Tag: ಪೆಂಟಗನ್

  • ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

    ಬಾಂಬ್‌ ದಾಳಿ ನಡೆದಿರೋದು ಸ್ಪಷ್ಟ – ನಮ್ಮಲ್ಲೇನು ಆಗೇ ಇಲ್ಲ ಎನ್ನುತ್ತಿದ್ದ ಇರಾನ್‌ಗೆ ವಿಡಿಯೋ ಸಮೇತ ಅಮೆರಿಕ ತಿರುಗೇಟು

    ವಾಷಿಂಗ್ಟನ್‌: ಅಮೆರಿಕದ ಬಾಂಬ್‌ ದಾಳಿಯಿಂದ (America Strikes In Iran) ನಮ್ಮಲ್ಲಿ ಅಂಥದ್ದೇನೂ ಹಾನಿಯಾಗಿಲ್ಲ ಎಂದಿದ್ದ ಇರಾನ್‌ಗೆ ಅಮೆರಿಕ ಈಗ ವಿಡಿಯೋ ಸಮೇತ ತಿರುಗೇಟು ಕೊಟ್ಟಿದೆ.

    ಇರಾನ್‌ನ ಅಣುಸ್ಥಾವರದ ಮೇಲೆ ಮಾಡಿರುವ ಬಿ2 ಬಾಂಬರ್‌ಗಳ (B2 Bomber) ಮಿಡ್‌ನೈಟ್ ಹ್ಯಾಮರ್ ದಾಳಿಯ ಹೊಸ ವಿಡಿಯೋವನ್ನು ಪೆಂಟಗನ್‌ (Pentagon) (ಅಮೆರಿಕ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿ) ಅಮೆರಿಕ ಬಿಡುಗಡೆ ಮಾಡಿದೆ. ಈ ವಿಡಿಯೋನಲ್ಲಿ ಅಮೆರಿಕವು ವಿಶ್ವದ ಶಕ್ತಿಶಾಲಿ ವೆಪೆನ್‌ ʻಬಂಕರ್‌ ಬಸ್ಟರ್‌ʼ ಬಳಸಿ ದಾಳಿ ನಡೆಸಿರುವುದು ಸ್ಪಷ್ಟವಾಗಿದೆ. ಇದನ್ನೂ ಓದಿ: ವಿಶ್ವದ ಪವರ್‌ಫುಲ್‌ ವೆಪೆನ್‌ ʻಬಂಕರ್‌ ಬಸ್ಟರ್‌ʼ – 14,000 ಕೆಜಿ ತೂಕದ ಬಾಂಬ್‌ ಬಳಸಿ ಇರಾನ್‌ ಪರಮಾಣು ಕೇಂದ್ರದ ಮೇಲೆ ಅಮೆರಿಕ ದಾಳಿ

    ಪೆಂಟಗನ್‌ನ ರಕ್ಷಣಾ ಕಾರ್ಯದರ್ಶಿ ಪೀಟ್ ಹೆಗ್ಸೆತ್ ಮತ್ತು ಲೆಫ್ಟಿನೆಂಟ್ ಜನರಲ್ ಡ್ಯಾನ್ ಕೈನ್ ಅಮೆರಿಕದ ಬಿ2 ಬಾಂಬರ್‌ಗಳು ಹೇಗೆ ದಾಳಿ ನಡೆಸಿವೆ ಎಂಬುದನ್ನು ಇಂಚಿಂಚಾಗಿ ವಿವರಿಸಿದ್ರು. ಒಂದೊಂದೇ ದೃಶ್ಯಗಳನ್ನು ಬಿಡುಗಡೆ ಮಾಡುತ್ತಾ.. ಸಾಮಾನ್ಯ ಬಾಂಬ್‌ಗಳಿಗಿಂತ ʻಬಂಕರ್‌ ಬಸ್ಟರ್‌ʼ ಎಷ್ಟು ವಿಭಿನ್ನ? ಇದರ ಹಾನಿ ಪ್ರಮಾಣ ಹೇಗಿರುತ್ತೆ? ಭೂಮಿಯನ್ನು ಸೀಳಿಕೊಂಡು ಪರಮಾಣು ಕೇಂದ್ರವನ್ನು ಧ್ವಂಸಗೊಳಿಸಿದ್ದು ಹೇಗೆ? ಎಂಬೆಲ್ಲ ಮಾಹಿತಿಗಳನ್ನ ವಿವರಿಸಿದ್ದಾರೆ.  ಇದನ್ನೂ ಓದಿ: ಇರಾನ್‌ನ ಮೂರು ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಬಾಂಬ್‌ ದಾಳಿ

    ನೆಲದಡಿಯಿಂದ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿರುವ ಫೋರ್ಡೋ ಪರಮಾಣು ಘಟಕವನ್ನು ಅಮೆರಿಕ ಬಿ2 ಬಾಂಬರ್‌ ಧ್ವಂಸಗೊಳಿಸಿರುವುದು, ಅದರ ಭೀಕರತೆ ಹೇಗಿತ್ತು? ಎಂಬುದನ್ನು ವಿಡಿಯೋ ಬಿಚ್ಚಿಟ್ಟಿದೆ.  ಇದನ್ನೂ ಓದಿ: ಅಮೆರಿಕ ಬಳಿಕ ಇರಾನ್‌ನ ಶಕ್ತಿಶಾಲಿ ಫೋರ್ಡೋ ಪರಮಾಣು ಘಟಕದ ಮೇಲೆ ಇಸ್ರೇಲ್‌ ದಾಳಿ

    ಅಮೆರಿಕ ದಾಳಿ ಎಷ್ಟು ಭೀಕರ?
    ಇರಾನ್‌ನ ಫೋರ್ಡೊ, ನಟಾಂಜ್ ಮತ್ತು ಇಸ್ಪಹಾನ್ ಪರಮಾಣು ಕೇಂದ್ರಗಳ ಮೇಲೆ ಅಮೆರಿಕ ಯಶಸ್ವಿ ಬಾಂಬ್ ದಾಳಿ ನಡೆಸಿತ್ತು. ಅಮೆರಿಕವು 6 ಶಕ್ತಿಶಾಲಿ Northrop B-2 Spirit ಯುದ್ಧವಿಮಾನ ಬಳಸಿಕೊಂಡು ಡಜನ್‌ಗಟ್ಟಲೇ ಜಿಬಿಯು -57 ಎ/ಬಿ ಬೃಹತ್ ಆರ್ಡ್‌ನೆನ್ಸ್ ಪೆನೆಟ್ರೇಟರ್ (MOP) ಬಾಂಬ್‌ಗಳನ್ನ ಬಳಸಿ ದಾಳಿ ನಡೆಸಿತ್ತು. ಇದನ್ನ ʻಬಂಕರ್‌ ಬಸ್ಟರ್‌ʼ ಎಂದೂ ಕರೆಯಲಾಗುತ್ತದೆ. ಈ ʻಬಂಕರ್‌ ಬಸ್ಟರ್‌ʼ ಇರಾನ್‌ ರಾಜಧಾನಿ ಟೆಹ್ರಾನ್‌ನಿಂದ 100 ಕಿಮೀ ದೂರದಲ್ಲಿರುವ ಫೋರ್ಡೋ ಘಟಕದ ಮೇಲೆ ದಾಳಿ ಮಾಡಿದ್ರೆ, ಜಲಾಂತರ್ಗಾಮಿ ನೌಕೆಗಳಿಂದ ಹಾರಿಸಲಾದ 30 ಟೊಮಾಹಾಕ್ ಕ್ಷಿಪಣಿಗಳು (ಕ್ರೂಸ್‌ ಕ್ಷಿಪಣಿ) ಉಳಿದ 2 ಅಣು ಕೇಂದ್ರಗಳ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದವು.

    ಫೋರ್ಡೋ ಅಣು ಕೇಂದ್ರ ಎಷ್ಟು ಸೇಫ್‌?
    ಫೋರ್ಡೋ ಪರಮಾಣು ಘಟಕದ ಮುಖ್ಯ ಸಭಾಂಗಣವು ನೆಲದಡಿಯಲ್ಲಿ ಸುಮಾರು 80 ರಿಂದ 90 ಮೀಟರ್ (295 ಅಡಿ) ಆಳದಲ್ಲಿದೆ. ಇಷ್ಟು ಅಡಿ ಆಳದಲ್ಲಿರುವ ಈ ಘಟಕವನ್ನು ಇಸ್ರೇಲ್ ಹೊಂದಿರುವ ಯಾವುದೇ ವೈಮಾನಿಕ ಬಾಂಬ್‌ನಿಂದ ಧ್ವಂಸ ಮಾಡಲು ಸಾಧ್ಯವಿಲ್ಲ. ಹೀಗಾಗಿಯೇ ವಿಶ್ವದಲ್ಲೇ ಅತಿಹೆಚ್ಚು ಪವರ್‌ಫುಲ್‌ ಆಗಿರುವ ಸ್ವದೇಶಿ ನಿರ್ಮಿತ GBU-57A/B Massive Ordinance Penetrator ಬಾಂಬ್‌ನಿಂದ ಅಮೆರಿಕ ದಾಳಿ ನಡೆಸಿದೆ.

    ಇನ್ನೂ ಇಸ್ರೇಲ್-ಇರಾನ್ ಮಧ್ಯೆ ಕದನ ವಿರಾಮ ಘೋಷಣೆಯಾಗಿದ್ದರೂ, ಇರಾನ್ ಸಿಟ್ಟು ಕಡಿಮೆಯಾಗಿಲ್ಲ. ಇರಾನ್ ಪರಮೋಚ್ಛ ನಾಯಕ ಖಮೇನಿ ಮತ್ತೆ ಅಮೆರಿಕ ವಿರುದ್ಧ ಕೆಂಡಕಾರಿದ್ದಾರೆ. ಇಸ್ರೇಲ್ ಸೋಲುವ ಭೀತಿಯಿಂದಲೇ ಅಮೆರಿಕ ಎಂಟ್ರಿ ಕೊಟ್ಟಿದೆ. ಈ ಯುದ್ಧದಿಂದ ಅಮೆರಿಕ ಸಾಧಿಸಿದ್ದೇನೂ ಇಲ್ಲ. ನಾವು ಅಮೆರಿಕಕ್ಕೆ ಶರಣಾಗತಿಯಾಗೋ ಪ್ರಶ್ನೆಯೇ ಇಲ್ಲವೆಂದು ಸ್ಪಷ್ಟಪಡಿಸಿದ್ದಾರೆ.

    ಇನ್ನು ಇಸ್ರೇಲ್ ಜೊತೆಗಿನ ಕದನ ವಿರಾಮ ಬಳಿಕ ಇರಾನ್ ತನ್ನ ವಾಯುಪ್ರದೇಶವನ್ನು ಮತ್ತೆ ಸಂಚಾರಕ್ಕೆ ಮುಕ್ತಗೊಳಿಸಿದೆ. ಜೂನ್ 12ರಿಂದಲೂ ಇರಾನ್ ವಾಯುಪ್ರದೇಶ ಮುಚ್ಚಿತ್ತು.. ಅಂತಾರಾಷ್ಟ್ರೀಯ, ದೇಶೀಯ ವಿಮಾನಗಳಿಗೆ ಏರ್‌ಸ್ಪೇಸ್ ಓಪನ್ ಮಾಡಲಾಗಿದೆ ಎಂದು ಇರಾನ್ ತಿಳಿಸಿದೆ.

    ಸಂಘರ್ಷಪೀಡಿತ ಇರಾನ್‌ನಲ್ಲಿ ಸಿಲುಕಿದ್ದ ಒಟ್ಟು 3,154 ಭಾರತೀಯ ಪ್ರಜೆಗಳನ್ನು ಆಪರೇಷನ್ ಸಿಂಧು ಕಾರ್ಯಾಚರಣೆಯಡಿ ಕರೆತರಲಾಗಿದೆ. 296 ಭಾರತೀಯರು ಮತ್ತು ನಾಲ್ವರು ನೇಪಾಳಿ ಪ್ರಜೆಗಳನ್ನು ಹೊತ್ತ ವಿಮಾನ ನಿನ್ನೆ ದೆಹಲಿಗೆ ಮರಳಿತ್ತು. ಇದರೊಂದಿಗೆ ಆಪರೇಷನ್ ಸಿಂಧು ಅಡಿಯಲ್ಲಿ ಸ್ಥಳಾಂತರಿಸಲಾದ ಒಟ್ಟು ಭಾರತೀಯರ ಸಂಖ್ಯೆ 3,154ಕ್ಕೆ ತಲುಪಿದೆ.

  • ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ಚುನಾವಣೆ, ಐಪಿಎಲ್ ಹಾವಳಿ ನಡುವೆ ‘ವೀರಂ’ ಜೊತೆ ‘ಪೆಂಟಗನ್’ ರಿಲೀಸ್

    ರಾಜ್ಯದ ಜನತೆ ಚುನಾವಣೆ ಹಾಗೂ ಐಪಿಎಲ್ ಪಂದ್ಯಾವಳಿಯಲ್ಲಿ ಮುಳುಗಿ ಹೋಗಿರುವ ಸಂದರ್ಭದಲ್ಲಿ ಕನ್ನಡದ ಎರಡು ಮಹತ್ವದ ಚಿತ್ರಗಳು ಇಂದು ಬಿಡುಗಡೆ ಆಗುತ್ತಿವೆ. ತಮ್ಮದೇ ಆದ ಕಾರಣಗಳಿಂದಾಗಿ ಈ ಚಿತ್ರಗಳು ನಿರೀಕ್ಷೆ ಮೂಡಿಸಿವೆ. ಆದರೆ, ಪ್ರೇಕ್ಷಕ ಈ ಸಿನಿಮಾಗಳನ್ನು ಯಾವ ರೀತಿಯಲ್ಲಿ ಸ್ವೀಕರಿಸುತ್ತಾನೆ ಎನ್ನುವುದನ್ನು ಕಾದು ನೋಡಬೇಕಿದೆ.

    ವೀರಂ

    ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್ ಮೂಲಕ  ಕೆ.ಎಂ. ಶಶಿಧರ್ ಅವರು ನಿರ್ಮಿಸಿರುವ  ಫ್ಯಾಮಿಲಿ ಎಮೋಷನ್  ಜೊತೆಗೆ ಲವ್,  ಆಕ್ಷನ್, ಥ್ರಿಲ್ಲರ್ ಡ್ರಾಮಾ ಕಥಾಹಂದರ ಹೊಂದಿರುವ ಚಿತ್ರ ವೀರಂ‌ (Veeram) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಟ್ರೈಲರ್, ಹಾಡುಗಳ ಮೂಲಕ ದೊಡ್ಡ ಮಟ್ಟದ ಕುತೂಹಲ ಹುಟ್ಟುಹಾಕಿರುವ  ಈ ಚಿತ್ರಕ್ಕೆ ಖದರ್ ಕುಮಾರ್ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್ ಕಟ್ ಹೇಳಿದ್ದಾರೆ. ಒಂದು ಕುಟುಂಬಕ್ಕೆ ತೊಂದರೆ ಬಂದಾಗ ಎಲ್ಲರೂ ಹೇಗೆ ಜೊತೆಗೆ ನಿಲ್ತಾರೆ ಎನ್ನುವುದು ಚಿತ್ರದ ಕಥೆ.

    ಈ ಚಿತ್ರದಲ್ಲಿ ಪ್ರಜ್ವಲ್ ದೇವರಾಜ್ (Rachita Ram) ಹಾಗೂ ನಟಿ  ಶೃತಿ, ಅಕ್ಕ ತಮ್ಮನಾಗಿ ಅಲ್ಲದೆ  ಶ್ರೀನಗರ ಕಿಟ್ಟಿ ಅಣ್ಣನಾಗಿಯೂ ಕಾಣಿಸಿಕೊಂಡಿದ್ದಾರೆ. ರಚಿತಾರಾಮ್, ಶಿಶ್ಯ ದೀಪಕ್, ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಉಳಿದ ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ: ರಿಲಯನ್ಸ್ ಜ್ಯುವೆಲ್ಸ್‌ಗಾಗಿ ಬೆಂಗಳೂರಿಗೆ ಬಂದ ಜಾನ್ವಿ ಕಪೂರ್

    5 ವಿಭಿನ್ನ ಕಥೆಗಳ ಪೆಂಟಗನ್

    ಐದು ಬೇರೆ ಬೇರೆ ಜಾನರ್ ಕಥೆಗಳನ್ನು ಇಟ್ಟುಕೊಂಡು ಮಾಡಿರುವ  ಅಂಥಾಲಜಿ ಸಿನಿಮಾ ಪೆಂಟಗನ್ (Pentagon) ರಾಜ್ಯಾದ್ಯಂತ ತೆರೆಕಾಣುತ್ತಿದೆ. ಈ ಚಿತ್ರವನ್ನು ನಿರ್ದೇಶಕ ಕಮ್ ನಿರ್ಮಾಪಕ ಗುರು ದೇಶಪಾಂಡೆ ಅವರು ತಮ್ಮ ಜಿ.ಅಕಾಡೆಮಿ ಅಡಿಯಲ್ಲಿ ನಿರ್ಮಿಸಿದ್ದು,  ಚಿತ್ರದ 5 ಕಥೆಗಳಿಗೆ ಆಕಾಶ್ ಶ್ರೀವತ್ಸ, ಚಂದ್ರಮೋಹನ್, ರಾಘು ಶಿವಮೊಗ್ಗ, ಕಿರಣ್ ಕುಮಾರ್ ಹಾಗೂ ಗುರು ದೇಶಪಾಂಡೆ  ಆ್ಯಕ್ಷನ್-ಕಟ್ ಹೇಳಿದ್ದಾರೆ.

    ಚಿತ್ರದಲ್ಲಿ ಬರುವ ಡೆತ್ ಥೀಮ್ 5 ಕಥೆಗಳಲ್ಲೂ ಕಾಮನ್ ಆಗಿದ್ದು, ಈ ಐದೂ ಕತೆಗಳ ಕೊನೆಯಲ್ಲಿ ಕಾಗೆಯೊಂದು ಕತೆಗಳಿಗೆ ಲಿಂಕ್ ಮಾಡುತ್ತ ಹೋಗುತ್ತದೆ. ಮಣಿಕಾಂತ್ ಕದ್ರಿ ಅವರ ಸಂಗೀತ, ಕಿರಣ್ ಹಂಪಾಪುರ, ಅಭಿಲಾಶ್ ಕಲ್ಲತ್ತಿ, ಗುರುಪ್ರಸಾದ್ ಅವರ ಛಾಯಾಗ್ರಹಣ, ವೆಂಕಟೇಶ್ ಯುವಿಡಿ ಅವರ ಸಂಕಲನ ಚಿತ್ರಕ್ಕಿದೆ.

    ಈ ಚಿತ್ರದಲ್ಲಿ ಹಿರಿಯನಟ ಪ್ರಕಾಶ್ ಬೆಳವಾಡಿ, ಪ್ರಮೋದ್ ಶೆಟ್ಟಿ, ಕೃತಿಕಾ ದೇಶಪಾಂಡೆ, ರವಿಶಂಕರ್, ಅನುಷಾ ರೈ, ವಂಶಿಕೃಷ್ಣ, ಅಪೂರ್ವ, ತನಿಶಾ, ಪ್ರೇರಣಾ ಕಂಬಂ, ಕಿರಣ್ ನಾಯಕ್, ಕಿಶೋರ್, ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ, ಅಶ್ವಿನಿ, ನಟ ಪೃಥ್ವಿ ಅಂಬರ್, ಬಿರಾದಾರ್ ಹಾಗೂ ಬಾಲನಟಿ ಆರಾಧ್ಯ ಹಾಗೂ ಇತರರು ಅಭಿನಯಿಸಿದ್ದಾರೆ.

  • Exclusive: ನೀಲಿ ಚಿತ್ರದಲ್ಲಿ ಆಕ್ಟ್‌ ಮಾಡ್ತೀಯಾ ಎಂದು ಕೇಳಿದ್ರಾ ಹರ್ಷ? ಸ್ಪಷ್ಟನೆ ನೀಡಿದ ನಟ

    Exclusive: ನೀಲಿ ಚಿತ್ರದಲ್ಲಿ ಆಕ್ಟ್‌ ಮಾಡ್ತೀಯಾ ಎಂದು ಕೇಳಿದ್ರಾ ಹರ್ಷ? ಸ್ಪಷ್ಟನೆ ನೀಡಿದ ನಟ

    ನ್ನಡದ ‘ಪೆಂಟಗನ್’ (Pentagon) ಚಿತ್ರದ ನಟಿ ತನಿಷಾ ಕುಪ್ಪಂಡ (Tanisha Kuppanda)  ಕಳೆದೆರೆಡು ದಿನಗಳಿಂದ ಸುದ್ದಿಯಲ್ಲಿದ್ದಾರೆ. ಯುಟ್ಯೂಬರ್‌ಯೊಬ್ಬ ಬ್ಲೂಫಿಲ್ಮ್ ಮಾಡ್ತೀರಾ ಎಂದು ಕೇಳಿದ್ದಕ್ಕೆ ನಟಿ ಖಡಕ್ ಕ್ಲಾಸ್ ತೆಗೆದುಕೊಂಡಿದ್ದರು. ಬಳಿಕ ‘ರಾಜಹುಲಿ’ (Rajahuli) ನಟ ಹರ್ಷ (Harsha) ವಿರುದ್ಧ ತನಿಷಾ ಆರೋಪಿಸಿದ್ದರು. ಅಸಭ್ಯ ಸಂದೇಶ ಕಳುಹಿಸಿದ್ದಾರೆ ಎಂದು ಮಾಧ್ಯಮದ ಮುಂದೆ ಕಣ್ಣೀರಿಟ್ಟಿದ್ದರು. ತನಿಷಾ ಮಾಡಿರುವ ಆರೋಪಕ್ಕೆ ಪಬ್ಲಿಕ್ ಟಿವಿ ಡಿಜಿಟಲ್‌ಗೆ ನಟ ಹರ್ಷ ಸ್ಪಷ್ಟನೆ ನೀಡಿದ್ದಾರೆ.

    ‘ಮಂಗಳ ಗೌರಿ’ ಸೇರಿದಂತೆ ಹಲವು ಸೀರಿಯಲ್‌ಗಳಲ್ಲಿ ನಟಿಸಿರುವ ತನಿಷಾ ಕುಪ್ಪಂಡ ಸದ್ಯ ‘ಪೆಂಟಗನ್’ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದಾರೆ. ಇತ್ತೀಚಿಗೆ ನೀಡಿದ ಸಂದರ್ಶನವೊಂದರಲ್ಲಿ, ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದರು. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ತನಿಷಾ ಖಡಕ್ ಉತ್ತರ ನೀಡಿದ್ದರು. ಇದನ್ನೂ ಓದಿ: ಕಿಸ್ಸಿಂಗ್ ಪ್ರಕರಣ: 16 ವರ್ಷಗಳ ನಂತರ ಶಿಲ್ಪಾ ಶೆಟ್ಟಿಗೆ ಬಿಗ್ ರಿಲೀಫ್

    ನಟ ಹರ್ಷ ಕೂಡ ನೀಲಿ ಸಿನಿಮಾ ಮಾಡ್ತೀರಾ ಎಂದು ಕೇಳಿದ್ದರು. ಅಸಭ್ಯ ಸಂದೇಶ ಕಳುಹಿಸಿದ್ದಾರೆ ಎಂದು ತನಿಷಾ ಆರೋಪಿಸಿದರು. ಈ ಬೆನ್ನಲ್ಲೇ ನಟ ಹರ್ಷ ಕೂಡ ತನಿಷಾ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ್ತು ತನಿಷಾ ಒಳ್ಳೆಯ ಸ್ನೇಹಿತರು. ನೀಲಿ ಚಿತ್ರದ ಬಗ್ಗೆ ಕೇಳಿದ್ದ ಯುಟ್ಯೂಬರ್ ವೈರಲ್ ವೀಡಿಯೋಗೆ ಪ್ರತಿಕ್ರಿಯಿಸಿ, ನಾನು ಸಂದೇಶ ಕಳಿಸಿದ್ದೇ ನಿಜ. ಆದರೆ ಯಾವುದೇ ಕೆಟ್ಟ ಆಲೋಚನೆಯಿಂದ ಅಲ್ಲ. ಬ್ಲೂಫಿಲ್ಮ್ ಮಾಡ್ತೀರಾ ಎಂದು ಆ ಯುಟ್ಯೂಬರ್ ಹೀಗ್ಯಾಕೆ ಕೇಳಿದ್ದರು ಎಂದು ಪ್ರಶ್ನೆ ಮಾಡುವ ರೀತಿಯಲ್ಲಿ ನಗುವಿನ ಇಮೋಜಿ ಕಳುಹಿಸಿದೆ ಅಷ್ಟೇ. ಆ ಸಂದೇಶವೇ ಈ ಗೊಂದಲಕ್ಕೆ ಕಾರಣವಾಗಿದೆ. ಅನ್ಯತಾ ಭಾವಿಸಬಾರದು ಎಂದು ಮತ್ತೆ ವಾಯ್ಸ್ ನೋಟ್ ಕಳುಹಿಸಿದ್ದೀನಿ. ಯುಟ್ಯೂಬರ್ ಯಾಕೆ ಹೀಗೆ ಪ್ರಶ್ನೆ ಮಾಡಿದ್ದರು ಎಂದು ಕೇಳಿದ್ದೀನಿ. ಅದು ಬಿಟ್ಟು ನೀಲಿ ಸಿನಿಮಾದಲ್ಲಿ ಆಕ್ಟ್ ಮಾಡ್ತೀರಾ ಎಂದು ನಾನು ಪ್ರಶ್ನೆ ಮಾಡಿಲ್ಲ. ಎಲ್ಲವೂ ನಾವು ಅರ್ಥ ಮಾಡಿಕೊಳ್ಳುವ ದೃಷ್ಟಿಕೋನದಲ್ಲಿದೆ ಎಂದು ನಟ ಹರ್ಷ ಸ್ಪಷ್ಟನೆ ನೀಡಿದ್ದಾರೆ.

    ಇನ್ನೂ ತನಿಷಾ ಅವರನ್ನು ಕೆಟ್ಟ ಆಲೋಚನೆಯಿಂದ ನಾನು ಸಂದೇಶ ಕಳುಹಿಸಿಲ್ಲ. ಇದೀಗ ಅವರ ಸಿನಿಮಾ ರಿಲೀಸ್‌ಗೆ ರೆಡಿಯಿದೆ. ಪ್ರಚಾರಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ತನಿಷಾ ಅವರ ನಡೆ ಎಷ್ಟು ಸರಿ ಎಂದು ಹರ್ಷ ಪ್ರಶ್ನೆ ಮಾಡಿದ್ದಾರೆ. ನಟಿಯಾಗಿ ಬೋಲ್ಡ್ ಸಿನಿಮಾದಲ್ಲಿ ನಟಿಸಿದ ಮೇಲೆ ಬೋಲ್ಡ್ ಪ್ರಶ್ನೆಗಳನ್ನ ಕೂಡ ಎದುರಿಸಲು ರೆಡಿಯಾಗಿಬೇಕು ಎಂದು ಹರ್ಷ ಮಾತನಾಡಿದ್ದಾರೆ.

    ಶೃತಿ ರಿಪ್ಪನ್‌ಪೇಟೆ, ಪಬ್ಲಿಕ್‌ ಟಿವಿ ಡಿಜಿಟಲ್‌ 

  • ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಬ್ಲೂಫಿಲ್ಮ್ ಮಾಡ್ತೀಯಾ ಅಂತ ಕೇಳಿದ ‘ಆ’ ನಟ: ಪೆಂಟಗನ್ ನಟಿಯ ಕಣ್ಣೀರು

    ಕಿರುತೆರೆ ಮತ್ತು ಹಿರಿತೆರೆ ನಟಿ ತನಿಷಾ ಕುಪ್ಪಂಡ (Tanisha Kuppanda) ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ಬೋಲ್ಡ್ ಆಗಿ ನಟಿಸಿರುವ ಈ ನಟಿಗೆ ಅನೇಕ ರೀತಿಯಲ್ಲಿ ಕಿರುಕುಳ ಆಗಿದೆಯಂತೆ. ಮೊನ್ನೆಯಷ್ಟೇ ಯುಟ್ಯೂಬರ್ ಒಬ್ಬನ ಮೇಲೆ ಆರೋಪ ಮಾಡಿದ್ದ ತನಿಷಾ ನಿನ್ನೆ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಸೂಪರ್ ಹಿಟ್ ಸಿನಿಮಾದ ನಟನೊಬ್ಬನ ಮೇಲೆ ಗುರುತರ ಆರೋಪ ಮಾಡಿದ್ದಾರೆ.

    ಪೆಂಟಗನ್ (Pentagon) ಸಿನಿಮಾದ ಒಂದು ಕಥೆಯಲ್ಲಿ ತನಿಷಾ ಬೋಲ್ಡ್ ಆಗಿರುವಂಥ ಪಾತ್ರವನ್ನು ನಿರ್ವಹಿಸಿದ್ದಾರೆ. ಅದು ಡೇಟಿಂಗ್ ಆಪ್ ಕುರಿತಾದ ಕಥೆಯಾಗಿದ್ದರಿಂದ, ಪಾತ್ರವೇ ಡಿಮಾಂಡ್ ಮಾಡಿದ್ದರಿಂದ ಅಂಥದ್ದೊಂದು ಪಾತ್ರವನ್ನು ನಿರ್ವಹಿಸಿದ್ದೇನೆ ಎನ್ನುತ್ತಾರೆ. ಆದರೆ, ರಾಜಾಹುಲಿ ಅಂತಹ ಹಿಟ್ ಸಿನಿಮಾದಲ್ಲಿ ಯಶ್ ಗೆಳೆಯನ ಪಾತ್ರ ಮಾಡಿದ್ದ ನಟನೊಬ್ಬ ತನಿಷಾಗೆ ಬ್ಲೂಫಿಲ್ಮ್ ಮಾಡ್ತೀಯಾ ಎಂದು ಸೋಷಿಯಲ್ ಮೀಡಿಯಾ ಮೂಲಕ ಪ್ರಶ್ನೆ ಮಾಡಿದ್ದಾರಂತೆ. ಆ ನಟನ ಬಗ್ಗೆ ಮಾತನಾಡಿದ ತನಿಷಾ ಪತ್ರಿಕಾಗೋಷ್ಠಿಯಲ್ಲೇ ಕಣ್ಣೀರಿಟ್ಟಿದ್ದಾರೆ.

    ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿವೆ. ಕನ್ನಡದ ಪ್ರೇಮ, ಸಾಮಾಜಿಕ ಸಂದೇಶ ಹಾಗೂ ಮನರಂಜನೆ ನೀಡುವಂತಹ ಎಲ್ಲ ಅಂಶಗಳು ಇದ್ದರೂ, ಕೇವಲ ಒಂದೇ ಒಂದು ಕಥೆಯ ಬಗ್ಗೆ ಈ ರೀತಿ ಮಾತನಾಡುವುದು ಸರಿ ಅಲ್ಲ ಎನ್ನುವುದು ತನಿಷಾ ಮಾತು. ಐದು ಪ್ರತಿಭಾವಂತ ನಿರ್ದೇಶಕರು ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಅವರು ನನ್ನಿಂದ ಕೆಟ್ಟ ರೀತಿಯಲ್ಲಿ ಪಾತ್ರ ಮಾಡಲು ಸಾಧ್ಯವಾ ಎನ್ನುವುದು ಅವರ ಪ್ರಶ್ನೆ. ಇದನ್ನೂ ಓದಿ: ನಟಿ ನಗ್ಮಾ ಜೊತೆಗೆ ಯಾವುದೇ ಸಂಬಂಧ ಹೊಂದಿಲ್ಲ : ನಟ ರವಿಕಿಶನ್

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

  • ಪೆಂಟಗನ್ ನಲ್ಲಿ ತನಿಷಾ ಬೋಲ್ಡ್ : ನೆಗೆಟಿವ್ ಕಾಮೆಂಟ್ ಕೇರ್ ಮಾಡಲ್ಲ ಎಂದ ನಟಿ

    ಪೆಂಟಗನ್ ನಲ್ಲಿ ತನಿಷಾ ಬೋಲ್ಡ್ : ನೆಗೆಟಿವ್ ಕಾಮೆಂಟ್ ಕೇರ್ ಮಾಡಲ್ಲ ಎಂದ ನಟಿ

    ಗುರು ದೇಶಪಾಂಡೆ ಸಾರಥ್ಯದಲ್ಲಿ ಮೂಡಿ ಬಂದಿರುವ ಪೆಂಟಗನ್ ಸಿನಿಮಾದ ಒಂದು ಕಥೆಯಲ್ಲಿ ನಟಿ ತನಿಷಾ ಕುಪ್ಪಂಡ ಸಖತ್ ಬೋಲ್ಡ್ ಆಗಿ ಕಾಣಿಸಿಕೊಂಡಿದ್ದಾರೆ. ನಾಯಕನ ಜೊತೆ ಲಿಪ್ ಲಾಕ್ ಮತ್ತು ಬ್ಯಾಕ್ ಲೆಸ್ ಕಾರಣದಿಂದಾಗಿಯೂ ಸುದ್ದಿಯಾಗಿದ್ದಾರೆ.  ಈ ಕುರಿತು ಅವರು ಮಾತನಾಡಿದ್ದು, ಈ ರೀತಿಯ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದು ನನಗೆ ಯಾವುದೇ ಮುಜಗರವಿಲ್ಲ. ಅಲ್ಲದೇ, ನೆಗೆಟಿವ್ ಕಾಮೆಂಟ್ ಗಳಿಗೆ ನಾನು ಕೇರ್ ಮಾಡುವುದಿಲ್ಲ ಎಂದಿದ್ದಾರೆ.

    `ಮಂಗಳಗೌರಿ ಮದುವೆ’ (Mangala Gowri Maduve) ಸೀರಿಯಲ್‌ನಲ್ಲಿ ಖಡಕ್ ವಿಲನ್ ಆಗಿ ಮನಗೆದ್ದ ತನಿಷಾ ಕುಪ್ಪಂಡ (Tanisha Kuppanda) ಅವರು Pentagon ಸಿನಿಮಾದಲ್ಲಿ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಸದ್ಯ ಸಿನಿಮಾ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಿರುವ ನಟಿ ತನಿಷಾ ಮುಜುಗರದ ಸನ್ನಿವೇಶವೊಂದು ಎದುರಾಗಿದೆ. ಸಂದರ್ಶನವೊಂದರಲ್ಲಿ ಯೂಟ್ಯೂಬರ್ ಅಸಭ್ಯ ಪ್ರಶ್ನೆಗೆ ತನಿಷಾ ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ. ಇದನ್ನೂ ಓದಿ:ಮಗ ಸತ್ತಾಗ ಆತ್ಮಸ್ಥೈರ್ಯ ತುಂಬಿ ಜೊತೆಯಾಗಿದ್ದು, ಪ್ರಭುದೇವ: ಪ್ರಕಾಶ್‌ ರಾಜ್‌

    ನೀವು ನೀಲಿ ಚಿತ್ರದಲ್ಲಿ ನಟಿಸಲು ಸಿದ್ಧವಿದ್ದೀರಾ? ಎಂದು ಓರ್ವ ಯೂಟ್ಯೂಬರ್ ಪ್ರಶ್ನೆ ಮಾಡಿದ್ದಾರೆ. ಆಗ ಸಿಟ್ಟಾದ ತನಿಷಾ ಕುಪ್ಪಂಡ ಹಾಗಿದ್ರೆ ನಾನು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಇರಬಾರದಿತ್ತು. ನೀಲಿ ಸಿನಿಮಾ ಇಂಡಸ್ಟ್ರಿಯಲ್ಲೇ ಇರಬೇಕಿತ್ತು. ಬೋಲ್ಡ್ ಆಗಿ ನಟಿಸಿದ್ದೀವಿ ಅಂದ ಮಾತ್ರಕ್ಕೆ. ಈ ತರಹ ಪ್ರಶ್ನೆ ಕೇಳೋದ್ರಲ್ಲಿ ಅರ್ಥವೇ ಇಲ್ಲ. ನೀಲಿ ಚಿತ್ರದ ತಾರೆಯರು ಬೆತ್ತಲಾಗುತ್ತಾರೆ. ನಾನು ನೀಲಿ ಚಿತ್ರದ ತಾರೆಯಲ್ಲ. ಯಾಕೆ ಈ ರೀತಿ ಪ್ರಶ್ನೆ ಮಾಡ್ತಿದ್ದೀರಾ.? ಪ್ರಶ್ನೆ ಮಾಡೋಕೂ ಮುನ್ನ ನಿಮಗೆ ಕಾಮನ್ ಸೆನ್ಸ್ ಇರಬೇಕು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಯಾರು ಬೆತ್ತಲೆ ಸಿನಿಮಾ ಮಾಡ್ತಿದ್ದಾರೆ? ಯಾಕೆ ಈ ರೀತಿ ಅಸಭ್ಯವಾಗಿ ಪ್ರಶ್ನೆಯನ್ನ ಕೇಳುತ್ತಿದ್ದೀರಾ? ಎಂದು ಹೇಳಿ ಸಂದರ್ಶನವನ್ನ ಮೊಟಕುಗೊಳಿಸುತ್ತಾರೆ.

    ಇದೇ ವೇಳೆ ಯೂಟ್ಯೂಬರ್‌ನ `ಪೆಂಟಗನ್’ ಚಿತ್ರತಂಡ ತರಾಟೆಗೆ ತೆಗೆದುಕೊಂಡಿದೆ. ಯೂಟ್ಯೂಬರ್ ವಿರುದ್ಧ ನಟಿ ತನಿಷ ಕುಪ್ಪಂಡ ಮತ್ತು ಚಿತ್ರತಂಡ ಕಿಡಿಕಾರಿದೆ. ತಮ್ಮ ಆಕ್ರೋಶವನ್ನ ತನಿಷಾ ಕುಪ್ಪಂಡ ಹೊರಹಾಕಿದ್ದಾರೆ.

  • ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಅನನ್ಯ ಭಟ್ ಕಂಠದಲ್ಲಿ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ ರಿಲೀಸ್

    ಗುರು ದೇಶಪಾಂಡೆ (Guru Deshpande) ಸಾರಥ್ಯದಲ್ಲಿ ಮೂಡಿ ಬಂದ ‘ಪೆಂಟಗನ್’ ಸಿನಿಮಾದ ಥೀಮ್ ಸಾಂಗ್ (Theme Song) ಇಂದು ರಿಲೀಸ್ ಆಗಿದೆ. ಖ್ಯಾತ ಗಾಯಕಿ ಅನನ್ಯ ಭಟ್ (Ananya Bhatt) ಕಂಠಸಿರಿಯಲ್ಲಿ ಮೂಡಿ ಬಂದ ಗೀತೆಗೆ ಮಣಿಕಾಂತ್ ಕದ್ರಿ (Manikanth Kadri) ಸಂಗೀತ ಸಂಯೋಜನೆ ಮಾಡಿದ್ದಾರೆ. ನಿರ್ದೇಶಕ ರಾಘು ಶಿವಮೊಗ್ಗ (Raghu Shivamogga) ಸಾಹಿತ್ಯದಲ್ಲಿ ಈ ಹಾಡು ಮೂಡಿ ಬಂದಿದೆ. ಐದು ಕಥೆಗಳನ್ನು ಬೆಸೆಯುವಂತಹ ಮತ್ತು ಆ ಆಶಯವನ್ನು ಹಿಡಿದಿಡುವಂತಹ ಗೀತೆ ಇದಾಗಿದೆ.

    ಈಗಾಗಲೇ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ‘ಪೆಂಟಗನ್’ ಟ್ರೈಲರ್ ಮೆಚ್ಚಿಕೊಂಡ ಟಾಪ್ ಸೆಲೆಬ್ರಿಟಿಸ್

    ‘ಪೆಂಟಗನ್’ ಟ್ರೈಲರ್ ಮೆಚ್ಚಿಕೊಂಡ ಟಾಪ್ ಸೆಲೆಬ್ರಿಟಿಸ್

    ನಿರ್ದೇಶಕ ಗುರು ದೇಶಪಾಂಡೆ (Guru Deshpande) ಪ್ರಧಾನ ನೇತೃತ್ವದಲ್ಲಿ ಮೂಡಿ ಬಂದಿರುವ ಪೆಂಟಗನ್ (Pentagon) ಸಿನಿಮಾ ಟ್ರೈಲರ್ (Trailer) ರಿಲೀಸ್ ಆಗಿದ್ದು, ದಕ್ಷಿಣ ಭಾರತದ ಸಾಕಷ್ಟು ಕಲಾವಿದರು ಮತ್ತು ತಂತ್ರಜ್ಞರು ಟ್ರೈಲರ್ ಕುರಿತು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಟ್ರೈಲರ್ ಲಿಂಕ್ ಅನ್ನು ಸೋಷಿಯಲ್ ಮೀಡಿಯಾಗಳಲ್ಲೂ ಹಂಚಿಕೊಂಡಿದ್ದಾರೆ. ಅದರಲ್ಲೂ ಕಾಂತಾರ ಖ್ಯಾತಿಯ ರಿಷಬ್ ಶೆಟ್ಟಿ (Rishabh Shetty), ತೆಲುಗಿನ ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ (Anil Ravipudi), ನಿರ್ದೇಶಕರಾದ ತರುಣ್ ಸುಧೀರ್, ಶಶಾಂಕ್ ಸೇರಿದಂತೆ ಸಾಕಷ್ಟು ಸೆಲೆಬ್ರಿಟಿಗಳು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ.

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ಐದು ನಿರ್ದೇಶಕರ ಹೊಸಬಗೆಯ ‘ಪೆಂಟಗನ್’ ಸಿನಿಮಾದ ರಿಲೀಸ್ ಡೇಟ್ ಫಿಕ್ಸ್

    ನ್ನಡದ ಪ್ರಯೋಗಾತ್ಮಕ ಹಾಗೂ ನಿರೀಕ್ಷಿತ ಸಿನಿಮಾಗಳಲ್ಲಿ ಒಂದಾದ ‘ಪೆಂಟಗನ್’ (Pentagon) ಚಿತ್ರದ ಬಿಡುಗಡೆ ದಿನಾಂಕ (Release) ಘೋಷಣೆಯಾಗಿದೆ. ಏಪ್ರಿಲ್ 7 ರಂದು ದೇಶಾದ್ಯಂತ ಈ ಸಿನಿಮಾವನ್ನು ಬಿಡುಗಡೆ ಮಾಡುವುದಾಗಿ ಚಿತ್ರದ ಕ್ರಿಯೇಟಿವ್ ಡೈರೆಕ್ಟರ್ ಗುರು ದೇಶಪಾಂಡೆ (Guru Deshpande) ಸೋಷಿಯಲ್ ಮೀಡಿಯಾದಲ್ಲಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ.

    ಐದು ಜನ ನಿರ್ದೇಶಕರು, ಐದು ಕಥೆಗಳು, ಐದು ಜನ ಬರಹಗಾರರು, ಐದು ಹೀರೋಗಳು ಹೀಗೆ ಐದೈದು ವಿಷಯಗಳನ್ನು ಪೆಂಟಗನ್ ಚಿತ್ರದಲ್ಲಿ ಹೇಳಲು ಹೊರಟಿದೆ ಚಿತ್ರತಂಡ. ಎಲ್ಲ ವಯಸ್ಸಿನವರಿಗೂ ಇಷ್ಟವಾಗುವಂತಹ ಕಥೆಗಳನ್ನು ಒಳಗೊಂಡಿರುವ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಸಾಕಷ್ಟು ಪ್ರಯೋಗಗಳನ್ನು ಮಾಡಲಾಗಿದೆ ಎಂದಿದ್ದಾರೆ ಗುರು ದೇಶಪಾಂಡೆ. ಹಾಗಾಗಿ ಸಿನಿಮಾ ಟ್ರೈಲರ್ ಬಿಡುಗಡೆಯಾದ ದಿನದಿಂದ ನಿರೀಕ್ಷೆ ಮೂಡಿಸಿದೆ. ಇದನ್ನೂ ಓದಿ: ಪವನ್ ಕಲ್ಯಾಣ್‌ಗೆ ಆ್ಯಕ್ಷನ್ ಕಟ್ ಹೇಳಲಿದ್ದಾರೆ ಆರ್.ಚಂದ್ರು

    ಪ್ರತಿಭಾವಂತ ನಿರ್ದೇಶಕರುಗಳಾದ ರಾಘು ಶಿವಮೊಗ್ಗ, ಆಕಾಶ್ ಶ್ರೀವತ್ಸ, ಚಂದ್ರ ಮೋಹನ್, ಕಿರಣ್ ಕುಮಾರ್ ಹಾಗೂ ಮತ್ತೊಂದು ಕಥೆಗೆ ಗುರು ದೇಶಪಾಂಡೆ ಅವರೇ ನಿರ್ದೇಶನ ಮಾಡಿದ್ದಾರೆ. ಪ್ರಕಾಶ್ ಬೆಳವಾಡಿ, ಕಿಶೋರ್ (Kishore), ರವಿಶಂಕರ್ ಸೇರಿದಂತೆ ಹೆಸರಾಂತ ನಟರೇ ತಾರಾ ಬಳಗದಲ್ಲಿ ಇದ್ದಾರೆ. ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದ ಹಾಡುಗಳು ಜನರ ಗಮನ ಸೆಳೆದಿವೆ.

    ಇದು ಪ್ರಯೋಗಾತ್ಮಕ ಸಿನಿಮಾವಲ್ಲ, ಪಕ್ಕಾ ಕಮರ್ಷಿಯಲ್ ಚಿತ್ರ. ನೋಡುಗನಿಗೆ ಏನೆಲ್ಲ ಬೇಕಿದೆಯೋ ಎಲ್ಲವನ್ನೂ ಈ ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಿದ್ದೇವೆ. ಹೊಸ ಆಲೋಚನೆಯ ನಿರ್ದೇಶಕರು, ಬರಹಗಾರರು ಮತ್ತು ಹೊಸ ಕಲಾವಿದರು ಕೂಡ ಸಿನಿಮಾದ ಭಾಗವಾಗಿದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಈ ಸಿನಿಮಾ ಹೊಸ ಅನುಭವನ್ನು ನೀಡಲಿದೆ ಎನ್ನುತ್ತಾರೆ ಗುರು ದೇಶಪಾಂಡೆ.

  • ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

    ಕೆನಡಾ ವಾಯುನೆಲೆಯಲ್ಲಿ ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದ US ಫೈಟರ್ ಜೆಟ್

    ವಾಷಿಂಗ್ಟನ್/ಒಟ್ಟಾವ: ಕೆನಡಾದ (Canada) ಯುಕಾನ್ (Yukon) ಪ್ರಾಂತ್ಯದ ವಾಯು ಪ್ರದೇಶದಲ್ಲಿ ಅಮೆರಿಕ (USA) ಹಾಗೂ ಕೆನಡಾ ದೇಶಗಳ ಜಂಟಿ ಕಾರ್ಯಾಚರಣೆಯಲ್ಲಿ ಅಮೆರಿಕದ ಫೈಟರ್ ಜೆಟ್ (Fighter Jet) ಅಪರಿಚಿತ ವಸ್ತುವನ್ನು ಹೊಡೆದುರುಳಿಸಿದೆ.

    ಇತ್ತೀಚೆಗೆ ಅಮೆರಿಕದ ದಕ್ಷಿಣ ಕೆರೊಲಿನಾ ಪ್ರಾಂತ್ಯದಲ್ಲಿ ಚೀನಾದ (China) ಬೇಹುಗಾರಿಕಾ ಬಲೂನ್ ಅನ್ನು ಹೊಡೆದುರುಳಿಸಿದ ನಂತರದ ಘಟನೆ ಇದಾಗಿದೆ. ಇದನ್ನೂ ಓದಿ: ವಿಧಾನಸಭೆ ಚುನಾವಣೆಯಲ್ಲಿ ಭಾಗಿ ಆಗ್ತೀನಿ: ವಿಭಿನ್ನ ಉತ್ತರ ಕೊಟ್ಟ ರಿಷಬ್ ಶೆಟ್ಟಿ

    ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೊ (Justin Trudeau) ಅವರ ಆದೇಶದ ಮೇರೆಗೆ ಕೆನಡಾ ಮತ್ತು ಅಮೆರಿಕದ ಯುದ್ಧವಿಮಾನಗಳು ಕ್ಷಿಪ್ರ ಕಾರ್ಯಾಚರಣೆಗೆ ಇಳಿದಿದ್ದವು. ಅಮೆರಿಕದ F-22 ಯುದ್ಧ ವಿಮಾನ ಈ ವಸ್ತುವನ್ನು ಹೊಡೆದುರುಳಿಸಿತು ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಕಳೆದ ವಾರ ಅಮೆರಿಕದ ವಾಯುನೆಲೆಯಲ್ಲಿ ಕಾಣಿಸಿಕೊಂಡಿದ್ದ ಚೀನಾದ ಬೇಹುಗಾರಿಕಾ ಬಲೂನ್ ಅನ್ನು ಅಮೆರಿಕಾ ಕ್ಷಿಪಣಿಗಳು ಹೊಡೆದುರುಳಿಸಿದ್ದವು. ಇದೀಗ ಕೆನಡಾ ವಾಯು ನೆಲೆಯಲ್ಲಿ ಮತ್ತೊಂದು ವಸ್ತುವನ್ನು ಹೊಡೆದುರುಳಿಸಿದೆ.

    ಹೊಡೆದುರುಳಿಸಲಾಗಿರುವ ಚೀನಾದ ಬಲೂನ್ ಸೇರಿದಂತೆ ಅಪರಿಚಿತ ವಸ್ತುಗಳ ಅವಶೇಷಗಳನ್ನು ಅಮೆರಿಕ ಸೇನೆ ಪರಿಶೀಲನೆ ಮಾಡುತ್ತಿದೆ ಎಂದು ವರದಿಯಾಗಿದೆ. ಇದನ್ನೂ ಓದಿ: 30 ವರ್ಷವಾದ್ರೂ ವಧು ಸಿಕ್ಕಿಲ್ಲ ಅಂತಾ `ಬ್ರಹ್ಮಚಾರಿಗಳ ನಡೆ ಮಾದಪ್ಪನ ಕಡೆ’

    ಈ ಆಕ್ರಮಣ ಕುರಿತು, ಕೆನಡಾದ ರಕ್ಷಣಾ ಮಂತ್ರಿ ಅವರು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರೊಂದಿಗೆ ಮಾತನಾಡಿದ್ದಾರೆ. ಬಳಿಕ `ನಾವು ಯಾವಾಗಲೂ ನಮ್ಮ ಸಾರ್ವಭೌಮತ್ವವನ್ನು ಒಟ್ಟಾಗಿ ರಕ್ಷಿಸುತ್ತೇವೆ ಎಂಬುದಾಗಿ ಪುನರುಚ್ಚರಿಸಿದ್ದಾರೆ’ ಎಂದು ಕೆನಡಾದ ರಕ್ಷಣಾ ಸಚಿವೆ ಅನಿತಾ ಆನಂದ್ ಟ್ವೀಟ್ ಮೂಲಕ ತಿಳಿಸಿದ್ದಾರೆ.

    ಉತ್ತರ ವಾಯುನೆಲೆಯಲ್ಲಿ ಕೆನಡಾದೊಂದಿಗೆ ಕೆಲಸ ಮಾಡಲು ಉತ್ತರ ಅಮೆರಿಕಾದ ಏರೋಸ್ಪೇಸ್ ಡಿಫೆನ್ಸ್ ಕಮಾಂಡ್‌ಗೆ ಎಫ್-22 ಹಾಗೂ AIM 9X ಕ್ಷಿಪಣಿಗಳನ್ನು ಅಧಿಕೃತವಾಗಿ ಸೇರ್ಪಡೆಗೊಳಿಸಲಾಯಿತು. ಈ ವೇಳೆ F-22 ಫೈಟರ್ ಜೆಟ್ ಅಪರಿಚಿತ ವಸ್ತುವನ್ನು ಹೊಡೆದುರುಳಿದೆ ಎಂದು ಪೆಂಟಗನ್ ವಕ್ತಾರ ಪ್ಯಾಟ್ ರೈಡರ್ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • Spy Balloon Rowː ಚೀನಾದೊಂದಿಗೆ ಸಂಘರ್ಷಕ್ಕಿಳಿಯುವುದಿಲ್ಲ ಎಂದ ಜೋ ಬೈಡನ್

    Spy Balloon Rowː ಚೀನಾದೊಂದಿಗೆ ಸಂಘರ್ಷಕ್ಕಿಳಿಯುವುದಿಲ್ಲ ಎಂದ ಜೋ ಬೈಡನ್

    ವಾಷಿಂಗ್ಟನ್: ಅಮೆರಿಕದ (US) ದಕ್ಷಿಣ ಕೆರೊಲಿನಾ ಪ್ರಾಂತ್ಯದಲ್ಲಿ ತನ್ನ ಫೈಟರ್ ಜೆಟ್ ಮೂಲಕ ಚೀನಾದ ಬೇಹುಗಾರಿಕಾ ಬಲೂನ್ (China Spy Balloon) ಅನ್ನು ಹೊಡೆದುರುಳಿಸಿತ್ತು. ಇದರಿಂದ ಚೀನಾ ಅಸಮಾಧಾನ ಹೊರಹಾಕಿತ್ತು. ಈ ಕುರಿತು ಪ್ರತಿಕ್ರಿಯಿಸಿರುವ ಯುಎಸ್ ಅಧ್ಯಕ್ಷ ಜೋ ಬೈಡನ್ (Joe Biden), ಅಮೆರಿಕವು ಚೀನಾದೊಂದಿಗೆ ಸಂಘರ್ಷಕ್ಕಿಳಿಯಲು ಬಯಸುವುದಿಲ್ಲ ಎಂದು ಹೇಳಿದ್ದಾರೆ.

    ಚೀನಾ ಸ್ಪೈ ಬಲೂನ್ ಕೇವಲ ಹವಾಮಾನ ಸಂಶೋಧನೆ ನಡೆಸುತ್ತಿದೆ ಎಂದು ಹೇಳಿಕೊಂಡಿದೆ. ಆದ್ರೆ ಪೆಂಟಗನ್ ಇದನ್ನ ಉನ್ನತ ಬೇಹುಗಾರಿಕಾ ಕಾರ್ಯಾಚರಣೆ ಎಂದು ತಿಳಿಸಿದೆ. ಯುಎಸ್ ನೌಕಾಪಡೆಯು ಈ ಬಗ್ಗೆ ವಿಶ್ಲೇಷಣೆ ನಡೆಸಲು ಅಟ್ಲಾಂಟಿಕ್ ಸಾಗರದಿಂದ ಅವಶೇಷಗಳನ್ನ ತರಿಸಿಕೊಳ್ಳುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತವನ್ನೂ ಟಾರ್ಗೆಟ್‌ ಮಾಡಿದೆ ಚೀನಾದ ಬೇಹುಗಾರಿಕಾ ಬಲೂನ್‌

    ಅತ್ಯಂತ ಎತ್ತರದಲ್ಲಿ ಹಾರಾಡುತ್ತಿದ್ದ ಸ್ಪೈ ಬಲೂನ್, ಯುಎಸ್‌ನ ಸೂಕ್ಷ್ಮ ಮಿಲಿಟರಿ ಪಡೆಯಿದ್ದ ಸ್ಥಳವನ್ನ ದಿಟ್ಟಿಸುತ್ತಿತ್ತು ಅದಕ್ಕಾಗಿ ಅನುಮಾನಗೊಂಡು ಪೆಂಟಗನ್ ಬಲೂನ್ ಅನ್ನು ಹೊಡೆದಿದೆ. ನಾವು ಚೀನಾದೊಂದಿಗೆ ಸಂಪೂರ್ಣವಾಗಿ ಸ್ಪರ್ಧಿಸಲಿದ್ದೇವೆ, ಆದ್ರೆ ಸಂಘರ್ಷಕ್ಕಿಳಿಯಲು ಬಯಸುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: US Fighter Jet Attack: ಚೀನಾ ಬೇಹುಗಾರಿಕಾ ಬಲೂನ್ ಹೊಡೆದುರುಳಿಸಿದ ಅಮೆರಿಕ

    ಈ ಘಟನೆ ಚೀನಾದೊಂದಿಗಿನ ಸಂಬಂಧಕ್ಕೆ ದೊಡ್ಡ ಪೆಟ್ಟು ಮಾಡಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಬೈಡನ್, ಖಂಡಿತವಾಗಿ ಇಲ್ಲ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k