Tag: ಪುಣ್ಯತಿಥಿ

  • ಇಂದು ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯತಿಥಿ- 9 ವರ್ಷ ಕಳೆದ್ರೂ ನಿರ್ಮಾಣವಾಗಿಲ್ಲ ಸ್ಮಾರಕ

    ಇಂದು ಸಾಹಸಸಿಂಹ ವಿಷ್ಣುವರ್ಧನ್ ಪುಣ್ಯತಿಥಿ- 9 ವರ್ಷ ಕಳೆದ್ರೂ ನಿರ್ಮಾಣವಾಗಿಲ್ಲ ಸ್ಮಾರಕ

    – ಅಭಿಮಾನಿಗಳಿಂದ ಅನ್ನದಾನ, ರಕ್ತದಾನ

    ಬೆಂಗಳೂರು: ಇಂದು ಅಭಿನವ ಭಾರ್ಗವ ಸಾಹಸ ಸಿಂಹ ವಿಷ್ಣುವರ್ಧನ್‍ರ 9ನೇ ಪುಣ್ಯತಿಥಿ. ಬೆಳಗ್ಗೆ ವಿಷ್ಣು ಕುಟುಂಬ ಅಭಿಮಾನ್ ಸ್ಟುಡಿಯೋಗೆ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ.

    ವಿಷ್ಣು ಪುಣ್ಯತಿಥಿ ಅಂಗವಾಗಿ ಅಭಿಮಾನಿಗಳು ಅನ್ನದಾನ, ರಕ್ತದಾನ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ಆಯೋಜಿಸಲಾದೆ. ಕೇವಲ ಅಭಿಮಾನ್ ಸ್ಟುಡಿಯೋ ಮಾತ್ರವಲ್ಲ. ಆಟೋ ರಿಕ್ಷಾಗಳಲ್ಲೂ ಸಾಹಸ ಸಿಂಹನ ಭಾವಚಿತ್ರ ಹಾಕಿ, ಪೂಜೆ ಸಲ್ಲಿಸಲಾಗುತ್ತಿದೆ.

    ವಿಷ್ಣುವರ್ಧನ್ ಅವರು ದೈಹಿಕವಾಗಿ ನಮ್ಮ ನಡುವೆ ಇಲ್ಲವಾದರೂ ಕೋಟ್ಯಾನುಕೋಟಿ ಜನರ ಹೃದಯ ಸಿಂಹಾಸನದಲ್ಲಿ ಅಚ್ಚಳಿಯದೇ ಕುಳಿತಿದ್ದಾರೆ. ಪ್ರತಿದಿನ ಪ್ರತಿ ಕ್ಷಣನೂ ವಿಷ್ಣುನಾ ಆರಾಧಿಸೋ ಭಕ್ತವಲಯ ಪ್ರತಿವರ್ಷ ದಾದಾ ಪುಣ್ಯಭೂಮಿಗೆ ಬಂದು ನಮಿಸುತ್ತಾರೆ. ಈ ವರ್ಷವೂ ರಾಜ್ಯದ ಮೂಲೆಮೂಲೆಯಿಂದ ಭಕ್ತರು ವಿಷ್ಣು ಪುಣ್ಯತಿಥಿಗೆ ಕೆಂಗೇರಿಯ ಅಭಿಮಾನ್ ಸ್ಟುಡಿಯೋಗೆ ಆಗಮಿಸುತ್ತಿದ್ದಾರೆ. ಇದನ್ನೂ ಓದಿ: ಅಂಬಿಗೊಂದು ನ್ಯಾಯ, ವಿಷ್ಣುವಿಗೊಂದು ನ್ಯಾಯವೇ – ಮತ್ತೆ ಸಿಡಿದ ಅನಿರುದ್ಧ್

    ಒಂಬತ್ತು ವರ್ಷ ಕಳೆದರೂ ಕರ್ಣನ ಪುಣ್ಯ ಭೂಮಿ ನಿರ್ಮಾಣಗೊಂಡಿಲ್ಲ ಅನ್ನೋ ಕೊರಗು ಇದ್ದೇ ಇದೆ. ಇತ್ತೀಚೆಗಷ್ಟೇ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟಿದ್ರು. ದಾದಾ ಪುಣ್ಯ ಭೂಮಿ ನಿರ್ಮಾಣಕ್ಕೆ ಸರ್ಕಾರ ಮುಂದಾಗಬೇಕು. ಇಲ್ಲವಾದಲ್ಲಿ ಸಿಂಹಗಳನ್ನ ಬಡಿದೆಬ್ಬಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ರು. ಆ ಡೆಡ್‍ಲೈನ್ ಇಂದಿಗೆ ಮುಗಿಯಲಿದೆ. ಇದನ್ನೂ ಓದಿ: ವಿಷ್ಣುವರ್ಧನ್ ಅಳಿಯ ಅನಿರುದ್ಧ್ ವಿರುದ್ಧ ಸಿಎಂ ಕೆಂಡಾಮಂಡಲ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಪಾರ್ವತಮ್ಮ ರಾಜ್ ಕುಮಾರ್ 1ನೇ ವರ್ಷದ ಪುಣ್ಯ ತಿಥಿ: ಸಮಾಧಿಗೆ ಕುಟುಂಬದಿಂದ ಪೂಜೆ

    ಪಾರ್ವತಮ್ಮ ರಾಜ್ ಕುಮಾರ್ 1ನೇ ವರ್ಷದ ಪುಣ್ಯ ತಿಥಿ: ಸಮಾಧಿಗೆ ಕುಟುಂಬದಿಂದ ಪೂಜೆ

    ಬೆಂಗಳೂರು: ವರನಟ ಡಾ.ರಾಜ್ ಕುಮಾರ್ ಶ್ರೀಮತಿ, ಕನ್ನಡ ಚಿತ್ರರಂಗದ ಧೀಮಂತ ನಿರ್ದೇಶಕಿ ಪಾರ್ವತಮ್ಮ ರಾಜ್ ಕುಮಾರ್ ಅವರು ಇಂದಿಗೆ ನಮ್ಮನ್ನೆಲ್ಲ ಅಗಲಿ ಒಂದು ವರ್ಷವಾಗಿದೆ.

    ಒಂದನೇ ವರ್ಷದ ಪುಣ್ಯತಿಥಿಯ ಹಿನ್ನೆಲೆಯಲ್ಲಿ ಬೆಳಗ್ಗೆ 10 ಗಂಟೆಗೆ ದೊಡ್ಮನೆ ಕುಟುಂಬದ ಸದಸ್ಯರು ಕಂಠೀರವ ಸ್ಟುಡಿಯೋಗೆ ಆಗಮಿಸಿ ಪಾರ್ವತಮ್ಮನವರ ಸಮಾಧಿಗೆ ಪೂಜೆ ಸಲ್ಲಿಸಿದರು. ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ರಾಘವೇಂದ್ರ ರಾಜ್ ಕುಮಾರ್ ಸೇರಿದಂತೆ ಇಡೀ ದೊಡ್ಮನೆ ಕುಟುಂಬ ಪೂಜೆಯಲ್ಲಿ ಭಾಗಿಯಾಗಿತ್ತು.

    ಕಂಠೀರವ ಸ್ಟುಡಿಯೋದಲ್ಲಿ ಈಗಾಗಲೇ ಪಾರ್ವತಮ್ಮ ಹಾಗೂ ಡಾ. ರಾಜ್‍ಕುಮಾರ್ ಸ್ಮಾರಕಕ್ಕೆ ಅಲಂಕಾರ ಮಾಡಲಾಗಿದೆ. ಇಂದು ಪುಣ್ಯತಿಥಿಯ ಪ್ರಯುಕ್ತ ರಕ್ತದಾನ, ಆರೋಗ್ಯ ತಪಾಸಣೆ, ಅನ್ನದಾನವನ್ನು ಆಯೋಜಿಸಲಾಗಿದ್ದು, ದೊಡ್ಮನೆಯಲ್ಲಿ ವರ್ಷದ ತಿಥಿ ಕಾರ್ಯಕ್ರಮಗಳು ನಡೆಯಿತು.

    ಅಮ್ಮನ ನೆನಪಿನಲ್ಲಿ ಶಿವಣ್ಣ ಹಾಗೂ ಪುನೀತ್ ರಾಜ್ ಕುಮಾರ್ ಇಂದು ಸಿರಿಗೇರಿ ಯರಿಸ್ವಾಮಿ ಬರೆದ ‘ದೊಡ್ಮನೆ ಅಮ್ಮ’ ಪುಸ್ತಕವನ್ನು ಬಿಡುಗಡೆ ಮಾಡಿದರು.

    ಇನ್ನೂ ಸಮಾಧಿಗೆ ರಾಜ್ ಕುಟುಂಬದವರು ಸೇರಿದಂತೆ ರಾಕ್ ಲೈನ್ ವೆಂಕಟೇಶ್, ದೊಡ್ಡಣ್ಣ, ಹಿರಿಯ ನಟಿ ಶಾಂತಮ್ಮ, ಅನೇಕರು ಭಾಗಿಯಾಗಿದ್ದರು. ಇದೇ ವೇಳೆ ಪಾರ್ವತಮ್ಮನವರನ್ನು ನೆನೆದ ರಾಕ್ ಲೈನ್ ವೆಂಕಟೇಶ್, ನನ್ನ ಅಮ್ಮನನ್ನು ಕಳೆದುಕೊಂಡ ನಂತರ ಅಮ್ಮನ ಸ್ಥಾನ ನೀಡಿದ್ದು, ಪಾರ್ವತಮ್ಮ ಮತ್ತು ತಂದೆ ಸ್ಥಾನದಲ್ಲಿ ಡಾ.ರಾಜ್ ಕುಮಾರ್ ನಿಂತಿದ್ದರು. ಇಂದು ನಾನು ಏನು ಆಗಿದ್ದೇನೊ ಅದಕ್ಕೆ ಇವರಿಬ್ಬರು ಕಾರಣ ಎಂದು ಹೇಳಿದರು. ಪಾರ್ವತಮ್ಮನವರ ಹುಟ್ಟುಹಬ್ಬಕ್ಕೆ ಪ್ರತಿ ವರ್ಷ ಸೀರೆ ತಂದು ಕೊಡುತ್ತಿದ್ದ ಬಗ್ಗೆ ಪ್ರಶ್ನೆ ಕೇಳಿದಕ್ಕೆ ರಾಕ್ ಲೈನ್ ವೆಂಕಟೇಶ್ ಭಾವುಕರಾದರು.