Tag: ಪೂರಕ ಪರೀಕ್ಷೆ

  • SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ (SSLC Supplementary Examination) ಯ ವೇಳಾಪಟ್ಟಿ ಪ್ರಕಟಗೊಂಡಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯಿಂದ ವೇಳಾಪಟ್ಟಿ ಪ್ರಕಟಗೊಂಡಿದ್ದು, ಜೂನ್ 12 ರಿಂದ ಜೂನ್ 19ರವರೆಗೆ ಪೂರಕ ಪರೀಕ್ಷೆಗಳು ನಡೆಯಲಿವೆ. ಇದನ್ನೂ ಓದಿ: ಬ್ಯಾರಿಕೇಡ್ ಯಾಕೆ ಹಾಕಿಲ್ಲ?- ಪೊಲೀಸರಿಗೆ ಸಿದ್ದರಾಮಯ್ಯ ಕ್ಲಾಸ್

    ಪೂರಕ ಪರೀಕ್ಷೆ ವೇಳಾಪಟ್ಟಿ ಇಂತಿದೆ..
    ಜೂನ್ 12- ಪ್ರಥಮ ಭಾಷೆ
    ಜೂನ್ 13- ವಿಜ್ಞಾನ
    ಜೂನ್ 14- ದ್ವಿತೀಯ ಭಾಷೆ
    ಜೂನ್ 15- ಸಮಾಜ ವಿಜ್ಞಾನ
    ಜೂನ್ 16- ತೃತೀಯ ಭಾಷೆ
    ಜೂನ್ 17- ಗಣಿತ

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ದಿನಾಂಕ ಬದಲಾವಣೆ

    ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ (2nd PUC) ಪೂರಕ ಪರೀಕ್ಷೆ (Exam) ವೇಳಾಪಟ್ಟಿ ಪರಿಷ್ಕರಣೆಗೊಳಿಸಿದೆ.

    ಈ ಹಿಂದೆ ಬಿಡುಗಡೆಗೊಳಿಸಿದ್ದ ದಿನಾಂಕ ಬದಲಾವಣೆ ಮಾಡಿದ ಮಂಡಳಿಯು ಇದೀಗ ಹೊಸದಾಗಿ ಪ್ರಕಟಣೆಯನ್ನು ಹೊರಡಿಸಿದೆ. ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿಯ ಪ್ರಕಾರ ಮೇ 23 ರಿಂದ ಜೂನ್ 3 ವರೆಗೆ ಪರೀಕ್ಷೆ ನಿಗದಿಯಾಗಿದೆ.

    ಪರಿಷ್ಕೃತ ಪೂರಕ ಪರೀಕ್ಷೆ ವೇಳಾಪಟ್ಟಿ:

    ಮೇ 23- ಕನ್ನಡ, ಅರೇಬಿಕ್
    ಮೇ 24- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ.
    ಮೇ 25- ಇಂಗ್ಲೀಷ್
    ಮೇ 26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ.
    ಮೇ 27- ಇತಿಹಾಸ, ಸಂಖ್ಯಾಶಾಸ್ತ್ರ
    ಮೇ 29- ಹಿಂದಿ.
    ಮೇ 30- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
    ಮೇ 31- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
    ಜೂನ್ 1- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
    ಜೂನ್ 2- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ.
    ಜೂನ್ 3- ಅರ್ಥಶಾಸ್ತ್ರ, ಜೀವಶಾಸ್ತ್ರ

  • ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

    ಮೇ 22 ರಿಂದ ಜೂನ್ 2ರವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

    ಬೆಂಗಳೂರು: ದ್ವಿತೀಯ ಪಿಯುಸಿ (2nd PUC) ಪೂರಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟಗೊಂಡಿದೆ.

    ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ವೇಳಾಪಟ್ಟಿ ಪ್ರಕಟ ಮಾಡಿದ್ದು, ಮೇ 22 ರಿಂದ ಜೂನ್ 2ರವರೆಗೆ ಪರೀಕ್ಷೆ ನಡೆಯಲಿದೆ.

    ಪರೀಕ್ಷೆಯ ವೇಳಾಪಟ್ಟಿ:
    ಮೇ 22- ಕನ್ನಡ, ಅರೇಬಿಕ್
    ಮೇ 23- ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
    ಮೇ 24- ಇಂಗ್ಲೀಷ್
    ಮೇ 25- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ,ಗಣಕ ವಿಜ್ಞಾನ

    Preparations for rescheduled exam of PUC English paper on June 18 seen at a centre in Chikkamagalur on Wednesday. -KPN ### Chikkamagalur Preparations for rescheduled exam

    ಮೇ 26- ಇತಿಹಾಸ, ಸಂಖ್ಯಾಶಾಸ್ತ್ರ
    ಮೇ 27- ಹಿಂದಿ
    ಮೇ 29- ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ
    ಮೇ 30- ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
    ಮೇ 31- ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ
    ಜೂನ್ 1- ತರ್ಕಶಾಸ್ತ್ರ, ಹಿಂದುಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
    ಜೂನ್ 2- ಅರ್ಥಶಾಸ್ತ್ರ, ಜೀವಶಾಸ್ತ್ರ

  • ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಸೆಪ್ಟೆಂಬರ್ 12ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ (PUC) ಪೂರಕ ಪರೀಕ್ಷೆ (Exam) ಫಲಿತಾಂಶ ಸೆಪ್ಟೆಂಬರ್ 12ಕ್ಕೆ ಪ್ರಕಟಿಸುವುದಾಗಿ ಪಿಯುಸಿ ಬೋರ್ಡ್ ತಿಳಿಸಿದೆ.

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಸೆಪ್ಟೆಂಬರ್ 12 ರಂದು ಪ್ರಕಟಿಸಲಾಗುತ್ತದೆ. ಬೆಳಗ್ಗೆ 11 ಗಂಟೆ ನಂತರ ವೆಬ್‍ಸೈಟ್‍ನಲ್ಲಿ ಫಲಿತಾಂಶ ಲಭ್ಯವಾಗಲಿದೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್‌ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ

    ಸೆಪ್ಟೆಂಬರ್ 12 ಬೆಳಗ್ಗೆ 11 ಗಂಟೆಗೆ ಇಲಾಖೆ ವೆಬ್ ಸೈಟ್‍ನಲ್ಲಿ ಪಿಯುಸಿ ಬೋರ್ಡ್ ಫಲಿತಾಂಶ ಪ್ರಕಟಿಸಲಿದೆ. karresults.nic.in ವೆಬ್ ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಆಗಸ್ಟ್‌ 12 ರಿಂದ 25ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆದಿತ್ತು. ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 1,85,270 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇದನ್ನೂ ಓದಿ: ರಾಜಕಾಲುವೆ ಒತ್ತುವರಿ ಬಗ್ಗೆ ಬಿಗ್‍ ಬುಲೆಟಿನ್‍ನಲ್ಲಿ ಪ್ರಸ್ತಾಪ – ಸಿದ್ದರಾಮಯ್ಯ ಪ್ರಶಂಸೆ

    Live Tv
    [brid partner=56869869 player=32851 video=960834 autoplay=true]

  • ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ದ್ವಿತೀಯ PUC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

    ಬೆಂಗಳೂರು: 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ.

    ಆಗಸ್ಟ್‌ 12ರಿಂದ 25ರ ವರೆಗೆ ಪರೀಕ್ಷೆ ನಡೆಯಲಿದೆ. ವಿದ್ಯಾರ್ಥಿಗಳು ವೇಳಾಪಟ್ಟಿಯನ್ನು https://pue.karnataka.gov.in ಅಂತರ್ಜಾಲದಲ್ಲಿ ವೀಕ್ಷಿಸಬಹುದು. ಇದನ್ನೂ ಓದಿ: ಬಡವರ ಉದ್ಧಾರಕ್ಕಾಗಿ ಅಲ್ಲ, ರಾಜಕೀಯ ಲಾಭಕ್ಕಾಗಿ ಸಿದ್ದರಾಮಯ್ಯೋತ್ಸವ: ಹಾಲಪ್ಪ ಕಿಡಿ

    ಪರೀಕ್ಷಾ ವೇಳಾಪಟ್ಟಿ ಹೀಗಿದೆ..
    ಕನ್ನಡ, ಅರೇಬಿಕ್ – ಆ.12
    ಭೂಗೋಳಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ – ಆ.13
    ಹಿಂದಿ – ಆ.16
    ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ – ಆ.17
    ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ – ಆ.18
    ರಾಜ್ಯಶಾಸ್ತ್ರ, ಗಣಿತ ಶಾಸ್ತ್ರ – ಆ.19
    ತರ್ಕಶಾಸ್ತ್ರ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ – ಆ.20
    ಇಂಗ್ಲಿಷ್‌ – ಆ.22
    ಅರ್ಥಶಾಸ್ತ್ರ, ಜೀವಶಾಸ್ತ್ರ – ಆ.23
    ಇತಿಹಾಸ, ಸಂಖ್ಯಾಶಾಸ್ತ್ರ – ಆ.24
    ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ – ಆ.25

    Live Tv
    [brid partner=56869869 player=32851 video=960834 autoplay=true]

  • ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    ಇಂದಿನಿಂದ SSLC ಸಪ್ಲಿಮೆಂಟರಿ ಎಕ್ಸಾಂ – ಆಗಸ್ಟ್ ಮೊದಲ ವಾರದಲ್ಲಿ ರಿಸಲ್ಟ್

    ಬೆಂಗಳೂರು: ಇಂದಿನಿಂದ ಜುಲೈ 4ರವರೆಗೆ ರಾಜ್ಯಾದ್ಯಂತ ಎಸ್‍ಎಸ್‍ಎಲ್‍ಸಿ(SSLC) ಪೂರಕ ಪರೀಕ್ಷೆಗಳು ನಡೆಯಲಿದೆ. ಮೊದಲ ದಿನವಾದ ಇಂದು ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ.

    ಪೂರಕ ಪರೀಕ್ಷೆಗೆ ಒಟ್ಟು 94,649 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 63,363 ಬಾಲಕರು ಹಾಗೂ 31,283 ಬಾಲಕಿಯರು ಪರೀಕ್ಷೆ ನೋಂದಣಿಯಾಗಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಎಸ್‍ಎಸ್‍ಎಲ್‍ಸಿ ಪ್ರಮುಖ ಪರೀಕ್ಷೆಗೆ ಇದ್ದ ಕೋವಿಡ್ ಮಾರ್ಗಸೂಚಿಗಳೇ ಪೂರಕ ಪರೀಕ್ಷೆಗೆ ಇರಲಿವೆ. ಇದನ್ನೂ ಓದಿ: ಜುಲೈ 1ರಿಂದ ಕಬ್ಬನ್ ಪಾರ್ಕ್‍ನಲ್ಲಿ ನಾಯಿಗಳಿಗೆ ನಿಷೇಧ

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‍ಆರ್‍ಟಿಸಿ ಉಚಿತ ಬಸ್ ಸೇವೆ ನೀಡುತ್ತಿದೆ. ಪರೀಕ್ಷಾ ಕೇಂದ್ರಕ್ಕೆ ಹೋಗುವ ವಿದ್ಯಾರ್ಥಿಗಳು ಎಕ್ಸಾಂ ಪ್ರವೇಶ ಪತ್ರ ತೋರಿಸಿ ಉಚಿತವಾಗಿ ಬಸ್ ನಲ್ಲಿ ಪ್ರಯಾಣ ಮಾಡಬಹುದಾಗಿದೆ. ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಾಗುತ್ತೆ ಅಂತ ಎಸ್‍ಎಸ್‍ಎಲ್ಸಿ ಬೋರ್ಡ್ ತಿಳಿಸಿದೆ.

    Live Tv

  • ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

    ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭ

    ಬೆಂಗಳೂರು: ಕೊರೊನಾ ಮಧ್ಯೆಯೇ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ಇದೀಗ ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಆರಂಭವಾಗಿದೆ.

    ರಾಜ್ಯಾದ್ಯಂತ 2 ಲಕ್ಷದ 12 ಸಾವಿರದ 652 ವಿದ್ಯಾರ್ಥಿಗಳು ಪೂರಕ ಪರೀಕ್ಷೆ ಬರೆಯಲಿದ್ದಾರೆ. ಅದರಲ್ಲಿ 1,29,975 ವಿದ್ಯಾರ್ಥಿಗಳು, 82,677 ವಿದ್ಯಾರ್ಥಿನಿಯರು ಪರೀಕ್ಷೆ ಬರೆಯಲಿದ್ದಾರೆ. ಇಂದಿನಿಂದ ಸೆಪ್ಟೆಂಬರ್ 19ರವರೆಗೂ ಪರೀಕ್ಷೆ ನಡೆಯಲಿದೆ. ಮೊದಲ ದಿನವಾದ ಇಂದು ಉರ್ದು, ಸಂಸ್ಕೃತ ವಿಷಯಗಳ ಪರೀಕ್ಷೆ ನಡೆಯಲಿದೆ.

    ಸುಮಾರು 305 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕೊರೊನಾ ಮಾರ್ಗಸೂಚಿ ಅನ್ವಯದಂತೆಯೇ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಸ್‌ಎಸ್‌ಎಲ್‌ಸಿ, ಸಿಇಟಿ ಪರೀಕ್ಷೆಗೆ ಇದ್ದ ಮಾರ್ಗಸೂಚಿ ಈ ಪರೀಕ್ಷೆಗೂ ಅನ್ವಯ ಆಗಿದೆ. ಪರೀಕ್ಷೆಗೆ ಈಗಾಗಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

    ಪರೀಕ್ಷೆಯಲ್ಲಿನ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದೆ. 305 ಪರೀಕ್ಷಾ ಕೇಂದ್ರಗಳಿಗೂ ವಿಶೇಷ ಜಾಗೃತ ದಳವನ್ನು ನೇಮಕ ಮಾಡಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್‍ಗಳನ್ನು ಸಂಪೂರ್ಣವಾಗಿ ನಿಷೇಧ ಮಾಡಲಾಗಿದೆ. ಅಷ್ಟೇ ಅಲ್ಲದೇ ಪರೀಕ್ಷಾ ಕೇಂದ್ರಗಳಿಗೆ ಅನಧಿಕೃತ ವ್ಯಕ್ತಿಗಳು ಪ್ರವೇಶಿಸುವುದಕ್ಕೂ ನಿರ್ಬಂಧ ಹೇರಲಾಗಿದೆ.

  • ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

    ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಪೂರಕ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಲ್ಲಿ ಶೇಕಡಾ 30.04 ವಿದ್ಯಾರ್ಥಿಗಳು ಉತೀರ್ಣರಾಗಿದ್ದಾರೆ.

    ಜೂನ್ ನಲ್ಲಿ ನಡೆದಿದ್ದ ಪೂರಕ ಪರೀಕ್ಷೆಗೆ 2,31,165 ವಿದ್ಯಾರ್ಥಿಗಳು ಹಾಜರಾಗಿದ್ದರು, ಇದರಲ್ಲಿ 69,148 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪಿಯುಸಿ ವೆಬ್ ಸೈಟ್ ಫಲಿತಾಂಶ ಲಭ್ಯವಿದ್ದು, ನಾಳೆ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.

    ಪೂರಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಯ ಸ್ಕ್ಯಾನ್ ಪತ್ರಿಯನ್ನು ಪಡೆಯಲು ಜುಲೈ 12 ಅಂತಿಮ ದಿನವಾಗಿದ್ದು, ಜುಲೈ 30 ಮರು ಮೌಲ್ಯಮಾಪನ, ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಕೊನೆ ದಿನಾಂಕವಾಗಿದೆ.

    ಫಲಿತಾಂಶ ತಿಳಿಯಲು ಕೆಳಗಿನ ವೆಬ್‍ಸೈಟ್ ಲಿಂಗ್ ಮೇಲೆ ಕ್ಲಿಕ್ ಮಾಡಿ:  http://www.karresults.nic.in

  • ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಗಮನಿಸಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಬದಲಾವಣೆ

    ಬೆಂಗಳೂರು: ಜೂನ್ 8 ರಿಂದ ನಡೆಯಬೇಕಿದ್ದ ಪೂರಕ ಪರೀಕ್ಷೆಗಳ ದಿನಾಂಕ ಬದಲಾವಣೆಯಾಗಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಪಿಯು ಮಂಡಳಿ ತನ್ನ ವೆಬ್‍ಸೈಟ್ ನಲ್ಲಿ ಪ್ರಕಟಿಸಿದೆ.

    ಈ ಕುರಿತು ಪಿಯು ಬೋರ್ಡ್ ನಿರ್ದೇಶಕಿ ಶಿಖಾ ಅವರು ಆದೇಶ ನೀಡಿದ್ದು, ಬೆಂಗಳೂರು ನಗರದ ಜಯನಗರ ಕ್ಷೇತ್ರದ ವಿಧಾನಸಭಾ ಚುನಾವಣೆ ಹಾಗೂ ಪರಿಷತ್ ಚುನಾವಣೆ ಹಿನ್ನೆಲೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

    ಈ ಹಿಂದೆ ಜೂನ್ 8 ರಿಂದ ಪೂರಕ ಪರೀಕ್ಷೆ ದಿನಾಂಕ ನಿಗದಿಯಾಗಿತ್ತು. ಆದರೆ ಚುನಾವಣೆಗಳು ಹಾಗೂ ಎಸ್‍ಎಸ್‍ಎಲ್‍ಸಿ ಪೂರಕ ಪರೀಕ್ಷೆ ಹಿನ್ನೆಲೆಯಲ್ಲಿ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ. ಪರಿಷ್ಕೃತ ವೇಳಾಪಟ್ಟಿಯಂತೆ ಜೂನ್ 29 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಪ್ರಾರಂಭವಾಗಲಿದೆ.

    ವೇಳಾಪಟ್ಟಿಗಾಗಿ ಇಲ್ಲಿ ಕ್ಲಿಕ್ ಮಾಡಿ: http://pue.kar.nic.in/

  • ಪೂರಕ ಪರೀಕ್ಷೆ, ಮರು ಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

    ಪೂರಕ ಪರೀಕ್ಷೆ, ಮರು ಮೌಲ್ಯಮಾಪನದ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ!

    ಬೆಂಗಳೂರು: ಕಳೆದ ಮಾರ್ಚ್-ಏಪ್ರಿಲ್ ನಲ್ಲಿ ನಡೆದ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಇಂದು ಪ್ರಕಟವಾಗಿದೆ.

    ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜಿನೀಶ್ ಫಲಿತಾಂಶ ಪ್ರಕಟ ಮಾಡಿದ್ದು, ಜೂನ್ 21ರಿಂದ 28ವರೆಗೆ ಪೂರಕ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಕೆ ಮೇ 11 ರಿಂದ ಮೇ 21 ಕೊನೆ ದಿನವಾಗಿದ್ದು, ಉತ್ತರ ಪತ್ರಿಕೆ ಫೋಟೋ ಕಾಪಿ ಪಡೆಯಲು ಒಂದು ವಿಷಯಕ್ಕೆ 305 ರೂ. ನೀಡಬೇಕಾಗುತ್ತದೆ.

    ಮರು ಮೌಲ್ಯಮಾಪನಕ್ಕೆ ಒಂದು ವಿಷಯಕ್ಕೆ 705 ರೂ. ಆಗಿದ್ದು, ಆನ್ ಲೈನ್ ಮೂಲಕ ಉತ್ತರ ಪತ್ರಿಕೆ, ಮರು ಮೌಲ್ಯಮಾಪನ ಅರ್ಜಿ ಸಲ್ಲಿಸಬೇಕು. ಮಧ್ಯಾಹ್ನ 1 ಗಂಟೆಯ ನಂತರ ಎಸ್.ಎಸ್.ಎಲ್.ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮೇ 8 ರಂದು ಎಲ್ಲಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟಗೊಳ್ಳಲಿದೆ.

    ಈ ಬಾರಿ ಸುಮಾರು 8 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಫಲಿತಾಂಶ ಲಭ್ಯವಾಗೋ ವೆಬ್ ಸೈಟ್ ಈ ಕೆಳಗಿನಂತಿದೆ.

    http://sslc.kar.nic.in

    http://karresults.nic.in