Tag: ಪುಷ್ಪ ಸಿನಿಮಾ

  • ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಪುಷ್ಪ ಸಿನಿಮಾ ಮಾದರಿಯಲ್ಲಿ ದರೋಡೆ – ಇಬ್ಬರು ಹೆಡ್ ಕಾನ್‍ಸ್ಟೇಬಲ್ ಸಸ್ಪೆಂಡ್

    ಬೆಂಗಳೂರು: ಇತ್ತೀಚೆಗೆ ತೆರೆ ಕಂಡ ತೆಲುಗು ಭಾಷೆಯ ಪುಷ್ಪ ಸಿನಿಮಾದ ಮಾದರಿಯಲ್ಲೇ ಸ್ಮಗ್ಲರ್ ಗಳಿಂದಲೇ ಪೊಲೀಸರು ದರೋಡೆ ಮಾಡಿಸಿರುವ ಘಟನೆ ನಗರದಲ್ಲಿ ನಡೆದಿದೆ. ದರೋಡೆ ಮಾಡಿಸಿ ಸಿಕ್ಕಿಬಿದ್ದ ಇಬ್ಬರು ಹೆಡ್ ಕಾನ್‍ಸ್ಟೇಬಲ್‍ಗಳನ್ನು ಅಮಾನತು ಮಾಡಲಾಗಿದೆ.

    ಗಿರಿನಗರ ಹೆಡ್ ಕಾನ್‍ಸ್ಟೇಬಲ್ ಮೋಹನ್, ಮಹದೇವಪುರ ಹೆಡ್ ಕಾನ್‍ಸ್ಟೇಬಲ್ ಮಮತೇಶ್ ಗೌಡ ಅಮಾನತುಗೊಂಡಿದ್ದಾರೆ. ಇವರಿಬ್ಬರು 2018 ರಿಂದ ಸಿಸಿಬಿಯಲ್ಲಿದ್ದರು. ಕಳೆದ ಒಂದು ತಿಂಗಳ ಹಿಂದಷ್ಟೇ ಸಿಸಿಬಿಯಿಂದ ಗಿರಿನಗರ ಹಾಗೂ ಮಹಾದೇವಪುರ ಠಾಣೆಗೆ ವರ್ಗಾವಣೆಯಾಗಿದ್ದರು. ಸಿಸಿಬಿಯಲ್ಲಿ ಇದ್ದ ವೇಳೆ ರಕ್ತ ಚಂದನದ ಅಡ್ಡೆಗಳ ಮೇಲೆ ದಾಳಿ ನಡೆಸಿದ್ದರು. ಹೀಗಾಗಿ ಅವರಿಬ್ಬರಿಗೆ ರಕ್ತಚಂದನ ದರೋಡೆ ಅಡ್ಡೆ ಹಾಗೂ ಗ್ಯಾಂಗ್‍ಗಳ ಬಗ್ಗೆ ತಿಳಿದಿತ್ತು. ಇದನ್ನೂ ಓದಿ: ವೊಡಾಫೋನ್‌ ಐಡಿಯಾದಲ್ಲಿ ಈಗ ಭಾರತ ಸರ್ಕಾರವೇ ಅತಿ ದೊಡ್ಡ ಪಾಲುದಾರ

    ಮೋಹನ್, ಮಮತೇಶ್ ಡಿಸೆಂಬರ್ 15 ರಂದು ಕಾರಿನಲ್ಲಿ ಹೊಸಕೋಟೆ ಸಂತೆ ಸರ್ಕಲ್ ಬಳಿ ದಾಳಿ ಮಾಡಿದ್ದರು. ಈ ವೇಳೆ ಟಾಟಾ ಏಸ್‍ನಲ್ಲಿ ತರುತ್ತಿದ್ದ ರಕ್ತ ಚಂದನವನ್ನು ಸೀಜ್ ಮಾಡಿದ್ದರು. ಅವರು ಸೀಜ್ ಮಾಡಿದ ರಕ್ತಚಂದನದ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ. ಆದರೆ 5 ದಿನಗಳ ನಂತರ ಸ್ಥಳೀಯರು ಹೊಸಕೋಟೆ ಪೊಲೀಸರಿಗೆ ವಿಚಾರ ತಿಳಿಸಿದ್ದಾರೆ. ಹೊಸಕೋಟೆ ಪೊಲೀಸರು ಎಫ್‍ಐಆರ್ ಹಾಕಿ, ಹುಡುಕುತ್ತಿದ್ದಾರೆ ಎಂಬ ವಿಚಾರ ತಿಳಿಯುತ್ತಿದ್ದಂತೆ ಇಬ್ಬರೂ ಪರಾರಿಯಾಗಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಮೋಹನ್, ಮಮತೇಶ್ ಅವರನ್ನು ಅಮಾನತು ಮಾಡಲಾಗಿದೆ. ಐಜಿಪಿ ಚಂದ್ರಶೇಖರ್, ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಈ ಕುರಿತು ಮಾಹಿತಿ ನೀಡಿದ್ದಾರೆ. ಅಮಾನತುಗೊಂಡು 20 ದಿನ ಕಳೆದರೂ ಹೆಡ್ ಕಾನ್‍ಸ್ಟೇಬಲ್‍ಗಳ ಬಂಧನವಾಗಿಲ್ಲ.

    ಕೃತ್ಯ ಹೇಗೆ ಎಸಗುತ್ತಿದ್ದರು?
    ಮೋಹನ್, ಮಮತೇಶ್‍ಗೆ ಸಿಸಿಬಿಯಲ್ಲಿದ್ದ ವೇಳೆ ರಕ್ತ ಚಂದನದ ಸ್ಮಗ್ಲಿಂಗ್ ಅಡ್ಡೆಗಳ ಪರಿಚಯ ಆಗುತ್ತದೆ. ಅಲ್ಲದೇ ಆಂಧ್ರದಲ್ಲಿ ರಕ್ತಚಂದನದ ಮರಕಡಿಯಲು ಬೆಂಗಳೂರಿನಿಂದ ಕೂಲಿಗೆ ಜನ ಹೋಗುತ್ತಿರುತ್ತಾರೆ. ಅಂತಹವರನ್ನು ಮೋಹನ್, ಮಮತೇಶ್ ಪೊಲೀಸ್ ಬಾತ್ಮೀದಾರರಾಗಿ ಬಳಸಿಕೊಳ್ಳುತ್ತಿರುತ್ತಾರೆ. ರಕ್ತಚಂದನದ ಮರ ಕಡಿಯಲು ಬೆಂಗಳೂರಿನಿಂದ ಹೋದವರು ಮರ ಕಡಿದು ಲಾರಿಗೆ ತುಂಬಿಸುತ್ತಿದ್ದಂತೆ, ಲಾರಿಯ ನಂಬರ್ ಹಾಗೂ ಲಾರಿಯಲ್ಲಿ ಎಷ್ಟು ಲೋಡ್ ಇದೆ? ವಾಹನ ಎಲ್ಲಿಗೆ ಹೋಗುತ್ತದೆ ಎಂಬ ಬಗ್ಗೆ ಮಾಹಿತಿಯನ್ನು ಸ್ಮಗ್ಲರ್‌ ಗಳು ಈ ಇಬ್ಬರು ಪೊಲೀಸರಿಗೆ ನೀಡುತ್ತಿದ್ದರು. ಇದನ್ನೂ ಓದಿ: ಭಾರತದಲ್ಲಿ ಬಿಟ್ ಕಾಯಿನ್ ಚಲಾವಣೆ ಕಾನೂನುಬದ್ಧ – ಮೋದಿ ಟ್ವಿಟ್ಟರ್‌ ಖಾತೆ ಹ್ಯಾಕ್‌

    ಮಾಹಿತಿ ಆಧರಿಸಿ ಪೊಲೀಸರು ದಾಳಿ ನಡೆಸಿ ರಕ್ತ ಚಂದನ ವಶಕ್ಕೆ ಪಡೆಯುತ್ತಿದ್ದರು. ನಂತರ ಅದನ್ನು ಯಾರಿಗೂ ತೋರಿಸದೇ ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಈ ರೀತಿ ಹಣಗಳಿಸಿರುವ ಆರೋಪದ ಮೇಲೆ ಎಫ್‍ಐಆರ್ ದಾಖಲಿಸಲಾಗಿದೆ.

  • ಅಲ್ಲು ಅರ್ಜುನ್ ಅಭಿಮಾನಿಗಳಿಗೆ ನಿರಾಸೆ

    ಅಲ್ಲು ಅರ್ಜುನ್ ಅಭಿಮಾನಿಗಳಿಗೆ ನಿರಾಸೆ

    ಹೈದರಾಬಾದ್: ಅಲಾ ವೈಕುಂಠಪುಮುಲೊ ಸಕ್ಸಸ್ ಬಳಿಕ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಅವರ ಅಭಿಮಾನಿಗಳು ಸಹ ಈ ಚಿತ್ರದ ಕುರಿತು ಅಷ್ಟೇ ಕುತೂಹಲ ಇಟ್ಟುಕೊಂಡಿದ್ದಾರೆ. ತಮ್ಮ ವಿಶಿಷ್ಟ ಸಿನಿಮಾ ಮೂಲಕವೇ ಅಭಿಮಾನಿಗಳನ್ನು ರಂಜಿಸುವ ಅಲ್ಲು, ಈ ಬಾರಿ ಅಭಿಮಾನಿಗಳಿಗೆ ನಿರಾಸೆಯನ್ನುಂಟು ಮಾಡುತ್ತಿದ್ದಾರೆ.

    ಈಗಾಗಲೇ ಪುಷ್ಪ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ಅಭಿಮಾನಿಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ. ಪೋಸ್ಟರ್ ಸಹ ಅಷ್ಟೇ ಕ್ಯೂರಿಯಾಸಿಟಿ ಹುಟ್ಟಿಸುತ್ತಿದ್ದು, ಅಲ್ಲು ಇದರಲ್ಲಿ ಫುಲ್ ಮಾಸ್ ಲುಕ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ರಕ್ತಚಂದನದ ಜೊತೆಗೆ ಅರಣ್ಯಾಧಿಕಾರಿಗಳೊಂದಿಗೆ ಕಾಣಿಸಿಕೊಂಡಿದ್ದಾರೆ. ಹೌದು ಹಿಂದೆಲ್ಲ ರಕ್ತ ಚಂದನದವಿದ್ದು, ಪೊಲೀಸರ ಮಧ್ಯದಲ್ಲಿ ಅಲ್ಲು ಕುಳಿತಿದ್ದಾರೆ. ಅಂದಹಾಗೆ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಚಾಲಕನ ಗೆಟಪ್‍ನಲ್ಲಿ ಕಾಣಿಸಿಕೊಂಡಿದ್ದಾರೆ. ಹೀಗಾಗಿ ಯಾವ ರೀತಿಯ ಕಥೆ ಇರಬಹುದು ಎಂದು ಅಭಿಮಾನಿಗಳು ತಲೆ ಕೆಡಿಸಿಕೊಂಡಿದ್ದಾರೆ.

    ಹುಟ್ಟುಹಬ್ಬದಂದು ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಿ ಅಲ್ಲು ಅರ್ಜುನ್ ಅಭಿಮಾನಿಗಳನ್ನು ಖುಷಿಪಡಿಸಿದ್ದರು. ಇದೀಗ ಬೇಸರಗೊಳಿಸುವ ಸುದ್ದಿಯೊಂದು ಹರಿದಾಡುತ್ತಿದ್ದು, ಅಭಿಮಾನಿಗಳು ನಿರಾಸೆಯಾಗಿದ್ದಾರೆ. ಯಾಕೆಂದರೆ ಈ ಸಿನಿಮಾದಲ್ಲಿ ಅಲ್ಲು ಅರ್ಜುನ್ ಡ್ಯಾನ್ಸ್ ಮಾಡುತ್ತಿಲ್ಲ. ಅಲ್ಲು ಅರ್ಜುನ್ ಉತ್ತಮ ಡ್ಯಾನ್ಸರ್. ಪ್ರತಿ ಸಿನಿಮಾದಲ್ಲಿ ಅಲ್ಲು ಅರ್ಜುನ್ ಸ್ಟೈಲಿಶ್ ಸ್ಟೆಪ್‍ಗಳನ್ನು ಹಾಕಿದ್ದಾರೆ. ಅಲ್ಲು ಅರ್ಜುನ್ ಹೊಸ ಡ್ಯಾನ್ಸ್ ಸ್ಟೆಪ್ಸ್ ನೋಡಲಿಕ್ಕಾಗಿಯೇ ಎಷ್ಟೋ ಜನ ಚಿತ್ರಮಂದಿರಕ್ಕೆ ಬರುತ್ತಾರೆ. ಆದರೆ ಪುಷ್ಪ ಸಿನಿಮಾದಲ್ಲಿ ಅವರು ಡ್ಯಾನ್ಸ್ ಮಾಡುವುದಿಲ್ಲವಂತೆ.

    ಲಾರಿ ಚಾಲಕ ಪಾತ್ರ ನಿರ್ವಹಿಸುತ್ತಿರುವುದರಿಂದ ಅಲ್ಲು ಈ ಸಿನಿಮಾದಲ್ಲಿ ಡ್ಯಾನ್ಸ್ ಮಾಡುವುದಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ನಿರ್ದೇಶಕ ಸುಕುಮಾರ್ ಈ ಸಿನಿಮಾವನ್ನು ನೈಜವಾಗಿ ಚಿತ್ರೀಕರಿಸುತ್ತಿದ್ದಾರಂತೆ. ಸಿನಿಮಾದಲ್ಲಿ ಅಲ್ಲು ಬಳಸುವ ಬಟ್ಟೆಗಳು ನೈಜವಾಗಿ ಕಾಣಲೆಂದು ಟೀಯಲ್ಲಿ ನೆನೆಸಿ, ನಂತರ ಎರಡು ದಿನ ಬಿಟ್ಟು ತೊಳೆಸುವಂತೆ ಸುಕುಮಾರ್ ತಿಳಿಸಿದ್ದಾರಂತೆ. ಅಷ್ಟು ಸೂಕ್ಷ್ಮವಾಗಿ ನೈಜತೆಗೆ ಒತ್ತು ನೀಡುತ್ತಿದ್ದಾರೆ. ಅಂದಹಾಗೆ ಈ ಸಿನಿಮಾ ಕನ್ನಡ, ತೆಲುಗು ಸೇರಿದಂತೆ ಒಟ್ಟು 5 ಭಾಷೆಗಳಲ್ಲಿ ತಯಾರಾಗುತ್ತಿದ್ದು, ಚಿತ್ರತಂಡ ಪೋಸ್ಟರ್ ನ್ನು  5 ಭಾಷೆಗಳಲ್ಲಿ ಬಿಡುಗಡೆ ಮಾಡಿತ್ತು.

    ಈಗಾಗಲೇ ಚಿತ್ರಕ್ಕೆ ನಾಯಕಿಯಾಗಿ ರಶ್ಮಿಕಾ ಮಂದಣ್ಣ ಆಯ್ಕೆಯಾಗಿದ್ದು, ಈ ಕುರಿತು ಟ್ವೀಟ್ ಮಾಡುವ ಮೂಲಕ ಅವರೇ ಖಚಿತಪಡಿಸಿದ್ದರು. ಇನ್ನು ಕನ್ನಡಿಗರಾದ ಸುನಿಲ್ ಶೆಟ್ಟಿ ಹಾಗೂ ಡಾಲಿ ಧನಂಜಯ್ ಸಿನಿಮಾದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ. ಜಗಪತಿ ಬಾಬು, ಪ್ರಕಾಶ್ ರೈ ಪ್ರಮುಖ ಪಾತ್ರಗಳ್ಳುತ್ತಿದ್ದು, ಚಿತ್ರದ ಸಾಹಸ ಸನ್ನಿವೇಶವೊಂದಕ್ಕೆ 6 ಕೋಟಿ ರೂ. ಖರ್ಚು ಮಾಡುವುದಕ್ಕೆ ಚಿತ್ರತಂಡ ಸಜ್ಜಾಗಿದೆಯಂತೆ.