Tag: ಪುದುಕೊಟ್ಟೈ

  • ತಮಿಳುನಾಡು| ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ತಮಿಳುನಾಡು| ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆ – ಆತ್ಮಹತ್ಯೆ ಶಂಕೆ

    ಚೆನ್ನೈ: ಒಂದೇ ಕುಟುಂಬದ ಐವರು ಕಾರಿನಲ್ಲಿ ಶವವಾಗಿ ಪತ್ತೆಯಾದ ಘಟನೆ ತಮಿಳುನಾಡಿನ (Tamil Nadu) ಪುದುಕೊಟ್ಟೈನಲ್ಲಿ (Pudukkottai) ನಡೆದಿದೆ.

    ಬುಧವಾರ ಬೆಳಗ್ಗೆ ತಿರುಚ್ಚಿ-ಕಾರೈಕುಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ನಿಂತಿತ್ತು. ಸಂಜೆಯಾದರೂ ಅದೇ ಸ್ಥಳದಲ್ಲಿ ಕಾರು ನಿಂತಿರುವುದನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರೀಶಿಲಿಸಿದಾಗ ಕಾರಿನೊಳಗೆ ಐವರು ಮೃತಪಟ್ಟಿರುವುದು ಕಂಡುಬಂದಿದೆ. ಇದನ್ನೂ ಓದಿ: ಉಸಿರುಗಟ್ಟಿಸಿ ಮಹಾಲಕ್ಷ್ಮಿ ಕೊಲೆ; ಆ್ಯಕ್ಸಲ್ ಬ್ಲೇಡ್‌ನಿಂದ ದೇಹ ಪೀಸ್ – ಹಂತಕನ ಡೆತ್‌ನೋಟ್‌ನಲ್ಲಿ ಕೊಲೆ ರಹಸ್ಯ ರಿವೀಲ್

    ಮೃತರನ್ನು ಉದ್ಯಮಿ ಮಣಿಕಂದನ್ (50), ಅವರ ಪತ್ನಿ ನಿತ್ಯ, ತಾಯಿ ಸರೋಜಾ ಮತ್ತು ಅವರ ಇಬ್ಬರು ಮಕ್ಕಳು ಎಂದು ಗುರುತಿಸಲಾಗಿದೆ. ಮೃತರು ಸೇಲಂ ನಿವಾಸಿಗಳು ಎಂದು ಗುರುತಿಸಲಾಗಿದೆ ಎಂದು ಸ್ಥಳೀಯ ವರದಿಗಳು ತಿಳಿಸಿವೆ. ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ವಿಷ ಸೇವಿಸಿರುವ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಲೆಬನಾನ್‍ಗೆ ಬರಬೇಡಿ – ತನ್ನ ನಾಗರಿಕರಿಗೆ ಭಾರತ ರಾಯಭಾರ ಕಚೇರಿ ಸೂಚನೆ

    ಘಟನೆಗೆ ಕಾರಣವೇನು ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ಕುಟುಂಬಸ್ಥರು ಸಾಲಗಾರರ ಒತ್ತಡಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದಾ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮೃತ ಮಣಿಕಂದನ್ ಲೋಹದ ವ್ಯಾಪಾರ ಮಾಡುತ್ತಿದ್ದು, ಸಾಲ ಮಾಡಿಕೊಂಡಿದ್ದರು ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಲೋಕಾಯುಕ್ತದಿಂದ ನಿಷ್ಪಕ್ಷಪಾತ ತನಿಖೆ ಅಸಾಧ್ಯ: ದೂರುದಾರ ಸ್ನೇಹಮಯಿ ಕೃಷ್ಣ

    ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಪುದುಕೊಟ್ಟೈ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಮುಂಬೈನಲ್ಲಿ ಭಾರೀ ಮಳೆಗೆ ನಾಲ್ವರು ಸಾವು; ಶಾಲಾ-ಕಾಲೇಜುಗಳಿಗೆ ರಜೆ

  • ಮತಾಂತರ ಮಾಡ್ತಿದ್ದಾರೆಂದು ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ- RSS ಕಾರ್ಯಕರ್ತ ಅರೆಸ್ಟ್

    ಮತಾಂತರ ಮಾಡ್ತಿದ್ದಾರೆಂದು ಕ್ರೈಸ್ತ ಸನ್ಯಾಸಿನಿಯರಿಗೆ ಕಿರುಕುಳ- RSS ಕಾರ್ಯಕರ್ತ ಅರೆಸ್ಟ್

    ಚೆನ್ನೈ: ಇಬ್ಬರು ಕ್ರೈಸ್ತ  ಸನ್ಯಾಸಿನಿಯರಿಗೆ ಕಿರುಕುಳ ಕೊಟ್ಟಿದ್ದಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘದ(RSS)ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.

    ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಇಲುಪ್ಪುರ್ ಬಳಿ ಇಬ್ಬರು ಕ್ರೈಸ್ತ ಸನ್ಯಾಸಿನಿಯರನ್ನು ಧಾರ್ಮಿಕ ಮತಾಂತರದಲ್ಲಿ ತೊಡಗಿದ್ದಾರೆಂದು RSS ಕಾರ್ಯಕರ್ತ ಗಣೇಶ್ ಬಾಬು ಕಿರುಕುಳ ಕೊಡುತ್ತಿದ್ದರು. ಈ ವೇಳೆ ಅವರ ಬಳಿ ಇದ್ದ ಫೋನ್ ಹಾಗೂ ಬೈಕ್ ಕಸಿದುಕೊಂಡಿದ್ದರು. ಈ ಆರೋಪದ ಮೇಲೆ ಇಲುಪ್ಪುರ್ ಪೊಲೀಸರು ಗಣೇಶ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಡಿಕೆಶಿಯನ್ನು ಸಿಎಂ ಮಾಡಲು ಸಿದ್ದರಾಮಯ್ಯ ಬಿಡುತ್ತಾರೆಯೇ: ನಲಪಾಡ್‍ಗೆ ಬಿಜೆಪಿ ಗುದ್ದು

    Goa RSS rebel faction dissolved, merged with parent organisation | Goa News - Times of India

    ಈ ಕುರಿತು ವಿವರಿಸಿದ ಪೊಲೀಸರು, ಘಟನೆ ವೇಳೆ ಗಣೇಶ್ ಜೊತೆ 20ರಿಂದ 30 ಮಂದಿ ಇದ್ದರು. ಜನವರಿ 21 ರಂದು ಈ ಘಟನೆ ನಡೆದಿದ್ದು, ಗಣೇಶ್ ಅವರನ್ನು ಶನಿವಾರ ಬಂಧಿಸಲಾಗಿದೆ. ಭಾನುವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿತ್ತು. ಪ್ರಸ್ತುತ ಆರೋಪಿಯನ್ನು ಅರಂತಂಗಿ ಉಪ ಕಾರಾಗೃಹದಲ್ಲಿ ಇರಿಸಲಾಗಿದೆ. ಆರೋಪಿ ವಿರುದ್ಧ ಮಹಿಳೆಯರ ಕಿರುಕುಳ ನಿಷೇಧ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

    ಘಟನೆ ವಿವರ:
    ಕ್ರೈಸ್ತ ಸನ್ಯಾಸಿನಿಯರು ತಮಗೆ ಪರಿಚಯವಿದ್ದ ಗರ್ಭಿಣಿಯನ್ನು ಭೇಟಿ ಮಾಡಲು ಹೋಗುತ್ತಿದ್ದಾಗ ಗಣೇಶ್ ಮತ್ತು ತಂಡದವರು ಅವರನ್ನು ತಡೆದಿದ್ದಾರೆ. ಗಣೇಶ್ ಅವರ ಗುಂಪು ಸನ್ಯಾಸಿನಿಯರನ್ನು, ನೀವು ಕ್ರೈಸ್ತ ಧರ್ಮಕ್ಕೆ ಮತಾಂತರ ಮಾಡಲು ಬಂದಿದ್ದೀರಾ ಎಂದು ಅವರ ಬಳಿ ಇದ್ದ ಮೊಬೈಲ್ ಮತ್ತು ಬೈಕ್ ಅನ್ನು ಕಸಿದುಕೊಂಡಿದ್ದಾರೆ. ಆದರೆ ಇದು ನಿಜವಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸಮವಸ್ತ್ರದಲ್ಲಿ ಕಾಲೇಜಿಗೆ ಬರಲು ನಾಳೆ ಒಂದು ದಿನ ಅವಕಾಶ: ರಘುಪತಿ ಭಟ್ ಎಚ್ಚರಿಕೆ

    POLICE JEEP

    ಕ್ರೈಸ್ತ ಸನ್ಯಾಸಿನಿಯರು ಪೊಲೀಸರನ್ನು ಸ್ಥಳಕ್ಕೆ ಕರೆಸಿದಾಗ, ಆರೋಪಿಗಳು ತಪ್ಪಿಸಿಕೊಳ್ಳಲು ಪ್ರಯತ್ನಿಸಿದರು. ನಾವು ಫೋನ್ ಮತ್ತು ಬೈಕ್ ಕಿತ್ತುಕೊಂಡಿಲ್ಲ ಎಂದು ವಾದಿಸಿದರು. ನಂತರ ಗಣೇಶ್, ನಾಳೆ ನಾನೇ ಬಂದು ಶರಣಾಗುವುದಾಗಿ ಭರವಸೆ ನೀಡಿದ್ದರು. ಆದರೆ ಅವರು ಬರಲಿಲ್ಲ. ಪರಿಣಾಮ ಶನಿವಾರ ರಾತ್ರಿ ಗಣೇಶ್‍ನನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

    ಗಣೇಶ್‍ನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕೆಲವು ಗುಂಪು, ಕೇಸರಿ ಸ್ಕಾರ್ಫ್‍ಗಳನ್ನು ಧರಿಸಿ ಭಾನುವಾರ ಇಲುಪ್ಪುರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.