Tag: ಪೂಜಾ ದದ್ಲಾನಿ

  • ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ  ಸ್ಥಾನ ಪಡೆದ ಏಕೈಕ ಭಾರತದ ನಟ

    ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯಲ್ಲಿ ಶಾರುಖ್ ಖಾನ್: ಈ ಸ್ಥಾನ ಪಡೆದ ಏಕೈಕ ಭಾರತದ ನಟ

    ಬಾಲಿವುಡ್ ನಟ ಶಾರುಖ್ ಖಾನ್ ಕುರಿತು ಭಾರತದಲ್ಲಿ ಅಸಮಾಧಾನ ಭುಗಿಲೆದಿದ್ದೆ. ಅದರಲ್ಲೂ ಪಠಾಣ್ ವಿಚಾರದಲ್ಲಿ ಅವರ ಸಿನಿಮಾಗಳನ್ನು ಬಾಯ್ಕಾಟ್ ಮಾಡಬೇಕು ಎಂದು ದೊಡ್ಡ ಅಭಿಯಾನವೇ ಶುರುವಾಗಿದೆ. ಈ ವಿವಾದದ ಕುರಿತು ದಿನಕ್ಕೊಂದು ಹೇಳಿಕೆಗಳು ಹೊರ ಬರುತ್ತಿವೆ. ಆದರೂ, ಶಾರುಖ್ ಖಾನ್ ಜನಪ್ರಿಯತೆ ಕುಂದಿಲ್ಲ ಎನ್ನುವುದಕ್ಕೆ ಇಲ್ಲೊಂದು ಸಾಕ್ಷಿ ಸಿಕ್ಕಿದೆ. ಪ್ರತಿಷ್ಠಿತ ಮ್ಯಾಗಜಿನ್ ವೊಂದು ಜಗತ್ತಿನ ಸಾರ್ವಕಾಲಿಕ ಶ್ರೇಷ್ಠ ನಟರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಾರುಖ್ ಖಾನ್ ಹೆಸರು ಕಾಣಿಸಿಕೊಂಡಿದೆ.

    ಪ್ರತಿಷ್ಠಿತ ಎಂಪಾಯರ್ ಮ್ಯಾಗಜಿನ್ ಈ ಮಾಹಿತಿಯನ್ನು ಹೊರ ಹಾಕಿದ್ದು, ಭಾರತದ ನಟರಲ್ಲಿ ಈ ಸ್ಥಾನವನ್ನು ಪಡೆದ ಏಕೈಕ ನಟ ಶಾರುಖ್ ಖಾನ್ ಎನ್ನುವುದು ವಿಶೇಷ. ಈ ಮಾಹಿತಿಯನ್ನು ಶಾರುಖ್ ಮ್ಯಾನೇಜರ್ ಪೂಜಾ ದದ್ಲಾನಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಏನೇ ವಿವಾದ ಮಾಡಿದರೂ, ಅವರ ಜನಪ್ರಿಯತೆ ಯಾವತ್ತೂ ಕಡಿಮೆ ಆಗಲ್ಲ ಎಂದು ವಿರೋಧಿಗಳಿಗೆ ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

    ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾ ಜನವರಿ 25ಕ್ಕೆ ಜಗತ್ತಿನಾದ್ಯಂತ ಬಿಡುಗಡೆ ಆಗುತ್ತಿದೆ. ಅದಕ್ಕೂ ಮೊದಲ ಮೊನ್ನೆಯಷ್ಟೇ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿತ್ತು. ಈ ಹಾಡಿನಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಹಾಕಿದ್ದರು ಎನ್ನುವ ಕಾರಣಕ್ಕಾಗಿ ಭಾರೀ ವಿವಾದವಾಗಿತ್ತು. ಇದು ಹಿಂದೂಗಳಿಗೆ ಮಾಡುತ್ತಿರುವ ಅಪಮಾನ ಎಂದು ಬಿಂಬಿಸಲಾಗಿತ್ತು. ಶಾರುಖ್ ಖಾನ್ ಕೂಡಲೇ ಅದನ್ನು ಸರಿಪಡಿಸಬೇಕು ಎಂದು ಆಗ್ರಹಿಸಲಾಗಿತ್ತು.

    ವಿವಾದದ ಕುರಿತು ಶಾರುಖ್ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ವಿವಾದ ಮಾಡುವ ಮೂಲಕ ಸಿನಿಮಾಗೆ ಮತ್ತಷ್ಟು ಪ್ರಚಾರ ಕೊಟ್ಟಿದ್ದೀರಿ, ನಿಮಗೆ ಧನ್ಯವಾದಗಳು ಎಂದು ಹೇಳಿದ್ದರು. ನೀವು ಏನೇ ಬಾಯ್ಕಾಟ್ ಮಾಡಿರಿ, ಸಿನಿಮಾ ಗೆಲ್ಲುತ್ತದೆ ಎನ್ನುವ ವಿಶ್ವಾವನ್ನೂ ಅವರು ವ್ಯಕ್ತ ಪಡಿಸಿದ್ದರು. ಶಾರುಖ್ ಏನೇ ಹೇಳಿದರೂ, ವಿವಾದದ ಉರಿ ಇನ್ನೂ ತಣ್ಣಗಾಗಲಿಲ್ಲ. ಸಿನಿಮಾ ಪ್ರೇಮಿಗಳು ಮಾತ್ರವಲ್ಲ, ರಾಜಕಾರಣಿಗಳು ಕೂಡ ಈ ವಿವಾದಲ್ಲಿ ಪ್ರವೇಶ ಮಾಡಿದ್ದಾರೆ. ಹಾಗಾಗಿ ವಿವಾದ ದೊಡ್ಡದಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಶಾರೂಖ್ ಜೊತೆ ಪ್ರಾರ್ಥನೆ ಮಾಡಿದ್ದು ಪತ್ನಿ ಗೌರಿ ಖಾನ್ ಅಲ್ಲ

    ಶಾರೂಖ್ ಜೊತೆ ಪ್ರಾರ್ಥನೆ ಮಾಡಿದ್ದು ಪತ್ನಿ ಗೌರಿ ಖಾನ್ ಅಲ್ಲ

    ಮುಂಬೈ: ಮಹಾನ್ ಗಾಯಕಿ ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರವನ್ನು ನೋಡಲು ನಟ, ನಟಿಯರು, ರಾಜಕೀಯ ವ್ಯಕ್ತಿಗಳು, ಗಣ್ಯರು ಬಂದಿದ್ದರು. ಆದರೆ ಈ ವೇಳೆ ಬಾಲಿವುಡ್ ನಟ ಶಾರೂಖ್ ಅವರ ಫೋಟೋವೊಂದು ಶೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುವುದರ ಜೊತೆಗೆ ವಿವಾದನ್ನು ಹುಟ್ಟುಹಾಕಿತ್ತು.

    ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ವೇಳೆ ಶಾರೂಖ್ ಖಾನ್ ಪ್ರಾರ್ಥನೆ ಸಲ್ಲಿಸಿದ ರೀತಿ ಸೋಶಿಯಲ್ ಮೀಡಿಯಾದಲ್ಲಿ ತುಂಬ ಹೈಲೈಟ್ ಆಗಿದೆ. ಶಾರುಖ್ ಜೊತೆ ನಿಂತಿರುವ ಮಹಿಳೆಯನ್ನು ಗೌರಿ ಖಾನ್ ಎಂದು ನೆಟ್ಟಿಗರು ಭಾವಿಸಿದ್ದಾರೆ. ಆದರೆ ಅದು ಗೌರಿ ಖಾನ್ ಅಲ್ಲ.  ಇದನ್ನೂ ಓದಿ: ಕನ್ನಡಕ್ಕೂ ದನಿಗೂಡಿಸಿದ್ದ ಲತಾ ಮಂಗೇಶ್ಕರ್

    ಶಾರೂಖ್ ಖಾನ್ ಅವರು ಲತಾ ಮಂಗೇಶ್ಕರ್ ಅವರ ಪಾರ್ಥಿವ ಶರೀರದ ಮುಂದೆ ನಿಂತು ಮುಸ್ಲಿಂ ಧರ್ಮದ ಪದ್ಧತಿಯಂತೆ ಪ್ರಾರ್ಥನೆ (ದುವಾ) ಸಲ್ಲಿಸಿದರು. ಅವರ ಪಕ್ಕದಲ್ಲಿ ಇದ್ದಿದ್ದ ಮ್ಯಾನೇಜರ್ ಪೂಜಾ ದದ್ಲಾನಿ ಹಿಂದೂ ಧರ್ಮದವರಾದ ಅವರು ಹಿಂದೂ ಪದ್ಧತಿಯಂತೆ ಕೈ ಮುಗಿದು ಪ್ರಾರ್ಥಿಸಿದರು. ಹಿಂದು, ಮುಸ್ಲಿಂ ಭಾವೈಕ್ಯತೆ ಒಂದೇ ಪ್ರೇಮ್‍ನಲ್ಲಿ ನೋಡಿದ ಅಭಿಮಾನಿಗಳು ಈ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮ್ಯಾನೇಜರ್ ಪೂಜಾ ದದ್ಲಾನಿ ಅವರನ್ನು ನೋಡಿದ ಅಭಿಮಾನಿಗಳು ಶಾರೂಖ್ ಅವರ ಪತ್ನಿ ಗೌರಿ ಖಾನ್ ಎಂದು ಭಾವಿಸಿದ್ದರು.

    ವೀಡಿಯೋದಲ್ಲಿ ಏನಿದೆ?: ಲತಾ ಮಂಗೇಶ್ಕರ್ ಅವರ ಮೃತದೇಹದ ಎದುರಿನಲ್ಲಿ ನಿಂತು ಪ್ರಾರ್ಥನೆ ಮಾಡುವಾಗ ಶಾರೂಖ್ ಖಾನ್ ಅವರು ಮಾಸ್ಕ್ ಧರಿಸಿದ್ದರು. ಗಾಯಕಿಯ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಅವರು ಪ್ರಾರ್ಥನೆ ಮಾಡಿದರು. ಬಳಿಕ ಮಾಸ್ಕ್ ತೆಗೆದು ಪಾರ್ಥಿವ ಶರೀರದ ಕಡೆಗೆ ಗಾಳಿ ಊದಿದರು. ಮುಸ್ಲಿಂ ಸಮುದಾಯದಲ್ಲಿ ಈ ರೀತಿ ಮಾಡುವ ಪದ್ಧತಿ ಇದೆ. ಆದರೆ ಅವರು ಗಾಳಿ ಊದಿದ್ದನ್ನು ಕೆಲವರು ತಪ್ಪಾಗಿ ಅರ್ಥೈಸಿದ್ದಾರೆ. ಲತಾಜೀ ಪಾರ್ಥಿವ ಶರೀರಕ್ಕೆ ಶಾರೂಖ್ ಖಾನ್ ಉಗಿದಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

    ಶಾರೂಖ್ ಖಾನ್ ಅನೇಕ ಸಿನಿಮಾಗಳ ಅನೇಕ ಗೀತೆಗಳಿಗೆ ಲತಾ ಮಂಗೇಶ್ಕರ್ ಧ್ವನಿ ಆಗಿದ್ದರು. ಲತಾ ಬಗ್ಗೆ ಬಾಲಿವುಡ್‍ನ ಎಲ್ಲ ತಾರೆಯರಿಗೂ ಅಪಾರ ಗೌರವ, ಅಭಿಮಾನ. ಆ ಕಾರಣದಿಂದ ಶಾರುಖ್ ಖಾನ್ ಕೂಡ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು.