Tag: ಪುಣೆ ಪೋರ್ಶೆ ಕಾರು

  • ಮದುವೆ ಪಲ್ಲಕ್ಕಿಯಲ್ಲಿ ಹೋಗಬೇಕಿದ್ದವಳು ಶವದ ಪೆಟ್ಟಿಗೆಯಲ್ಲಿ ಹೋದಳು: ಅಪಘಾತಕ್ಕೆ ಬಲಿಯಾದ ಯುವತಿ ತಾಯಿ ಕಣ್ಣೀರು

    ಮದುವೆ ಪಲ್ಲಕ್ಕಿಯಲ್ಲಿ ಹೋಗಬೇಕಿದ್ದವಳು ಶವದ ಪೆಟ್ಟಿಗೆಯಲ್ಲಿ ಹೋದಳು: ಅಪಘಾತಕ್ಕೆ ಬಲಿಯಾದ ಯುವತಿ ತಾಯಿ ಕಣ್ಣೀರು

    ಮುಂಬೈ: ಪುಣೆಯಲ್ಲಿ ಪೋರ್ಶೆ ಕಾರು ಡಿಕ್ಕಿ (Pune Porsche Crash) ಹೊಡೆದು ಮೃತಪಟ್ಟ ಮಗಳನ್ನು ನೆನೆದು ತಾಯಿ ಕಣ್ಣೀರಿಟ್ಟಿದ್ದಾರೆ. ಅವಳನ್ನು ವರನ ಮನೆಗೆ ಡೋಲಿಯಲ್ಲಿ (ಪಲ್ಲಕ್ಕಿ) ಕರೆದೊಯ್ಯಬೇಕಿತ್ತು. ಆದರೆ ಶವಪೆಟ್ಟಿಗೆಯಲ್ಲಿ ಹೆಣ ಸಾಗಿಸುವಂತಾಯಿತು ಎಂದು ನೊಂದು ನುಡಿದಿದ್ದಾರೆ.

    ಅನೀಶ್ ಅವಧಿಯಾ ಮತ್ತು ಅಶ್ವಿನಿ ಕೋಸ್ತಾ (Ashwini Kostha) ಇಬ್ಬರೂ 24 ವಯಸ್ಸಿನ ಇಂಜಿನಿಯರ್‌ಗಳು. ಅಪಘಾತದ ದಿನ ರಾತ್ರಿ ಇಬ್ಬರೂ ಸ್ನೇಹಿತರನ್ನು ಭೇಟಿಯಾಗಿ ಹಿಂದಿರುಗುತ್ತಿದ್ದರು. ಈ ವೇಳೆ, ಕುಡಿದ ಅಮಲಿನಲ್ಲಿದ್ದ ಅಪ್ರಾಪ್ತ ತನ್ನ ಐಷಾರಾಮಿ ಪೋರ್ಶೆ ಕಾರಿನಲ್ಲಿ ವೇಗವಾಗಿ ಬಂದು ಬೈಕ್‌ಗೆ ಡಿಕ್ಕಿ ಹೊಡೆದ. ಡಿಕ್ಕಿ ರಭಸಕ್ಕೆ ಬೈಕ್‌ನ ಹಿಂಬದಿ ಕುಳಿತಿದ್ದ ಅಶ್ವಿನಿ 20 ಅಡಿ ಎತ್ತರಕ್ಕೆ ಹಾರಿ ನೆಲಕ್ಕೆ ಅಪ್ಪಳಿಸಿ ಬಿದ್ದಳು. ಬೈಕ್‌ ಓಡಿಸುತ್ತಿದ್ದ ಅನೀಶ್‌ ಹಾರಿ ಅಲ್ಲೇ ನಿಂತಿದ್ದ ಕಾರಿನ ಮೇಲೆ ಬಿದ್ದ. ಇಬ್ಬರೂ ಸ್ಥಳದಲ್ಲೇ ಕೊನೆಯುಸಿರೆಳೆದರು ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ. ಇದನ್ನೂ ಓದಿ: ಪುಣೆ ಪೋರ್ಶೆ ಕಾರು ಅಪಘಾತಕ್ಕೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ಜಾಮೀನು ರದ್ದು

    ಜಬಲ್‌ಪುರದ ನಿವಾಸದಲ್ಲಿರುವ ಅಶ್ವಿನಿ ತಾಯಿ, ಮಗಳ ಸಾವಿನ ಶಾಕ್‌ನಿಂದ ಇನ್ನೂ ಹೊರಬಂದಿಲ್ಲ. ‘ನನ್ನ ಮಗಳನ್ನು ವರನ ಮನೆಗೆ ಡೋಲಿಯಲ್ಲಿ (ಪಲ್ಲಕ್ಕಿ) ಕರೆದೊಯ್ಯಬೇಕಿತ್ತು. ಆದರೆ ಶವಪೆಟ್ಟಿಗೆಯಲ್ಲಿ ಹೆಣ ಸಾಗಿಸುವಂತಾಗಿದೆ’ ಎಂದು ಕಣ್ಣೀರು ಹಾಕಿದ್ದಾರೆ.

    ನನ್ನ ಮಗಳು ಅಶ್ವಿನಿಗೆ ನ್ಯಾಯ ಸಿಗಬೇಕು. ಅಪ್ರಾಪ್ತ ಬಾಲಕ ಮತ್ತು ಅವನ ಹೆತ್ತವರಿಗೆ ಕಠಿಣ ಶಿಕ್ಷೆಯಾಗಬೇಕು. ಅವರು ಅವನನ್ನು ಸರಿಯಾಗಿ ಬೆಳೆಸಲಿಲ್ಲ. ಅವರು ಅವನಿಗೆ ಕಾರನ್ನು ನೀಡಬಾರದಿತ್ತು ಎಂದು ಅಶ್ವನಿ ತಾಯಿ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಪೋರ್ಶೆ ಕಾರನ್ನು ಗಂಟೆಗೆ 200 ಕಿ.ಮೀ ವೇಗದಲ್ಲಿ ಚಲಾಯಿಸಿರುವ ಅಪ್ರಾಪ್ತ ಹೆಚ್ಚು ಕುಡಿದಿದ್ದ ಎಂದು ಪೊಲೀಸರು ಹೇಳಿದ್ದಾರೆ. ಬಾಲಾಪರಾಧ ನ್ಯಾಯ ಮಂಡಳಿ ಮೊದಲು ಆರೋಪಿ ಅಪ್ರಾಪ್ತನಿಗೆ ಜಾಮೀನು ನೀಡಿತ್ತು. ಈಗ ಜಾಮೀನು ರದ್ದುಗೊಳಿಸಿದೆ.

    ಆದೇಶ ಕುರಿತು ಅಸಮಾಧಾನ ಹೊರಹಾಕಿರುವ ಅಶ್ವಿನಿ ತಾಯಿ, ಇದು ತಮಾಷೆಯೇ? ಆತ ಯಾವ ಪ್ರಬಂಧವನ್ನು ಬರೆಯುತ್ತಾರೆ? ಅವರು ಜೋಕ್‌ ಮಾಡುತ್ತಿದ್ದಾರೆಯೇ? ನನ್ನ ಮಗಳು ಅತ್ಯಂತ ಪ್ರತಿಭಾವಂತ ಹುಡುಗಿ. ಬದುಕಿನಲ್ಲಿ ತುಂಬಾ ಕನಸುಗಳನ್ನು ಕಟ್ಟಿಕೊಂಡಿದ್ದಳು ಎಂದು ಮಗಳನ್ನು ನೆನೆದು ಭಾವುಕರಾದರು. ಇದನ್ನೂ ಓದಿ: ರಾಗಾ ಒಬ್ಬ ಮಹಾನ್‌ ವ್ಯಕ್ತಿ, ಗಾಂಧೀಜಿ ಕನಸು ನನಸು ಮಾಡ್ತಿದ್ದಾರೆ: ಆಚಾರ್ಯ ಪ್ರಮೋದ್ ಕೃಷ್ಣಂ ಕಿಡಿ

    ಪುತ್ರ ಅನೀಶ್‌ ಅವಧಿಯಾ ತಾಯಿ ಪ್ರತಿಕ್ರಿಯಿಸಿ, ಅವನು ನನ್ನ ಮಗನನ್ನು ಕೊಂದ. ಈಗ ನಾನು ನನ್ನ ಮಗನನ್ನು ನೋಡಲು ಸಾಧ್ಯವಿಲ್ಲ. ಇದು ಆ ಹುಡುಗನ ತಪ್ಪು. ನೀವು ಅದನ್ನು ಕೊಲೆ ಎಂದು ಪರಿಗಣಿಸಬೇಕು. ಇಷ್ಟು ದೊಡ್ಡ ತಪ್ಪು ಮಾಡದೇ ಇದ್ದಿದ್ದರೆ ಯಾರೂ ಸಾಯುತ್ತಿರಲಿಲ್ಲ. ಅವರ ಕುಟುಂಬದವರು ಗಮನ ಹರಿಸಿದ್ದರೆ ಇಂದು ನನ್ನ ಮಗ ಬದುಕಿರುತ್ತಿದ್ದ ಎಂದು ನೊಂದು ನುಡಿದಿದ್ದಾರೆ.

  • ಪುಣೆ ಪೋರ್ಶೆ ಕಾರು ಅಪಘಾತಕ್ಕೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ಜಾಮೀನು ರದ್ದು

    ಪುಣೆ ಪೋರ್ಶೆ ಕಾರು ಅಪಘಾತಕ್ಕೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ಜಾಮೀನು ರದ್ದು

    ಮುಂಬೈ: ಪುಣೆಯಲ್ಲಿ (Pune Porsche Accident) ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳ ಸಾವು ಪ್ರಕರಣದಲ್ಲಿ ಅಪ್ರಾಪ್ತನ ಜಾಮೀನನ್ನು ಬಾಲನ್ಯಾಯ ಮಂಡಳಿ ರದ್ದುಗೊಳಿಸಿದೆ.

    ಟೆಕ್ಕಿಗಳ ಸಾವಿಗೆ ಕಾರಣನಾದ ಬಾಲಕನಿಗೆ ಜಾಮೀನು ನೀಡಲಾಗಿತ್ತು. ಅಲ್ಲದೇ ರಸ್ತೆ ಅಪಘಾತದ ಬಗ್ಗೆ ಪ್ರಬಂಧವನ್ನು ಬರೆಯುವಂತೆ ಹೇಳಿತ್ತು. ಇದಕ್ಕೆ ರಾಷ್ಟ್ರವ್ಯಾಪಿ ಆಕ್ರೋಶ ವ್ಯಕ್ತವಾಗಿತ್ತು. ಅದಾದ ಮೂರು ದಿನದಲ್ಲಿ ಮಂಡಳಿ ಜಾಮೀನು ರದ್ದುಗೊಳಿಸಿದೆ. ಇದನ್ನೂ ಓದಿ: ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಮಂಡಳಿಯು ಬಾಲಾಪರಾಧಿಯನ್ನು ಜೂನ್ 5 ರವರೆಗೆ ರಿಮ್ಯಾಂಡ್ ಹೋಮ್‌ಗೆ ಕಳುಹಿಸಿದೆ. ಆದರೆ, ಆತನನ್ನು ವಯಸ್ಕನಾಗಿ ವಿಚಾರಣೆಗೆ ಒಳಪಡಿಸಬೇಕೆ ಎಂಬ ಬಗ್ಗೆ ಅದು ನಿರ್ಧಾರವನ್ನು ನೀಡಲಿಲ್ಲ.

    ಭಾನುವಾರ ಮುಂಜಾನೆ ಅಪಘಾತದ ನಂತರ, ಪುಣೆಯ ಪ್ರಮುಖ ಬಿಲ್ಡರ್‌ನ ಅಪ್ರಾಪ್ತ ಪುತ್ರನಿಗೆ 15 ಗಂಟೆಗಳ ಒಳಗೆ ಜಾಮೀನು ನೀಡಲಾಗಿತ್ತು. ವೈಯಕ್ತಿಕ ಬಾಂಡ್, ಶ್ಯೂರಿಟಿ ನೀಡುವುದು ಸೇರಿದಂತೆ ರಸ್ತೆ ಸುರಕ್ಷತೆಯ ಕುರಿತು 300 ಪದಗಳ ಪ್ರಬಂಧ ಬರೆಯುವಂತೆ ಹೇಳಲಾಗಿತ್ತು. ಇದನ್ನೂ ಓದಿ: ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

  • ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

    ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

    ಮುಂಬೈ: ಪುಣೆಯಲ್ಲಿ (Pune Porsche Accident) ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ಐಷಾರಾಮಿ ಕಾರು ನಂಬರ್‌ ಪ್ಲೇಟ್‌ ಇಲ್ಲದೆಯೇ ತಿಂಗಳುಗಳಿಂದ ಪುಣೆ ರಸ್ತೆಗಳಲ್ಲಿ ಓಡಾಡಿಕೊಂಡಿದ್ದುದು ತಿಳಿದುಬಂದಿದೆ.

    2.5 ಕೋಟಿ ರೂ. ಮೌಲ್ಯದ ಐಷಾರಾಮಿ ಸ್ಪೋರ್ಟ್ಸ್ ಪೋರ್ಶೆ ಟೇಕಾನ್‌ ಕಾರಿನ ನೋಂದಣಿಯೇ ಆಗಿಲ್ಲ. ಎರಡೂವರೆ ಕೋಟಿ ಮೌಲ್ಯದ ಕಾರಿಗೆ ಕೇವಲ 1,758 ಶುಲ್ಕ ಪಾವತಿಸಿ ಮಾಲೀಕರು ನೋಂದಣಿ ಮಾಡಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

    ಬೆಂಗಳೂರಿನ ಡೀಲರ್‌ನಿಂದ ಮಾರ್ಚ್‌ನಲ್ಲಿ ಎಲೆಕ್ಟ್ರಿಕ್ ಪೋರ್ಶೆ ಕಾರನ್ನು ಆಮದು ಮಾಡಿಕೊಳ್ಳಲಾಗಿದೆ. ಬೆಂಗಳೂರಿನಲ್ಲಿ ತಾತ್ಕಾಲಿಕ ನೋಂದಣಿ ನಂತರ ಅಲ್ಲಿಂದ ಮಹಾರಾಷ್ಟ್ರಕ್ಕೆ ಕಾರು ಬಂದಿದೆ ಎಂದು ಮಹಾರಾಷ್ಟ್ರ ಸಾರಿಗೆ ಆಯುಕ್ತ ವಿವೇಕ್ ಭೀಮನ್ವಾರ್ ತಿಳಿಸಿದ್ದಾರೆ.

    ಕಾರನ್ನು ನೋಂದಣಿ ಮಾಡಿಸುವುದು ಮಾಲೀಕರ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ಇದೆ. ಆದ್ದರಿಂದ ಈ ವಾಹನದ ನೋಂದಣಿ 1,758 – 1,500 ರೂ. ಹೈಪೋಥೆಕೇಶನ್ ಶುಲ್ಕ ಇರುತ್ತದೆ. 200 ರೂ. ಸ್ಮಾರ್ಟ್ ಕಾರ್ಡ್ ಆರ್‌ಸಿ ಶುಲ್ಕ ಮತ್ತು 58 ರೂ. ಅಂಚೆ ಶುಲ್ಕ ಇರುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    ಪುಣೆಯ ಕಲ್ಯಾಣಿನಗರ ಪ್ರದೇಶದಲ್ಲಿ ಭಾನುವಾರ ಮುಂಜಾನೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದರು. ಕಾರು ಚಲಾಯಿಸುತ್ತಿದ್ದ ಹದಿಹರೆಯದ ಯುವಕ ಪುಣೆಯ ಪ್ರಮುಖ ಬಿಲ್ಡರ್‌ ಮಗ. ಆರೋಪಿ ಅಪ್ರಾಪ್ತನ ತಂದೆಯನ್ನು ಬಂಧಿಸಲಾಗಿದೆ. ಆರೋಪಿ ಬಾಲಕನಾದ್ದರಿಂದ ಬಂಧಿಸಿದ 15 ಗಂಟೆಗಳೊಳಗೆ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.