Tag: ಪೆಟ್ ಡಾಗ್

  • ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ

    ನಾಯಿ ಕಳೆದುಕೊಂಡ ದುಃಖದಲ್ಲಿ ಮೊಗ್ಗಿನ ಮನಸು ಬೆಡಗಿ

    ಬೆಂಗಳೂರು: ಬಹುತೇಕರಿಗೆ ಪೆಟ್ ಡಾಗ್ ಎಂದರೆ ಎಲ್ಲಿಲ್ಲದ ಪ್ರೀತಿ, ಮಕ್ಕಳಿಗಿಂತ ಹೆಚ್ಚು ಪ್ರೀತಿಯಿಂದ ಸಾಕಿರುತ್ತಾರೆ. ಅವುಗಳ ಜೊತೆ ಯಾವಾಗಲೂ ಕಾಲ ಕಳೆಯುತ್ತಿರುತ್ತಾರೆ. ಈ ಮೂಲಕ ಕೆಲಸದ ದಣಿವನ್ನು ನೀಗಿಸಿಕೊಳ್ಳುತ್ತಿರುತ್ತಾರೆ. ಹೀಗೆ ಸಾಕು ಪ್ರಾಣಿಗಳು ಅವರ ಜೀವನದ ಭಾಗವೇ ಆಗಿರುತ್ತವೆ. ಅದೇ ರೀತಿ ನಟಿ ಶುಭ ಪೂಂಜಾ ಸಹ ನಾಯಿಯನ್ನು ಸಾಕಿದ್ದರು. ಆದರೆ ಅದು ಈಗ ಸಾವನ್ನಪ್ಪಿದೆ. ನಾಯಿಯನ್ನು ಕಳೆದುಕೊಂಡ ದುಃಖದಲ್ಲಿ ಶುಭ ಪೂಂಜ ಕೊರಗುತ್ತಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ಮನೆಯಲ್ಲೇ ಇರುವ ಶುಭ ಪೂಂಜಾ ತಮ್ಮ ಪ್ರೀತಿಯ ನಾಯಿಯೊಂದಿಗೆ ಕಾಲ ಕಳೆಯುತ್ತಿದ್ದರು. ಆದರೆ ಇದೇ ಸಮಯದಲ್ಲಿ ನಾಯಿ ಸಾವನ್ನಪ್ಪಿರುವುದು ಶುಭ ಅವರಿಗೆ ತೀವ್ರ ಬೇಸರವನ್ನುಂಟುಮಾಡಿದೆ. ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಳಲು ತೋಡಿಕೊಂಡಿದ್ದಾರೆ. ಈ ಕುರಿತು ನಟಿ ಐಂದ್ರಿತಾ ರೇ ಕಮೆಂಟ್ ಮಾಡಿ ಸಮಾಧಾನ ಹೇಳಿದ್ದು, ಹೋ ಡಿಯರ್ ಟೇಕ್ ಕೇರ್ ಶುಭ, ನಮ್ಮ ಜೀವನದಲ್ಲಿ ಇದು ಬಹುದೊಡ್ಡ ನಷ್ಟ. ನಿನಗಾಗಿರುವ ನಷ್ಟ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದು ನನಗೆ ತಿಳಿದಿದೆ. ಟೇಕ್ ಕೇರ್ ಎಂದು ಕಮೆಂಟ್ ಮಾಡಿದ್ದಾರೆ. ಅಲ್ಲದೆ ಜಲವು ನಟ, ನಟಿಯರು ಸಹ ಕಮೆಂಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ.

    ಲಾಕ್‍ಡೌನ್ ವೇಳೆ ಮನೆಯಲ್ಲಿರದೆ ಶುಭ ಪೂಂಜಾ ತಮ್ಮ ಕೈಲಾದಷ್ಟು ಸಹಾಯ ಮಾಡುತ್ತಿದ್ದಾರೆ. ಬಡವರಿಗೆ, ನಿರ್ಗತಿಕರಿಗೆ ಆಹಾರದ ಕಿಟ್ ನೀಡುತ್ತಿದ್ದಾರೆ. ತಮ್ಮದೇ ಟೀಮ್ ಕಟ್ಟಿಕೊಂಡು ಉಡುಪಿಯ ಕಾಪು ಸುತ್ತಲಿನ ಪ್ರದೇಶಗಳಲ್ಲಿನ ಬಡವರಿಗೆ ಆಹಾರದ ಕಿಟ್ ವಿತರಿಸುತ್ತಿದ್ದಾರೆ. ತಮ್ಮ ಎಲ್ಲ ಚಟುವಟಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಡೇಟ್ ನೀಡುತ್ತಿದ್ದಾರೆ.

    ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕುವ ಮೂಲಕ ತಮ್ಮ ನೋವು ತೋಡಿಕೊಂಡಿರುವ ಶುಭ ಪೂಂಜಾ, ನನ್ನ ಜಗತ್ತನ್ನು ಕಳೆದುಕೊಂಡಿದ್ದೇನೆ. ನನಗೆ ಇವನೇ ಒಂದು ಜಗತ್ತು ಆಗಿದ್ದ. ಸ್ನೇಹಿತರೆ ನಿಮಗೆ ಗೊತ್ತಾ, ಇವನು ಇನ್ನಿಲ್ಲ. ಆದರೆ ಇವನು ಯಾವಾಗಲೂ, ಪ್ರತಿ ಸೆಕೆಂಡ್ ನನ್ನ ಜೊತೆಗೆ ಇರುತ್ತಾನೆ ಎಂದು ಬರೆದುಕೊಂಡಿದ್ದಾರೆ. ಈ ಮೂಲಕ ದುಃಖ ತೋಡಿಕೊಂಡಿದ್ದಾರೆ.

    ನಟಿ ಶುಭ ಪೂಂಜಾಗೆ ಇತ್ತೀಚೆಗೆ ಹೆಚ್ಚು ಆಫರ್ ಬರುತ್ತಿದ್ದು, ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ನರಗುಂದ ಬಂಡಾಯ ಸಿನಿಮಾ ಬಿಡುಗಡೆಯಾಗಿ ಜನಪ್ರಿಯತೆ ಗಳಿಸುತ್ತಿದ್ದಂತೆ, ಇದೀಗ ತ್ರಿದೇವಿ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಆದರೆ ಲಾಕ್‍ಡೌನ್ ಹಿನ್ನೆಲೆ ಚಿತ್ರೀಕರಣ ಸ್ಥಗಿತಗೊಂಡಿದ್ದು, ಈ ಚಿತ್ರ ಕನ್ನಡ ಹಾಗೂ ಮಲಯಾಳಂನಲ್ಲಿ ಸಿದ್ಧವಾಗುತ್ತಿದೆ. ಶುಭ ಪುಂಜಾ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

  • 11 ವರ್ಷ ಪ್ರೀತಿ ನೀಡಿದ ಬ್ರುನೊಗೆ ವಿರುಷ್ಕಾ ದಂಪತಿ ಭಾವಪೂರ್ಣ ವಿದಾಯ

    11 ವರ್ಷ ಪ್ರೀತಿ ನೀಡಿದ ಬ್ರುನೊಗೆ ವಿರುಷ್ಕಾ ದಂಪತಿ ಭಾವಪೂರ್ಣ ವಿದಾಯ

    ನವದೆಹಲಿ: ಹಲವರು ಸಾಕು ಪ್ರಾಣಿಗಳನ್ನು ಮಕ್ಕಳಿಗಿಂತ ಚೆನ್ನಾಗಿ ನೋಡಿಕೊಳ್ಳುವ ಮೂಲಕ ಕಾಳಜಿ ವಹಿಸಿ ಸಾಕುತ್ತಾರೆ. ಸಮಯ ಸಿಕ್ಕರೆ ಸಾಕು ಯಾವಾಗಲೂ ತಮ್ಮ ಮುದ್ದಿನ ಸಹವರ್ತಿ ಬಗ್ಗೆ ಹೇಳುತ್ತಲೇ ಇರುತ್ತಾರೆ. ಊಟ ಮಾಡಿಸುವುದು, ಅದರೊಂದಿಗೆ ವಾಕಿಂಗ್ ಹೋಗುವುದು ಹೀಗೆ ಎಲ್ಲ ಚಟುವಟಿಕೆಗಳಲ್ಲೂ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಅದೇ ರೀತಿ ಭಾರತ ಕ್ರಿಕೆಟ್ ತಂಡದ ಕ್ಯಾಪ್ಟನ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮಾ ಮುದ್ದಿನಿಂದ ಸಾಕಿದ್ದ ಬ್ರುನೊ ಇದೀಗ ಸಾವನ್ನಪ್ಪಿದೆ. ಇದಕ್ಕಾಗಿ ಇಬ್ಬರೂ ಕಂಬನಿ ಮಿಡಿದಿದ್ದಾರೆ.

    ಈ ಕುರಿತು ಇನ್‍ಸ್ಟಾಗ್ರಾಮ್‍ನಲ್ಲಿ ಇಬ್ಬರೂ ಪೋಸ್ಟ್ ಮಾಡಿದ್ದು, ಭಾವನಾತ್ಮಕ ಸಾಲುಗಳೊಂದಿಗೆ ತಾವು ಸಾಕಿದ ಮುದ್ದಿನ ನಾಯಿ ಬ್ರುನೊಗೆ ವಿದಾಯ ಹೇಳಿದ್ದಾರೆ. ಕೊಹ್ಲಿ ಬ್ರುನೊ ಫೋಟೋ ಪೋಸ್ಟ್ ಮಾಡಿ, ರೆಸ್ಟ್ ಇನ್ ಪೀಸ್ ಮೈ ಬ್ರುನೊ. 11 ವರ್ಷಗಳ ಕಾಲ ನಮ್ಮ ಜೀವನವನ್ನು ಪ್ರೀತಿಯಿಂದ ಅಲಂಕರಿಸಿದೆ. ಈ ಮೂಲಕ ಜೀವಮಾನವಿಡೀ ಸಂಪರ್ಕದಲ್ಲಿರುವಂತೆ ಮಾಡಿದೆ. ಇಂದು ಉತ್ತಮ ಸ್ಥಳಕ್ಕೆ ಹೋಗಿದ್ದೀಯಾ, ದೇವರು ನಿನ್ನ ಆತ್ಮಕ್ಕೆ ಶಾಂತಿ ನೀಡಲಿ ಎಂದು ಬರೆದುಕೊಂಡಿದ್ದಾರೆ.

     

    View this post on Instagram

     

    ♥️ Bruno ♥️ RIP ♥️

    A post shared by AnushkaSharma1588 (@anushkasharma) on

    ಅನುಷ್ಕಾ ಶರ್ಮಾ ಸಹ ಈ ಕುರಿತು ಪೋಸ್ಟ್ ಮಾಡಿದ್ದು, ಬ್ರುನೊ ಜೊತೆಗೆ ತಾವಿಬ್ಬರೂ ಕ್ಲಿಕ್ಕಿಸಿದ ಫೋಟೋ ಹಾಕಿ ಹಾರ್ಟ್ ಎಮೋಜಿ ಹಾಗೂ ಬ್ರುನೊ ಆರ್‍ಐಪಿ ಎಂದು ಬರೆದುಕೊಂಡಿದ್ದಾರೆ. ಬ್ರುನೊ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‍ಲೋಡ್ ಮಾಡಿದ ನಂತರ ವಿರಾಟ್ ಕೊಹ್ಲಿ ಇತ್ತೀಚೆಗೆ 15 ಬೀದಿ ನಾಯಿಗಳನ್ನು ದತ್ತು ಪಡೆದಿದ್ದಾರೆ. ಬೆಂಗಳೂರಿನ ಚಾರ್ಲಿಸ್ ಅನಿಮಲ್ ರೆಸ್ಕ್ಯೂ ಸೆಂಟರ್ ನ ಶೆಲ್ಟರ್ ನಲ್ಲಿನ ನಾಯಿಗಳನ್ನು ದತ್ತು ಪಡೆದಿದ್ದಾರೆ. ಈ ಮೂಲಕ ಪ್ರಾಣಿ ಪ್ರೀತಿ ಮೆರೆದಿದ್ದಾರೆ.

    ಲಾಕ್‍ಡೌನ್ ಹಿನ್ನೆಲೆ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಮನೆಯಲ್ಲೇ ಕಾಲ ಕಳೆಯುತ್ತಿದ್ದು, ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದಾರೆ. ಇತ್ತೀಚೆಗಷ್ಟೇ ತಾನು ಹಾಗೂ ಚೇತೇಶ್ವರ ಪೂಜಾರ್ ಫೀಲ್ಡ್‍ನಲ್ಲಿ ಕ್ಯಾಚ್ ಹಿಡಿಯುವ ಫೋಟೋ ಹಾಕಿ, ಲಾಕ್‍ಡೌನ್ ನಂತರ ನಮ್ಮ ಮೊದಲ ಸೆಶನ್ ಹೀಗೆ ಇರುತ್ತದೆ. ಬಾಲ್‍ಗಾಗಿ ನೀನು ಹೋಗುತ್ತೀಯಾ ಎಂದು ನಾನು ನಂಬಿದ್ದೇನೆ ಪುಜ್ಜಿ ಎಂದು ಕೊಹ್ಲಿ ಬರೆದಿದ್ದಾರೆ. ಇದಕ್ಕೆ ಚೇತೇಶ್ವರ್ ಪೂಜಾರ್ ಪ್ರತಿಕ್ರಿಯಿಸಿದ್ದು, ಯೆಸ್ ಕ್ಯಾಪ್ಟನ್, ಎರಡೂ ಕೈಗಳಿಂದ ಬಾಲ್ ಕ್ಯಾಚ್ ಹಿಡಿಯುತ್ತೇನೆ ಎಂದಿದ್ದಾರೆ.