Tag: ಪೃಥ್ವಿ ಸಿಂಗ್

  • ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

    ಬಿಜೆಪಿ ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದದ್ದು: ಚನ್ನರಾಜ ಹಟ್ಟಿಹೊಳಿ

    ಚಿಕ್ಕೋಡಿ (ಬೆಳಗಾವಿ): ಬಿಜೆಪಿ (BJP) ಕಾರ್ಯಕರ್ತನ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಸ್ವತಃ ಕಾಂಗ್ರೆಸ್ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ (Channaraja Hattiholi) ಸ್ಪಷ್ಟನೆ ನೀಡಿದ್ದಾರೆ.

    ಬೆಳಗಾವಿಯಲ್ಲಿ (Belagavi) ಪಬ್ಲಿಕ್ ಟಿವಿಗೆ ಸ್ಪಷ್ಟನೆ ನೀಡಿರುವ ಅವರು, ಈ ಆರೋಪ ಸತ್ಯಕ್ಕೆ ದೂರವಾಗಿದ್ದಾಗಿದೆ. ಸುಳ್ಳು ಆರೋಪ ಎಂದಿದ್ದಾರೆ. ನಾವು ಹಲ್ಲೆ ಮಾಡುವ ಕೆಲಸಕ್ಕೆ ಕೈ ಹಾಕುವುದಿಲ್ಲ, ಶಿಸ್ತಿನಿಂದ ರಾಜಕೀಯ ಮಾಡುತ್ತೇವೆ. ಈ ಬಗ್ಗೆ ತನಿಖೆ ಆಗಬೇಕು ಸ್ಪಷ್ಟ ಮಾಹಿತಿ ಹೊರಬರಬೇಕು. ಹಲ್ಲೆ ಯಾರು ಮಾಡಿದರೂ ಎನ್ನುವುದರ ಬಗ್ಗೆ ಫಾರೆನ್ಸಿಕ್ ರಿಪೋರ್ಟ್ ಬರಬೇಕಾಗುತ್ತದೆ. ಪೊಲೀಸ್ ಇಲಾಖೆಯಲ್ಲಿ ಈ ಬಗ್ಗೆ ಸಾಕಷ್ಟು ಅನುಮಾನಗಳಿವೆ ಎಂದಿದ್ದಾರೆ.

    ಪೃಥ್ವಿ ಸಿಂಗ್ ಒಬ್ಬ ನಟೋರಿಯಸ್ ಬ್ಲಾಕ್ ಮೇಲ್ ಮನುಷ್ಯ. ಅವನು ಸುಳ್ಳು ಹೇಳುತ್ತಿದ್ದಾನೆ. ನನ್ನ ಆತ್ನೀಯರು ಅವನ ಮನೆಗೆ ಭೇಟಿಗೆ ಹೋಗಿದ್ದು ನಿಜ. ಅವನ ಮನೆಯಲ್ಲಿ ಮೊದಲು ನಮ್ಮ ಕಚೇರಿಯಿತ್ತು. ಆ ರೆಂಟ್ ಅಗ್ರಿಮೆಂಟ್ ವಾಪಸ್ ಕೇಳಲು ನನ್ನ ಆತ್ಮೀಯರು ಹೋಗಿದ್ದರು. ಇದೇ ಸನ್ನಿವೇಶ ಇಟ್ಟುಕೊಂಡು ಆತ ದೃಶ್ಯ ಹೆಣೆದಿದ್ದಾನೆ. ಇದರಲ್ಲಿ ಯಾವುದೇ ರಾಜಕೀಯ ವೈಷಮ್ಯವಿಲ್ಲ. ಅವನಿಗೆ ರಿಕಾರ್ಡಿಂಗ್ ಮಾಡುವ ಹಾಗೂ ವೀಡಿಯೋ ಮಾಡುವ ಚಟ ಇದೆ. ಅವನು ನನಗೆ ಯಾವುದೇ ರೀತಿಯ ಬ್ಲಾಕ್ ಮೇಲ್ ಮಾಡಿಲ್ಲ. ಏನೋ ಮಾಡಲು ಹೋಗಿ ತಾನೇ ಸಿಕ್ಕಾಕಿಕೊಂಡಿದ್ದಾನೆ ಎಂದರು. ಇದನ್ನೂ ಓದಿ: ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ಹೋಗುವುದು ಹೊಸದೇನಲ್ಲ. ಮಾಧ್ಯಮದಲ್ಲಿ ಬಂದಿದ್ದಕ್ಕೆ ಹೋಗಿ ಭೇಟಿ ನೀಡಿದ್ದಾರೆ. ಅವನು ಸುಳ್ಳು ಹೇಳುತ್ತಿದ್ದಾನೆ. ಅವನಿಗೆ ಬೆಂಬಲ ಕೊಡಬೇಡಿ. ತನಿಖೆ ಮಾಹಿತಿ ಬರೋವರೆಗೆ ತಾಳ್ಮೆಯಿಂದ ಇರುವಂತೆ ಬಿಜೆಪಿ ನಾಯಕರಿಗೆ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ.

  • ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಜಾರಕಿಹೊಳಿ ಆಪ್ತನಿಗೆ ಚಾಕು ಇರಿತ – ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರನಿಂದ ಕೃತ್ಯ ಆರೋಪ

    ಬೆಳಗಾವಿ: ಒಂದು ಕಡೆ ಬೆಳಗಾವಿಯಲ್ಲಿ (Belagavi) ಚಳಿಗಾಲದ ಅಧಿವೇಶನ ನಡೆಯುತ್ತಿರುವಾಗಲೇ, ಮತ್ತೊಂದು ಕಡೆ ನೆತ್ತರು ಹರಿದೆ. ಬಿಜೆಪಿ (BJP) ರಾಜ್ಯಕಾರ್ಯಕಾರಣಿ ಸದಸ್ಯ ಪೃಥ್ವಿ ಸಿಂಗ್ (Pruthvi Singh) ಮೇಲೆ ಚಾಕು ಇರಿತವಾಗಿದೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಪರಮಾಪ್ತರಾಗಿರುವ ಪೃಥ್ವಿ ಸಿಂಗ್ ಮೇಲೆ, ಎಂಎಲ್‌ಸಿ, ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಸಹೋದರ ಚನ್ನರಾಜ್ (Channaraj) ಹಟ್ಟಿಹೊಳ್ಳಿ ಆಪ್ತರು ಈ ಮಾರಣಾಂತಿಕ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

    ಸದ್ದಾಂ, ಸುಜಯ್ ಜಾಧವ್ ಮತ್ತು ಚನ್ನರಾಜ್ ಅವರು ಪೃಥ್ವಿ ಸಿಂಗ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಬಂದಿದೆ. ಸಂಜೆ ಪೃಥ್ವಿ ಸಿಂಗ್ ಮನೆಗೆ ಏಕಾಏಕಿ ಬಂದ ಆರೋಪಿಗಳು ಕೆಲಹೊತ್ತು ಮಾತಿನ ಚಕಮಕಿ ನಡೆಸಿದ್ದಾರೆ. ಬಳಿಕ ನೇರವಾಗಿ ಚಾಕುವಿನಿಂದ ಹಲ್ಲೆಗೆ ಮುಂದಾಗಿರುವ ಆರೋಪ ಕೇಳಿಬಂದಿದೆ. ಸದ್ಯ ಪೃಥ್ವಿ ಸಿಂಗ್‌ಗೆ ಕೆಎಲ್‌ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಇದನ್ನೂ ಓದಿ: ಸಿಪಿವೈ ಬಾವ ನಾಪತ್ತೆ ಪ್ರಕರಣ ದುರಂತ ಅಂತ್ಯ – ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ, ಅಂತ್ಯಕ್ರಿಯೆಗೆ ಸಿದ್ಧತೆ

    ಸುದ್ದಿ ತಿಳಿದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಎಂಎಲ್‌ಸಿ ಛಲವಾದಿ ನಾರಾಯಣಸ್ವಾಮಿ, ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ಪೃಥ್ವಿ ಸಿಂಗ್ ಆರೋಗ್ಯ ವಿಚಾರಿಸಿದ್ದಾರೆ. ಬಳಿಕ ಮಾತನಾಡಿದ ಬಿವೈ ವಿಜಯೇಂದ್ರ ಸಿಎಂ, ಡಿಸಿಎಂ ಗೃಹ ಸಚಿವರು ಬೆಳಗಾವಿಯಲ್ಲಿ ಇರುವಾಗಲೇ ಈ ರೀತಿ ಘಟನೆ ನಡೆದಿದೆ. ಇದನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೆವೆ. ಘಟನೆ ನಡೆಯುವಾಗ ಲಕ್ಷ್ಮಿ ಹೆಬ್ಬಾಳ್ಕರ್ ಸಹೋದರ ಹಾಗೂ ಎಂಎಲ್‌ಸಿ ಚನ್ನರಾಜ್ ಸ್ಥಳದಲ್ಲಿ ಇರುವ ಮಾಹಿತಿಯಿದೆ. ಇಂದು ರಾತ್ರಿಯೇ ಆರೋಪಿಗಳ ಬಂಧನವಾಗಬೇಕು ಇಲ್ಲದಿದ್ದರೆ ಬಿಜೆಪಿ ಕಾರ್ಯಕರ್ತರು ರಸ್ತೆಗಿಳಿಯುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮದುವೆಗೆ ಹೋಗಿ ಬರುತ್ತಿದ್ದವರ ಕಾರು ಅಪಘಾತ – ಇಬ್ಬರು ಸಾವು, ಐವರು ಗಂಭೀರ

    ಘಟನೆ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಪ್ರತಿಕ್ರಿಯೆ ನೀಡಿದ್ದು, ನಾನು ನನ್ನ ಸಹೋದರನ ಜೊತೆಗೆ ಮಾತನಾಡಿ ಘಟನೆ ಬಗ್ಗೆ ಮಾಹಿತಿ ಪಡೆದಿದ್ದೇನೆ. ಈ ಬಗ್ಗೆ ಸತ್ಯಾಸತ್ಯತೆ ಗೊತ್ತಾಗಬೇಕು. ಇದರ ಹಿಂದೆ ಯಾರು ಇದ್ದಾರೆ? ಇದು ಷಡ್ಯಂತ್ರವೋ, ರಾಜಕೀಯ ಪ್ರೇರಿತವೋ ಎಂದು ಗೊತ್ತಾಗಬೇಕು. ಈ ಬಗ್ಗೆ ಪೃಥ್ವಿ ಸಿಂಗ್ ದೂರು ನೀಡಲಿ. ಪೊಲೀಸರು ಆರೋಪಿಗಳನ್ನು ಬಂಧನ ಮಾಡುತ್ತಾರೆ ಎಂದರು. ಇನ್ನೊಂದೆಡೆ ಹಲ್ಲೆ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವ ಪರಮೇಶ್ವರ್, ಏನೇ ಇದ್ದರೂ ನಮ್ಮ ಪೊಲೀಸರು ನೋಡಿಕೊಳ್ಳುತ್ತಾರೆ. ಯಾರೇ ಭಾಗಿಯಾಗಿದ್ದರೂ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ ಟೆಕೆಟ್‌ಗಾಗಿ ಕೋಟಿ ಡೀಲ್‌ – ಚೈತ್ರಾಗೆ ಜಾಮೀನು ಮಂಜೂರು

    ಒಟ್ಟಿನಲ್ಲಿ ಅಧಿವೇಶನ ನಡೆಯುವಾಗಲೇ ಇಂತಹ ಪ್ರಕರಣ ನಡೆದಿದ್ದು, ಆಡಳಿತ ಸರ್ಕಾರಕ್ಕೆ ಮುಜುಗರ ತಂದಿದೆ. ಮತ್ತೊಂದು ಕಡೆ ಬಿಜೆಪಿ ಇದರ ವಿರುದ್ಧ ಯಾವೆಲ್ಲ ರೀತಿ ಹೋರಾಟ ಮಾಡಲಿದೆ ಎಂದು ಕಾದು ನೋಡಬೇಕಿದೆ. ಇದನ್ನೂ ಓದಿ: ತನ್ನ ಪ್ರಾಣ ತ್ಯಾಗ ಮಾಡಿ ಹಲವರ ಜೀವ ಉಳಿಸಿದ ಅರ್ಜುನ – ನಡೆದಿದ್ದೇನು?