Tag: ಪೆನ್ನು

  • ಬೀದಿಯಲ್ಲಿ ಪೆನ್ನು ಮಾರ್ತಿದ್ದ ಬಾಲಕಿಗೆ ಐಫೋನ್ ಗಿಫ್ಟ್ ಕೊಟ್ರು ತೇಜ್ ಪ್ರತಾಪ್ ಯಾದವ್!

    ಬೀದಿಯಲ್ಲಿ ಪೆನ್ನು ಮಾರ್ತಿದ್ದ ಬಾಲಕಿಗೆ ಐಫೋನ್ ಗಿಫ್ಟ್ ಕೊಟ್ರು ತೇಜ್ ಪ್ರತಾಪ್ ಯಾದವ್!

    ಪಾಟ್ನಾ: ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಪುತ್ರ ತೇಜ್ ಪ್ರತಾಪ್ ಯಾದವ್ ಒಂದೊಳ್ಳೆ ಕೆಲಸ ಮಾಡಿರುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

    ಹೌದು, ಬೀದಿಗಳಲ್ಲಿ ಪೆನ್ನು ಮಾರಾಟ ಮಾಡ್ತಿದ್ದ ಬಡ ಕುಟುಂಬದ ಬಾಲಕಿಯೊಬ್ಬಳಿಗೆ ಐಫೋನ್ ಗಿಫ್ಟ್ ನೀಡಿದ್ದಾರೆ. ಇದರ ವೀಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಫೋಟೋಶೂಟ್‌ಗಾಗಿ ಬಂದಿದ್ದ ಮಹಿಳೆ ಮೇಲೆ ಲಾಡ್ಜ್‌ನಲ್ಲಿ ಗ್ಯಾಂಗ್‌ರೇಪ್

    ಶನಿವಾರ ಸಂಜೆ ತನ್ನ ಸ್ನೇಹಿತರೊಂದಿಗೆ ತೇಜ್ ಪ್ರತಾಪ್ ಪಾಟ್ನಾದ ಬೋರಿಂಗ್ ರೋಡ್ ಪ್ರದೇಶದಲ್ಲಿ ಸುತ್ತಾಡುತ್ತಿದ್ದರು. ಈ ವೇಳೆ ರಸ್ತೆ ಬದಿಯಲ್ಲಿ ಪುಟ್ಟ ಬಾಲಕಿಯೊಬ್ಬಳು ಪೆನ್ನು ಮಾರಾಟ ಮಾಡುತ್ತಿರುವುದು ತೇಜ್ ಕಣ್ಣಿಗೆ ಬಿದ್ದಿದೆ. ತಮ್ಮ ಗಮನಕ್ಕೆ ಬಂದ ಕೂಡಲೇ ಅಲ್ಲಿಗೆ ತೆರಳಿರುವ ತೇಜ್ ಪ್ರತಾಪ್, ಕೆಲ ಹೊತ್ತುಆಕೆಯ ಜೊತೆ ಮಾತುಕತೆ ನಡೆಸಿದ್ದಾರೆ.

    ಈ ವೇಳೆ ಬಾಲಕಿಗೆ ತನ್ನ ಮೊಬೈಲ್ ನಂಬರ್ ನೀಡಿ, ಸಹಾಯಕ್ಕಾಗಿ ಕರೆ ಮಾಡುವಂತೆ ತಿಳಿಸಿದ್ದಾರೆ. ಆಗ ಬಾಲಕಿ ತನ್ನ ಬಳಿ ಮೊಬೈಲ್ ಇಲ್ಲ ಎಂದು ಹೇಳಿದ್ದಾಳೆ. ಈ ಬೆನ್ನಲ್ಲೇ ಪಕ್ಕದ ಮೊಬೈಲ್ ಶಾಪ್‍ಗೆ ಬಾಲಕಿಯನ್ನ ಕರೆದುಕೊಂಡು ಹೋಗಿದ ತೇಜ್, ಆಕೆಗೆ 50 ಸಾವಿರ ರೂ. ಮೌಲ್ಯದ ಐಫೋನ್ ಉಡುಗೊರೆಯಾಗಿ ನೀಡಿದ್ದಾರೆ. ಇದನ್ನೂ ಓದಿ: ತುಮಕೂರಿನಲ್ಲಿ ಮತ್ತೆ ಕೊರೊನಾ ಭೀತಿ – 42 ಪುಟ್ಟ ಮಕ್ಕಳಿಗೆ ವಕ್ಕರಿಸಿದ ಕೋವಿಡ್

    ಗಿಫ್ಟ್ ಸಿಕ್ಕ ಬಳಿಕ ಬಾಲಕಿ ಇದನ್ನು ತನ್ನ ವಿದ್ಯಾಭ್ಯಾಸಕ್ಕಾಗಿ ಬಳಕೆ ಮಾಡಿಕೊಳ್ಳುವ ಭರವಸೆ ನೀಡಿದ್ದಾಳೆ. ಬಾಲಕಿಯ ಮಾತಿಗೆ ಫಿದಾ ಆದ ತೇಜ್, ಏನಾದರೂ ಸಹಾಯ ಬೇಕಿದ್ದರೆ ಕರೆ ಮಾಡುವಂತೆ ಹೇಳಿ ಅಲ್ಲಿಂದ ತೆರಳಿದ ಪ್ರಸಂಗ ನಡೆದಿದೆ.

  • ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಭಿಕ್ಷೆ ಬೇಡಲು ನಿರಾಕರಿಸಿ ಪೆನ್ನು ಮಾರಾಟ ಮಾಡುವ ವೃದ್ಧೆ – ನೆಟ್ಟಿಗರಿಂದ ಮೆಚ್ಚುಗೆ

    ಮುಂಬೈ: ಪುಣೆಯ ಬೀದಿಗಳಲ್ಲಿ ವೃದ್ಧೆಯೊಬ್ಬರು ಜೀವನ ನಡೆಸಲು ಪೆನ್ನುಗಳನ್ನು ಮಾರಾಟ ಮಾಡುತ್ತಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರ ಮನ ಗೆಲ್ಲುತ್ತಿದೆ.

    ಈ ಫೋಟೋವನ್ನು ಶಿಖಾ ರಾಠಿ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ರತನ್ ಜೀವನ ನಡೆಸುವುದಕ್ಕಾಗಿ ಪುಣೆಯ ಎಂಜಿ ರಸ್ತೆಯಲ್ಲಿ ಪೆನ್ನುಗಳನ್ನು ಮಾರಾಟ ಮಾಡುತ್ತಾರೆ. ಭಿಕ್ಷೆ ಬೇಡುವುದನ್ನು ನಿರಾಕರಿಸಿ ತನ್ನ ಜೀವನವನ್ನು ಗೌರವ ಹಾಗೂ ಸ್ವಾವಲಂಬಿಯಾಗಿ ನಡೆಸಲು ವಿವಿಧ ರೀತಿಯ ಬಣ್ಣ, ಬಣ್ಣದ ಪೆನ್ನುಗಳನ್ನು ಬಾಕ್ಸ್‌ನಲ್ಲಿ ಹಿಡಿದುಕೊಂಡು ನಗುಮುಖದಿ ಮಾರಾಟ ಮಾಡುತ್ತಿರುವ ಫೋಟೋವನ್ನು ಕಾಣಬಹುದಾಗಿದೆ. ಇದನ್ನೂ ಓದಿ: ಕತ್ರಿನಾ ಜೊತೆಗಿನ ಎಂಗೇಜ್‍ಮೆಂಟ್ ಬಗ್ಗೆ ಸುಳಿವು ಕೊಟ್ರಾ ವಿಕ್ಕಿ ಕೌಶಲ್ ?

    ಜೊತೆಗೆ, ಬಾಕ್ಸ್ ಮೇಲೆ ನಾನು ಭಿಕ್ಷೆ ಬೇಡುವುದಿಲ್ಲ. ದಯವಿಟ್ಟು 10ರೂ.ಗೆ ನೀಲಿ ಬಣ್ಣದ ಪೆನ್ನನ್ನು ಖರೀದಿಸಿ, ಆಶೀರ್ವಾದಿಸಿ, ಧನ್ಯವಾದ ಎಂದು ಬರೆದಿರುವುದನ್ನು ನೋಡಬಹುದಾಗಿದೆ. ಇದನ್ನೂ ಓದಿ:  ಮಹಾಮಳೆಯ ಭೂಕುಸಿತಕ್ಕೆ ತತ್ತರಿಸಿದ ದೇವರ ನಾಡು – ಅವಶೇಷಗಳಡಿ 26 ಶವ ಪತ್ತೆ

     

    View this post on Instagram

     

    A post shared by Shikha Rathi (@sr1708)

    ಫೋಟೋ ಜೊತೆಗೆ ಕ್ಯಾಪ್ಷನ್‍ನಲ್ಲಿ ಇಂದು ನಾನು ಜೀವನದ ನಿಜವಾದ ನಾಯಕಿ ಹಾಗೂ ಚಾಂಪಿಯನ್ ರತನ್ ಅವರನ್ನು ನೋಡಿದೆ. ಇವರನ್ನು ನನ್ನ ಸ್ನೇಹಿರೊಂದಿಗೆ ಹೊರ ಹೋಗಿದ್ದಾಗ ಭೇಟಿಯಾದೆ. ಈ ವೇಳೆ ಬಾಕ್ಸ್ ಮೇಲೆ ಬರೆದಿರುವುದನ್ನು ಓದಿ ನನ್ನ ಸ್ನೇಹಿತರು ಪೆನ್ನನ್ನು ಖರೀದಿ ಮಾಡಿದರು. ಆಗ ರತನ್ ಬಹಳ ಸಂತೋಷಗೊಂಡು ನಗುಮುಖದಿ ಧನ್ಯವಾದ ತಿಳಿಸಿದರು. ಈ ವೇಳೆ ಅವರ ಮುಖದಲ್ಲಿ ಮಂದಹಾಸ, ಕೃತಜ್ಞತೆ ಹಾಗೂ ದಯೆ ಎದ್ದು ಕಾಣುತ್ತಿತ್ತು. ನಮಗೆ ಮತ್ತಷ್ಟು ಪೆನ್ನು ಖರೀದಿಸಬೇಕು ಎನಿಸಿತು. ಅವರ ವರ್ತನೆ ಮತ್ತು ಅವರ ಸಿಹಿಯಾದ ನಗು, ಸ್ವಾಭಿಮಾನ ನನಗೆ ಮತ್ತಷ್ಟು ಪೆನ್ನು ಖರೀದಿಸುವಂತೆ ಮಾಡಿತು ಎಂದು ಬರೆದುಕೊಂಡಿದ್ದಾರೆ. ಅಲ್ಲದೇ ಎಂ.ಜಿ ರಸ್ತೆಗೆ ಯಾರಾದರೂ ಹೋದಾಗ ಈ ವೃದ್ಧೆಯಿಂದ ಮತ್ತಷ್ಟು ಪೆನ್ನುಗಳನ್ನು ಖರೀದಿಸುವಂತೆ ಮನವಿ ಮಾಡಿದ್ದಾರೆ.

  • ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ಸಾವು- ವೈದ್ಯರ ನಿರ್ಲಕ್ಷ್ಯ ಎಂದು ಹೇಳಿ ಪೋಷಕರಿಂದ ಪ್ರತಿಭಟನೆ

    ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ಸಾವು- ವೈದ್ಯರ ನಿರ್ಲಕ್ಷ್ಯ ಎಂದು ಹೇಳಿ ಪೋಷಕರಿಂದ ಪ್ರತಿಭಟನೆ

    ಬಾಗಲಕೋಟೆ: ಪೆನ್ನಿನ ಕ್ಯಾಪ್ ನುಂಗಿದ್ದ ಬಾಲಕ ವೈದ್ಯರ ನಿರ್ಲಕ್ಷ್ಯದಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಶವವನ್ನು ಸಾಗಿಸದೇ ರಾತ್ರಿಯಿಡೀ ಪ್ರತಿಭಟನೆ ಮಾಡಿದ ಘಟನೆ ಬಾಗಲಕೋಟೆ ನಗರದ ಕುಮಾರೇಶ್ವರದಲ್ಲಿ ನಡೆದಿದೆ.

    ಮುಧೋಳ ತಾಲೂಕಿನ ಮಾಚಕನೂರು ಗ್ರಾಮದ 9 ವರ್ಷದ ಬಾಲಕ ಮುತ್ತಪ್ಪ ಬಿರೋಜಿ ನಾಲ್ಕು ದಿನದ ಹಿಂದೆ ಪೆನ್ನಿನ ಕ್ಯಾಪ್ ನುಂಗಿದ್ದ. ಬಾಲಕನನ್ನು ವಿವಿಧ ಆಸ್ಪತ್ರೆಗೆ ತೋರಿಸಿ ಮಂಗಳವಾರ ಸಂಜೆ 5 ಗಂಟೆಗೆ ಕುಮಾರೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಆಪರೇಷನ್ ಮಾಡುವ ವೇಳೆ ಬಾಲಕ ಮೃತಪಟ್ಟಿದ್ದಾನೆ. ಬಾಲಕನ ಸಾವಿಗೆ ವೈದ್ಯರ ನಿರ್ಲಕ್ಯವೇ ಕಾರಣ ಎಂದು ಆರೋಪಿಸುತ್ತಿರುವ ಕುಟುಂಬಸ್ಥರು, ಬಾಲಕನ ಮೃತದೇಹವನ್ನು ಮುಂದಿಟ್ಟು ಆಸ್ಪತ್ರೆಯಲ್ಲಿ ಪ್ರತಿಭಟನೆ ಮಾಡಿದ್ದಾರೆ.

    ವೈದ್ಯ ಸಿಎಸ್ ಹಿರೆಮಠ್ ಆಪರೇಷನ್ ಮಾಡುವ ವೇಳೆ ಬಾಲಕ ಸಾವನ್ನಪ್ಪಿದ್ದು ತಪ್ಪಿತಸ್ಥ ವೈದ್ಯನನ್ನು ತಕ್ಷಣವೇ ಕೆಲಸದಿಂದ ತೆಗೆದು ಹಾಕಬೇಕು, ಆತನಿಗೆ ಶಿಕ್ಷೆಯಾಗಬೇಕೆಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ.

    ಸ್ಥಳಕ್ಕೆ ಬಾಗಲಕೋಟೆ ನಗರ ಠಾಣೆ ಪೊಲೀಸರು ಬಂದು ಸಮಾಧಾನ ಪಡಿಸಲು ಮುಂದಾದರೂ ಫಲ ನೀಡಲಿಲ್ಲ. ಇತ್ತ ಇದ್ದ ಒಬ್ಬನೇ ಒಬ್ಬ ಮಗನನ್ನು ಕಳೆದುಕೊಂಡ ತಾಯಿ ಆಕ್ರಂದನ ಮುಗಿಲುಮುಟ್ಟಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv