Tag: ಪೇಜಾವರ ಮಠ

  • ಎಸ್‌ಎಂ ಕೃಷ್ಣ ಸಜ್ಜನಿಕೆ, ಸಭ್ಯತೆ, ಸದಾಚಾರದ ರಾಜಕಾರಣಿ: ಪೇಜಾವರ ಶ್ರೀ

    ಎಸ್‌ಎಂ ಕೃಷ್ಣ ಸಜ್ಜನಿಕೆ, ಸಭ್ಯತೆ, ಸದಾಚಾರದ ರಾಜಕಾರಣಿ: ಪೇಜಾವರ ಶ್ರೀ

    ಉಡುಪಿ: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ (SM Krishna) ನಿಧನಕ್ಕೆ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ (Vishwaprasanna Tirtha Swamiji) ಸಂತಾಪ ವ್ಯಕ್ತಪಡಿಸಿದರು. ಎಸ್‌ಎಂ ಕೃಷ್ಣ ವಿಧಿವಶವಾದ ಸುದ್ದಿ ತಿಳಿದು ಖೇದವಾಗಿದೆ. ಎಸ್‌ಎಂ ಕೃಷ್ಣ ರಾಜ್ಯ ಮತ್ತು ದೇಶಕ್ಕೆ ಉತ್ತಮ ಮಾರ್ಗದರ್ಶನ ಮಾಡಿದವರು ಎಂದು ಸ್ವಾಮೀಜಿ ನೆನಪಿಸಿಕೊಂಡಿದ್ದಾರೆ.

    ಪೇಜಾವರ ಮಠ ಮತ್ತು ನಮ್ಮ ಗುರುಗಳ ಮೇಲೆ ಅವರಿಗೆ ವಿಶೇಷ ಅಭಿಮಾನ ಇತ್ತು. ಭಗವಂತ ಅವರ ಆತ್ಮಕ್ಕೆ ಸಕಲ ಬಗೆಯ ಶ್ರೇಯಸ್ಸು ಕರುಣಿಸಲಿ. ಕುಟುಂಬಕ್ಕೆ ವಿಯೋಗ ಸಹಿಸುವ ಸಾಮರ್ಥ್ಯ ಕೊಡಲಿ. ರಾಜಕಾರಣದಲ್ಲಿ ತಳಮಟ್ಟದಿಂದ ಬಹಳ ಎತ್ತರದವರೆಗೆ ಬೆಳೆದು ಅನೇಕ ಮಹತ್ವದ ಸ್ಥಾನಮಾನಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ರಾಜಕೀಯ ಕ್ಷೇತ್ರದಲ್ಲಿ ಅನನ್ಯತೆಯನ್ನು ಕೃಷ್ಣ ಅವರು ಸಂಪಾದಿಸಿದ್ದು ಉಲ್ಲೇಖನೀಯ ಎಂದರು. ಇದನ್ನೂ ಓದಿ: ಬ್ರೇಕ್ ಫೇಲ್ ಆಗಿ ನಿಯಂತ್ರಣ ತಪ್ಪಿದ ಬಸ್ – 6 ಮಂದಿ ಸಾವು, 49 ಮಂದಿಗೆ ಗಾಯ

    ರಾಜ್ಯದ ಮುಖ್ಯಮಂತ್ರಿಯಾಗಿಯೂ ಉತ್ತಮ ಕಾರ್ಯನಿರ್ವಹಿಸಿದ್ದು, ಬೆಂಗಳೂರನ್ನು ಮಾಹಿತಿ ತಂತ್ರಜ್ಞಾನದ ಪ್ರಮುಖ ಕೇಂದ್ರವಾಗಿ ಬೆಳೆಸಿ ಸಾವಿರಾರು ಪ್ರತಿಭಾವಂತ ಯುವಕರಿಗೆ ಉದ್ಯೋಗ ದೊರೆಯುವಂತೆ ಮಾಡಿ ಜೀವನದ ದಾರಿಯನ್ನು ತೆರೆದಿಡುವಲ್ಲಿ ಅವರ ದೂರದೃಷ್ಟಿಯ ಪಾತ್ರ ಸದಾ ಸ್ಮರಣೀಯ. ಸಜ್ಜನಿಕೆ, ಸಭ್ಯತೆ, ಸದಾಚಾರ ಮತ್ತು ಧರ್ಮ ಸಂಪನ್ನರೂ ಆಗಿದ್ದು, ಶ್ರೀಮಠದ ಹಾಗೂ ನಮ್ಮ ಗುರುಗಳ ವಿಶೇಷ ಭಕ್ತರಾಗಿದ್ದರು. ನಮ್ಮ ಗುರುಗಳಾದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ತಮ್ಮ ಪಂಚಮ ಶ್ರೀಕೃಷ್ಣ ಪರ್ಯಾಯದ ಸಂದರ್ಭದಲ್ಲಿ ರಾಷ್ಟ್ರರತ್ನ ಬಿರುದಿನೊಂದಿಗೆ ಸನ್ಮಾನಿಸಿದ್ದನ್ನು ಸ್ಮರಿಸುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ -ಹೋರಾಟಗಾರರ ಮೇಲೆ ಲಾಠಿಚಾರ್ಜ್‌

    ಗುರುಗಳ ಬಳಿಕ ನಮ್ಮ ಮೇಲೂ ಅದೇ ಅಭಿಮಾನ, ಭಕ್ತಿ ಹಾಗೂ ಪ್ರೀತಿಯನ್ನು ಹೊಂದಿದ್ದ ಕೃಷ್ಣ ಅವರ ಆತ್ಮಕ್ಕೆ ಸದ್ಗತಿಯನ್ನು ಕರುಣಿಸಲಿ ಎಂದು ಸ್ವಾಮೀಜಿ ಪ್ರಕಟಣೆ ಮೂಲಕ ಪ್ರಾರ್ಥಿಸಿದ್ದಾರೆ. ಕುಟುಂಬಕ್ಕೂ ಅವರ ವಿಯೋಗದ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ ಎಂದು ಶ್ರೀ ಕೃಷ್ಣಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಎಸ್‌ಎಂ ಕೃಷ್ಣ ಆಡಳಿತದಲ್ಲಿ ವಿಕಾಸಸೌಧ ನಿರ್ಮಾಣ: ಗೋವಿಂದ ಕಾರಜೋಳ

  • ಹಿಂದೂ ಸಮಾಜದ ಬಹು ಕಾಲದ ನೋವು ಬೇಸರ ಸ್ಫೋಟಗೊಂಡಿದೆ- ಪೇಜಾವರ ಶ್ರೀ

    ಹಿಂದೂ ಸಮಾಜದ ಬಹು ಕಾಲದ ನೋವು ಬೇಸರ ಸ್ಫೋಟಗೊಂಡಿದೆ- ಪೇಜಾವರ ಶ್ರೀ

    ಉಡುಪಿ: ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವಾರು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ನೇರ ಸಂದೇಶ ರವಾನೆ ಮಾಡಿದ್ದಾರೆ.

    ಉಡುಪಿ ಪೇಜಾವರ ಮಠದ ರಾಮ ವಿಠಲ ಸಭಾಭವನದಲ್ಲಿ ಮುಸಲ್ಮಾನ ವರ್ತಕರು, ಮುಸ್ಲಿಂ ಮುಖಂಡರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದರು. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಇದನ್ನೂ ಓದಿ: ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ

    ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು. ಆದರೆ ಅದು ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ

    ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು. ಉಡುಪಿಯ ಗ್ರಾಮವೊಂದರ ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳವು ಮಾಡಲಾಗಿದೆ. ಹಸುಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇನೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.

    ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು. ತಪ್ಪು ಮಾಡಿದವರನ್ನು ಆ ಸಮಾಜದಲ್ಲಿ ಶಿಕ್ಷಿಸಲಿ. ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.

  • ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತನ್ನಿ: ಪೇಜಾವರ ಶ್ರೀ ಒತ್ತಾಯ

    ಉಡುಪಿ: ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮತಾಂತರ ನಿರ್ಬಂಧ ಮಾಡಿ. ಮತಾಂತರ ಆಗುವುದನ್ನು ತಡೆಯಬೇಕು. ಇಲ್ಲವಾದರೆ ಸಮಾಜದಲ್ಲಿ ದೊಡ್ಡ ಅಶಾಂತಿ ಉಂಟಾಗಬಹುದು. ಒಂದು ಕಡೆ ಆಮೀಷವೊಡ್ಡಿ ಬಲವಂತವಾಗಿ ಮತಾಂತರ ಮಾಡುತ್ತಿಲ್ಲ ಅಂತಾರೆ. ಮತ್ತೊಂದು ಕಡೆ ಮತಾಂತರ ಮಾಡುತ್ತಿದ್ದ ಮಿಷನರಿ ಅವರನ್ನು ಬಂಧಿಸಿದ್ದಾರೆ ಎನ್ನುವ ಸುದ್ದಿಗಳು ವರದಿಯಾಗಿವೆ ಎಂದರು. ಇದನ್ನೂ ಓದಿ: ಅ.2ರಂದು ಗಾಂಧಿ ನಡಿಗೆ ಕೃಷ್ಣೆಯ ಕಡೆಗೆ ನಿರ್ಣಾಯಕ ಪಾದಾಯಾತ್ರೆ- ಎಸ್‍ಆರ್ ಪಾಟೀಲ್

    ಮತಾಂತರ ಮುಂದುವರಿದರೆ ಸಮಾಜದಲ್ಲಿ ದೊಡ್ಡ ಅಶಾಂತಿ, ಗೊಂದಲ ಉಂಟಾಗಬಹುದು. ಸರ್ಕಾರ ಬಲವಾದ ಕಾನೂನು ಜಾರಿಗೆ ತರುವ ಮೂಲಕ ಮತಾಂತರ ನಿರ್ಬಂಧ ಮಾಡಬೇಕು. ರಾಜ್ಯ ಸರ್ಕಾರ ಈ ವಿಷಯದ ಕುರಿತಂತೆ ಕಠಿಣ ಕಾನೂನು ಜಾರಿಗೆ ತರಬೇಕು ಎಂದು ಪೇಜಾವರ ಶ್ರೀಗಳು ಒತ್ತಾಯಿಸಿದ್ದಾರೆ.

    ರಾಜ್ಯದಲ್ಲಿ ಕ್ರೈಸ್ತ ಮಿಷನರಿಗಳು ಹಿಂದೂ ಧರ್ಮವನ್ನು ಗುರಿಯಾಗಿಸಿ ಮತಾಂತರ ಮಾಡುತ್ತಿವೆ. ನಾವು ಒತ್ತಾಯದ ಮತಾಂತರ ಮಾಡುವುದಿಲ್ಲ ಎಂದರೂ ಮತಾಂತರ ಪ್ರಕ್ರಿಯೆ ನಿರಂತರವಾಗಿ ಎಗ್ಗಿಲ್ಲದೆ ರಾಜ್ಯದ ಎಲ್ಲ ಕಡೆ ನಡೆಯುತ್ತಿದೆ. ಹೀಗಾಗಿ ರಾಜ್ಯದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಒತ್ತಾಯ ಕೇಳಿಬರುತ್ತಿದೆ.

    ಆರ್ಥಿಕ ಪರಿಸ್ಥಿತಿ, ಅನಾರೋಗ್ಯ ಮತ್ತು ಮಾನಸಿಕ ಸಮಸ್ಯೆಯನ್ನು ಇಟ್ಟುಕೊಂಡು ಕ್ರೈಸ್ತ ಮಿಷನರಿಗಳು ರಾಜ್ಯದಲ್ಲಿ ಮತಾಂತರದ ದಾಳ ಹೂಡುತ್ತಿವೆ. ಕಳೆದ ಒಂದು ತಿಂಗಳಿಂದ ರಾಜ್ಯದ ಎಲ್ಲ ಕಡೆ ಮತಾಂತರ ಕೇಂದ್ರ, ಪ್ರಾರ್ಥನಾ ಮಂದಿರದ ಮೇಲೆ ಹಿಂದೂ ಸಂಘಟನೆಗಳು ದಾಳಿ ಮಾಡುತ್ತಿವೆ.

  • ರಾಮ, ಆಂಜನೇಯ ವಿಗ್ರಹಕ್ಕೆ ಪೇಜಾವರಶ್ರೀ ಅಭಿಷೇಕ- ಅರ್ಜುನ್ ಸರ್ಜಾ ಹರ್ಷ

    ರಾಮ, ಆಂಜನೇಯ ವಿಗ್ರಹಕ್ಕೆ ಪೇಜಾವರಶ್ರೀ ಅಭಿಷೇಕ- ಅರ್ಜುನ್ ಸರ್ಜಾ ಹರ್ಷ

    ಉಡುಪಿ: ನಟ ಅರ್ಜುನ್ ಸರ್ಜಾ ತಮಿಳುನಾಡಿನ ಚೆನ್ನೈನಲ್ಲಿ ರಾಮ ಮತ್ತು ಆಂಜನೇಯನ ದೇವಸ್ಥಾನವನ್ನು ನಿರ್ಮಾಣ ಮಾಡಿದ್ದಾರೆ. ಎರಡು ದಿನಗಳಿಂದ ನಡೆಯುತ್ತಿರುವ ದೇಗುಲದ ಪ್ರತಿಷ್ಠಾಪನೆ ಮತ್ತು ಕುಂಭಾಭಿಷೇಕ ಪ್ರಕ್ರಿಯೆಯಲ್ಲಿ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಭಾಗಿಯಾಗಿದ್ದಾರೆ.

    ಅಯೋಧ್ಯೆ ಪ್ರವಾಸದಲ್ಲಿದ್ದ ಪೇಜಾವರ ಶ್ರೀಗಳನ್ನು ಅರ್ಜುನ್ ಸರ್ಜಾ ತಮಿಳುನಾಡಿಗೆ ಕರೆಸಿ ದೇವರಿಗೆ ಕುಂಭಾಭಿಷೇಕ ಮಾಡಿಸಿದ್ದಾರೆ. ಎರಡು ದಿನಗಳ ಕಾಲ ನಡೆದ ಧಾರ್ಮಿಕ ವಿಧಿ ವಿಧಾನದಲ್ಲಿ ಅವಧೂತ ವಿನಯ್ ಗುರೂಜಿ ಕೂಡ ಪಾಲ್ಗೊಂಡಿದ್ದರು. ಪೇಜಾವರ ಸ್ವಾಮೀಜಿ ಭಗವಾನ್ ಆಂಜನೇಯ ದೇವರ ಬೃಹತ್ ವಿಗ್ರಹಕ್ಕೆ ಜೇನು, ತುಪ್ಪ ಸಕ್ಕರೆಯ, ಅಭಿಷೇಕವನ್ನು ಮಾಡಿಸಿ ಪ್ರಾರ್ಥನೆ ಜೊತೆ ಹೂವಿನ ಪಕಳಗಳ ಅಭಿಷೇಕಗೈದರು. ಇದನ್ನೂ ಓದಿ: ನನ್ನ ಕೋಳಿ ಬೇಕು – ಬಿಕ್ಕಿ ಬಿಕ್ಕಿ ಅತ್ತ ಕಂದ

    ತಮಿಳುನಾಡಿನ ಚೆನ್ನೈನಲ್ಲಿ ಪೇಜಾವರ ಮಠದ ಶಾಖೆ ಇದೆ. ಮಧ್ವಮತದ ಸಾವಿರಾರು ಅನುಯಾಯಿಗಳು ಅಲ್ಲಿದ್ದಾರೆ. ಸರ್ಜಾ ಕುಟುಂಬ ವೃಂದಾವನಸ್ಥರಾದ ವಿಶ್ವೇಶತೀರ್ಥರ ಕಾಲದಿಂದಲೂ ಪೇಜಾವರ ಮಠದ ಜೊತೆ ಸಂಬಂಧ ಹೊಂದಿದೆ. ಈ ಸಂದರ್ಭ ಮಾತನಾಡಿದ ಅರ್ಜುನ್ ಸರ್ಜಾ, ದಶಕಗಳಿಂದ ಇದ್ದ ಇಚ್ಛೆ ಈಡೇರಿದೆ. ಭಗವಂತ ತನ್ನ ಸೇವೆ ಮಾಡುವ ಅವಕಾಶ ಮಾಡಿಕೊಟ್ಟಿದ್ದಾನೆ. ಪೇಜಾವರಶ್ರೀಗಳು ಪ್ರತಿಷ್ಟಾಪನೆ ಸಂದರ್ಭದಲ್ಲಿ ಚಿತ್ತೈಸುತ್ತಾರೆ ಎಂದು ಅಂದುಕೊಂಡಿರಲಿಲ್ಲ ಬಹಳ ಖುಷಿಯಾಗಿದೆ ಎಂದರು.

  • ಮೋದಿ ಗಡ್ಡಕ್ಕೂ ರಾಮ ಮಂದಿರಕ್ಕೂ ಸಂಬಂಧ – ಪೇಜಾವರ ಶ್ರೀ ಊಹೆ

    ಮೋದಿ ಗಡ್ಡಕ್ಕೂ ರಾಮ ಮಂದಿರಕ್ಕೂ ಸಂಬಂಧ – ಪೇಜಾವರ ಶ್ರೀ ಊಹೆ

    ಬಾಗಲಕೋಟೆ: ರಾಮಮಂದಿರ ನಿರ್ಮಾಣದವರೆಗೆ ಕೇಶ ತೆಗೆಯೋದಿಲ್ಲ ಎಂದು ದೀಕ್ಷೆ ತೆಗೆದುಕೊಂಡಿದ್ದಾರಾ ಮೋದಿ ಎಂಬ ಪ್ರಶ್ನೆಗೆ ಸದ್ಯ ವಿಶ್ವ ಪ್ರಸನ್ನತೀರ್ಥ ಸ್ವಾಮೀಜಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಬಾಗಲಕೋಟೆಗೆ ಆಗಮಿಸಿದ್ದ ಪೇಜಾವರ ಶ್ರೀಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಮಂದಿರ ನಿರ್ಮಾಣಕ್ಕೆ ಕಾಣಿಕೆ ಸಂಗ್ರಹಣೆಗೆ ಚಾಲನೆ ನೀಡಿದರು. ನಂತರ ಮಾಧ್ಯಮದವರ ಜೊತೆ ಮಾತನಾಡುತ್ತಾ, ಪ್ರಧಾನಿ ಮೋದಿ ದೀಕ್ಷೆಯ ಬಗ್ಗೆ ಪ್ರತಿಕ್ರಿಯಿಸಿದರು. ನಮ್ಮಲ್ಲಿ ದೇವಸ್ಥಾನದ ಕಾರ್ಯ ಇಂತಹದ್ದೆಲ್ಲ ಇರುತ್ತೆ, ಆ ಹೊತ್ತಿಗೆ ನಾವು ದೀಕ್ಷಾ ಬದ್ಧರಾಗೋದು ಅಂತ ಇದೆ. ಅದೇ ರೀತಿ ಮೋದಿ ಅವರು ರಾಮಮಂದಿರ ಕಾರ್ಯಕ್ಕಾಗಿ ದೀಕ್ಷೆ ತೊಟ್ಟಿದ್ದಾರೆಂದು ಊಹಿಸಿದರು.

    ಮೋದಿಯವರು ರಾಮಮಂದಿರಕ್ಕೆ ಶಿಲಾನ್ಯಾಸವನ್ನು ಮಾಡಿದ್ದಾರೆ. ಮಂದಿರದ ಸಂಪೂರ್ಣ ಜವಾಬ್ದಾರಿಯನ್ನ ಪ್ರಧಾನಿಯವರು ಹೊತ್ತಿರೋದ್ರಿಂದ, ಸಹಜವಾಗಿ ಇಂತಹ ಕಾರ್ಯದ ವೇಳೆ ನಮ್ಮಲ್ಲಿ ಕೇಶಾದಿಗಳನ್ನು ತೆಗೆಯೋದಿಲ್ಲ. ನೈತಿಕ ನೆಲೆಯಲ್ಲಿ ನಮ್ಮಲ್ಲಿ ಮಂದಿರ ಆಗುವ ತನಕ ಗಡ್ಡ, ತಲೆಗೂದಲು ಬಿಟ್ಟಿರುತ್ತೇವೆ. ಪ್ರಾಯಶಃ ಮೋದಿ ಅವರು ಅದನ್ನು ಪಾಲನೆ ಮಾಡಿರಬಹುದು ಎಂದು ಶ್ರೀಗಳು ಹೇಳಿದರು. ಅಲ್ಲದೆ ಮೋದಿಯವರು ಆಧ್ಯಾತ್ಮಿಕವಾಗಿದ್ದಾರೆ. ಹಾಗಾಗಿ ಅವರು ಕೇಶ ತೆಗೆಯದೇ ಇರುವುದರಲ್ಲಿ ತಪ್ಪೇನಿಲ್ಲವಲ್ಲ ಎಂದ ಶ್ರೀಗಳು ಪುನರುಚ್ಛರಿಸಿದರು.

    ಇದೇ ವೇಳೆ ರಾಮಮಂದಿರ ಶಿಲಾನ್ಯಾಸ ಕಾರ್ಯಕ್ಕಾಗಿ ಕಾಣಿಕೆ ಸಂಗ್ರಹಣೆ ಕಾರ್ಯ ಶೀಘ್ರದಲ್ಲೇ ಶುರುವಾಗಲಿದೆ. ಇದರ ಉಸ್ತುವಾರಿಯನ್ನ ವಿಶ್ವಹಿಂದೂಪರಿಷತ್ ಗೆ ವಹಿಸಲಾಗಿದೆ. ಮಂದಿರ ನಿರ್ಮಾಣ ಆಗುವ ಜಾಗ ಮರಳುಮಿಶ್ರಿತ ಮಣ್ಣಿನಿಂದ ಕೂಡಿದೆ. ಇತ್ತ ಕಲ್ಲಿನ ಮಂದಿರ ಆಗೋದ್ರಿಂದ, ಅದರ ಭಾರವನ್ನು ಮಣ್ಣು ಹೊರುತ್ತಾ ಎಂಬ ಬಗ್ಗೆ ಮಣ್ಣಿನ ಪರೀಕ್ಷೆ ನಡೆದಿದೆ. ಮಂದಿರ ನಿರ್ಮಾಣಕ್ಕೆ ಸುಮಾರು ಸಾವಿರದ ಐನೂರು ಕೋಟಿ ಅಂದಾಜಿನ ಬಜೆಟ್ ಹಾಕಿಕೊಂಡಿದ್ದೇವೆ ಎಂದು ಮಾಹಿತಿ ನೀಡಿದರು.

  • ಸ್ವಾಮೀಜಿ ಮೇಲೆ ಬೆಟ್ಟದಷ್ಟು ಪ್ರೀತಿ ಹರಿಸಿದ ಕರುಗಳು

    ಸ್ವಾಮೀಜಿ ಮೇಲೆ ಬೆಟ್ಟದಷ್ಟು ಪ್ರೀತಿ ಹರಿಸಿದ ಕರುಗಳು

    – ಗೋವಿನ ಪ್ರೀತಿಗೆ ಮೈಯ್ಯೊಡ್ಡಿ ಕುಳಿತ ಶ್ರೀಗಳು

    ಉಡುಪಿ: ಶ್ರೀಕೃಷ್ಣನ ಪೂಜೆಯ ಜೊತೆ ಗೋವುಗಳಿಗಾಗಿ ಇಡೀ ಜೀವನವನ್ನೇ ಮುಡಿಪಾಗಿಟ್ಟವರು ಉಡುಪಿಯ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು. ಕರುಗಳು ಸ್ವಾಮೀಜಿ ಮೇಲೆ ಮುಗಿಬಿದ್ದು ಪ್ರೀತಿ ತೋರಿದ ವಿಡಿಯೋ ಭಾರೀ ಮೆಚ್ಚುಗೆಗೆ ಕಾರಣವಾಗಿದೆ.

    ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೀಲಾವರದಲ್ಲಿ ಪೇಜಾವರ ಮಠದ ಗೋಶಾಲೆ ಇದೆ. ಇಲ್ಲಿ ಸಾವಿರದ ಐನೂರಕ್ಕಿಂತಲೂ ಹೆಚ್ಚು ಗೋವುಗಳಿವೆ. ಪೇಜಾವರ ಶ್ರೀಗಳಿಗೆ ಗೋವುಗಳ ಮೇಲೆ ಪ್ರೀತಿ ಇರೋದರಿಂದ ಗೋಶಾಲೆ ಮಾಡಿದ್ದಾರೆ. ಹೆಬ್ರಿಯಲ್ಲಿ ಮತ್ತೊಂದು ಗೋಶಾಲೆ ತೆರೆದಿದ್ದಾರೆ. ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳಿಗೆ ಗೋವಿನ ಮೇಲೆ ಇರುವಷ್ಟೇ ಪ್ರೀತಿ ಗೋವುಗಳಿಗೂ ಸ್ವಾಮೀಜಿಯ ಮೇಲೆ ಪ್ರೀತಿ ಇದೆ. ಇದಕ್ಕೆ ಸಾಕ್ಷಿ ಎನ್ನುವಂತಹ ವಿಡಿಯೋ ಹಾಗೂ ಫೋಟೋಗಳು ಪಬ್ಲಿಕ್ ಟಿವಿಗೆ ಸಿಕ್ಕಿವೆ. ಇದನ್ನೂ ಓದಿ: ಬ್ರಾಹ್ಮೀ ಮುಹೂರ್ತದಲ್ಲಿ ದೇವರ ಮುಂದೆ ತಲೆಬಾಗಿ ನಿಲ್ಲುತ್ತೆ ಗೋವು

    ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಗೋವುಗಳ ಜೊತೆ ಬೆರೆಯುವ ಫೋಟೋಗಳು, ವಿಡಿಯೋಗಳು ಎಲ್ಲರ ಮೊಬೈಲ್‍ನಲ್ಲಿ ಹರಿದಾಡುತ್ತಿವೆ. ಪೇಜಾವರ ಸ್ವಾಮೀಜಿಗಳನ್ನು ಮುತ್ತಿಕೊಂಡಿರುವ ಕರುಗಳು, ಸ್ವಾಮಿಗಳನ್ನು ಮುದ್ದು ಮಾಡುತ್ತದೆ. ಕರುಗಳು ಮೈಯ್ಯನ್ನೆಲ್ಲ ನೆಕ್ಕಿದರೂ ಶ್ರೀಗಳು ಮಾತ್ರ ಕರುಗಳಿಗೆ ಮೈಯ್ಯೊಡ್ಡಿ ಕುಳಿತುಕೊಂಡು ಗೋವು ಪ್ರೀತಿಯನ್ನು ಅನುಭವಿಸಿದ್ದಾರೆ.

    ಕೃಷ್ಣನ ಕೊಳಲಿನ ನಾದಕ್ಕೆ ಗೋವುಗಳ ದ್ವಾಪರದಲ್ಲಿ ತಲೆದೂಗಿದ್ದವು. ಕೃಷ್ಣ ಸೇವೆಯನ್ನು ಮಾಡುವ ಪೇಜಾವರ ಸ್ವಾಮೀಜಿಗಳ ಗೋವು ಪ್ರೀತಿ ಲಕ್ಷಾಂತರ ಭಕ್ತರ ಪ್ರೀತಿಗೆ ಕಾರಣವಾಗಿದೆ. ವಿಶ್ವಪ್ರಸನ್ನ ತೀರ್ಥ ಶ್ರೀಪಾದರು ಮತ್ತು ಅವರ ಸೇವೆ ಈ ಹಿಂದೆ ಪಬ್ಲಿಕ್ ಟಿವಿಯ ಪಬ್ಲಿಕ್ ಹೀರೋ ಕಾರ್ಯಕ್ರಮದಲ್ಲಿ ಪ್ರಸಾರವಾಗಿತ್ತು.

  • ರಾಮ ಮಂದಿರಕ್ಕೆ ಪೇಜಾವರ ಮಠದಿಂದ 5 ಲಕ್ಷ ರೂ. ದೇಣಿಗೆ

    ರಾಮ ಮಂದಿರಕ್ಕೆ ಪೇಜಾವರ ಮಠದಿಂದ 5 ಲಕ್ಷ ರೂ. ದೇಣಿಗೆ

    ಉಡುಪಿ: ಅಯೋಧ್ಯೆ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನ ಮೊದಲ ಸಭೆಯಲ್ಲಿ ಉಡುಪಿ ಪೇಜಾವರ ಮಠದಿಂದ ರಾಮಮಂದಿರ ನಿರ್ಮಾಣಕ್ಕೆ ಐದು ಲಕ್ಷ ರೂ. ಆರಂಭಿಕ ದೇಣಿಗೆ ನೀಡಲಾಗಿದೆ.

    ದೆಹಲಿಯಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ಪಾಲ್ಗೊಂಡ ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥರು, ರಾಮ ಮಂದಿರಕ್ಕಾಗಿ ಪ್ರಾಣ ತ್ಯಾಗ ಮಾಡಿದ ಎಲ್ಲರನ್ನು ಟ್ರಸ್ಟ್ ಸಭೆಯಲ್ಲಿ ಸ್ಮರಣೆ ಮಾಡಲಾಗಿದೆ. ಸಭೆಗೆ ಅವಕಾಶ ಮಾಡಿಕೊಟ್ಟ ಸರ್ವೋಚ್ಛ ನ್ಯಾಯಾಲಯಕ್ಕೆ, ಪ್ರಧಾನಿ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ಪೇಜಾವರ ಮಠದ ವತಿಯಿಂದ ರಾಮಮಂದಿರ ನಿರ್ಮಾಣಕ್ಕೆ ಐದು ಲಕ್ಷ ರೂ.ಯ ಮೊದಲ ದೇಣಿಗೆಯನ್ನು ವಿಶ್ವೇಶತೀರ್ಥ ಸ್ವಾಮೀಜಿ ಹೆಸರಲ್ಲಿ ನೀಡಿದ್ದೇವೆ ಎಂದು ವಿಶ್ವಪ್ರಸನ್ನರು ಹೇಳಿದರು.

    ಉಡುಪಿ ಕೃಷ್ಣಮಠದ ಪ್ರಸಾದವನ್ನು ಟ್ರಸ್ಟ್ ಸದಸ್ಯರಿಗೆ ನೀಡಿದ್ದೇವೆ ಎಂದರು. ಮಂದಿರ ನಿರ್ಮಾಣಕ್ಕೆ ಸಾರ್ವಜನಿಕರು ದೇಣಿಗೆ ಕೊಡುವ ಅವಕಾಶ ಇದೆ. ಮೊತ್ತವನ್ನು ನೇರ ಬ್ಯಾಂಕ್ ಖಾತೆಗೆ ಹಾಕುವ ವ್ಯವಸ್ಥೆ ಮಾಡಲಾಗಿದೆ. ರಾಮ ಮಂದಿರ ಶಾಸ್ತ್ರೋಕ್ತವಾಗಿ ನಿರ್ಮಾಣವಾಗಬೇಕೆಂಬ ತೀರ್ಮಾನ ಕೈಗೊಳ್ಳಲಾಗಿದೆ. ದೇಶಾದ್ಯಂತ ದೇಗುಲ, ಮನೆಗಳಲ್ಲಿ ರಾಮಜಪ ಪಾರಾಯಣಕ್ಕೆ ತೀರ್ಮಾನಿಸಿದ್ದು, ಮಂದಿರ ನಿರ್ಮಾಣದವರೆಗೆ ದೇಶಾದ್ಯಂತ ರಾಮಾಯಣ ಪಾರಾಯಣ ನಡೆಯಲಿದೆ ಎಂದರು.

    ಮಂದಿರ ನಿರ್ಮಾಣಕ್ಕೆ ವಿಶೇಷ ಸಮಿತಿಯೊಂದನ್ನು ರಚಿಸಲು ಇಂದು ತೀರ್ಮಾನಿಸಲಾಯಿತು. ಮುಂದಿನ ಸಭೆ, ಅಲ್ಲಿ ನಡೆಯಬೇಕಾದ ಚರ್ಚೆಯ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿಕೆ ನೀಡಿದ್ದಾರೆ.

  • ಉತ್ಸವ-ಉರೂಸ್‍ನಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಳ್ಳುವಂತಾಗಲಿ- ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉತ್ಸವ-ಉರೂಸ್‍ನಲ್ಲಿ ಹಿಂದೂ ಮುಸ್ಲಿಮರು ಪಾಲ್ಗೊಳ್ಳುವಂತಾಗಲಿ- ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

    ಉಡುಪಿ: ಭಾರತದಲ್ಲಿ ಹಿಂದೂ ಮುಸಲ್ಮಾನರ ನಡುವೆ ಸಾಮರಸ್ಯ ಬೆಳೆಯಬೇಕು. ಎರಡೂ ಧರ್ಮಕ್ಕೆ ಶಾಂತಿ ಸಹೋದರತೆಯ ಆಕಾಂಕ್ಷೆ ಇದೆ. ಕೆಲ ವಿಚಾರಗಳು ಘಟನೆಗಳು ಎರಡು ಧರ್ಮವನ್ನು ದೂರ ಮಾಡುತ್ತಿವೆ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಅವರು, ಎರಡೂ ಧರ್ಮಕ್ಕೆ ನೆಮ್ಮದಿ, ಶಾಂತಿ ಬೇಕಾಗಿದೆ. ದೇಶದಲ್ಲಿ ನಡೆಯುವ ಕೆಲ ಘಟನೆಗಳು ಎರಡು ಸಮುದಾಯವನ್ನು ದೇಶದಲ್ಲಿ ದೂರ ಮಾಡಲು ಕಾರಣವಾಗುತ್ತಿದೆ. ನಮ್ಮ ನಡುವೆ ಅಪನಂಬಿಕೆ ದೂರವಾಗಬೇಕು. ಪರಸ್ಪರ ಎರಡು ಧರ್ಮಗಳ ನಡುವೆ ಸೌಹಾರ್ದತೆ ಬೆಳೆಯಬೇಕು ಎಂದು ಹೇಳಿದರು.

    ನಮ್ಮ ಉತ್ಸವದಲ್ಲಿ ನೀವು, ನಿಮ್ಮ ಧಾರ್ಮಿಕ ಕಾರ್ಯಕ್ರಮ ಉರೂಸ್ ನಲ್ಲಿ ನಾವು ಪಾಲ್ಗೊಳ್ಳುವಂತಾಗಬೇಕು. ಒಬ್ಬರಿಬ್ಬರಿಂದ ಇಂತಹ ಬದಲಾವಣೆ ಅಸಾಧ್ಯ. ಇಡೀ ಸಮಾಜಕ್ಕೆ ಸಮಾಜ, ಊರಿಗೆ ಊರು ಶಾಂತಿ ಸಾಮರಸ್ಯ ಬಯಸುವ ಕಾಲ ಬರಬೇಕು ಎಂದರು. ಭಟ್ಕಳದ ಮುಸಲ್ಮಾನರು ಪೇಜಾವರ ಮಠಕ್ಕೆ ಬಂದು ಗುರುಗಳಿಗೆ ಶ್ರದ್ಧಾಂಜಲಿ ಅರ್ಪಿಸಿದ್ದನ್ನು ಕಿರಿಯಶ್ರೀಗಳು ಸ್ಮರಿಸಿ, ಬಂದವರಿಗೆ ಅಭಿನಂದನೆ ಸಲ್ಲಿಸಿದರು.

  • ಭಟ್ಕಳ ಮುಸ್ಲಿಮರಿಂದ ಪೇಜಾವರ ಮಠದಲ್ಲಿ ವಿಶ್ವೇಶತೀರ್ಥ ಶ್ರೀಗಳಿಗೆ ಶ್ರದ್ಧಾಂಜಲಿ

    ಭಟ್ಕಳ ಮುಸ್ಲಿಮರಿಂದ ಪೇಜಾವರ ಮಠದಲ್ಲಿ ವಿಶ್ವೇಶತೀರ್ಥ ಶ್ರೀಗಳಿಗೆ ಶ್ರದ್ಧಾಂಜಲಿ

    ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿಗಳ ಬಗ್ಗೆ ಅಪಾರ ಅಭಿಮಾನ ಹೊಂದಿದ್ದ ಭಟ್ಕಳದ ಮುಸಲ್ಮಾನರು ಉಡುಪಿ ಪೇಜಾವರ ಮಠಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ನುಡಿನಮನ ಸಲ್ಲಿಸಿದರು.

    ಸ್ವಾಮಿಗಳ ಅಗಲಿಕೆಯಿಂದ ಬಹಳಷ್ಟು ನೊಂದಿದ್ದ ಮುಸ್ಲಿಮರು ಭಟ್ಕಳದಿಂದ ಪೇಜಾವರ ಮಠದಲ್ಲಿ ಶೃದ್ಧಾಂಜಲಿ ಸಲ್ಲಿಸಲೆಂದೇ ಬಂದಿದ್ದರು. ರಥಬೀದಿಯಲ್ಲಿ ಮಠದೊಳಗೆ ಪ್ರವೇಶಕ್ಕೆ ಕಾಯುತ್ತಿದ್ದರು. ವಿಷಯ ತಿಳಿದ ಮಠದ ಅಧಿಕಾರಿಗಳು ಮಠದೊಳಗೆ ಆಹ್ವಾನಿಸಿ, ಪರಿಚಯ ಪಡೆದುಕೊಂಡರು.

    ಪೇಜಾವರ ಸ್ವಾಮಿಗಳ ಸ್ಮರಣೆ ಮಾಡುತ್ತ ಬಂದವರು, ಭಟ್ಕಳಕ್ಕೆ ವಿಶ್ವೇಶತೀರ್ಥರು ಭೇಟಿ ನೀಡಿದ್ದ ನೆನಪುಗಳನ್ನು ಮೆಲುಕು ಹಾಕಿದರು. ಎರಡು ಧರ್ಮದ ನಡುವೆ ಪೇಜಾವರ ಶ್ರೀಗಳು ಸೇತುವೆಯಾಗಿದ್ದರು ಎಂದು ಮುಸಲ್ಮಾನ ಮುಖಂಡರು ಹೇಳಿದರು. ಸ್ವಾಮೀಜಿಗಳ ಭಾವಚಿತ್ರಕ್ಕೆ ಭಕ್ತಿಯಿಂದ ಕೈ ಮುಗಿದು ಶ್ರದ್ಧಾಂಜಲಿ ಅರ್ಪಿಸಿದರು.

  • ಪೇಜಾವರಶ್ರೀಗಳ 60ರ ದಶಕದ ಕ್ರಾಂತಿ ನೆನೆದ ಜನ

    ಪೇಜಾವರಶ್ರೀಗಳ 60ರ ದಶಕದ ಕ್ರಾಂತಿ ನೆನೆದ ಜನ

    ಉಡುಪಿ: ಅಸ್ಪೃಶ್ಯತೆ ನಿವಾರಣೆ ಉದ್ದೇಶ ಇಟ್ಟುಕೊಂಡು ಪೇಜಾವರಶ್ರೀಗಳು ದಲಿತ ಕೇರಿಗೆ ಪ್ರವೇಶ ಮಾಡಿದ್ದು, ಬ್ರಾಹ್ಮಣ ವಲಯದಲ್ಲಿ ಸಾಕಷ್ಟು ಅಸಮಾಧಾನಕ್ಕೆ ಕಾರಣವಾಗಿತ್ತು. 1960ರ ಈ ಸಾಮಾಜಿಕ ಕ್ರಾಂತಿಯನ್ನು ನೆನೆದು ದಲಿತ ವಠಾರ ಹೆಮ್ಮೆ ವ್ಯಕ್ತಪಡಿಸಿದೆ.

    ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ 60ರ ದಶಕದಲ್ಲಿ ಮಾಡಿದ ಕ್ರಾಂತಿ ದೇಶದಲ್ಲೇ ಸಂಚಲನವನ್ನುಂಟು ಮಾಡಿತ್ತು. ಕೇರಿ ಪ್ರವೇಶ, ಪಾದಪೂಜೆ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ದಲಿತರಿಗೆ ಬ್ರಾಹ್ಮಣ ದೀಕ್ಷೆ ಕೂಡಾ ಶ್ರೀಗಳು ಮಾಡಿದ ಕ್ರಾಂತಿಗಳಲ್ಲೊಂದು. ವಿಶ್ವೇಶತೀರ್ಥ ಸ್ವಾಮೀಜಿ ಆರಾಧನೆಯನ್ನು ಕರಂಬಳ್ಳಿಯ ದಲಿತ ಬಡಾವಣೆಯಲ್ಲಿ ಆಚರಿಸಲಾಯ್ತು.

    ಪೇಜಾವರಶ್ರೀ ಭಾವಚಿತ್ರ ಇಟ್ಟು ಶ್ರೀಗಳ ಹೋರಾಟ, ದಲಿತ ಕೇರಿಗೆ ಹೋದ ನೆನಪುಗಳನ್ನು ಈ ಸಂದರ್ಭದಲ್ಲಿ ಮೆಲುಕು ಹಾಕಲಾಯಿತು. ಸ್ಥಳೀಯರಾದ ಭುಜಂಗ ಮಾತನಾಡಿ, ಪೇಜಾವರ ಸ್ವಾಮೀಜಿ ಬ್ರಾಹ್ಮಣರಾಗಿದ್ದರೂ ನಮ್ಮ ವಠಾರಕ್ಕೆ ಬಂದಿದ್ದರು. ನಮ್ಮ ಪುಣ್ಯ ಎಂದು ಇದನ್ನು ಭಾವಿಸುತ್ತೇವೆ. ಇವತ್ತು ಅವರು ನಮ್ಮೊಂದಿಗೆ ಇಲ್ಲದಿದ್ದರೂ ಅವರ ಆಶೀರ್ವಾದ ನಮ್ಮ ಜೊತೆ ಇದೆ ಎಂದು ಹೇಳಿದರು.

    ಕರಂಬಳ್ಳಿ ವ್ಯಾಪ್ತಿಯ ಹಿಂದುಳಿದ, ದಲಿತ, ಕೊರಗ, ಸಮುದಾಯದ ನೂರಾರು ಜನ ಶ್ರೀಗಳಿಗೆ ಪುಷ್ಪಾಂಜಲಿ ಅರ್ಪಣೆ ಮಾಡಿದರು. ಆರಾಧನೆ ಲೆಕ್ಕದ ವಿಶೇಷ ಭೋಜನ ಸ್ವೀಕರಿಸಿದರು. ಪೇಜಾವರಶ್ರೀ ಕಾರ್ಯಕ್ರಮ ಆಯೋಜನೆಯಾದ ಸಂದರ್ಭದಲ್ಲಿ ಈ ಭಾಗಕ್ಕೆ ಆಗಾಗ ಭೇಟಿ ನೀಡುತ್ತಿದ್ದರು ಎಂದು ಇಲ್ಲಿನ ಜನ ಸ್ಮರಿಸುತ್ತಾರೆ.