Tag: ಪೂಂಚ್‌ ಅಪಘಾತ

  • Kodagu | ಹುಟ್ಟೂರಿನಲ್ಲಿ ಬುಧವಾರ ಸೇನಾ ಗೌರವದೊಂದಿಗೆ ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    Kodagu | ಹುಟ್ಟೂರಿನಲ್ಲಿ ಬುಧವಾರ ಸೇನಾ ಗೌರವದೊಂದಿಗೆ ಹುತಾತ್ಮ ಯೋಧ ದಿವಿನ್ ಅಂತ್ಯಕ್ರಿಯೆ

    – ತಂದೆ ಸಮಾಧಿ ಪಕ್ಕದಲ್ಲೇ ಅಂತ್ಯಕ್ರಿಯೆಗೆ ವ್ಯವಸ್ಥೆ

    ಮಡಿಕೇರಿ: ಜಮ್ಮು ಮತ್ತು ಕಾಶ್ಮೀರದ (Jammu And Kashmir) ಪೂಂಚ್‌ನಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡು ಕೊನೆಯುಸಿರೆಳೆದ ಯೋಧ ಕೊಡಗಿನ ದಿವಿನ್ (28) ಅಂತ್ಯಕ್ರಿಯೆ ಬುಧವಾರ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದಲ್ಲಿ ನಡೆಯಲಿದೆ.

    ಶ್ರೀನಗರ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ದಿವಿನ್‌ ಕಳೆದ ಎರಡು ದಿನಗಳ ಹಿಂದಷ್ಟೇ ಹುತಾತ್ಮರಾದರು. ಇಂದು (ಡಿ.31) ಶ್ರೀನಗರದಿಂದ ವಿಶೇಷ ವಿಮಾನದ ಮೂಲಕ ದಿವಿನ್‌ ಪಾರ್ಥೀವ ಶರೀರವನ್ನು ಬೆಂಗಳೂರಿಗೆ ತರಲಾಯಿತು. ಈ ಸಂದರ್ಭ ಮೈಸೂರು – ಕೊಡಗು ಸಂಸದ ಯದುವೀರ್ ಒಡೆಯರ್‌ ಅವರು ವೀರ ಯೋಧನಿಗೆ ನಮನ ಸಲ್ಲಿಸಿದರು. ಇದನ್ನೂ ಓದಿ: ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    ಆಲೂರು ಸಿದ್ದಾಪುರಕ್ಕೆ ಇಂದು ರಾತ್ರಿಯೇ ಪಾರ್ಥಿವ ಶರೀರ ತಲುಪಲಿದ್ದು, ಕುಶಾಲನಗರ ಸರ್ಕಾರಿ ಆಸ್ಪತ್ರೆಯಲ್ಲಿ ಪಾರ್ಥಿವ ಶರೀರ ಇರಿಸಲಾಗುತ್ತದೆ. ಬುಧವಾರ ಬೆಳಗ್ಗೆ 8:30ರ ಸುಮಾರಿಗೆ ಅಲ್ಲಿಂದ ಆಲೂರು ಸಿದ್ದಾಪುರಕ್ಕೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲಾಗುತ್ತದೆ. ನಂತರ 10:30ರ ಸುಮಾರಿಗೆ ಸಿದ್ದಾಪುರದ ಸರ್ಕಾರಿ ಶಾಲಾ ಮೈದಾನದಲ್ಲಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ. ಸುಮಾರು ಎರಡೂವರೆ ಗಂಟೆಗಳ ಕಾಲ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ದರ್ಶನ ಮುಗಿಯುತ್ತಿದ್ದಂತೆ ಸೇನಾ ಗೌರವದೊಂದಿಗೆ ದಿವಿನ್‌ ಅವರ ತೋಟದಲ್ಲಿರುವ ತಂದೆಯ ಸಮಾಧಿ ಬಳಿಯೇ ಅಂತ್ಯಕ್ರಿಯೆ ನಡೆಸಲಾಗುತ್ತದೆ ಎಂದು ಜಿಲ್ಲಾಡಳಿತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

  • ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    ಹುತಾತ್ಮ ಯೋಧ ದಿವಿನ್‌ ಮದುವೆಗೆ ಇನ್ನೆರಡು ತಿಂಗಳು ಬಾಕಿಯಿತ್ತು, ಲಗ್ನಪತ್ರಿಕೆಯೂ ಪ್ರಿಂಟ್‌ ಆಗಿತ್ತು!

    – ದಿವಿನ್‌ ಪಾರ್ಥಿವ ಶರೀರ ಮಂಗಳವಾರ ರಾತ್ರಿ ಹುಟ್ಟೂರಿಗೆ ಬರುವ ನಿರೀಕ್ಷೆ

    ಮಡಿಕೇರಿ: ಒಂದು ದಿನದ ಹಿಂದೆಯಷ್ಟೇ ಹುತಾತ್ಮರಾದ ಕೊಡಗಿನ ವೀರಯೋಧ ದಿವಿನ್ ಅವರು 10 ವರ್ಷಗಳ ಹಿಂದೆ ಸೇನೆಗೆ ಸೇರಿದ್ದರು. ಇತ್ತೀಚೆಗೆ ದಿವಿನ್ ಅವರಿಗೆ ನಿಶ್ಚಿತಾರ್ಥ ಕೂಡ ನೆರವೇರಿತ್ತು. 2025ರ ಫೆಬ್ರವರಿಯಲ್ಲಿ ದಿವಿನ್ ವಿವಾಹ ನಿಶ್ಚಯವಾಗಿತ್ತು ಎಂದು ಕುಟುಂಬದ ಮೂಲಗಳಿಂದ ತಿಳಿದುಬಂದಿದೆ.

    ಕುಟುಂಬಸ್ಥರು ಲಗ್ನ ಪತ್ರಿಕೆಯನ್ನೂ ಪ್ರಿಂಟ್​ ಮಾಡಿಸಿದ್ದರಂತೆ. ಆದ್ರೆ ಸೇನಾ ವಾಹನ ಪ್ರಪಾತಕ್ಕೆ ಉರುಳಿ ದುರಂತ ಸಂಭವಿಸಿದೆ. ಕೂಡಲೇ ದಿವಿನ್‌ರನ್ನ ಶ್ರೀನಗರದ ಸೇನಾ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗ್ತಿತ್ತು. ಎರಡು ದಿನದ ಹಿಂದೆಯಷ್ಟೇ ದಿವಿನ್ ತಾಯಿ ಜಯಾ ಅವರು ಶ್ರೀನಗರದ ಸೇನಾ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ವೇಳೆ ಅಮ್ಮನ ಕರೆಗೆ ದಿವಿನ್ ಕಣ್ಣು ಬಿಡುವ ಪ್ರಯತ್ನ ಮಾಡಿದ್ದರಂತೆ. ಆದರೆ ಶ್ವಾಸಕೋಶಕ್ಕೆ ತೀವ್ರ ಹಾನಿಯಾಗಿದ್ದ ಹಿನ್ನೆಲೆ ಚಿಕಿತ್ಸೆ ಫಲಕಾರಿಯಾಗದೇ ಹುತಾತ್ಮರಾಗಿದ್ದಾರೆ. ಹೀಗಾಗಿ ಮದುವೆ ಆಸೆ, ಜೀವನದ ನೂರಾರು ಕನಸು ನುಚ್ಚುನೂರಾಗಿದೆ. ಇದನ್ನೂ ಓದಿ: ಸಿಂಗ್ ಶೋಕಾಚರಣೆ ವೇಳೆ ರಾಹುಲ್ ವಿಯೆಟ್ನಾಂ ಪ್ರವಾಸ – ಬಿಜೆಪಿ ಆರೋಪಕ್ಕೆ ಕಾಂಗ್ರೆಸ್‌ ಗರಂ

    ಗ್ರಾಮದಲ್ಲಿ ಒಳ್ಳೆಯ ಹುಡುಗನಾಗಿದ್ದ ದಿವಿನ್‌ ಇತ್ತಿಚೆಗೆ ತಂದೆಯನ್ನ ಕಳೆದುಕೊಂಡಿದ್ದರು. ತಾಯಿ ಮಗ ಮಾತ್ರ ನೂತನವಾಗಿ ನಿರ್ಮಾಣಗೊಂಡ ಮನೆಯಲ್ಲಿ ವಾಸ ಮಾಡುತ್ತಿದ್ದರು ಎಂದು ಗ್ರಾಮಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಯೇಸುವಿನ ಕುರಿತು ಅವಹೇಳನ – ಕೊಡಗಿನ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದೂರು ದಾಖಲು

    ಇನ್ನೂ ಯೋಧ ದಿವಿನ್ ಪಾರ್ಥಿವ ಶರೀರ ಜಮ್ಮುವಿನಿಂದ ಫ್ಲೈಟ್‌ನಲ್ಲಿ ನೇರವಾಗಿ ಬೆಂಗಳೂರಿಗೆ ಬಂದು ನಂತರ ಹುಟ್ಟೂರು ಆಲೂರು ಸಿದ್ದಾಪುರಕ್ಕೆ ರವಾನಿಸಲಾಗುತ್ತದೆ. ಮಂಗಳವಾರ ರಾತ್ರಿ ಅಥವಾ ಬುಧವಾರ ಬೆಳಗ್ಗೆ ಪಾರ್ಥೀವ ಶರೀರವನ್ನು ಹುಟ್ಟೂರಿಗೆ ತರುವ ನಿರೀಕ್ಷೆಯಿದೆ. ಈಗಾಗಲೇ ಜಿಲ್ಲಾಡಳಿತ ಹಾಗೂ ಶಾಸಕ ಮಂಥರ್ ಗೌಡ ಹುಟ್ಟೂರಿನ ಶಾಲಾ ಆವರಣದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರೆ. ಅಂತ್ಯಕ್ರಿಯೆ ನೆರವೇರಿಸಲು ಅಗತ್ಯ ಸಿದ್ಧತೆ ಮತ್ತು ಸ್ಥಳ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ಪಂಜಾಬ್‌ನಲ್ಲಿ ರೈತರಿಂದ ಬಂದ್ – 221 ರೈಲುಗಳ ಸಂಚಾರ ವ್ಯತ್ಯಯ – 163 ರೈಲುಗಳು ಕ್ಯಾನ್ಸಲ್

  • ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

    ಶ್ರೀನಗರದ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊಡಗಿನ ಯೋಧ ಹುತಾತ್ಮ!

    ಮಡಿಕೇರಿ: ಜಮ್ಮು-ಕಾಶ್ಮೀರ (Jammu Kashmir) ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದರು. ಈ ನಡುವೆ ಗಂಭೀರ ಗಾಯಗೊಂಡು ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವ ಕೊಡಗಿನ ಯೋಧ (Kodagu soldier) ದಿವಿನ್ (28) ಭಾನುವಾರ ರಾತ್ರಿ ಹುತಾತ್ಮರಾಗಿದ್ದಾರೆ.

    ಜಮ್ಮು-ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದರು. ಕೊಡಗು ಜಿಲ್ಲೆಯ‌ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಾಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದರು. ಶುಕ್ರವಾರ ಮಧ್ಯಾಹ್ನದ ವೇಳೆಗೆ ದಿವಿನ್‌ ಹುಟ್ಟೂರು ಸೋಮವಾರಪೇಟೆ ತಾಲೂಕಿನಲ್ಲಿ ಸಿದ್ದರಾಪುರದಲ್ಲಿರುವ ದಿವಿನ್‌ ಅವರ ತಾಯಿಗೆ (ಜಯ) ಸೇನಾಧಿಕಾರಿಗಳು ಕರೆ ಮಾಡಿ ಮಗನ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದರು.

    ಮಾಹಿತಿ ಪಡೆದ ನಂತರ ದಿವಿನ್ ಅವರ ತಾಯಿ ಹಾಗೂ ಕುಟುಂಬಸ್ಥರು ಶುಕ್ರವಾರ ಶ್ರೀನಗರಕ್ಕೆ ಹೋರಟ್ಟಿದ್ದರು. ಶ್ರೀನಗರದ ಆಸ್ಪತ್ರೆಗೆ ತೆರಳಿ ಮಗನ ಪರಿಸ್ಥಿತಿ ಕಂಡು ದುಃಖ ಹೋರ ಹಾಕಿದ್ರು. ಈ ಸಂದರ್ಭದಲ್ಲಿ ತಾಯಿಯ ಧ್ವನಿ ಕೇಳಿ ಚಿಕಿತ್ಸೆಗೆ ಸ್ಪಂದಿಸುವ ರೀತಿಯಲ್ಲಿ ದಿವಿನ್‌ ಕಣ್ಣಿನ ರೆಪ್ಪೆ ತೆರೆದು ನೋಡಿದ್ದರಂತೆ, ಬಳಿಕ ಹಾಗೆಯೇ ಮಲಗಿದ್ದರಂತೆ. ಇದನ್ನು ಕಂಡ ಜಯ ಅವರು ಮಗನ ಆರೋಗ್ಯದಲ್ಲಿ ಸ್ವಲ್ಪ ಚೇತರಿಗೆ ಆಗುತ್ತಿದೆ ಎಂದು ಸಮಾಧಾನಪಟ್ಟುಕೊಂಡಿದ್ದರು.

    ದಿವಿನ್‌ ತಾಯಿ ಮಗನ ಆರೈಕೆ ಮಾಡುತ್ತಿದ್ದರು. ಆದ್ರೆ ಶ್ವಾಸಕೋಶದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದಿವಿನ್‌ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ. ಇನ್ನೂ ಯೋಧ ದಿವಿನ್ ಮೃತದೇಹ ಶ್ರೀನಗರದ ಉದಂಪುರ್ ಕಮಾಂಡೋ ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಸೋಮವಾರ (ಡಿ.30) ಬೆಳಗ್ಗೆ ಯೋಧನ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ಕಳಿಸುವ ಪ್ರಕ್ರಿಯೆ ನಡೆಯಲಿದೆ.

  • ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

    ಪೂಂಚ್‌ನಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನದಲ್ಲಿದ್ದ ಕೊಡಗಿನ ಯೋಧ ಸ್ಥಿತಿ ಚಿಂತಾಜನಕ

    – ಸೈನಿಕ ಬೇಗ ಗುಣಮುಖರಾಗಿ ಬರಲೆಂದು ಪ್ರಾರ್ಥಿಸಿದ ಗ್ರಾಮಸ್ಥರು

    ಮಡಿಕೇರಿ: ಜಮ್ಮು-ಕಾಶ್ಮೀರ ಪೂಂಚ್‌ನಲ್ಲಿ ನಡೆದ ದುರಂತದಲ್ಲಿ ಕರ್ನಾಟದ ಮೂವರು ಸೈನಿಕರು ಹುತಾತ್ಮರಾಗಿದ್ದಾರೆ. ಮತ್ತೋರ್ವ ಕೊಡಗಿನ ಯೋಧ ದಿವಿನ್ (28) ಅವರ ಸ್ಥಿತಿ ಚಿಂತಾಜನಕವಾಗಿದೆ.

    ಹೌದು, ಜಮ್ಮು ಕಾಶ್ಮೀರದಲ್ಲಿ ಮೊನ್ನೆ ಸಂಭವಿಸಿದ ಸೇನಾ ವಾಹನ ಪ್ರಪಾತಕ್ಕೆ ಉರುಳಿದ ದುರಂತದಲ್ಲಿ ಕೊಡಗಿನ ಯೋಧ ಗಂಭೀರ ಗಾಯಗೊಂಡಿದ್ದಾರೆ. ಕೊಡಗು ಜಿಲ್ಲೆಯ‌ ಸೋಮವಾರಪೇಟೆ ತಾಲೂಕಿನ ಆಲೂರು ಸಿದ್ದಪುರ ಗ್ರಾಮದ 28 ವರ್ಷ ಪ್ರಾಯದ ದಿವಿನ್ ಅಪಘಾತದಲ್ಲಿ ಗಂಭೀರ ಗಾಯಗೊಂಡ ಯೋಧನಾಗಿದ್ದಾರೆ. ಇದನ್ನೂ ಓದಿ: ಪೂಂಚ್‍ನಲ್ಲಿ ಸೇನಾ ವಾಹನ ಅಪಘಾತದಲ್ಲಿ ಹುತಾತ್ಮರಾಗಿದ್ದ ರಾಜ್ಯದ ಮೂವರು ಯೋಧರಿಗೆ ಕಣ್ಣೀರ ವಿದಾಯ

    ಯೋಧನ ಸ್ಥಿತಿ ಚಿಂತಾಜನಕವಾಗಿದ್ದು, ಶ್ರೀನಗರ ಸೇನಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಸೇನೆಯಿಂದ ಕುಟುಂಬಸ್ಥರಿಗೆ ಮಾಹಿತಿ ಬಂದಿದೆ. ಸೇನೆಯಿಂದ ದಿವಿನ್ ತಾಯಿ ಅವರಿಗೆ ಕರೆ ಬಂದಿತ್ತು. ಜಯ ಅವರು ನಿನ್ನೆ ಸಂಜೆಯೇ ಕೊಡಗಿನಿಂದ ಶ್ರೀನಗರಕ್ಕೆ ತೆರಳಿದ್ದಾರೆ. ಅಲ್ಲಿಗೆ ತೆರಳಿದ ಬಳಿಕವಷ್ಟೇ ದಿವಿಲ್ ಆರೋಗ್ಯದ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

    ದಿವಿನ್ ‌10 ವರ್ಷದ ಹಿಂದೆ ಸೈನ್ಯಕ್ಕೆ ಸೇರಿದ್ದರು. ಇತ್ತೀಚೆಗೆ ನಿಶ್ಚಿತಾರ್ಥ ಕೂಡ ನೆರವೇರಿತು. ಇದೇ ಫೆಬ್ರವರಿಯಲ್ಲಿ ವಿವಾಹ ನಿಶ್ಚಯವಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಇದೀಗಾ ಕುಟುಂಬಸ್ಥರು, ಗ್ರಾಮಸ್ಥರು ದಿವಿನ್‌ ಅದಷ್ಟು ಬೇಗಾ ಹುಶಾರಾಗಿ ಬರುವಂತೆ ಪ್ರಾರ್ಥನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಪೂಂಚ್‌ನಲ್ಲಿ ದುರಂತ – 300 ಅಡಿಯ ಆಳದ ಕಣಿವೆಗೆ ಬಿದ್ದ ಸೇನಾ ವಾಹನ, 5 ಮಂದಿ ಬಲಿ