Tag: ಪುರಿ ಜಗನ್ನಾಥ ದೇವಾಲಯ

  • ದೇವಸ್ಥಾನವನ್ನು ಸ್ಫೋಟಿಸುತ್ತೇವೆ – ಪುರಿ ದೇಗುಲದ ಗೋಡೆ ಮೇಲೆ ಬರಹ

    ದೇವಸ್ಥಾನವನ್ನು ಸ್ಫೋಟಿಸುತ್ತೇವೆ – ಪುರಿ ದೇಗುಲದ ಗೋಡೆ ಮೇಲೆ ಬರಹ

    ಭುವನೇಶ್ವರ: ಐತಿಹಾಸಿಕ ಪುರಿ ಜಗನ್ನಾಥ ದೇವಾಲಯದ (Puri Jagannath Temple) ಗೋಡೆಯ ಮೇಲೆ ದೇವಾಲಯವನ್ನು ಸ್ಫೋಟಿಸುವುದಾಗಿ ಭಯೋತ್ಪಾದಕ ದಾಳಿಯ ಬೆದರಿಕೆ ಬರಹ (Threatening Graffiti) ಪತ್ತೆಯಾಗಿದೆ.

    ದೇವಸ್ಥಾನದ ಪರಿಕ್ರಮ ಮಾರ್ಗದುದ್ದಕ್ಕೂ ಇರುವ ಬುಧಿ ಮಾ ದೇವಾಲಯದ ಗೋಡೆಗಳ ಮೇಲೆ ಭಯೋತ್ಪಾದಕ ದಾಳಿಯ ಬೆದರಿಕೆ ಸಂದೇಶ ಪತ್ತೆಯಾಗಿದೆ. ದೇವಾಲಯದ ಒಂದು ಗೋಡೆಯ ಮೇಲೆ ಭಯೋತ್ಪಾದಕರು ದೇವಾಲಯದ ಮೇಲೆ ದಾಳಿ ಮಾಡಿ ನಾಶಪಡಿಸುತ್ತಾರೆ ಎಂದು ಬರೆದಿದ್ದಾರೆ. ಇದನ್ನೂ ಓದಿ: ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಮಿನಿಮಮ್ ಬ್ಯಾಲನ್ಸ್ ಮೊತ್ತ ಇಳಿಸಿದ ICICI ಬ್ಯಾಂಕ್‌

    ಇನ್ನೊಂದು ಗೋಡೆಯ ಮೇಲೆ ಫೋನ್ ನಂಬರ್‌ಗಳನ್ನು ಬರೆದು, ಈ ಸಂಖ್ಯೆಗಳನ್ನು ಸಂಪರ್ಕಿಸದಿದ್ದರೆ ಗಲಭೆಗಳು ನಡೆಯುತ್ತವೆ ಎಂಬ ಎಚ್ಚರಿಕೆ ನೀಡಿದ್ದಾರೆ. ಸದ್ಯ ಸ್ಥಳಕ್ಕೆ ಪುರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

    ಅಲ್ಲದೇ ಬೆದರಿಕೆ ಬರಹದ ಹಿಂದಿರುವವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ. ಸದ್ಯ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದ್ದು, ಭದ್ರತಾ ಸಿಬ್ಬಂದಿಯನ್ನೂ ನಿಯೋಜಿಸಲಾಗಿದೆ.

  • 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಿಗರು ಇಲ್ಲ: ಸಂತೋಷ್ ಲಾಡ್

    ಬೆಂಗಳೂರು: ಒಡಿಶಾ ರೈಲು ದುರಂತದಲ್ಲಿ (Odisha Train Accident) ಮೃತಪಟ್ಟವರ 300ಕ್ಕೂ ಹೆಚ್ಚು ಮೃತದೇಹಗಳನ್ನ ಪರಿಶೀಲಿಸಿದ್ದೇನೆ. ಯಾರೂ ಕನ್ನಡಿಗರು ಇಲ್ಲ ಎಂದು ಸಚಿವ ಸಂತೋಷ್ ಲಾಡ್ (Santhosh Lad) ತಿಳಿಸಿದ್ದಾರೆ.

    ರೈಲು ಅಪಘಾತವಾದ ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಎರಡ್ಮೂರು ಶವಗಾರ, ನಾಲ್ಕು ಆಸ್ಪತ್ರೆಗಳಲ್ಲಿ ಹುಡುಕಾಟ ಮಾಡಿದ್ದು, ನಾಲ್ಕು ಆಸ್ಪತ್ರೆಗಳಲ್ಲಿ 750 ಗಾಯಾಳು ರೋಗಿಗಳನ್ನು ಮಾತನಾಡಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಕಾರಣರಾದವರನ್ನು ಸುಮ್ಮನೆ ಬಿಡಲ್ಲ: ಪ್ರಧಾನಿ ಮೋದಿ

    ನಂತರ ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, 750 ಗಾಯಾಳುಗಳಲ್ಲಿ ಯಾರೂ ಕನ್ನಡಿಗರು ಇಲ್ಲ. 300ಕ್ಕೂ ಹೆಚ್ಚು ಡೆಡ್‌ಬಾಡಿಗಳನ್ನು ಪರಿಶೀಲನೆ ಮಾಡಿದ್ದೇನೆ, ಯಾರೂ ಕನ್ನಡಗರಿಲ್ಲ. ಕನ್ನಡಿಗರು ಸೇಫ್ ಆಗಿದ್ದಾರೆ. 110 ಜನ ಕಳಸದವರು ವಾಪಾಸ್ ಆಗುತ್ತಿದ್ದಾರೆ. ಪುರಿ ಜಗನ್ನಾಥ ದರ್ಶನಕ್ಕೆ (Puri Jagannatha Temple) ಬಂದವರಿಗೆ ಟಿಕೆಟ್ ವ್ಯವಸ್ಥೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: ದೇವರ ದಯೆಯಿಂದ ನಾವು ಕೋರಮಂಡಲ್ ಎಕ್ಸ್‌ಪ್ರೆಸ್ ಹತ್ತಲಿಲ್ಲ – ಬೆಂಗಳೂರಿಗೆ ಬಂದಿಳಿದ ವಾಲಿಬಾಲ್ ಕೋಚ್ ಪ್ರತಿಕ್ರಿಯೆ

    ಒಡಿಶಾದ ಪುರಿ ಜಗನ್ನಾಥ ದರ್ಶನಕ್ಕೆ ತೆರಳಿದ್ದ 12 ಯಾತ್ರಿಗಳು ವಾಪಸ್ಸಾಗಲು ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದು, ಸಂತೋಷ್ ಲಾಡ್ ಯಾತ್ರಿಗಳನ್ನು ವಾಪಸ್ ಕರೆತರುವ ಸಲುವಾಗಿ ಬೆಂಗಳೂರಿಗೆ (Bengaluru) ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಭುವನೇಶ್ವರದಿಂದ ವಿಮಾನ ಟಿಕೆಟ್ ವ್ಯವಸ್ಥೆ ಮಾಡಿದ್ದು, ಯಾತ್ರಿಗಳು ಇಂದು (ಭಾನುವಾರ) ಸಂಜೆ ವಾಪಸ್ ಆಗಲಿದ್ದಾರೆ. ಇದನ್ನೂ ಓದಿ: ನಾವು ಸೇಫ್ ಆಗಿದ್ದೇವೆ; ಸುರಕ್ಷಿತವಾಗಿ ಸುಮೇದ್ ಸಿಖರ್ಜಿ ತಲುಪಿದ 110 ಕನ್ನಡಿಗರು

  • ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಕಂಗನಾ ರನೌತ್

    ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ ಕಂಗನಾ ರನೌತ್

    ಮುಂಬೈ: ಬಾಲಿವುಡ್ ನಟಿ ಕಂಗನಾ ರನೌತ್ ಶುಕ್ರವಾರ ಬೆಳಿಗ್ಗೆ ಒಡಿಶಾದ ಪವಿತ್ರ ಪುರಿ ಜಗನ್ನಾಥ ದೇವಾಲಯಕ್ಕೆ ಭೇಟಿ ನೀಡಿದ್ದಾರೆ.

    ತಮ್ಮ ಮುಂದಿನ ಧಾಕಾಡ್ ಸಿನಿಮಾದ ಚಿತ್ರೀಕರಣದಿಂದ ಕಂಗನಾ ಕೊಂಚ ಬಿಡುವು ಮಾಡಿಕೊಂಡಿದ್ದು, ಶುಕ್ರವಾರ ಮುಂಜಾನೆ 6 ಗಂಟೆಗೆ ದೇವಾಲಯಕ್ಕೆ ಭೇಟಿ ನೀಡಿಲಿರುವ ವಿಚಾರವನ್ನು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಖಾತೆಯಲ್ಲಿ ತಿಳಿಸಿದ್ದರು.

    ಸದ್ಯ ಇಂದು ದೇವಾಲಯಕ್ಕೆ ಭೇಟಿ ನೀಡಿದ ಅನುಭವ ಕುರಿತು ಕೆಲವೊಂದಷ್ಟು ಫೋಟೋಗಳನ್ನು ಕಂಗನಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ನಟಿ ಕಂಗನಾ, ಬಿಳಿ ಬಟ್ಟೆಯನ್ನು ಧರಿಸಿದ್ದು, ಅದಕ್ಕೆ ಸೂಟ್ ಆಗುವಂತಹ ಚಿನ್ನದ ಒಡವೆಗಳನ್ನು ಧರಿಸಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಜೊತೆಗೆ ಅವರ ಕರ್ಲಿ ಹೇರ್‍ನನ್ನು ಬನ್ ಮೂಲಕ ಅಚ್ಚುಕಟ್ಟಾಗಿ ಮೇಲಕ್ಕೆತ್ತಿ ಕಟ್ಟಿದ್ದಾರೆ. ಅವರ ಉಡುಗೆ ತೊಡುಗೆಯೂ ದೇವಾಲಯಕ್ಕೆ ಭೇಟಿ ನೀಡುವವರು ಧರಿಸುವಂತ ಉಡುಗೆಯಂತೆಯೇ ಎದ್ದು ಕಾಣಿಸುತ್ತದೆ.

    ಈ ಕುರಿತ ಫೋಟೋ ಶೇರ್ ಮಾಡಿಕೊಂಡಿರುವ ಕಂಗನಾ, ನಾವು ಯಾವಾಗಲೂ ಕೃಷ್ಣ ರಾಧ, ರುಕ್ಮಿಣಿ ಜೊತೆ ಇರುವುದನ್ನು ನೋಡಿದ್ದೇವೆ. ಆದರೆ ಪುರಿ ಜಗನ್ನಾಥ ದೇವಾಲಯದಲ್ಲಿ ಕೃಷ್ಣನನ್ನು ತನ್ನ ಸಹೋದರ ಬಲರಾಮ ಮತ್ತು ಅರ್ಜುನನ ಪತ್ನಿ ಸುಭದ್ರೆ ಜೊತೆ ಇರಿಸಲಾಗಿದೆ. ಅಲ್ಲದೆ ತನ್ನ ಹೃದಯ ಚಕ್ರದ ಮೂಲಕ ಈ ಸ್ಥಳ ಎಲ್ಲವನ್ನು ಗುಣಪಡಿಸುತ್ತದೆ ಮತ್ತು ಹಿತವಾದ ಅನುಭವ ನೀಡುತ್ತದೆ ಎಂದು ಕ್ಯಾಪ್ಷನ್ ಹಾಕಿಕೊಂಡಿದ್ದಾರೆ.