Tag: ಪುಣ್ಯತಿಥಿ

  • ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ – ಗಣ್ಯರಿಂದ ಗೌರವ ಸಮರ್ಪಣೆ

    ಅಟಲ್ ಬಿಹಾರಿ ವಾಜಪೇಯಿ ಪುಣ್ಯತಿಥಿ – ಗಣ್ಯರಿಂದ ಗೌರವ ಸಮರ್ಪಣೆ

    ನವದೆಹಲಿ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ ಪುಣ್ಯತಿಥಿ ಪ್ರಯುಕ್ತ ದೇಶಾದ್ಯಂತ `ಸದೈವ ಅಟಲ್’ (Sadaiv Atal) ಕಾರ್ಯಕ್ರಮದಡಿ ಗೌರವ ಸಲ್ಲಿಸಲಾಯಿತು. ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu), ಪ್ರಧಾನಿ ನರೇಂದ್ರ ಮೋದಿ (Narendra Modi), ಗೃಹ ಸಚಿವ ಅಮಿತ್ ಶಾ (Amit Shah), ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಸೇರಿದಂತೆ ಹಲವು ಗಣ್ಯರು ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದರು.

    ರಾಷ್ಟ್ರಪತಿ ಮುರ್ಮು ಅವರು ದೆಹಲಿಯ `ಸದೈವ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ, ವಾಜಪೇಯಿ ಅವರ ದೂರದೃಷ್ಟಿಯ ಆಡಳಿತ ಮತ್ತು ರಾಷ್ಟ್ರೀಯತೆಗೆ ಮಾಡಿದ ಕೊಡುಗೆಗಳನ್ನು ಸ್ಮರಿಸಿದರು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ, ರಾಜ್ಯಸಭಾ ಉಪಾಧ್ಯಕ್ಷ ಹರಿವಂಶ್, ದೆಹಲಿ ಸಿಎಂ ರೇಖಾ ಗುಪ್ತಾ ಮತ್ತು ಇತರ ಹಿರಿಯ ನಾಯಕರು, ಅಟಲ್ ಬಿಹಾರಿ ವಾಜಪೇಯಿ ಅವರ ದತ್ತು ಪುತ್ರಿ ನಮಿತಾ ಕೌಲ್ ಭಟ್ಟಾಚಾರ್ಯ ಕೂಡ ವಾಜಪೇಯಿ ಅವರಿಗೆ ಗೌರವ ಸಲ್ಲಿಸಿದರು. ಇದನ್ನೂ ಓದಿ: ಡಿ ಗ್ಯಾಂಗ್‌ಗೆ ಮತ್ತಷ್ಟು ಢವಢವ – ಫಾಸ್ಟ್‌ ಟ್ರ್ಯಾಕ್ ಕೋರ್ಟ್‌ಗೆ ಮನವಿ ಸಲ್ಲಿಸಲು ಪೊಲೀಸರ ತಯಾರಿ

    ಪ್ರಧಾನಿ ಮೋದಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಪೊಸ್ಟ್ ಮಾಡಿದ್ದು, ವಾಜಪೇಯಿ ಅವರ ಆದರ್ಶಗಳು ಭಾರತದ ಪ್ರಗತಿಯ ದಾರಿದೀಪವಾಗಿವೆ. ಅವರ ನಾಯಕತ್ವದಲ್ಲಿ ದೇಶ ಆರ್ಥಿಕ, ರಕ್ಷಣೆ ಮತ್ತು ರಾಜಕೀಯ ಕ್ಷೇತ್ರದಲ್ಲಿ ದಿಟ್ಟ ಹೆಜ್ಜೆ ಇಟ್ಟಿತು ಎಂದು ಹೇಳಿದರು.

    ಗೃಹ ಸಚಿವ ಅಮಿತ್ ಶಾ ಅವರು, ವಾಜಪೇಯಿ ಅವರ ಸರಳತೆ ಮತ್ತು ರಾಷ್ಟ್ರಕ್ಕಾಗಿ ಮಾಡಿದ ಸಮರ್ಪಣೆಯನ್ನು ಕೊಂಡಾಡಿದರು. ಅವರು ಭಾರತವನ್ನು ಜಾಗತಿಕ ಶಕ್ತಿಯಾಗಿ ರೂಪಿಸಿದರು ಎಂದು ತಿಳಿಸಿದರು. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಇಬ್ಬರು ಸಾವು, ಇಂದು ರೆಡ್ ಅಲರ್ಟ್ ಘೋಷಣೆ

    ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ವಾಜಪೇಯಿ ಅವರ ಆಡಳಿತದಲ್ಲಿ ದೇಶದ ರಕ್ಷಣಾ ಕ್ಷೇತ್ರದಲ್ಲಿ ಸಾಧಿಸಿದ ಮೈಲಿಗಲ್ಲುಗಳನ್ನು, ವಿಶೇಷವಾಗಿ ಪೋಖ್ರಾನ್ ಪರಮಾಣು ಪರೀಕ್ಷೆಯನ್ನು ನೆನಪಿಸಿಕೊಂಡರು. ಇದನ್ನೂ ಓದಿ: `ಗ್ರೀನ್ ಗರ್ಲ್’ಗೆ ಸಿಕ್ತು ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯ ಸಾಥ್

    ದೇಶದ ವಿವಿಧ ಭಾಗಗಳಲ್ಲಿ, ವಿಶೇಷವಾಗಿ ಬಿಜೆಪಿ ಆಡಳಿತದ ರಾಜ್ಯಗಳಲ್ಲಿ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸೆಮಿನಾರ್‌ಗಳು ಮತ್ತು ಶ್ರದ್ಧಾಂಜಲಿ ಸಭೆಗಳನ್ನು ಆಯೋಜಿಸಲಾಗಿದೆ. ವಾಜಪೇಯಿ ಅವರ ಕವಿತೆಗಳು, ಭಾಷಣಗಳು ಮತ್ತು ರಾಷ್ಟ್ರೀಯ ದೃಷ್ಟಿಕೋನವನ್ನು ಯುವ ಜನತೆಗೆ ತಿಳಿಸುವ ಕಾರ್ಯಕ್ರಮಗಳು ನಡೆಯಲಿದೆ.

    ಈ ಸಂದರ್ಭದಲ್ಲಿ, ವಾಜಪೇಯಿ ಅವರ ಜೀವನ ಮತ್ತು ಸಾಧನೆಗಳನ್ನು ಒಳಗೊಂಡ ಡಾಕ್ಯುಮೆಂಟರಿಗಳು ಮತ್ತು ಪುಸ್ತಕಗಳನ್ನು ಬಿಡುಗಡೆ ಮಾಡಲಾಯಿತು. ದೇಶದೆಲ್ಲೆಡೆ ರಾಜಕೀಯ ನಾಯಕರು, ಕಾರ್ಯಕರ್ತರು ‘ಸದೈವ ಅಟಲ್’ ಸ್ಮಾರಕದಲ್ಲಿ ಗೌರವ ಸಲ್ಲಿಸಿದರು.

  • ತಂದೆಯ ಪುಣ್ಯತಿಥಿಯಂದು ತಾಯಿಯೊಂದಿಗೆ ಗಿಡ ನೆಟ್ಟ ಸಂಸದ ಕಾಗೇರಿ

    ತಂದೆಯ ಪುಣ್ಯತಿಥಿಯಂದು ತಾಯಿಯೊಂದಿಗೆ ಗಿಡ ನೆಟ್ಟ ಸಂಸದ ಕಾಗೇರಿ

    ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಸಂಸದ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ‌ ಕಾಗೇರಿಯವರು (Vishweshwar Hegde Kageri) ತಂದೆ ಅನಂತ್ ಹೆಗಡೆಯವರ 5ನೇ ವರ್ಷದ ಪುಣ್ಯತಿಥಿಯ ಪ್ರಯುಕ್ತ ತಾಯಿ ಸರ್ವೇಶ್ವರಿ ಹೆಗಡೆಯವರೊಂದಿಗೆ ಶಿರಸಿಯ ಕಾಗೇರಿಯ ತಮ್ಮ ನಿವಾಸದಲ್ಲಿ ತಾಯಿ ಹೆಸರಲ್ಲಿ ಗಿಡ ನೆಟ್ಟರು.

    ಪ್ರಧಾನಿ ನರೇಂದ್ರ ಮೋದಿಯವರು ಇಂದು ಮನ್ ಕಿ ಬಾತ್ (Man Ki Bath) ರೇಡಿಯೋ ಕಾರ್ಯಕ್ರಮದಲ್ಲಿ ಅಮ್ಮನ ಹೆಸರಿನಲ್ಲಿ ಒಂದು ಗಿಡ ನೆಡುವ ಅಭಿಯಾನಕ್ಕೆ ಕರೆಕೊಟ್ಟ ಬೆನ್ನಲ್ಲೇ ಕಾಗೇರಿ ಈ ಕೆಲಸ ಮಾಡಿದ್ದಾರೆ. 2019ರ ಜೂನ್ ನಲ್ಲಿ ಅನಂತ್ ಹೆಗಡೆಯವರು ನಿಧನರಾಗಿದ್ದಾರೆ. ಇಂದು ಅವರ 5 ನೃ ವರ್ಷದ ಪುಣ್ಯತಿಥಿ ಕೂಡ ಮಾಡಲಾಗಿದೆ.

    ಪ್ರತಿಯೊಬ್ಬರಿಗೂ ಅಮ್ಮನ ಪ್ರೀತಿ ಬಹಳ ಮುಖ್ಯ. ಅಮ್ಮನ ಈ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಈ ಹಿನ್ನೆಲೆಯಲ್ಲಿ ಈ ಬಾರಿಯ ವಿಶ್ವ ಪರಿಸರ ದಿನಕ್ಕಾಗಿ ವಿಶೇಷ ಅಭಿಯಾನ ಆರಂಭಿಸಿದ್ದೇವೆ. ಏಕ್ ಪೇಡ್, ಮಾ ಕೆ ನಾಮ್ ಕ್ಯಾಂಪೇನ್ ಇದು ಎಂದು ಮೋದಿ ಹೇಳಿದ್ದರು. ಇದನ್ನೂ ಓದಿ: ಸ್ವಾಮೀಜಿಗಳು ವೇದಿಕೆ, ಸಂದರ್ಭ ನೋಡಿ ಮಾತಾಡಿದ್ರೆ ಒಳ್ಳೆಯದು: ಪರಂ

    #Plant4Mother ಹ್ಯಾಶ್ ಟ್ಯಾಗ್ ಉಪಯೋಗಿಸಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡುವಂತೆಯೂ ಕರೆ ನೀಡಿದ್ದರು. ಇದರ ಬೆನ್ನಲ್ಲೇ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಸಹ ಅಮ್ಮನೊಂದಿಗೆ ಗಿಡ ನೆಟ್ಟು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಷೇರ್ ಮಾಡಿದ್ದಾರೆ.

  • ಇಂದು ಜವಾಹರಲಾಲ್ ನೆಹರು 60ನೇ ಪುಣ್ಯತಿಥಿ- ಪ್ರಧಾನಿ ಮೋದಿ ಗೌರವ ನಮನ

    ಇಂದು ಜವಾಹರಲಾಲ್ ನೆಹರು 60ನೇ ಪುಣ್ಯತಿಥಿ- ಪ್ರಧಾನಿ ಮೋದಿ ಗೌರವ ನಮನ

    – ಸೋನಿಯಾ, ಖರ್ಗೆ ಸೇರಿದಂತೆ ಗಣ್ಯರಿಂದ ಪುಷ್ಪ ನಮನ

    ನವದೆಹಲಿ: ಇಂದು ಮಾಜಿ ಪ್ರಧಾನಿ ಜವಾಹರಲಾಲ್ ನೆಹರು (Jawaharlal Nehru) ಅವರು 60 ನೇ ಪುಣ್ಯತಿಥಿ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಗೌರವ ನಮನ ಅರ್ಪಿಸಿದರೆ, ಇತ್ತ ಸೋನಿ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಕಾಂಗ್ರೆಸ್‌ ನಾಯಕರು ಪುಷ್ಪ ನಮನ ಸಲ್ಲಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿಯವರು (Narendra Modi) ತಮ್ಮ ಎಕ್ಸ್‌ ಖಾತೆಯಲ್ಲಿ, ಮಾಜಿ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಜಿ ಅವರ ಪುಣ್ಯತಿಥಿಯಂದು ಅವರಿಗೆ ಗೌರವ ಸಲ್ಲಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೂ ಮುನ್ನ ನೆಹರೂ ಅವರ ಪುಣ್ಯತಿಥಿಯಂದು ಕಾಂಗ್ರೆಸ್ ನಾಯಕರು ಪುಷ್ಪ ನಮನ ಸಲ್ಲಿಸಿದರು. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಸೇರಿದಂತೆ ಹಲವು ಗಣ್ಯರು ರಾಷ್ಟ್ರ ರಾಜಧಾನಿಯಲ್ಲಿನ ಅವರ ಸ್ಮಾರಕ ಶಾಂತಿವನಕ್ಕೆ ತೆರಳಿ ಪುಷ್ಪ ನಮನ ಸಲ್ಲಿಸಿದರು.

    ಖರ್ಗೆ ತಮ್ಮ ಎಕ್ಸ್‌ ನಲ್ಲಿ, ವೈಜ್ಞಾನಿಕ, ಆರ್ಥಿಕ, ಕೈಗಾರಿಕಾ ಮತ್ತು ವಿವಿಧ ಕ್ಷೇತ್ರಗಳಲ್ಲಿ ಭಾರತವನ್ನು ಮುಂದಕ್ಕೆ ಕೊಂಡೊಯ್ದ ಆಧುನಿಕ ಭಾರತದ ವಾಸ್ತುಶಿಲ್ಪಿ ಪಂಡಿತ್ ಜವಾಹರಲಾಲ್ ನೆಹರು ಅವರ ಅತ್ಯುತ್ತಮ ಕೊಡುಗೆಯಿಲ್ಲದೆ ಭಾರತದ ಇತಿಹಾಸವು ಅಪೂರ್ಣವಾಗಿದೆ. ಅವರ ಪುಣ್ಯತಿಥಿಯಂದು “ಹಿಂದ್ ಕೆ ಜವಾಹರ್” ಅವರಿಗೆ ನಮ್ಮ ನಮ್ರ ನಮನಗಳು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2024: ದಣಿವರಿಯದೇ ದುಡಿದ ಕ್ರೀಡಾ ಸಿಬ್ಬಂದಿಗೆ ತಲಾ 25 ಲಕ್ಷ ರೂ. ಬಹುಮಾನ ಘೋಷಿಸಿದ ಜಯ್‌ ಶಾ

    ಪಂಡಿತ್ ಜವಾಹರಲಾಲ್ ನೆಹರು ಅವರು ದೇಶದ ರಕ್ಷಣೆ, ದೇಶದ ಪ್ರಗತಿ, ದೇಶದ ಏಕತೆ ನಮ್ಮೆಲ್ಲರ ರಾಷ್ಟ್ರೀಯ ಧರ್ಮ. ನಾವು ವಿವಿಧ ಧರ್ಮಗಳನ್ನು ಅನುಸರಿಸಬಹುದು, ವಿವಿಧ ರಾಜ್ಯಗಳಲ್ಲಿ ವಾಸಿಸಬಹುದು, ವಿವಿಧ ಭಾಷೆಗಳನ್ನು ಮಾತನಾಡಬಹುದು. ಆದರೆ ಅದು ನಮ್ಮ ನಡುವೆ ಯಾವುದೇ ಗೋಡೆಯನ್ನು ಸೃಷ್ಟಿಸಬಾರದು. ಎಲ್ಲಾ ಜನರು ಪ್ರಗತಿಯಲ್ಲಿ ಸಮಾನ ಅವಕಾಶವನ್ನು ಪಡೆಯಬೇಕು. ನಮ್ಮ ದೇಶದಲ್ಲಿ ಕೆಲವರು ಶ್ರೀಮಂತರಾಗಿರಲು ಮತ್ತು ಹೆಚ್ಚಿನ ಜನರು ಬಡವರಾಗಲು ನಾವು ಬಯಸುವುದಿಲ್ಲ ಎಂದಿದ್ದರು. ಇಂದಿಗೂ ಕಾಂಗ್ರೆಸ್ ಪಕ್ಷವು ಅದೇ “ನ್ಯಾಯ” ಮಾರ್ಗವನ್ನು ಅನುಸರಿಸುತ್ತಿದೆ ಎಂದು ಖರ್ಗೆ ತಿಳಿಸಿದ್ದಾರೆ.

    ಜವಾಹರಲಾಲ್ ನೆಹರು ಅವರು 1889ರ ನವೆಂಬರ್ 14 ರಂದು ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ಜನಿಸಿದರು. 1964 ರ ಮೇ 27 ರಂದು ತಮ್ಮ 74 ನೇ ವಯಸ್ಸಿನಲ್ಲಿ ನಿಧನರಾದರು. ಅವರು ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಸಕ್ರಿಯ ಪಾತ್ರವನ್ನು ಅನುಸರಿಸಿ 1947 ರ ಆಗಸ್ಟ್ 15 ರಂದು ಭಾರತದ ಮೊದಲ ಪ್ರಧಾನಿಯಾದರು. ಭಾರತದಲ್ಲಿ ಆರಂಭಲ್ಲಿ ನವೆಂಬರ್ 20 ರಂದು ಮಕ್ಕಳ ದಿನಾಚರಣೆ ಆಚರಿಸಲಾಗುತ್ತಿತ್ತು. ಕಾರಣ ವಿಶ್ವಸಂಸ್ಥೆಯು ಸಾರ್ವತ್ರಿಕ ಮಕ್ಕಳ ದಿನ ಎಂದು ಈ ದಿನವನ್ನು ಘೋಷಣೆ ಮಾಡಿತ್ತು. ಆದರೆ ಜವಾಹರಲಾಲ್‌ ನೆಹರು ಅವರ ಮರಣದ ನಂತರ, ಅವರ ಜನ್ಮದಿನದ ಸವಿನೆನಪಿಗಾಗಿ ನವೆಂಬರ್ 14 ರಂದು ಭಾರತದಲ್ಲಿ ಮಕ್ಕಳ ದಿನಾಚರಣೆ ಆಚರಣೆ ಮಾಡಲಾಗುತ್ತಿದೆ.

  • ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ನಟ ಚಿರಂಜೀವಿ ಸರ್ಜಾ 3 ನೇ ವರ್ಷದ ಪುಣ್ಯತಿಥಿ

    ಸ್ಯಾಂಡಲ್ ವುಡ್ ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ (Chiranjeevi Sarja) ಅವರ ಮೂರನೇ ವರ್ಷದ ಪುಣ್ಯತಿಥಿ (Punyatithi) ಇಂದು ಕಾರ್ಯಕ್ರಮ ನಡೆಯಿತು. ಬೆಂಗಳೂರು ಹೊರವಲಯದ ನೆಲಗುಳಿ ಬಳಿಯ ಧ್ರುವ ಸರ್ಜಾ ಫಾರ್ಮ್ ಹೌಸ್ ನಲ್ಲಿರುವ ಚಿರು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಕುಟುಂಬಸ್ಥರು ಅಗಲಿದ ಚಿರುವನ್ನು ನೆನಪಿಸಿಕೊಂಡರು.

      

    ಚಿರು ಪತ್ನಿ ಮೇಘನಾ ರಾಜ್ (Meghana Raj), ಮೇಘನಾ ತಂದೆ-ತಾಯಿ, ಚಿರು ಪುತ್ರ ರಾಯನ್ (Rayan), ಚಿರು ಸಹೋದರ ಧ್ರುವ ಸರ್ಜಾ (Dhruva Sarja), ಹಾಗೂ ಚಿರು ತಂದೆ-ತಾಯಿ ಇಂದು ನಡೆದ ಪುಣ್ಯಸ್ಮರಣೆಯಲ್ಲಿ ಭಾಗಿಯಾಗಿದ್ದರು. ಚಿರು ಸಮಾಧಿಗೆ ತೆರಳಿ ಪೂಜೆ ಸಲ್ಲಿಸಿದ ಕುಟುಂಬಸ್ಥರು, ಕೆಲ ಕ್ಷಣ ಭಾವುಕರಾದರು. ಈ ಸಂದರ್ಭದಲ್ಲಿ ನಟ ದುನಿಯಾ ವಿಜಯ್ ಕೂಡ ಆಗಮಿಸಿ ಅಗಲಿದ ಮಿತ್ರನ ಸಮಾಧಿಗೆ  ಪೂಜೆ ಸಲ್ಲಿಸಿದರು. ಇದನ್ನೂ ಓದಿ:ಮತ್ತೆ ಕಿರುತೆರೆಗೆ ಮರಳಿದ ‘ಬಿಗ್‌ ಬಾಸ್‌’ ಚೈತ್ರಾ ಹಳ್ಳಿಕೇರಿ

     

    ಚಿರು ಸಮಾಧಿಗೆ ಗುಡಿ ಕಟ್ಟಿಸಲಾಗಿದ್ದು ಸುತ್ತಲೂ ಕಾರಂಜಿಯ ಸಿಂಗಾರ ಮಾಡಲಾಗಿದೆ. ಅಭಿಮಾನಿಗಳು ಬಂದು ಹೋಗುವುದಕ್ಕೂ ವ್ಯವಸ್ಥೆ ಕಲ್ಪಿಸಲಾಗಿದೆ. ಇಂದು ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಕೂಡ ಆಗಮಿಸಿ, ಪೂಜೆ ಸಲ್ಲಿಸಿದರು.

  • ಇಂದು ಡಾ.ರಾಜ್ ಕುಮಾರ್ ಪುಣ್ಯತಿಥಿ : ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ಇಂದು ಡಾ.ರಾಜ್ ಕುಮಾರ್ ಪುಣ್ಯತಿಥಿ : ಸ್ಮಾರಕಕ್ಕೆ ಹರಿದು ಬಂತು ಜನಸಾಗರ

    ಇಂದು ವರನಟ ಡಾ.ರಾಜ್ ಕುಮಾರ್ (Rajkumar) ಅವರ 17ನೇ ಪುಣ್ಯತಿಥಿ. ಬೆಂಗಳೂರಿನ ಕಂಠೀರವ ಸ್ಟುಡಿಯೋ  ಬಳಿಯ ಸಮಾಧಿಗೆ ಡಾ.ರಾಜ್ ಕುಟುಂಬ ಆಗಮಿಸಿ ಪೂಜೆ ಸಲ್ಲಿಸಿತು. ರಾಘವೇಂದ್ರ ರಾಜ್ ಕುಮಾರ್, ಯುವರಾಜ್ ಕುಮಾರ್, ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಡಾ.ರಾಜ್ ಕುಟುಂಬ ಅನೇಕ ಸದಸ್ಯರು ಸ್ಮಾರಕಕ್ಕೆ ಆಗಮಿಸಿ ಪೂಜೆ ಸಲ್ಲಿಸಿದರು.

    ರಾಜ್ ಕುಮಾರ್ ಅವರ ಪುಣ್ಯತಿಥಿಗಾಗಿ ಪುನೀತ್ ರಾಜ್ ಕುಮಾರ್ (Puneeth) ಮತ್ತು ಪಾರ್ವತಮ್ಮ ರಾಜ್ ಕುಮಾರ್ (Parvathamma Rajkumar) ಸಮಾಧಿಗೂ ಹೂಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಲಾಯಿತು. ಸ್ಮಾರಕದ ಮುಂದೆ ಅಭಿಮಾನಿಗಳು ರಕ್ತದಾನ, ಅನ್ನದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದರು. ತಮ್ಮ ನೆಚ್ಚಿನ ನಟನಿಗೆ ಈ ಮೂಲಕ ನಮನ ಸಲ್ಲಿಸಿದರು. ಇದನ್ನೂ ಓದಿ: ಮದುವೆ ಆಗುವ ಬಗ್ಗೆ ಸೀಕ್ರೆಟ್‌ ಬಿಚ್ಚಿಟ್ಟ ಶರ್ಮಿಳಾ ಮಾಂಡ್ರೆ

    ರಾಜ್ಯದ ಮೂಲೆ ಮೂಲೆಗಳಿಂದ ಬಂದಿದ್ದ ಅಭಿಮಾನಿಗಳು ಡಾ.ರಾಜ್ ಕುಮರ್ ಅವರ ಸಮಾಧಿಗೆ ಪೂಜೆ ಸಲ್ಲಿಸಿ, ಭಾವುಕರಾದರು. ಪಕ್ಕದಲ್ಲಿಯೇ ಇರುವ ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಸಮಾಧಿಗೂ ಪೂಜೆ ಸಲ್ಲಿಸಿದರು. ಸಾವಿರಾರು ಅಭಿಮಾನಿಗಳು ಬೆಳಗ್ಗೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಸ್ಮಾರಕದ ದರ್ಶನ ಪಡೆದರು.

  • ಶರವೇಗದಲ್ಲಿ ಓಡ್ತಿದ್ದ `ಚಾಮುಂಡಿ ಎಕ್ಸ್‌ಪ್ರೆಸ್ ಹೋರಿ’ಯ ಪುಣ್ಯತಿಥಿ ಮಾಡಿದ ಅಭಿಮಾನಿಗಳು

    ಶರವೇಗದಲ್ಲಿ ಓಡ್ತಿದ್ದ `ಚಾಮುಂಡಿ ಎಕ್ಸ್‌ಪ್ರೆಸ್ ಹೋರಿ’ಯ ಪುಣ್ಯತಿಥಿ ಮಾಡಿದ ಅಭಿಮಾನಿಗಳು

    ಹಾವೇರಿ: ಸಾಮಾನ್ಯವಾಗಿ ಮನುಷ್ಯರ ಪುಣ್ಯತಿಥಿಯನ್ನು ಮಾಡೋದನ್ನು ನಾವು ನೋಡಿದ್ದೇವೆ. ಅದರೆ ಈ ಗ್ರಾಮದಲ್ಲಿ ಹೋರಿಯ (Bull) ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೇರಿ ಶರವೇಗದ ಓಟಗಾರ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿಯ (Chamundi Express Bull) ಪುಣ್ಯತಿಥಿ ಕಾರ್ಯವನ್ನು ಮಾಡಿದ್ದಾರೆ. ಇಡೀ ಊರ ಜನರು ಹಣ ಹಾಕಿ, ಮನುಷ್ಯರಂತೆಯೇ ಈ ವಿಶೇಷ ಹೋರಿಯ ಪುಣ್ಯತಿಥಿ ಕಾರ್ಯವನ್ನು ಮಾಡಿದ್ದಾರೆ.

    ಹಾವೇರಿ (Haveri) ತಾಲೂಕಿನ ಚಿಕ್ಕಲಿಂಗದಹಳ್ಳಿ ಗ್ರಾಮದಲ್ಲಿ ರಾಜ್ಯಮಟ್ಟದ ಹೋರಿ ಹಬ್ಬದಲ್ಲಿ ಸಾಕಷ್ಟು ಹೆಸರು ಮಾಡಿದ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿಯ ಪುಣ್ಯತಿಥಿಯನ್ನು ಗ್ರಾಮಸ್ಥರೆಲ್ಲಾ ಸೇರಿ ನೆರವೇರಿಸಿದ್ದಾರೆ. ಸುಮಾರು 15 ವರ್ಷಗಳ ಹಿಂದೆ ಗ್ರಾಮದ ರೈತ ಮೆಹಬೂಬ್ ಸಾಬ್ ದೇವಗಿರಿ ಅವರ ಮನೆಯಲ್ಲಿ ಈ ಹೋರಿ ಜನಿಸಿತ್ತು. ಜಮೀನು ಕೆಲಸದ ಜೊತೆಗೆ ಕೊಬ್ಬರಿ ಹೋರಿ ಸ್ಪರ್ಧೆಯಲ್ಲಿ ಶರವೇಗದಲ್ಲಿ ಓಡುವ ಮೂಲಕ ಚಾಮುಂಡಿ ಎಕ್ಸ್‌ಪ್ರೆಸ್ ಎಂದು ಹೆಸರು ಮಾಡಿತ್ತು.

    ಈ ಹೋರಿಯನ್ನು ಕಳೆದ 3 ವರ್ಷಗಳ ಹಿಂದೆ ಶಿಕಾರಿಪುರಕ್ಕೆ 18 ಲಕ್ಷ ರೂ.ಗೆ ಮಾರಾಟ ಮಾಡಲಾಗಿತ್ತು. ನಂತರ ಶಿಕಾರಿಪುರ ಮಾಲೀಕರು ಸಹ ಮಾಸೂರಿಗೆ ಮತ್ತೆ ಮಾರಾಟ ಮಾಡಿದ್ದರು. ಚಾಮುಂಡಿ ಎಕ್ಸ್‌ಪ್ರೆಸ್ ಹೆಸರು ಬದಲಿಸಿ ಮೂಕಾಂಬಿಕಾ ಎಕ್ಸ್‌ಪ್ರೆಸ್ ಎಂದು ನಾಮಕರಣ ಮಾಡಿದ್ದರು. 9 ದಿನಗಳ ಹಿಂದೆ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿ ನಿಧನವಾಗಿದ್ದು, ಅಭಿಮಾನಿಗಳು ಕಣ್ಣೀರು ಹಾಕಿದ್ದರು. ಇಂದು ಹೋರಿಯ ಹುಟ್ಟೂರಾದ ಚಿಕ್ಕಲಿಂಗದಹಳ್ಳಿಯ ಅಭಿಮಾನಿಗಳು ಹಾಗೂ ಗ್ರಾಮಸ್ಥರು ಸೇರಿ ಪುಣ್ಯತಿಥಿ ಮಾಡಿದ್ದಾರೆ. ಗ್ರಾಮದ ಪ್ರತಿ ಮನೆಯವರು ಪುಣ್ಯತಿಥಿಯಲ್ಲಿ ಭಾಗವಹಿಸಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

    ಸಾಮಾನ್ಯವಾಗಿ ಮನುಷ್ಯರು ಮೃತಪಟ್ಟಾಗ ತಿಥಿ ಕಾರ್ಯ ನೆರವೇರಿಸಲಾಗುತ್ತದೆ. ಅದರಂತೆಯೇ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿ ಮೃತಪಟ್ಟು 9 ದಿನಗಳಾಗಿದ್ದರಿಂದ ಹೋರಿ ಅಭಿಮಾನಿಗಳು ನೆಚ್ಚಿನ ಹೋರಿಗೆ ತಿಥಿ ಕಾರ್ಯ ನೆರವೇರಿಸಿದ್ದಾರೆ. ಮೃತ ಚಾಮುಂಡಿ ಎಕ್ಸ್‌ಪ್ರೆಸ್ ಹೋರಿಯ ಭಾವಚಿತ್ರ ಮಾಡಿಸಿ, ಅದರ ಮುಂದೆ ಹಣ್ಣುಗಳು, ಸಿಹಿ ತಿನಿಸುಗಳನ್ನಿಟ್ಟು ಗ್ರಾಮದಲ್ಲಿನ ಸ್ವಾಮಿಯನ್ನು ಕರೆಯಿಸಿ ಅಗಲಿದ ಹೋರಿಯ ತಿಥಿಯ ಪೂಜೆ ನೆರವೇರಿಸಿದ್ದಾರೆ. ಇದನ್ನೂ ಓದಿ: ನಾನೂ ಗೂಂಡಾಗಿರಿ ಮಾಡ್ತಿದ್ದೆ, ಜೀನ್ಸ್ ಪ್ಯಾಂಟ್ ಹಾಕ್ಕೊಂಡ್ರೆ ಹುಡ್ಗೀರೆಲ್ಲಾ ನನ್ನೇ ನೋಡ್ತಿದ್ರು: ಶ್ರೀರಾಮುಲು

    ಚಾಮುಂಡಿ ಎಕ್ಸ್‌ಪ್ರೆಸ್ ಹೋರಿಯು ಬೈಕ್, ಚಿನ್ನ, ಬೆಳ್ಳಿ, ಟ್ರಜೂರಿ ಸೇರಿದಂತೆ ಹಲವು ಬಹುಮಾನ ಗೆದ್ದಿದೆ. ಹಾವೇರಿ, ದಾವಣಗೆರೆ, ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನಡೆದ ಹೋರಿ ಹಬ್ಬದ ಅಖಾಡದಲ್ಲಿ ಚಾಮುಂಡಿ ಎಕ್ಸ್ಪ್ರೆಸ್ ಹೋರಿ ದೊಡ್ಡ ಹೆಸರು ಮಾಡಿದ್ದರಿಂದ ಅಭಿಮಾನಿಗಳು ಹೋರಿಯ ತಿಥಿ ಕಾರ್ಯದಲ್ಲಿ ಭಾಗವಹಿಸಿ, ಹೋರಿಗೆ ಪೂಜೆ ಸಲ್ಲಿಸಿ, ಊಟ ಸವಿದು ಮನೆಯತ್ತ ಹೆಜ್ಜೆ ಹಾಕಿದ್ದಾರೆ. ಇದನ್ನೂ ಓದಿ: ಹೆಡ್ ಕಾನ್ಸ್‌ಟೇಬಲ್ ಮನೆಗೆ ಕನ್ನ

    Live Tv
    [brid partner=56869869 player=32851 video=960834 autoplay=true]

  • ಅಜಾತಶತ್ರು ವಾಜಪೇಯಿ 4ನೇ ಪುಣ್ಯತಿಥಿ – ಗಣ್ಯರಿಂದ ಪುಷ್ಪ ನಮನ

    ಅಜಾತಶತ್ರು ವಾಜಪೇಯಿ 4ನೇ ಪುಣ್ಯತಿಥಿ – ಗಣ್ಯರಿಂದ ಪುಷ್ಪ ನಮನ

    ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅಗಲಿ ಇಂದಿಗೆ 4 ವರ್ಷ. ಬಿಜೆಪಿಗೆ ಹೊಸ ರೂಪ ಕೊಟ್ಟ ವಾಜಪೇಯಿಗೆ ಗೌರವಾರ್ಥವಾಗಿ ಮಂಗಳವಾರ ಬಿಜೆಪಿ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದೆ.

    ವಿಜಯಘಾಟ್‌ನಲ್ಲಿ ವಾಜಪೇಯಿ ಸಮಾಧಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪುಷ್ಪ ನಮನ ಸಲ್ಲಿಸಿದರು. ಇದನ್ನೂ ಓದಿ: 10 ದಿನಗಳ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ತೆರೆ- ಅಪ್ಪು ಜಾತ್ರೆ ವೀಕ್ಷಣೆಗೆ ಹರಿದು ಬಂತು ಜನಸಾಗರ

    ಅಜಾತಶತ್ರುವಾಗಿದ್ದ ವಾಜಪೇಯಿ 2018ರ ಆಗಸ್ಟ್ 16ರಂದು ಅಸ್ತಂಗತರಾಗಿದ್ದರು.

    Live Tv
    [brid partner=56869869 player=32851 video=960834 autoplay=true]

  • ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ಸಂಚಾರಿ ವಿಜಯ್ ಮೊದಲ ವರ್ಷದ ಪುಣ್ಯತಿಥಿ : ಹುಟ್ಟೂರಲ್ಲಿ ಹಲವು ಕಾರ್ಯಕ್ರಮಗಳು

    ರಾಷ್ಟ್ರ ಪ್ರಶಸ್ತಿ ವಿಜೇತ ಸಂಚಾರಿ ವಿಜಯ್ ತನ್ನ ಕುಟುಂಬ ಮತ್ತು ಅಸಂಖ್ಯಾತ ಅಭಿಮಾನಿಗಳನ್ನು ಅಗಲಿ ಇಂದಿಗೆ ಒಂದು ವರ್ಷ. ಮೊನ್ನೆಯಷ್ಟೇ ಅವರ ಕುಟುಂಬವು ಪಂಚನಹಳ್ಳಿಯಲ್ಲಿರುವ ವಿಜಯ್ ಸಮಾಧಿ ಸ್ಥಳದಲ್ಲಿ ಪುತ್ಥಳಿ ಸ್ಥಾಪಿಸಿ, ಪೂಜೆ ಸಲ್ಲಿಸಿದ್ದರು. ಇವತ್ತು ಪುಣ್ಯತಿಥಿಯ ದಿನದಂದೂ ವಿಜಯ್ ಸಮಾಧಿಗೆ ಪೂಜೆ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಲ್ಲಿ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

    ಇಂದು ಬೆಳಗ್ಗೆ ವಿಜಯ್ ಅವರ ನೆಚ್ಚಿನ ರಂಗಸಂಸ್ಥೆ ಸಂಚಾರಿ ಬಳಗವು ವಿಜಯ್ ಅವರ ಗುರು ಮಂಗಳಾ ಅವರ ನೇತೃತ್ವದಲ್ಲಿ ಪಂಚನಹಳ್ಳಿಯಲ್ಲಿರುವ ವಿಜಯ್ ಅವರ ಸಮಾಧಿ ಬಳಿ ರಂಗಗೀತೆ ನಮನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ವಿಜಯ್ ಇಷ್ಟದ ಹಾಡುಗಳನ್ನು ಹೇಳುವ ಮೂಲಕ ನಮನ ಸಲ್ಲಿಸಲಾಗುತ್ತಿದೆ. ಅಲ್ಲದೇ, ಅಭಿಮಾನಿಗಳು ಕೂಡ ಇಂದು ಪೂಜೆ ಸಲ್ಲಿಸುತ್ತಿದ್ದಾರೆ. ಇದನ್ನೂ ಓದಿ : ಗಂಡನ ಮನೆಯ ಫೋಟೋ ಹಂಚಿಕೊಂಡ ನಯನತಾರಾ : ಸಂಪ್ರದಾಯ ಪಾಲಿಸಿದ ನಟಿಗೆ ಅಭಿಮಾನಿಗಳ ಹಾರೈಕೆ

    ವಿಜಯ್ ಅವರು ಕಾಣಿಸಿಕೊಂಡ ಕೊನೆಯ ಆಲ್ಬಂ ಮೈಲಾರವನ್ನು ಇಂದು ಬಿಡುಗಡೆ ಮಾಡಲಾಗುತ್ತಿದೆ. ಮೈಲಾರಲಿಂಗೇಶ್ವರ ಕುರಿತಾದ ಭಕ್ತಿ ಪ್ರಧಾನ ಗೀತೆ ಇದಾಗಿದ್ದು, ಈ ವಿಡಿಯೋ ಆಲ್ಬಂನಲ್ಲಿ ವಿಜಯ್ ಕಾಣಿಸಿಕೊಂಡಿದ್ದಾರೆ. ಇಂದು ಅದರ ಲೋಕಾರ್ಪಣೆ ಕೂಡ ಇದೆ. ಈ ಮೂಲಕ ವಿಜಯ್ ಅವರನ್ನು ನೆನಪಿಸಿಕೊಳ್ಳಲಾಗುತ್ತಿದೆ. ಅಲ್ಲದೇ ಸೋಷಿಯಲ್ ಮೀಡಿಯಾದಲ್ಲಿ ವಿಜಯ್ ಗೆಳೆಯರು ಮತ್ತು ಆಪ್ತರು ಕೂಡ ಅವರೊಂದಿಗಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

  • ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ಚಿರಂಜೀವಿ ಸರ್ಜಾ ಅಗಲಿಕೆಗೆ ಎರಡು ವರ್ಷ : ಕುಟುಂಬದಿಂದ ಇಂದು ವಿಶೇಷ ಪೂಜೆ

    ನ್ನಡದ ಹೆಸರಾಂತ ನಟ ಚಿರಂಜೀವಿ ಸರ್ಜಾ ಅಗಲಿ ಇಂದಿಗೆ ಎರಡು ವರ್ಷ. ನೆಚ್ಚಿನ ನಟನ ಸಮಾಧಿಗೆ ಇಂದು ಅಭಿಮಾನಿಗಳು ಮತ್ತು ಕುಟುಂಬದ ಸದಸ್ಯರು ವಿಶೇಷ ಪೂಜೆ ಸಲ್ಲಿಸಿದ್ದಾರೆ. ಸರ್ಜಾ ಕುಟುಂಬ ಮತ್ತು ಮೇಘನಾ ರಾಜ್ ಕುಟುಂಬ ಹಾಗೂ ಸ್ನೇಹಿತರು ಇಂದು ಫಾರ್ಮ್ ಹೌಸ್ ನಲ್ಲಿ ನಡೆದ ಪೂಜೆಯಲ್ಲಿ ಪಾಲ್ಗೊಂಡಿದ್ದರು.

    ಚಿರು ಆಪ್ತರು ಇಂದು ಸೋಷಿಯಲ್ ಮೀಡಿಯಾಗಳಲ್ಲೂ ನೆಚ್ಚಿನ ಗೆಳೆಯನ ಅಗಲಿಕೆಯ ನೋವನ್ನು ಹಂಚಿಕೊಂಡಿದ್ದಾರೆ. ಪನ್ನಗಾಭರಣ, ಸೃಜನ್ ಲೋಕೇಶ್ ಸೇರಿದಂತೆ ಹಲವರು ಚಿರು ಜೊತೆಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮೋಹಕತಾರೆ ರಮ್ಯಾ ಅಭಿಮಾನಿಗಳಿಗೆ ಗುಡ್ ನ್ಯೂಸ್

    ಚಿರಂಜೀವಿ ಸರ್ಜಾ ಅವರ ಕೊನೆ ಸಿನಿಮಾ ರಾಜ ಮಾರ್ತಾಂಡ ಇಂದು ಬಿಡುಗಡೆ ಆಗಲಿದೆ ಎಂದು ನಿರೀಕ್ಷೆಯಿತ್ತು. ಆದರೆ, ರಿಲೀಸ್ ಆಗಿಲ್ಲ. ಮುಂದಿನ ದಿನಗಳಲ್ಲಿ ದೊಡ್ಡಮಟ್ಟದಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡುವುದಾಗಿ ಚಿತ್ರತಂಡ ಹೇಳಿಕೊಂಡಿದೆ. ಚಿರು ಕೊನೆಯ ಸಿನಿಮಾಗೆ ಸಹೋದರ ಧ್ರುವ ಸರ್ಜಾ ಅವರೇ ಡಬ್ ಮಾಡಿದ್ದಾರೆ.

  • ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣ ಸಾವು

    ತಂದೆಯ ತಿಥಿ ಕಾರ್ಯದ ದಿನವೇ ಮಗಳ ದಾರುಣ ಸಾವು

    ಬೆಂಗಳೂರು: ತಂದೆಯ ತಿಥಿ ಕಾರ್ಯಕ್ಕೆಂದು ಮಗಳು ಅಡುಗೆ ಮಾಡುವಾಗ ಸಿಲಿಂಡರ್ ಬ್ಲ್ಯಾಸ್ಟ್ ಆಗಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕೆ ಎಸ್ ಲೇಔಟ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ.

    ಮಗಳು ಪರಮೇಶ್ವರಿ (42) ಮೃತ ಮಹಿಳೆ. ಕಾಶಿನಾಥ್‍ರ 6ನೇ ವರ್ಷದ ಪುಣ್ಯತಿಥಿ ಹಿನ್ನೆಲೆ ಕುಟುಂಬಸ್ಥರು ತಿಥಿ ಕಾರ್ಯಕ್ಕೆ ಮಾಂಸಾಹಾರ ಅಡುಗೆ ಮಾಡಲು ಸಿಲಿಂಡರ್ ತರಿಸಿದ್ದರು. ಮನೆ ಚಿಕ್ಕದಾಗಿದ್ದು ಕೋಣೆಯಲ್ಲೇ ಸ್ಟೌವ್ ಇಟ್ಟು ಅಡುಗೆ ಮಾಡಲು ತಯಾರಿ ನಡೆಸಿದ್ದರು. ಇದೇ ವೇಳೆ ಗ್ಯಾಸ್ ಸೋರಿಕೆಯಾಗಿ ಸ್ಟೌವ್ ಬೆಂಕಿಯ ತೀವ್ರತೆಗೆ ಗ್ಯಾಸ್ ಫ್ಲೇಮ್ ದೊಡ್ಡದಾಗಿ ಹೊತ್ತಿಕೊಂಡಿದೆ. ಇದನ್ನೂ ಓದಿ: ಆಫ್‍ಲೈನ್ ಕ್ಲಾಸ್‍ಗೆ ಹೋಗು ಅಂದಿದ್ದಕ್ಕೆ ಹುಡುಗಿ ಆತ್ಮಹತ್ಯೆ

    ಬೆಂಕಿಯ ತೀವ್ರತೆಯ ಪರಿಣಾಮ ಕಾಶಿನಾಥ್‍ರ ಪತ್ನಿ ಸೌಭಾಗ್ಯ (75) ದೇಹ ಹೆಚ್ಚು ಸುಟ್ಟಿದೆ. ಮಗ ಶರವಣ (43) ತಲೆ ಮತ್ತು ಕೈ ಕಾಲು, ಹೊಟ್ಟೆ ಭಾಗ ಸುಟ್ಟಿದೆ. ಸಂಬಂಧಿ ಪರಮಶಿವಂ (47) ಎರಡು ಕೈ ಕಾಲು ಸುಟ್ಟು ಹೋಗಿದೆ. ಪರಮಶಿವಂ ಪತ್ನಿ ಭುವನೇಶ್ವರಿ (40)ತಲೆ, ಎರಡು ಕೈ ಮತ್ತು ಒಂದು ಕಾಲು ಸುಟ್ಟಿದೆ. ಮತ್ತೊಬ್ಬ ಸಂಬಂಧಿ ಮಾಲಾ (60) ಕೈ , ಕತ್ತಿನ ಭಾಗ ಸುಟ್ಟಿದ್ದು, ಗಾಯಾಳುಗಳಿಗೆ ವಿಕ್ಟೋರಿಯಾ ಬರ್ನಿಂಗ್ ವಾರ್ಡ್‍ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ರಾಜಧಾನಿಯಲ್ಲಿ ಮತ್ತೆ ಶುರುವಾಯ್ತು ದುಷ್ಕರ್ಮಿಗಳ ಪುಂಡಾಟ!

    ಕುಮಾರಸ್ವಾಮಿ ಲೇ ಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.