Tag: ಪುಣೆ

  • ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಪೋರ್ಶೆ ಕಾರಿಗೆ ಟೆಕ್ಕಿಗಳು ಬಲಿ ಪ್ರಕರಣ – ಅಪ್ರಾಪ್ತನ ತಂದೆಗೆ 2 ದಿನ ಪೊಲೀಸ್ ಕಸ್ಟಡಿ

    ಮುಂಬೈ: ಪುಣೆಯಲ್ಲಿ ಐಷಾರಾಮಿ ಕಾರು ಪೋರ್ಶೆ (Porsche Car Accident) ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ 17 ವರ್ಷದ ಬಾಲಕನ ಪ್ರಕರಣಕ್ಕೆ ಸಂಬಂಧಿಸಿದಂತೆ ತಂದೆ ರಿಯಲ್ ಎಸ್ಟೇಟ್ ಉದ್ಯಮಿ ವಿಶಾಲ್ ಅಗರ್‌ವಾಲ್ ಅವರನ್ನು ಬಂಧಿಸಿದ್ದ ಪೊಲೀಸರು ಇಂದು ನ್ಯಾಯಲಯದ ಮುಂದೆ ಹಾಜರುಪಡಿಸಿ ಎರಡು ದಿನಗಳ ಕಸ್ಟಡಿಗೆ (Police Custody) ಪಡೆದಿದ್ದಾರೆ.

    ಘಟನೆಗೆ ಅಪ್ರಾಪ್ತ ಬಾಲಕನಿಗೆ ಐಷಾರಾಮಿ ಕಾರ್ ನೀಡಿದ್ದು, ಬಾಲಕನ ತಂದೆಯ ನಿರ್ಲಕ್ಷವೂ ಕಾರಣವಾಗಿದ್ದು, ತನಿಖೆ ನಡೆಸಲು ಕಸ್ಟಡಿಗೆ ಬೇಕು ಎಂದು ಪೊಲೀಸರು ಮನವಿ ಮಾಡಿದರು. ವಾದ ಆಲಿಸಿದ ಕೋರ್ಟ್ ಎರಡು ದಿನಗಳ ಕಾಲ ವಿಶಾಲ್ ಅಗರ್‌ವಾಲ್ ಅವರನ್ನು ಪೊಲೀಸ್ ಕಸ್ಟಡಿಗೆ ನೀಡಿದೆ. ಇದನ್ನೂ ಓದಿ: ಗೃಹ ಸಚಿವಾಲಯದ ಕಚೇರಿಗೆ ಬಾಂಬ್ ಬೆದರಿಕೆ

    ಈ ನಡುವೆ ಬೆಂಗಳೂರಿನಲ್ಲಿ ಖರೀದಿಸಿದ್ದ ಕಾರಿಗೆ ಶಾಶ್ವತ ನೋಂದಣಿ ಮಾಡಿಸಿರಲಿಲ್ಲ. 1,758 ರೂ. ಶುಲ್ಕ ಬಾಕಿ ಉಳಿಸಿಕೊಂಡು ನಿರ್ಲಕ್ಷ್ಯ ತೋರಿದ್ದ ಹಿನ್ನೆಲೆ ಕಾರಿನ ನೋಂದಣಿಯನ್ನು ಶಾಶ್ವತವಾಗಿ ಬಾಕಿ ಉಳಿಸಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ. ದೇಶದಾದ್ಯಂತ ಈ ಪ್ರಕರಣದ ಬಗ್ಗೆ ವಿರೋಧ ವ್ಯಕ್ತವಾದ ಬಳಿಕ ಎಚ್ಚೆತ್ತಿರುವ ಅಧಿಕಾರಿಗಳು ಆರೋಪಿ ಬಾಲಕನಿಗೆ 17 ವರ್ಷ ತುಂಬಿದ್ದು ಆತನಿಗೆ 25 ವರ್ಷ ತುಂಬವವರೆಗೆ ಡ್ರೈವಿಂಗ್ ಲೈಸೆನ್ಸ್ ನೀಡಲಾಗುವುದಿಲ್ಲ ಎಂದು ಪುಣೆ ಆರ್‌ಟಿಓ ತಿಳಿಸಿದೆ. ಇದನ್ನೂ ಓದಿ: ಪುತ್ರನಿಗೆ 2.5 ಕೋಟಿ ಮೌಲ್ಯದ ಕಾರು ಗಿಫ್ಟ್‌; 1,758 ರೂ. ಕೊಟ್ಟು ನೋಂದಣಿಯನ್ನೇ ಮಾಡಿಸಿಲ್ಲ ಪುಣೆಯ ಬಿಲ್ಡರ್‌

    ತನಿಖೆ ಸದ್ಯ ಮುಂದುವರಿದಿದ್ದು, ಅಪ್ರಾಪ್ತ ಮದ್ಯಪಾನ ಮಾಡಲು ಹೋಗಿದ್ದ ಬಾರ್‌ನಿಂದ 48,000 ರೂ ಹಣದ ಬಿಲ್ ಅನ್ನು ಪಡೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರಿನಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆ – ಒಂದೇ ಕುಟುಂಬದ ನಾಲ್ವರು ದುರ್ಮರಣ

  • ಭಾರೀ ಗಾಳಿಗೆ ನದಿಯಲ್ಲಿ ದೋಣಿ ಮಗುಚಿ 6 ಮಂದಿ ನೀರುಪಾಲು

    ಭಾರೀ ಗಾಳಿಗೆ ನದಿಯಲ್ಲಿ ದೋಣಿ ಮಗುಚಿ 6 ಮಂದಿ ನೀರುಪಾಲು

    ಬೆಳಗಾವಿ/ಮುಂಬೈ: ಮಹಾರಾಷ್ಟ್ರದಲ್ಲಿ (Maharastra) ಭಾರೀ ಗಾಳಿ ಬೀಸಿ ದೋಣಿ ಮುಗುಚಿ ಭೀಕರ ಅವಘಡ ಸಂಭವಿಸಿದ್ದು, ಒಂದು ವರ್ಷದ ಮಗು ಸೇರಿ ಆರು ಮಂದಿ ನೀರು ಪಾಲಾಗಿರುವ ಘಟನೆ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ನಡೆದಿದೆ.

    ಮಹಾರಾಷ್ಟ್ರದ ಪುಣೆ ಜಿಲ್ಲೆಯ ಫಾಲಘರ್ ತಾಲೂಕಿನ ಕಲಾಶಿ ಬಳಿ ದೋಣಿ (Boat) ಮುಗುಚಿ 6 ಮಂದಿ ನೀರು ಪಾಲಾಗಿದ್ದಾರೆ. ಉಜ್ಜನಿ ಜಲಾಶಯದ ಹಿನ್ನೀರಿನಲ್ಲಿ ಕುಟುಂಬಸ್ಥರು ದೋಣಿ ವಿಹಾರಕ್ಕೆ ತೆರಳಿದ್ದರು. ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಉಜ್ಜನಿ ಜಲಾಶಯದಲ್ಲಿ ಗೋಕುಳ ಜಾಧವ್(30) ಕೋಮಲ್ ಜಾಧವ್(26) ಶುಭ ಜಾಧವ್(1) ಮಾಹಿ ಜಾಧವ್(3) ನೀರು ಪಾಲಾಗಿದ್ದಾರೆ.

    ಇನ್ನೂ ಅದೇ ದೋಣಿಯಲ್ಲಿ ಮತ್ತಿಬ್ಬರು ವಿಹಾರಿಗಳು ಸಹ ಪಯಣಿಸುತ್ತಿದ್ದು, ಅವರೂ ನೀರು ಪಾಲಾಗಿದ್ದಾರೆ. ಕುಗ್ಗಾಂವ್ ಗ್ರಾಮದ ಅನುರಾಗ್ ಅವಘಡೆ, ಗೌರವ್ ಡೋಂಗರೆ ನೀರುಪಾಲುದವರು. ನೀರುಪಾಲಾಗಿರುವವರ ಹುಡುಕಾಟಕ್ಕೆ ರಾಷ್ತ್ರೀಯ ವಿಪತ್ತು ನಿರ್ವಹಣಾ ದಳ (NDRF) ತಂಡದ ಸಿಬ್ಬಂದಿ ಆಗಮಿಸಿದ್ದಾರೆ. ಸ್ಥಳೀಯ ಪೊಲೀಸರ ಸಹಾಯದೊಂದಿಗೆ ಎನ್ ಡಿ ಆರ್ ಎಫ್ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ಹುಡುಕಾಟ ಮುಂದುವರಿಸಿದ್ದಾರೆ. ಇದನ್ನೂ ಓದಿ: HDK ಅಫಿಡವಿಟ್, ಅಶೋಕ್ ರೈಟಿಂಗ್‌ನಲ್ಲಿ ಕೊಡ್ಲಿ- ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ಟಾಂಗ್

  • ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

    ಮದ್ಯ ಕುಡಿಯಲು 90 ನಿಮಿಷದಲ್ಲಿ 48,000 ರೂ. ಖರ್ಚು ಮಾಡಿದ್ದ ಕಿಲ್ಲರ್‌ ಬಾಯ್‌ – ಮುಂದಾಗಿದ್ದೇನು ಗೊತ್ತೇ?

    ಮುಂಬೈ: ಮದ್ಯದ ಅಮಲಿನಲ್ಲಿ ಐಷಾರಾಮಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳ ಸಾವಿಗೆ (Pune Porsche horror) ಕಾರಣನಾದ ಆಪ್ರಾಪ್ತನಿಗೆ ಜಾಮೀನು ನೀಡಿದ್ದ ವಿಚಾರದಲ್ಲಿ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಈ ಬೆನ್ನಲ್ಲೇ ಪುಣೆ ಪೊಲೀಸ್ ಆಯುಕ್ತರಾದ (Pune Police commissioner) ಅಮಿತೇಶ್ ಕುಮಾರ್ ಸ್ಫೋಟಕ ಮಾಹಿತಿಯೊಂದನ್ನ ನೀಡಿದ್ದಾರೆ.

    ಈ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸ್‌ ಆಯುಕ್ತರು, ಇಬ್ಬರು ಟೆಕ್ಕಿಗಳಿಗೆ (Techies) ಕಾರು ಡಿಕ್ಕಿ ಹೊಡೆಯುವ ಮುನ್ನ ಅಪ್ರಾಪ್ತ ಎರಡು ಬಾರ್‌ಗಳಿಗೆ ಹೋಗಿದ್ದ. ಅದರಲ್ಲಿ ಮೊದಲನೇ ಬಾರ್‌ಗೆ ಹೋಗಿದ್ದಾಗ ಮದ್ಯಕ್ಕಾಗಿ ಕೇವಲ 90 ನಿಮಿಷದಲ್ಲಿ 48 ಸಾವಿರ ರೂ. ಖರ್ಚು ಮಾಡಿದ್ದಾನೆ ಎಂದು ಸ್ಫೋಟಕ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    ಹೌದು. ಶನಿವಾರ ರಾತ್ರಿಯೇ ಅಪ್ರಾಪ್ತ ತನ್ನ ಸ್ನೇಹಿತರೊಟ್ಟಿಗೆ ರಾತ್ರಿ 10:40ರ ವೇಳೆಗೆ ಕೋಸಿ ರೆಸ್ಟೋರೆಂಟ್-ಪಬ್‌ಗೆ ಹೋಗಿದ್ದಾನೆ. ಅಲ್ಲಿ ಕೇವಲ 90 ನಿಮಿಷದಲ್ಲೇ 48 ಸಾವಿರ ರೂ. ಖರ್ಚು ಮಾಡಿದ್ದಾನೆ. ಅಲ್ಲಿ ಸೇವೆ ನೀಡಲು ನಿಲ್ಲಿಸಿದ ನಂತರ ತಡರಾತ್ರಿ 12:10ರ ವೇಳೆಗೆ ಬ್ಲ್ಯಾಕ್ ಮ್ಯಾರಿಯೊಟ್‌ ಪಬ್‌ಗೆ ತೆರಳಿದ್ದಾನೆ. ಆದ್ರೆ 48 ಸಾವಿರ ರೂ. ವೆಚ್ಚ ಆತನದ್ದೊಬ್ಬನದ್ದೇ ಅಲ್ಲ. ಸ್ನೇಹಿತರಿಗೂ ಕೊಡಿಸಿದ ವೆಚ್ಚ ಸೇರಿ ಆಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿರುವುದಾಗಿ ವರದಿಯಾಗಿದೆ.

    ಭಾನುವಾರ ಅಪ್ತಾಪ್ತನನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ನಂತರ ಆತನ ರಕ್ತದ ಮಾದರಿಯನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ. ಸದ್ಯ ಆರೋಪಿ ವಿರುದ್ಧ ಸೆಕ್ಷನ್‌ 304 ಮತ್ತು 304 (ಎ) ಅನ್ವಯ ಕೇಸ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಪಘಾತಕ್ಕೆ ಇಬ್ಬರು ಟೆಕ್ಕಿಗಳು ಬಲಿ ಕೇಸ್‌; ಕಾರು ಚಲಾಯಿಸಿದ ಅಪ್ರಾಪ್ತನ ತಂದೆ ಬಂಧನ

    ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ:
    ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ ರಾಜ ಮರ್ಯಾದೆ ನೀಡಿದ್ರು. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಆತಿಥ್ಯ ಕೊಟ್ಟಿದ್ರು ಎಂಬ ವಿಚಾರ ಬಯಲಾಗಿದೆ.

    ಇದು ಗೊತ್ತಾದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದ್ದಾರೆ. ಸಾಕಷ್ಟು ಟೀಕೆ, ಆಕ್ರೋಶದ ನಂತ್ರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ರನ್ನು ಬಂಧಿಸಿದ್ದಾರೆ. ಅಪ್ರಾಪ್ತ ಮಗನನ್ನು ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು. ಅವರಿಗೆ ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮಮತಾಗೆ ನಿಮ್ಮ ಬೆಲೆ ಎಷ್ಟು ಎಂದ ಬಿಜೆಪಿ ಅಭ್ಯರ್ಥಿ ಅಭಿಜಿತ್ ಗಂಗೋಪಾಧ್ಯಾಯ 24 ಗಂಟೆ ಪ್ರಚಾರದಿಂದ ನಿಷೇಧ

    ಬೆಂಗಳೂರಿನ ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೇ 1,600 ಕಿಲೋಮೀಟರ್ ಸಂಚಾರ ಮಾಡಿರೋದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ. ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ. 200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಬೈಕ್‌ನಲ್ಲಿ ತೆರಳುತ್ತಿದ್ದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ದರು.

  • ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    ಕಿಲ್ಲರ್ ಬಾಯ್‌ಗೆ ಪುಣೆ ಠಾಣೆಯಲ್ಲಿ ರಾಜಾತಿಥ್ಯ – ಪಿಜ್ಜಾ, ಬಿರಿಯಾನಿ ತಿನ್ನಿಸಿದ್ದ ಪೊಲೀಸರ ವಿರುದ್ಧ ಆಕ್ರೋಶ

    – ದಿಢೀರ್‌ ಪುಣೆಗೆ ಆಗಮಿಸಿದ ಪೊಲೀಸರ ಜೊತೆ ಫಡ್ನಾವೀಸ್‌ ಸಭೆ
    – ಬೆಂಗಳೂರು ಶೋರೂಂನಿಂದ ಪೋರ್ಶೆ ಖರೀದಿ

    ಪುಣೆ: ಮದ್ಯದ ಅಮಲಿನಲ್ಲಿ ಐಶಾರಾಮಿ ಪೋರ್ಶೆ ಕಾರು (Pune Porsche Accident) ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾದ ಆಪ್ರಾಪ್ತನಿಗೆ ಜಾಮೀನು (Bail) ನೀಡಿದ ವಿಚಾರ ಇಡೀ ದೇಶದಲ್ಲೇ ಭಾರೀ ಚರ್ಚೆ ಆಗುತ್ತಿದೆ. ಇದೇ ಹೊತ್ತಲ್ಲಿ, ಪ್ರಭಾವಿ ಬಿಲ್ಡರ್ ಪುತ್ರನಿಗೆ ಪೊಲೀಸರು ಠಾಣೆಯಲ್ಲಿ (Police Station) ರಾಜ ಮರ್ಯಾದೆ ನೀಡಿದ್ದಾರೆ. ಪಿಜ್ಜಾ, ಬರ್ಗರ್, ಬಿರಿಯಾನಿ ತಿನ್ನಿಸಿ ವಿವಿಐಪಿ ಅತಿಥ್ಯ ನೀಡಿದ ವಿಚಾರ ಬೆಳಕಿಗೆ ಬಂದಿದೆ.

    ಈ ವಿಚಾರ ತಿಳಿದ ಕೂಡಲೇ ಕಾಂಗ್ರೆಸ್ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿದರು. ಸಾಕಷ್ಟು ಟೀಕೆ, ಆಕ್ರೋಶದ ನಂತರ ಎಚ್ಚೆತ್ತ ಪೊಲೀಸರು, 17 ವರ್ಷದ ಯುವಕನ ತಂದೆ, ಬಿಲ್ಡರ್ ವಿಶಾಲ್ ಅಗರ್ವಾಲ್‌ ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪ್ರಾಪ್ತನಿಗೆ ಅಪಘಾತದ ಬಗ್ಗೆ ಪ್ರಬಂಧ ಬರೆಯುವ ಶಿಕ್ಷೆ

    ಉದ್ದೇಶಪೂರ್ವಕವಾಗಿ ನಿರ್ಲಕ್ಷ್ಯ ಮಾಡಿರುವುದು, ಮಾದಕವಸ್ತುಗಳನ್ನು ಸಿಗುವಂತೆ ಮಾಡಿದ ಆರೋಪದಡಿ ಅಪ್ರಾಪ್ತನ ತಂದೆಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಅಪ್ರಾಪ್ತನಿಗೆ ಮದ್ಯ ಪೂರೈಸಿದ ಆರೋಪದ ಮೇರೆಗೆ ಕೋಸಿ ರೆಸ್ಟೋರೆಂಟ್ ಮಾಲಿಕ ಸಚಿನ್ ಕಾಟ್ಕರ್, ಹೋಟೆಲ್ ಬ್ಲಾಕ್ ಮ್ಯಾನೇಜರ್ ಸಂದೀಪ್ ಸಾಂಗ್ಳೆ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರಿನ (Bengaluru) ಪೋರ್ಶೆ ಶೋರೂಂನಲ್ಲೇ ಈ ಕಾರು ಖರೀದಿ ಮಾಡಿದ್ದು, ನಂಬರ್ ಪ್ಲೇಟ್ ಇಲ್ಲದೆ 1,600 ಕಿಲೋಮೀಟರ್ ಸಂಚಾರ ಮಾಡಿರುವುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದೆ. ಈ ಮಧ್ಯೆ, ಅಪಘಾತ ಎಸಗಿದ ಅಪ್ರಾಪ್ತ ಬಾರ್‌ನಲ್ಲಿ ಮದ್ಯ ಸೇವಿಸುವ, ಮಾರ್ಗಮಧ್ಯೆ ಇಬ್ಬರು ಟೆಕ್ಕಿಗಳಿಗೆ ಕಾರನ್ನು ಡಿಕ್ಕಿ ಹೊಡೆಸುವ ದೃಶ್ಯಾವಳಿಗಳು ವೈರಲ್ ಆಗಿವೆ.

    200 ಕಿಲೋಮೀಟರ್ ವೇಗದಲ್ಲಿ ಪೋರ್ಶೆ ಕಾರನ್ನು ಓಡಿಸಿದ್ದ ಅಪ್ರಾಪ್ತ, ನಿಯಂತ್ರಣ ಕಳೆದುಕೊಂಡು ಬೈಕ್‌ಗೆ ಡಿಕ್ಕಿ ಹೊಡೆದಿದ್ದ.ಬೈಕ್‌ನಲ್ಲಿ ತೆರಳ್ತಿದ್ದ ಟೆಕ್ಕಿಗಳಾದ ಅನಿಶ್ ಮತ್ತು ಅಶ್ವಿನಿ ಮೃತಪಟ್ಟಿದ್ರು. ಮೃತರ ಕುಟುಂಬಸ್ಥರು ಕೂಡ, ಅಪ್ರಾಪ್ತನ ಜಾಮೀನು ರದ್ದು ಮಾಡಿ ಕಠಿಣ ಶಿಕ್ಷೆ ನೀಡುವಂತೆ ಒತ್ತಾಯಿಸಿದ್ದಾರೆ.

    ಫಡ್ನಾವೀಸ್‌ ಸಭೆ:
    ಪುಣೆ ಅಪಘಾತ ಪ್ರಕರಣವನ್ನು ಮಹಾರಾಷ್ಟ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ನಿನ್ನೆ ಪುಣೆ ಪೊಲೀಸ್ ಆಯುಕ್ತರಿಗೆ ಫೋನ್‌ ಮಾಡಿದ್ದ ಗೃಹ ಸಚಿವರು ಆಗಿರುವ ಡಿಸಿಎಂ ದೇವೇಂದ್ರ ಫಡ್ನಾವೀಸ್ (Devendra Fadnavis) ಇಂದು ದಿಢೀರ್ ಎಂದು ಪುಣೆಯ ಪೊಲೀಸ್ ಮುಖ್ಯಕಚೇರಿಗೆ ಧಾವಿಸಿ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಸೇರಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತರಾಟೆಗೆ ತೆಗೆದುಕೊಂಡರು.

    ಇಬ್ಬರ ಸಾವಿಗೆ ಕಾರಣನಾದ ಅಪ್ರಾಪ್ತನ ವಿಚಾರದಲ್ಲಿ ಮೃದು ಧೊರಣೆ ತಾಳದೇ, ಕಠಿಣ ಕ್ರಮಗಳನ್ನು ಜರುಗಿಸುವಂತೆ ಸೂಚನೆ ನೀಡಿದರು. 17 ವರ್ಷ ತುಂಬಿರುವ ಅಪ್ರಾಪ್ತನನ್ನು ವಯಸ್ಕ ಎಂದು ಪರಿಗಣಿಸಲು ಬಾಲನ್ಯಾಯಮಂಡಳಿ ಮೊರೆ ಹೋಗಲು ಪುಣೆ ಪೊಲೀಸರಿಗೆ ಸೂಚಿಸಿದರು.

    ಈ ಮಧ್ಯೆ ಅಪ್ರಾಪ್ತನಿಗೆ ಕೋರ್ಟ್ ನೀಡಿದ್ದ ಜಾಮೀನನ್ನು ಪ್ರಶ್ನಿಸಿ ಪುಣೆ ಪೊಲಿಸರು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದಾರೆ.

     

  • ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

    ಅಪ್ರಾಪ್ತನ ಹುಚ್ಚಾಟಕ್ಕೆ ಇಬ್ಬರು ಟೆಕ್ಕಿಗಳು ಬಲಿ – ಅಪಘಾತದ ಬಗ್ಗೆ ಪ್ರಬಂಧ ಬರೆಯುವಂತೆ ಸೂಚಿಸಿದ ಕೋರ್ಟ್‌

    ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿ (Pune) ಅಪ್ರಾಪ್ತನ ನಿರ್ಲಕ್ಷ್ಯಕ್ಕೆ ಇಬ್ಬರ ಜೀವ ಬಲಿ ಪಡೆದಿದೆ. ಈ ಪ್ರಕರಣದಲ್ಲಿ ಅಪ್ರಾಪ್ತನಿಗೆ ಜಾಮೀನು (Bail) ನೀಡುವ ಸಮಯದಲ್ಲಿ ಕೋರ್ಟ್ (Court) ವಿಧಿಸಿದ ಷರತ್ತು ಚರ್ಚೆಗೆ ಗ್ರಾಸವಾಗಿದೆ.

    ಭಾನುವಾರ ರಾತ್ರಿ ಪ್ರತಿಷ್ಠಿತ ಬಿಲ್ಡರ್‌ನ 17 ವರ್ಷದ ಪುತ್ರನೊಬ್ಬ ಮದ್ಯದ ಅಮಲಿನಲ್ಲಿ ಐಷಾರಾಮಿ ಪೋರ್ಶೆ ಕಾರನ್ನು ಅಡ್ಡಾದಿಡ್ಡಿಯಾಗಿ ಚಲಾಯಿಸಿ ಇಬ್ಬರ ಟೆಕ್ಕಿಗಳನ್ನ ಬಲಿ ಪಡೆದಿದ್ದ.


    ಆರೋಪಿಯನ್ನು ಬಂಧಿಸಿದ ಪೊಲೀಸರು ಕೋರ್ಟ್ ಮುಂದೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಸಂದರ್ಭದಲ್ಲಿ ಅಪಘಾತದ ಬಗ್ಗೆ ಪ್ರಬಂಧ ಬರೆಯಬೇಕು. 15 ದಿನ ಟ್ರಾಫಿಕ್ ಪೊಲೀಸರ ಜೊತೆ ಕೆಲಸ ಮಾಡಬೇಕು. ಮಾನಸಿಕ ತಜ್ಞರಿಂದ ಕೌನ್ಸಿಲಿಂಗ್ ತೆಗೆದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಿದೆ. ಇದನ್ನೂ ಓದಿ: ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಗೌರವಾರ್ಥ ಮಂಗಳವಾರ ಭಾರತದಲ್ಲಿ ಶೋಕಾಚರಣೆ

    ಇದು ಭಾರೀ ಚರ್ಚೆಗೆ ಗುರಿಯಾಗಿದೆ. ಇಬ್ಬರ ಸಾವಿಗೆ ಇದೇನಾ ನ್ಯಾಯ ಎಂದು ಪ್ರಶ್ನಿಸಿ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

     

  • ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ದುರ್ಮರಣ!

    ಕ್ರಿಕೆಟ್‌ ಆಡುತ್ತಿದ್ದಾಗ ಖಾಸಗಿ ಅಂಗಕ್ಕೆ ಚೆಂಡು ಬಡಿದು ಬಾಲಕ ದುರ್ಮರಣ!

    ಮುಂಬೈ: ಬಾಲಕನೊಬ್ಬನ ಖಾಸಗಿ ಅಂಗಕ್ಕೆ ಕ್ರಿಕೆಟ್‌ ಬಾಲ್‌ ಬಡಿದು ಸ್ಥಳದಲ್ಲಿಯೇ ಮೃಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಬಾಲಕನನ್ನು ಶೌರ್ಯ (11) ಎಂದು ಗುರಿತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ.

    ಬಾಲಕ ಶೌರ್ಯ ತನ್ನ ಸ್ನೇಹಿತರ ಜೊತೆ ಕ್ರಿಕೆಟ್‌ ಆಟವಾಡುತ್ತಿದ್ದನು. ಅಂತೆಯೇ ಈತ ಬೌಲಿಂಗ್‌ ಮಾಡುತ್ತಿದ್ದಾಗ ಬ್ಯಾಟ್ಸ್‌ಮನ್‌ ನೇರವಾಗಿ ಚೆಂಡನ್ನು ಶೌರ್ಯ ಕಡೆಗೆ ಹೊಡೆದಿದ್ದಾನೆ. ಹೀಗಾಗಿ ಚೆಂಡು ಬಲದಿಂದ ಶೌರ್ಯ ಅವರ ಖಾಸಗಿ ಭಾಗಕ್ಕೆ ಬಂದು ಬಡಿದಿದೆ. ಕೂಡಲೇ ಆತ ಕುಸಿದು ಬಿದ್ದಿದ್ದಾನೆ.

    ಕೂಡಲೇ ಸ್ನೇಹಿತರು ಬಂದು ಶೌರ್ಯನನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಶೌರ್ಯ ಅದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಆಕಸ್ಮಿಕ ಸಾವು ಎಂದು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

  • ಒಪ್ಪಂದ ಕೊನೆಗೊಳಿಸಲು ಮುಂದಾದ ಸಿಟ್ಟಲ್ಲಿ ಕಂಪನಿಗೆ ಬ್ಯಾಂಡೇಜ್‌, ಕಾಂಡೋಮ್‌ ತುಂಬಿ ಸಮೋಸಾ ಪೂರೈಕೆ!

    ಒಪ್ಪಂದ ಕೊನೆಗೊಳಿಸಲು ಮುಂದಾದ ಸಿಟ್ಟಲ್ಲಿ ಕಂಪನಿಗೆ ಬ್ಯಾಂಡೇಜ್‌, ಕಾಂಡೋಮ್‌ ತುಂಬಿ ಸಮೋಸಾ ಪೂರೈಕೆ!

    – ಓರ್ವನ ಬಂಧನ, ಐವರ ವಿರುದ್ಧ ಎಫ್‌ಐಆರ್‌

    ಮುಂಬೈ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಂಪನಿಯ (Pune Company) ಕ್ಯಾಂಟೀನ್‌ನಲ್ಲಿ ಸಮೋಸಾದೊಳಗೆ (Samosa) ಬ್ಯಾಂಡೇಜ್‌, ಕಾಂಡೋಮ್, ಕಲ್ಲುಗಳು ಮತ್ತು ತಂಬಾಕು ಮುಂತಾದ ವಸ್ತುಗಳು ಪತ್ತೆಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು, ಐವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

    ಆರೋಪಿಗಳನ್ನು ರಹೀಮ್ ಶೇಖ್, ಅಜರ್ ಶೇಖ್, ಮಜರ್ ಶೇಖ್, ಅಜರ್ ಶೇಖ್ ಮತ್ತು ವಿಕ್ಕಿ ಶೇಖ್ ಎಂದು ಗುರುತಿಸಲಾಗಿದೆ. ಕಂಪನಿಯು ತಮ್ಮ ಒಪ್ಪಂದವನ್ನು ರದ್ದುಪಡಿಸಿದ ಕೋಪದಿಂದ ಆರೋಪಿಗಳೆಲ್ಲರೂ ಈ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: 3 ದಿನದಲ್ಲಿ ಸತತ 36 ಗಂಟೆ ವೀಡಿಯೋ ಕಾಲ್‌ – ಸೈಬರ್‌ ವಂಚನೆಗೆ ಸಿಕ್ಕಿ 15 ಲಕ್ಷ ರೂ. ಕಳೆದುಕೊಂಡ ಮಹಿಳೆ

    ಮಾಧ್ಯಮ ವರದಿಗಳ ಪ್ರಕಾರ, ಪುಣೆಯ ಪಿಂಪ್ರಿ ಚಿಂಚ್ವಾಡ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಇಲ್ಲಿನ ಚಿಖಾಲಿ ಮೂಲದ ಕಂಪನಿಯೊಂದರ ಅಧಿಕಾರಿ ಕೀರ್ತಿಕುಮಾರ್ ಶಂಕರರಾವ್ ದೇಸಾಯಿ ಅವರು ಏ.7 ರಂದು ಪೊಲೀಸರಿಗೆ ದೂರು ನೀಡಿದ್ದಾರೆ. ಚಿಖಾಲಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಲ್ಲಿ, ತಮ್ಮ ಕಂಪನಿಯು ಚಿಖಾಲಿಯ ಮತ್ತೊಂದು ದೊಡ್ಡ ಕಂಪನಿಯಿಂದ ಆಹಾರ ಪೂರೈಕೆಗಾಗಿ ಆದೇಶವನ್ನು ಪಡೆದಿದೆ. ಅದರಂತೆ ಕೀರ್ತಿಕುಮಾರ್ ಅವರು ರಹೀಮ್ ಖಾನ್ ಮಾಲೀಕತ್ವದ SRS ಎಂಟರ್ ಪ್ರೈಸಸ್ ಹೆಸರಿನ ಕಂಪನಿಯೊಂದಿಗೆ ಸಮೋಸಾ ಪೂರೈಕೆಗೆ ಒಪ್ಪಂದ ಮಾಡಿಕೊಂಡಿರುವುದಾಗಿ ತಿಳಿಸಿದ್ದಾರೆ.

    ಆಗಿದ್ದೇನು..?: ಕೀರ್ತಿಕುಮಾರ್ ಪ್ರಕಾರ , ಒಂದು ದಿನ SRS ಕಂಪನಿಯಿಂದ ಸರಬರಾಜಾಗುತ್ತಿದ್ದ ಸಮೋಸದಲ್ಲಿ ಗಾಯಗಳಿಗೆ ಹಾಕುವ ಬ್ಯಾಂಡೇಜ್ (Bandage) ಪತ್ತೆಯಾಗಿದೆ. ಸಿಬ್ಬಂದಿಯಿಂದ ಈ ಕುರಿತು ದೂರು ಸ್ವೀಕರಿಸಿದ ಕೀರ್ತಿಕುಮಾರ್ ಅವರ ಕಂಪನಿಯು ಎಸ್‌ಆರ್‌ಎಸ್‌ನೊಂದಿಗಿನ ಒಪ್ಪಂದವನ್ನು ಮುರಿದುಕೊಳ್ಳಲಾಯಿತು. ಬಳಿಕ ಪುಣೆ ಮೂಲದ ಮತ್ತೊಂದು ಕಂಪನಿಯಾದ ಮನೋಹರ್ ಎಂಟರ್‌ಪ್ರೈಸಸ್‌ಗೆ ಸಮೋಸಾಗಳನ್ನು ಪೂರೈಸಲು ಸೂಚನೆ ನೀಡಿತು. ಇದರಿಂದ ಸಿಟ್ಟಿಗೆದ್ದ SRS ಮಾಲೀಕ ರಹೀಮ್ ಖಾನ್ ತನ್ನ ಸಹಚರರಾದ ಅಜರ್ ಶೇಖ್ ಮತ್ತು ಮಜರ್ ಶೇಖ್ ಜೊತೆ ಸೇರಿ ದೊಡ್ಡ ಸಂಚು ರೂಪಿಸಿದ್ದ.

    ಅದರಂತೆ ಮಾರ್ಚ್ 27 ರಂದು ರಹೀಮ್ ಖಾನ್, ತನ್ನ ಕೆಲಸಗಾರರಿಗೆ ಕಾಂಡೋಮ್‌ಗಳು (Condoms), ಗುಟ್ಕಾ (Gutkha) ಮತ್ತು ಕಲ್ಲುಗಳನ್ನು ಸಮೋಸಾಳ ಒಳಗೆ ತುಂಬಲು ಸೂಚಿಸಿದ್ದಾನೆ. ಬಳಿಕ ಒಪ್ಪದ ಕೊನೆಗೊಳಿಸಲು ಮುಂದಾದ ಕಂಪನಿಗೆ ಬೆಳಗ್ಗೆ 7:30 ರಿಂದ 9 ರ ನಡುವೆ ಈ ಸಮೋಸಗಳನ್ನು ವಿತರಿಸಿದರು. ಈ ವೇಳೆ ಕಾಂಡೋಮ್‌, ಗುಟ್ಕಾ ಮೊದಲಾದ ವಸ್ತುಗಳು ಸಿಕ್ಕಿವೆ. ಈ ಕುರಿತು ಸಿಬ್ಬಂದಿಯು ಕೀರ್ತಿಕುಮಾರ್ ಅವರಿಗೆ ದೂರು ನೀಡಿದ್ದಾರೆ. ಕೂಡಲೇ ಕೀರ್ತಿ ಕುಮಾರ್‌ ಅವರು, ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

    ದೂರು ಸ್ವೀಕರಿಸಿದ ಪೊಲೀಸರು ರಹೀಮ್ ಶೇಖ್, ಫಿರೋಜ್ ಶೇಖ್, ವಿಕ್ಕಿ ಶೇಖ್, ಅಜರ್ ಶೇಖ್ ಮತ್ತು ಮಜರ್ ಶೇಖ್ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ಅಲ್ಲದೇ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 328 (ವಿಷದ ಮೂಲಕ ನೋವುಂಟುಮಾಡುವುದು), 120-ಬಿ (ಕ್ರಿಮಿನಲ್‌ ಪಿತೂರಿ) ಮತ್ತು 34 (ಸಾಮಾನ್ಯ ಉದ್ದೇಶದ ಮುಂದುವರಿಕೆಗಾಗಿ ಹಲವಾರು ವ್ಯಕ್ತಿಗಳು ಮಾಡಿದ ಕೃತ್ಯಗಳು) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಈ ಕುರಿತು ತನಿಖೆ ಮುಂದುವರಿದಿದೆ.

  • ಅಪ್ರಾಪ್ತೆಯ ಅತ್ಯಾಚಾರವೆಸಗಿ ಕೊಲೆ- ಅಪರಾಧಿಗೆ ಮರಣದಂಡನೆ

    ಅಪ್ರಾಪ್ತೆಯ ಅತ್ಯಾಚಾರವೆಸಗಿ ಕೊಲೆ- ಅಪರಾಧಿಗೆ ಮರಣದಂಡನೆ

    ಮುಂಬೈ: ಆರು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಪ್ರಕರಣದಲ್ಲಿ 24 ವರ್ಷದ ಅಪರಾಧಿಗೆ ಪುಣೆಯ ಸೆಷನ್ಸ್ ನ್ಯಾಯಾಲಯ (Pune Sessions Court) ಮರಣದಂಡನೆ (Death Penalty) ವಿಧಿಸಿ ತೀರ್ಪು ನೀಡಿದೆ. ಅಲ್ಲದೇ ಸಾಕ್ಷ್ಯವನ್ನು ಮರೆಮಾಚಿದಕ್ಕಾಗಿ ಮತ್ತು ಘಟನೆಯನ್ನು ಪೊಲೀಸರಿಗೆ (Police) ತಿಳಿಸದ ಆರೋಪದ ಮೇಲೆ ಆತನ ತಾಯಿಗೂ 7 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.

    ಆಗಸ್ಟ್ 2022 ರಲ್ಲಿ ಆರು ವರ್ಷ ವಯಸ್ಸಿನ ಬಾಲಕಿ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಮಾವಲ್ ತಾಲೂಕಿನ ಕಾಮಶೆಟ್ ನಿವಾಸಿಯಾದ ಅಪರಾಧಿ ಅವಳನ್ನು ಅಪಹರಿಸಿ, ಅತ್ಯಾಚಾರ ಮಾಡಿ ಕತ್ತು ಸೀಳಿ ಹತ್ಯೆಗೈದಿದ್ದ. ಬಳಿಕ ಮೃತದೇಹವನ್ನು ತನ್ನ ಮನೆಯ ಹಿಂದಿನ ಮರದ ಕೆಳಗಿನ ಗುಂಡಿಯಲ್ಲಿ ಹೂತುಹಾಕಲು ಪ್ರಯತ್ನಿಸಿದ್ದ. ಈ ವೇಳೆ ಆತನ ತಾಯಿ ತನ್ನ ಮಗನನ್ನು ಶಿಕ್ಷೆಯಿಂದ ರಕ್ಷಿಸಲು ಮೃತ ಬಾಲಕಿಯ ಬಟ್ಟೆ ಮತ್ತು ವಸ್ತುಗಳನ್ನು ಬಚ್ಚಿಟ್ಟಿದ್ದಳು. ಮರುದಿನ ಆತನ ಮನೆಯ ಹಿಂದೆ ಬಾಲಕಿಯ ಮೃತದೇಹ ಪತ್ತೆಯಾಗಿತ್ತು. ಬಳಿಕ ಅಪರಾಧಿಯನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ರಷ್ಯಾದಲ್ಲಿ ಉಗ್ರರ ಅಟ್ಟಹಾಸ- 70ಕ್ಕೂ ಹೆಚ್ಚು ಮಂದಿ ದುರ್ಮರಣ

    ಪೊಲೀಸರ ತನಿಖೆಯ ಸಮಯದಲ್ಲಿ ಇಬ್ಬರೂ ಅಪರಾಧಿಗಳು ತಮ್ಮ ಕೃತ್ಯವನ್ನು ಒಪ್ಪಿಕೊಂಡಿದ್ದರು. ಅಲ್ಲದೇ ನ್ಯಾಯಾಲಯದಲ್ಲೂ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದರು. ಬಳಿಕ ಸುದೀರ್ಘ ವಿಚಾರಣೆ ನಡೆಸಿದ್ದ ನ್ಯಾಯಾಲಯ ಇಬ್ಬರೂ ಅಪರಾಧಿಗಳಿಗೂ ಶಿಕ್ಷೆ ಪ್ರಕಟಿಸಿದೆ.

    ಶಿಕ್ಷೆ ಪ್ರಕಟಿಸುವ ವೇಳೆ ನ್ಯಾಯಾಲಯ, ಅಪರಾಧಿ ಲೈಂಗಿಕ ಹುಚ್ಚನಾಗಿದ್ದಾನೆ. ಕ್ರೂರ ಲೈಂಗಿಕ ಆಲೋಚನೆಗಳಿಂದ ಗೀಳನ್ನು ಹೊಂದಿದ್ದಾನೆ. ಮಕ್ಕಳ ಅಶ್ಲೀಲತೆಯನ್ನು ವೀಕ್ಷಿಸಲು ವ್ಯಸನಿಯಾಗಿದ್ದು, ಈತ ಎಸಗಿರುವುದು ಅತ್ಯಂತ ಹೇಯ ಕೃತ್ಯ ಎಂದಿದೆ. ಸರಿಸುಮಾರು ಕೃತ್ಯ ನಡೆದ ಒಂದು ವರ್ಷ, ಏಳು ತಿಂಗಳಲ್ಲಿ ಶಿಕ್ಷೆ ಪ್ರಕಟವಾಗಿದೆ. ಇದನ್ನೂ ಓದಿ: ಅರವಿಂದ್‌ ಕೇಜ್ರಿವಾಲ್‌ 7 ದಿನಗಳ ಕಾಲ ಇ.ಡಿ ಕಸ್ಟಡಿಗೆ

  • ಹೋಟೆಲ್‌ ಒಳಗೆ ಕುಳಿತಿದ್ದವನ ಮೇಲೆ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿದ್ರು!

    ಹೋಟೆಲ್‌ ಒಳಗೆ ಕುಳಿತಿದ್ದವನ ಮೇಲೆ ಗುಂಡು ಹಾರಿಸಿ, ಮಚ್ಚಿನಿಂದ ಕೊಚ್ಚಿದ್ರು!

    ಮುಂಬೈ: ಅನೇಕ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಯನ್ನು 8 ಮಂದಿ ದುಷ್ಕರ್ಮಿಗಳ ತಂಡವು ಮಾರಣಾಂತಿಕವಾಗಿ ಗುಂಡಿಕ್ಕಿ ಕೊಂದಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ.

    ಮೃತನನ್ನು ಅವಿನಾಶ್ ಧನ್ವೆ (31) ಎಂದು ಗುರುತಿಸಲಾಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇಂದಾಪುರ ಪ್ರದೇಶದಲ್ಲಿ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಹಳೆಯ ದ್ವೇಷದಿಂದ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಸಿಸಿಟಿವಿಯಲ್ಲಿ ಏನಿದೆ..?: ಅವಿನಾಶ್ ಧನ್ವೆ ಸಹಿತ ನಾಲ್ವರು ಪುಣೆ-ಸೋಲಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಹೋಟೆಲ್ ಜಗದಂಬಾದಲ್ಲಿ ಕುಳಿತಿರುತ್ತಾರೆ. ಧನ್ವೆ ಫೋನಿನಲ್ಲಿ ಮಾತನಾಡುತ್ತಿರುತ್ತಾನೆ. ಈ ವೇಳೆ ಇಬ್ಬರು ಬಂದು ಏಕಾಏಕಿ ಧನ್ವೆ ಮೇಲೆ ಗುಂಡಿನ ಸುರಿಮಳೆಗೈಯುತ್ತಾರೆ. ಇದರಿಂದ ಉಳಿದ ಮೂವರು ಗಾಬರಿಗೊಂಡು ಅಲ್ಲಿಂದ ಎಸ್ಕೇಪ್‌ ಆಗುತ್ತಾರೆ. ಇತ್ತ ಮತ್ತೆ 3-4 ಮಂದಿ ಓಡೋಡಿ ಬಂದು ಮಚ್ಚಿನಿಂದ ಮನಬಂದಂತೆ ಮಾರಣಾಂತಿಕವಾಗಿ ಹಲ್ಲೆ ಮಾಡುತ್ತಾರೆ. ಪರಿಣಾಮ ಧನ್ವೆ ಸ್ಥಳದಲ್ಲಿಯೇ ಸಾವನ್ನಪ್ಪುತ್ತಾನೆ. ಇದನ್ನೂ ಓದಿ: ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ- ನಾನಾ ಅವಾಂತರ ಸೃಷ್ಠಿ

    ಇತ್ತ ಧನ್ವೆ ಸಾವನ್ನಪ್ಪುತ್ತಿದ್ದಂತೆಯೇ ದುಷ್ಕರ್ಮಿಗಳು ಅಲ್ಲಿಂದ ಪರಾರಿಯಾಗುವುದನ್ನು ಸಿಸಿಟಿವಿ ದೃಶ್ಯದಲ್ಲಿ ಕಾಣಬಹುದಾಗಿದೆ. ಐದರಿಂದ ಆರು ಮಂದಿ ಕಾರಿನಲ್ಲಿ ಬಂದು ಹೋಟೆಲ್‌ಗೆ ಧಾವಿಸಿ ಕೃತ್ಯ ಎಸಗಿರುವುದು ಸಿಸಿಟಿವಿಯಿಂದ ಬಯಲಾಗಿದೆ. ಸದ್ಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್‌ ವೈರಲ್‌ ಆಗುತ್ತಿದೆ.

    ಸಿಸಿಟಿವಿ ದೃಶ್ಯಗಳ ಮೂಲಕ 8 ಮಂದಿ ದುಷ್ಕರ್ಮಿಗಳನ್ನು ಗುರುತಿಸಿದ್ದೇವೆ. ಸದ್ಯ ಅವರನ್ನು ಬಂಧಿಸಲು ತಂಡಗಳನ್ನು ರಚಿಸಿದ್ದೇವೆ ಎಂದು ಪುಣೆ ಗ್ರಾಮಾಂತರ ಠಾಣೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

  • ಸಲಿಂಗಿ ಎಂಬುದನ್ನು ಮರೆಮಾಚಿ ಮದುವೆ – ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

    ಸಲಿಂಗಿ ಎಂಬುದನ್ನು ಮರೆಮಾಚಿ ಮದುವೆ – ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ

    ಪುಣೆ: ಪತಿ (Husband) ಸಲಿಂಗಿಯಾಗಿದ್ದು, ಆ ವಿಚಾರವನ್ನು ಮರೆಮಾಚಿ ಮದುವೆಯಾಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ತನ್ನ ಪತಿ ಮತ್ತು ಅತ್ತೆಯ ವಿರುದ್ಧ ಪೊಲೀಸ್ (Police) ಠಾಣೆಯ ಮೆಟ್ಟಿಲೇರಿರುವ ಘಟನೆ ಪುಣೆಯ‌ (Pune) ವಡ್ಗಾಂಶೇರಿ ಎಂಬಲ್ಲಿ ನಡೆದಿದೆ.

    ಜುಲೈ 2022ರಲ್ಲಿ ಮಹಿಳೆಯ ವಿವಾಹವಾಗಿತ್ತು. ಮದುವೆಯ ಬಳಿಕ ಪತಿಯ ಲೈಂಗಿಕ ದೃಷ್ಟಿಕೋನದ ಆಧಾರದ ಮೇಲೆ ಆತ ಸಲಿಂಗಿ ಎಂಬುದು ಪತ್ನಿಗೆ ತಿಳಿದಿದೆ. ಇದರಿಂದ ಮಹಿಳೆ ಪತಿ ಹಾಗೂ ಅವಳ ಅತ್ತೆಯನ್ನು ಪ್ರಶ್ನಿಸಿದ್ದಾಳೆ. ಇದಾದ ಮೇಲೆ ಅತ್ತೆ ಹಾಗೂ ಪತಿ ಸೇರಿ ತನಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ್ದಾರೆ. ಅಲ್ಲದೇ ಕಾರು ಮತ್ತು ಹಣಕ್ಕೆ ಬೇಡಿಕೆ ಇಟ್ಟು ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾಳೆ. ಇದನ್ನೂ ಓದಿ: ನಿಮ್ಮ ರಾಮಮಂದಿರ ಸ್ಫೋಟಿಸುತ್ತೇವೆ – ಅಲ್ಲಾಹು ಅಕ್ಬರ್ ಹೆಸರಿನಲ್ಲಿ ಬೆದರಿಕೆ ಪತ್ರ

    ಈ ಸಂಬಂಧ ಪುಣೆಯ ಚಂದನ್ ನಗರ ಪೊಲೀಸ್ ಠಾಣೆಯಲ್ಲಿ ಮಹಿಳೆಯ ಪತಿ, ಅತ್ತೆ ಮತ್ತು ಮಾವನ ವಿರುದ್ಧ ಐಪಿಸಿ ಸೆಕ್ಷನ್ 420 (ವಂಚನೆ), 498 (ಎ) (ಕ್ರೌರ್ಯಕ್ಕೆ ಒಳಪಡಿಸುವುದು) ಮತ್ತು 504 (ಉದ್ದೇಶಪೂರ್ವಕವಾಗಿ ಅವಮಾನ)ರ ಅಡಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: 2 ಸಾವಿರ ಕೋಟಿ ರೂ ಮೌಲ್ಯದ ಡ್ರಗ್ಸ್ ಕಳ್ಳಸಾಗಣೆ: ಖ್ಯಾತ ನಿರ್ಮಾಪಕ ಜಾಫರ್ ಬಂಧನ