯ ನಿರ್ವಹಿಸದಿರುವುದು ವಿಷಾದನೀಯ ಸಂಗತಿ. ಸಣ್ಣ ಕೈಗಾರಿಕೆಗಳ ಪರಿಸ್ಥಿತಿ ಗಂಭೀರವಾಗಿದ್ದು, ಮುಚ್ಚುವ ಸ್ಥಿತಿಗೆ ತಲುಪಿವೆ. ಪರಿಣಾಮ ಕಾರ್ಮಿಕರ ನೆರವಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರ ಅದಷ್ಟೂ ಬೇಗ ಧಾವಿಸಬೇಕು ಎಂದು ಅಸ್ರಣ್ಣ ಮನವಿ ಮಾಡಿದರು.

     

    ಇದೇ ವೇಳೆ ಕಾರ್ಮಿಕರಿಗೆ ಶೇ.50 ವೇತನ ನೀಡಬೇಕು ಎಂದು ಮನವಿ ಮಾಡಿದ ಅಸ್ರಣ್ಣ, ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಅನುದಾನ ನೀಡುವಂತೆ ಆಗ್ರಹಿಸಿದರು. ಕೈಗಾರಿಗೆಗಳ ಆರು ತಿಂಗಳ ಸಾಲದ ಬಡ್ಡಿಯನ್ನು ಮನ್ನ ಮಾಡಬೇಕು ಎಂದರು. ಇತ್ತ ಕೈಗಾರಿಕೆಗಳ ಅಭಿವೃದ್ಧಿಗೆ ಕೇಂದ್ರ ಸರ್ಕಾರ ನೆರವಿಗೆ ದಾವಿಸುವಂತೆ ಸಣ್ಣ ಕೈಗಾರಿಕಾ ವಲಯದ ಪದಾಧಿಕಾರಿಗಳು ಒತ್ತಾಯಿಸಿದರು.

    ಏಷ್ಯಾದಲ್ಲೇ ಅತೀದೊಡ್ಡ ಕೈಗಾರಿಕಾ ಪ್ರದೇಶವಾದ ಪೀಣ್ಯ ಕೈಗಾರಿಕಾ ವಲಯ ಹಲವಾರು ಹೆಸರಾಂತ ಕಂಪನಿಗಳು ಇಲ್ಲಿವೆ. ಪತ್ರಿಕಾಗೋಷ್ಠಿಯಲ್ಲಿ ಅಧ್ಯಕ್ಷ ಶ್ರೀನಿವಾಸ್ ಅಸ್ರಣ್ಣ, ಉಪಾಧ್ಯಕ್ಷರಾದ ಪ್ರಕಾಶ್, ಪ್ರಾಣೇಶ್, ಕಾರ್ಯದಶೀ ವಿಜಯ್ ಕುಮಾರ್, ಜಂಟಿ ಕಾರ್ಯದರ್ಶಿ ಚಂದ್ರಶೇಖರ್, ಖಜಾಂಚಿ ಮಂಜುನಾಥ್, ಜಂಟಿ ಖಜಾಂಚಿ ಮುರುಳಿ ಕೃಷ್ಣ, ನಿಕಟಪೂರ್ವ ಅಧ್ಯಕ್ಷ ಗಿರಿ ಇತರರು ಹಾಜರಿದ್ದರು.

  • ರ‌್ಯಾಂಪ್‌ ವಾಕ್ ಪ್ರಾಕ್ಟೀಸ್ ಮಾಡ್ತಿದ್ದಾಗ ಎಂಬಿಎ ವಿದ್ಯಾರ್ಥಿನಿ ಸಾವು

    ರ‌್ಯಾಂಪ್‌ ವಾಕ್ ಪ್ರಾಕ್ಟೀಸ್ ಮಾಡ್ತಿದ್ದಾಗ ಎಂಬಿಎ ವಿದ್ಯಾರ್ಥಿನಿ ಸಾವು

    ಬೆಂಗಳೂರು: ಕಾಲೇಜ್ ಫ್ರೆಶರ್ಸ್ ಡೇಗೆ ರ‌್ಯಾಂಪ್‌ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದ ವೇಳೆ ಎಂಬಿಎ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.

    21 ವರ್ಷದ ಶಾಲಿನಿ ಸಾವನ್ನಪ್ಪಿರುವ ವಿದ್ಯಾರ್ಥಿನಿ. ಪೀಣ್ಯದ ಏಮ್ಸ್ ಇನ್ಸ್ ಟಿಟ್ಯೂಟ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

    ಸೋಮವಾರ ಕಾಲೇಜ್ ಫ್ರೆಶರ್ಸ್ ಡೇ ಇತ್ತು. ಈ ಹಿನ್ನೆಲೆಯಲ್ಲಿ ಶಾಲಿನಿ ಸೇರಿದಂತೆ ಕೆಲ ವಿದ್ಯಾರ್ಥಿಗಳು ರ‌್ಯಾಂಪ್‌ ವಾಕ್ ಪ್ರಾಕ್ಟೀಸ್ ಮಾಡುತ್ತಿದ್ದರು. ಈ ವೇಳೆ ಶಾಲಿನಿ ಸ್ಟೇಜ್ ಮೇಲೆಯೇ ಕುಸಿದು ಬಿದ್ದಿದ್ದಳು. ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿತಾದ್ರೂ ಚಿಕಿತ್ಸೆ ಫಲಿಸದೆ ಶಾಲಿನಿ ಮೃತಪಟ್ಟಿದ್ದಾಳೆ.

    ಹೃದಯಘಾತದಿಂದ ಸಾವನ್ನಪ್ಪಿದ್ದಾರೆ ಅಂತ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ತನಿಖೆ ಮುಂದುವರಿದಿದೆ.

  • ನೆಲಕ್ಕೆ ಬಿದ್ರೂ ಬಿಡ್ಲಿಲ್ಲ..ಚೈನ್ ಕಸಿದೇ ಬಿಟ್ಟ- ಬೆಳ್ಳಂಬೆಳಗ್ಗೆ ಇನ್ಸ್ ಪೆಕ್ಟರ್ ಪತ್ನಿಯ ಸರಗಳವು -ವಿಡಿಯೋ ನೋಡಿ

    ನೆಲಕ್ಕೆ ಬಿದ್ರೂ ಬಿಡ್ಲಿಲ್ಲ..ಚೈನ್ ಕಸಿದೇ ಬಿಟ್ಟ- ಬೆಳ್ಳಂಬೆಳಗ್ಗೆ ಇನ್ಸ್ ಪೆಕ್ಟರ್ ಪತ್ನಿಯ ಸರಗಳವು -ವಿಡಿಯೋ ನೋಡಿ

    ಬೆಂಗಳೂರು: ನಗರದಲ್ಲಿ ಸರಗಳ್ಳವರ ಹಾವಳಿಗೆ ಕೊನೆಯೇ ಇಲ್ಲ ಎನ್ನುವುದಕ್ಕೆ ಇಂದು ಮತ್ತೊಮ್ಮೆ ಸಾಕ್ಷಿಯಾಗಿದೆ. ನಗರದ ಮೂರು ಕಡೆಗಳಲ್ಲಿ ಸರಗಳ್ಳತನ ಪ್ರಕರಣ ನಡೆದಿದೆ.

    ಸಂಕ್ರಾಂತಿ ಹಬ್ಬದ ದಿನವಾದ ಇಂದೇ ಪೊಲೀಸ್ ಇನ್ಸ್ ಪೆಕ್ಟರ್ ಪತ್ನಿಯದ್ದೇ ಸರಗಳ್ಳತನ ಮಾಡಿದ ಘಟನೆ ಬೆಂಗಳೂರಿನ ಪೀಣ್ಯದ ಎಚ್‍ಎಮ್‍ಟಿ ಲೇಔಟ್‍ನಲ್ಲಿ ನಡೆದ್ರೆ, ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೌಗಂಧಿಕ 45 ಗ್ರಾಂ ಸರ ಕಸಿದು ಪರಾರಿಯಾಗಿದ್ದಾರೆ.

    ಇನ್ಸ್ ಪೆಕ್ಟರ್ ಕೆಂಚೇಗೌಡ ಪತ್ನಿ ಗಂಗಮ್ಮ ಮನೆಯ ಮುಂದೆ ರಂಗೋಲಿ ಹಾಕುತ್ತಿದ್ದ ವೇಳೆ ಏಕಾಏಕಿ ಮಹಿಳೆಯ ಮೇಲೆರಗಿದ ಸರಗಳ್ಳ ಕತ್ತಿಗೆ ಕೈ ಹಾಕಿ ಮಹಿಳೆ ಸಮೇತ 70 ಗ್ರಾಂ ಸರವನ್ನು ಎಳೆದೊಯ್ದಿದ್ದಾನೆ. ಕಳ್ಳ ಸರ ಎಳೆಯುವ ವೇಳೆ ಮಹಿಳೆ ನೆಲಕ್ಕೆ ಬಿದ್ದರೂ ಬಿಡದ ಸರಗಳ್ಳ ಕೊನೆಗೆ ಸರ ಕಸಿದು ಎಸ್ಕೇಪ್ ಆಗಿದ್ದಾನೆ.

    ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಕಳ್ಳನನ್ನು ಒಂದು ಕಿಲೋಮೀಟರ್‍ನಷ್ಟು ದೂರ ಇನ್ಸ್ ಪೆಕ್ಟರ್ ಕೆಂಚೇಗೌಡ ಓಡಿ ಬೆನ್ನತ್ತಿದ್ದಾರೆ. ಆದರೂ ಆತ ಕೂದಳೆಲೆ ಅಂತರದಲ್ಲಿ ಓಡಿ ಪಲ್ಸರ್‍ನಲ್ಲಿ ಪರಾರಿಯಾಗಿದ್ದಾನೆ.

    ಪೀಣ್ಯದಲ್ಲಿ ಮತ್ತೊಂದು ಘಟನೆ ನಡೆದಿದ್ದು, ಆದ್ರೆ ಶಾರದಮ್ಮನ ಸಮಯ ಪ್ರಜ್ಞೆಯಿಂದ ಕಳ್ಳತನ ಕೈ ತಪ್ಪಿದೆ. 80 ಗ್ರಾಂ ತೂಕದ ಸರಗಳ್ಳತನಕ್ಕೆ ಯತ್ನಿಸಿದ್ದು, ಪತಿ ಹನುಮಂತರಾಯಪ್ಪ ಪತ್ನಿಯ ರಕ್ಷಣೆಗೆ ಧಾವಿಸಿದ್ದಾರೆ. ಪರಿಣಾಮ ಸರಗಳ್ಳತನ ಕೈತಪ್ಪಿದ್ದು, ಪತ್ನಿಯ ರಕ್ಷಣೆಗೆ ಬಂದ ಪತಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂಬುದಾಗಿ ತಿಳಿದುಬಂದಿದೆ.

    ಈ ಮೂರು ಘಟನೆ ಸಂಬಂಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    https://www.youtube.com/watch?v=70qyeBboCWY

     

  • ಮದ್ವೆಯಾಗಲು ನಿರಾಕರಿಸಿದ ಯುವತಿ ಮೇಲೆ ಆಸಿಡ್ ಹಾಕಿದ ಯುವಕನಿಗೆ ಬಿತ್ತು ಗೂಸಾ

    ಮದ್ವೆಯಾಗಲು ನಿರಾಕರಿಸಿದ ಯುವತಿ ಮೇಲೆ ಆಸಿಡ್ ಹಾಕಿದ ಯುವಕನಿಗೆ ಬಿತ್ತು ಗೂಸಾ

    ಬೆಂಗಳೂರು: ನಗರದಲ್ಲಿ ಹಾಡಹಗಲೇ ಯುವತಿಯ ಮೇಲೆ ಆಸಿಡ್ ದಾಳಿ ಮಾಡಲು ಯತ್ನಿಸಿರುವ ಘಟನೆ ಪೀಣ್ಯಾ 2ನೇ ಹಂತದ ಪ್ರದೇಶದಲ್ಲಿ ನಡೆದಿದೆ.

    ಚಂದನ್ ಎಂಬ ಯುವಕ ಯುವತಿಯೊಬ್ಬಳ ಮೇಲೆ ಆಸಿಡ್ ದಾಳಿಯನ್ನು ಮಾಡಲು ಯತ್ನಿಸಿ ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದಾನೆ.

    ಚಂದನ್ ಹಲವು ದಿನಗಳಿಂದ ಯುವತಿಯೊಬ್ಬಳನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಅಲ್ಲದೇ ತನ್ನನ್ನು ಮದುವೆಯಾಗಲು ಒಪ್ಪದೇ ಇದ್ದರೆ ಆಸಿಡ್ ಹಾಕುವುದಾಗಿ ಬೆದರಿಕೆಯನ್ನು ಹಾಕಿದ್ದ. ಆದರೆ ಯುವತಿ ಚಂದನ್‍ನನ್ನು ಮದುವೆಯಾಗಲು ನಿರಾಕರಿಸಿದ್ದಳು.

    ತನ್ನ ಕೋರಿಕೆಯನ್ನು ನಿರಾಕರಿಸಿದ ಕಾರಣ ಚಂದನ್ ಕೋಪಗೊಂಡು ಇಂದು ಏಕಾಏಕಿ ಯುವತಿಯ ಮೇಲೆ ಆಸಿಡ್ ನಿಂದ ದಾಳಿ ಮಾಡಲು ಯತ್ನಿಸಿದ್ದಾನೆ. ಆದರೆ ಸ್ಥಳದಲ್ಲಿದ್ದ ಸಾರ್ವಜನಿಕರು ಸಮಯ ಪ್ರಜ್ಞೆ ಪ್ರದರ್ಶಿಸಿ ಯುವತಿಯನ್ನು ರಕ್ಷಿಸಿದ್ದಾರೆ. ನಂತರ ಚಂದನ್‍ನನ್ನು ಹಿಡಿದು ಮರಕ್ಕೆ ಕಟ್ಟಿ ಹಾಕಿ ಥಳಿಸಿ ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ.

    ಸಾರ್ವಜನಿಕರ ಮಾಹಿತಿಯ ಮೇರೆಗೆ ಸ್ಥಳಕ್ಕೆ ಬಂದ ಪೊಲೀಸರು ಚಂದನ್‍ನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.