Tag: ಪುದುಚೇರಿ

  • ಸಿಎಂ, ಗವರ್ನರ್ ನಡುವೆ ಹೆಲ್ಮೆಟ್ ವಾರ್- ಟ್ವಿಟ್ಟರ್‌ನಲ್ಲಿ ಒಬ್ಬರಿಗೊಬ್ಬರು ಟಾಂಗ್

    ಸಿಎಂ, ಗವರ್ನರ್ ನಡುವೆ ಹೆಲ್ಮೆಟ್ ವಾರ್- ಟ್ವಿಟ್ಟರ್‌ನಲ್ಲಿ ಒಬ್ಬರಿಗೊಬ್ಬರು ಟಾಂಗ್

    ಪುದುಚೇರಿ: ಹೆಲ್ಮೆಟ್ ಧರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ ಹಾಗೂ ಉಪರಾಜ್ಯಪಾಲೆ ಕಿರಣ್ ಬೇಡಿ ನಡುವಿನ ಟ್ವೀಟ್ ವಾರ್ ಭಾರೀ ಚರ್ಚೆಗೆ ಗ್ರಾಸವಾಗಿದೆ.

    ಕಿರಣ್ ಬೇಡಿ ಹಾಗೂ ನಾರಾಯಣಸ್ವಾಮಿ ಇಬ್ಬರೂ ಸಹ ವಿವಿಧ ವಿಚಾರಗಳಲ್ಲಿ ಭಿನ್ನಾಭಿಪ್ರಾಯ ಹೊಂದಿದ್ದಾರೆ. ಇದೀಗ ಹೆಲ್ಮೆಟ್ ಕುರಿತು ಒಬ್ಬರಿಗೊಬ್ಬರು ಟ್ವೀಟ್ ಮಾಡುವ ಮೂಲಕ ಚರ್ಚೆಗೆ ಕಾರಣವಾಗಿದ್ದಾರೆ.

    ನಾರಾಯಣಸ್ವಾಮಿಯವರು ಹೆಲ್ಮೆಟ್ ಧರಿಸದೆ ಚುನಾವಣಾ ಪ್ರಚಾರದ ರ್ಯಾಲಿಯಲ್ಲಿ ಭಾಗವಹಿಸಿದ್ದನ್ನು ಕಂಡು ಕಿರಣ್ ಬೇಡಿ ಕಿಡಿಕಾರಿದ್ದರು. ಈ ಕುರಿತು ಟ್ವೀಟ್ ಮಾಡಿ ಮೋಟಾರು ವಾಹನಗಳ ಕಾಯ್ದೆ ಉಲ್ಲಂಘನೆಯಾಗಿದೆ ಎಂದು ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ನಾರಾಯಣಸ್ವಾಮಿಯವರ ಫೋಟೋವನ್ನು ಟ್ವೀಟ್ ಮಾಡಿದ್ದರು.

    ಸುಪ್ರೀಂ ಕೋರ್ಟ್, ಮದ್ರಾಸ್ ಹೈ ಕೋರ್ಟ್ ನಿರ್ದೇಶನ ಹಾಗೂ ಮೋಟಾರು ವಾಹನ ಕಾಯ್ದೆಯ ನಿಯಮಗಳನ್ನು ಉಲ್ಲಂಘಿಸಿರುವ ಸಿಎಂ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಈ ಕುರಿತು ಪುದುಚೇರಿ ಪೊಲೀಸ್ ಮಹಾನಿರ್ದೇಶಕ ಬಾಲಾಜಿ ಶ್ರೀವಾಸ್ತವ್ ಅವರಿಗೆ ನಿವೃತ್ತ ಐಪಿಎಸ್ ಅಧಿಕಾರಿಯೂ ಆಗಿರುವ ಕಿರಣ್ ಬೇಡಿ ನಿರ್ದೇಶನ ನೀಡಿದ್ದಾರೆ.

    ಕಿರಣ್ ಬೇಡಿ ಅವರು ಪುದುಚೇರಿ ಡಿಜಿಪಿ ಹಾಗೂ ನಿತಿನ್ ಗಡ್ಕರಿ ಅವರಿಗೆ ಟ್ವೀಟ್ ಮಾಡಿದ್ದಾರೆ. ಪುದುಚೇರಿ ಮುಖ್ಯಮಂತ್ರಿ ಕಾಮರಾಜ್ ನಗರದಲ್ಲಿ ಹೆಲ್ಮೆಟ್ ಇಲ್ಲದೆ ಪ್ರಚಾರ ಮಾಡುತ್ತಿರುವ ಫೋಟೋವನ್ನು ಹಾಕಿದ್ದಾರೆ.

    ಇದಕ್ಕೆ ಪ್ರತಿಯಾಗಿ ಸಿಎಂ ನಾರಾಯಣಸ್ವಾಮಿ ಸಹ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಉಪ ರಾಜ್ಯಪಾಲೆ ಕಿರಣ್ ಬೇಡಿ ಅವರು 2017ರಲ್ಲಿ ಹೆಲ್ಮೆಟ್ ಇಲ್ಲದೆ ಸ್ಕೂಟರ್‍ನಲ್ಲಿ ಸಂಚರಿಸುತ್ತಿರುವ ಚಿತ್ರವನ್ನು ಪೋಸ್ಟ್ ಮಾಡಿದ್ದಾರೆ. ಅಲ್ಲದೆ ಅಧಿಕೃತ ಸಂವಹನಕ್ಕಾಗಿ ಟ್ವಿಟ್ಟರ್ ಬಳಸುವ ಮೂಲಕ ಮದ್ರಾಸ್ ಹೈ ಕೋರ್ಟ್‍ನ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಉಪರಾಜ್ಯಪಾಲೆ ಕಿರಣ್ ಬೇಡಿ ಅವರು ಮತ್ತೊಬ್ಬರಿಗೆ ಬೋಧಿಸುವ ಮುನ್ನ ತಾವು ತಿಳಿದುಕೊಳ್ಳಲಿ ಎಂದು ಟ್ವೀಟ್‍ನಲ್ಲಿ ಸಾಲುಗಳನ್ನು ಬರೆದಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ನಾರಾಯಣಸ್ವಾಮಿ, ಉಪರಾಜ್ಯಪಾಲರು ವಸ್ತು ಸ್ಥಿತಿಯನ್ನು ಅರಿಯಬೇಕು. ಚುನಾವಣೆ ನಡೆಯುತ್ತಿದೆ. ಚುನಾವಣೆಗಳನ್ನು ಶಾಂತಿಯುತವಾಗಿ ನಡೆಸುವುದು ಚುನಾವಣಾ ಆಯೋಗದ ಕರ್ತವ್ಯ ಎಂದರು.

    ನಿನ್ನೆ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾದ್ದರಿಂದ ಬೈಕ್ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ನಾನೂ ಕಾರ್ಯಕರ್ತರೊಂದಿಗೆ ಬೈಕ್ ರ್ಯಾಲಿಯಲ್ಲಿ ಭಾಗವಹಿಸಿದ್ದೆ. ನಾನು ಹೆಲ್ಮೆಟ್ ಧರಿಸಿದರೆ ಮುಖ್ಯಮಂತ್ರಿ ಬರುತ್ತಿದ್ದಾರೆ ಎಂದು ಯಾರಿಗೆ ತಿಳಿಯುತ್ತದೆ. ಅಲ್ಲದೆ ಹೆಲ್ಮೆಟ್ ಧರಿಸದ್ದನ್ನು ಟ್ವೀಟ್ ಮೂಲಕ ಡಿಜಿಪಿಗೆ ತಿಳಿಸಿದ್ದಾರೆ. ಆದರೆ ಅಧಿಕೃತ ಸಂವಹನಕ್ಕಾಗಿ ಸಾಮಾಜಿಕ ಜಾಲತಾಣಗಳನ್ನು ಬಳಕೆ ಮಾಡಬಾರದು ಎಂದು ಕೋರ್ಟ್ ಸ್ಪಷ್ಟವಾಗಿ ತಿಳಿಸಿದೆ. ಕಿರಣ್ ಬೇಡಿಯವರು ಸಾಮಾಜಿಕ ಜಾಲತಾಣಗಳನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿದ್ದಾರೆ.

  • ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಆಡಳಿತದಲ್ಲಿ ಹಸ್ತಕ್ಷೇಪ ಸಲ್ಲ: ಕಿರಣ್ ಬೇಡಿಗೆ ಮದ್ರಾಸ್ ಹೈಕೋರ್ಟ್ ಆದೇಶ

    ಪುದುಚೇರಿ: ಪುದುಚೇರಿ ಸರ್ಕಾರದ ದೈನಂದಿನ ಚಟುವಟಿಕಗಳಲ್ಲಿ ಮಧ್ಯ ಪ್ರವೇಶ ಮಾಡುವ ಅಧಿಕಾರ ರಾಜ್ಯಪಾಲರಾದ ಕಿರಣ್ ಬೇಡಿ ಅವರಿಗೆ ಇಲ್ಲ ಎಂದು ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ಆದೇಶ ಪ್ರಕಟಿಸಿದೆ.

    ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಹಾಗೂ ಅಲ್ಲಿನ ರಾಜ್ಯಪಾಲರಾದ ಕಿರಣ್ ಬೇಡಿ ಮಧ್ಯೆ ಉಂಟಾಗಿದ್ದ ವಿವಾದಕ್ಕೆ ಮದ್ರಾಸ್ ಹೈಕೋರ್ಟ್ ತೆರೆ ಎಳೆದಿದೆ. ಇದನ್ನೂ ಓದಿ: ಕಿರಣ್ ಬೇಡಿ ನಿವಾಸದ ಎದುರೇ ಮಲಗಿದ ಪುದುಚೇರಿ ಸಿಎಂ

    ಸಿಎಂ ವಿ.ನಾರಾಯಣ ಸ್ವಾಮಿ ಅವರ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬೇಡಿ. ಸರ್ಕಾರದ ಯಾವುದೇ ರೀತಿಯ ದಾಖಲೆಗಳನ್ನು ರಾಜ್ಯಪಾಲರು ಕೇಳುವ ಅಧಿಕಾರ ಹೊಂದಿಲ್ಲ ಎಂದು ಕೋರ್ಟ್ ಆದೇಶ ಹೊರಡಿಸಿದೆ.

    ಈ ಸಂಬಂಧ ಪ್ರತಿಕ್ರಿಯೆ ನೀಡಿರುವ ವಿ.ನಾರಾಯಣ ಸ್ವಾಮಿ ಅವರು, ಮದ್ರಾಸ್ ಹೈಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ಇದು ಸಂವಿಧಾನ ಉಳಿಸಲು ಸರ್ಕಾರ ನಡೆಸಿದ ಹೋರಾಟಕ್ಕೆ ಸಿಕ್ಕ ಜಯ ಎಂದು ತಿಳಿಸಿದ್ದಾರೆ.

    ಏನಿದು ಪ್ರಕರಣ?:
    ಪುದುಚೇರಿ ರಾಜ್ಯಪಾಲರಾದ ಕಿರಣ್ ಬೇಡಿ ಅವರು ಸರ್ಕಾರದ ಕಾರ್ಯವೈಕರಿಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಸಿಎಂ ವಿ.ನಾರಾಯಣ ಸ್ವಾಮಿ ಆರೋಪಿಸಿದ್ದರು. ಬಳಿಕ ನಾರಾಯಣಸ್ವಾಮಿ ಅವರು ಪುದುಚೇರಿ ರಾಜಭವನದ ಮುಂದೆ ತಮ್ಮ ಸಚಿವರು, ಶಾಸಕರೊಂದಿಗೆ ಪ್ರತಿಭಟನೆ ಕೂಡ ನಡೆಸಿದ್ದರು.

    ಕಿರಣ್ ಬೇಡಿ ಅವರು ಆಡಳಿತದಲ್ಲಿ ಅನಗತ್ಯ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಶಾಸಕ ಲಕ್ಷ್ಮೀ ನಾರಾಯಣನ್ 2017ರಲ್ಲಿ ಮದ್ರಾಸ್ ಹೈಕೋರ್ಟ್ ಮೆಟ್ಟಿಲೇರಿದ್ದರು.

  • ಕಿರಣ್ ಬೇಡಿ ನಿವಾಸದ ಎದುರೇ ಮಲಗಿದ ಪುದುಚೇರಿ ಸಿಎಂ

    ಕಿರಣ್ ಬೇಡಿ ನಿವಾಸದ ಎದುರೇ ಮಲಗಿದ ಪುದುಚೇರಿ ಸಿಎಂ

    – ಸಿಎಂ ವರ್ಸಸ್ ಕಿರಣ್‍ಬೇಡಿ

    ಪುದುಚೇರಿ: ದೆಹಲಿ ಮತ್ತು ಪಶ್ಚಿಮ ಬಂಗಾಳದ ಮಾರ್ಗದಲ್ಲಿ ಪುದುಚೇರಿ ಸಿಎಂ ವಿ.ನಾರಾಯಾಣಸ್ವಾಮಿ ಉಪ ರಾಜ್ಯಪಾಲರ ನಿವಾಸ ಎದುರೇ ಅಹೋರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ಉಪ ರಾಜ್ಯಪಾಲರಾದ ಕಿರಣ್ ಬೇಡಿ, ಸರ್ಕಾರದ 1993ರ ವ್ಯಾಪಾರಿ ನಿಯಮದ ವಿರುದ್ಧ ಕೆಲಸ ಮಾಡುತ್ತಿದ್ದಾರೆ ಎಂದು ಸಿಎಂ ನಾರಾಯಣಸ್ವಾಮಿ ಆರೋಪಿಸಿದ್ದಾರೆ.

    ಸಿಎಂ ಜೊತೆಯಾಗಿ ಸಚಿವರು, ಶಾಸಕರು ಮತ್ತು ಕಾಂಗ್ರೆಸ್ ನಾಯಕರು ಉಪ ರಾಜ್ಯಪಾಲರ ವಿರುದ್ಧದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಪ್ರತಿಭಟನಾನಿರತ ಜನಪ್ರತಿನಿಧಿಗಳು ಕಪ್ಪು ಶರ್ಟ್ ಧರಿಸುವ ಮೂಲಕ ಆಕ್ರೋಶ ಹೊರಹಾಕಿ, ಇಡೀ ರಾತ್ರಿ ಕಿರಣ್ ಬೇಡಿ ನಿವಾಸದ ರಸ್ತೆಯಲ್ಲಿ ಮಲಗಿದರು. ಸರ್ಕಾರದ ಆಡಳಿತದಲ್ಲಿ ಕಿರಣ್ ಬೇಡಿ ಹಸ್ತಕ್ಷೇಪ ಮಾಡ್ತಿದ್ದಾರೆ. ಸರ್ಕಾರದ ಅಭಿವೃದ್ಧಿ ಪರ ಯೋಜನೆಗಳಿಗೆ ಸಹಿ ಹಾಕದೇ ತಡೆ ನೀಡುತ್ತಿದ್ದಾರೆ ಎಂದು ಪುದುಚೇರಿ ಸರ್ಕಾರ ಆರೋಪ ಮಾಡಿದೆ.

    ಜನತೆಗಾಗಿ ಸರ್ಕಾರ ಉಚಿತವಾಗಿ ನೀಡಲು ನಿರ್ಧರಿಸುವ ಅಕ್ಕಿಯ ಯೋಜನೆಯನ್ನು ಕಿರಣ್‍ಬೇಡಿ ತಡೆಹಿಡಿದಿದ್ದಾರೆ. ಈ ಯೋಜನೆಯ ಕಡತವನ್ನು ಸಹಿ ಮಾಡದೇ ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ಇದೇ ರೀತಿ 36 ಯೋಜನೆಗಳನ್ನು ತಡೆಹಿಡಿದ್ದಿದ್ದಾರೆ. ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತಡೆಹಿಡಿಯುವ ಅಧಿಕಾರವನ್ನು ಕಿರಣ್ ಬೇಡಿ ಅವರಿಗೆ ನೀಡಿದ್ಯಾರು ಎಂದು ಸಿಎಂ ಪ್ರಶ್ನಿಸಿದ್ದಾರೆ.

    ಸಿಎಂಗೆ ತಾಳ್ಮೆ ಬೇಕಿತ್ತು: ಮುಖ್ಯಮಂತ್ರಿ ವಿ.ನಾರಾಯಾಣಸ್ವಾಮಿ ಅವರ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಕಿರಣ್‍ಬೇಡಿ, ಫೆಬ್ರವರಿ 21ರಂದು ಈ ಸಂಬಂಧ ಮಾತುಕತೆ ನಡೆಸಲು ಸಿಎಂ ಅವರನ್ನು ರಾಜಭವನಕ್ಕೆ ಆಹ್ವಾನಿಸಲಾಗಿತ್ತು. ರಾಜಭವನದಿಂದ ಉತ್ತರ ಬರುವ ಮೊದಲೇ ನಮ್ಮ ನಿವಾಸಕ್ಕೆ ಸಿಎಂ ಆತುರರಾಗಿ ಆಗಮಿಸಿದ್ದು ನಮಗೆ ನೋವಾಗಿದೆ. ಈ ರೀತಿ ಪ್ರತಿಭಟನೆ ಕುಳಿತುಕೊಳ್ಳುವುದು ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಿರಣ್ ಬೇಡಿ ಭಾಷಾಂತರ ಪರೀಕ್ಷೆಯಲ್ಲಿ ಪುದುಚೇರಿ ಸಿಎಂ ಪಾಸ್- ವಿಡಿಯೋ ನೋಡಿ

    ಕಿರಣ್ ಬೇಡಿ ಭಾಷಾಂತರ ಪರೀಕ್ಷೆಯಲ್ಲಿ ಪುದುಚೇರಿ ಸಿಎಂ ಪಾಸ್- ವಿಡಿಯೋ ನೋಡಿ

    ಪುದುಚೆರಿ: ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಅವರು ಲೆಫ್ಟಿನೆಂಟ್ ಗವರ್ನರ್ ಕಿರಣ್ ಬೇಡಿ ಅವರ ಭಾಷಣವನ್ನು ಭಾಷಾಂತರಿಸುವ ಮೂಲಕ ಈಗ ಸುದ್ದಿಯಾಗಿದ್ದಾರೆ.

    ಕಿರಣ್ ಬೇಡಿ ಮತ್ತು ಪುದುಚೇರಿ ಸಿಎಂ ಸ್ವಾಮಿ ತಮ್ಮಿಬ್ಬರ ನಡುವಿನ ಕಚ್ಚಾಟದಿಂದ ಹಿಂದೆ ಸುದ್ದಿಯಾಗಿದ್ದರು. ಆದರೆ ಇವರಿಬ್ಬರು ಪರಸ್ಪರ ಕಾಲೆಳೆದುಕೊಂಡು ಸಾಹಿತ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರಿಗೆ ಮನರಂಜನೆ ನೀಡಿದ್ದಾರೆ.

    53ನೇ ಸಾಹಿತ್ಯ ಹಬ್ಬ ‘ಕಂಬನ್ ವಿಳಾ’ದ ಉದ್ಘಾಟನೆ ಕಾರ್ಯಕ್ರಮದಲ್ಲಿ ಕಿರಣ್ ಬೇಡಿ ಭಾಗವಹಿಸಿದ್ದರು. ತಮ್ಮ ಭಾಷಣದ ವೇಳೆ, ಇಲ್ಲಿ ಎಷ್ಟು ಜನರಿಗೆ ಇಂಗ್ಲಿಷ್ ಬರುತ್ತದೆ ಎಂದು ಪ್ರಶ್ನಿಸಿದರು. ಈ ವೇಳೆ ಕೆಲವರು ಮಾತ್ರ ಕೈ ಎತ್ತಿದರು. ಆಗ ಶಿಕ್ಷಣ ಸಚಿವ ಕಮಲಾಕಣ್ಣನ್ ಮುಂದೆ ಬಂದು ತಮಿಳಿಗೆ ನಾನು ಭಾಷಾಂತರ ಮಾಡುವುದಾಗಿ ತಿಳಿಸಿದರು.

    ಸಚಿವರ ಮಾತಿಗೆ ಕಿರಣ್ ಬೇಡಿ, ನನ್ನ ಇಂಗ್ಲಿಷ್ ಭಾಷಣವನ್ನು ಮುಖ್ಯಮಂತ್ರಿಗಳು ಅನುವಾದ ಮಾಡಬೇಕು. ಇದು ನನ್ನ ಆಸೆ ಎಂದು ಹೇಳಿದರು. ಬೇಡಿ ಮಾತು ಕೇಳಿ ವೇದಿಕೆಯಲ್ಲಿ ಕುಳಿತುಕೊಂಡಿದ್ದ ಸ್ವಾಮಿ ಅವರು ಮುಂಭಾಗಕ್ಕೆ ಆಗಮಿಸಿ, ಜನ ಬಯಸಿದ್ದಾರೆ. ನಾನು ಭಾಷಾಂತರ ಮಾಡುತ್ತೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ, ನಾನು ಏನು ಭಾಷಣ ಮಾಡುತ್ತೇನೋ ಅದನ್ನು ಮಾತ್ರ ಹೇಳಬೇಕು ಎಂದು ಬೇಡಿ ಷರತ್ತು ವಿಧಿಸಿದರು.

    ಈ ಷರತ್ತಿಗೆ ಸಿಎಂ, ಹಾಗೆಲ್ಲ ಖಾತ್ರಿ ಕೊಡಲು ಸಾಧ್ಯವಿಲ್ಲ ಎಂದು ಚಟಾಕಿ ಹಾರಿಸಿದಾಗ ಬೇಡಿ, ನಾನು ನಿಮ್ಮನ್ನು 10 ನಿಮಿಷಗಳ ಕಾಲ ನಂಬುತ್ತೇನೆ. ಇದೊಂದು ತಾತ್ಕಾಲಿಕ ಸ್ನೇಹ ಎಂದು ಹೇಳಿದರು. ಇದಕ್ಕೆ ನಾರಾಯಣ ಸ್ವಾಮಿ ನಾನು ಸ್ನೇಹ ಶಾಶ್ವತವಾಗಿರಲಿ ಎಂದು ಹೇಳಿ ಭಾಷಾಂತರಕ್ಕೆ ಸಿದ್ಧರಾದರು.

    ತನ್ನ ಎಲ್ಲ ಮಾತುಗಳನ್ನು ನಾರಾಯಣ ಸ್ವಾಮಿ ಸಮರ್ಥವಾಗಿ ಭಾಷಾಂತರಿಸಿದ್ದು ಬೇಡಿ ಅವರಿಗೆ ಖುಷಿ ನೀಡಿತು. ನಂತರ, ಸ್ವಾಮಿ ಅವರಿಗೆ ತಮಿಳು, ಇಂಗ್ಲಿಷ್ ಅಲ್ಲದೇ ಹಿಂದಿ ಮತ್ತು ಫ್ರೆಂಚ್ ಭಾಷೆಯೂ ಬರುತ್ತದೆ. ನನ್ನ ಭಾಷಣವನ್ನು ಅನುವಾದ ಮಾಡಲು ಬಂದಿದ್ದು ನನಗೆ ಬಹಳ ಸಂತಸ ನೀಡಿದೆ ಎಂದು ಶ್ಲಾಘಿಸಿದರು.

    ಕಾರ್ಯಕ್ರಮ ಮುಗಿದ ಬಳಿಕ ಪ್ರತಕರ್ತರು ಸಿಎಂ ಮತ್ತು ನಿಮ್ಮ ನಡುವಿನ ಭಿನ್ನಾಭಿಪ್ರಾಯವನ್ನು ಬಿಟ್ಟಿದ್ದೀರಾ ಎಂದು ಕೇಳಿದ್ದಕ್ಕೆ, ಪುದುಚೇರಿ ಅಭಿವೃದ್ಧಿಯ ಕಾಳಜಿಯನ್ನು ನಾನು ಹೊಂದಿದ್ದೇನೆ. ನಾನು ಒಂದು ಉದ್ದೇಶಕ್ಕಾಗಿ ಇಲ್ಲಿಗೆ ಆಗಮಿಸಿದ್ದು, ಅದು ಬಿಟ್ಟು ಬೇರೇನೂ ಇಲ್ಲ ಎಂದು ಉತ್ತರಿಸಿ ತೆರಳಿದರು.

    ಬುಧವಾರ ನೈತಿಕ ಹೊಣೆಯನ್ನು ಹೊತ್ತು ಕಿರಣ್ ಬೇಡಿ ರಾಜ್ಯಪಾಲ ಹುದ್ದೆಗೆ ರಾಜೀನಾಮೆ ನೀಡಬೇಕು ಎಂದು ಸಿಎಂ ನಾರಾಯಣ ಸ್ವಾಮಿ ಆಗ್ರಹಿಸಿದ್ದರು.

  • `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    ಪುದುಚೇರಿ: ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

    ಮಂಗಳವಾರ ನಗರದ ರಾಜೀವ್ ಗಾಂಧಿ ಸಿಗ್ನಲ್ ನಲ್ಲಿರೋ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: `ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ FIR ದಾಖಲು

    “ಪಾಂಡಿಚೇರಿಯಲ್ಲಿ ಹೊಸ ಆಸ್ಪತ್ರೆ ಉದ್ಘಾಟನೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಈ ಮೂಲಕ ಭಾರತದಲ್ಲಿ ಕುರುಡತನವನ್ನು ನಿರ್ಮೂಲನೆ ಮಾಡಲಾಗುತ್ತಿರುವುದು ಸಂತಸದ ಸಂಗತಿ. ಈ ಸೌಲಭ್ಯ ಎಲ್ಲರಿಗೂ ತಲುಪುತ್ತದೆ ಎಬುವುದಾಗಿ ನಾನು ನಂಬಿದ್ದೇನೆ. ಅಲ್ಲದೇ 50ಕ್ಕೂ ಹೆಚ್ಚು ಮಂದಿಗೆ ಉಚಿತ ಕಣ್ಣಿನ ಸರ್ಜರಿ ಮಾಡಿದ ಈ ಆಸ್ಪತ್ರೆಗೆ ಧನ್ಯವಾದ ಹೇಳಲು ಬಯಸುತ್ತೇನೆ” ಅಂತಾ ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಅಮಿರ್ ಖಾನ್, ಪ್ರಿಯಾಂಕ ಚೋಪ್ರಾ, ಐಶ್ವರ್ಯ ರೈ ಸೇರಿದಂತೆ ಹಲವು ನಟ-ನಟಿಯರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನಟಿ ಅಮಲಾ ಪೌಲ್ – ವಿಜಯ್ ವಿಚ್ಛೇದನಕ್ಕೆ ಕೋರ್ಟ್ ಅಸ್ತು

    ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾ ಮಾಡಿದ್ದ ಅಮಲಾ ಪೌಲ್ ಅವರು `ಹೆಬ್ಬುಲಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಹೆಬ್ಬುಲಿಯಲ್ಲಿ ಕಿಚ್ಚ ಸುದೀಪ್ ಅವರಿಗೆ ನಾಯಕಿಯಾಗಿ ಅಭಿನಯಿಸಿದ್ದರು.