Tag: ಪುನರ್ ವಿವಾಹ

  • ಮಾಜಿ ಪತ್ನಿಯನ್ನೇ ಮತ್ತೊಮ್ಮೆ ಮದ್ವೆ ಆಗ್ತೀನಿ ಎಂದ ಬಿಲ್ ಗೇಟ್ಸ್

    ಮಾಜಿ ಪತ್ನಿಯನ್ನೇ ಮತ್ತೊಮ್ಮೆ ಮದ್ವೆ ಆಗ್ತೀನಿ ಎಂದ ಬಿಲ್ ಗೇಟ್ಸ್

    ನ್ಯೂಯಾರ್ಕ್: ಮೈಕ್ರೋಸಾಫ್ಟ್ ಕಂಪನಿಯ ಸಹ-ಸಂಸ್ಥಾಪಕ ಬಿಲ್ ಗೇಟ್ಸ್, ಮಾಜಿ ಪತ್ನಿ ಮೆಲಿಂಡಾ ಅವರನ್ನು ಮತ್ತೆ ಮದುವೆಯಾಗುವುದಾಗಿ ಹೇಳಿಕೊಂಡಿದ್ದಾರೆ.

    ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳನ್ನು ಸಾಕಷ್ಟು ನಾಟಕೀಯವೆಂದು ಬಣ್ಣಿಸಿದರು. ಇದರೊಂದಿಗೆ ಕೊರೊನಾ ಸಾಂಕ್ರಾಮಿಕ ಮತ್ತು ಅವರ ವಿಚ್ಛೇದನದೊಂದಿಗಿನ ವಿಚಿತ್ರವಾದ ವಿಷಯವೆಂದರೆ ಮಕ್ಕಳನ್ನು ಬಿಟ್ಟು ದೂರವಿದ್ದದ್ದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

    ಮಕ್ಕಳು ಬೆಳೆದು ಸಂಸಾರವನ್ನು ತೊರೆದ ನಂತರ ಪ್ರತಿಯೊಂದು ಮದುವೆಯೂ ಪರಿವರ್ತನೆಯ ಹಾದಿಯತ್ತ ಸಾಗುತ್ತವೆ. ಆದಾಗ್ಯೂ ಅವರು ತಮ್ಮ ಮದುವೆಯನ್ನು ಮಹಾನ್ ಮದುವೆ ಎಂದು ಕರೆದುಕೊಂಡಿದ್ದಾರೆ. ನಾನು ಬೇರೆ ಯಾರನ್ನೂ ಮದುವೆಯಾಗಲು ಇಷ್ಟಪಡುವುದಿಲ್ಲ ಎಂದು ತಿಳಿಸಿದ್ದಾರೆ.

    ನಾನು ಮತ್ತೆ ಮೆಲಿಂಡಾಳನ್ನು ಮದುವೆಯಾಗುತ್ತೇನೆ. ನನ್ನ ಭವಿಷ್ಯದ ವಿಷಯದಲ್ಲಿ, ನಾನು ಯಾವುದೇ ಯೋಜನೆಗಳನ್ನು ಹೊಂದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಮೇ 10ರ ಒಳಗಡೆ ಸಿಎಂ ಬದಲಾವಣೆ: ಯತ್ನಾಳ್‌ ಬಾಂಬ್‌

    ಮೆಲಿಂಡಾ ಅವರೊಂದಿಗಿನ ಅವರ ಪ್ರಸ್ತುತ ಸಂಬಂಧದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇನ್ನೂ ಅವಳೊಂದಿಗೆ ನಾನು ಒಳ್ಳೇಯ ಸ್ನೇಹಿತನಾಗಿಯೇ ಇದ್ದು, ಅವಳೊಂದಿಗೆ ನಾನು ಬಹಳ ಪ್ರಮುಖ ಹಾಗೂ ನಿಕಟ ಸಂಬಂಧವನ್ನು ಹೊಂದಿದ್ದೇನೆ ಎಂದು ತಿಳಿಸಿದರು.

    ಜೂನ್‍ನಲ್ಲಿ ನಾವಿಬ್ಬರು ಸೇರಿ ವಾರ್ಷಿಕ ಸಭೆಯನ್ನು ಒಟ್ಟಿಗೆ ಆಯೋಜಿಸಲಿದ್ದೇವೆ. ನಾವು ಒಟ್ಟಿಗೆ ಕೆಲಸ ಮಾಡಲು ಇಚ್ಚಿಸುತ್ತೇವೆ. ನನಗೆ ತುಂಬಾ ಸಂತೋಷವಾಗಿದ್ದು, ನಿಜ ಹೇಳಬೇಕಾದರೆ ನಾವಿಬ್ಬರು ಒಟ್ಟಾಗಿಯೇ ಮೈಕ್ರೋಸಾಫ್ಟ್ ಫೌಂಡೇಶನ್ ಅನ್ನು ನಿರ್ಮಿಸಿದ್ದೇವೆ ಎಂದರು. ಇದನ್ನೂ ಓದಿ: ಅಮಿತ್ ಶಾ ಭೇಟಿ – ಶೀಘ್ರವೇ ಹೊರಟ್ಟಿ ಬಿಜೆಪಿಗೆ ಸೇರ್ಪಡೆ

    ದಂಪತಿ 1994 ರಲ್ಲಿ ವಿವಾಹವಾಗಿದ್ದರು. ಅವರಿಗೆ ಜೆನ್ನರ್, ರೋರಿ ಮತ್ತು ಫೋಬೆ ಎಂಬ ಮೂರು ಮಕ್ಕಳಿದ್ದಾರೆ. 27 ವರ್ಷಗಳ ದಾಂಪತ್ಯದ ನಂತರ ವಿಚ್ಛೇದನ ಪಡೆಯುವುದಾಗಿ ಬಿಲ್ ಗೇಟ್ಸ್ ಮತ್ತು ಮೆಲಿಂಡಾ ಅವರು ಕಳೆದ ವರ್ಷ ಮೇ ತಿಂಗಳಲ್ಲಿ ಘೋಷಿಸಿದ್ದರು.

  • ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

    ತಾಯಿಯ ಪುನರ್ ವಿವಾಹದ ಬಗ್ಗೆ ಮಗನ ಭಾವನಾತ್ಮಕ ಪೋಸ್ಟ್ – ನೆಟ್ಟಿಗರಿಂದ ಶ್ಲಾಘನೆ

    ತಿರುವನಂತಪುರಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ಮಗನೊಬ್ಬ ತನ್ನ ತಾಯಿ ಪುನರ್ ವಿವಾಹ ಆಗಿದ್ದಕ್ಕೆ ಶುಭಾಶಯವನ್ನು ಕೋರಿ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ. ಇದೀಗ ಆ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

    ಗೋಕುಲ್ ಶ್ರೀಧರ್ ತಾಯಿಯ ಪುನರ್ ವಿವಾಹಕ್ಕೆ ಶುಭಾಶಯ ಕೋರಿ ಪೋಸ್ಟ್ ಮಾಡಿದ್ದಾನೆ. ಶ್ರೀಧರ್ ಕೊಲ್ಲಂನಲ್ಲಿ ಎಂಜಿನಿಯರ್ ವ್ಯಾಸಂಗ ಮಾಡುತ್ತಿದ್ದಾನೆ. ತಾಯಿಯ ತ್ಯಾಗದ ಬಗ್ಗೆ ನೆನಪಿಸಿಕೊಂಡು ಬರೆದು ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿದ್ದಾನೆ.

    ಶ್ರೀಧರ್ ‘ಇದು ನನ್ನ ತಾಯಿಯ ವಿವಾಹವಾಗಿದ್ದು’ ಎಂದು ಮಲೆಯಾಳಂ ಭಾಷೆಯಲ್ಲಿ ಬರೆದಿದ್ದು, ಜೊತೆಗೆ ತನ್ನ ತಾಯಿಯ ಫೋಟೋವನ್ನು ಹಂಚಿಕೊಂಡಿದ್ದಾನೆ.

    ಪೋಸ್ಟ್ ನಲ್ಲಿ ಏನಿದೆ?
    ನನ್ನನ್ನು ಹೆತ್ತು, ನನಗಾಗಿ ಬದುಕು ನಡೆಸಿಕೊಂಡು ಬಂದು, ನನ್ನ ಯಶಸ್ಸಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟರು. ನನ್ನ ತಾಯಿಯ ಮೊದಲನೇ ಮದುವೆಯಿಂದ ಸಾಕಷ್ಟು ನೋವು ಅನುಭವಿಸಿದ್ದಾರೆ ಎಂದು ಹೇಳಿಕೊಂಡಿದ್ದಾನೆ. ಅದರಲ್ಲಿ ಒಂದು ಘಟನೆಯನ್ನು ನೆನಪಿಸಿಕೊಂಡು “ಒಮ್ಮೆ ಪತಿಯಿಂದ ಹೊಡೆಸಿಕೊಂಡು ತಲೆಯಿಂದ ರಕ್ತ ಸೋರುತ್ತಿದ್ದನ್ನು ನೋಡಿದೆ. ಆಗ ನಾನು ಯಾಕೆ ಇಷ್ಟು ಕಷ್ಟವನ್ನು ಸಹಿಸಿಕೊಳ್ಳುತ್ತಿದ್ದೀಯಾ? ಎಂದು ಪ್ರಶ್ನೆ ಮಾಡಿದ್ದೆ. ಅದಕ್ಕೆ ಅಮ್ಮ ನಿನಗಾಗಿ ನಾನು ಬದುಕುತ್ತಿದ್ದೇನೆ. ಹೀಗಾಗಿ ನಿನಗಾಗಿ ನಾನು ಇದೆಲ್ಲವನ್ನು ಸಹಿಸಿಕೊಳ್ಳುತ್ತಿರುವುದು ಎಂದು ಹೇಳಿದ್ದರು ಎಂದು ಪೋಸ್ಟ್ ನಲ್ಲಿ ತಿಳಿಸಿದ್ದಾನೆ.

    ಕೊನೆಗೆ ನನ್ನ ತಾಯಿ ಮೊದಲನೆ ಪತಿಯನ್ನು ಬಿಟ್ಟು ನನ್ನ ಕೈಯನ್ನು ಹಿಡಿದು ಆ ಮನೆಯಿಂದ ಹೊರಬಂದರು. ಆಗ ನಾನು ತಾಯಿಗೆ ಪುನರ್ ವಿವಾಹವನ್ನು ಮಾಡಬೇಕು ಎಂದು ನಿರ್ಧರಿಸಿದ್ದೆ. ಆಗ ನಾನು 10ನೇ ತರಗತಿಯಲ್ಲಿ ಓದುತ್ತಿದ್ದೆ. ನನ್ನ ತಾಯಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು. ಅಮ್ಮ ನನಗಾಗಿ ಅವರ ಕಸುಗಳೆಲ್ಲವನ್ನು ತ್ಯಾಗ ಮಾಡಿದ್ದರು. ನಂತರ ಅಮ್ಮ ಕೆಲಸ ಬಿಟ್ಟರು. ಈಗ ನಾನು ಕೆಲಸದ ನೆಪದಲ್ಲಿ ದೂರ ಹೋದರೆ ಅಮ್ಮ ಒಬ್ಬಂಟಿಯಾಗುತ್ತಾರೆಂದು ಪುನರ್ ವಿವಾಹದ ಬಗ್ಗೆ ತಾಯಿಗೆ ಹೇಳಿದೆ.

    https://www.facebook.com/gokul.sreedar/posts/2056174421177935

    ಮೊದಲಿಗೆ ಅವರು ಒಪ್ಪಲಿಲ್ಲ. ಅಮ್ಮನ ಸಹೋದ್ಯೋಗಿಗಳ ಕಡೆಯಿಂದಲೇ ಪುನರ್ ವಿವಾಹ ಸಂಬಂಧ ಬಂದಿತ್ತು. ನಂತರ ನಾನು ಬಲವಂತ ಮಾಡಿ ಒಪ್ಪಿಸಿದೆ. ಈಗ ಅಮ್ಮ ಮರು ಮದುವೆಯಾಗಿ ಸಂತೋಷದಿಂದ ಇದ್ದಾರೆ ಎಂದು ಬರೆದಿದ್ದಾನೆ.

    ಶ್ರೀಧರ್ ಈ ಪೋಸ್ಟ್ ಮಾಡಿದ ಬಳಿಕ ಇದುವರೆಗೂ 37,000 ಜನರು ಲೈಕ್ಸ್ ಮಾಡಿದ್ದು, 4.1 ಸಾವಿರ ಮಂದಿ ಶೇರ್ ಮಾಡಿದ್ದಾರೆ. ಅಷ್ಟೇ ಅಲ್ಲದೇ 3.3 ಸಾವಿರ ಜನರು ಕಮೆಂಟ್ಸ್ ಮೂಲಕ ಶುಭಕೋರಿದ್ದಾರೆ. ಜೊತೆಗೆ ಮಗನ ಕಾರ್ಯವನ್ನು ಶ್ಲಾಘಿಸಿದ್ದಾರೆ.