Tag: ಪೆಟ್ರೋಲ್ ಬೆಲೆ ಏರಿಕೆ

  • ರಾಜಕೀಯ ತಿರುವು ದಾವಣಗೆರೆಯಿಂದಲೇ ಆರಂಭ: ಈಶ್ವರಪ್ಪ

    ರಾಜಕೀಯ ತಿರುವು ದಾವಣಗೆರೆಯಿಂದಲೇ ಆರಂಭ: ಈಶ್ವರಪ್ಪ

    ದಾವಣಗೆರೆ: ಮುಂದಿನ ರಾಜಕಾರಣದ ತಿರುವು ದಾವಣಗೆರೆ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಯಕಾರಿಣಿ ಸಭೆಯಿಂದಲೇ ಆರಂಭವಾಗುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.

    ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪೂರ್ಣ ಪ್ರಮಾಣದ ಬಹುಮತ ಸರ್ಕಾರ ತರವಲ್ಲಿ ಈ ಸಭೆ ತಿರುವು ಕೊಡುತ್ತದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಯಾವುದೇ ಸರ್ಕಾರಕ್ಕೆ ಬಹುಮತ ಬಂದಿಲ್ಲ. ಜನರು ಆಡಳಿತ ಮಾಡಿ ಅಂತಾರೇ ಆದರೆ ಬಹುಮತ ಕೊಡುವುದಿಲ್ಲ. ಹೀಗಾಗಿ ಈ ಸಭೆ ರಾಜಕೀಯ ತಿರುವು ಪಡೆಯುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲೂ ಗುಜರಾತ್ ಮಾದರಿ ಸಂಪುಟ ರಚನೆಯಾದರೆ ಒಳ್ಳೆಯದು: ವಿಜಯೇಂದ್ರ

    ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪೆಟ್ರೋಲ್ ಏರಿಕೆಗೂ ರಾಜಕಾರಣಕ್ಕೂ ಸಂಬಂಧ ಇಲ್ಲ. ಅಸೆಂಬ್ಲಿ ಸೇರಿದಂತೆ ಮೂರು ಪಾಲಿಕೆ ಚುನಾವಣೆಯಲ್ಲಿ ಗೆದ್ದಿದ್ದೇವೆ. ಯಾವ ಪಕ್ಷಕ್ಕೆ ಮತ ಹಾಕಬೇಕು, ಯಾರ ನೇತೃತ್ವದ ನಾಯಕತ್ವಕ್ಕೆ ಮತ ಹಾಕಬೇಕು ಎಂಬುದು ಜನರಿಗೂ ಗೊತ್ತು ಎಂದು ಹೇಳಿದರು. ಇದನ್ನೂ ಓದಿ: ಯೋಗಿ ತಂದೆಯನ್ನು ಟೀಕಿಸಿದ್ದ ಎಸ್‍ಪಿ ನಾಯಕರ ವಿರುದ್ಧ ಎಫ್‍ಐಆರ್

     

  • ದುಬಾರಿಯಾದ ಪೆಟ್ರೋಲ್ – ಕಳ್ಳತನಕ್ಕಿಳಿದ ಯುವಕರು

    ದುಬಾರಿಯಾದ ಪೆಟ್ರೋಲ್ – ಕಳ್ಳತನಕ್ಕಿಳಿದ ಯುವಕರು

    ಚಿಕ್ಕಬಳ್ಳಾಪುರ: ಪೆಟ್ರೋಲ್ ಬೆಲೆ 100ರ ಗಡಿ ದಾಟಿದ್ದೇ ತಡ ಚಿಕ್ಕಬಳ್ಳಾಪುರ ನಗರದಲ್ಲಿ ಪೆಟ್ರೋಲ್ ಕಳ್ಳತನ ಮಾಡುವ ಹೊಸದೊಂದು ಗ್ಯಾಂಗ್ ಹುಟ್ಟಿಕೊಂಡಿದೆ. ಪೆಟ್ರೋಲ್ ದರ ಲೀಟರ್ ಗೆ 100 ರೂಪಾಯಿ ದಾಟಿದ್ದು, ಚಿಕ್ಕಬಳ್ಳಾಪುರ ನಗರದ ಮುನಿಸಿಪಾಲ್ ಬಡಾವಣೆಯಲ್ಲಿ ಮೂವರು ಯುವಕರು ಪೆಟ್ರೋಲ್ ಕಳ್ಳತನ ಮಾಡಿದ್ದಾರೆ.

    ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪಲ್ಸರ್ ಬೈಕ್ ನಲ್ಲಿ ಮಧ್ಯರಾತ್ರಿ ಮುನಿಸಿಪಾಲ್ ಬಡಾವಣೆಗೆ ಎಂಟ್ರಿ ಕೊಟ್ಟಿರೋ ಮೂವರು ಯುವಕರು, ಮನೆಗಳ ಮುಂದೆ ರಸ್ತೆ ಬದಿ ನಿಲ್ಲಿಸಿರೋ ಬೈಕ್ ಗಳಲ್ಲಿ 1-2 ಲೀಟರ್ ವಾಟರ್ ಬಾಟಲಿಗೆ ತುಂಬಿಸಿಕೊಂಡಿದ್ದಾರೆ. ತದನಂತರ 20 ಲೀಟರ್ ಕ್ಯಾನ್ ಗೆ ತುಂಬಿಸಿಕೊಂಡು ಪರಾರಿಯಾಗಿದ್ದಾರೆ.

    ಒಂದಲ್ಲ ಎರಡಲ್ಲ ಹತ್ತಾರು ಬೈಕ್ ಗಳಲ್ಲಿ ಪೆಟ್ರೋಲ್ ಕಳ್ಳತನ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಇದನ್ನೂ ಓದಿ: ಇಂದಿನಿಂದ ಹೊಸ ದುಬಾರಿ ಜೀವನ – ಎಲ್‍ಪಿಜಿ ಸಿಲಿಂಡರ್, ಹಾಲು, ಬ್ಯಾಂಕಿಂಗ್ ಚಾರ್ಜ್ ಹೆಚ್ಚಳ

    ಯಾದಗಿರಿಯಲ್ಲೂ ಪೆಟ್ರೋಲ್ ಕಳ್ಳತನ:
    ಪೆಟ್ರೋಲ್ ಮತ್ತು ಡೀಸೆಲ್ ದರ ದಿನೇ ದಿನೇ ಹೆಚ್ಚಾಗುತ್ತಿರುವ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ಕಳ್ಳತನ ಮಾಡುವ ಗ್ಯಾಂಗ್ ನಗರದಲ್ಲಿ ಫುಲ್ ಆಕ್ಟಿವ್ ಆಗಿದೆ. ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದೆ.  ಇದನ್ನೂ ಓದಿ: ಪುಲ್ವಾಮಾದಲ್ಲಿ ವಿಜಯಪುರದ ಯೋಧ ಹುತಾತ್ಮ

    ಒಂದೇ ರಾತ್ರಿಯಲ್ಲಿ ಎರಡು ಬಂಕ್ ನಲ್ಲಿನ ಬರೊಬ್ಬರಿ 5 ಸಾವಿರ ಲೀಟರ್ ಡೀಸೆಲ್ ಗೆ ಕನ್ನ ಹಾಕಿದ್ದು, 5 ಲಕ್ಷ ರೂ.ಗೂ ಅಧಿಕ ಮೌಲ್ಯದ ಡಿಸೇಲ್ ಕದ್ದಿದ್ದಾರೆ. ರಾತ್ರಿ ಹೊತ್ತು ಫುಲ್ ಆಕ್ಟಿವ್ ಆಗುವ ಈ ಗ್ಯಾಂಗ್ ನಗರದ ಹೈದರಾಬಾದ್ ರಸ್ತೆಯಲ್ಲಿರುವ ಎಸ್ಸಾರ್ ಮತ್ತು ಗುರು ಪೆಟ್ರೋಲ್ ಬಂಕ್ ಗಳಲ್ಲಿ, ಮಧ್ಯ ರಾತ್ರಿ 12 ಗಂಟೆ ಸುಮಾರಿಗೆ ಈ ಕಳ್ಳತನ ಮಾಡಿದೆ. ಅಂಡರ್ ಗ್ರೌಂಡ್ ನಲ್ಲಿರುವ ಡೀಸೆಲ್ ಟ್ಯಾಂಕ್ ಕವರ್ ಓಪನ್ ಮಾಡಿ, ಅದಕ್ಕೆ ಪೈಪ್ ಹಾಕಿ, ಬಳಿಕ ಸುಮಾರು 30 ಮೀಟರ್ ದೂರದಲ್ಲಿ ಮೋಟರ್ ಹಚ್ಚಿ ಡೀಸೆಲ್ ಕಳ್ಳತನ ಮಾಡಿದೆ. ಇದನ್ನೂ ಓದಿ: ಅನ್‍ಲಾಕ್ ಸ್ಟೇಜ್ -3ಕ್ಕೆ ಕ್ಷಣಗಣನೆ – ಇಂದು ಸಂಜೆ ಸಿಎಂ ಬಿಎಸ್‍ವೈ ಮಹತ್ವದ ಸಭೆ

  • ಮುಂದಿನ ಚುನಾವಣೆಯಲ್ಲೂ ‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

    ಮುಂದಿನ ಚುನಾವಣೆಯಲ್ಲೂ ‘ಮೋದಿ, ಮೋದಿ’ ಎಂದರೆ ಬಡವರ ಬದುಕು ಬೂದಿಯಾಗೋದು ಖಚಿತ: ಸಿದ್ದರಾಮಯ್ಯ

    ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಾಗಲೀ, ಮುಖ್ಯಮಂತ್ರಿ ಬಿಎಸ್.ಯಡಿಯೂರಪ್ಪ ಅವರಾಗಲೀ ಸಂಕಷ್ಟ ಕಾಲದಲ್ಲಿ ಬಡವರ ನೆರವಿಗೆ ನಿಲ್ಲುತ್ತಿಲ್ಲ. ಮುಂದಿನ ಚುನಾವಣೆಯಲ್ಲಿಯೂ ‘ಮೋದಿ ಮೋದಿ’ ಎಂದೇನಾದರೂ ಹೇಳಿದರೆ ಬಡವರ ಬದುಕು ಬೂದಿಯಾಗುವುದು ಖಚಿತ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

    ಬೆಂಗಳೂರಿನ ಜಯನಗರ ವಿಧಾನಸಭೆ ಕ್ಷೇತ್ರದ ಶಾಲಿನಿ ಆಟದ ಮೈದಾನದಲ್ಲಿ ಇಂದು ಶಾಸಕಿ ಸೌಮ್ಯ ರೆಡ್ಡಿಯವರು ಆಯೋಜಿಸಿದ್ದ ಕೊರೊನಾ ವಾರಿಯರ್ಸ್, ಪೌರ ಕಾರ್ಮಿಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶದ ಜನತೆ ಕೇಂದ್ರದಲ್ಲಿ ಬಿಜೆಪಿಗೆ ಎರಡನೇ ಬಾರಿಗೆ ಅಧಿಕಾರ ನೀಡಿದರು. ಆದರೆ, ಪ್ರಧಾನಿ ನರೇಂದ್ರ ಮೋದಿಯವರಾಗಲಿ, ಮುಖ್ಯಮಂತ್ರಿ ಯಡಿಯೂರಪ್ಪ ಅವರಾಗಲಿ ಸಂಕಷ್ಟದ ಕಾಲದಲ್ಲಿ ಬಡವರ ನೆರವಿಗೆ ನಿಲ್ಲಲಿಲ್ಲ ಎಂದು ಟೀಕಿಸಿದರು.

    ಬಿಪಿಎಲ್ ಕುಟುಂಬದಲ್ಲಿ ಕೋವಿಡ್‍ನಿಂದ ಮೃತಪಟ್ಟ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳ ಪರಿಹಾರ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಆದರೆ, ಐದು ಲಕ್ಷ ರೂಪಾಯಿಗಳ ಆರ್ಥಿಕ ನೆರವು ನೀಡುವಂತೆ ಆಗ್ರಹಿಸಿದರು.

    ಕೊರೊನಾ ಸಂದರ್ಭದಲ್ಲಿ ಸಂಕಷ್ಟದಲ್ಲಿರುವ ಬಿಪಿಎಲ್ ಕುಟುಂಬದವರಿಗೆ 10 ಕೆ.ಜಿ. ಅಕ್ಕಿ, 10 ಸಾವಿರ ರೂಪಾಯಿ ಕೊಡಿ ಎಂದರೆ ಕೇಳಲಿಲ್ಲ. ಸರ್ಕಾರ ಬಡವರಿಗೆ ಸ್ಪಂದಿಸಬೇಕು. ರಾಜ್ಯ ಸರ್ಕಾರದ ಬಜೆಟ್ 2.42 ಲಕ್ಷ ಕೋಟಿ. ಅದರಲ್ಲಿ 15-20 ಸಾವಿರ ಕೋಟಿಯನ್ನ ಬಡವರಿಗೆ ನೀಡಿದ್ದರೆ ಏನೂ ನಷ್ಟವಾಗುತ್ತಿರಲಿಲ್ಲ ಎಂದರು.

    ಪ್ಯಾಕೇಜ್ ನಲ್ಲಿ ಕೆಲವರಿಗೆ ಪುಡಿಗಾಸು ಘೋಷಣೆ ಮಾಡಿದ್ದಾರೆ. ಅದು ಯಾರಿಗೆ ಸಿಗುವುದೋ ಯಾರಿಗೆ ಸಿಗುವುದಿಲ್ಲವೋ ಗೊತ್ತಿಲ್ಲ. ಈ ಹಿಂದೆ ಘೋಷಿಸಿದ ಪ್ಯಾಕೇಜ್‍ನಿಂದಲೂ ಯಾರಿಗೂ ಅನುಕೂಲ ಆಗಲಿಲ್ಲ. ಕೊರೊನಾದಿಂದ ಮೃತರಾದರೆ ಕುಟುಂಬದಲ್ಲಿ ಒಬ್ಬರಿಗೆ ಒಂದು ಲಕ್ಷ ರೂ. ಪರಿಹಾರ ನೀಡುವುದಾಗಿ ಹೇಳಿದ್ದಾರೆ. ಆಸ್ಪತ್ರೆಯಲ್ಲಿ ಒಬ್ಬರಿಗೆ ಮಾತ್ರ ಹಣ ಪಡೆಯುವುರೇ ಎಂದು ಪ್ರಶ್ನಿಸಿದರು.

    ರಾಜ್ಯದಲ್ಲಿ ಕೋವಿಡ್ ನಿಂದ 32 ಸಾವಿರ ಜನ ಸತ್ತಿದ್ದಾರೆ. ಅದರಲ್ಲಿ ಬಿಪಿಎಲ್ ಕಾರ್ಡ್ ನವರು 25 ಸಾವಿರ ಮಂದಿ ಇರಬಹುದು, ಎಲ್ಲರಿಗೂ ಪರಿಹಾರ ನೀಡಲು ಒಂದೂವರೆ ಸಾವಿರ ಕೋಟಿ ವೆಚ್ಚವಾಗಬಹುದು. ಅಷ್ಟು ಮಂದಿಗೂ ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

    ಕೊರೊನಾ ಒಂದನೇ ಅಲೆಯಿಂದ ಎರಡನೇ ಅಲೆಯ ನಡುವೆ ಸಾಕಷ್ಟು ಸಮಯ ಇತ್ತು. ಆ ವೇಳೆ ಲಸಿಕೆ ತಯಾರಿಸಿ ಎಲ್ಲರಿಗೂ ಕೊಡಬಹುದಿತ್ತು, ಕೇಂದ್ರ ಸರ್ಕಾರ ಆ ಕೆಲಸ ಮಾಡಲಿಲ್ಲ. ಲಸಿಕೆಯನ್ನು ಇಲ್ಲಿಯೇ ತಯಾರಿಸಲಿ ಅಥವಾ ಬೇರೆ ಕಡೆಯಿಂದ ತರಿಸಿಕೊಳ್ಳಲಿ. ಆದರೆ, ಎಲ್ಲರಿಗೂ ಲಸಿಕೆ ಸಿಗುವಂತಾಗಲಿ. ಸೆಪ್ಟೆಂಬರ್-ಅಕ್ಟೋಬರ್‍ನಲ್ಲಿ ಮೂರನೇ ಅಲೆ ಬರುವ ನಿರೀಕ್ಷೆ ಇದೆ. ಅಷ್ಟರಲ್ಲಿ ಎಲ್ಲರಿಗೂ ಉಚಿತವಾಗಿ ಲಸಿಕೆ ಕೊಡಬೇಕು. ಜನರ ಪ್ರಾಣ ಉಳಿಸುವುದು ಮುಖ್ಯ ಲಸಿಕೆ ಹಾಕಿಸಿಕೊಂಡ ಶೇ.80ರಷ್ಟು ಜನರಿಗೆ ಕೊರೊನಾ ಬರುವುದಿಲ್ಲ. ಹೀಗಾಗಿ ಎಲ್ಲರೂ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮನವಿ ಮಾಡಿದರು.

    ಮನೆಯ ಗಂಟು ಹೋಗುತ್ತಾ?: ಕೇಂದ್ರ ಸರ್ಕಾರ ಶೇ.75ರಷ್ಟು ಉಚಿತವಾಗಿ, ಶೇ.25ರಷ್ಟು ಲಸಿಕೆಗಳನ್ನು ಖಾಸಗಿಯಾಗಿ ಮಾರಾಟಕ್ಕಿಟ್ಟಿದೆ. ಅದನ್ನು ಕೈ ಬಿಟ್ಟು ಎಲ್ಲರಿಗೂ ಉಚಿತ ಲಸಿಕೆ ಕೊಡಬೇಕು ಎಂದರು. ನಮ್ಮ ಪಕ್ಷದ ಸರ್ಕಾರ ಇದ್ದಿದ್ದರೆ ಬಡವರಿಗೆ 10 ಕೆ.ಜಿ.ಅಕ್ಕಿ ಮತ್ತು 10 ಸಾವಿರ ರೂಪಾಯಿಯನ್ನು ಕೊಡುತ್ತಿದ್ದೆವು. ಬಡವರಿಗೆ ನೆರವು ನೀಡಿದರೆ ಇವರ ಮನೆಯ ಗಂಟು ಹೋಗುತ್ತದೆಯೇ ಎಂದು ಸರ್ಕಾರವನ್ನು ಪ್ರಶ್ನಿಸಿದರು.

    ಇಂದಿರಾಗಾಂಧಿ ಅವರ ಫೋಟೋ ಇದೆ ಎಂಬ ಕಾರಣಕ್ಕೆ ಇಂದಿರಾ ಕ್ಯಾಂಟಿನ್ ನಿಲ್ಲಿಸಿದರು. ಇತ್ತೀಚೆಗೆ ಅದನ್ನು ಪುನಃ ಆರಂಭಿಸಿದರೂ ಬಾಕಿ ಬಿಲ್ ಪಾವತಿಸಿಲ್ಲ ಎಂದು ಆರೋಪಿಸಿದರು. ದೇಶದಲ್ಲಿ ಕಾಂಗ್ರೆಸ್ ಪಕ್ಷ ಮಾತ್ರ ಬಡವರ ಪರವಾಗಿ ನಿಲ್ಲಲಿದೆ. ಸಂವಿಧಾನ ಹೇಳುವಂತೆ ಸರ್ವರಿಗೂ ಸಮಪಾಲು, ಸಮಬಾಳು ಸಿದ್ಧಾಂತವನ್ನು ಸರ್ಕಾರಗಳು ಪಾಲಿಸಬೇಕು. ಪ್ರಧಾನಿ ನರೇಂದ್ರ ಮೋದಿ ಅಚ್ಛೇ ದಿನ್ ಆಯೇಗಾ ಎನ್ನುತ್ತಿದ್ದರು. ಯುವಕರು ಮೋದಿ ಮೋದಿ ಎನ್ನುತ್ತಿದ್ದರು. ಪೆಟ್ರೋಲ್, ಡೀಸೆಲ್ 100 ರೂಪಾಯಿ ದಾಟಿದೆ. ನಾವು ಪ್ರತಿಭಟನೆ ಮಾಡಿದ ಮೇಲೂ ದರ ಹೆಚ್ಚಳವಾಗುತ್ತಿದೆ. ಮೂಲ ಬೆಲೆಗಿಂತಲೂ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಧಿಸುತ್ತಿರುವ ತೆರಿಗೆಯೇ ಹೆಚ್ಚಾಗಿದೆ. ಪ್ರಧಾನಿಯವರು ತಿಗಣೆ ರೀತಿಯಲ್ಲಿ ಜನರ ರಕ್ತ ಹೀರುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಪೆಟ್ರೋಲ್, ಡೀಸೆಲ್ ಮೇಲೆ ಜಿಎಸ್‍ಟಿ ಹಾಕಿ ಎಂದು ಕಾಂಗ್ರೆಸ್ ಹೇಳಿಲ್ಲ, ತೆರಿಗೆ ಕಡಿಮೆ ಮಾಡಿ ಎಂದು ಒತ್ತಾಯಿಸಿದ್ದೇವೆ. ಇಂಧನದ ಬೆಲೆ ಕಡಿಮೆಯಾದರೆ ಸಾಗಣೆ ದರ ಕಡಿಮೆಯಾಗಿ ಅಗತ್ಯ ವಸ್ತುಗಳ ಬೆಲೆ ಕೂಡ ಇಳಿಯಲಿದೆ ಎಂದು ಅಭಿಪ್ರಾಯಪಟ್ಟರು.

    ಸರ್ಕಾರದ ನೆರವು ನಂಬಿ ಕೂತಿದ್ದರೆ ಬಡವರು ಇನ್ನೂ ಸಂಕಷ್ಟಕ್ಕೆ ಒಳಗಾಗುತ್ತಿದ್ದರು. ನಮ್ಮ ಪಕ್ಷದ ಶಾಸಕರು, ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು, ಸಂಸದರು, ಮುಖಂಡರು ಸಂಕಷ್ಟದ ಸಮಯದಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಜನರ ನೆರವಿಗೆ ನಿಂತಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.