Tag: ಪುದುಚೇರಿ

  • ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ

    ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ

    ಪುದುಚೇರಿ: ಪುದುಚೇರಿ ಸಾರಿಗೆ (Puducherry Transport Minister) ಸಚಿವೆ ಚಂದ್ರ ಪ್ರಿಯಾಂಕಾ (Chandra Priyanka) ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ದಲಿತ ಸಮುದಾಯದ ಮಹಿಳಾ ನಾಯಕಿಯಾಗಿ ಅನುಭವಿಸಿದ ಸಮಸ್ಯೆಗಳು ಸೇರಿದಂತೆ ಅನೇಕ ವಿಷಯಗಳನ್ನು ಮುಂದಿಟ್ಟು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ.

    ಚಂದ್ರ ಪ್ರಿಯಾಂಕಾ ( ಅವರು ಅಖಿಲ ಭಾರತ NR ಕಾಂಗ್ರೆಸ್‌ನಿಂದ ಸಚಿವರಾಗಿದ್ದರು. ಅವರು ಕೇಂದ್ರಾಡಳಿತ ಪ್ರದೇಶದ 41 ವರ್ಷಗಳ ಇತಿಹಾಸದಲ್ಲಿ ಎರಡನೇ ಮಹಿಳಾ ಸಚಿವರಾಗಿದ್ದರು. ಪ್ರಬಲ ಶಕ್ತಿಗಳ ವಿರುದ್ಧ ಹೋರಾಟ ಮುಂದುವರಿಸಿ ಸಚಿವೆಯಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂಬುದನ್ನು ಮನಗಂಡು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.

    ಚಂದ್ರ ಪ್ರಿಯಾಂಕಾ ಕಾರೈಕಲ್‌ನ ಮೊದಲ ಮಹಿಳಾ ಸಚಿವೆ. ಇವರು ಪುದುಚೇರಿಯ ಮಾಜಿ ಸಚಿವ ಚಂದ್ರಕಾಸು ಅವರ ಪುತ್ರಿ. ಸಿಎಂಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ, ಜನರ ಬೆಂಬಲವಿದ್ದರೂ ವಿಧಾನಸಭೆಯಲ್ಲಿ ಪ್ರಚಲಿತದಲ್ಲಿರುವ ವಂಚನೆಯ ರಾಜಕಾರಣ ಮತ್ತು ಸಂಪತ್ತಿನ ಅಸಾಧಾರಣ ಹಿಡಿತವನ್ನು ಎದುರಿಸುವುದು ಸವಾಲಿನ ಸಂಗತಿ ಎಂಬುದನ್ನು ನಾನು ಅರಿತುಕೊಂಡಿದ್ದೇನೆ. ನಾನು ಆಗಾಗ್ಗೆ ಜಾತಿ ಮತ್ತು ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.

    2016 ರಲ್ಲಿ ನೆಡುಂಗಾಡು ಕ್ಷೇತ್ರದಿಂದ ಪುದುಚೇರಿ ಅಸೆಂಬ್ಲಿಯ ಸದಸ್ಯರಾಗಿ ಆಯ್ಕೆಯಾಗಿದ್ದರು. 2021 ರ ಪುದುಚೇರಿ ವಿಧಾನಸಭಾ ಚುನಾವಣೆಯಲ್ಲಿ ಅವರು ಅದೇ ಕ್ಷೇತ್ರದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಎ ಮಾರಿಮುತ್ತು ಅವರನ್ನು ಸೋಲಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ಕೋವಿಡ್ ಕೇಸ್ ತೀವ್ರ ಹೆಚ್ಚಳ – ಕೇರಳ, ಹರಿಯಾಣ, ಪುದುಚೇರಿಯಲ್ಲಿ ಮತ್ತೆ ಮಾಸ್ಕ್ ಕಡ್ಡಾಯ

    ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 (Covid-19) ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇದೀಗ ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ (Mask) ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.

    ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಸಭೆಯನ್ನು ನಡೆಸಿದ್ದು, ಕೋವಿಡ್-19 ಕೇಸ್‌ಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಜಾಗರೂಕರಾಗಿರುವಂತೆ ರಾಜ್ಯಗಳಿಗೆ ಸಲಹೆ ನೀಡಿದ್ದಾರೆ. ಏಪ್ರಿಲ್ 10 ಹಾಗೂ 11 ರಂದು ಎಲ್ಲಾ ಆಸ್ಪತ್ರೆಗಳಲ್ಲಿ ಅಣುಕು ಡ್ರಿಲ್ ನಡೆಸುವಂತೆ ಆರೋಗ್ಯ ಮಂತ್ರಿಗಳನ್ನು ಕೇಳಿಕೊಂಡಿದ್ದಾರೆ. ಮಾತ್ರವಲ್ಲದೇ ಕೋವಿಡ್ ಟೆಸ್ಟ್‌ಗಳನ್ನು ಹೆಚ್ಚಿಸುವಂತೆ ಮತ್ತು ಸೂಕ್ತ ಮಾರ್ಗಸೂಚಿಗಳನ್ನು ಅನುಸರಿಸುವ ಬಗ್ಗೆ ಜಾಗೃತಿ ಮೂಡಿಸಲು ತಿಳಿಸಿದ್ದಾರೆ.

    ಇದೀಗ ಕೋವಿಡ್ ಕೇಸ್‌ಗಳು ತೀವ್ರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಹಲವು ರಾಜ್ಯಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ಹರ್ಯಾಣ (Haryana) ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ರಾಜ್ಯದ ಆರೋಗ್ಯ ಇಲಾಖೆಯು ಕೋವಿಡ್ ಸೂಕ್ತ ನಡವಳಿಕೆಯನ್ನು ಅಳವಡಿಸಿಕೊಳ್ಳುವಂತೆ ಸಾರ್ವಜನಿಕರನ್ನು ಒತ್ತಾಯಿಸಿದೆ. ಇದನ್ನು ರಾಜ್ಯದ ಎಲ್ಲಾ ಭಾಗಗಳಲ್ಲಿ ಅನುಷ್ಠಾನಗೊಳಿಸುವಂತೆ ಜಿಲ್ಲಾಡಳಿತ ಮತ್ತು ಪಂಚಾಯಿತಿಗಳಿಗೆ ಸೂಚನೆ ನೀಡಲಾಗಿದೆ.

    ಕೇರಳದಲ್ಲಿ (Kerala) ಗರ್ಭಿಣಿಯರು, ವೃದ್ಧರು ಮತ್ತು ಅನಾರೋಗ್ಯಕ್ಕೊಳಗಾದವರು ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ಸೂಚಿಸಲಾಗಿದೆ. ರಾಜ್ಯದಲ್ಲಿನ ಕೋವಿಡ್-19 ಪರಿಸ್ಥಿತಿಯನ್ನು ಮೌಲ್ಯಮಾಪನ ಮಾಡಲು ಉನ್ನತ ಮಟ್ಟದ ಸಭೆ ನಡೆಸಿದ ನಂತರ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್, ಕೋವಿಡ್ ಸಂಬಂಧಿತ ಸಾವುಗಳು 60 ವರ್ಷಕ್ಕಿಂತ ಮೇಲ್ಪಟ್ಟವರಲ್ಲಿ ಮತ್ತು ಮಧುಮೇಹದಂತಹ ಕಾಯಿಲೆ ಇರುವವರಲ್ಲಿ ಹೆಚ್ಚಾಗಿ ವರದಿಯಾಗಿವೆ ಎಂದು ಹೇಳಿದರು. ಆರೋಗ್ಯ ಇಲಾಖೆಗೆ ಆಮ್ಲಜನಕದ ಲಭ್ಯತೆಯನ್ನು ಖಚಿತಪಡಿಸಿಕೊಳ್ಳಲು ಸೂಚಿಸಿದ್ದು, ಶೀಘ್ರದಲ್ಲೇ ಖಾಸಗಿ ಆಸ್ಪತ್ರೆಗಳ ವಿಶೇಷ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ.

    ಪುದುಚೇರಿಯಲ್ಲಿ (Puducherry) ತಕ್ಷಣವೇ ಜಾರಿಗೆ ಬರುವಂತೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಆಸ್ಪತ್ರೆ, ಹೋಟೆಲ್, ರೆಸ್ಟೋರೆಂಟ್, ಮದ್ಯದ ಅಂಗಡಿಗಳು, ಆತಿಥ್ಯ ಮತ್ತು ಮನರಂಜನಾ ವಲಯಗಳು, ಸರ್ಕಾರಿ ಕಚೇರಿಗಳು ಮತ್ತು ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

  • ಕರ್ನಾಟಕದ ಉದ್ಯಮಿಗಳು ಪುದುಚೇರಿಯಲ್ಲಿ ಉದ್ಯಮ ಮಾಡಲು ಸಕಲ ನೆರವು: ಪುದುಚೇರಿ ಗೃಹಸಚಿವ

    ಕರ್ನಾಟಕದ ಉದ್ಯಮಿಗಳು ಪುದುಚೇರಿಯಲ್ಲಿ ಉದ್ಯಮ ಮಾಡಲು ಸಕಲ ನೆರವು: ಪುದುಚೇರಿ ಗೃಹಸಚಿವ

    ಮಂಗಳೂರು: ಕರ್ನಾಟಕದ (Karnataka) ಯುವ ಉದ್ಯಮಿಗಳು ಪುದುಚೇರಿಗೆ (Puducherry) ಬಂದು ಪ್ರವಾಸೋದ್ಯಮ, ಐಟಿ, ಎಲೆಕ್ಟ್ರಿಕ್ ವೆಹಿಕಲ್ ಮತ್ತಿತರ ಉದ್ಯಮವನ್ನು ಸ್ಥಾಪಿಸುವುದಾದರೆ ಸರ್ಕಾರ ಎಲ್ಲಾ ರೀತಿಯ ನೆರವು ಕಲ್ಪಿಸಲಾಗುವುದು ಎಂದು ಪುದುಚೇರಿ ಗೃಹಸಚಿವ ಎ. ನಮಸ್ಸಿವಾಯಂ (A. Namassivayam) ಹೇಳಿದರು.

    ಮಂಗಳೂರಿನ ಬೈಕಂಪಾಡಿ ಕೈಗಾರಿಕಾ ವಲಯದಲ್ಲಿರುವ ಶ್ರೀ ಕಟೀಲೇಶ್ವರಿ ಕಲ್ಲಿದ್ದಲು ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು, ಕಲ್ಲಿದ್ದಲು ಉದ್ಯಮದ ಕುರಿತು ಮಾಹಿತಿ ಪಡೆದುಕೊಂಡರು.

    ಈ ವೇಳೆ ಮಾತನಾಡಿದ ಅವರು, ಪುದುಚೇರಿ ಸಣ್ಣ ರಾಜ್ಯವಾಗಿದ್ದು, ಅಂತಾರಾಷ್ಟ್ರೀಯ ಪ್ರವಾಸಿಗರನ್ನು ಹೆಚ್ಚೆಚ್ಚು ಆಕರ್ಷಿಸುತ್ತಿದೆ. ಪುದುಚೇರಿ ಸರ್ಕಾರ ಪ್ರವಾಸೋದ್ಯಮಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ವಿದೇಶಿಗರೂ ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿರುವುದರಿಂದ ಉಗ್ರ ಚಟುವಟಿಕೆಯ ಮೇಲೆ ಹದ್ದಿನ ಕಣ್ಣಿರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸುರಕ್ಷತಾ ಕ್ರಮಕ್ಕೆ ಒತ್ತು, ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ಹೇಳಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ಮೇಕ್ ಇನ್ ಇಂಡಿಯಾಗೆ ಹೆಚ್ಚಿನ ಗಮನ ನೀಡಿದ್ದೇವೆ. ಅವರ ನಾಯಕತ್ವದಲ್ಲಿ ದೇಶವು ಉತ್ತಮ ಅಭಿವೃದ್ಧಿ ಹೊಂದುತ್ತಿದೆ ಎಂದು ನುಡಿದರು. ಇದನ್ನೂ ಓದಿ: ದಿಢೀರ್ ಕಾಂಗ್ರೆಸ್‌ಗೆ ಗುಡ್‌ಬೈ – 300ಕ್ಕೂ ಹೆಚ್ಚು ಕಾರ್ಯಕರ್ತರು BJP ಸೇರ್ಪಡೆ

    ಕಟೀಲೇಶ್ವರಿ ಕೋಲ್ ಕಾರ್ಪೋರೇಷನ್ ಪಾಲುದಾರರಾದ ನಾಗರಾಜ್ ಅಮೀನ್, ಮಂಜುನಾಥ್ ನೋಟಗಾರ್, ಬಾಲಮುರಳಿ, ಗಣೇಶ್, ಅಶ್ರಫ್ ಸಿಬ್ಬಂದಿಯಾದ ಶಿವು, ಮುಹಮ್ಮದ್ ರಿಲ್ವಾನ್, ಶಿವಕುಮಾರ್ ನೋಟಗಾರ್, ಶ್ರುತಿ, ಶಬೀರ್, ದೇವು ಮತ್ತಿತರರು ಉಪಸ್ಥಿತರಿದ್ದರು. ಇದನ್ನೂ ಓದಿ: ಜಿಲ್ಲೆಗಳಲ್ಲಿ ಸರ್ಕಾರಿ ಗೋಶಾಲೆ ಆರಂಭಕ್ಕೆ ಡಿಸೆಂಬರ್ ಡೆಡ್‌ಲೈನ್: ಪ್ರಭು ಚೌಹಾಣ್

    Live Tv
    [brid partner=56869869 player=32851 video=960834 autoplay=true]

  • ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    ಎಕ್ಸಾಂ ನಡೆಯುತ್ತಿದ್ದ ಸ್ಕೂಲ್‍ಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು – ಶಾಲೆ ಮುಚ್ಚುವಂತೆ ಒತ್ತಾಯ

    ಪುದುಚೇರಿ: ಪುದುಚೇರಿಯ (Puducherry) ಬಾಲಕಿಯರ ಶಾಲೆಗೆ ನುಗ್ಗಿದ ಹಿಂದೂ ಮುನ್ನಾನಿ ಸದಸ್ಯರು ವಿದ್ಯಾರ್ಥಿನಿಯರು ತಮ್ಮ ತ್ರೈ ಮಾಸಿಕ ಪರೀಕ್ಷೆಯನ್ನು ಬರೆಯುತ್ತಿದ್ದರೂ ಶಾಲೆಯನ್ನು ಮುಚ್ಚುವಂತೆ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ಈ ವೇಳೆ ಮಧ್ಯ ಪ್ರವೇಶಿಸಿದ ಪೊಲೀಸರು ಹಿಂದೂ ಮುನ್ನಾನಿ ಸದಸ್ಯರನ್ನು ಚದುರಿಸಿದ್ದಾರೆ.

    ಹಿಂದೂ ಮುನ್ನಾನಿ (Hindu Munnani) ನೇತೃತ್ವದಲ್ಲಿ ಐದು ಹಿಂದೂಪರ ಸಂಘಟನೆಗಳು ಸೇರಿಕೊಂಡು ಮಂಗಳವಾರ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ (Union Territory of Puducherry) ಬಂದ್‍ಗೆ ಕರೆ ನೀಡಿದ್ದವು. ಇದರಿಂದಾಗಿ ಅಂಗಡಿಗಳನ್ನು ಮುಚ್ಚಲಾಯಿತು ಮತ್ತು ಹಲವಾರು ಖಾಸಗಿ ಶಾಲೆಗಳಿಗೆ ಸೆಪ್ಟೆಂಬರ್ 27 ರಂದು ರಜೆ ಘೋಷಿಸಲಾಗಿದೆ. ಆದರೆ ತ್ರೈಮಾಸಿಕ ಪರೀಕ್ಷೆ ನಡೆಯುತ್ತಿರುವುದರಿಂದ 600 ಬಾಲಕಿಯರು ಓದುತ್ತಿರುವ ಉಪ್ಪಳಂನಲ್ಲಿರುವ (Uppallam) ಇಮ್ಯಾಕ್ಯುಲೇಟ್ ಗರ್ಲ್ಸ್‌  ಹೈಯರ್ ಸೆಕೆಂಡರಿ ಶಾಲೆಗೆ (Girls Higher Secondary School) ರಜೆ ಘೋಷಿಸಲಾಗಿರಲಿಲ್ಲ.

    Puducherry

    ವಿದ್ಯಾರ್ಥಿಗಳು ಶಾಲೆಗೆ ಹೋಗುತ್ತಿರುವುದನ್ನು ಕಂಡ ಹಿಂದೂ ಮುನ್ನಾನಿ ಕಾರ್ಯಕರ್ತರು ಶಾಲೆಯನ್ನು ಮುಚ್ಚುವಂತೆ ಆಡಳಿತ ಮಂಡಳಿಗೆ ಒತ್ತಾಯಿಸಿದ್ದಾರೆ. ಈ ವಿಚಾರ ತಿಳಿದ ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದರು. ಇದನ್ನೂ ಓದಿ: ಪ್ರತಿಷ್ಠಾಪನೆಯಾಗಿದ್ದ ದುರ್ಗಾ ದೇವಿಯ ವಿಗ್ರಹ ವಿರೂಪ – ಇಬ್ಬರು ಮಹಿಳೆಯರು ಅರೆಸ್ಟ್

    ತಂಥೈ ಪೆರಿಯಾರ್ ದ್ರಾವಿಡರ್ ಕಳಗಂನ (Thanthai Periyar Dravidar Kazhagam) ಕಾರ್ಯಕರ್ತರು ಕೂಡ ಶಾಲೆಗೆ ಜಮಾಯಿಸಿ ತೀವ್ರ ವಾಗ್ವಾದ ನಡೆಸಿದರು. ಕೊನೆಯದಾಗಿ ಪುದುಚೇರಿ ಪೊಲೀಸರು ಮಧ್ಯಪ್ರವೇಶಿಸಿ ಸಮಸ್ಯೆಯನ್ನು ಬಗೆಹರಿಸಿದರು ಮತ್ತು ಹಿಂದೂ ಮುನ್ನಾನಿ ಕಾರ್ಯಕರ್ತರನ್ನು ಚದುರಿಸಿದರು. ನಂತರ ಪರೀಕ್ಷೆಗಳನ್ನು ನಿಗದಿತ ಸಮಯದಲ್ಲಿಯೇ ನಡೆಸಲಾಯಿತು. ಇದನ್ನೂ ಓದಿ: ದಸರಾ ಕವಿಗೋಷ್ಠಿಯಲ್ಲಿ ಮೃತಪಟ್ಟ ಕವಿಯ ಹೆಸರು – ಆಮಂತ್ರಣ ಪತ್ರಿಕೆಯಲ್ಲಿ ಎಡವಟ್ಟು

    Live Tv
    [brid partner=56869869 player=32851 video=960834 autoplay=true]

  • ಮಕ್ಕಳಲ್ಲಿ ವಿಪರೀತ ಜ್ವರ – ಸೆ.25 ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

    ಮಕ್ಕಳಲ್ಲಿ ವಿಪರೀತ ಜ್ವರ – ಸೆ.25 ರವರೆಗೆ ಶಾಲೆಗಳಿಗೆ ರಜೆ ಘೋಷಿಸಿದ ಪುದುಚೇರಿ ಸರ್ಕಾರ

    ಪುದುಚೇರಿ: ಶಾಲಾ (School) ಮಕ್ಕಳಲ್ಲಿ (Childrens)  ಜ್ವರ (Fever)  ಕಾಣಿಸಿಕೊಳ್ಳುತ್ತಿರುವ ಪರಿಣಾಮ ಇಂದಿನಿಂದ ಸೆಪ್ಟೆಂಬರ್ (September) 25 ರವರೆಗೆ ಒಂದರಿಂದ 8ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪುದುಚೇರಿ (Puducherry) ಸರ್ಕಾರ ರಜೆ ಘೋಷಿಸಿದೆ.

    ಪುದುಚೇರಿ ಮತ್ತು ಕಾರೈಕಲ್ ಪ್ರದೇಶ ಸರ್ಕಾರಿ ಮತ್ತು ಖಾಸಗಿ ಶಾಲೆಗಳಿಗೆ ಶಿಕ್ಷಣ ಇಲಾಖೆ ಜಂಟಿ ನಿರ್ದೇಶಕ ವಿ.ಜಿ ಶಿವಗಾಮಿ ಸೆಪ್ಟೆಂಬರ್ 17 ರಿಂದ 25ರ ವರಗೆ ರಜೆ ಘೋಷಿಸಿ ಸುತ್ತೋಲೆ ಹೊರಡಿಸಿದ್ದಾರೆ. ಆರೋಗ್ಯ ಇಲಾಖೆಯ ಶಿಫಾರಸಿನ ಮೇರೆಗೆ ಶಾಲೆಗಳನ್ನು ಮುಚ್ಚಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕಳೆದ 10 ದಿನಗಳಲ್ಲಿ, ಮಕ್ಕಳಲ್ಲಿ ಜ್ವರ ಸಮಸ್ಯೆ ಕಾಡುತ್ತಿದೆ. ಸಣ್ಣ ಮಕ್ಕಳಲ್ಲಿ ಜ್ವರ ಪ್ರಕರಣ ಏರಿಕೆಯಾಗುತ್ತಿದ್ದು, ಆಸ್ಪತ್ರೆಗಳಲ್ಲಿ ದಾಖಲಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ ಎಂದು ಆರೋಗ್ಯ ಇಲಾಖೆಯಿಂದ ವರದಿಯಾಗಿದೆ. ಇದನ್ನೂ ಓದಿ: ಪ್ರಧಾನಿ ಮೋದಿ ಅವರಿಗೆ 72ರ ಸಂಭ್ರಮ – ನಮೀಬಿಯಾದಿಂದ ಭಾರತಕ್ಕೆ 8 ಚಿರತೆಗಳು

    ಸರ್ಕಾರಿ ಸ್ವಾಮ್ಯದ ರಾಜೀವ್ ಗಾಂಧಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಜ್ವರ, ಕೆಮ್ಮು ಮತ್ತು ಶೀತ ಬಾಧೆಯಿಂದ ಈಗಾಗಲೇ ಸಾಕಷ್ಟು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ. ದಿನದಿಂದ ದಿನಕ್ಕೆ ಮಕ್ಕಳ ಆರೋಗ್ಯ ಸಮಸ್ಯೆ ಹೆಚ್ಚಾಗುತ್ತಿರುವುದರಿಂದ ಸರ್ಕಾರ ಈ ಬಗ್ಗೆ ಗಂಭೀರವಾಗಿ ಚಿಂತಿಸಿ ಶಾಲೆಗಳಿಗೆ ರಜೆ ನೀಡಲು ಮುಂದಾಗಿದೆ. ಇದನ್ನೂ ಓದಿ: ಮಹಾಗಣಪತಿ ವಿಸರ್ಜನೆ – ಶಾಲಾ-ಕಾಲೇಜ್‍ಗಳಿಗೆ ರಜೆ, 4 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ

    Live Tv
    [brid partner=56869869 player=32851 video=960834 autoplay=true]

  • ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಓದುವುದರಲ್ಲಿ ಕಾಂಪಿಟೇಷನ್ ನೀಡ್ತಿದ್ದಕ್ಕೆ ಮಗನ ಸಹಪಾಠಿಗೆ ವಿಷ ಕೊಟ್ಟು ಸಾಯಿಸಿದ್ಲು

    ಪುದುಚೇರಿ: ಓದುವುದರಲ್ಲಿ ತನ್ನ ಮಗನಿಗೆ ಸ್ಪರ್ಧೆ ನೀಡುತ್ತಿದ್ದ ಸಹಪಾಠಿಗೆ ಮಹಿಳೆಯೊಬ್ಬಳು ವಿಷ ನೀಡಿ ಹತ್ಯೆಗೈದಿರುವ ಘಟನೆ ಪುದುಚೇರಿಯಲ್ಲಿ ನಡೆದಿದೆ.

    ಖಾಸಗಿ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿ ಬಾಲಾ ಮಣಿಕಂದನ್ ಶೈಕ್ಷಣಿಕ ಸಾಲಿನ ರಜೆಗೆಂದು ಮನೆಗೆ ಹಿಂದುರುಗಿದಾಗ ತೂಕಡಿಸಲು ಆರಂಭಿಸಿದನು. ಈ ವೇಳೆ ಶಾಲೆಯಲ್ಲಿ ಏನಾದರೂ ಸೇವಿಸಿದ್ದೀಯಾ ಎಂದು ತಾಯಿ ಕೇಳಿದಾಗ, ವಾಚ್‍ಮ್ಯಾನ್ ತನಗೆ ಜ್ಯೂಸ್ ನೀಡಿದ್ದು, ಅದನ್ನು ಕುಡಿದ ನಂತರ ಕುಸಿದು ಬಿದ್ದಿರುವುದಾಗಿ ತಿಳಿಸಿದ್ದಾನೆ. ಇದನ್ನೂ ಓದಿ: ಹನುಮನ ವೇಷ ಧರಿಸಿದ್ದ ವ್ಯಕ್ತಿ ಪ್ರದರ್ಶನ ನೀಡುತ್ತಲೇ ಕುಸಿದು ಸಾವು

    ಕೂಡಲೇ ಮಣಿಕಂದನ್ ಬಾಲನನ್ನು ಕಾರೈಕ್ಕಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ವಾಚ್‍ಮ್ಯಾನ್ ಏಕೆ ಜ್ಯೂಸ್ ನೀಡಿರಬಹುದು ಎಂದು ಪೋಷಕರು ಮತ್ತು ಆತನ ಸಂಬಂಧಿಕರು ವಿಚಾರಿಸಿದಾಗ ಮಹಿಳೆಯೊಬ್ಬರು ತನ್ನ ಬಳಿಗೆ ಬಂದು ಎರಡು ಜ್ಯೂಸ್ ಬಾಟಲಿಗಳನ್ನು ನೀಡಿ, ಬಾಲಾ ಅವರ ಮನೆಯವರು ಕಳುಹಿಸಿದ್ದಾರೆ ಎಂದು ತಿಳಿಸಿರುವುದಾಗಿ ಹೇಳಿದ್ದಾನೆ.

    ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಮಹಿಳೆಯೊಬ್ಬರು ವಾಚ್‍ಮ್ಯಾನ್‍ಗೆ ಜ್ಯೂಸ್ ನೀಡುತ್ತಿರುವುದು ಕಂಡುಬಂದಿದೆ. ನಂತರ ಆಕೆಯನ್ನು ಬಾಲನ ಸಹಪಾಠಿ ಅರುಲ್ ಮೇರಿಯ ತಾಯಿ ಸಗಾಯರಾಣಿ ವಿಕ್ಟೋರಿಯಾ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಚಾಮರಾಜಪೇಟೆಯಲ್ಲಿ ನಾಳೆ ಜಮೀರ್ ನೇತೃತ್ವದಲ್ಲೇ ಗಣೇಶೋತ್ಸವ!

    ಚಿಕಿತ್ಸೆ ಫಲಾಕಾರಿಯಾಗದೇ ಶನಿವಾರ ರಾತ್ರಿ ಬಾಲ ಮೃತಪಟ್ಟಿದ್ದಾನೆ. ಇದರಿಂದ ರೊಚ್ಚಿಗೆದ್ದ ಮೃತ ವಿದ್ಯಾರ್ಥಿಯ ಪೋಷಕರು ಹಾಗೂ ಸಂಬಂಧಿಕರು ನ್ಯಾಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸಿದರು. ಹೀಗಾಗಿ ಪೊಲೀಸರು ಸಗಾಯರಾಣಿ ವಿಕ್ಟೋರಿಯಾಳನ್ನು ಕೂಡಲೇ ಬಂಧಿಸಿದರು. ಬಳಿಕ ಈ ಕುರಿತಂತೆ ವಿಚಾರಣೆ ನಡೆಸಿದಾಗ, ತನ್ನ ಮಗ ಅರುಲ್ ಮೇರಿ ಮತ್ತು ಬಾಲಾ ನಡುವೆ ಅಂಕ ಗಳಿಸುವ ವಿಚಾರವಾಗಿ ಮತ್ತು ತರಗತಿಯಲ್ಲಿ ರ‍್ಯಾಂಕ್ ಪಡೆಯಲು ಪೈಪೋಟಿ ಇತ್ತು. ಇದರಿಂದಾಗಿ ಆಗಾಗ ಸಣ್ಣ-ಪುಟ್ಟ ಜಗಳವಾಗುತ್ತಿತ್ತು. ಇದರಿಂದ ಅಸಮಾಧಾನಗೊಂಡು ಈ ಕೃತ್ಯ ವೆಸಗಿರುವುದಾಗಿ ಮಹಿಳೆ ತಿಳಿಸಿದ್ದಾಳೆ.

    Live Tv
    [brid partner=56869869 player=32851 video=960834 autoplay=true]

  • ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ

    ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ

    ಪುದುಚೇರಿ: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಪಾಂಡಿಚೇರಿ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ನಡೆದಿದೆ.

    ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಹೋಗಿದ್ದರು. ಮಾಜಿ ಸಚಿವರೊಬ್ಬರನ್ನ ಬೆಂಬಲಿಸುವ ಬಣ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸುತ್ತಿತ್ತು. ಈ ವೇಳೆ ಸಭೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ದಿನೇಶ್ ಗುಂಡೂರಾವ್ ಅವರನ್ನು ಸುತ್ತುವರಿದು ತಳ್ಳಾಡಿ ಗಲಾಟೆ ಮಾಡಿದ್ದಾರೆ. ಅಲ್ಲದೇ ಕಾರಿಗೆ ಹತ್ತದಂತೆ ತಡೆದು ದಿನೇಶ್ ಗುಂಡೂರಾವ್ ಕಾರಿಗೆ ಹಾನಿ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಉತ್ತರ ನೀಡುವಂತೆ ದಿನೇಶ್ ಗುಂಡೂರಾವ್‍ಗೆ ಕಾರ್ಯಕರ್ತರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್

    ಸ್ಥಳದಲ್ಲಿ ಮಾಜಿ ಸಿಎಂ ನಾರಾಯಣಸ್ವಾಮಿ ಬೆಂಬಲಿಗರು ಕೂಡ ಜಮಾಯಿಸಿದ್ದರು. ನಂತರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಘಟನೆಯ ನಂತರ ಪುದುಚೇರಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಮಣಿಯನ್ ಅವರು ಐವರು ಕೈ ಕಾರ್ಯಕರ್ತರು ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಲಸಿಕೆ ಬೇಡ ಎಂದು ಚಾಕು ಹಿಡಿದು ಮರ ಹತ್ತಿ ಕುಳಿತ!

    ಲಸಿಕೆ ಬೇಡ ಎಂದು ಚಾಕು ಹಿಡಿದು ಮರ ಹತ್ತಿ ಕುಳಿತ!

    ಚೆನ್ನೈ: ಆರೋಗ್ಯ ಕಾರ್ಯಕರ್ತರು ಕೋವಿಡ್ ಲಸಿಕೆಯನ್ನು ನೀಡಲು ಬಂದಾಗ ವ್ಯಕ್ತಿಯೊಬ್ಬ ಅವರಿಂದ ತಪ್ಪಿಸಿಕೊಳ್ಳಲು ಚಾಕು ಹಿಡಿದು ಮರ ಏರಿ ಕುಳಿತ ಘಟನೆ ತಮಿಳುನಾಡಿನ ಪುದುಚೇರಿಯಲ್ಲಿ ನಡೆದಿದೆ.

    ಪುದುಚೇರಿಯ ವಿಲಿಯನೂರ್ ಗ್ರಾಮದ ಮಧ್ಯವಯಸ್ಕ ನಿವಾಸಿಯೊಬ್ಬ ಕೋವಿಡ್ ಲಸಿಕೆ ನೀಡಲು ಆರೋಗ್ಯ ಅಧಿಕಾರಿಗಳು ಗ್ರಾಮಕ್ಕೆ ಬಂದಾಗ ಅವರನ್ನು ಕಂಡ ತಕ್ಷಣ ಮರ ಏರಿ ಕುಳಿತಿದ್ದಾನೆ. ಲಸಿಕೆಯನ್ನು ಪಡೆಯಲು ಇಷ್ಟವಿರದ ವ್ಯಕ್ತಿ ಚಾಕುವಿನಿಂದ ಕೊಂಬೆಯನ್ನು ಕತ್ತರಿಸಲು ಪ್ರಾರಂಭಿಸಿದ್ದನು. ಇದನ್ನೂ ಓದಿ:  ಮೊಬೈಲ್ ಕದ್ದಿದ್ದಕ್ಕೆ ಬಾಲಕಿಗೆ ಹಿಗ್ಗಾಮುಗ್ಗ ಥಳಿಸಿದ ಯುವಕರು

     

    ವ್ಯಕ್ತಿಗೆ ಲಸಿಕೆ ಪಡೆಯಲು ಇಷ್ಟವಿಲ್ಲದಿದ್ದರಿಂದ ಆರೋಗ್ಯ ಕಾರ್ಯಕರ್ತರಿಗೆ ಮರ ಏರಿ ಲಸಿಕೆ ಹಾಕುವಂತೆ ಸವಾಲು ಹಾಕಿದ್ದಾನೆ. ಆದರೆ ಕಾರ್ಯಕರ್ತರು ಆತನನ್ನು ಹಿಂಬಾಲಿಸಿಯೂ ಕೈಗೆ ಸಿಗದಿದ್ದಾಗ ಆ ಸ್ಥಳ ತೊರೆದು ಮುಂದಿನ ಕೆಲಸಕ್ಕೆ ಗಮನ ಹರಿಸಿದ್ದಾರೆ.

    ಸರ್ಕಾರದ ಮಾರ್ಗಸೂಚಿಯ ಭಾಗವಾಗಿ ಪುದುಚೇರಿಯ ಜನರಿಗೆ ಶೇ. 100 ರಷ್ಟು ಲಸಿಕೆಗಳನ್ನು ಹಾಕಿಸುವ ಪ್ರಯತ್ನದಲ್ಲಿದೆ. ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ತೆರಳಿ ಲಸಿಕೆಯನ್ನು ನೀಡುತ್ತಿದ್ದಾರೆ. ಇದನ್ನೂ ಓದಿ: ಜಾರ್ಖಂಡ್‍ನಲ್ಲಿ ಪೆಟ್ರೋಲ್ ದರ 25 ರೂ. ಇಳಿಕೆ – ದ್ವಿಚಕ್ರ ವಾಹನಗಳಿಗೆ ಮಾತ್ರ ಈ ಆಫರ್!

  • ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ – ಮೇಕೆದಾಟು ಯೋಜನೆಗೆ ಕೇರಳ, ಪುದುಚೆರಿಯಿಂದಲೂ ಕ್ಯಾತೆ

    ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸೂಚನೆ – ಮೇಕೆದಾಟು ಯೋಜನೆಗೆ ಕೇರಳ, ಪುದುಚೆರಿಯಿಂದಲೂ ಕ್ಯಾತೆ

    ನವದೆಹಲಿ: ಸೆಪ್ಟೆಂಬರ್ ತಿಂಗಳಲ್ಲಿ 6-7 ಟಿಎಂಸಿ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ. ಇಂದು ದೆಹಲಿಯಲ್ಲಿ ಅಧ್ಯಕ್ಷ ಎಸ್.ಕೆ ಹಲ್ದರ್ ನೇತೃತ್ವದಲ್ಲಿ 13 ನೇ ಸಾಮಾನ್ಯ ಸಭೆ ನಡೆಸಲಾಯಿತು. ಸಭೆಯಲ್ಲಿ ತಮಿಳುನಾಡು ಜೂನ್ ಜುಲೈ ಅಗಸ್ಟ್ ತಿಂಗಳ ಬಾಕಿ ನೀರು ಬಿಡುಗಡೆ ಒತ್ತಾಯಿಸಿತು.

    ಮೂರು ತಿಂಗಳ ಅವಧಿಯಲ್ಲಿ ಕರ್ನಾಟಕ 86 ಟಿಎಂಸಿ ನೀರು ಬಿಡಬೇಕಿತ್ತು. ಆದರೆ ಈವರೆಗೂ 57-57 ಟಿಎಂಸಿ ನೀರು ಬಿಡುಗಡೆ ಮಾಡಿದೆ. ಬಾಕಿ 30.6 ಟಿಎಂಸಿ ನೀರು ಹರಿಸಲು ತಮಿಳುನಾಡು ಪ್ರಾಧಿಕಾರದ ಮುಂದೆ ಮನವಿ ಮಾಡಿತು. ಇದಕ್ಕೆ ಪ್ರತಿಕ್ರಿಯಿಸಿದ ರಾಜ್ಯ ಸರ್ಕಾರ ರಾಜ್ಯದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಕಳೆದ ತಿಂಗಳು ಉತ್ತಮ ಮಳೆಯಾಗಿರುವ ಕಾರಣ 14,000 ಕ್ಯೂಸೆಕ್ ನೀರು ಹರಿಸಿದೆ. ಆದರೆ ತಮಿಳುನಾಡು ಇದನ್ನು ಪರಿಗಣಿಸಲಿಲ್ಲ. ಉತ್ತಮ ಮಳೆಯಾದ್ರೆ ಬಾಕಿ ನೀರು ನೀಡುವುದಾಗಿ ಹೇಳಿತು.

    ಅಧ್ಯಕ್ಷ ಎಸ್.ಕೆ ಹಲ್ದರ್ ಮಳೆಯ ಪ್ರಮಾಣ, ಕೊರತೆ ಎಲ್ಲವನ್ನೂ ತಾಳೆ ಹಾಕಿ ತಮಿಳುನಾಡಿಗೆ ಸೆಪ್ಟೆಂಬರ್ ನಲ್ಲಿ 6-7 ಟಿಎಂಸಿ ನೀರು ನೀಡಬೇಕು, ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ ಉತ್ತಮ ಮಳೆಯಾಗಲಿದ್ದು, ಮುಂದೆ ತಮಿಳುನಾಡು ಪಾಲಿನ ಎಲ್ಲ ನೀರನ್ನು ನೀಡಬೇಕು ಎಂದು ಸೂಚಿಸಿದರು.

    ಇನ್ನು ಸಭೆಯಲ್ಲಿ ಕರ್ನಾಟಕ ಮೇಕೆದಾಟು ಆಣೆಕಟ್ಟು ನಿರ್ಮಾಣದ ಬಗ್ಗ ಪ್ರಸ್ತಾಪ ಮಾಡಿತು. ಆದರೆ ಪ್ರಕರಣ ಸುಪ್ರೀಂಕೋರ್ಟ್ ನಲ್ಲಿರುವ ಕಾರಣ ಈ ಬಗ್ಗೆ ಚರ್ಚೆ ಮಾಡದಂತೆ ಕೇರಳ, ಪುದುಚೇರಿ ಮತ್ತು ತಮಿಳುನಾಡು ಒತ್ತಾಯ ಮಾಡಿದವು. ಈ ಹಿನ್ನೆಲೆ ಈ ಚರ್ಚೆಯನ್ನು ಮುಂದೂಡಲಾಯಿತು. ಕರ್ನಾಟಕವೂ ವೆಲ್ಲಾರು – ಗುಂಡಾರು ನದಿ ಜೋಡಣೆಗೆ ವಿರೋಧ ವ್ಯಕ್ತಪಡಿಸಿತು. ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿತು. ಇದಕ್ಕೆ ತಮಿಳುನಾಡು ವಿರೋಧ ಹಿನ್ನಲೆ ಈ ಚರ್ಚೆಯನ್ನು ಮುಂದೂಡಲಾಯಿತು. ಇದನ್ನೂ ಓದಿ: ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಈ ಎರಡು ವಿಚಾರಗಳು ಮುಂದಿನ ಸಭೆಯಲ್ಲಿ ಚರ್ಚೆಗೆ ಬರುವ ನಿರೀಕ್ಷೆ ಇದೆ. ಸೆಪ್ಟೆಂಬರ್ 24ಕ್ಕೆ ಮುಂದಿನ ಸಭೆಗೆ ದಿನಾಂಕ ನಿಗದಿ ಮಾಡಿದೆ. ಸಭೆ ಬಳಿಕ ಮಾತನಾಡಿದ ಅಧ್ಯಕ್ಷ ಎಸ್.ಕೆ ಹಲ್ದರ್ ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ನೇರ ರಾಜ್ಯಗಳ ಸಹಮತ ಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: 2027ಕ್ಕೆ ದೇಶದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ ಆಗಲಿದ್ದಾರೆ ಕರ್ನಾಟಕದ ನ್ಯಾ. ಬಿ.ವಿ.ನಾಗರತ್ನ

  • ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೇರಿ ಸಿಎಂ ಸಂಪುಟ ರಚನೆ- 13 ಖಾತೆಗಳನ್ನು ಇಟ್ಟುಕೊಂಡ ಎನ್.ರಂಗಸ್ವಾಮಿ

    ಪುದುಚೆರಿ: ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಮುಖ್ಯಮಂತ್ರಿ ಎನ್.ರಂಗಸ್ವಾಮಿ ನೇತೃತ್ವದ ಸಂಪುಟ ರಚನೆಯಾಗಿದೆ. ರಂಗಸ್ವಾಮಿ ಆರೋಗ್ಯ, ಕಂದಾಯ ಇಲಾಖೆ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತನ್ನ ಬಳಿಯೇ ಇಟ್ಟುಕೊಂಡಿದ್ದಾರೆ.

    ಕೇಂದ್ರಾಡಳಿತ ಪ್ರದೇಶ ಪುದುಚೇರಿಗೆ ಲೆಫ್ಟಿನೆಂಟ್ ಗವರ್ನರ್ ಡಾ.ತಮಿಳುಸಾಯಿ ಸುಂದರರಾಜನ್ ಅವರ ಅನುಮೋದನೆ ಬಳಿಕ ಸರ್ಕಾರದ ಸಂಪುಟ ರಚನೆಯಾಗಿದೆ. ಸಿಎಂ 13 ಖಾತೆಗಳನ್ನು ತನ್ನ ಬಳಿ ಇಟ್ಟುಕೊಂಡರೆ ಉಳಿದ ಎಲ್ಲಾ ಸಚಿವರಿಗೆ ತಲಾ ಆರು ಖಾತೆಗಳನ್ನು ಹಂಚಿಕೆ ಮಾಡಿದ್ದಾರೆ. ಇದನ್ನೂ ಓದಿ: ಪುದುಚೇರಿಯಲ್ಲಿ ಕಮಲ ಅರಳಿದ್ದು ಹೇಗೆ? ಕಾಂಗ್ರೆಸ್ ಎಡವಿದ್ದೆಲ್ಲಿ?

    ಎನ್. ರಂಗಸ್ವಾಮಿ ಅವರು ಆರೋಗ್ಯ, ಕಂದಾಯ, ಸ್ಥಳೀಯ ಆಡಳಿತ, ಬಂದರು, ವಿಜ್ಞಾನ ತಂತ್ರಜ್ಞಾನ ಮತ್ತು ಪರಿಸರ, ಮಾಹಿತಿ ಮತ್ತು ಪ್ರಚಾರ ಸೇರಿದಂತೆ ಪ್ರಮುಖ 13 ಖಾತೆಗಳನ್ನು ತಮ್ಮ ಬಳಿಯೇ ಉಳಿಸಿಕೊಂಡು ಉಳಿದ ಸಚಿವರಿಗೆ ತಲಾ 6 ಖಾತೆಯಂತೆ ಹಂಚಿಕೆ ಮಾಡಿದ್ದಾರೆ.

    ಫೆಬ್ರವರಿಯಲ್ಲಿ ವಿ. ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನಕ್ಕೆ ಪ್ರಮುಖ ಕಾರಣರಾಗಿದ್ದ ಎನ್. ರಂಗಸ್ವಾಮಿ ಇದೀಗ ಕಾಂಗ್ರೆಸ್ ತೊರೆದು ಬಿಜೆಪಿಯೊಂದಿಗೆ ಸೇರಿ ಸರ್ಕಾರ ರಚಿಸಿದ್ದಾರೆ.